ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

SSLC, 2nd PUC Passing Marks: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ ಬೇಡ: ಶಿಕ್ಷಣ ಸಚಿವರಿಗೆ ಹೊರಟ್ಟಿ ಪತ್ರ

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪಾಸಿಂಗ್‌ ಮಾರ್ಕ್ಸ್‌ ಕಡಿತ ಬೇಡ

Basavaraj Horatti: ಇತ್ತೀಚೆಗೆ ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳಲ್ಲಿ ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 33 ಅಂಕಗಳನ್ನು ತೆಗೆದುಕೊಂಡರೆ ಅವರನ್ನು ಉತ್ತೀರ್ಣ ಗೊಳಿಸುತ್ತೇವೆ ಎಂದು ಹೇಳಿಕೆ ನೀಡಿರುತ್ತೀರಿ, ಇದು ಬಹಳ ಖೇದಕರ ಸಂಗತಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ವಿರುದ್ಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಸಮಾಧಾನ ಹೊರಹಾಕಿದ್ದಾರೆ.

KUWJ Election: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

Shivanand Tagadur: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಶಿವಾನಂದ ತಗಡೂರು ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾದಂತಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.

Chikkanayakanahalli News: ಸಮಾಲೋಚನೆ ಇಲ್ಲದೆ ಪ್ರತಿಮೆಗಳಿಗೆ ಶಂಕುಸ್ಥಾಪನೆ; ತಾಲೂಕು ಆಡಳಿತದ ವಿರುದ್ಧ ದಲಿತ ಸಂಘಟನೆಗಳ ಆಕ್ರೋಶ

ಪ್ರತಿಮೆಗಳಿಗೆ ಶಂಕುಸ್ಥಾಪನೆ; ತಾಲೂಕು ಆಡಳಿತದ ವಿರುದ್ಧ ಆಕ್ರೋಶ

Gandhi and Ambedkar Statue: ​ಪ್ರತಿಮೆಗಳ ಸ್ಥಾಪನೆ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ದಲಿತ ಸಂಘಟನೆಗಳ ಪ್ರತಿನಿಧಿಗಳು, ಗಾಂಧಿವಾದಿಗಳು ಹಾಗೂ ಸಂಬಂಧಪಟ್ಟ ಯಾವುದೇ ಪಾಲುದಾರರೊಂದಿಗೆ ತಾಲೂಕು ಆಡಳಿತ ಚರ್ಚಿಸಿಲ್ಲ. ಯಾವುದೇ ಸಮಾಲೋಚನೆ ಇಲ್ಲದೆ, ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಆಡಳಿತದ ವಿರುದ್ಧ ದಲಿತ ಸಂಘಟನೆಗಳು ಕಿಡಿಕಾರಿವೆ.

MB Patil: ಕೇನ್ಸ್ ಟೆಕ್ನಾಲಜೀಸ್ ವಿಸ್ತರಣೆಗೆ ಚಾಮರಾಜನಗರದಲ್ಲಿ 20 ಎಕರೆ ಭೂಮಿ: ಎಂ.ಬಿ. ಪಾಟೀಲ್‌

ಕೇನ್ಸ್ ಟೆಕ್ನಾಲಜೀಸ್ ವಿಸ್ತರಣೆಗೆ ಚಾಮರಾಜನಗರದಲ್ಲಿ 20 ಎಕರೆ ಭೂಮಿ: ಎಂಬಿಪಿ

Invest Karnataka: ಮೈಸೂರಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜೀಸ್ ಮತ್ತು ಸೈಯಂಟ್ ಡಿ.ಎಲ್.ಎಂ ಕಂಪನಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಬುಧವಾರ ಭೇಟಿ ನೀಡಿದರು. ಈ ವೇಳೆ ಸಚಿವರು, ಕರ್ನಾಟಕದಲ್ಲಿ ಹೂಡಿಕೆ ವಿಸ್ತರಣೆ ಮಾಡುವಂತೆ ಕೋರಿದರಲ್ಲದೆ, ಇದಕ್ಕೆ ಬೇಕಾದ ಭೂಮಿ ಮತ್ತಿತರ ಸೌಲಭ್ಯಗಳನ್ನು ಕ್ಷಿಪ್ರಗತಿಯಲ್ಲಿ ಒದಗಿಸುವ ಭರವಸೆ ನೀಡಿದ್ದಾರೆ.

