ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಉತ್ತರಾಧಿಕಾರಿ ನೇಮಿಸುವ ಹಕ್ಕು ಕೇವಲ ದಲೈಲಾಮಾರಿಗೆ ಮಾತ್ರ ಇದೆ: ಕೇಂದ್ರ ಸಚಿವ ಕಿರಣ್‌ ರಿಜಿಜು

ಉತ್ತರಾಧಿಕಾರಿ ನೇಮಿಸುವ ಹಕ್ಕು ದಲೈಲಾಮಾರಿಗೆ ಮಾತ್ರ ಇದೆ: ಕಿರಣ್‌ ರಿಜಿಜು

Dalai Lamaʼs 90th birth anniversary: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ ಟಿಬೆಟಿಯನ್ ಕಾಲನಿಯಲ್ಲಿ 14ನೇ ದಲೈಲಾಮಾ ಅವರ 90ನೇ ಜನ್ಮದಿನಾಚರಣೆ ನಡೆದಿದ್ದು, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಶಿವರಾಮ ಹೆಬ್ಬಾರ್ ಸೇರಿ ಹಲವರು ಗಣ್ಯರು ಭೇಟಿ ನೀಡಿ ದಲೈಲಾಮಾ ಅವರ ಆಶೀರ್ವಾದ ಪಡೆದಿದ್ದಾರೆ.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ:  ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ, ನಿರಂತರ ಚಳುವಳಿ ಮತ್ತು ಸಿದ್ಧಾಂತ: ಸಿಎಂ

ಬೆಂಗಳೂರಿನ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು. MGNAREGA ಕಾರ್ಯಕ್ರಮದಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು. ಈಗ ರಾಜ್ಯಗಳ ಮೇಲೆ ಭಾರಿ ಹೊರೆಯನ್ನೇ ಹೊರೆಸುತ್ತಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

ಇತಿಹಾಸದಿಂದ ಗಾಂಧೀಜಿ ಹೆಸರು ಅಳಿಸಲು ಯಾರಿಗೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತಿಹಾಸದಿಂದ ಗಾಂಧೀಜಿ ಹೆಸರು ಅಳಿಸಲು ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

ನರೇಗಾ ಯೋಜನೆಯ ಹೆಸರು ಬದಲಿಸಿರುವ ʼವಿಬಿ ಜಿ ರಾಮ್ ಜಿʼ ಯೋಜನೆಯನ್ನು ಬಿಜೆಪಿ ಆಡಳಿತ ರಾಜ್ಯಗಳಲ್ಲೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ಈ ಹಿಂದೆ ಮನರೇಗಾ ಯೋಜನೆಯನ್ನು ನನ್ನ ತಾಲೂಕಿನಲ್ಲಿ ಬಹಳ ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಲಿವ್‌ ಇನ್‌ ಸಂಗಾತಿಗೆ ವಂಚನೆ, ಆಕೆಯ ತಂಗಿ ಮೇಲೂ ಅತ್ಯಾಚಾರ; ಆರೋಪಿ ಅರೆಸ್ಟ್

ಲಿವ್‌ ಇನ್‌ ಸಂಗಾತಿಗೆ ವಂಚನೆ, ಆಕೆಯ ತಂಗಿ ಮೇಲೂ ಅತ್ಯಾಚಾರ ಎಸಗಿದ!

Bengaluru News: ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲವ್ ಸೆಕ್ಸ್​ ದೋಖಾ ಪ್ರಕರಣ ನಡೆದಿದೆ. ಸಂತ್ರಸ್ತ ಯುವತಿ ಬಳಿ ಲಕ್ಷ ಲಕ್ಷ ಹಣ ಪಡೆದಿದ್ದ ಆರೋಪಿ, ಯುವತಿ ಮನೆಯಲ್ಲಿ ಚಿನ್ನಾಭರಣ ಸಹ ಕದ್ದಿದ್ದ. ಈ ಬಗ್ಗೆ ದೂರು ನೀಡಿದರೆ ಸಾಯಿಸುತ್ತೇನೆ ಎಂದು ಬೆದರಿಸಿದ್ದ. ಅಲ್ಲದೇ ಸಂತ್ರಸ್ತೆಯ ಅಪ್ರಾಪ್ತ ವಯಸ್ಸಿನ ಸಹೋದರಿಯ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

Bengaluru Power Cut: ಡಿ.29ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಡಿ.29ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಮತ್ತಿಕೆರೆ ಸಬ್‌ಸ್ಟೇಷನ್ ಹಾಗೂ ಬ್ಯಾಟರಾಯನಪುರ ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಯಾವೆಲ್ಲಾ ಸ್ಥಳಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂಬ ವಿವರ ಇಲ್ಲಿದೆ.

