ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Doctor Murder Case: ನಿನಗಾಗಿ ನನ್ನ ಹೆಂಡ್ತಿಯನ್ನು ಕೊಂದೆ; ಪತ್ನಿ ಕೊಲೆ ಬಳಿಕ ನಾಲ್ಕೈದು ಮಹಿಳೆಯರಿಗೆ ಮೆಸೇಜ್‌ ಕಳುಹಿಸಿದ್ದ ವೈದ್ಯ!

ನಿನಗಾಗಿ ನನ್ನ ಹೆಂಡ್ತಿಯನ್ನು ಕೊಂದೆ; ಪತ್ನಿ ಕೊಲೆ ಬಳಿಕ ವೈದ್ಯ ಮೆಸೇಜ್‌!

Dr Kritika Reddy Murder Case: ಪತ್ನಿ ಕೃತಿಕಾ ಕೊಲೆ ಬಳಿಕ ವೈದ್ಯ ಮಹೇಂದ್ರ ರೆಡ್ಡಿ, ತನ್ನ ಪ್ರಪೋಸಲ್ ತಿರಸ್ಕರಿಸಿದ್ದ ಮಹಿಳೆಯರಿಗೆ ಮೆಸೇಜ್‌ ಕಳುಹಿಸಿದ್ದ ಎನ್ನುವುದು ತಿಳಿದುಬಂದಿದೆ. ಪೊಲೀಸರು ವಶಪಡಿಸಿಕೊಂಡ ಮೊಬೈಲ್ ಫೋನ್ ಮತ್ತು ಲ್ಯಾಪ್‌ಟಾಪ್‌ನಲ್ಲಿದ್ದ ಡೇಟಾವನ್ನು ಪರಿಶೀಲಿಸಿದಾಗ ವೈದ್ಯನ ಕುರಿತ ಹಲವು ವಿಚಾರ ಬೆಳಕಿಗೆ ಬಂದಿದೆ.

ಟಾಟಾ ಟ್ರಸ್ಟ್‌ ಸಹಭಾಗಿತ್ವದಲ್ಲಿ ನಡೆದ ನೊಬೆಲ್ ಪ್ರೈಜ್ ಡೈಲಾಗ್ ಇಂಡಿಯಾ 2025

ಟಾಟಾ ಟ್ರಸ್ಟ್‌ ಸಹಭಾಗಿತ್ವದಲ್ಲಿ ನೊಬೆಲ್ ಪ್ರೈಜ್ ಡೈಲಾಗ್ ಇಂಡಿಯಾ 2025

ನಾವು ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ದಾರಿಯಲ್ಲಿದ್ದೇವೆ. ಈ ಸಂದರ್ಭದಲ್ಲಿ ನಾವು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ವಿಚಾರದಲ್ಲಿ ಬೆಳವಣಿಗೆಯನ್ನು ಸಾಧಿಸಲು ಯುವ ಜನರನ್ನು ಸಬಲೀಕರಣಗೊಳಿಸಬೇಕಾಗಿದೆ. ವಿಶೇಷವಾಗಿ ಅಗತ್ಯ ಇರುವ ವ್ಯಕ್ತಿಗಳಿಗಾಗಿ ಹೊಸ ಆವಿಷ್ಕಾರ ಸೃಷ್ಟಿಗೆ ಪ್ರೋತ್ಸಾಹಿಸಬೇಕಾಗಿದೆ.

