ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Gauribidanur News: ರೈತರ ಸಮಸ್ಯೆಗಳಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ರೈತ ಸಂಘಟನೆಗಳ ಆರೋಪ

ಸಭೆಯಿಂದ ಅಧಿಕಾರಿಗಳ ನಿರ್ಗಮನಕ್ಕೆ ರೈತರ ಆಕ್ರೋಶ

ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾ ಸಂಚಾಲಕ ಎನ್.ಆರ್.ರವಿಚಂದ್ರರೆಡ್ಡಿ ಮಾತನಾಡಿ, ರೈತರ ಸಮಸ್ಯೆ ಆಲಿಸಲು ಸಭೆ ಕರೆದ ಅಧಿಕಾರಿಗಳೇ ಸಮರ್ಪಕವಾಗಿ ಸ್ಪಂದಿಸದೆ, ಸರ್ಕಾರಿ ವಿಡಿಯೋ ಕಾನ್ಫರೆನ್ಸ್ ಇದೆ ಎಂಬ ಕಾರಣ ನೀಡಿ ಸಭೆಯಿಂದ ಹೊರನಡೆದಿರುವುದು ಖಂಡನೀಯ. ನಮ್ಮ ಸಮಸ್ಯೆಗಳನ್ನು ಯಾರ ಬಳಿ ಹೇಳಿಕೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

AIಗೆ ಸಿದ್ಧವಾದ ಭವಿಷ್ಯ ನಿರ್ಮಿಸಲು ಮತ್ತು 2 ಸಾವಿರ ಯುವಕರಿಗೆ ತರಬೇತಿ ನೀಡಲು ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಪ್ರಾರಂಭ

2 ಸಾವಿರ ಯುವಕರಿಗೆ ತರಬೇತಿ ನೀಡಲು ಕ್ಯಾಂಪಸ್ ಪ್ರಾರಂಭ

ಬೆಂಗಳೂರಿನ ನೃಪತುಂಗ ವಿಶ್ವವಿದ್ಯಾಲಯದ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾದ ಈ ಕಾರ್ಯ ಕ್ರಮವು ಪ್ರಾಯೋಗಿಕ AI ಶಿಕ್ಷಣಕ್ಕೆ ಪ್ರವೇಶ ವಿಸ್ತರಿಸುವ ಮೂಲಕ ಮತ್ತು ಭವಿಷ್ಯಕ್ಕೆ ಸಿದ್ಧವಾದ ತಂತ್ರಜ್ಞಾನ ಕಾರ್ಯಪಡೆಯನ್ನು ಅಭಿವೃದ್ಧಿಪಡಿಸಲು ಸಹಾಯ ಮಾಡುವ ಮೂಲಕ AI-ಆಧಾರಿತ ಪರಿಸರ ವ್ಯವಸ್ಥೆ ನಿರ್ಮಿಸುವ ಕರ್ನಾಟಕದ ಮಹತ್ವಾಕಾಂಕ್ಷೆಯನ್ನು ಬೆಂಬಲಿಸುತ್ತದೆ.

Cabinet Meeting: ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ

ತುಳು ಭಾಷೆಗೆ 2ನೇ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಲು ಸಚಿವ ಸಂಪುಟ ತೀರ್ಮಾನ

Tulu second official language: ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ ನಡೆದಿದೆ. ತುಳು ಭಾಷೆಯನ್ನು (Tulu) ಕರ್ನಾಟಕದ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಮಾಡುವುದು, 'ದಕ್ಷಿಣ ಕನ್ನಡ' ಜಿಲ್ಲೆಯ ಹೆಸರನ್ನು 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣ ಮಾಡಬೇಕು ಎಂಬ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಈ ಬಗ್ಗೆ ಮಹತ್ವದ ತೀರ್ಮಾನವನ್ನು ಸರ್ಕಾರ ಕೈಗೊಂಡಿದ್ದು, ಯಾವೆಲ್ಲಾ ನಿರ್ಣಯಗಳನ್ನು ಕೈಗೊಳ್ಳಲಾಗಿದೆ ಎಂಬ ಕುರಿತ ಮಾಹಿತಿ ಇಲ್ಲಿದೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ; ಮೇಲ್ಸೇತುವೆಯಿಂದ ಕಾರು ಬಿದ್ದು ಮಹಿಳೆ ಸಾವು

