ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಅಮೆರಿಕದಿಂದ ಕಾಲು ಮುರಿದುಕೊಂಡು ಬಂದ ಬೆಂಗಳೂರು ಮೂಲದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಅಮೆರಿಕದಿಂದ ಬಂದ ವ್ಯಕ್ತಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಬೆಂಗಳೂರು ಮೂಲದ 43 ವರ್ಷದ ವೃತ್ತಿಪರರಾದ ಶ್ರೀ ಧೀರೇನ್‌ರಿಗೆ ರಜೆಯು ದುಃಸ್ವಪ್ನವಾಯಿತು. ರಜಾ ದಿನಗಳಲ್ಲಿ ಧೀರೇನ್‌ ಯುನೈಟೆಡ್ ಸ್ಟೇಟ್ಸ್‌ನಲ್ಲಿ ಭೀಕರವಾಗಿ ಬಿದ್ದ ಕಾರಣ ಅವರ ಕಾಲು ತೀವ್ರ ವಾಗಿ ಮುರಿದು, ಕಣಕಾಲು ಸ್ಥಾನಭ್ರಷ್ಟವಾಗಿ, ಬೆಂಬಲವಿಲ್ಲದೆ ತೂಗಾಡುತ್ತಿತ್ತು. ವಿಪರೀತ ನೋವಿ ನೊಂದಿಗೆ ವಿದೇಶದಲ್ಲಿದ್ದ ಸೀಮಿತ ಆಯ್ಕೆಗಳ ಕಾರಣ, ಶ್ರೀ ಧೀರೇನ್ ಚಿಕಿತ್ಸೆಗಾಗಿ ಭಾರತಕ್ಕೆ ಹಿಂದಿರು ಗಲು ನಿರ್ಧರಿಸಿದರು.

MLC N Ravikumar: ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ; ಎನ್‌.ರವಿಕುಮಾರ್‌ಗೆ ಜಾಮೀನು

ಅವಹೇಳನಕಾರಿ ಹೇಳಿಕೆ ಪ್ರಕರಣ; ಎಂಎಲ್‌ಸಿ ಎನ್‌.ರವಿಕುಮಾರ್‌ಗೆ ಜಾಮೀನು

MLC N Ravikumar: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣದಲ್ಲಿ ಬಿಜೆಪಿ ಎಂಎಲ್‌ಸಿ ಎನ್.ರವಿಕುಮಾರ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. 1 ಲಕ್ಷ ಬಾಂಡ್, ಒಬ್ಬರು ಶ್ಯೂರಿಟಿ ಒದಗಿಸಲು ಕೋರ್ಟ್ ಸೂಚನೆ ನೀಡಿದೆ.

Kalaburagi News: ಸಿಸಿ ರಸ್ತೆ ಕಾಮಗಾರಿ ಬಿಲ್ ಮಂಜೂರು ಮಾಡಲು ಕಮಿಷನ್‌ಗೆ ಬೇಡಿಕೆ; ಇಬ್ಬರು ಅಧಿಕಾರಿಗಳ ಅಮಾನತು

ಕಾಮಗಾರಿ ಬಿಲ್ ನೀಡಲು ಕಮಿಷನ್‌ಗೆ ಬೇಡಿಕೆ: ಇಬ್ಬರು ಅಧಿಕಾರಿಗಳು ಸಸ್ಪೆಂಡ್‌

Kalaburagi News: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದ್ದ ಸಿಸಿ ರಸ್ತೆಯ ಕಾಮಗಾರಿಯ ಬಿಲ್ ಮಾಡಲು ಕಮಿಷನ್ ಬೇಡಿಕೆಯಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

Madhugiri News: ಕಂದಾಯ ಅದಾಲತ್; ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಸಚಿವ ಕೆ.ಎನ್. ರಾಜಣ್ಣ

ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ ಸಚಿವ ಕೆ.ಎನ್. ರಾಜಣ್ಣ

Madhugiri News: ಮಧುಗಿರಿ ತಾಲೂಕು ಕಚೇರಿ ಆವರಣದಲ್ಲಿ ಕಂದಾಯ ಅದಾಲತ್‌, ಇ- ಪೌತಿ ಖಾತೆ, ದರಕಾಸ್ತು ಪೋಡಿ ಉಚಿತ ಪಹಣಿ ವಿತರಣೆ, ಗ್ರಾಮ ಆಡಳಿತ ಅಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ, ಇ-ಆಫೀಸ್ ಚಾಲನೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