Basavaraj Bommai: ಕರ್ನಾಟಕಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ: ಬೊಮ್ಮಾಯಿ

ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪ್ರಯತ್ನ: ಬೊಮ್ಮಾಯಿ

State Congress Government: ಮಾತೆತ್ತಿದರೆ ರಾಹುಲ್ ಗಾಂಧಿ, ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ಮಾತನಾಡುತ್ತಾರೆ. ಸಂವಿಧಾನ ಅಂತ ಹೇಳುತ್ತ ಸಂವಿಧಾನ ವಿರುದ್ಧವೇ ಕೆಲಸ ಮಾಡುತ್ತಾರೆ. ಆಚಾರ ಹೇಳುವುದು ಬದನೆಕಾಯಿ ತಿನ್ನುವುದು. ಹಲವಾರು ಸಂವಿಧಾನ ವಿರುದ್ಧ ಕೃತ್ಯಗಳಿದ್ದಾವೆ. ಜನರ ವಾಕ್ ಸ್ವಾತಂತ್ರ್ಯ, ನಾಗರಿಕರ ಹಕ್ಕು ಮೊಟಕುಗೊಳಿಸುವ ಕ್ರಮ ಈ ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ರಾಜ್ಯ ಸರ್ಕಾರ ಪಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

Karnataka Weather: ಹವಾಮಾನ ವರದಿ; ನಾಳೆ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಂಭವ

ನಾಳೆ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಸಂಭವ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ (Weather Forecast) ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27°C ಮತ್ತು 19°C ಇರುವ ಸಾಧ್ಯತೆ ಇದೆ.

2025ರ ಬೆಂಗಳೂರಿನ ಟಾಪ್ ಸ್ಟಾರ್ಟಪ್‌ ಗಳ ಪಟ್ಟಿ ಬಿಡುಗಡೆ ಮಾಡಿದ ಲಿಂಕ್ಡ್‌ ಇನ್‌

ಬೆಂಗಳೂರಿನ ಟಾಪ್ ಸ್ಟಾರ್ಟಪ್‌ ಗಳ ಪಟ್ಟಿ ಬಿಡುಗಡೆ ಮಾಡಿದ ಲಿಂಕ್ಡ್‌ ಇನ್‌

ಹೊಂಡಾ 0 α ಅನ್ನು ನಗರ ಮತ್ತತು ನೈಸರ್ಗಿಕ ಪರಿಸರಗಳನ್ನು ಸುಂದರವಾಗಿ ಸಂಯೋಜಿಸುವ ಎಸ್.ಯು.ವಿ. ಆಗಿ ಅಭಿವೃದ್ಧಿಪಡಿಸಿದ್ದು ಪ್ರತಿ ಸನ್ನಿವೇಶಕ್ಕೂ ಜನರ ಜೀವನಗಳಿಗೆ ಬೆಂಬಲಿಸುತ್ತದೆ. ಈ ವರ್ಷದ ಜನವರಿಯಲ್ಲಿ ಸಿ.ಇ.ಎಸ್. 2025ರಲ್ಲಿ ಹೊಂಡಾ 0 ಸಲೂನ್ ಮತ್ತು ಹೊಂಡಾ 0 ಎಸ್.ಯು.ವಿ. ಬಿಡುಗಡೆ ಮಾಡಿದ ನಂತರ ಹೊಂಡಾ 0 α ಈ ಶ್ರೇಣಿಗೆ ಹೊಡಾ 0 ಸರಣಿಯ`ಗೇಟ್ ವೇ ಮಾದರಿ’ಯಾಗಿ ಸೇರಿಸಲಾಗಿದ್ದು ಇದು ಪರಿಷ್ಕರಿಸಿದ ವಿನ್ಯಾಸ ಮತ್ತು ವಿಶಾಲ ಕ್ಯಾಬಿನ್ ಹೊಂದಿದ್ದು ಒಳಗಿರುವವರಿಗೆ ಅಸಾಧಾರಣ ಸೌಖ್ಯ ನೀಡುತ್ತದೆ.

