ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

CJ Roy Death: ಸಿಜೆ ರಾಯ್‌ ಅಂತಿಮ ಕ್ಷಣದಲ್ಲಿ ಯಾರ ಜತೆ ಮಾತಾಡಿದ್ರು? ಪತ್ತೆಗೆ ಮೊಬೈಲ್‌ ಸಿಐಡಿ ಸೈಬರ್ ಸೆಲ್‌ಗೆ

ಸಿಜೆ ರಾಯ್‌ ಅಂತಿಮ ಕ್ಷಣದ ರಹಸ್ಯ ಪತ್ತೆಗೆ ಮೊಬೈಲ್‌ ಸೈಬರ್ ಸೆಲ್‌ಗೆ ರವಾನೆ

ನಿನ್ನೆ (ಜ.31) ರಾತ್ರಿ ಕಾನ್ಫಿಡೆಂಟ್ ಕಚೇರಿಯಲ್ಲಿದ್ದ ರಾಯ್ ಅವರ ಡೈರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಡೈರಿಯಲ್ಲಿ ಕೆಲ ನಟಿಯರು, ಮಾಡೆಲ್ ಹಾಗೂ ರಾಜಕಾರಣಿಗಳ ಹೆಸರುಗಳು ಪತ್ತೆಯಾಗಿದ್ದು, ಯಾವ ಕಾರಣಕ್ಕಾಗಿ ಬರೆದಿದ್ದಾರೆ? ಬರೀ ಈವೆಂಟ್ ವಿಚಾರಕ್ಕಾ? ಅಥವಾ ಬೇರೆ ವಿಷಯಾ ಇದೆಯಾ? ಎಂದು ಪೊಲೀಸರು ಇಂಚಿಂಚೂ ತನಿಖೆ ನಡೆಸುತ್ತಿದ್ದಾರೆ.

Bidar Blast: ಬೀದರ್‌ನಲ್ಲಿ ನಿಗೂಢ ಸ್ಫೋಟ, ಆರು ಮಂದಿಗೆ ಗಾಯ, ಮೂವರು ಗಂಭೀರ

ಬೀದರ್‌ನಲ್ಲಿ ನಿಗೂಢ ಸ್ಫೋಟ, ಆರು ಮಂದಿಗೆ ಗಾಯ, ಮೂವರು ಗಂಭೀರ

ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್‌ಗೆ ರವಾನೆ ಮಾಡಲಾಗಿದೆ. ವಸ್ತು ಬ್ಲಾಸ್ಟ್‌ ಆದಾಗ ಪಕ್ಕದಲ್ಲೇ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ನಿಂತಿದ್ದರು ಎಂದು ತಿಳಿದು ಬಂದಿದೆ.

Sabarimala gold theft: ಶಬರಿಮಲೆ ದೇಗುಲ ಚಿನ್ನ ಕಳವು: ʼಕಾಂತಾರʼ ನಟನಿಗೂ ಪೊಲೀಸ್‌ ತನಿಖೆ

ಶಬರಿಮಲೆ ದೇಗುಲ ಚಿನ್ನ ಕಳವು: ʼಕಾಂತಾರʼ ನಟನಿಗೂ ಪೊಲೀಸ್‌ ತನಿಖೆ

ಶಬರಿಮಲೆ ದೇವಸ್ಥಾನದಲ್ಲಿ ನಡೆದ ಚಿನ್ನ ನಾಪತ್ತೆ ಪ್ರಕರಣ 2019ರಲ್ಲಿ ಬೆಳಕಿಗೆ ಬಂದಿತ್ತು. ಶಬರಿಮಲೆ ದೇಗುಲದ ಗರ್ಭಗುಡಿಯ ಬಾಗಿಲಿನ ಚೌಕಟ್ಟುಗಳು ಹಾಗೂ ಮುಂಭಾಗದ ದ್ವಾರಪಾಲಕ ಶಿಲ್ಪಗಳ ಮೇಲೆ ಲೇಪಿಸಲಾಗಿದ್ದ ಸುಮಾರು 4 ಕಿಲೋಗ್ರಾಂ ಚಿನ್ನ ಕಳವು ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಪ್ರಕರಣದಲ್ಲಿ ಪೊಟ್ಟಿ ಉನ್ನಿಕೃಷ್ಣನ್ ಮೊದಲ ಆರೋಪಿಯಾಗಿದ್ದು, ಆತನ ಬೆಂಗಳೂರಿನ ಆಸ್ತಿಗಳ ಮೇಲೂ ಇಡಿ ದಾಳಿ ನಡೆದಿದೆ.