ಕಾರವಾರದಲ್ಲಿ ಸಬ್‌ಮರೀನ್‌ನಲ್ಲಿ ಪ್ರಯಾಣಿಸಿ ಇತಿಹಾಸ ಬರೆದ ದ್ರೌಪದಿ ಮುರ್ಮು; ಜಲಾಂತರ್ಗಾಮಿ ಯಾನ ಮಾಡಿದ ಮೊದಲ ಮಹಿಳಾ ರಾಷ್ಟ್ರಪತಿ

ಕಾರವಾರದಲ್ಲಿ ಸಬ್‌ಮರೀನ್‌ನಲ್ಲಿ ಪ್ರಯಾಣಿಸಿದ ದ್ರೌಪದಿ ಮುರ್ಮು

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಭಾನುವಾರ (ಡಿಸೆಂಬರ್‌ 28) ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದರು. ನಂತರ ಅವರು ಕಲ್ವರಿ ಸಬ್‌ಮರೀನ್‌ (ಜಲಾಂತರ್ಗಾಮಿ) ಐ.ಎನ್.ಎಸ್. ವಾಗ್ಶೀರ್‌ನಲ್ಲಿ ಪ್ರಯಾಣಿಸಿದರು. ರಾಷ್ಟ್ರಪತಿ ಸಶಸ್ತ್ರ ಪಡೆಗಳ ಸರ್ವೋಚ್ಚ ದಂಡನಾಯಕರೂ ಹೌದು. ವಿಶೇಷ ಎಂದರೆ ಜಲಾಂತರ್ಗಾಮಿಯದಲ್ಲಿ ಪ್ರಯಾಣಿಸಿದ 2ನೇ ರಾಷ್ಟ್ರಪತಿ ದ್ರೌಪದಿ ಮುರ್ಮು. ಈ ಮೊದಲು ಎ.ಪಿ.ಜೆ. ಅಬ್ದುಲ್ ಕಲಾಂ ಜಲಾಂತರ್ಗಾಮಿ ಸಬ್‌ಮರೀಬ್‌ನಲ್ಲಿ ತೆರಳಿದ್ದರು.

ಕಾರವಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ; ಐಎನ್ಎಸ್ ವಾಗ್ಶೀರ್ ಸಬ್ ಮೆರಿನ್‌ನಲ್ಲಿ ಸಂಚಾರ

ಕಾರವಾರಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ; ಐಎನ್ಎಸ್ ವಾಗ್ಶೀರ್‌ನಲ್ಲಿ ಸಂಚಾರ

ಕಾರವಾರದ ಕದಂಬ ನೌಕಾನೆಲೆಗೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಎನ್ಎಸ್ ವಾಗ್ಶೀರ್ ಸಬ್ ಮೇರಿನ್‌ನಲ್ಲಿ ನೌಕಾಪಡೆ ಮುಖ್ಯಸ್ಥರು ಹಾಗೂ ಅಧಿಕಾರಿಗಳೊಂದಿಗೆ ಸಂಚರಿಸಿದರು. ದ್ರೌಪದಿ ಮುರ್ಮು ಅವರು ಜಲಾಂತರ್ಗಾಮಿಯಲ್ಲಿ ಪ್ರಯಾಣಿಸಿದ ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದಾರೆ.

ಅಪೋಲೋ ಫಾರ್ಮಸಿಯಿಂದ ಕರ್ನಾಟಕದಲ್ಲಿ 1,000ನೇ ಮಳಿಗೆ ಪ್ರಾರಂಭ, ಬೆಂಗಳೂರಿನಲ್ಲಿ ಈ ಮೈಲಿಗಲ್ಲಿನ ಮಳಿಗೆಗೆ ಚಾಲನೆ