ಮಂಡ್ಯ ಬಳಿ ಮೇಲ್ಸೇತುವೆಯಿಂದ ಕಾರು ಬಿದ್ದು ಮಹಿಳೆ ಸಾವು

Mandya Car Accident: ಮಂಡ್ಯದ ಬಳಿಯ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ ನಡೆದಿದೆ. ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಕ್ಸ್‌ಪ್ರೆಸ್‌ವೇ ಫ್ಲೈ ಓವರ್‌ನಿಂದ ಹಾರಿ ಅಂಡರ್ ಪಾಸ್‌ಗೆ ಬಿದ್ದಿದೆ. ಇದರಿಂದ ಗಂಭೀರಾಗಿ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ.

Gudibande News: ಗುಡಿಬಂಡೆಯಲ್ಲಿ ಅರ್ಥಪೂರ್ಣ ವಿಶ್ವಕರ್ಮ ಜಯಂತಿ ಆಚರಣೆ

ಗುಡಿಬಂಡೆಯಲ್ಲಿ ಅರ್ಥಪೂರ್ಣ ವಿಶ್ವಕರ್ಮ ಜಯಂತಿ ಆಚರಣೆ

ಕಾರ್ಯಕ್ರಮದಲ್ಲಿ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಲಾಯಿತು. ಶಿಕ್ಷಕ ಚಂದ್ರಶೇಖರ್ ಮಾತನಾಡಿ, ವಿಶ್ವಕರ್ಮ ಸಮುದಾಯವು ಬುದ್ಧಿವಂತಿಕೆ, ದೂರದೃಷ್ಟಿ ಹಾಗೂ ವಿಶಿಷ್ಟ ಕೌಶಲ್ಯಕ್ಕೆ ಹೆಸರಾಗಿದ್ದು, ಚಿನ್ನ-ಬೆಳ್ಳಿ ಕೆಲಸ, ಮರಗೆಲಸ, ಕಬ್ಬಿಣದ ಕೆಲಸ, ಶಿಲ್ಪಕಲೆ ಸೇರಿದಂತೆ ವಿವಿಧ ಸಾಂಪ್ರದಾಯಿಕ ಕಸುಬುಗಳಲ್ಲಿ ಪರಿಣತಿ ಹೊಂದಿದೆ ಎಂದರು.

Cess on Cinema Tickets: ರಾಜ್ಯದ ಸಿನಿಮಾ ಪ್ರಿಯರಿಗೆ ಬೆಲೆ ಏರಿಕೆ ಶಾಕ್; ಟಿಕೆಟ್‌ ಮೇಲೆ ಶೇ. 2 ಸೆಸ್‌ ವಿಧಿಸಿದ ಸರ್ಕಾರ!

ಸಿನಿಮಾ ಪ್ರಿಯರಿಗೆ ಬೆಲೆ ಏರಿಕೆ ಶಾಕ್; ಟಿಕೆಟ್‌ ಮೇಲೆ ಶೇ. 2 ಸೆಸ್‌!

ರಾಜ್ಯ ಸರ್ಕಾರವು 2024 ರಲ್ಲಿ ಮಂಡಿಸಿದ್ದ ‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕಕ್ಕೆ 2024ರ ಸೆಪ್ಟೆಂಬರ್ 23 ರಂದು ಕರ್ನಾಟಕದ ರಾಜ್ಯಪಾಲರು ಅಧಿಕೃತವಾಗಿ ಅಂಕಿತ ಹಾಕಿದ್ದರು. ಎರಡು ವರ್ಷಗಳ ಸುದೀರ್ಘ ಪ್ರಕ್ರಿಯೆಯ ಬಳಿಕ ಸಿನಿಮಾ ಟಿಕೆಟ್‌ಗಳ ಮೇಲೆ ಸೆಸ್‌ ವಿಧಿಸಲು ಅಧಿನಿಯಮವನ್ನು ಜಾರಿಗೆ ತರಲಾಗುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಕಲಬುರಗಿಯಲ್ಲಿ ಅಭಿಮಾನಿಗಳ ಬಳಗದಿಂದ ಪ್ರತಿಭಟನೆ