Karnataka CM Race: ರಾಜ್ಯದ ಮುಂದಿನ ಸಿಎಂ ಮಲ್ಲಿಕಾರ್ಜುನ ಖರ್ಗೆ; ಯತ್ನಾಳ್‌ ಸ್ಫೋಟಕ ಹೇಳಿಕೆ

ರಾಜ್ಯದ ಮುಂದಿನ ಸಿಎಂ ಮಲ್ಲಿಕಾರ್ಜುನ ಖರ್ಗೆ; ಯತ್ನಾಳ್‌ ಸ್ಫೋಟಕ ಹೇಳಿಕೆ

Mallikarjun Kharge: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ನಡೆಯುತ್ತಿದ್ದು, ಡಿ.ಕೆ.ಶಿವಕುಮಾರ್‌ ಸಿಎಂ ಆಗಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ. ಇದೀಗ ರಾಜ್ಯದಲ್ಲಿ ಸಿಎಂ ರೇಸ್‌ ಬಗ್ಗೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮಾತನಾಡಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ಮುಂದಿನ ಸಿಎಂ ಆಗಲಿದ್ದಾರೆ ಎಂದು ಹೇಳಿದ್ದಾರೆ.

72 ವರ್ಷದ ಮಹಿಳೆಗೆ ಯಶಸ್ವಿ ಚಿಕಿತ್ಸೆ

72 ವರ್ಷದ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಮೂತ್ರಪಿಂಡ ಕ್ಯಾನ್ಸರ್ ಮತ್ತು 4ನೇ ಹಂತದ ಗರ್ಭಕೋಶದ ಹಿಗ್ಗುವಿಕೆ ಸಮಸ್ಯೆಯಿಂದ ಬಳಲುತ್ತಿದ್ದ 72 ವರ್ಷದ ಮಹಿಳೆಗೆ ಕನ್ನಿಂಗ್‌ಹ್ಯಾಮ್‌ರಸ್ತೆಯ ಫೋರ್ಟಿಸ್ ಆಸ್ಪತ್ರೆಯಲ್ಲಿ ಯಶಸ್ವಿ ಚಿಕಿತ್ಸೆ. ಮೂತ್ರ ಶಾಸ್ತ್ರ ಮತ್ತು ಸ್ತ್ರೀರೋಗ ತಜ್ಞರ ನಡುವಣ ವಿಶಿಷ್ಟ ಸಹಯೋಗದ ಫಲವಾಗಿ ಸಂಪೂರ್ಣವಾಗಿ ಕ್ಯಾನ್ಸರ್‌ ನಿರ್ಮೂಲನೆ ಮಾಡಲಾಗಿದ್ದು, ಗರ್ಭಕೋಶದ ಹಿಗ್ಗುವಿಕೆ ಸಮಸ್ಯೆಯನ್ನು ಗಾಯದ ಕಲೆ ಇಲ್ಲದ ಚೇತರಿಕೆಯೊಂದಿಗೆ ಖಚಿತಪಡಿಸಲಾಗಿದೆ.

Dharmasthala case: ಅಕ್ರಮ ಕೂಟ ಸೇರಿದ ಆರೋಪ; ಸೌಜನ್ಯಾ ತಾಯಿ ಕುಸುಮಾವತಿ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್‌

ಅಕ್ರಮ ಕೂಟ; ಸೌಜನ್ಯಾ ತಾಯಿ ಕುಸುಮಾವತಿ ಸೇರಿ 12 ಮಂದಿ ವಿರುದ್ಧ ಎಫ್‌ಐಆರ್‌

Belthangady News: ಅ.27 ರಂದು ತಹಸೀಲ್ದಾರ್‌ಗೆ ಮನವಿ ಸಲ್ಲಿಸಲು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಅಕ್ರಮ ಕೂಟ ಸೇರಿದ ಆರೋಪದಲ್ಲಿ ಸೌಜನ್ಯಾ ತಾಯಿ ಕುಸುಮಾವತಿ, ತಿಮರೋಡಿ ಸಹೋದರ ಮೋಹನ್ ಶೆಟ್ಟಿ, ಪ್ರಸನ್ನ ರವಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಅ.30ರಿಂದ ರಂಗಕರ್ಮಿ ಪ್ರಸನ್ನ ಹೆಗ್ಗೋಡು ರಚಿಸಿರುವ ಪೆನ್ಸಿಲ್‌ ಡ್ರಾಯಿಂಗ್‌ ಕಲಾಕೃತಿಗಳ ಪ್ರದರ್ಶನ

