ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Karnataka Weather: ಇಂದು ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಬಿರುಗಾಳಿ ಸಹಿತ ಮಳೆ; ಆರೆಂಜ್‌ ಅಲರ್ಟ್ ಘೋಷಣೆ

ಇಂದು ಕರಾವಳಿ ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಬಿರುಗಾಳಿ ಸಹಿತ ಮಳೆ

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

Chikkaballapur News: 31 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಎಸ್ ಆರ್ ಶ್ರೀನಿವಾಸ್ ರವರಿಂದ ಭೂಮಿ ಪೂಜೆ

31 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕ ಎಸ್ ಆರ್ ಶ್ರೀನಿವಾಸ್ ಭೂಮಿ ಪೂಜೆ

ತಾಲ್ಲೂಕಿನಲ್ಲಿ ಜಲ ಜೀವನ್ ಯೋಜನೆ ಕಳಪೆ ಕಾಮಾಗಾರಿ ಬಗ್ಗೆ ವ್ಯಾಪಕವಾಗಿ ಪೋನ್ ಗಳು ಬರುತ್ತಿದ್ದು ಶೀಘ್ರದಲ್ಲಿ ಎಲ್ಲ ಗ್ರಾಮ ಪಂಚಾಯಿತಿ ಪಿಡಿಓ ಹಾಗೂ ಇಂಜಿನಿಯರ್ ಗಳ ಸಭೆ ಕರೆದು ಚರ್ಚಿಸಿ ಸೂಕ್ತವಾಗಿ ಕೆಲಸ ಮಾಡಲು ಸೂಚಿಸುತ್ತೇನೆ.ಜತೆಗೆ ಗುತ್ತಿಗೆದಾರರು ಕೂಡ ಸರಿಯಾದ ಕೆಲಸ ಮಾಡಲಿಲ್ಲ ಅಂದರೇ ಅವರ ವಿರುದ್ದ ಕಾನೂನು ಕ್ರಮಕೈಗೊಳುತ್ತೇನೆ ಎಂದರು

Pralhad Joshi: ಪರಮೇಶ್ವರ್‌ ಮೇಲೆ ಇಡಿ ದಾಳಿಗೆ ಮಾಹಿತಿ ನೀಡಿದ್ದೇ ಕಾಂಗ್ರೆಸ್‌: ಪ್ರಲ್ಹಾದ್‌ ಜೋಶಿ

ಪರಮೇಶ್ವರ್‌ ಮೇಲೆ ಇಡಿ ದಾಳಿಗೆ ಮಾಹಿತಿ ನೀಡಿದ್ದೇ ಕಾಂಗ್ರೆಸ್‌: ಜೋಶಿ

ಗೃಹ ಸಚಿವ ಪರಮೇಶ್ವರ್‌ ಮೇಲೆ ಕ್ರಮಕ್ಕಾಗಿ ಇಡಿಗೆ ಕಾಂಗ್ರೆಸ್‌ನ ಒಂದು ಗುಂಪೇ ಮಾಹಿತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ. ಗೃಹ ಸಚಿವರ ಮೇಲೆ ಕ್ರಮವಾಗಬೇಕೆಂದು ಇಡಿಗೆ ಮಾಹಿತಿ ನೀಡಿದ ಕಾಂಗ್ರೆಸಿಗರು ಯಾರೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಗೊತ್ತಿದೆ. ಎಲ್ಲ ಗೊತ್ತಿದ್ದರೂ ಈಗ ಡ್ರಾಮ ಮಾಡುತ್ತಿದ್ದಾರೆ ಎಂದು ಅವರು ದೂರಿದ್ದಾರೆ.

Dinesh Gundu Rao: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ: ದಿನೇಶ್ ಗುಂಡೂರಾವ್

ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸಿಲ್ಲ: ದಿನೇಶ್ ಗುಂಡೂರಾವ್

Dinesh Gundu Rao: ಜನೌಷಧಿ ಕೇಂದ್ರ ಸರ್ಕಾರದ ಯೋಜನೆ ಎಂಬ ಕಾರಣಕ್ಕೆ ರಾಜಕೀಯ ಮಾಡುವ ಯಾವುದೇ ಉದ್ದೇಶವಿಲ್ಲ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿಯೇ ಔಷಧಿ ಸಿಗುವಾಗ ಆಸ್ಪತ್ರೆಗಳ ಆವರಣದಲ್ಲಿ ಔಷಧ ಮಾರಾಟಕ್ಕೆ ಅವಕಾಶ ಮಾಡಿಕೊಡಬಾರದು ಎಂಬ ಒಂದೇ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