Chikkanayakanahalli News: ಸ್ನೇಹಿತೆಯನ್ನು ಕರೆಸಿ ಗೆಳೆಯರೊಂದಿಗೆ ಸಾಮೂಹಿಕ ಅತ್ಯಾಚಾರ ಎಸಗಿದ ಧೂರ್ತ!

ಸ್ನೇಹಿತೆಯನ್ನು ಕರೆಸಿ ಸಾಮೂಹಿಕ ಅತ್ಯಾಚಾರ; ಮೂವರು ಅರೆಸ್ಟ್‌

Chikkanayakanahalli News: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕಂದಿಕೆರೆ ಹೋಬಳಿಯ ಆಶ್ರೀಹಾಲ್ ಗ್ರಾಮದಲ್ಲಿ ಘಟನೆ ನಡೆದಿದೆ. ಈ ಸಂಬಂಧ ಚಿಕ್ಕನಾಯಕನಹಳ್ಳಿ ಪೋಲೀಸ್ ಠಾಣೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು, ಮೂವರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Mahavatar Narsimha Trailer: 'ಮಹಾವತಾರ್ ನರಸಿಂಹ' ಟ್ರೇಲರ್‌ ಬಿಡುಗಡೆ; ಜುಲೈ 25ಕ್ಕೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಚಿತ್ರ ತೆರೆಗೆ

'ಮಹಾವತಾರ್ ನರಸಿಂಹ' ಟ್ರೇಲರ್‌ ಬಿಡುಗಡೆ

Mahavatar Narsimha Trailer: ಮಹಾವತಾರ್ ನರಸಿಂಹ ಚಿತ್ರದ ಕಥೆಯು ಪ್ರಹ್ಲಾದನ ನಂಬಿಕೆಗೆ ವಿರುದ್ಧವಾಗಿ ನಿಲ್ಲುವ ತಂದೆ ಹಿರಣ್ಯಕಶಿಪುವನ್ನು ಮತ್ತು ಅವನ ಅಹಂಕಾರವನ್ನು ನಾಶಮಾಡಲು ಭೂಮಿಗೆ ಇಳಿದ ದೈವಿಕ ಅವತಾರ ಮಹಾವತಾರ್ ನರಸಿಂಹನ ಉದಯವನ್ನು ಅಷ್ಟೇ ಆವೇಶದಲ್ಲಿ ಪೌರಾಣಿಕ ಹಿನ್ನೆಲೆಯಲ್ಲಿ, ಗಟ್ಟಿ ತಾಂತ್ರಿಕ ನೆಲೆಗಟ್ಟಿನಲ್ಲಿ ಹೇಳಲಾಗಿದೆ.

CM Siddaramaiah: ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ

CM Siddaramaiah: ನವದೆಹಲಿಯಲ್ಲಿ ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಸಿಎಂ ಸಿದ್ದರಾಮಯ್ಯ ಅವರು ಬುಧವಾರ ಭೇಟಿಯಾಗಿ, ಸಮಾಲೋಚನೆ ನಡೆಸಿದ ನಂತರ ಮಾತನಾಡಿದ್ದು, ಕರ್ನಾಟಕ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದಾಗಿ ತಿಳಿಸಿದರು.

ಅಭಿಮನ್ಯು ನಟನೆಯ ʼಹಚ್ಚೆʼ ಚಿತ್ರದ ʼವಿಘ್ನೇಶ್ವರಾಯʼ ಹಾಡು ಬಿಡುಗಡೆ

ಅಭಿಮನ್ಯು ನಟನೆಯ ʼಹಚ್ಚೆʼ ಚಿತ್ರದ ʼವಿಘ್ನೇಶ್ವರಾಯʼ ಹಾಡು ಬಿಡುಗಡೆ

Hacche Movie: ಯಶೋಧರ ಅವರು ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಅಭಿಮನ್ಯು ನಾಯಕನಾಗಿ ನಟಿಸಿರುವ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ʼಹಚ್ಚೆʼ ಚಿತ್ರಕ್ಕಾಗಿ ಯಶೋಧರ ಅವರೇ ಬರೆದಿರುವ ʼವಿಘ್ನೇಶ್ವರಾಯʼ ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