ಬೆಂಗಳೂರಿನಲ್ಲಿ ಅ.30ರಿಂದ ಪೆನ್ಸಿಲ್‌ ಡ್ರಾಯಿಂಗ್‌ ಕಲಾಕೃತಿಗಳ ಪ್ರದರ್ಶನ

Prasanna Heggodu: ಖ್ಯಾತ ರಂಗಕರ್ಮಿ ಪ್ರಸನ್ನ ಹೆಗ್ಗೋಡು ಅವರು ರಚಿಸಿರುವ ಪೆನ್ಸಿಲ್‌ ಡ್ರಾಯಿಂಗ್‌ ಕಲಾಕೃತಿಗಳ ಪ್ರದರ್ಶನ ಅ.30 ರಿಂದ ನವೆಂಬರ್‌ 2ರವರೆಗೆ ಚಿತ್ರಕಲಾ ಪರಿಷತ್‌ನ ಗ್ಯಾಲರಿ #4 ನಲ್ಲಿ ನಡೆಯಲಿದೆ. ದೆಹಲಿಯ ಖ್ಯಾತ ಕಲಾ ವಿಮರ್ಶಕ ರವೀಂದ್ರ ತ್ರಿಪಾಠಿ ಅ.30ರಂದು ಗುರುವಾರ ಸಂಜೆ 4 ಗಂಟೆಗೆ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ.

CM Siddaramaiah: ಕಾಗಿನೆಲೆ ಅಭಿವೃದ್ಧಿಗೆ 34 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಿದ ಸಿಎಂ ಸಿದ್ದರಾಮಯ್ಯ

ಕಾಗಿನೆಲೆಯಲ್ಲಿ ಪ್ರತಿ ವರ್ಷ ʼಕನಕ ಉತ್ಸವʼ: ಸಿಎಂ

ಕಾಗಿನೆಲೆಯಲ್ಲಿ ಪ್ರತಿ ವರ್ಷ ʼಕನಕ ಉತ್ಸವʼ ವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು. ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Operation London Cafe Movie: ಸಡಗರ ರಾಘವೇಂದ್ರ ನಿರ್ದೇಶನದ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ನ.28ಕ್ಕೆ ರಿಲೀಸ್‌

ʼಆಪರೇಷನ್ ಲಂಡನ್ ಕೆಫೆʼ ಚಿತ್ರ ನ.28ಕ್ಕೆ ರಿಲೀಸ್‌

Sandalwood News: ಸಡಗರ ರಾಘವೇಂದ್ರ ಚೊಚ್ಚಲ ನಿರ್ದೇಶನದ, ಕವೀಶ್ ಶೆಟ್ಟಿ ಅಭಿನಯದ ʼಆಪರೇಷನ್ ಲಂಡನ್ ಕೆಫೆʼ ಚಿತ್ರ ನವೆಂಬರ್ 28ಕ್ಕೆ ಬಿಡುಗಡೆಯಾಗಲಿದೆ. ಅತೀ ಶೀಘ್ರದಲ್ಲೇ ಪ್ರೇಕ್ಷಕರನ್ನು ರಂಜಿಸುವ ಚಿತ್ರದ ಮಾಸ್ ಮತ್ತು ಮೆಲೋಡಿ ಹಾಡುಗಳು ಮತ್ತು ಟ್ರೇಲರ್ ಬಿಡುಗಡೆ ಮಾಡಲಿರುವುದಾಗಿ ಚಿತ್ರ ತಂಡ ತಿಳಿಸಿದೆ.

