ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Gold price today on 22th Oct 2025: ಹಬ್ಬದ ದಿನವೇ ಸ್ವರ್ಣಪ್ರಿಯರಿಗೆ ಗುಡ್‌ನ್ಯೂಸ್‌! ಚಿನ್ನದ ದರದಲ್ಲಿ ಭಾರೀ ಇಳಿಕೆ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and silver rate in bengaluru: ನಿರಂತರ ಏರಿಕೆ ಕಂಡಿದ್ದ ಚಿನ್ನದ ದರದಲ್ಲಿ ಇಂದು ಭಾರೀ ಇಳಿಕೆ ಕಂಡಿದೆ(Gold price today on 22th Oct 2025). ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 310 ರೂ. ಇಳಿಕೆ ಕಂಡು ಬಂದಿದ್ದು, 11,660 ರೂ. ಗೆ ತಲುಪಿದೆ.

Hasanamba Devi: ಇಂದು ಹಾಸನಾಂಬೆ ದರ್ಶನ ಮುಕ್ತಾಯ, ದೇವಿ ಸನ್ನಿಧಿಯಲ್ಲಿ ಮಾಂಗಲ್ಯ ಸರದ ಪವಾಡ!

ಇಂದು ಹಾಸನಾಂಬೆ ದರ್ಶನ ಮುಕ್ತಾಯ, ದೇವಿ ಸನ್ನಿಧಿಯಲ್ಲಿ ಮಾಂಗಲ್ಯ ಸರದ ಪವಾಡ!

Hassan: ಇತಿಹಾಸದಲ್ಲೇ ಇದೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ ಎನ್ನುವ ದಾಖಲೆ ಸೃಷ್ಟಿಯಾಗಿದೆ. ಇಂದು ಕೊನೆ ದಿನವಾಗಿದ್ದರಿಂದ ಮುಂಜಾನೆ 6 ಗಂಟೆಯಿಂದಲೂ ಭಕ್ತರ ದಂಡು ಪ್ರವಾಹ ರೂಪದಲ್ಲಿ ಹರಿದುಬರುತ್ತಿದೆ. ಇಂದು ಸಂಜೆ 7 ಗಂಟೆವರೆಗೂ ದರ್ಶನಾವಕಾಶವಿರಲಿದೆ.

Chinese Manja: ನಿಷೇಧಿತ ಚೈನೀಸ್‌ ಮಾಂಜಾ ದಾರದಿಂದ ಕುತ್ತಿಗೆಗೆ ಗಾಯ, ಬಾಲಕಿ ಗಂಭೀರ

ನಿಷೇಧಿತ ಚೈನೀಸ್‌ ಮಾಂಜಾ ದಾರದಿಂದ ಕುತ್ತಿಗೆಗೆ ಗಾಯ, ಬಾಲಕಿ ಗಂಭೀರ

Belagavi news: ಚೈನೀಸ್ ಮಾಂಜಾ ದಾರ ಮಾರಾಟ ಮತ್ತು ಬಳಕೆಯ ಮೇಲೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಷೇಧ ಹೇರಿದೆ. ಆದರೂ, ದಾರವನ್ನು ಬಹಿರಂಗವಾಗಿ ಮಾರಾಟ ಮಾಡಲಾಗುತ್ತಿದೆ. ಕಳೆದ ಕೆಲವು ವರ್ಷಗಳಿಂದ, ಇದೇ ರೀತಿಯ ಘಟನೆಗಳಲ್ಲಿ ಕನಿಷ್ಠ ಮೂರರಿಂದ ನಾಲ್ಕು ಜನರು ಪ್ರಾಣ ಕಳೆದುಕೊಂಡಿದ್ದಾರೆ.