Vijay Mallya: ಬ್ಯಾಂಕ್‌ಗಳಿಂದ ಸಾಲದ ಲೆಕ್ಕ ಕೋರಿ ಹೈಕೋರ್ಟ್‌ಗೆ ವಿಜಯ್‌ ಮಲ್ಯ ರಿಟ್‌

ಬ್ಯಾಂಕ್‌ಗಳಿಂದ ಸಾಲದ ಲೆಕ್ಕ ಕೋರಿ ಹೈಕೋರ್ಟ್‌ಗೆ ವಿಜಯ್‌ ಮಲ್ಯ ರಿಟ್‌

Vijay Mally Writ: ವಿಜಯ್ ಮಲ್ಯ ಪರವಾಗಿ ಹಿರಿಯ ವಕೀಲ ಸಜನ್ ಪೂವಯ್ಯ ವಾದಿಸಿದರು. ವಿಜಯ್‌ ಮಲ್ಯ ಅವರು 6,200 ಕೋಟಿ ರೂಪಾಯಿ ಸಾಲ ಮರುಪಾವತಿ ಮಾಡಬೇಕಿತ್ತು. 14,000 ಕೋಟಿ ಹಣವನ್ನು ಅವರಿಂದ ವಸೂಲಿ ಮಾಡಿದ್ದಾರೆ. ಹೀಗೆಂದು ಹಣಕಾಸು ಸಚಿವೆ ಲೋಕಸಭೆಗೆ ತಿಳಿಸಿದ್ದಾರೆ. ಸಾಲ ವಸೂಲಾತಿ ಅಧಿಕಾರಿ ಸಹ 10200 ಕೋಟಿ ವಸೂಲಾಗಿದೆ ಎಂದಿದ್ದಾರೆ. ಸಂಪೂರ್ಣವಾಗಿ ಸಾಲ ತೀರಿದರೂ ಕೂಡ ಈಗಲೂ ಪ್ರಕ್ರಿಯೆ ಮುಂದುವರಿಸಲಾಗುತ್ತಿದೆ. ಹೀಗಾಗಿ ಸಾಲ ವಸೂಲಿಯಾದ ಲೆಕ್ಕಪತ್ರ ಕೋರಿ ವಿಜಯ್ ಮಲ್ಯ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ವಾದಿಸಿದರು.

Gauribidanur News: ಮದಕರಿ ನಾಯಕನ ಶೌರ್ಯ ಸಾಹಸ ಯುವ ಜನತೆಗೆ ಮಾದರಿ : ಆಂಧ್ರ ಸಂಸದ ಅಂಬಿಕಾ ಜಿ ಲಕ್ಷ್ಮೀನಾರಾಯಣ

ಮದಕರಿ ನಾಯಕನ ಶೌರ್ಯ ಸಾಹಸ ಯುವ ಜನತೆಗೆ ಮಾದರಿ

ನಾಯಕ ಸಮಾಜ ರಾಜಕೀಯ ವನ್ನು ಬದಿಗೊತ್ತಿ ಒಂದುಗೂಡಬೇಕು, ಯಾರು ಯಾವುದೇ ರಾಜಕೀಯ ಪಕ್ಷದಲ್ಲಿದ್ದರೂ ಚಿಂತೆಯಿಲ್ಲ, ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡಬೇಕು, ಉಳಿದಂತೆ ಸಮಾಜದ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮರೆತು ಒಂದಾಗಬೇಕು , ತಾಲ್ಲೂಕಿನಲ್ಲಿ ಮದಕರಿ ಯುವ ಬ್ರಿಗೇಡ್ ಮೂಲಕ ಅರ್ಥಪೂರ್ಣವಾಗಿ ಮದಕರಿ ನಾಯಕರ ಜಯಂತಿ ಆಚರಣೆ ಮಾಡಿದ್ದಾರೆ

Union Minister Shobha Karandlaje: ದೇವತಾ ಕಾರ್ಯಗಳಿಂದ ಸಮಾಜದಲ್ಲಿ ಸಾಮರಸ್ಯ ಸ್ಥಾಪನೆ ಸಾಧ್ಯ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ದೇವತಾ ಕಾರ್ಯಗಳಿಂದ ಸಮಾಜದಲ್ಲಿ ಸಾಮರಸ್ಯ ಸ್ಥಾಪನೆ ಸಾಧ್ಯ

ಮುದುಗೆರೆ ಗ್ರಾಮದಲ್ಲಿ ನೆಲೆಸಿರುವ ಶ್ರೀಲಕ್ಷ್ಮೀ ಚನ್ನಕೇಶವ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಪುನಪ್ರತಿಷ್ಟಾನೆಯನ್ನು ಸರ್ಕಾರ ಹಾಗೂ ಭಕ್ತಾಧಿಗಳ ನೆರವಿನಿಂದ ಅತ್ಯಂತ ಶ್ರದ್ದಾಭಕ್ತಿ ಯಿಂದ ನೆರವೇರಿಸಿದ್ದಾರೆ ಎಂದು ತಿಳಿಸಿದ ಅವರು ದೇಶದಲ್ಲಿ ಉತ್ತಮ ಮಳೆ ಬೆಳೆಯಾಗಲಿ, ದೇಶ ಸಮೃದ್ದಿಯಾಗುವಂತೆ ಕಾಪಾಡಲಿ ಎಂದು ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥನೆ ಮಾಡಿಕೊಂಡಿ ದ್ದೇನೆ ಎಂದರು.