Bengaluru Road Rage: ಮಿರರ್‌ಗೆ ಟಚ್‌ ಆಗಿದ್ದಕ್ಕೆ ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ದಂಪತಿ!

ರೋಡ್‌ ರೇಜ್‌; ಕಾರು ಡಿಕ್ಕಿ ಹೊಡೆಸಿ ಬೈಕ್‌ ಸವಾರನ ಕೊಂದ ದಂಪತಿ!

Bengaluru News: ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೋಡ್ ರೇಜ್ ಪ್ರಕರಣದಲ್ಲಿ ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಕಾರಿನ ಮಿರರ್‌ಗೆ ಟಚ್‌ ಆಗಿದ್ದಕ್ಕೆ ಹಿಂಬಾಲಿಸಿ ಕಾರಿನಿಂದ ಡಿಕ್ಕಿ ಹೊಡೆಸಿದ್ದರಿಂದ ಬೈಕ್‌ ಸವಾರ ಮೃತಪಟ್ಟಿದ್ದು, ಈ ಸಂಬಂಧ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

Gold price today on 29th Oct 2025: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate in bengaluru: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 70 ರೂ. ಏರಿಕೆ ಕಂಡು ಬಂದಿದ್ದು, 11,145 ರೂ. ಗೆ ತಲುಪಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 76 ರೂ. ಏರಿಕೆಯಾಗಿ, 12,158 ರೂ ಆಗಿದೆ.

WIFI ID name: ವೈಫೈ ಐಡಿ ಹೆಸರಿನಲ್ಲಿ ಕಾಣಿಸಿಕೊಂಡ ದೇಶದ್ರೋಹಿ ಹೆಸರು, ಜನ ಶಾಕ್‌

ವೈಫೈ ಐಡಿ ಹೆಸರಿನಲ್ಲಿ ಕಾಣಿಸಿಕೊಂಡ ದೇಶದ್ರೋಹಿ ಹೆಸರು, ಜನ ಶಾಕ್‌

Pakistan Zindabad: ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲುಬಾಳು ಗ್ರಾಮದಲ್ಲಿ ಕೆಲವರು ಮೊಬೈಲ್ ವೈಫೈ ಕನೆಕ್ಷನ್​ ಸರ್ಚಿಂಗ್​ ವೇಳೆ ಪಾಕಿಸ್ತಾನ ಜಿಂದಾಬಾದ್ ಯೂಸರ್ ಐಡಿ ನೇಮ್ ತೋರಿಸಿದೆ. ಇದನ್ನು ಕಂಡವರು ಶಾಕ್‌ ಆಗಿದ್ದು, ಆತಂಕ ಹೊರಹಾಕಿದ್ದಾರೆ. ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Vandalism: ದೇವಾಲಯಕ್ಕೆ ಚಪ್ಪಲಿ ಕಾಲಲ್ಲಿ ನುಗ್ಗಿ ಹುಚ್ಚಾಟ ಎಸಗಿದ ಬಾಂಗ್ಲಾ ವ್ಯಕ್ತಿಗೆ ಥಳಿತ, ಸೆರೆ

ದೇವಾಲಯಕ್ಕೆ ಚಪ್ಪಲಿಸಹಿತ ನುಗ್ಗಿ ಹುಚ್ಚಾಟ ಎಸಗಿದ ಬಾಂಗ್ಲಾ ವ್ಯಕ್ತಿ ಸೆರೆ

Bangla Immigrant: ಮೊದಲು ದೇವಸ್ಥಾನದ ಗೋಪುರಕ್ಕೆ ಕಲ್ಲು ಹೊಡೆದು ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದಾನೆ. ಬಳಿಕ ಚಪ್ಪಲಿ ಕಾಲಿನಲ್ಲಿ ಗರ್ಭಗುಡಿ ಒಳಗೆ ಪ್ರವೇಶ ಮಾಡಿ ಮೂಲ ವಿಗ್ರಹದ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಕುಡಿದ ಅಮಲಿನಲ್ಲಿ ಹೀಗೆ ಮಾಡಿದ್ದಾನೆ ಎನ್ನಲಾಗಿದೆ.