ಮಾಜಿ ಸಿಎಂ ಸಿದ್ದರಾಮಯ್ಯ ಮೂರ್ತಿ ತೆರವು ಖಂಡಿಸಿ ಕಲಬುರಗಿಯಲ್ಲಿ ಪ್ರತಿಭಟನೆ

Kalaburagi News: ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂರ್ತಿಯನ್ನು ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ತೆರವುಗೊಳಿಸಿರುವ ಸ್ಥಳದಲ್ಲಿಯೇ ಸಿದ್ದರಾಮಯ್ಯ ಅವರ ಮೂರ್ತಿಯನ್ನು ಮರಳಿ ಪ್ರತಿಷ್ಠಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಮಂಗಳೂರು ಕಾರಾಗೃಹದ ಬಳಿ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ

Priyank Kharge: ಕಾರಾಗೃಹದ ಭದ್ರತೆ ಅತ್ಯಂತ ಮುಖ್ಯವಾಗಿರುವಂತೆಯೇ, ಕಾರಾಗೃಹದ ಸುತ್ತಮುತ್ತ ವಾಸಿಸುವ ಸಾರ್ವಜನಿಕರಿಗೆ ಮತ್ತು ಇತರ ಬಳಕೆದಾರರಿಗೆ ಮೊಬೈಲ್ ಸಂಪರ್ಕ ಸೇವೆಯಲ್ಲಿ ಅನಗತ್ಯ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳುವುದೂ ಅಗತ್ಯ. ಈ ಎರಡೂ ಅಗತ್ಯಗಳ ನಡುವೆ ಸಮತೋಲನ ಸಾಧಿಸುವ ನಿಟ್ಟಿನಲ್ಲಿ ತಾಂತ್ರಿಕ ಪರಿಹಾರಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹೊಸ ಆಶಯದೊಂದಿಗೆ ಕತಾರ್‌ ‘ಕನ್ನಡ ಪಾಠಶಾಲೆ’ ಪುನರಾರಂಭ

ಕತಾರ್‌ ‘ಕನ್ನಡ ಪಾಠಶಾಲೆ’ ಪುನರಾರಂಭ

ವಿದೇಶದಲ್ಲಿ ನೆಲೆಸಿರುವ ಕನ್ನಡ ಭಾಷಿಗರ ಮಕ್ಕಳಿಗೆ ಕನ್ನಡ ಭಾಷೆ, ನಾಡು-ನುಡಿ ಹಾಗೂ ಸಂಸ್ಕೃತಿಯನ್ನು ಪರಿಚಯಿಸುವ ಉದ್ದೇಶದಿಂದ ಕರ್ನಾಟಕ ಸಂಘ ಕತಾರ್ ವತಿಯಿಂದ ‘ಕನ್ನಡ ಪಾಠಶಾಲೆ’ಯನ್ನು ಹೊಸ ಆಶಯದೊಂದಿಗೆ ಪುನರಾರಂಭಿಸಲಾಗಿದೆ. ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಇದನ್ನು ಅಧಿಕೃತವಾಗಿ ಘೋಷಿಸಲಾಯಿತು.

ಶತದಿನೋತ್ಸವಕ್ಕೆ ಕರೆದಿಲ್ಲವೆಂದು ಮಾಧ್ಯಮಗಳೆದುರು ಹೇಳಿದ್ದೇಕೆ? ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್‌ಗೆ ಮಲ್ಲಿಕಾರ್ಜುನ್ ಖರ್ಗೆ ಖಡಕ್ ಪ್ರಶ್ನೆ