Defence corridors: ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ; 2 ಡಿಫೆನ್ಸ್‌ ಕಾರಿಡಾರ್‌ಗೆ ಮನವಿ

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ

Defence corridors: ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯಯ ನೇತೃತ್ವದ ನಿಯೋಗ ಕೋರಿದೆ.

Physical Abuse: ಬೆಂಗಳೂರಿನಲ್ಲಿ ಹೀನ ಕೃತ್ಯ; ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆ ಮೇಲೆ ಗ್ಯಾಂಗ್‌ ರೇಪ್‌

ಸ್ನೇಹಿತನ ಮನೆಗೆ ಹೋಗಿದ್ದ ಮಹಿಳೆಗೆ ಬೆದರಿಕೆ ಹಾಕಿ ಗ್ಯಾಂಗ್‌ ರೇಪ್‌

Bengaluru News: ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್​ನಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

Irrigation projects: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನ ನೀಡಲು ಕೇಂದ್ರಕ್ಕೆ ಮನವಿ: ಡಿಕೆಶಿ

6 ನೀರಾವರಿ ಯೋಜನೆಗಳಿಗೆ 11,122.76 ಕೋಟಿ ಅನುದಾನಕ್ಕೆ ಮನವಿ: ಡಿಕೆಶಿ

DK Shivakumar: ದೆಹಲಿ ಪ್ರವಾಸ ಹಾಗೂ ಕೇಂದ್ರ ಸಚಿವರ ಭೇಟಿ ವಿಚಾರವಾಗಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ರಾಜ್ಯದ 6 ನೀರಾವರಿ ಯೋಜನೆಗಳಿಗೆ ಒಟ್ಟು ರೂ. 11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ. ಕುಡಿಯುವ ನೀರಿನ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಶೇ.25ರಷ್ಟು ಆರ್ಥಿಕ ಸಹಾಯ, ಕಳಸಾ ಬಂಡೂರಿ ಯೋಜನೆ, ಕೃಷ್ಣಾ ನದಿ ನೀರಿನ ವಿಚಾರವಾಗಿ ಕೇಂದ್ರ ಜಲಶಕ್ತಿ ಹಾಗೂ ಪರಿಸರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

Karnataka Rains: ಕರಾವಳಿ ಜಿಲ್ಲೆಗಳಿಗೆ ಮುಂದಿನ 6 ದಿನ ಯೆಲ್ಲೋ ಅಲರ್ಟ್;‌ ಬಿರುಸಿನ ಮಳೆ ಸಾಧ್ಯತೆ

ಕರಾವಳಿ ಜಿಲ್ಲೆಗಳಿಗೆ ಮುಂದಿನ 6 ದಿನ ಯೆಲ್ಲೋ ಅಲರ್ಟ್

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Sigandur Bridge: ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡಿ; ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆ

ಸಿಗಂದೂರು ಸೇತುವೆಗೆ ಬಿಎಸ್‌ವೈ ಹೆಸರಿಡಿ; ಹೈಕೋರ್ಟ್‌ಗೆ ರಿಟ್ ಅರ್ಜಿ

Shivamogga News: ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರಿಡಲು ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಕೆಯಾಗಿದೆ. ಸಾಗರದ ರೈತ ಹರನಾಥರಾವ್ ಅವರು ಈ ಅರ್ಜಿ ಸಲ್ಲಿಸಿದ್ದು, ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ನೀಡಿದ ಕೊಡುಗೆ ಹಾಗೂ ಸಿಗಂದೂರು ಸೇತುವೆ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ಪರಿಗಣಿಸಿ, ಸಿಗಂದೂರು ಸೇತುವೆಗೆ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದು ಅವರು ಕೋರಿದ್ದಾರೆ.