DK Shivakumar: ಮೆಟ್ರೋ 2ನೇ ಹಂತದ ಯೋಜನಾ ವೆಚ್ಚ 40,424 ಕೋಟಿಗೆ ಅನುಮೋದನೆ: ಡಿ.ಕೆ.ಶಿವಕುಮಾರ್

ಮೆಟ್ರೋ 2ನೇ ಹಂತದ ಯೋಜನಾ ವೆಚ್ಚ 40,424 ಕೋಟಿಗೆ ಅನುಮತಿ: ಡಿಕೆಶಿ

DK Shivakumar: ಎರಡನೇ ಹಂತದ ಮೆಟ್ರೋ ಯೋಜನೆಗೆ ಅಂದಾಜು ವೆಚ್ಚ ₹40,424 ಕೋಟಿಗೆ ಅನುಮತಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಾರಂಭ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದ್ದು, ಇನ್ನುಮುಂದೆ ಈ ಜಿಲ್ಲೆಯು ಬೆಂಗಳೂರು ದಕ್ಷಿಣ ಎಂದು ಕರೆಯಲ್ಪಡುತ್ತದೆ ಎಂದು ಅವರು ಹೇಳಿದ್ದಾರೆ.

Electric Shock: ಅಂಕೋಲಾದಲ್ಲಿ ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾದಲ್ಲಿ ವಿದ್ಯುತ್ ತಂತಿ ತಗುಲಿ ಯುವಕ ಸಾವು

Electric Shock: ವಿದ್ಯುತ್ ತಂತಿ ತಗುಲಿ ಯುವಕನೋರ್ವ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ಜರುಗಿದೆ. ಮಹಂತೇಶ್ ಬಾನಾವಳಿಕರ್ (28) ಎಂದು ಗುರುತಿಸಲಾಗಿದೆ. ಭಾರೀ ಗಾಳಿ, ಮಳೆಯಿಂದಾಗಿ ನಡೆದುಕೊಂಡು ಹೋಗುವ ಓಣಿಯೊಂದರಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಯುವಕ ಮಹಂತೇಶ್‌ ಬಾನಾವಳಿಕರ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Sirsi Crime: ವಿದ್ಯುತ್ ತಂತಿ ತಗುಲಿ ವ್ಯಕ್ತಿ ಓರ್ವ ಸಾವು

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಓರ್ವ ಸಾವು

ಓಣಿಯೊಂದರಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹರಿದು ಬಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಓರ್ವ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂ ಕಿನ ಅವರ್ಸಾದ ದಂಡೆ ಭಾಗದಲ್ಲಿ ನಡೆದಿದೆ. ಮಹಂತೇಶ್ ಬಾನಾವಳಿಕರ್ (28) ಎಂದು ಗುರುತಿಸ ಲಾಗಿದೆ. ಭಾರೀ ಗಾಳಿ ಮಳೆ ಯಿಂದಾಗಿ ವಿದ್ಯುತ್ ತಂತಿಯೊಂದು ತುಂಡಾಗಿ ನಡೆದುಕೊಂಡು ಹೋಗುವ ಓಣಿಯೊಂದರಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು ಎನ್ನಲಾಗಿದೆ.

Karnataka Rains: ಆರೆಂಜ್‌ ಅಲರ್ಟ್; ಕರಾವಳಿಯಲ್ಲಿ ಮುಂದಿನ 6 ದಿನ ಭಾರಿ ಮಳೆ, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಕರಾವಳಿಯಲ್ಲಿ ಮುಂದಿನ 6 ದಿನ ಭಾರಿ ಮಳೆ; ಆರೆಂಜ್‌ ಅಲರ್ಟ್ ಘೋಷಣೆ

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

Tamannaah Bhatia: ಮೈಸೂರು ಸ್ಯಾಂಡಲ್ ಸೋಪ್‌ ರಾಯಭಾರಿ ತಮನ್ನಾಗೆ 6.2 ಕೋಟಿ ಸಂಭಾವನೆ; ಎಂ.ಬಿ.ಪಾಟೀಲ್‌ ಹೇಳಿದ್ದೇನು?