Labourers death: ಶೆಡ್‌ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ನಿಗೂಢ ರೀತಿಯಲ್ಲಿ ಸಾವು

ಶೆಡ್‌ನಲ್ಲಿ ಮಲಗಿದ್ದ ನಾಲ್ವರು ಕಾರ್ಮಿಕರು ನಿಗೂಢ ರೀತಿಯಲ್ಲಿ ಸಾವು

ಕೋಕಾಕೋಲಾ ವೇರ್ ಹೌಸ್‌ನಲ್ಲಿ ನಾಲ್ವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ರಾತ್ರಿ ಶೆಡ್ ಕಿಟಕಿ ಬಾಗಿಲು ಕ್ಲೋಸ್ ಮಾಡಿ ಅಡುಗೆ ಮಾಡಿದ್ದರು. ತಡರಾತ್ರಿ ಉಸಿರುಗಟ್ಟಿ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

CJ Roy Death: ಕಾನ್ಫಿಡೆಂಟ್ ಗ್ರೂಫ್‌ ಚೇರ್ಮನ್ ಸಿಜೆ ರಾಯ್ ಸಾವಿನ ಆ ಕೊನೆಯ ಕ್ಷಣಗಳಲ್ಲಿ ಏನಾಯ್ತು?

ಕೋಟ್ಯಧೀಶ ಸಿಜೆ ರಾಯ್ ಸಾವಿನ ಆ ಕೊನೆಯ ಕ್ಷಣಗಳಲ್ಲಿ ಏನಾಯ್ತು?

ಕಾನ್ಫಿಡೆಂಟ್‌ ಗ್ರೂಪ್ ಡೈರೆಕ್ಟರ್ ನೀಡಿದ ದೂರು ದಾಖಲಿಸಿ ಎಫ್‌ಐಆರ್ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. ಇತ್ತ ಸೋಕೋ ಟೀಂ ಸ್ಥಳಕ್ಕೆ ಆಗಮಿಸಿ ಪರೀಶೀಲನೆ ನಡೆಸಿದ್ದಾರೆ. ಘಟನೆ ನಡೆದ ಚೇಂಬರ್, ರಕ್ತದ ಕಲೆಗಳು, ಪಿಸ್ತೂಲ್ ಮೇಲಿನ‌ ಫಿಂಗರ್ ಪ್ರಿಂಟ್ ಸಂಗ್ರಹ ಮಾಡಲಾಗಿದೆ. ಮೊಬೈಲ್ ಫೋನ್, ಪಿಸ್ತೂಲ್ ಸೇರಿದಂತೆ ಕೆಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

CJ Roy Death case: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ?

ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ?

ಸರಕಾರವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಉನ್ನತ ಮಟ್ಟದ ತನಿಖೆ ನಡೆಸುವುದಾಗಿ ಈಗಾಗಲೇ ಹೇಳಿದ್ದಾರೆ. ಡಿಜಿ ಮತ್ತು ಐಜಿಪಿ ಸಲೀಂ ಅವರು ಕಮಿಷನರ್​ರಿಂದ ಮಾಹಿತಿ ಪಡೆದಿದ್ದಾರೆ. ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವ ಸಾಧ್ಯತೆಯಿದೆ. ಸಾವಿರಾರು ಕೋಟಿ ಮೌಲ್ಯದ ಉದ್ಯಮ ಸಾಮ್ರಾಜ್ಯವನ್ನು ಹೊಂದಿದ್ದ ರಾಯ್ ಅವರ ಈ ಹಠಾತ್ ನಿಧನಕ್ಕೆ ಕಾರಣ ಏನೆಂದು ಸ್ಪಷ್ಟವಾಗಿಲ್ಲ.