ಕೆಪಿಸಿಸಿ ಅಧ್ಯಕ್ಷರಿಗೇ ಹೈಕಮಾಂಡ್ ಶಿಸ್ತಿನ ಪಾಠ

ಪಕ್ಷದ ರಾಜ್ಯಾಧ್ಯಕ್ಷರೇ ಸರಕಾರದ ವಿರುದ್ಧ ಹೇಳಿಕೆ ನೀಡಿದರೆ ಪಕ್ಷಕ್ಕೆ ಹಾಗೂ ಸರಕಾರಕ್ಕೆ ಹೊಡೆತ ಬೀಳುತ್ತದೆ. ಇದಿಷ್ಟೇ ಅಲ್ಲದೇ, ಸರಕಾರ ಹಾಗೂ ಪಕ್ಷದ ನಡುವೆ ಸಮನ್ವಯತೆ ಇಲ್ಲ ಎನ್ನುವ ಸಂದೇಶ ರವಾನೆಯಾದರೆ ಸಂಘಟನೆಗೆ ಸಮಸ್ಯೆಯಾಗುತ್ತದೆ. ಆದ್ದರಿಂದ ಮುಂದಿನ ದಿನದಲ್ಲಿ ಈ ರೀತಿಯ ಗೊಂದಲಗಳ ಬಗ್ಗೆ ಬಹಿರಂಗವಾಗಿ ಮಾತನಾಡದಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನೂ 23 ತಾಲೂಕು ಬರ ಪಟ್ಟಿಗೆ: ಬರ ಬಾಧೆ: 2ನೇ ಪಟ್ಟಿಯಲ್ಲಿ 23 ತಾಲೂಕು ಸೇರ್ಪಡೆ

ಮಳೆಯ ಕೊರತೆ: 21 ತೀವ ಬರಪೀಡಿತ, 2 ಸಾಧಾರಣ

ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದ ಮುಂಗಾರು ಮಳೆ ಬಾರದೇ ಇರುವುದರಿಂದ ರಾಜ್ಯ ಸರಕಾರ 2ನೇ ಹಂತದ ಬರ ತಾಲೂಕುಗಳ ಪಟ್ಟಿಯನ್ನು ಪ್ರಕಟಿಸಿದ್ದು, ಎರಡನೇ ಹಂತದಲ್ಲಿ 17 ಜಿಲ್ಲೆಗಳ 23 ತಾಲೂಕುಗಳು ಸೇರಿವೆ. ಮಳೆ ಕೊರತೆಯಾಗಿ ಬರ ಪರಿಸ್ಥಿತಿ ಸೃಷ್ಟಿಯಾಗಿದ್ದು, ಈಗಾಗಲೇ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ರಾಜ್ಯ ಸರಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿತ್ತು.

Ration Card e-KYC: ಪಡಿತರ ಚೀಟಿ ಇ-ಕೆವೈಸಿ: ಅ.20ರವರೆಗೆ ವಿಸ್ತರಣೆ

ಪಡಿತರ ಚೀಟಿ ಇ-ಕೆವೈಸಿ: ಅ.20ರವರೆಗೆ ವಿಸ್ತರಣೆ

ಹಗಲು ವೇಳೆಯಲ್ಲಿ ಕೂಲಿ-ನಾಲಿ ಮಾಡುವ ಶ್ರಮಿಕರು ಪಡಿತರ ಪಡೆಯಲು ಇಡೀ ದಿನದ ದುಡಿಮೆ ಕಳೆದುಕೊಳ್ಳುವುದನ್ನು ಸರಕಾರ ಸಹಿಸುವುದಿಲ್ಲ. ಪಡಿತರದಾರರ ಅನುಕೂಲಕ್ಕೆ ತಕ್ಕಂತೆ ನ್ಯಾಯಬೆಲೆ ಅಂಗಡಿಗಳು ಕಾರ್ಯನಿರ್ವಹಿಸಲೇಬೇಕಿದೆ. ಬರುವ ಅ.1ರಿಂದ ಜಾರಿಗೆ ಬರುವಂತೆ ರಾಜ್ಯದ ಎಲ್ಲಾ ನ್ಯಾಯಬೆಲೆ ಅಂಗಡಿಗಳು ಕಡ್ಡಾಯವಾಗಿ ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಂಜೆ 4 ಗಂಟೆಯಿಂದ ರಾತ್ರಿ 8 ಗಂಟೆಯ ವರೆಗೆ ತೆರೆಯಲು ಆದೇಶಿಸಲಾಗಿದೆ.