ಮೈಸೂರು ಸ್ಯಾಂಡಲ್ ಸೋಪ್‌ ರಾಯಭಾರಿ ತಮನ್ನಾಗೆ 6.2 ಕೋಟಿ ಸಂಭಾವನೆ

Tamannaah Bhatia: ನಟಿ ತಮನ್ನಾ ಅವರನ್ನು 6.2 ಕೋಟಿ ರೂಪಾಯಿ ಸಂಭಾವನೆಯೊಂದಿಗೆ ಎರಡು ವರ್ಷಗಳ ಅವಧಿಗೆ ಕೆಎಸ್‌ಡಿಎಲ್ ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಂಡಿರುವುದಕ್ಕೆ ಕೆಲವರು ಅಪಸ್ವರ ಎತ್ತಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಎಂ.ಬಿ.ಪಾಟೀಲ್‌ ಅವರು ಸ್ಪಷ್ಟನೆ ನೀಡಿದ್ದಾರೆ.

Bagalkot News: ಡಾಕ್ಟ್ರೇ ಇಲ್ಲಿ ನೋವಿದೆ; ತಾನಾಗಿಯೇ ಪಶು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದ ಕೋತಿ!

ತಾನಾಗಿಯೇ ಪಶು ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದ ಕೋತಿ!

Bagalkot News: ಬಾಗಲಕೋಟೆ ಜಿಲ್ಲೆಯ ಗೂಡೂರಿನ ಪಶು ಆಸ್ಪತ್ರೆಗೆ ಹೋದ ಮಂಗ, ಪಶು ವೈದ್ಯರ ಬಳಿ ತೆರಳಿ ತನ್ನ ಗುದದ್ವಾರದ ಕಡೆ ಕೈ ತೋರಿಸಿ, ಸಮಸ್ಯೆಯನ್ನು ತಿಳಿಸಿದೆ. ತಕ್ಷಣ ಕೋತಿಯ ನೋವನ್ನು ಅರ್ಥ ಮಾಡಿಕೊಂಡ ಪಶುವೈದ್ಯರು ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ.

Laxmi Hebbalkar: ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರ ಸ್ವಸಹಾಯ, ಸ್ತ್ರೀ ಶಕ್ತಿ ಗುಂಪು ರಚಿಸುವ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಭೆ

ಸ್ವಸಹಾಯ, ಸ್ತ್ರೀ ಶಕ್ತಿ ಗುಂಪು ರಚಿಸುವ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಸಭೆ

Laxmi Hebbalkar: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರ ಸ್ವಸಹಾಯ, ಸ್ತ್ರೀ ಶಕ್ತಿ ಗುಂಪುಗಳನ್ನು ರಚಿಸುವ ಸಂಬಂಧ ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಭೆ ನಡೆಸಿದರು. ಈ ಕುರಿತ ವಿವರ ಇಲ್ಲಿದೆ.

Jain Diksha: 100 ಕೋಟಿ ರೂ. ಆಸ್ತಿ ತೊರೆದು ಜೈನ ಸನ್ಯಾಸ ದೀಕ್ಷೆ ಪಡೆದ ಯಾದಗಿರಿ ಉದ್ಯಮಿ!

100 ಕೋಟಿ ರೂ. ಆಸ್ತಿ ತೊರೆದು ಜೈನ ಸನ್ಯಾಸ ದೀಕ್ಷೆ ಪಡೆದ ಯಾದಗಿರಿ ಉದ್ಯಮಿ!

Jain Diksha: ಯಾದಗಿರಿ ತಾಲೂಕಿನ ಸೈದಾಪುರ ಪಟ್ಟಣದ ನಿವಾಸಿ, ಉದ್ಯಮಿ ದಿಲೀಪ್ ಕುಮಾರ್ ದೋಖಾ ಎಂಬುವವರು ಜೈನ್ ದೀಕ್ಷೆ ಪಡೆದಿದ್ದಾರೆ. ಇವರು ಜೈನ ದೀಕ್ಷೆ ಪಡೆದಿದ್ದಕ್ಕೆ ಕುಟುಂಬಸ್ಥರು ಹಾಗೂ ಸಂಬಂಧಿಕರಿಂದ ಕೊನೆಯದಾಗಿ ಅದ್ಧೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಬೀಳ್ಕೊಡುಗೆ ನೀಡಲಾಗಿದೆ.