Mahatma Gandhi's martyrdom day: ಮಹಾತ್ಮಾಗಾಂಧೀಜಿ ಹುತಾತ್ಮರಾದ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಧೀಶರಿಂದ ಸ್ವಚ್ಛತಾ ಅಭಿಯಾನ

ಜಿಲ್ಲಾ ನ್ಯಾಯಾಧೀಶರಿಂದ ಸ್ವಚ್ಛತಾ ಅಭಿಯಾನ

ಜಿಲ್ಲೆಯಲ್ಲಿ ಸಾಮಾಜಿಕ ಪಿಡುಗುಗಳ ನಿಯಂತ್ರಣದ, ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಲಾಗಿದೆ. ಜಿಲ್ಲೆಯಲ್ಲಿ ವಿವಿಧೆಡೆ ನಡೆಯುವ ಜಾತ್ರೆಗಳು ಸೇರಿದಂತೆ ಜನಸಂದಣಿ ಸೇರುವ ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ತಂಡ, ಜಿಲ್ಲಾಡಳಿತದ ಅಧಿಕಾರಿಗಳ ತಂಡ ಭೇಟಿ ನೀಡಿ ಅರಿವು ಮೂಡಿಸುವ ಕಾರ್ಯಕ್ಕೆ ಈಗಾಗಲೆ ಚಾಲನೆ ನೀಡಲಾಗಿದೆ.

Rajiv Gowda granted conditional bail :ಬೆದರಿಕೆ ಪ್ರಕರಣದ ಬೆನ್ನಲ್ಲೇ ರಾಜೀವ್ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು

ರಾಜೀವ್ ಗೌಡಗೆ ಷರತ್ತು ಬದ್ಧ ಜಾಮೀನು ಮಂಜೂರು

ರಾಜೀವ್ ಗೌಡ ಪರವಾಗಿ ಹಿರಿಯ ವಕೀಲರಾದ ವಿವೇಕ್ ಸುಬ್ಬಾರೆಡ್ಡಿ ಅವರು ನ್ಯಾಯಾಲಯದಲ್ಲಿ ವಾದ ಮಂಡಿಸಿದರು. ಆರೋಪ ರಾಜಕೀಯ ಪ್ರೇರಿತವಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡಲು ಆರೋಪಿ ಸಿದ್ಧನಿದ್ದಾರೆ ಎಂದು ಅವರು ನ್ಯಾಯಾಲಯದ ಗಮನ ಸೆಳೆದರು. ಸದರಿ ಪ್ರಕರಣದಲ್ಲಿ ಯಾವುದೇ ನೇರ ಸಾಕ್ಷ್ಯಗಳಿಲ್ಲ, ಹೀಗಾಗಿ ಜಾಮೀನು ನಿರಾಕರಿಸುವ ಅಗತ್ಯವಿಲ್ಲ

Chimul Election: ಚಿಮುಲ್ ಚುನಾವಣೆ: ಗುಡಿಬಂಡೆ ಕ್ಷೇತ್ರದಲ್ಲಿ ಹಣಾಹಣಿ, ಮತದಾರರಿಗೆ ಆಮಿಷದ ಸುರಿಮಳೆ

ಚಿಮುಲ್ ಚುನಾವಣೆ: ಗುಡಿಬಂಡೆ ಕ್ಷೇತ್ರದಲ್ಲಿ ಹಣಾಹಣಿ

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಆದಿನಾರಾಯಣರೆಡ್ಡಿ ಹಾಗೂ ಎನ್.ಡಿ.ಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಯಾಗಿ ಬೈರಾರೆಡ್ಡಿ ಕಣದಲ್ಲಿದ್ದಾರೆ. ವಿಶೇಷವೆಂದರೆ, ಕಳೆದ ಐದು ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲೂ ಇವರಿಬ್ಬರೇ ಪರಸ್ಪರ ಎದುರಾಳಿಗಳಾಗಿದ್ದರು. ಅಂದು ಆದಿನಾರಾಯಣರೆಡ್ಡಿ ಸಿಪಿಎಂನಿಂದ ಸ್ಪರ್ಧಿಸಿದ್ದರೆ, ಬೈರಾರೆಡ್ಡಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.