NIA Raid: ಜೈಲಿನಲ್ಲಿದ್ದ ಉಗ್ರರಿಗೆ ನೆರವು; ತನಿಖೆ ವೇಳೆ ವೈದ್ಯ ನಾಗರಾಜ್ ಕರ್ಮಕಾಂಡ ಬಯಲು!

ಉಗ್ರರಿಗೆ ನೆರವು; ತನಿಖೆ ವೇಳೆ ವೈದ್ಯ ನಾಗರಾಜ್ ಕರ್ಮಕಾಂಡ ಬಯಲು!

NIA Raid: ಪರಪ್ಪನ ಅಗ್ರಹಾರ ಜೈಲಿನಲ್ಲಿ ಸುಮಾರು 5 ವರ್ಷಗಳಿಂದ ಮನೋವೈದ್ಯನಾಗಿರುವ ನಾಗರಾಜ್‌, ವೈದ್ಯ ಕೆಲಸ ಬಿಟ್ಟು ಮೊಬೈಲ್ ಸಪ್ಲೈ ಮಾಡುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಉಗ್ರ ನಾಸೀರ್ ಸೇರಿ ಹಲವು ಕೈದಿಗಳಿಗೆ ತನ್ನ ಸಹಾಯಕಿ ಪವಿತ್ರಾಳ ಮೂಲಕ ಜೈಲಿಗೆ ಮೊಬೈಲ್ ರವಾನೆ ಮಾಡುತ್ತಿದ್ದ ಎಂಬ ವಿಚಾರ ಬಯಲಾಗಿದೆ.

CP Yogeshwar: ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಕಾಂಗ್ರೆಸ್ ಹೈಕಮಾಂಡ್‌ಗೆ ದೂರು ಕೊಟ್ಟ ಪತ್ನಿ, ಪುತ್ರಿ

ಸಿ.ಪಿ. ಯೋಗೇಶ್ವರ್ ವಿರುದ್ಧ ದೂರು ಕೊಟ್ಟ ಪತ್ನಿ, ಪುತ್ರಿ

CP Yogeshwar: ಸಿ.ಪಿ.ಯೋಗೇಶ್ವ‌ರ್ ತಮ್ಮದೇ ಕುಟುಂಬಕ್ಕೆ ತೊಂದರೆ ನೀಡುತ್ತಿದ್ದಾರೆ. ಕಾನೂನಾತ್ಮಕವಾಗಿ ನಾವು ದೂರವಾಗಿಲ್ಲ. ಆದರೂ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ. ಇದನ್ನು ಸರಿಪಡಿಸಿಕೊಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್‌ ಸುರ್ಜೇವಾಲಾ ಅವರಿಗೆ ಮನವಿ ಮಾಡಿದ್ದಾರೆ.

Heart attack: ಗುಂಡ್ಲುಪೇಟೆಯಲ್ಲಿ ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು!

ಪಾಠ ಕೇಳುವಾಗಲೇ ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಸಾವು!

Heart attack: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರಬರಗೇರಿಯ ಶಾಲೆಯಲ್ಲಿ ಬುಧವಾರ ಘಟನೆ ನಡೆದಿದೆ. 4ನೇ ತರಗತಿ ವಿದ್ಯಾರ್ಥಿಯೊಬ್ಬ ಪಾಠ ಕೇಳುತ್ತಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಮೃತಪಟ್ಟ ಬಾಲಕ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

Murder Case: ಶಾಪಿಂಗ್‌ ಹೋಗಿದ್ದಕ್ಕೆ ಪತ್ನಿಯ ಕುತ್ತಿಗೆ ತುಳಿದು, ಉಸಿರುಗಟ್ಟಿಸಿ ಕೊಂದ ಪತಿ!

ಶಾಪಿಂಗ್‌ ಹೋಗಿದ್ದಕ್ಕೆ ಪತ್ನಿಯ ಕುತ್ತಿಗೆ ತುಳಿದು ಕೊಂದ ಪತಿ!

