ನಿರ್ಲಕ್ಷ್ಯಕ್ಕೆ ಕಡಿವಾಣ: ಹೊಸಪೇಟೆ ಪಿಡಿಓ ಅಮಾನತು
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಟ್ ಅವರು ಹೊರಡಿಸಿದ ಆದೇಶದಲ್ಲಿ, ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯತೆ, ಉದಾಸೀನತೆ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪಗಳು ಯಮುನಾರಾಣಿ ವಿರುದ್ಧ ಕೇಳಿ ಬಂದಿರುವುದಾಗಿ ಉಲ್ಲೇಖಿಸಲಾಗಿದೆ. ಇದೇ ವೇಳೆ, ಸರ್ಕಾರಿ ನೌಕರರೊಂದಿಗೆ ಅಸಮರ್ಪಕವಾಗಿ ವರ್ತಿಸಿರುವುದಾಗಿ ಕೂಡ ದೂರಿನಲ್ಲಿ ತಿಳಿಸಲಾಗಿದೆ.