MP Dr. K. Sudhakar: 22 ಸಾವಿರ ಮನೆಗಳನ್ನು ಕಟ್ಟಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಸಂಸದ ಸುಧಾಕರ್

22 ಸಾವಿರ ಮನೆಗಳ ಕಟ್ಟಿಸದಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ

ನಾನು ಮುಂದಿನ ಅವಧಿಯಲ್ಲಿ 22 ಸಾವಿರ ಸೈಟುಗಳನ್ನು ಅಭಿವೃದ್ದಿಪಡಿಸಿ ಬಡವರಿಗೆ ನೀಡುವು ದಲ್ಲದೆ ಮನೆಗಳನ್ನೂ ಕಟ್ಟಿಸಿಕೊಡುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜ್ಯಕಾರಣಕ್ಕೆ ವಾಪಸಾಗುವುದು ಖಚಿತ.ಅಂತೆಯೇ ಮನೆಗಳನ್ನು ಕಟ್ಟಿಸಿಕೊಡುವುದೂ ಖಚಿತವೇ ಆಗಿದೆ.ದೇಶದಲ್ಲಿ ಇನ್ನೂ 20 ವರ್ಷ ಎನ್‌ಡಿಎ ಅಧಿಕಾರದಲ್ಲಿ ಇರಲಿದೆ.ಕಾಂಗ್ರೆಸ್ ಒಂದು ಪಕ್ಷವಾಗಿ ಎಲ್ಲಿರಲಿದೆ ಎಂಬುದನ್ನು ಆ ಪಕ್ಷದ ಮುಖಂಡರನ್ನು ಕೇಳಿ ಎಂದು ವ್ಯಂಗ್ಯವಾಡಿದರು.

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಸರ್ಕಾರದಿಂದ ಉನ್ನತಮಟ್ಟದ ತನಿಖೆ: ಡಿ.ಕೆ.ಶಿವಕುಮಾರ್‌

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಉನ್ನತಮಟ್ಟದ ತನಿಖೆ: ಡಿಕೆಶಿ

ಐಟಿ ಇಲಾಖೆಯ ಬಗ್ಗೆ ನಾನು ಹೆಚ್ಚು ಮಾತನಾಡಿದರೆ ಅದು ರಾಜಕೀಯವಾಗಿ ತಿರುವುದ ಪಡೆಯುತ್ತೆ. ಆದರೆ, ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಗಳ ಕಿರುಕುಳವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಮೂರ್ಛೆರೋಗ ಚಿಕಿತ್ಸೆಯಲ್ಲಿ ಮಹತ್ತರ ಆವಿಷ್ಕಾರಗಳು

ಮೂರ್ಛೆರೋಗ ಚಿಕಿತ್ಸೆಯಲ್ಲಿ ಮಹತ್ತರ ಆವಿಷ್ಕಾರಗಳು

ಭಾರತದಲ್ಲಿ ಅಂದಾಜು ಒಂದು ಕೋಟಿಗೂ ಹೆಚ್ಚು ಮೀರಿರುವ ಮೂರ್ಛೆ ರೋಗದ ಪ್ರಕರಣ ಗಳಿದ್ದು ಇವುಗಳು ಜಾಗತಿಕ ಶೇ.20ರಷ್ಟು ಪಾಲು ಹೊಂದಿರುವುದು ಬಹಳ ಆತಂಕಕಾರಿ. ಈ ಕಾರಣದಿಂದ ವರ್ಷ ಕಳೆದಂತೆ ಈ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ, ಆದರೆ ಮೂರ್ಛೆ ರೋಗದ ಕುರಿತಾದ ತಪ್ಪು ತಿಳವಳಿಕೆಗಳು ಇದರ ನಿರ್ವಹಣೆಗೆ ಇರುವ ಪ್ರಮುಖ ಅಡ್ಡಿಯಾಗಿವೆ.