Drowned: ಹಬ್ಬದ ದಿನವೇ ದುರಂತ, ಕೆರೆಯಲ್ಲಿ ಮುಳುಗಿ ಮೂವರ ಸಾವು

ಹಬ್ಬದ ದಿನವೇ ದುರಂತ, ಕೆರೆಯಲ್ಲಿ ಮುಳುಗಿ ಮೂವರ ಸಾವು

Tumkur news: ಕೆರೆಯ ಕಡೆಗೆ ವಿಹಾರಕ್ಕೆ ತೆರಳಿದ್ದ ಶ್ರಾವ್ಯ ಮತ್ತು ಸ್ನೇಹಿತೆ ಪುಣ್ಯ ಕಾಲು ಜಾರಿ ಕೆರೆಗೆ ಬಿದ್ದಿದ್ದು, ಇಬ್ಬರು ಬಾಲಕಿಯರ ರಕ್ಷಣೆಗೆ ಬಂದಿದ್ದ ತಂದೆ ವೆಂಕಟೇಶ್ ಕೂಡ ಮುಳುಗಿ ಸಾವಿಗೀಡಾಗಿದ್ದಾರೆ. ಶವಗಳನ್ನು ಅಗ್ನಿಶಾಮಕದಳ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಅಂದನಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Deepavali Festival: 100ಕ್ಕೂ ಹೆಚ್ಚು ಮಂದಿಗೆ ಕತ್ತಲಾದ ದೀಪಾವಳಿ, ಪಟಾಕಿ ಸಿಡಿಸುವಾಗ ಗಾಯ

100ಕ್ಕೂ ಹೆಚ್ಚು ಮಂದಿಗೆ ಕತ್ತಲಾದ ದೀಪಾವಳಿ, ಪಟಾಕಿ ಸಿಡಿಸುವಾಗ ಗಾಯ

fire crackers: ಪಟಾಕಿ ಹಚ್ಚುವಾಗ ರಕ್ಷಣಾತ್ಮಕ ಕನ್ನಡಕಗಳನ್ನು ಬಳಕೆ ಮಾಡಬೇಕು. ಯಾವಾಗಲೂ ಪಟಾಕಿಯಿಂದ ಸುರಕ್ಷಿತ ಅಂತರವನ್ನು ಕಾಪಾಡಿಕೊಳ್ಳಬೇಕು. ಅದರಲ್ಲಿಯೂ ಮಕ್ಕಳು ಪಟಾಕಿ ಸಿಡಿಸುವಾಗ ಪೋಷಕರು ಹೆಚ್ಚಿನ ಕಾಳಜಿ ವಹಿಸಬೇಕು. ಶಬ್ದ ಮಾಡುವ ಪಟಾಕಿಗಳಿಗಿಂತ ಸುರಕ್ಷಿತ, ಕಡಿಮೆ ತೀವ್ರತೆಯ ಪಟಾಕಿಗಳನ್ನು ಬಳಕೆ ಮಾಡುವುದು ಬಹಳ ಉತ್ತಮ ಎಂದು ಆರೋಗ್ಯ ಇಲಾಖೆ ಸೂಚಸಿದೆ.

Karnataka Weather: ಆರೆಂಜ್‌ ಅಲರ್ಟ್; ಇಂದು ಕರಾವಳಿ, ಮಲೆನಾಡಿನಲ್ಲಿ ಧಾರಾಕಾರ ಮಳೆ ಮುನ್ಸೂಚನೆ!

ಆರೆಂಜ್‌ ಅಲರ್ಟ್; ಇಂದು ಕರಾವಳಿ, ಮಲೆನಾಡಿನಲ್ಲಿ ಧಾರಾಕಾರ ಮಳೆ ಮುನ್ಸೂಚನೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

ಐಟಿ ವ್ಯವಸ್ಥೆಯ ತುರ್ತು ನಿರ್ವಹಣೆ; ಅ.24, 25ರಂದು ಎಸ್ಕಾಂಗಳ ಆನ್‌ಲೈನ್‌ ಸೇವೆ ಅಲಭ್ಯ

ಅ.24, 25ರಂದು ಎಸ್ಕಾಂಗಳ ಆನ್‌ಲೈನ್‌ ಸೇವೆ ಅಲಭ್ಯ

Karnataka escoms: ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ತುರ್ತು ನಿರ್ವಹಣೆ ಕಾರ್ಯ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ಲೈನ್‌ ಆಧರಿತ ಸೇವೆಗಳು ಅಕ್ಟೋಬರ್ 24ರಂದು ರಾತ್ರಿ 8 ಗಂಟೆಯಿಂದ ಅ.25ರ ಮಧ್ಯಾಹ್ನ1 ಗಂಟೆಯವರೆಗೆ ನಗರ ಪ್ರದೇಶಗಳಲ್ಲಿ ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