Murder Case: ಆನೇಕಲ್‌ನಲ್ಲಿ ಪ್ರಾವಿಜನ್‌ ಸ್ಟೋರ್‌ ಮಾಲಿಕನ ಕತ್ತು ಕೊಯ್ದು ಹತ್ಯೆ

ಆನೇಕಲ್‌ನಲ್ಲಿ ಪ್ರಾವಿಜನ್‌ ಸ್ಟೋರ್‌ ಮಾಲಿಕನ ಕತ್ತು ಕೊಯ್ದು ಹತ್ಯೆ

Bengaluru Crime news: ಕೊಲೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್​ ಈ ಬಗ್ಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು 112ಗೆ ಫೋನ್​ ಬಂದಿತ್ತು. ಕೂಡಲೇ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಇದನ್ನು ನೋಡಿದ್ದಾರೆ. ಕೂಡಲೇ ಆರೋಪಿಯನ್ನು ಹಿಡಿಯಲು ಮುಂದಾಗಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟುವಾಗ ಅವರ ಮೇಲೂ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎಂದರು.

Karnataka Weather:‌ ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ 3 ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ (Karnataka Weather Report) ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27 ಡಿಗ್ರಿ ಸೆ. ಮತ್ತು 19 ಡಿಗ್ರಿ ಸೆ. ಇರುವ ಸಾಧ್ಯತೆ ಇದೆ.

ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ "ಕ್ಯಾನ್ಸರ್‌ ಚಿಕಿತ್ಸಾ ಘಟಕ"ಕ್ಕೆ ಚಾಲನೆ ನೀಡಿದ ನಟ ಶಿವರಾಜ್‌ ಕುಮಾರ್‌

ಸುಧಾರಿತ ಮತ್ತು ಸಮಗ್ರ ಗ್ರಂಥಿ ಚಿಕಿತ್ಸಾ ಸೇವೆಗಳಲ್ಲಿ ಹೊಸ ಅಧ್ಯಾಯ ಆರಂಭ

ದೇಶದಲ್ಲಿ ಹೆಚ್ಚುತ್ತಿರುವ ಕ್ಯಾನ್ಸರ್‌ ಪ್ರಕರಣಗಳ ಹಿನ್ನೆಲೆಯಲ್ಲಿ ಸುಧಾರಿತ, ಸಮಗ್ರ ಕ್ಯಾನ್ಸರ್‌ ಚಿಕಿತ್ಸಾ ಸೇವೆಗಳನ್ನು ದಕ್ಷಿಣ ಭಾರತದಲ್ಲಿ ಒದಗಿಸುವ ನಿಟ್ಟಿನಲ್ಲಿ ಸ್ಪರ್ಶ್‌ ಆಸ್ಪತ್ರೆ ಸಮೂಹವು ತನ್ನ ಹೆಣ್ಣೂರು ಸ್ಪರ್ಶ್‌ ಆಸ್ಪತ್ರೆ ಆವರಣದಲ್ಲಿ ಸ್ಪರ್ಶ್‌ ಇನ್ಸ್ಟಿಟ್ಯೂಟ್‌ ಆಫ್‌ ಕ್ಯಾನ್ಸರ್‌ ಕೇರ್‌ (ಸ್ಪರ್ಶ್‌ ಕ್ಯಾನ್ಸರ್‌ ಚಿಕಿತ್ಸಾ ಘಟಕ) ತೆರೆದಿದ್ದು, ನಟ ಶಿವರಾಜ್‌ ಕುಮಾರ್‌ ಚಾಲನೆ ನೀಡಿದರು.

Gubbi News: ವಿಶೇಷ ಪೌಷ್ಟಿಕ ಆಹಾರ ವಿತರಣೆಯಲ್ಲಿ ಲೋಪ ಬರಬಾರದು : ಶಾಸಕ ಎಸ್.ಆರ್.ಶ್ರೀನಿವಾಸ್

ವಿಶೇಷ ಪೌಷ್ಟಿಕ ಆಹಾರ ವಿತರಣೆಯಲ್ಲಿ ಲೋಪ ಬರಬಾರದು

ಗಣಿಬಾಧಿತ ಪ್ರದೇಶದಲ್ಲಿ ಮಕ್ಕಳ ಶಿಕ್ಷಣಕ್ಕೆ ಕೊರತೆ ಆಗದಂತೆ ಸರ್ಕಾರ ವಿಶೇಷ ಅನುದಾನ ನೀಡಿ ಶಾಲೆ ವಾತಾವರಣ ಸರಿ ಪಡಿಸಿದೆ. ಜೊತೆಗೆ ಬಿಸಿಯೂಟ ಜೊತೆ ಸಂಜೆಯಲ್ಲಿ ಪೌಷ್ಟಿಕ ಆಹಾರ ಕಾಳು ಉಸಲಿ ನೀಡಲು ಯೋಜನೆ ರೂಪಿಸಿರುವುದು ಮೆಚ್ಚುವಂತಹದ್ದು. ಐಟಿಬಿಟಿ ಯುಗದಲ್ಲಿ ಮಕ್ಕಳು ಉತ್ತಮ ಶಿಕ್ಷಣ ಪಡೆಯುತ್ತಿದ್ದಾರೆ.