ಗಣರಾಜ್ಯೋತ್ಸವದ ಪ್ರಯುಕ್ತ ಸುಮಾರು 2 ಸಾವಿರಕ್ಕೂ ಹೆಚ್ಚು ಜಾವಾ, ಯೆಜ್ಡಿ ಹಾಗೂ ಬಿಎಸ್‌ಎ ಸವಾರರಿಂದ ದೇಶಾದ್ಯಂತ ರೈಡ್‌

ಜಾವಾ, ಯೆಜ್ಡಿ ಹಾಗೂ ಬಿಎಸ್‌ಎ ಸವಾರರಿಂದ ದೇಶಾದ್ಯಂತ ರೈಡ್‌

'ನೋಮ್ಯಾಡ್ಸ್: ರೈಡ್ ಆಸ್ ಒನ್, ರೈಡ್ ದಿ ಲೆಗಸಿ' ಎಂಬ ಶೀರ್ಷಿಕೆಯಡಿ ಗಣರಾಜ್ಯೋತ್ಸವವನ್ನು ಬೈಕ್‌ ರೈಡ್‌ ಮಾಡುವ ಮೂಲಕ ಆಚರಿಸಲು ಆಸಕ್ತ ಯುವಸಮುದಾಯವನ್ನು ಆಹ್ವಾನಿಸಿತ್ತು. ಅಂತೆಯೇ, ದೇಶಾದ್ಯಂತ 150 ಕ್ಕೂ ಹೆಚ್ಚು ವೃತ್ತಿಪರ ಸವಾರರು, ರೈಡರ್‌ ತಂಡಗಳು, ಸ್ವಯಂ ಸವಾರರು ಸೇರಿ ಸುಮಾರು 2,000 ಕ್ಕೂ ಹೆಚ್ಚು ಸವಾರರು ಈ ರೈಡ್‌ನಲ್ಲಿ ಭಾಗಿಯಾಗಿದ್ದರು.

ಸಿ.ಜೆ. ರಾಯ್‌ ಸಾವಿಗೆ ಕೇರಳದ ಆ ಐಟಿ ಅಧಿಕಾರಿಯೇ ಹೊಣೆ: ಸಹೋದರ ಬಾಬು ಸಿ.ಜೋಸೆಫ್ ಆರೋಪ

ಸಿ.ಜೆ. ರಾಯ್‌ ಸಾವಿಗೆ ಕೇರಳದ ಆ ಐಟಿ ಅಧಿಕಾರಿಯೇ ಹೊಣೆ: ಸಹೋದರ

ನನಗೆ ಗೊತ್ತಿರುವಂತೆ 3 ದಿನಗಳಿಂದ ಐಟಿ ಅಧಿಕಾರಿಗಳು, ಸಿಜೆ ರಾಯ್‌ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದರು. ಕೇರಳ ಐಟಿ ಅಧಿಕಾರಿಯೊಬ್ಬರು ಒತ್ತಡ ಹೇರಿದ್ದಾರೆ. ನನ್ನ ಸಹೋದರನ ಸಾವಿಗೆ ಐಟಿ ಅಧಿಕಾರಿಗಳೇ ಕಾರಣ ಎಂದು ಬಾಬು ಸಿ. ಜೋಸೆಫ್ ಹೇಳಿದ್ದಾರೆ.