ತುಳುವಿಗೆ ರಾಜ್ಯಭಾಷೆ ಸ್ಥಾನ ಸೇರಿ ಹಲ ಘೋಷಣೆ ನಿರೀಕ್ಷೆ ಕರಾವಳಿ ಕೇಂದ್ರಿತವಾದ 35 ವಿಚಾರಗಳನ್ನು ಚರ್ಚಿಸುವ ಸಾಧ್ಯತೆ: ಇಂದು ಕರಾವಳಿಯಲ್ಲಿ ಮಂತ್ರಿಮಂಡಲ ಸಭೆ

ಇಂದು ಕರಾವಳಿಯಲ್ಲಿ ಮಂತ್ರಿಮಂಡಲ ಸಭೆ

ದ.ಕನ್ನಡ, ಉಡುಪಿ ಮತ್ತು ಉ.ಕನ್ನಡ ಜಿಗಳಿಗೆ ಸಂಬಂಧಿಸಿದ ಸಂಪುಟ ಸಭೆಯಾದರೂ, ಮೀನು ಗಾರಿಕೆ, ಪ್ರವಾಸೋದ್ಯಮ, ಕಂದಾಯ ಭೂಮಿ, ಪಿಲಿಕುಳ ಅಭಿವೃದ್ಧಿ, ಕೋಸ್ಟಲ್ ರೋಡ್, ಸಿಆರ್ ಝಡ್ ಸಡಿಲಿಕೆ ಮುಂತಾದ 35ಕ್ಕೂ ಹೆಚ್ಚು ಮಂಗ ಳೂರು ಕೇಂದ್ರೀಕೃತ ಅಭಿವೃದ್ಧಿ ಯೋಜನೆಗಳ ವಿಷಯ ಮಂಡನೆ ನಡೆಯಲಿವೆ. ಕ್ರೂಸ್ ಟೂರಿಸಂ, ಬೋಟ್ ಹೌಸ್, ಹೂಡಿಕೆ ಹೆಚ್ಚಳ, ಕಡಲ ತೀರ ಮತ್ತು ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ತೀರ್ಮಾನ ನಿರೀಕ್ಷಿಸಲಾಗಿದೆ.

ಮಳೆ ಕೈ ಕೊಟ್ಟ ಹಿನ್ನೆಲೆ ಕೃಷಿಗೆ ಸಂಕಷ್ಟ, ಬರ ಘೋಷಣೆಗೆ ರೈತರ ಒತ್ತಾಯ: 1000 ಕೋಟಿ ವಿಶೇಷ ಪ್ಯಾಕೇಜ್‌ಗೆ ಆಗ್ರಹ

1000 ಕೋಟಿ ವಿಶೇಷ ಪ್ಯಾಕೇಜ್‌ಗೆ ಆಗ್ರಹ

ಕಲಬುರಗಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಗಮಿಸಿರುವ ಸಂದರ್ಭದಲ್ಲೇ ರೈತರ ಈ ಬೇಡಿಕೆ ಮತ್ತಷ್ಟು ಮುನ್ನೆಲೆಗೆ ಬಂದಿದೆ. ಬರದ ಸಂಕಷ್ಟದಲ್ಲಿರುವ ಕೃಷಿಕರಿಗೆ ಸರಕಾರ ತಕ್ಷಣ ಸ್ಪಂದಿಸಬೇಕು. ನೈಜ ಬೆಳೆನಷ್ಟ ಗುರುತಿಸಿ ಪರಿಹಾರ ಕಲ್ಪಿಸುವ ಜತೆಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಕೃಷಿ ಪುನಶ್ಚೇತನಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವಯಂ ರಕ್ತದಾನ; ಯುವ ಸಮುದಾಯಕ್ಕೆ ಪ್ರೇರಣೆಯಾದ ಶಿಕ್ಷಣ ಸಚಿವ

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವಯಂ ರಕ್ತದಾನ

Pralhad Joshi: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಪ್ರಯುಕ್ತ ಆಯೋಜಿಸಿದ್ದ "ಸೇವಾ ಸಂಕಲ್ಪ ಅಭಿಯಾನ"ದ ಭಾಗವಾಗಿ ಬಿಜೆಪಿ ಯುವ ಮೋರ್ಚಾವು ಮಹಾಮನೆ ಮನಗುಂಡಿಯಲ್ಲಿ ಗುರುವಾರ ಆಯೋಜಿಸಿದ್ಧ ರಕ್ತದಾನ ಶಿಬಿರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಸ್ವತಃ ರಕ್ತದಾನ ಮಾಡುವ ಮೂಲಕವೇ ಚಾಲನೆ ನೀಡಿದ್ದಾರೆ.