RSS row: ಆರೆಸ್ಸೆಸ್‌ ಪಥಸಂಚಲನ: ಸರಕಾರದ ಮೇಲ್ಮನವಿ ವಿಚಾರಣೆ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಆರೆಸ್ಸೆಸ್‌: ಸರಕಾರದ ಮೇಲ್ಮನವಿ ವಿಚಾರಣೆ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

RSS row: ಸಾರ್ವಜನಿಕ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಸೇವಕ ಸಂಘದ ಚಟುವಟಿಕೆಗಳಿಗೆ ಕಡಿವಾಣ ಹಾಕಲು ರಾಜ್ಯ ಸರಕಾರ ಜಾರಿಗೆ ತಂದಿರುವ ಆದೇಶಕ್ಕೆ ಈ ಹಿಂದೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದೀಗ ಸರಕಾರ ಈ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದು, ಈ ಬಗೆಗೆ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿದೆ. ಪುನಶ್ಚೇತನ ಸಂಸ್ಥೆ ಈ ವಿಚಾರದಲ್ಲಿ ಸರ್ಕಾರಕ್ಕೆ ಪ್ರತಿವಾದಿಯಾಗಿದೆ. ಸರ್ಕಾರ ಹಾಗೂ ಪುನಶ್ಚೇತನ ಸೇವಾ ಸಂಸ್ಥೆ ಪರ ವಕೀಲರ ವಾದ ಆಲಿಸಿದ ನಂತರ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಕಾಯ್ದಿರಿಸಿದೆ. ನವೆಂಬರ್ 7ರಂದು ಈ ಕುರಿತು ಮುಂದಿನ ವಿಚಾರಣೆ ನಡೆಯಲಿದೆ.

Chikkaballapur News: ಸಿಎಂ ಬದಲಾದರೆ ದಲಿತರಿಗೆ ಅವಕಾಶ ನೀಡಿ. ಇಲ್ಲವಾದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮ ಆಗಲಿದೆ : ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕಟಸ್ವಾಮಿ

ಸಿಎಂ ಬದಲಾದರೆ ದಲಿತರಿಗೆ ಅವಕಾಶ ನೀಡಿ, ಇಲ್ಲವೇ ಕಾಂಗ್ರೆಸ್ ನಿರ್ನಾಮ ಆಗಲಿದೆ

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರೆದಲ್ಲಿ ಯಾವುದೇ ಅಭ್ಯಂತರ ಇಲ್ಲ. ಆದರೆ ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಆತಂರಿಕ ಕಚ್ಚಾಟ ಹೆಚ್ಚಾ ಗಿದ್ದು, ಡಿಕೆಶಿ ಹಾಗೂ ಸಿಎಂ ಬಣಗಳ ನಡುವೆ ಕಿತ್ತಾಟವು ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ಹಿಂದೆಯೂ ದಲಿತ ಸಿಎಂ ಎಂಬ ಹೋರಾಟ ಆರಂಭವಾಗಿತ್ತು. ಆದರೆ ಕಾಲಕ್ರಮೇಣ ಹೋರಾಟ ವನ್ನು ದಿಕ್ಕುತಪ್ಪಿಸಲಾಯಿತು.

Yajamana Movie: 25 ವರ್ಷಗಳ ನಂತರ ಡಾ. ವಿಷ್ಣುವರ್ಧನ್ ಅಭಿನಯದ ʼಯಜಮಾನʼ ರೀ ರಿಲೀಸ್‌!

ರೀರಿಲೀಸ್‌ ಆಗ್ತಿದೆ ವಿಷ್ಣು ಅಭಿನಯದ ʼಯಜಮಾನʼ-ಯಾವಾಗ ಗೊತ್ತಾ?

Dr Vishnuvardhan: ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್. ಶೇಷಾದ್ರಿ - ರಾಧಾ ಭಾರತಿ ನಿರ್ದೇಶನದ ʼಯಜಮಾನʼ ಚಿತ್ರ ಇದೇ ನವೆಂಬರ್ 7ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗುತ್ತಿದೆ. ಜನಮೆಚ್ಚಿದ ಈ ಚಿತ್ರ‌ ಆಧುನಿಕ ತಂತ್ರಜ್ಞಾನದಿಂದ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್.ಡಿ. ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿತ್ತು. ಈ ಕುರಿತ ವಿವರ ಇಲ್ಲಿದೆ.