ಚಂದ್ರಕಲಾ ಎಂ ಅವರಿಗೆ ರಾಜ್ಯಪಾಲರಿಂದ ಪಿಹೆಚ್‌ಡಿ ಪ್ರದಾನ

ಚಂದ್ರಕಲಾ ಎಂ ಅವರಿಗೆ ರಾಜ್ಯಪಾಲರಿಂದ ಪಿಹೆಚ್‌ಡಿ ಪ್ರದಾನ

ದಾವಣಗೆರೆ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಪ್ರೊಪೇಸರ್ ಜಯರಾಮಯ್ಯ.ವಿ. ಅವರ ಮಾರ್ಗ ದರ್ಶನದಲ್ಲಿ ಡಾ.ಎಂ.ಚಂದ್ರಕಲಾ ಅವರು ಮಂಡಿಸಿದ್ದ "ಮಧ್ಯಕಾಲೀನ ಕನ್ನಡ ಶಾಸನಗಳ ಸಾಂಸ್ಕೃ ತಿಕ ಅಧ್ಯಯನ(ಕ್ರಿ.ಶ.1341-1540) ಎಂಬ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾಯವು ಶುಕ್ರವಾರ ನಡೆದ 13ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಿಹೆಚ್‌ಡಿ ಪದವಿ ಪ್ರದಾನ ಮಾಡಲಾಯಿತು.

ಉದ್ಯಮಿ ಸಿ.ಜೆ. ರಾಯ್‌ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?; ಬೆಂಗಳೂರು ಪೊಲೀಸ್‌ ಆಯುಕ್ತರು ಹೇಳಿದ್ದೇನು?

ಸಿ.ಜೆ. ರಾಯ್‌ ಆತ್ಮಹತ್ಯೆ ಕೇಸ್‌ ಬಗ್ಗೆ ಪೊಲೀಸ್‌ ಆಯುಕ್ತರು ಹೇಳಿದ್ದೇನು?

CJ Roy Death Case: ಕೇರಳ ಐಟಿ ಅಧಿಕಾರಿಗಳ ತಂಡ ಕಳೆದ ಮೂರು ದಿನಗಳಿಂದ ಉದ್ಯಮಿ ಸಿ.ಜೆ.ರಾಯ್‌ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿತ್ತು. ಈ ಸಂದರ್ಭದಲ್ಲಿ ಅವರು ಶೂಟ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ.

ವಾಕಿಂಗ್‌ಗೆ ಹೋಗುತ್ತಿದ್ದ ಬಾಣಂತಿ ಮೇಲೆ ಸಾಕು ನಾಯಿ ದಾಳಿ!

ಬೆಂಗಳೂರಿನ ಟೆಕ್ಕಿ ಮೇಲೆ ನಾಯಿ ದಾಳಿ

ಸಾಫ್ಟ್‌ವೇರ್ ಎಂಜಿನಿಯರ್ ಮಹಿಳೆಯ ಮೇಲೆ ನೆರೆ ಮನೆಯವರ ಸಾಕು ನಾಯಿಯೊಂದು ದಾಳಿ ನಡೆಸಿರುವ ಘಟನೆ ಜನವರಿ 26ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಮಹಿಳೆ ವಾಕಿಂಗ್ ಗೆ ಹೋಗುತ್ತಿದ್ದಾಗ ಮಹಿಳೆ ಮೇಲೆ ನಾಯಿ ದಾಳಿ ನಡೆಸಿದ್ದು, ಇದರಿಂದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

C J Roy: ಮಗಳಿಗಾಗಿ ಖರೀದಿಸಿದ್ದ ಜಾಗವನ್ನು ನಟ ಪುನೀತ್‌ ರಾಜ್‌ಕುಮಾರ್‌ಗೆ ನೀಡಿದ್ದ ಸಿ.ಜೆ. ರಾಯ್‌