Electric Shock: ಅಥಣಿಯಲ್ಲಿ ವಿದ್ಯುತ್ ತಗುಲಿ ಶಾಲಾ ಶಿಕ್ಷಕ ಸಾವು

ಅಥಣಿಯಲ್ಲಿ ವಿದ್ಯುತ್ ತಗುಲಿ ಶಾಲಾ ಶಿಕ್ಷಕ ಸಾವು

ಮನೆ ಮುಂದಿನ ಗೇಟ್ ತೆರೆಯುವ ಸಂದರ್ಭದಲ್ಲಿ ವಿದ್ಯುತ್ ತಗುಲಿ ಪ್ರೌಢಶಾಲೆ ಶಿಕ್ಷಕ ಮೃತಪಟ್ಟಿರುವ ಘಟನೆ ಅಥಣಿ ಪಟ್ಟಣದ ಸತ್ಯ ಪ್ರಮೋದ್ ನಗರದಲ್ಲಿ ನಡೆದಿದೆ. ಪ್ರವೀಣಕುಮಾರ ಜಿ ಕಡಪಟ್ಟಿಮಠ (41) ಮೃತ ದುರ್ದೈವಿ. ವಿವಾಹ ವಾರ್ಷಿಕೋತ್ಸವ ಹಿನ್ನಲೆಯಲ್ಲಿ ಪ್ರವಾಸ ಮುಗಿಸಿ ವಾಪಸ್ ಮನೆಗೆ ತೆರಳಿದ ಸಂದರ್ಭದಲ್ಲಿ ಗೇಟ್ ತಗೆಯಲು ಹೋದಾಗ ವಿದ್ಯುತ್ ತಗುಲಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Rename Ramanagara District: ರಾಮನಗರ ಇನ್ನುಮುಂದೆ 'ಬೆಂಗಳೂರು ದಕ್ಷಿಣ ಜಿಲ್ಲೆ'; ಮರುನಾಮಕರಣಕ್ಕೆ ಸಚಿವ ಸಂಪುಟ ಒಪ್ಪಿಗೆ

ರಾಮನಗರ ಇನ್ನುಮುಂದೆ 'ಬೆಂಗಳೂರು ದಕ್ಷಿಣ ಜಿಲ್ಲೆ; ಸಂಪುಟ ಒಪ್ಪಿಗೆ

Rename Ramanagara District: ವಿಶ್ವದಲ್ಲೇ ಬೆಂಗಳೂರು ದಕ್ಷಿಣ ದೊಡ್ಡದಾಗಿ ಬೆಳೆಯುತ್ತಿದೆ. ಕಾನೂನು ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡಿದ್ದೇವೆ. ಉಳಿದಂತೆ ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

Ranya Rao Case: ರನ್ಯಾ ಮದುವೆಗೆ ಸಚಿವ ಪರಮೇಶ್ವರ್‌ 25 ಲಕ್ಷ ಗಿಫ್ಟ್‌ ನೀಡಿದ್ರಾ?; ಡಿಕೆಶಿ ಹೇಳಿದ್ದೇನು?

ರನ್ಯಾಗೆ ಸಚಿವ ಪರಮೇಶ್ವರ್‌ 25 ಲಕ್ಷ ಗಿಫ್ಟ್‌; ಡಿಕೆಶಿ ಹೇಳಿದ್ದೇನು?

Ranya Rao Case: ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ಸೇರಿದ ಶಿಕ್ಷಣ ಸಂಸ್ಥೆಗಳ ಮೇಲೆ ಇ.ಡಿ. ದಾಳಿ ನಡೆದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ ಹಲವು ನಾಯಕರು ಡಾ.ಜಿ.ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಗೃಹಸಚಿವರಿಗೆ ಬೆಂಬಲ ಸೂಚಿಸಿದ್ದಾರೆ.