Bangalore Flat Rent: ಬೆಂಗಳೂರಿನಲ್ಲಿ 2 ಬಿಎಚ್‌ಕೆ ಫ್ಲ್ಯಾಟ್‌ಗೆ 20 ಸಾವಿರ ಬಾಡಿಗೆ, 30 ಲಕ್ಷ ಅಡ್ವಾನ್ಸ್‌ ಕೇಳಿದ ಮಾಲೀಕ!

2 ಬಿಎಚ್‌ಕೆ ಫ್ಲ್ಯಾಟ್‌ಗೆ 20 ಸಾವಿರ ಬಾಡಿಗೆ, 30 ಲಕ್ಷ ಅಡ್ವಾನ್ಸ್‌!

Security Deposit For Bangalore Flat : ಬೆಂಗಳೂರಿನ ಫ್ರೇಜರ್‌ ಟೌನ್‌ನಲ್ಲಿ 2 ಬಿಎಚ್‌ಕೆ ಫ್ಲ್ಯಾಟ್‌ವೊಂದಕ್ಕೆ ನೀಡಿರುವ ಜಾಹೀರಾತು ವೈರಲ್‌ ಆಗಿದೆ. 2 ಬಿಎಚ್‌ಕೆ ಫ್ಲ್ಯಾಟ್‌ಗೆ 20 ಸಾವಿರ ಬಾಡಿಗೆ ಹಾಗೂ 30 ಲಕ್ಷ ಅಡ್ವಾನ್ಸ್‌ ನಿಗದಿಪಡಿಸಿರುವುದನ್ನು ರೆಡಿಟ್‌ನಲ್ಲಿ ನೆಟ್ಟಿಗರೊಬ್ಬರು ಹಂಚಿಕೊಂಡಿದ್ದಾರೆ. ಈ ಬಗ್ಗೆ ಹಲವರು ಕಿಡಿಕಾರಿದ್ದಾರೆ.

Kolhar News: ತಾಲೂಕ ಆಡಳಿತದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ತಾಲೂಕ ಆಡಳಿತದಿಂದ ಸಂಭ್ರಮದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ತಾಲ್ಲೂಕ ದಂಡಾಧಿಕಾರಿ ಸಂತೋಷ ಮ್ಯಾಗೇರಿ ಧ್ವಜವಂದನೆ ಸ್ವೀಕರಿಸಿ ಮಾತನಾಡುತ್ತಾ ಶರಣರು, ಸಂತರು, ಕವಿಗಳು, ಸಾಹಿತಿಗಳು ಕನ್ನಡ ನಾಡು, ನುಡಿ ಮತ್ತು ಭಾಷೆಯನ್ನು ಬೆಳೆಸಲು ಅಪಾರ ವಾಗಿ ಶ್ರಮಿಸಿದ್ದಾರೆ ಎಂದರು. ನಾಡು ನುಡಿಯ ವಿಷಯದಲ್ಲಿ ನಾವುಗಳು ಕೂಡ ಅಪಾರವಾದ ಸ್ವಾಭಿಮಾನ ಬೆಳೆಸಿಕೊಂಡು ಮುನ್ನಡೆಯಬೇಕು ಎಂದರು.

BY Vijayendra: ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡಿ: ಬಿ.ವೈ. ವಿಜಯೇಂದ್ರ ಆಗ್ರಹ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ದರ ನಿಗದಿ ಮಾಡಿ: ಬಿವೈವಿ

BY Vijayendra against State Congress Government: ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಇಂದು ಸಂಜೆ 5 ಗಂಟೆಯ ಒಳಗಾಗಿ ರಾಜ್ಯ ಸರ್ಕಾರ ಸ್ಥಳಕ್ಕೆ ಉಸ್ತುವಾರಿ ಸಚಿವರನ್ನಾಗಲಿ, ಸಕ್ಕರೆ ಸಚಿವರನ್ನಾಗಲಿ ಅಥವಾ ಮುಖ್ಯಮಂತ್ರಿಗಳೇ ಖುದ್ದಾಗಿ ಸ್ಥಳಕ್ಕೆ ಆಗಮಿಸಿ ಕಬ್ಬು ಬೆಳೆಗಾರರ ನ್ಯಾಯಯುತ ದರ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು. ಇಲ್ಲದಿದ್ದರೆ ನಾಳೆಯೂ ರೈತರ ಜತೆಯಾಗಿ ಹೋರಾಟದಲ್ಲಿ ಧುಮುಕುತ್ತೇನೆ. ನಾಳೆ ನನ್ನ ಜನ್ಮದಿನವಿದ್ದರೂ ಕಣ್ಣೀರು ಸುರಿಸುತ್ತಿರುವ ರೈತರಿಗೆ ನಾಳೆ ಮೀಸಲಿಡುತ್ತೇನೆ. ಒಂದು ವೇಳೆ ನಾಳೆಯು ಬಗೆಹರಿಯದಿದ್ದರೆ ರಾಜ್ಯಾದ್ಯಂತ ರೈತರ ಕಿಡಿ ಹರಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