SV Rajendrasingh Babu: ಬೆಂಗಳೂರಿನಲ್ಲಿ ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

ಅ.23ರಿಂದ 5 ದಿನಗಳ ಕಾಲ ʼಎಸ್‌ವಿಆರ್ 50ʼ ಸಮಾರಂಭ

SVR @ 50: ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಬಾಬು ನಿರ್ದೇಶಕರಾಗಿ ಇದೇ ಅಕ್ಟೋಬರ್ ತಿಂಗಳಿಗೆ 50 ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭಮಿಸಲು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ʼಎಸ್‌ವಿಆರ್ @ 50ʼ ಸಾಧನೆ-ಸಂಭ್ರಮ-ಚಿತ್ರೋತ್ಸವವನ್ನು ಅ.23ರಿಂದ 27ರವರೆಗೆ ಬೆಂಗಳೂರು ನಗರದ ಚಾಮರಾಜಪೇಟೆಯಲ್ಲಿರುವ ಡಾ.ರಾಜ್‌ಕುಮಾರ್‌ ಭವನ, ಅಂಬರೀಷ್‌ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

Karnataka Weather: ನಾಳೆ ಉಡುಪಿ, ಕೊಡಗು ಸೇರಿ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಗುಡುಗು ಸಹಿತ ಭಾರಿ ಮಳೆ ನಿರೀಕ್ಷೆ!

ನಾಳೆ ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌; ಭಾರಿ ಮಳೆ ನಿರೀಕ್ಷೆ!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 21°C ಇರುವ ಸಾಧ್ಯತೆ ಇದೆ.

Ramanagara News: ಹೆಂಡತಿ ಟಾರ್ಚರ್‌ ತಾಳಲಾರದೆ ರೈಲಿಗೆ ತಲೆಕೊಟ್ಟು ಗಂಡ ಆತ್ಮಹತ್ಯೆ!

ಹೆಂಡತಿ ಟಾರ್ಚರ್‌ ತಾಳಲಾರದೆ ರೈಲಿಗೆ ತಲೆಕೊಟ್ಟು ಗಂಡ ಆತ್ಮಹತ್ಯೆ!

Self Harming: ಬಿಡದಿ ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೇವಂತ್ ಕುಮಾರ್ ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಐದು ತಿಂಗಳ ಹಿಂದೆ ಈತ ವಿವಾಹವಾಗಿದ್ದ. ಆದರೆ, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಯಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

Dr G Parameshwar: ಡಿಸಿ ಜತೆ ಬೆಟ್ಟಿಂಗ್ ಕಟ್ಟಿ ಸೋಲು; ವ್ಯಾಪಕ ಟೀಕೆಗೆ ಗುರಿಯಾದ ಡಾ.ಜಿ. ಪರಮೇಶ್ವರ್

ಡಿಸಿ ಜತೆ ಬೆಟ್ಟಿಂಗ್ ಕಟ್ಟಿ ವ್ಯಾಪಕ ಟೀಕೆಗೆ ಗುರಿಯಾದ ಪರಮೇಶ್ವರ್

Tumkur News: ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಫೈನಲ್‌ ಪಂದ್ಯದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ವಿಜಯಪುರ ತಂಡ ಗೆಲ್ಲುತ್ತದೆ ಎಂದು ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂಪಾಯಿ ಬೆಟ್ಟಿಂಗ್‌ ಕಟ್ಟಿದ್ದರು. ಆದರೆ, ದಕ್ಷಿಣ ಕನ್ನಡ ತಂಡವು 36-26 ಅಂಕಗಳಿಂದ ವಿಜಯಪುರ ತಂಡವನ್ನು ಸೋಲಿಸಿತು. ಇದರಿಂದಾಗಿ ಪರಮೇಶ್ವರ್‌ ಬಾಜಿ ಹಣವನ್ನು ಕಳೆದುಕೊಂಡಿದ್ದಾರೆ. ಈ ಬಗ್ಗೆ ಬಹುಮಾನ ವಿತರಣೆ ಸಮಯದಲ್ಲಿ ಸಚಿವ ಪರಮೇಶ್ವರ್ ಹೇಳಿದ್ದಾರೆ.