ಅಪೋಲೋ ಫಾರ್ಮಸಿಯಿಂದ ಒಂದು ಸಾವಿರನೇ ಮಳಿಗೆ ಪ್ರಾರಂಭ

ಕರ್ನಾಟಕದ ಶೇ.10ರಷ್ಟು ಅಪೋಲೋ ಫಾರ್ಮಸಿ ಮಳಿಗೆಗಳು ದಿನಪೂರ್ತಿ ಕಾರ್ಯ ನಿರ್ವಹಿಸುವ ಮೂಲಕ ಹೆಚ್ಚಿನ ಲಭ್ಯತೆ ನೀಡುತ್ತಿವೆ. ಬೆಂಗಳೂರಿನಲ್ಲಿ ಗ್ರಾಹಕರು ಕೇವಲ 19 ನಿಮಿಷಗಳಲ್ಲಿ ಔಷಧ ಪಡೆಯುತ್ತಾರೆ ಅಥವಾ ಅಪೋಲೋ 24/7 ಆಪ್ ಮೂಲಕ ಅದೇ ದಿನದ ಪೂರೈಕೆಯನ್ನು ಆಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು, ಇದು ವೇಗಕ್ಕೆ ಮತ್ತು ವಿಶ್ವಾಸಾರ್ಹತೆಗೆ ಈ ಜಾಲದ ಆದ್ಯತೆ ತೋರುತ್ತದೆ.

Chikkanayakanahalli News: ​ಮಹಿಳೆಗೆ ಮಹಿಳೆಯೇ ಸ್ಫೂರ್ತಿ: ತಹಸೀಲ್ದಾರ್ ಮಮತಾ ಎಂ.

​ಮಹಿಳೆಗೆ ಮಹಿಳೆಯೇ ಸ್ಫೂರ್ತಿ: ತಹಸೀಲ್ದಾರ್ ಮಮತಾ ಎಂ.

ಮಹಿಳೆಯರು ತಮಗೆ ಸಿಗುವ ಅವಕಾಶಗಳನ್ನು ಬಳಸಿಕೊಂಡು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ತಮ್ಮ ಶಕ್ತಿಯನ್ನು ಬಿಂಬಿಸಿಕೊಳ್ಳಬೇಕು. ಹೆಣ್ಣು ಮತ್ತು ಗಂಡು ಎಂಬ ಭೇದ ಭಾವ ಮಾಡದೆ, ಮನೆಯ ಗಂಡು ಮಕ್ಕಳಿಗೆ ನೀಡುವ ಗೌರವ ಹಾಗೂ ಸ್ಥಾನಮಾನಗಳನ್ನು ಹೆಣ್ಣು ಮಕ್ಕಳಿಗೂ ನೀಡುವಂತಹ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು

Dr. Sonali Sarnobat: ಹೆರಿಗೆ ಆಸ್ಪತ್ರೆಗಳನ್ನು ಬಂದ್ ಮಾಡುವ ನಿರ್ಧಾರ ಕೈಬಿಡಿ: ರಾಜ್ಯ ಸರ್ಕಾರಕ್ಕೆ ಡಾ.ಸೊನಾಲಿ ಸರ್ನೋಬತ್ ಆಗ್ರಹ

ಹೆರಿಗೆ ಆಸ್ಪತ್ರೆಗಳನ್ನು ಬಂದ್ ಮಾಡುವ ನಿರ್ಧಾರ ಕೈಬಿಡಿ

ರಾಜ್ಯದ 230 ಹೆರಿಗೆ ಆಸ್ಪತ್ರೆಗಳನ್ನು ಮುಚ್ಚಿದರೆ ಸರ್ಕಾರಿ ಆಸ್ಪತ್ರೆಗಳನ್ನು ನಂಬಿಕೊಂಡಿ ರುವ ಬಡವರ ಮನೆಯ ಹೆಣ್ಣುಮಕ್ಕಳು ಹೆರಿಗೆಗಾಗಿ ಎಲ್ಲಿಗೆ ಹೋಗಬೇಕು? ಬಡಜನರಿಗೆ ಆರೋಗ್ಯ ಮೂಲಸೌಕರ್ಯ ಒದಗಿಸಲಾಗದಿದ್ದರೆ ಇಂತಹ ನಿಷ್ಪ್ರಯೋಜಕ ಸರ್ಕಾರ ಇರುವುದಾದರೂ ಯಾಕೆ? ಎಂದು ಪ್ರಶ್ನಿಸಿದ್ದಾರೆ.