BRAT Movie: ಯಶಸ್ಸಿನ ಹಾದಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರ

ಯಶಸ್ಸಿನ ಹಾದಿಯಲ್ಲಿ ಡಾರ್ಲಿಂಗ್ ಕೃಷ್ಣ ಅಭಿನಯದ ʼಬ್ರ್ಯಾಟ್ʼ ಚಿತ್ರ

Darling Krishna Starrer BRAT Movie: ಮಂಜುನಾಥ್ ಕಂದಕೂರ್ ನಿರ್ಮಾಣದ, ಶಶಾಂಕ್ ನಿರ್ದೇಶನದ ಹಾಗೂ ಡಾರ್ಲಿಂಗ್ ಕೃಷ್ಣ ನಾಯಕನಾಗಿ ನಟಿಸಿರುವ ʼಬ್ರ್ಯಾಟ್ʼ ಚಿತ್ರ ಕೂಡ ಸೇರಿದೆ. ಕಳೆದ ವಾರ ತೆರೆಕಂಡ ಈ ಚಿತ್ರ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಈ ಕುರಿತು ಚಿತ್ರದ ನಿರ್ದೇಶಕ ಶಶಾಂಕ್‌ ಮಾತನಾಡಿ, ಕ್ರಿಕೆಟ್ ಬೆಟ್ಟಿಂಗ್ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರ ಯುವಜನತೆಯನ್ನು ಹೆಚ್ಚು ಆಕರ್ಷಿಸುತ್ತದೆ ಅಂದುಕೊಂಡಿದ್ದೆ. ಆದರೆ, ಚಿತ್ರ ಬಿಡುಗಡೆಯಾದ ಮೇಲೆ ಯುವಕರ ಜತೆಗೆ ಫ್ಯಾಮಿಲಿ ಆಡಿಯನ್ಸ್ ಕೂಡ ಹೆಚ್ಚು ಬರುತ್ತಿದ್ದಾರೆ. ಕ್ಲಾಸ್ ಅಥವಾ ಮಾಸ್ ಆಡಿಯನ್ಸ್ ಎಂಬ ಭೇದವಿಲ್ಲದೆ ಎಲ್ಲರೂ ಈ ಚಿತ್ರವನ್ನು ಇಷ್ಟಪಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

GCC Base ಆರಂಭಕ್ಕೆ ಕೈಜೋಡಿಸಿದ ಸತ್ತ್ವ ಗ್ರೂಪ್ ಮತ್ತು ಇನ್ನೋವಲಸ್

GCC Base ಆರಂಭಕ್ಕೆ ಕೈಜೋಡಿಸಿದ ಸತ್ತ್ವ ಗ್ರೂಪ್ ಮತ್ತು ಇನ್ನೋವಲಸ್

ಭಾರತ 1,600ಕ್ಕೂ ಹೆಚ್ಚು ಜಾಗತಿಕ ಸಾಮರ್ಥ್ಯ ಕೇಂದ್ರಗಳನ್ನು ಹೊಂದಿದ್ದು, ಎರಡು ಮಿಲಿಯನ್‌ ಗಿಂತಲೂ ಹೆಚ್ಚು ವೃತ್ತಿಪರರನ್ನು ನೇಮಿಸಿಕೊಂಡಿದ್ದು, ವಾರ್ಷಿಕ 46 ಬಿಲಿಯನ್‌ ಯುಎಸ್‌ ಡಾಲರ್‌ಗಿಂತ ಹೆಚ್ಚಿನ ಆರ್ಥಿಕ ಮೌಲ್ಯವನ್ನು ಉತ್ಪಾದಿಸುತ್ತಿದೆ. ಈ ಸಾಮರ್ಥ್ಯ ಕೇಂದ್ರಗಳು ವಹಿವಾಟು ಪ್ರಕ್ರಿಯೆಗಳಿಗೆ ಮಾತ್ರ ಸೀಮಿತವಾಗದೆ, ಉತ್ಪನ್ನ ವಿನ್ಯಾಸ, ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ ಮತ್ತು ಸುಧಾರಿತ ವಿಶ್ಲೇಷಣೆಯಲ್ಲಿ ಜಾಗತಿಕ ಆದೇಶಗಳನ್ನು ಕಾರ್ಯರೂಪಕ್ಕೆ ತರುತ್ತಿವೆ.