DK Shivakumar: ಭೂಮಿ ದಾಖಲೆ ನೀಡುವುದು ನಮ್ಮ 6ನೇ ಗ್ಯಾರಂಟಿ: ಡಿ.ಕೆ. ಶಿವಕುಮಾರ್‌

ಭೂಮಿ ದಾಖಲೆ ನೀಡುವುದು ನಮ್ಮ 6ನೇ ಗ್ಯಾರಂಟಿ: ಡಿ.ಕೆ. ಶಿವಕುಮಾರ್‌

State Congress Government: ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈಟ್ ಟಾಪಿಂಗ್ ಮತ್ತು ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, 4 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಗರದ 500 ಕಿ.ಮೀ. ಉದ್ದದ ರಸ್ತೆಗಳನ್ನು ವೈಟ್ ಟಾಪಿಂಗ್ ಮಾಡಲು ಡಿಪಿಆರ್ ಸಿದ್ಧಪಡಿಸುತ್ತಿದ್ದೇವೆ. ನಗರದಲ್ಲಿ 1650 ಕಿ.ಮೀ ಉದ್ದದ ಪ್ರಮುಖ ರಸ್ತೆಗಳಿದ್ದು, ಹೊಸದಾಗಿ 104 ಕಿಮೀ ರಸ್ತೆಗೆ ವೈಟ್ ಟಾಪಿಂಗ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Pavagada News: ಪಟಾಕಿಯಿಂದ ಗಾಯಗೊಂಡ ಬಾಲಕನ ದೃಷ್ಟಿ ಉಳಿಸಿದ ಶಾರದಾದೇವಿ ಕಣ್ಣಿನ ಆಸ್ಪತ್ರೆ ವೈದ್ಯರು

ಪಟಾಕಿಯಿಂದ ಗಾಯ; ಬಾಲಕನ ದೃಷ್ಟಿ ಉಳಿಸಿದ ಶಾರದಾದೇವಿ ಆಸ್ಪತ್ರೆ ವೈದ್ಯರು

Deepavali 2025: ಪಾವಗಡ ತಾಲೂಕಿನ ಬುಡ್ಡಾರೆಡ್ಡಿ ಹಳ್ಳಿಯ ಬಾಲಕ, ಸೋಮವಾರ ದೀಪಾವಳಿಯ ಪ್ರಯುಕ್ತ ಹೂಬಾಣವನ್ನು ತನ್ನ ಮನೆಯ ಮುಂದೆ ಹಚ್ಚಲು ಪ್ರಯತ್ನಿಸಿದಾಗ ಎಡಗಣ್ಣಿಗೆ ಬೆಂಕಿಯ ಕಿಡಿಗಳು ಹಾರಿ ದೃಷ್ಟಿ ಅಪಾಯದಲ್ಲಿತ್ತು. ಹೀಗಾಗಿ ಆತನನ್ನುಪಾವಗಡದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಸಂಸ್ಥೆಯ ಮುಖ್ಯ ನೇತ್ರ ತಜ್ಞರು ಹಾಗೂ ಸಿಬ್ಬಂದಿ ಚಿಕಿತ್ಸೆ ನೀಡಿ ಬಾಲಕನ ದೃಷ್ಟಿ ಉಳಿಸಿದ್ದಾರೆ.