ಮಗಳಿಗಾಗಿ ಖರೀದಿಸಿದ್ದ ಜಾಗವನ್ನು ನಟ ಅಪ್ಪುಗೆ ನೀಡಿದ್ದ ಸಿ.ಜೆ. ರಾಯ್‌

ಉದ್ಯಮಿ ಸಿ.ಜೆ.ರಾಯ್‌ ಅವರು ರಿಯಲ್‌ ಎಸ್ಟೇಟ್‌ ಉದ್ಯಮಿ ಮಾತ್ರವಲ್ಲದೇ ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದಾರೆ. ಮಲಯಾಳಂ ಹಾಗೂ ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಸಿನಿಮಾ ರಂಗದ ಹಲವು ಪ್ರಮುಖರಿಗೆ ಇವರು ಆಪ್ತರಾಗಿದ್ದರು. ಇವರು ನಟ ಪುನೀತ್‌ ರಾಜ್‌ ಕುಮಾರ್‌ ಅವರ ಜತೆಗಿನ ಒಡನಾಟದ ಬಗ್ಗೆ ಇತ್ತೀಚೆಗೆ ಪೋಸ್ಟ್‌ ಹಂಚಿಕೊಂಡು, ಸ್ಮರಿಸಿಕೊಂಡಿದ್ದರು.

C.J. Roy: ಕೋಟ್ಯಂತರ ಆಸ್ತಿ, ಐಷಾರಾಮಿ ಕಾರುಗಳಿದ್ರೂ ಹಳೆಯ ಮಾರುತಿ 800 ಖರೀದಿಸಿದ್ದ ಉದ್ಯಮಿ ಸಿ.ಜೆ. ರಾಯ್‌!

ಐಷಾರಾಮಿ ಕಾರುಗಳಿದ್ರೂ ಮಾರುತಿ 800 ಖರೀದಿಸಿದ್ದ ಉದ್ಯಮಿ ಸಿ.ಜೆ. ರಾಯ್‌!

ಕಾನ್ಫಿಡೆಂಟ್​​​ ಗ್ರೂಪ್​​ ಚೇರ್​ಮನ್​ಸಿ.ಜೆ ರಾಯ್​ ಅವರು ಹಲವು ಐಷಾರಾಮಿ, ದುಬಾರಿ ಕಾರುಗಳನ್ನು ಹೊಂದಿದ್ದರು. ಇವರ ಬಳಿ 12 ರೋಲ್ಸ್​ ರಾಯ್​​, ಬುಗಾಟಿ, ಬೆಂಟ್ಲಿ ಸೇರಿ ಹಲವು ಕಾರುಗಳು ಇವೆ. ಆದರೂ ತಮ್ಮ ಮೊದಲ ಕಾರನ್ನು ಹುಡುಕಿ ಮರು ಖರೀದಿಸಿದ್ದರು. ಈ ಕುರಿತ ಇಂಟರೆಸ್ಟಿಂಗ್‌ ಮಾಹಿತಿ ಇಲ್ಲಿದೆ

CJ Roy Death: ಐಟಿ ದಾಳಿಗೆ ಹೆದರಿ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ

Bengaluru News: ಬೆಂಗಳೂರಿನ ಉದ್ಯಮಿ ಸಿ.ಜೆ.ರಾಯ್‌ ಅವರ ನಿವಾಸದ ಮೇಲೆ ಗುರುವಾರ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಇದರ ಬೆನ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಐಟಿ ದಾಳಿಯಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ 4 ಲಕ್ಷ ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್; ಬಂಧನದ ವೇಳೆ ಹೈಡ್ರಾಮಾ, Video Viral

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಇನ್ಸ್‌ಪೆಕ್ಟರ್; ಬಂಧನದ ವೇಳೆ ಹೈಡ್ರಾಮಾ!

ಬೆಂಗಳೂರಿನ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಗೋವಿಂದರಾಜು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾರೆ. ಹಣ ಹೂಡಿಕೆಗೆ ಸಂಬಂಧಿಸಿ ವಂಚನೆ ಪ್ರಕರಣದಲ್ಲಿ ಆರೋಪಿಗಳನ್ನು ಬಿಡಿಸಲು 5 ಲಕ್ಷ ನೀಡುವಂತೆ ಪೊಲೀಸ್‌ ಇನ್ಸ್‌ಪೆಕ್ಟರ್‌ ಬೇಡಿಕೆ ಇಟ್ಟಿದ್ದರು. ಒಂದು ಲಕ್ಷ ಮೊದಲೇ ಪಡೆದಿದ್ದ ಪೊಲೀಸ್‌ ಅಧಿಕಾರಿ, ಉಳಿದ 4 ಲಕ್ಷ ಲಂಚ ಸ್ವೀಕರಿಸುವಾಗ ವಶಕ್ಕೆ ಪಡೆಯಲಾಗಿದೆ.