Bengaluru Clean-up drive: ಬೆಂಗಳೂರು: ಸ್ವಚ್ಛತಾ ಅಭಿಯಾನದಲ್ಲಿ ಗೆದ್ದವರಿಗೆ ಸಿಗಲಿದೆ 1 ಲಕ್ಷ ರೂ. ಬಹುಮಾನ

ಬೆಂಗಳೂರು: ಸ್ವಚ್ಛತಾ ಅಭಿಯಾನ ವಿಜೇತರಿಗೆ ಸಿಗಲಿದೆ 1 ಲಕ್ಷ ರೂ. ಬಹುಮಾನ

Clean Bengaluru: ಉತ್ತಮ ಸ್ವಚ್ಛತೆಯ ಚಿತ್ರಣವನ್ನು ನೀಡುವ ಸಂಸ್ಥೆಗಳಿಗೆ ನಗದು ಬಹುಮಾನಗಳನ್ನು ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಮೊದಲ ಬಹುಮಾನ ವಿಜೇತರು ರೂ. 1,00,000, ಎರಡನೇ ಮತ್ತು ಮೂರನೇ ಬಹುಮಾನಗಳ ವಿಜೇತರು ಕ್ರಮವಾಗಿ ರೂ. 50,000 ಮತ್ತು ರೂ. 25,000 ನಗದು ಬಹುಮಾನಗಳನ್ನು ಪಡೆಯಲಿದ್ದಾರೆ. ಕ್ಷೇತ್ರ ಮಟ್ಟದಲ್ಲಿಯೂ ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತದೆ. ನಾಗರಿಕರು ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಆಶಿಸಿದ್ದಾರೆ. ಇನ್ನೊಂದೆಡೆ, ಜಿಬಿಎಯವರು ಬೀದಿಯಲ್ಲಿ ಕಸ ಸುರಿದು ಬಂದವರ ಮನೆ ಮುಂದೆಯೇ ಕಸ ಸುರಿದು ದಂಡ ವಸೂಲಿ ಮಾಡಿದ್ದಾರೆ.

HY Meti Death: ಶಾಸಕ ಎಚ್‌.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

ಶಾಸಕ ಎಚ್‌.ವೈ. ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿ ಗಣ್ಯರ ಸಂತಾಪ

Condolences on H.Y. Meti's Death: ಬಹುದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಶಾಸಕ ಎಚ್‌.ವೈ. ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕರು. ಅವರ ನಿಧನದಿಂದ ಸಮಾಜ ಬಡವಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Road Accident: ಕೆಟ್ಟು ನಿಂತ ಕಾರಿಗೆ ಬಂದು ಬಡಿದ ಕ್ಯಾಂಟರ್‌, ಡ್ಯಾನ್ಸರ್‌ ಸುಧೀಂದ್ರ ಸಾವು

ಕೆಟ್ಟು ನಿಂತ ಕಾರಿಗೆ ಬಂದು ಬಡಿದ ಕ್ಯಾಂಟರ್‌, ಡ್ಯಾನ್ಸರ್‌ ಸುಧೀಂದ್ರ ಸಾವು

Dancer Sudhindra: ರಸ್ತೆಯ ಮಧ್ಯೆ ಡ್ಯಾನ್ಸರ್ ಸುಧೀಂದ್ರ ಅವರ ಕಾರು ಕೆಟ್ಟು ನಿಂತಿತ್ತು. ಕಾರು ಪರಿಶೀಲನೆಯ ವೇಳೆ ವೇಗವಾಗಿ ಬಂದಂತಹ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಕ್ಯಾಂಟರ್ ಗುದ್ದಿದ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಡ್ಯಾನ್ಸರ್‌ ಸುಧೀಂದ್ರ ಸಾವನ್ನಪ್ಪಿದ್ದಾರೆ. ಅಪಘಾತದ ಕುರಿತು ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

HY Meti death: ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ಎಚ್.ವೈ ಮೇಟಿ ಇನ್ನಿಲ್ಲ

ಮಾಜಿ ಸಚಿವ, ಕಾಂಗ್ರೆಸ್‌ ಶಾಸಕ ಎಚ್.ವೈ ಮೇಟಿ ಇನ್ನಿಲ್ಲ

HY Meti death: ಎಚ್‌.ವೈ ಮೇಟಿ (ಹುಲ್ಲಪ್ಪ ಯಮನಪ್ಪ ಮೇಟಿ) 2023ರ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ವೀರಣ್ಣ ಚರಂತಿಮಠರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2018ರ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಈ ಹಿಂದೆ 2013ರಿಂದ 2016 ರವರೆಗಿನ ಸಿದ್ದರಾಮಯ್ಯ ಸರ್ಕಾರದಲ್ಲಿ ಎಚ್‌.ವೈ ಮೇಟಿ ಅಬಕಾರಿ ಖಾತೆ ಮಂತ್ರಿಯಾಗಿದ್ದರು.