ನಾಳೆ ಕರಾವಳಿಯಲ್ಲಿ ಸಂಪುಟ ಸಭೆ: ತುಳು 2ನೇ ಆಡಳಿತ ಭಾಷೆ, ಮೂಲಸೌಕರ್ಯ ಯೋಜನೆಗಳಿಗೆ ಅಧಿಕೃತ ಮುದ್ರೆಯ ನಿರೀಕ್ಷೆ

ನಾಳೆ ಕರಾವಳಿಯಲ್ಲಿ ಸಂಪುಟ ಸಭೆ

ಕರ್ನಾಟಕದ ಆಡಳಿತ ಶಕ್ತಿ ಸೌಧವೇ ಕರಾವಳಿಯಂಗಳಕ್ಕೆ ಇಳಿದು ಬರುತ್ತಿರುವ ಸಂದರ್ಭದಲ್ಲಿ ವಿವಿಧ ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು, ಧಾರ್ಮಿಕಸಾಮಾಜಿಕ ಸಂಘಟನೆಗಳು ಹಾಗೂ ಕೈಗಾರಿಕಾ ಒಕ್ಕೂಟಗಳು ಸರಕಾರದ ಮುಂದಿಟ್ಟಿರುವ ಪ್ರಮುಖ ಪ್ರಸ್ತಾವನೆಗಳು ಮತ್ತು ಅವುಗಳ ಸಂಪುಟ ಅನುಮೋದನೆಯ ಸಾಧ್ಯತೆಗಳು ಹೀಗಿದೆ.

ಮದುವೆ ಆಮಿಷ ಒಡ್ಡಿ ಯುವತಿಗೆ ವಂಚನೆ; ಮಾಜಿ ಸಚಿವ ಡಿ. ಸುಧಾಕರ್ ಸಹೋದರನ ಕುಟುಂಬದ ವಿರುದ್ಧ ಎಫ್‌ಐಆರ್

ಮದುವೆ ಆಮಿಷ ಒಡ್ಡಿ ಯುವತಿಗೆ ವಂಚನೆ; ಎಫ್‌ಐಆರ್ ದಾಖಲು

Tumkur News: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಎಸಗಿರುವ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪದ ಮೇಲೆ ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರ ಸಹೋದರ ಡಿ.ಎಸ್. ಕುಮಾರ್ ಕುಟುಂಬದ ವಿರುದ್ಧ ತುಮಕೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಟ್ಟು ಏಳು ಜನರ ವಿರುದ್ಧ ದೂರು ದಾಖಲಾಗಿದೆ.

ದಿವ್ಯಾಂಗರಿಗೆ ಅನುಕಂಪವಲ್ಲ, ಸ್ವಾವಲಂಬನೆಗೆ ಆದ್ಯತೆ: ಬಿ.ಎಸ್.ಸುರೇಶ್

ದಿವ್ಯಾಂಗರಿಗೆ ಅನುಕಂಪವಲ್ಲ, ಸ್ವಾವಲಂಬನೆಗೆ ಆದ್ಯತೆ

ಸುಮಾರು 2,000 ವಿಕಲಚೇತನರು ಹಾಗೂ ಹಿರಿಯ ನಾಗರಿಕರಿಗೆ ಒಂದೇ ಸೂರಿನಡಿ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯ ವಿತರಿಸುತ್ತಿರುವುದು ಸಂತಸದ ಸಂಗತಿ. ಹಿಂದೆ ವಿಕಲಚೇತನರ ಬಗ್ಗೆ ಸಮಾಜದಲ್ಲಿ ವಿಭಿನ್ನ ಭಾವನೆಗಳಿದ್ದವು. ಇದೀಗ ಅವರನ್ನು ಅನುಕಂಪದಿಂದ ನೋಡುವ ಬದಲು ಸಮಾಜದ ಮುಖ್ಯವಾಹಿನಿಗೆ ತಂದು ಸ್ವಾವಲಂಬಿಗಳನ್ನಾಗಿ ಮಾಡಬೇಕಾದ ಕಾಲ ಬಂದಿದೆ

ಕಡಲ ನಗರಿ ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ; 2ನೇ ಆಡಳಿತ ಭಾಷೆಯಾಗುತ್ತ ತುಳು?