‌ಮಾಗಿ ಉತ್ಸವಕ್ಕೆ ಕ್ರಿಸ್ʼಮಸ್‌ ಸಂಭ್ರಮ ಸಾಥ್

ಮಾಗಿ ಉತ್ಸವಕ್ಕೆ ಕ್ರಿಸ್ʼಮಸ್‌ ಸಂಭ್ರಮ ಸಾಥ್

ಒಂದೆಡೆ ಅರಮನೆ ಅಂಗಳದಲ್ಲಿ ಮಾಗಿ ಉತ್ಸವ, ಮತ್ತೊಂದೆಡೆ ಕ್ರಿಸ್ ಮಸ್ ರಜೆ, ಮಗ ದೊಂದು ಕಡೆ ಕೈಬೀಸಿ ಕರೆಯುವ ವಸ್ತು ಪ್ರದರ್ಶನ, ಚಾಮುಂಡಿ ಬೆಟ್ಟ, ಮೃಗಾಲಯ ಸೇರಿ ದಂತೆ ಮೈಲಾರಿ ದೋಸೆ, ಹನುಮಂತು ಪಲಾವ್ ನಂತಹ ಬಾಯೂರಿಸುವ ತಿಂಡಿ ತಿನಿಸು ಮೈಸೂರಿನಲ್ಲಿ ಪ್ರವಾಸಿಗರನ್ನು ಹಿಡಿದಿಟ್ಟುಕೊಂಡಿದೆ.

ಮಾಗಡಿಯಲ್ಲಿ ಶ್ರೀನಿವಾಸ ಕಲ್ಯಾಣ; ರಾಜ್ಯಕ್ಕೆ ಒಳ್ಳೆಯದಾಗಲೆಂದು ಪ್ರಾರ್ಥಿಸಿದೆ ಎಂದ ಡಿ.ಕೆ. ಶಿವಕುಮಾರ್

ಮಾಗಡಿ ಶ್ರೀನಿವಾಸ ಕಲ್ಯಾಣದಲ್ಲಿ ಡಿ.ಕೆ. ಶಿವಕುಮಾರ್ ದಂಪತಿ ಭಾಗಿ

ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕ ಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ ಎಂದು ಹೇಳಿದ್ದಾರೆ.

Shidlaghatta News: ಮಕ್ಕಳಿಗೆ ಸಂಸ್ಕಾರದ ಶಿಕ್ಷಣವೂ ಬಹಳ ಮುಖ್ಯ : ಖಾಸಗೀ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಮಚಂದ್ರಾರೆಡ್ಡಿ

ಮಕ್ಕಳಿಗೆ ಸಂಸ್ಕಾರದ ಶಿಕ್ಷಣವೂ ಬಹಳ ಮುಖ್ಯ

ಮನೆಯೇ ಮೊದಲ ಪಾಠಶಾಲೆ ಮತ್ತು ಪಾಲಕರು ಮೊದಲ ಶಿಕ್ಷಕರು. ಸಂಸ್ಕಾರಯುತ ಶಿಕ್ಷಣವು ಮಗುವಿನ ನಡವಳಿಕೆ, ಮೌಲ್ಯಗಳು ಮತ್ತು ಸಾಮಾಜಿಕ ಕೌಶಲಗಳನ್ನು ರೂಪಿಸುತ್ತದೆ. ಶಾಲೆ ಯಲ್ಲಿ ಪಠ್ಯ ಶಿಕ್ಷಣವು ಜ್ಞಾನವನ್ನು ನೀಡಿದರೆ, ಮನೆಯಲ್ಲಿ ಸಂಸ್ಕಾರದ ಶಿಕ್ಷಣವು ಮಗುವಿನ ವ್ಯಕ್ತಿತ್ವವನ್ನು ರೂಪಿಸುತ್ತದೆ.

Tiger attack in Bandipur: ಬಂಡೀಪುರದಲ್ಲಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ; ಫಾರೆಸ್ಟ್‌ ವಾಚರ್‌ ಸಾವು

ಬಂಡೀಪುರದಲ್ಲಿ ಹುಲಿ ದಾಳಿಯಿಂದ ಫಾರೆಸ್ಟ್‌ ವಾಚರ್‌ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮರಳಹಳ್ಳ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಸಿಸಿಎಫ್ ಪ್ರಭಾಕರನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಳಹಳ್ಳ ಕ್ಯಾಂಪ್ ಬಳಿ ಗಸ್ತು ತಿರುಗುತ್ತಿದ್ದಾಗ ಹುಲಿ ದಾಳಿ ಮಾಡಿ ಕೊಂದಿದೆ.