BY Vijayendra: ಬಿಜೆಪಿ- ಜೆಡಿಎಸ್ ಪಕ್ಷದ ಸಮನ್ವಯ ಸಮಿತಿ ಶೀಘ್ರ ರಚನೆ: ಬಿ.ವೈ.ವಿಜಯೇಂದ್ರ

ಬಿಜೆಪಿ- ಜೆಡಿಎಸ್ ಪಕ್ಷದ ಸಮನ್ವಯ ಸಮಿತಿ ಶೀಘ್ರ ರಚನೆ: ವಿಜಯೇಂದ್ರ

BJP-JDS Coordination Committee: ಬಿಜೆಪಿ- ಜೆಡಿಎಸ್ ಪಕ್ಷಗಳ ಸಮನ್ವಯ ಸಮಿತಿ ರಚನೆ ಕುರಿತು ಸಲಹೆಗಳನ್ನು ಕೇಳಿದ್ದೇನೆ. ಗ್ರೇಟರ್ ಬೆಂಗಳೂರು ಚುನಾವಣೆಗಳು ನಡೆಯಲಿದ್ದು, ಬೆಂಗಳೂರಿಗೆ ಸೀಮಿತವಾಗಿ ಒಂದು ಸಮನ್ವಯ ಸಮಿತಿ ಮಾಡೋಣ ಹಾಗೂ ರಾಜ್ಯಕ್ಕೆ ಸಂಬಂಧಿಸಿ ಮತ್ತೊಂದು ಸಮನ್ವಯ ಸಮಿತಿ ಮಾಡುವ ಸಲಹೆಯನ್ನು ಎಚ್.ಡಿ. ಕುಮಾರಸ್ವಾಮಿ ಅವರು ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.

Udaala Movie: ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

ಯೋಗರಾಜ್‌ ಭಟ್‌ ನಿರ್ಮಾಣದ ʼಉಡಾಳʼ ಚಿತ್ರದ ರಿಲೀಸ್‌ ಡೇಟ್‌ ಅನೌನ್ಸ್‌

Sandalwood News: ಯೋಗರಾಜ್ ಭಟ್ ನಿರ್ಮಾಣದ, ಅಮೋಲ್ ಪಾಟೀಲ್ ನಿರ್ದೇಶನದ ಪೃಥ್ವಿ ಶಾಮನೂರು ನಾಯಕನಾಗಿ ನಟಿಸಿರುವ ʼಉಡಾಳʼ ಚಿತ್ರವು ನವೆಂಬರ್ 14ರಂದು ರಾಜ್ಯಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ. ಈ ಕುರಿತ ವಿವರ ಇಲ್ಲಿದೆ.

I Am Ruby Movie: ಚೇತನ್ ಕೇಶವ್ ನಿರ್ದೇಶನದ ʼI Am ರೂಬಿʼ ಚಿತ್ರದ ಶೀರ್ಷಿಕೆ ಅನಾವರಣ

ಚೇತನ್ ಕೇಶವ್ ನಿರ್ದೇಶನದ ʼI Am ರೂಬಿʼ ಚಿತ್ರದ ಶೀರ್ಷಿಕೆ ಅನಾವರಣ

Sandalwood News: ಚೇತನ್ ಕೇಶವ್ ನಿರ್ದೇಶನದ ಎರಡನೇ ಸಿನಿಮಾದ ಶೀರ್ಷಿಕೆ ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಅನಾವರಣವಾಗಿದೆ. ಆಕಾಶ್ ಎಂಬ ಮೈಸೂರಿನ ನೂತನ ಪ್ರತಿಭೆ ನಾಯಕನಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ʼI Am ರೂಬಿʼ ಎಂದು ಹೆಸರಿಡಲಾಗಿದೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರಿನ ಮೆಟ್ರೋಗೆ ರಾಜ್ಯ ಸರ್ಕಾರದಿಂದಲೇ ಶೇ.87ರಷ್ಟು ಹಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಮೆಟ್ರೋಗೆ ಶೇ.87ರಷ್ಟು ಹಣ ಕೊಡುವುದು ನಾವೇ: ಸಿಎಂ ಸಿದ್ದರಾಮಯ್ಯ