Electrocution: ಜಮೀನಿನಲ್ಲಿ ಬಿದ್ದಿದ್ದ ಕರೆಂಟ್‌ ತಂತಿ ಸ್ಪರ್ಶ, ತಾಯಿ- ಮಗ ಬಲಿ

ಜಮೀನಿನಲ್ಲಿ ಬಿದ್ದಿದ್ದ ಕರೆಂಟ್‌ ತಂತಿ ಸ್ಪರ್ಶ, ತಾಯಿ- ಮಗ ಬಲಿ

Mysuru News: ಮೃತರನ್ನು ತಾಯಿ ನೀಲಮ್ಮ (39), ಮಗ ಹರೀಶ್ (19) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ತಾಯಿಗೆ ಇದ್ದಕ್ಕಿದ್ದಂತೆ ವಿದ್ಯುತ್ ತಂತಿ ತಗುಲಿದೆ. ತಾಯಿಯ ರಕ್ಷಣೆ ಮಾಡಲು ಹೋದ ಮಗ ಹರೀಶ್ ಸಹ ಕರೆಂಟ್ ಶಾಕ್‌ಗೆ ಬಲಿಯಾಗಿದ್ದಾರೆ.

Sudha Murthy: ತಾವು ಕಲಿತ ಶಾಲೆಗೆ 4 ಕೋಟಿ ರೂ. ವೆಚ್ಚ ಮಾಡಿ ಮರುಜೀವ ನೀಡಿದ ಸುಧಾ ಮೂರ್ತಿ

ತಾವು ಕಲಿತ ಶಾಲೆಗೆ 4 ಕೋಟಿ ರೂ. ವೆಚ್ಚ ಮಾಡಿ ಮರುಜೀವ ನೀಡಿದ ಸುಧಾ ಮೂರ್ತಿ

Hubballi: ‘ನಾನು ಇಲ್ಲಿ ಏಳು ವರ್ಷ ವಿದ್ಯಾಭ್ಯಾಸ ಮಾಡಿದ್ದೇನೆ. ಶಾಲೆ ಶಿಥಿಲಗೊಂಡಿರುವುದು ಕಂಡು ಬೇಜಾರಾಯಿತು. ನಾನು ಓದಿದ ಶಾಲೆ ಉಳಿಸಿಕೊಳ್ಳಬೇಕೆಂದು ನವೀಕರಣ ಮಾಡಿಸಿದ್ದೇನೆ. ನಾನು ದುಡ್ಡಿನ ಮುಖ ನೋಡಲಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಈ ಕೆಲಸ ಮಾಡಿದ್ದೇನೆʼ ಎಂದು ಸುಧಾ ಮೂರ್ತಿ ಹೇಳಿದ್ದಾರೆ.

Assault Case: ಚಿಕ್ಕಮಗಳೂರಿನಲ್ಲಿ ಅಮಾನವೀಯ ಘಟನೆ, ಶಿಕ್ಷಕಿಯ ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ಹಲ್ಲೆ

ಚಿಕ್ಕಮಗಳೂರಿನಲ್ಲಿ ಶಿಕ್ಷಕಿಯ ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ಹಲ್ಲೆ

Chikkamagaluru: ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ, ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿ ಶಾಲೆ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಗ್ನಗೊಳಿಸಿರುವ ಆರೋಪ ಕೇಳಿಬಂದಿದೆ.

CM Siddaramaiah: ಆರೆಸ್ಸೆಸ್‌ ಪಥಸಂಚಲನ: ಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ: ಸಿಎಂ ಸಿದ್ದರಾಮಯ್ಯ