Murder Case: ಬೆಂಗಳೂರಿನ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಶಾಪಿಂಗ್‌ಗೆ ಹೋಗಿ ಬಂದಿದ್ದಕ್ಕೆ ಪತ್ನಿ ಜತೆಗೆ ಗಂಡ ಜಗಳ ತೆಗೆದಿದ್ದಾನೆ. ಈ ವೇಳೆ ಗಲಾಟೆ ವಿಕೋಪಕ್ಕೆ ತಿರುಗಿ ಹೆಂಡತಿಯ ಕುತ್ತಿಗೆಯ ಮೇಲೆ ಕಾಲಿಟ್ಟು, ಉಸಿರುಗಟ್ಟಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ.

NIA Raid: ಮೂವರು ಶಂಕಿತ ಉಗ್ರರನ್ನು ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ

ಮೂವರು ಶಂಕಿತ ಉಗ್ರರನ್ನು ಎನ್‌ಐಎ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶ

Suspected Terrorists: ಶಂಕಿತ ಉಗ್ರರಾದ ಅನೀಸ್ ಫಾತಿಮಾ, ಡಾ. ನಾಗರಾಜ್, ಹಾಗೂ ಎಎಸ್‌ಐ ಚಾನ್ ಪಾಷಾನನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್‌ಐಎ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆಯ ಬಳಿಕ ಮೂವರು ಉಗ್ರರನ್ನು ಎನ್‌ಐಎ ಕಸ್ಟಡಿಗೆ ನೀಡಿ, ಆದೇಶಿಸಿದೆ.

Fraud Case: ಸಿಎಂ, ಡಿಸಿಎಂ ಹೆಸರಲ್ಲಿ ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ್ದ ಮಹಿಳೆ ಅರೆಸ್ಟ್

ಸ್ನೇಹಿತೆಯರಿಗೆ ಕೋಟಿ ಕೋಟಿ ವಂಚನೆ ಮಾಡಿದ್ದ ಮಹಿಳೆ ಅರೆಸ್ಟ್

Fraud Case: ಕಿಟ್ಟಿ ಪಾರ್ಟಿ ಹೆಸರಲ್ಲಿ ಶ್ರೀಮಂತ ಮಹಿಳೆಯರನ್ನು ಪರಿಚಯ ಮಾಡಿಕೊಂಡಿದ್ದ ಮಹಿಳೆ ತನಗೆ ಹಲವು ರಾಜಕಾರಣಿಗಳು ಗೊತ್ತೆಂದು ಹೇಳಿಕೊಳ್ಳುತ್ತಿದ್ದಳು. ಸಿಎಂ, ಡಿಸಿಎಂ, ಸಚಿವ ಎಂ.ಬಿ. ಪಾಟಿಲ್ ಹೆಸರೇಳಿ, 30 ಕೋಟಿ ರೂ.ಗಿಂತಲೂ ಹೆಚ್ಚು ವಂಚನೆ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

Self Harming: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಮತ್ತೊಬ್ಬಳ ಸ್ಥಿತಿ ಗಂಭೀರ

ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಮತ್ತೊಬ್ಬಳ ಸ್ಥಿತಿ ಗಂಭೀರ

Self Harming: ಬೆಳಗಾವಿ ನಗರದ ಜೋಶಿಮಾಳ್‌ನಲ್ಲಿ ದುರ್ಘಟನೆ ನಡೆದಿದೆ. ಮೃತ ದುರ್ದೈವಿಗಳನ್ನು ಸಂತೋಷ ಕುರುಡೇಕರ್ (44), ಸುವರ್ಣ ಹಾಗು ಮಂಗಳ ಎಂದು ಗುರುತಿಸಲಾಗಿದೆ. ವಿಷ ಸೇವಿಸಿದ ಸುನಂದ ಕುರುಡೇಕರ್ ಎಂಬವರ ಸ್ಥಿತಿ ಗಂಭೀರವಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

NIA Raid: ಜೈಲಿನಿಂದಲೇ ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸ್ಕೆಚ್‌ ಹಾಕಿದ ಉಗ್ರ, ಕೈದಿಗಳಿಗೆ ಮೊಬೈಲ್‌ ಮಾರುತ್ತಿದ್ದ ವೈದ್ಯ!