CM Siddaramaiah: ಬೆಂಗಳೂರಿನ ಮೆಟ್ರೋಗೆ ಶೇ.87ರಷ್ಟು ಹಣ ಕೊಡುವುದು ನಾವೇ. ಅಂದರೆ ರಾಜ್ಯದ ಜನತೆಯ ಶೇ.87ರಷ್ಟು ಹಣದಲ್ಲಿ ಮೆಟ್ರೋ ಆಗಿದೆ. ಆದರೆ ಬಿಜೆಪಿಯವರು ಮೆಟ್ರೋ ಕೇಂದ್ರದ ಯೋಜನೆ ಎಂದು ತಿರುಚಿ ಸುಳ್ಳು ಹೇಳ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ; ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದ ಸಿಎಂ

ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ ಎಂದ ಸಿಎಂ

CM Siddaramaiah: ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಸಾಧನೆಯ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

CM Siddaramaiah: ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲ ಮುಚ್ಚಲು ಸಿಎಂ ಸಿದ್ದರಾಮಯ್ಯ ಆದೇಶ

ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನೆಲ್ಲ ಮುಚ್ಚಲು ಸಿಎಂ ಸಿದ್ದರಾಮಯ್ಯ ಆದೇಶ

Bengaluru: ಹೊಸ ಹೊಸ ಔಟರ್ ರಿಂಗ್ ರಸ್ತೆ, ಸುರಂಗ ಮಾರ್ಗ, ಫ್ಲೈ ಓವರ್, ಡಬಲ್ ಡೆಕ್ಕರ್ ರಸ್ತೆಗಳು ಸೇರಿ ಬೆಂಗಳೂರಿನ ಅಭಿವೃದ್ಧಿಗೆ ₹1,20,000 ಕೋಟಿ ನೀಡುತ್ತಿದ್ದೇವೆ. ಆದ್ದರಿಂದ ಕೆಲಸ ಮಾಡುವವರ ಪರವಾಗಿ ನೀವು ಗಟ್ಟಿಯಾಗಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದ್ದಾರೆ.

ಮದರಸಾ ಸಿಬ್ಬಂದಿಯಿಂದ ಹಲ್ಲೆ, ಪ್ರಾಣ ಬೆದರಿಕೆ: ಜೀವ ರಕ್ಷಣೆಗಾಗಿ ದೂರು ದಾಖಲು

ಮದರಸಾ ಸಿಬ್ಬಂದಿಯಿಂದ ಹಲ್ಲೆ, ಪ್ರಾಣ ಬೆದರಿಕೆ

ಥಣಿಸಂದ್ರದ ತಮ್ಮ ಸ್ವತ್ತಿನ ಜಾಗವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಪದೇ ಪದೇ ಅಡ್ಡಿಪಡಿಸುತ್ತಿರುವ ಜೊತೆಗೆ ಮಹಿಳೆ ಮತ್ತು ಸಿಬ್ಬಂದಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿ, ಜೀವ ಬೆದರಿಕೆ ಹಾಕಿರುವ ಮದರಸ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವಿರುದ್ಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Self Harming: ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ

Bengaluru Crime: ರಾಕೇಶ್ ಪದೇ ಪದೆ ಕುಡಿದು ಬಂದು ಜಗಳ ಮಾಡುತ್ತಿದ್ದ. ಭಾನುವಾರವೂ ಜಗಳ ಮಾಡಿದ್ದ. ಸೋಮವಾರ ಬೆಳಗ್ಗೆ ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