Bagepally News: ಗ್ರಾಮೀಣ ಭಾಗದ ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಗುರುತಿಸಿಕೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ: ಬಿಇಓ ಎನ್ ವೆಂಕಟೇಶಪ್ಪ

ಪ್ರತಿಭೆ ಗುರುತಿಸಿಕೊಳ್ಳಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ

ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಬಣ್ಣ ಬಣ್ಣದ ವೇಷಭೂಷಣಗಳನ್ನು ಧರಿಸಿದ್ದರು. ಕೋಲಾಟ, ಜಾನಪದ, ರಂಗಗೀತೆ, ಗೀಗಿಪದ, ಭಾವಗೀತೆ, ಛದ್ಮವೇಷ, ಕಥೆ ಹೇಳುವುದು, ಜಾನಪದ ನೃತ್ಯ, ಮಿಮಿಕ್ರಿ, ರಂಗೋಲಿ, ರಸಪ್ರಶ್ನೆ, ರಂಗಪ್ರದರ್ಶನ, ಪದ್ಯ ಹೇಳುವುದು, ಖವ್ವಾಲಿ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳನ್ನು ತಮ್ಮನ್ನು ತೊಡಗಿಸಿ ಕೊಂಡರು.

MLA SN Subbareddy: ಸಾಧಿಸಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧಿಸಬಹುದು: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಸಾಧಿಸಬೇಕು ಎನ್ನುವ ಛಲ ಇದ್ದರೆ ಯಾವುದೇ ಕ್ಷೇತ್ರದಲ್ಲಿ ಸಾಧಿಸಬಹುದು

ಪರೀಕ್ಷೆಯಲ್ಲಿ ಅಂಕಗಳಿಗೆ ಮಾತ್ರ ಸೀಮಿತಗೊಳಿಸದೆ ಮಕ್ಕಳ ಚಲನವಲನಗಳ ಬಗ್ಗೆ ಕಾಳಜಿ ವಹಿಸಬೇಕಾದ ಅಗತ್ಯವಿದೆ. ಕೇವಲ ಅಂಕ ಪಡೆದರೆ ಸಾಲದು, ಕೆಟ್ಟ ಸಹವಾಸ ಗಳಿಂದ ದೂರ ಮಾಡುವ ಮೂಲಕ ಮಕ್ಕಳನ್ನ ಸರಿದಾರಿಗೆ ತಂದು ಅಡ್ಡ ದಾರಿ ಹಿಡಿಯುವುದನ್ನು ತಪ್ಪಿಸು ವಂತಹ ಕೆಲಸ ಮಾಡಬೇಕಾಗಿರುವುದು ಪೋಷಕರ ಜವಾಬ್ದಾರಿ ಎಂದು ಪೋಷಕರಿಗೆ ಕಿವಿಮಾತು ಹೇಳಿದರು

Post Man Cheat: ಪೋಸ್ಟ್ ಮ್ಯಾನ್ ವಂಚನೆಯಿಂದ ಹಣ ಕಳೆದುಕೊಂಡ ಸಾವಿರಾರು ಖಾತೆದಾರರು

ಪೋಸ್ಟ್ ಮ್ಯಾನ್ ವಂಚನೆ: ಹಣ ಕಳೆದುಕೊಂಡ ಸಾವಿರಾರು ಖಾತೆದಾರರು

ತಾಲ್ಲೂಕಿನ ಇಡಗೂರು ಗ್ರಾಮದ ರಮ್ಯಾ ಎಂಬಾಕೆ ಕೆಲಸ ಆರಂಭಿಸಿದ್ದು, ಇತ್ತೀಚಿನ ಕೆಲವು ತಿಂಗಳುಗಳಿಂದ ಗ್ರಾಹಕರ ಠೇವಣಿ, ಮನಿ ಆರ್ಡರ್, ಮಂತ್ರಿ ಪಿಂಚಣಿ, ಮಾಸಾಶನ, ಸ್ಥಿರ ಠೇವಣಿಯ ಸುಮಾರು ಎರಡು ಕೋಟಿಯಷ್ಟು ಹಣವನ್ನು ಅಕ್ರಮ ಹಾಗೂ ವಂಚನೆ ಮಾಡಿದ್ದಾರೆ