ಜೈಲಿನೊಳಗಿಂದಲೇ ಬೆಂಗಳೂರಿನಲ್ಲಿ ಸ್ಫೋಟಕ್ಕೆ ಉಗ್ರ ಸ್ಕೆಚ್‌

NIA Raid: ಭಯೋತ್ಪಾದನೆ ಬಗ್ಗೆ ಮೈಂಡ್ ವಾಷ್ ಮಾಡುವುದರಲ್ಲಿ ನಾಸಿರ್ ಎತ್ತಿದ ಕೈ ಆಗಿದ್ದು, ಹಲವರನ್ನು ಉಗ್ರ ಚಟುವಟಿಕೆಗಾಗಿ ಬಳಸಿಕೊಂಡಿದ್ದಾನೆ. ಜೈಲಿನಲ್ಲಿ ಇದಕ್ಕಾಗಿ ಯುವಕರ ತಂಡವನ್ನು ಕೂಡ ನಾಸಿರ್ ತಯಾರು ಮಾಡಿದ್ದ. ಇವನು ದಕ್ಷಿಣ ಭಾರತದಲ್ಲಿ ಹಲವು ಬಾಂಬ್‌ ಬ್ಲಾಸ್ಟ್‌ಗಳ ಹಿಂದೆ ಇದ್ದಾನೆ.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 9th July 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 60 ರೂ. ಇಳಿಕೆ ಆಗಿ 9,000ರೂ.ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 66 ರೂ. ಇಳಿಕೆಯಾಗಿ 9,818 ರೂ. ತಲುಪಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 72,000 ರೂ. ಬಾಳಿದರೆ, 10 ಗ್ರಾಂಗೆ ನೀವು 90,000 ರೂ. ಹಾಗೂ 100 ಗ್ರಾಂಗೆ 9,00,000 ರೂ. ನೀಡಬೇಕಾಗುತ್ತದೆ.

Heart Attack: ಹೃದಯಾಘಾತ: ಧಾರವಾಡದಲ್ಲಿ ಕೆಎಎಸ್‌ ವಿದ್ಯಾರ್ಥಿನಿ ಸಾವು, ದಾವಣಗೆರೆಯಲ್ಲಿ ಯುವಕ ಮೃತ್ಯು

ಹೃದಯಾಘಾತ ಸರಣಿ: ಕೆಎಎಸ್‌ ವಿದ್ಯಾರ್ಥಿನಿ‌, ಯುವಕ ಸಾವು

Heart Attack: ಧಾರವಾಡ (Dharawada) ಜಿಲ್ಲೆಯಲ್ಲಿ ಪದವಿ ವಿಭಾಗದಲ್ಲಿ ವಿದ್ಯಾಭ್ಯಾಸ ಮುಗಿಸಿ, ಯುಪಿಎಸ್ಸಿ ಹಾಗೂ ಕೆಎಎಸ್ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಾವಣಗೆರೆಯಲ್ಲಿ (Davanagere) ಹೃದಯಸ್ತಂಭನದಿಂದ (Heart Failure) 22 ವರ್ಷದ ಯುವಕ ಮೃತಪಟ್ಟಿದ್ದಾನೆ.

Heart Attack: ಹೃದಯಾಘಾತದ ಆತಂಕ, ಜಯದೇವಕ್ಕೆ ನಿರೀಕ್ಷೆಗೂ ಮೀರಿ ಜನರ ದೌಡು

ಹೃದಯಾಘಾತದ ಆತಂಕ, ಜಯದೇವಕ್ಕೆ ನಿರೀಕ್ಷೆಗೂ ಮೀರಿ ಜನರ ದೌಡು

Heart Attack: ಮಾಧ್ಯಮಗಳಲ್ಲಿ ಸುದ್ದಿಗಳನ್ನು ನೋಡಿ ಜನ ಆತಂಕದಿಂದ ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಅವರ ವೈದ್ಯಕೀಯ ಸ್ಥಿತಿಯ ಆಧಾರದ ಮೇಲೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡು ವಾರಗಳ ಹಿಂದೆ 400 ರೋಗಿಗಳಿದ್ದ ದೈನಂದಿನ ಹೊರರೋಗಿ ರೋಗಿಗಳ ಸಂಖ್ಯೆ ಈಗ 600ಕ್ಕೆ ಏರಿದೆ ಎಂದು ವೈದ್ಯರು ತಿಳಿಸಿದ್ದಾರೆ.