ಕಡಲ ನಗರಿ ಮಂಗಳೂರಿನಲ್ಲಿ ನಾಳೆ ಸಚಿವ ಸಂಪುಟ ಸಭೆ

Cabinet meeting in Mangaluru: ಕರಾವಳಿಯ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಲು ಸಿದ್ಧತೆ ಜೋರಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಶುಕ್ರವಾರ (ಸೆಪ್ಟೆಂಬರ್‌ 18) ಈ ಐತಿಹಾಸಿಕ ಸಭೆ ಆಯೋಜಿಸಲಾಗಿದೆ.

ಸಾಕುಪ್ರಾಣಿಗಳ ವಿಮಾನ ಪ್ರಯಾಣದಲ್ಲಿ ಬೆಂಗಳೂರು ಮುಂಚೂಣಿ: ಅಕಾಸಾ ಏರ್

ಸಾಕುಪ್ರಾಣಿಗಳ ವಿಮಾನ ಪ್ರಯಾಣದಲ್ಲಿ ಬೆಂಗಳೂರು ಮುಂಚೂಣಿ

ಅಕಾಸಾ ಏರ್‌ನಲ್ಲಿ ಅತಿ ಹೆಚ್ಚು ಬಾರಿ ಸಾಕುಪ್ರಾಣಿಗಳೊಂದಿಗೆ ಪ್ರಯಾಣಿಸುವ ಮೊದಲ 10 ಪೆಟ್ ಪೇರಂಟ್ಸ್‌ಗಳಲ್ಲಿ ಐವರು ಬೆಂಗಳೂರಿನವರಾಗಿದ್ದಾರೆ. ಬೆಂಗಳೂರು–ದೆಹಲಿ, ಬೆಂಗಳೂರು–ಕೊಲ್ಕತ್ತಾ ಮತ್ತು ಬೆಂಗಳೂರು–ಗುವಾಹಟಿ ಮಾರ್ಗಗಳು ಅತ್ಯಂತ ಜನಪ್ರಿಯ ಸಾಕುಪ್ರಾಣಿ ಪ್ರಯಾಣ ಮಾರ್ಗ ಗಳಲ್ಲಿ ಸೇರಿದ್ದು, ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಬೆಂಗಳೂರಿನಿಂದ ನಡೆದ ಸಾಕುಪ್ರಾಣಿ ವಿಮಾನ ಪ್ರಯಾಣಗಳಲ್ಲಿ ಶೇ.55ಕ್ಕಿಂತ ಹೆಚ್ಚು ಪಾಲು ಹೊಂದಿವೆ.

Chikkaballapur News: ವೈರತ್ವದಾಚೆ ಮನುಷ್ಯತ್ವ ಮೆರೆದ ಶಾಸಕ, ಸಂಸದ: ಶಾಂತಮ್ಮ ನಮ್ಮ ತಾಯಿಯಷ್ಟೇ ಶ್ರೇಷ್ಠ ಎಂದ ಶಾಸಕ ಪ್ರದೀಪ್ ಈಶ್ವರ್

ಶಾಂತಮ್ಮ ನಮ್ಮ ತಾಯಿಯಷ್ಟೇ ಶ್ರೇಷ್ಠ ಎಂದ ಶಾಸಕ ಪ್ರದೀಪ್

ಇದು ರಾಜಕೀಯ ಹೊರತಾದ ಮನವಿ. ಸಂಸದರ ತಾಯಿ ನಮ್ಮೂರಿನ ಹೆಣ್ಣುಮಗಳು. ಅವರು ನಮ್ಮ ತಾಯಿಯಷ್ಟೇ ಶ್ರೇಷ್ಠರು. ಅವರ ಹೆಸರನ್ನು ಒಪಿಡಿಗೆ ಇಟ್ಟರೆ ನನಗೆ ಹೆಚ್ಚು ಸಂತೋಷವಾಗುತ್ತದೆ” ಇದು ನನ್ನ ಸಂಕಲ್ಪವೂ ಆಗಿತ್ತು ಎಂದು ಶಾಸಕ ಹೇಳಿದ ಮಾತು ಕಾರ್ಯಕ್ರಮದ ವಾತಾವರಣವನ್ನೇ ಬದಲಿಸಿತು.