ಫೆ.1ರ ಮಾಘ ಹುಣ್ಣಿಮೆಯಂದು ನಂದಿಗಿರಿ ಪ್ರದಕ್ಷಿಣೆ: ಎಲ್ಲರೂ ಭಾಗವಹಿಸಲು ಸಂಸದ ಡಾ.ಕೆ.ಸುಧಾಕರ್‌ ಆಹ್ವಾನ

ಫೆ.1ರ ಮಾಘ ಹುಣ್ಣಿಮೆಯಂದು ನಂದಿಗಿರಿ ಪ್ರದಕ್ಷಿಣೆ

Dr K Sudhakar: ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದ ಬಳಿ ಫೆಬ್ರವರಿ 1ರಂದು ನಂದಿಗಿರಿ ಪ್ರದಕ್ಷಿಣೆ ಹಮ್ಮಿಕೊಳ್ಳಲಾಗಿದೆ. ಅಂದು ಸಂಜೆ 4 ಗಂಟೆಗೆ ನಂದಿಗಿರಿಧಾಮದ ಸಮೀಪದ ಶ್ರೀ ಭೋಗನಂದೀಶ್ವರ ದೇವಾಲಯದಿಂದ ನಂದಿ ಗಿರಿ ಪ್ರದಕ್ಷಿಣೆ ಆರಂಭವಾಗಲಿದೆ ಎಂದು ಸಂಸದ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

ವಿಜಯನಗರದಲ್ಲಿ ಶಾಕಿಂಗ್‌ ಘಟನೆ; ತಂದೆ, ತಾಯಿ, ತಂಗಿಯನ್ನು ಭೀಕರವಾಗಿ ಕೊಲೆಗೈದ ಯುವಕ

ವಿಜಯನಗರದಲ್ಲಿ ತಂದೆ, ತಾಯಿ, ತಂಗಿಯನ್ನು ಕೊಲೆಗೈದ ಯುವಕ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಘಟನೆ ನಡೆದಿದೆ. ಕುಟುಂಬದ ಮೂವರನ್ನೂ ಕೊಲೆ ಮಾಡಿದ ಬಳಿಕ ಆರೋಪಿ ಬೆಂಗಳೂರಿಗೆ ಪರಾರಿಯಾಗಿದ್ದ. ಬಳಿಕ ಆತನೇ ತಿಲಕನಗರ ಠಾಣೆಗೆ ತೆರಳಿ ತಂದೆ, ತಾಯಿ, ಸಹೋದರಿ ಮೂವರು ನಾಪತ್ತೆಯಾಗಿದ್ದಾರೆ ಎಂದು ದೂರು ನೀಡಿದ್ದ. ಆದರೆ, ಮೂವರನ್ನು ಆತನೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮೂವರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚಿಸಿದ ಕಿಲೇಡಿ; ಗಂಡಂದಿರಿಂದ ದೂರು

ಮೂವರನ್ನು ಮದುವೆಯಾಗಿ ಲಕ್ಷಾಂತರ ರೂ. ವಂಚಿಸಿದ ಕಿಲೇಡಿ

Doddaballapur News: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಾಲೂಕಿನ ಅಣಬೆ ಗ್ರಾಮದ ಮಹಿಳೆಯೊಬ್ಬಳು ಮೂವರ ಜತೆ ಮದುವೆಯಾಗಿ, ಲಕ್ಷಾಂತರ ರೂಪಾಯಿ ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ದೊಡ್ಡಬಳ್ಳಾಪುರ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Loading...