AI Technology: ಎಐ ತಂತ್ರಜ್ಞಾನ ಮಾನವಜನ್ಯ ತಂತ್ರಜ್ಞಾನ : ಉದ್ಯೋಗ ಕಳೆಯುತ್ತದೆ ಎಂಬುದು ಅಪಕಲ್ಪನೆ : ಎಸ್‌ಎಸ್ ಐಯ್ಯಂಗಾರ್

ಎಐ ತಂತ್ರಜ್ಞಾನ ಮಾನವಜನ್ಯ ತಂತ್ರಜ್ಞಾನ

ಎಐ ತಂತ್ರಜ್ಞಾನದ ಕ್ರಾಂತಿಯು ಜಗತ್ತನ್ನು ಆಳುತ್ತಿರುವ ಈ ಹೊತ್ತಿನಲ್ಲಿ ವಿಶ್ವದ ಅತಿಹೆಚ್ಚು ಯುವ ಶಕ್ತಿಯನ್ನು ಹೊಂದಿರುವ ಭಾರತವು ಕೂಡ ಇದರ ಜತೆಗೆ ಮುನ್ನಡೆಯುವುದು ಅನಿವಾರ್ಯವಾಗಿದೆ. ಕೈಗಾರಿಕೆ, ಕೃಷಿ ಇರಲಿ, ಶಿಕ್ಷಣವೇ ಸೇರಿದಂತೆ ಯಾವುದೇ ಕ್ಷೇತ್ರವಿರಲಿ ಅಲ್ಲೆಲ್ಲಾ ಎಐ ಹಾಜರಾಗಿದೆ.ಎಐ ಕಲಿಯದಿದ್ದರೆ ಖಂಡಿತವಾಗಿ ಇದರ ಗುಲಾಮರಾಗ ಬೇಕಾಗುತ್ತದೆ

MLA Subbareddy: 5 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಶಾಸಕ ಸುಬ್ಬಾರೆಡ್ಡಿ ಚಾಲನೆ

5 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಶಾಸಕ ಸುಬ್ಬಾರೆಡ್ಡಿ ಚಾಲನೆ

ನಲ್ಲಗೊಂಡಯ್ಯಗಾರಿ ಹಳ್ಳಿ ಹಾಗೂ ಪುಲಸಾನಿವೊಡ್ಡು ಗ್ರಾಮದ ಜನತೆಗೆ ಈ ಮಾರ್ಗದಲ್ಲಿ ಸಂಚರಿಸಲು ತುಂಬಾ ಸಮಸ್ಯೆಯಾಗಿತ್ತು, ಅದರಲ್ಲೂ ಮಳೆಗಾಲದಲ್ಲಿ ಈ ಮಾರ್ಗದಲ್ಲಿ ಓಡಾಡುವುದೇ ಕಷ್ಟಕರವಾಗಿತ್ತು. ಈ ಭಾಗದಲ್ಲಿ ಒಂದು ಕಾಲುವೆ ಹರಿಯುತ್ತಿದ್ದು ಅದರ ಮೇಲೆ ಸೇತುವೆ ನಿರ್ಮಾಣ ಮಾಡಿಕೊಡಲು ಗ್ರಾಮಸ್ಥರು ಮನವಿ ಮಾಡಿದ್ದರು.

Chikkaballapur News: ಏಡುಕೊಂಡುಲ ಶ್ರೀನಿವಾಸ್‌ಗೆ ಗೌರವ ಡಾಕ್ಟರೇಟ್: ಹಿತೈಷಿಗಳ ಸನ್ಮಾನ

ಏಡುಕೊಂಡುಲ ಶ್ರೀನಿವಾಸ್‌ಗೆ ಗೌರವ ಡಾಕ್ಟರೇಟ್: ಹಿತೈಷಿಗಳ ಸನ್ಮಾನ

ಸಮಾಜ ಸೇವೆ ಹಾಗೂ ದಾನ ಧರ್ಮದ ವಿಚಾರಗಳಿಗೆ ಪ್ರಚಾರ ಪಡೆಯ ಬಾರದು ಎಂದು ಬಯಸುವವನು ನಾನು.ಆದರೂ ನನ್ನ ಸಮಾಜ ಸೇವೆಯ ವಿಚಾರವನ್ನು ಮನಗಂಡು ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿರುವುದು ಸಂತೋಷ ತಂದಿದೆ ಯಲ್ಲದೆ ಇದು ನನ್ನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ

G Parameshwar: ಮಾನವೀಯತೆ ಕಲಿಸುವ ಕೆಲಸ ಆಗಬೇಕು: ಡಾ.ಜಿ. ಪರಮೇಶ್ವರ್

ಮಾನವೀಯತೆ ಕಲಿಸುವ ಕೆಲಸ ಆಗಬೇಕು: ಡಾ.ಜಿ. ಪರಮೇಶ್ವರ್

Tumkur News: ತುಮಕೂರು ನಗರದ ಶ್ರೀದೇವಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಆಯೋಜಿಸಿದ್ದ ತಲ್ಲಣಿಸದಿರುವ ಮನವೇ ಸಂಸ್ಕೃತಿ-ಚಿಂತನ- ಚಾರಣ ಕಾರ್ಯಕ್ರಮಕ್ಕೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಚಾಲನೆ ನೀಡಿದರು.

Bulldozer raj: ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ವ್ಯತ್ಯಾಸವಿದೆ: ಪಿಣರಾಯಿ ವಿಜಯನ್‌ಗೆ ಸಿಎಂ ಖಡಕ್‌ ಉತ್ತರ

ಪಿಣರಾಯಿ ವಿಜಯನ್‌ಗೆ ವಾಸ್ತವ ಸಂಗತಿಗಳ ಅರಿವಿಲ್ಲ: ಸಿಎಂ ಖಡಕ್‌ ಉತ್ತರ

ಕರ್ನಾಟಕದಲ್ಲಿ ʼಬುಲ್ಡೋಜರ್‌ ರಾಜ್‌ʼ ಕಾನೂನು ಜಾರಿಯಲ್ಲಿದೆ ಎಂಬ ಕೇರಳ ಸಿಎಂ ಪಿಣರಾಯಿ ವಿಜಯನ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು. ಹೀಗಾಗಿ ಆ ಜಾಗದಿಂದ ತೆರವುಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

Kodimutt Seer: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗ್ತಾರಾ?; ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ಸಿಎಂ ಬದಲಾವಣೆ ಚರ್ಚೆ; ಸ್ಫೋಟಕ ಭವಿಷ್ಯ ನುಡಿದ ಕೋಡಿಮಠ ಶ್ರೀ

ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇಬ್ಬರು ನಾಯಕರ ನಡುವೆ ಬ್ರೇಕ್‌ಫಾಸ್ಟ್‌ ಮೀಟಿಂಗ್‌ ಬಳಿಕ ಅಧಿಕಾರ ಹಂಚಿಕೆ ಕುರಿತ ಚರ್ಚೆ ತುಸು ತಣ್ಣಗಾಗಿತ್ತು. ಇದೀಗ ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿರುವ ಕೋಡಿಮಠ ಅಚ್ಚರಿ ಭವಿಷ್ಯವನ್ನು ಕೋಡಿಮಠ ಶ್ರೀಗಳು ಹೇಳಿದ್ದಾರೆ.

ಜ.5ರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ನರೇಗಾ ಉಳಿಸಿ ಅಭಿಯಾನ: ಸಿಎಂ  ಸಿದ್ದರಾಮಯ್ಯ

ಜ.5ರಿಂದ ದೇಶಾದ್ಯಂತ ಮಹಾತ್ಮ ಗಾಂಧಿ ನರೇಗಾ ಉಳಿಸಿ ಅಭಿಯಾನ: ಸಿಎಂ

MGNREGA Bachao Abhiyan: ನವದೆಹಲಿಯ ಇಂದಿರಾ ಭವನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆ ಶನಿವಾರ ನಡೆದಿದೆ. ಮನರೇಗಾ ಯೋಜನೆಯ ಹೆಸರು ಮತ್ತು ಸ್ವರೂಪದ ಬದಲಾವಣೆ ಮೂಲಕ ಉದ್ಯೋಗ ಖಾತ್ರಿ ಯೋಜನೆಯ ಆತ್ಮಕ್ಕೆ ಕೊಡಲಿಯೇಟು ನೀಡಿರುವ ಕೇಂದ್ರ ಸರ್ಕಾರದ ಒಕ್ಕೂಟ ವಿರೋಧಿ, ದೇಶ ವಿರೋಧಿ ಕೃತ್ಯಕ್ಕೆ ಕೈ ನಾಯಕರಿಂದ ಒಕ್ಕೊರಲ ಖಂಡನೆ ವ್ಯಕ್ತಪಡಿಸಲಾಗಿದೆ.

Loading...