Dr B R Ambedkar: ಅಂಬೇಡ್ಕರ್ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಅಂಬೇಡ್ಕರ್ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ

ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ದೇಶದ ಎಲ್ಲ ಜನರಿಗೂ ಸಮಾನತೆ, ಸ್ವಾತಂತ್ರ್ಯ ಮತ್ತು ಬಂಧುತ್ವದ ಮೌಲ್ಯಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ಹಾಗೂ ಸಂವಿಧಾನ ಶಿಲ್ಪಿಯಾಗಿದ್ದಾರೆ. ಅವರನ್ನು ಜಾತಿಯ ಎಲ್ಲೆಗಳನ್ನು ಮೀರಿ ಪ್ರತಿಯೊಬ್ಬರೂ ಗೌರವಿಸಬೇಕು.

Alamatti: ಕಡಿಮೆಯಾಗುತ್ತಿರುವ ಆಲಮಟ್ಟಿ ‌ಜಲಾಶಯ ಮಟ್ಟ; ಶೂನ್ಯಕ್ಕಿಳಿದ ಒಳಹರಿವು; ಬಾಗಿನಕ್ಕೆ ಹೆಚ್ಚಿದ ಒತ್ತಡ

ಕೂಡಲಸಂಗಮದ ಪೂಜೆ ನೆಪದಲ್ಲಿ‌ ಮರೆಯಾಗದಿರಲಿ ಕೃಷ್ಣೆ

ಮಹಾರಾಷ್ಟ್ರದಲ್ಲಿ ‌ಮಳೆ ಸಂಪೂರ್ಣ ನಿಂತ ಕಾರಣ ಜಲಾಶಯದ ಒಳಹರಿವು ಬುಧವಾರ ಶೂನ್ಯಕ್ಕೆ ತಲುಪಿದೆ. ಆದರೆ ಕಾಲುವೆಗಳ ಜಾಲಕ್ಕೆ ಮುಂಗಾರು ಹಂಗಾಮಿಗೆ ನೀರು, ಕೆರೆಗಳ‌ ಭರ್ತಿ, ಹಿನ್ನೀರಿನ‌ ಬಳಕೆ, ಭಾಷ್ಪಿಭವನದ ಕಾರಣ 13,692 ಕ್ಯುಸೆಕ್ ನೀರು ಜಲಾಶಯದಿಂದ ಹೊರ ಹೋಗುತ್ತಿದೆ. ಇದರಿಂದ ಜಲಾಶಯದ ಮಟ್ಟ ಕುಸಿಯತೊಡಗಿದೆ.

S N Subbareddy: ಶಿಕ್ಷಣದ ಜತೆಗೆ ಶಿಸ್ತನ್ನು ಕಲಿಸಿಕೊಡಿ: ಶಾಸಕ ಸುಬ್ಬಾರೆಡ್ಡಿ

ಶಿಕ್ಷಣದ ಜತೆಗೆ ಶಿಸ್ತನ್ನು ಕಲಿಸಿಕೊಡಿ: ಶಾಸಕ ಸುಬ್ಬಾರೆಡ್ಡಿ

ಮಕ್ಕಳು ತಮ್ಮ ಸುತ್ತಮುತ್ತಲಿನವರ ನಡವಳಿಕೆಯನ್ನು ಗಮನಿಸಿ ಅನುಸರಿಸುವುದರಿಂದ ಶಿಕ್ಷಕರು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಹಿಂದುಳಿದ ಹಾಗೂ ಬರಪೀಡಿತ ಗುಡಿಬಂಡೆ ತಾಲೂಕಿ ನಲ್ಲಿ ಮಕ್ಕಳ ಭವಿಷ್ಯ ರೂಪಿಸಲು ಶಿಕ್ಷಣವೇ ಪ್ರಮುಖ ಸಾಧನವಾಗಿದೆ. ಬಡ ಕುಟುಂಬಗಳ ಅನೇಕ ಮಕ್ಕಳು ಸರ್ಕಾರಿ ಶಾಲೆಗಳನ್ನು ಅವಲಂಬಿಸಿದ್ದು, ಶಿಕ್ಷಕರು ಅವರನ್ನು ತಮ್ಮ ಮಕ್ಕಳಂತೆ ಭಾವಿಸಿ ಗುಣಮಟ್ಟದ ಶಿಕ್ಷಣ ನೀಡಬೇಕು

Loading...