ಹೈಕೋರ್ಟ್‌ ಆದೇಶದ ವಿರುದ್ಧ ಮೇಲ್ಮನವಿ: ಸಿಎಂ ಸಿದ್ದರಾಮಯ್ಯ

Karnataka high court: ಸರಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಸಂಸ್ಥೆಗಳು ಕಾರ್ಯಕ್ರಮ ನಡೆಸುವಂತಿಲ್ಲ. ಪೂರ್ವಾನುಮತಿ ಅಗತ್ಯ ಎಂಬ ಆದೇಶಕ್ಕೆ ಧಾರವಾಡ ಹೈಕೋರ್ಟ್ ಪೀಠ ನಿನ್ನೆ ಮಧ್ಯಂತರ ತಡೆ ನೀಡಿದೆ. ಈ ವಿಚಾರವಾಗಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿ, ನಾವು ಹೈಕೋರ್ಟಿಗೆ ಮತ್ತೆ ಮೇಲ್ಮನವಿ ಅರ್ಜಿ ಸಲ್ಲಿಸುತ್ತೇವೆ ಎಂದು ತಿಳಿಸಿದರು.

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ!

ಇಂದು ಬಿರುಗಾಳಿ ಸಹಿತ ಮಳೆ ನಿರೀಕ್ಷೆ; ಸಮುದ್ರಕ್ಕಿಳಿಯದಂತೆ ಎಚ್ಚರಿಕೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26°C ಮತ್ತು 20°C ಇರುವ ಸಾಧ್ಯತೆ ಹೆಚ್ಚಿದೆ.

Hey Prabhu Movie: ವೆಂಕಟ್ ಭಾರದ್ವಾಜ್ ನಿರ್ದೇಶನದ ʼಹೇ ಪ್ರಭುʼ ಚಿತ್ರ ನ.7ಕ್ಕೆ ರಿಲೀಸ್‌

ವೆಂಕಟ್ ಭಾರದ್ವಾಜ್ ನಿರ್ದೇಶನದ ʼಹೇ ಪ್ರಭುʼ ಚಿತ್ರ ನ.7ಕ್ಕೆ ರಿಲೀಸ್‌

Sandalwood News: ವೆಂಕಟ್ ಭಾರದ್ವಾಜ್ ನಿರ್ದೇಶನದ, ಅಮೃತ ಫಿಲ್ಮ್ ಸೆಂಟರ್ ನಿರ್ಮಿಸಿರುವ ʼಹೇ ಪ್ರಭುʼ ಚಿತ್ರವು ನವೆಂಬರ್ 7ರಂದು ಕರ್ನಾಟಕದಾದ್ಯಂತ ಹಾಗೂ ವಿದೇಶಗಳಲ್ಲಿಯೂ ಭವ್ಯವಾಗಿ ಬಿಡುಗಡೆಯಾಗಲಿದೆ. ʼಹೇ ಪ್ರಭುʼ ಚಿತ್ರ ಕೇವಲ ಮನರಂಜನೆಯ ಸಿನಿಮಾ ಅಲ್ಲ, ಇದು ಪ್ರತಿಯೊಬ್ಬ ನಾಗರಿಕನ ಅಂತಃಕರಣವನ್ನು ಎಚ್ಚರಗೊಳಿಸುವ ಪ್ರಯತ್ನ ಎಂದು ನಿರ್ದೇಶಕ ವೆಂಕಟ್ ಭರದ್ವಾಜ್ ತಿಳಿಸಿದ್ದಾರೆ.

ಆರೆಸ್ಸೆಸ್‌ ಗುರಿಯಾಗಿಸಿದ್ದ ನಿರ್ಬಂಧ ಆದೇಶಕ್ಕೆ ತಾತ್ಕಾಲಿಕ ತಡೆ; ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯ: ಜೋಶಿ

ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಪೀಠ ನೀತಿ ಪಾಠ: ಪ್ರಲ್ಹಾದ್‌ ಜೋಶಿ

Pralhad Joshi: ಸರ್ಕಾರದ ಜಾಗ, ಆವರಣಗಳಲ್ಲಿ ಕಾರ್ಯಕ್ರಮ ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯಬೇಕೆಂದು ಹೊರಡಿಸಿದ ಆದೇಶಕ್ಕೆ ಧಾರವಾಡ ಹೈಕೋರ್ಟ್‌ ಪೀಠ ತಾತ್ಕಾಲಿಕ ತಡೆ ನೀಡಿದೆ. ಇದು ಸಂವಿಧಾನದ ಮೌಲ್ಯಕ್ಕೆ ಸಿಕ್ಕ ಜಯವಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Loading...