SIRA News: ದಿಲ್‌ಮಾರ್ ಚಲನಚಿತ್ರ ೧೦೦ ದಿನ ಯಶಸ್ವಿ ಪ್ರದರ್ಶನ ಕಾಣಲಿ; ಆರ್.ಉಗ್ರೇಶ್

ಅಕ್ಟೋಬರ್ 24ಕ್ಕೆ ರಾಜ್ಯಾದ್ಯಂತ ದಿಲ್ ಮಾರ್ ಚಲನಚಿತ್ರ ಬಿಡುಗಡೆ

ಶಿರಾ ತಾಲೂಕಿನ ಕೃಷ್ಣೇಗೌಡ ಅವರ ಸುಪುತ್ರ ರಾಮ್ ಗೌಡ ಅವರು ದಿಲ್ ಮಾರ್ ಚಲನಚಿತ್ರದಲ್ಲಿ ನಟಿಸಿದ್ದಾರೆ. ಅವರನ್ನು ನಮ್ಮ ತಾಲೂಕಿನವರೆಲ್ಲರೂ ಪ್ರೋತ್ಸಾಹಿಸಬೇಕು. ಚಲನಚಿತ್ರವನ್ನು ಕುಟುಂಬ ಸಮೇತ ಹೋಗಿ ಚಿತ್ರ ಮಂದಿರದಲ್ಲಿ ನೋಡಿ ಪ್ರೋತ್ಸಾಹಿಸಬೇಕು. ಗ್ರಾಮೀಣ ಪ್ರತಿಭೆಯನ್ನು ಬೆಳೆಸಬೇಕು

ಪ್ರೆಸಿಡೆನ್ಸಿ ವಿದ್ಯಾಸಂಸ್ಥೆ ಸಾವಿರಾರು ಮಕ್ಕಳ ಬದುಕಿನಲ್ಲಿ ಜ್ಞಾನ ದೀವಿಗೆ ಹಚ್ಚಿದೆ: ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ

ಶಿರಾ ಪ್ರೆಸಿಡೆನ್ಸಿ ಶಾಲೆಯಲ್ಲಿ ಪ್ರತಿಭೋತ್ಸವ

ಫ್ರೆಸಿಡೆನ್ಸಿ ಸಂಸ್ಥೆಯಲ್ಲಿ ವಿದ್ಯಾಭ್ಯಾಸ ಮಾಡಿದವರು ಕಳೆದ ೧೭ ವರ್ಷದಲ್ಲಿ ೪೫೦೦ ವಿದ್ಯಾರ್ಥಿ ಗಳು ಇಂಜಿನಿಯರ್‌ಗಳಾಗಿದ್ದಾರೆ, ೬೦೦ ವಿದ್ಯಾರ್ಥಿಗಳು ಅಗ್ರಿಕಲ್ಚರ್, ಬಿವಿಎಸ್ ಓದಿದ್ದಾರೆ, ೩೦೦ ವಿದ್ಯಾರ್ಥಿಗಳು ಎಂ.ಬಿ.ಬಿ.ಎಸ್. ವಿದ್ಯಾಭ್ಯಾಸ ಮಾಡಿ ದೇಶದ ವಿವಿಧ ಭಾಗ ಹಾಗೂ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

Digital Arrest: ಬೆಂಗಳೂರಿನ ನಿವೃತ್ತ ಅಧಿಕಾರಿಗೆ 14 ದಿನಗಳ ಕಾಲ ಡಿಜಿಟಲ್‌ ಆರೆಸ್ಟ್‌, ₹1.62 ಕೋಟಿ ವಂಚನೆ

ನಿವೃತ್ತ ಅಧಿಕಾರಿಗೆ 14 ದಿನ ಡಿಜಿಟಲ್‌ ಆರೆಸ್ಟ್‌, ₹1.62 ಕೋಟಿ ವಂಚನೆ

Cyber Crime: ನಿಮ್ಮ ವಿರುದ್ಧ ಮಾನವ ಕಳ್ಳಸಾಗಣೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ವಿಡಿಯೋ ಕಾಲ್​​ ಮಾಡಿದ ವ್ಯಕ್ತಿ ಹೇಳಿದ್ದಾನೆ. ಈ ಕಾರಣಕ್ಕೆ ನಿಮ್ಮನ್ನು ಬಂಧನ ಮಾಡಲಾಗುವುದು ಎಂದು ಬೆದರಿಸಿದ್ದಾನೆ. ಇದರಿಂದ ಭಯಗೊಂಡು ತನ್ನ ಉಳಿತಾಯ ಮತ್ತು ಸ್ಥಿರ ಠೇವಣಿ ವಿವರಗಳನ್ನು ವಂಚಕನೊಂದಿಗೆ ಹಂಚಿಕೊಂಡಿದ್ದಾರೆ.

Loading...