Gold price today on 4th November 2025: ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate in bengaluru: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 65 ರೂ. ಇಳಿಕೆ ಕಂಡು ಬಂದಿದ್ದು, 11,225 ರೂ. ಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 71 ರೂ. ಏರಿಕೆಯಾಗಿ, 12,246 ರೂ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 89,800 ರೂ. ಬಾಳಿದರೆ, 10 ಗ್ರಾಂಗೆ ನೀವು 1,12,250 ಹಾಗೂ 100 ಗ್ರಾಂಗೆ 11,22,500, ನೀಡಬೇಕಾಗುತ್ತದೆ. 24 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ 97,968 ರೂ. ಆದರೆ, 10 ಗ್ರಾಂಗೆ ನೀವು 1,22,460 ರೂ. ಹಾಗೂ 100 ಗ್ರಾಂಗೆ 12,24,600 ರೂ. ಪಾವತಿಸಬೇಕಾಗುತ್ತದೆ.

Pavithra Gowda: ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ; ಕಾರಣವೇನು?

ಮತ್ತೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಪವಿತ್ರಾ ಗೌಡ; ಕಾರಣವೇನು?

Supreme Court: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪವಿತ್ರಾ ಗೌಡ ಆಗಿದ್ದಾರೆ. ಎ1 ಪವಿತ್ರಾ ಗೌಡ, ಎ2 ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ಹಿಂದೆ ಹೈಕೋರ್ಟ್ ನೀಡಿದ್ದ ಜಾಮೀನು ರದ್ದು ಮಾಡಿ ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು. ಮತ್ತೆ ಎಲ್ಲಾ ಆರೋಪಿಗಳನ್ನು ಜೈಲಿಗೆ ಹಾಕಲಾಗಿತ್ತು. ಆದರೆ ಇದೀಗ ಎ1 ಆರೋಪಿ ಪವಿತ್ರಾ ಗೌಡ ಸುಪ್ರೀಂ ಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ್ದಾರೆ. ಗುರುವಾರ (ನವೆಂಬರ್ 6, 2025) ಈ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದ್ದು, ಇದರಿಂದ ಪ್ರಕರಣಕ್ಕೆ ಹೊಸ ತಿರುವು ಬರಬಹುದು.

KSCA elections: ಕೆಎಸ್​ಸಿಎ ಚುನಾವಣೆ; ನ.​ 12ರಿಂದ 15ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ

ನವೆಂಬರ್ 30 ರಂದು ಕೆಎಸ್​ಸಿಎ ಚುನಾವಣೆ; ಕಣದಲ್ಲಿ ವೆಂಕಟೇಶ್​ ಪ್ರಸಾದ್

ವಿನಯ್‌ ಮೃತ್ಯುಂಜಯ 2019ರಿಂದ 2022ರ ವರೆಗೆ ಖಜಾಂಚಿಯಾಗಿ ಕಾರ್ಯನಿರ್ವಹಿಸಿದ್ದರು. ಅವರು ಬಿಸಿಸಿಐ ಆರ್ಥಿಕ ಸಮಿತಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು. ಕ್ರೀಡಾಂಗಣದ ಸಬ್‌ ಏರ್‌ ಸಿಸ್ಟಮ್‌ ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳ ಹಿಂದೆ ವಿನಯ್‌ ಕೊಡುಗೆಯಿದೆ. ಹೀಗಾಗಿ ವಿನಯ್‌ ರಾಜ್ಯ ಕ್ರಿಕೆಟ್‌ ಸಂಸ್ಥೆಯನ್ನು ಮತ್ತೊಮ್ಮೆ ಉನ್ನತ ಮಟ್ಟಕ್ಕೇರಿಸುವ ವಿಶ್ವಾಸ ಹೊಂದಿದ್ದಾರೆ. ಸದ್ಯ ಕಾಲ್ತುಳಿತದಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಹಲವು ಮಹತ್ವದ ಟೂರ್ನಿ, ಸರಣಿ ಸ್ಥಳಾಂತರಗೊಂಡಿವೆ.

Loading...