Heart Failure: ದಿಡೀರ್‌ ಹೃದಯವೈಫಲ್ಯ: 19 ವರ್ಷದೊಳಗಿನ ಇಬ್ಬರ ಸಾವು

ದಿಡೀರ್‌ ಹೃದಯವೈಫಲ್ಯ: 19 ವರ್ಷದೊಳಗಿನ ಇಬ್ಬರ ಸಾವು

ಯಾವ ಹೃದಯದ ಸಮಸ್ಯೆಯೂ ಕಾಣಿಸಿಕೊಳ್ಳದ ಯುವಕ ಯುವತಿಯರಲ್ಲಿ ಇದ್ದಕ್ಕಿದ್ದಂತೆ ಹೃದಯ ವೈಫಲ್ಯದಿಂದ (Heart Failure) ಸಾವನ್ನು ಅಪ್ಪುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ ಎಂಬ ಕಳವಳ ಹೆಚ್ಚುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಹಾಸನದಲ್ಲಿ ಒಬ್ಬ ಯುವತಿ, ಬೆಂಗಳೂರಿನಲ್ಲಿ ಯುವಕ ಹೀಗೆ ಮೃತಪಟ್ಟಿದ್ದಾರೆ.

Madenuru Manu: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಅರೆಸ್ಟ್

ಹಾಸನದಲ್ಲಿ ನಟ ಮಡೆನೂರು ಮನು ಅರೆಸ್ಟ್

Madenuru Manu: ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿ ಹಾಸನದಲ್ಲಿ ಕಿರುತೆರೆ ನಟನನ್ನು ಬಂಧಿಸಿ ಪೊಲೀಸರು ಕರೆತರುತ್ತಿದ್ದಾರೆ ಎಂದು ತಿಳಿದುಬಂದಿದೆ.

Chikkaballapur News: ಬಾಗೇಪಲ್ಲಿಯಲ್ಲಿ ಮಳೆಯಿಂದ ಬೆಳೆ ಹಾನಿ

ಬಾಗೇಪಲ್ಲಿಯಲ್ಲಿ ಮಳೆಯಿಂದ ಬೆಳೆ ಹಾನಿ

ಸತತ ಮಳೆಯಿಂದ ಹೊಲ ಗದ್ದೆಗಳಲ್ಲಿ ನೀರು ಸಂಗ್ರಹ ಆಗಿದೆ. ತೇವಾಂಶ ಆಗಿ ಕಟಾವು ಹಂತದ ಕ್ಯಾರೆಟ್ ನೆಲಕಚ್ಚಿದೆ. ಟೊಮೆಟೊ ಬೆಳೆಯು ಸಂಪೂರ್ಣವಾಗಿ ನೆಲಕ್ಕೆ ಕುಸಿದಿವೆ. ತಮ್ಮ ಸಂಕಷ್ಟ ಪತ್ರಿಕೆಗೆ ಹಂಚಿಕೊಂಡ ರೈತ  ಗೋವಿದಪ್ಪ ಹಾಗೂ ಮಹಿಳೆಯ ಕೈಗೆ ಬಂದದ್ದು ಬಾಯಿಗೆ ಬರದಂತೆ ಆಗಿದೆ

Chikkaballapur News: ಸಕಾಲಕ್ಕೆ ಬೀಜ ಗೊಬ್ಬರ ವಿತರಣೆಗೆ ಸಿಪಿಐಎಂ ಆಗ್ರಹ

ಸಕಾಲಕ್ಕೆ ಬೀಜ ಗೊಬ್ಬರ ವಿತರಣೆಗೆ ಸಿಪಿಐಎಂ ಆಗ್ರಹ

ತಾಲ್ಲೂಕಿನಲ್ಲಿ ಹಿಂದೆ ಗೊಬ್ಬರವನ್ನು ಕೃತಕ ಅಭಾವ ಸೃಷ್ಟಿಸಿ, ಕಾಳಸಂತೆಯಲ್ಲಿ ಹೆಚ್ಚಿನ ಹಣಕ್ಕೆ ಮಾರಾಟ ಮಾಡಿದ್ದಾರೆ. ಹೀಗೆ ಅಕ್ರಮ ದಂಧೆಯು ಮತ್ತೆ ಮರುಕಳಿಸದಂತೆ ಮುಂಜಾಗ್ರತೆ ಕ್ರಮ ಅನು ಸರಿಸಬೇಕು. ಬೀಜ ಮತ್ತು ವಿತರಣಾ ಕೇಂದ್ರದಲ್ಲಿ ಬೀಜಗಳು ಸಂಗ್ರಹಣೆಯ ವಿವರಣೆ ಹಾಗೂ ದರಪಟ್ಟಿಯು ಕಡ್ಡಾಯವಾಗಿ ಪ್ರದರ್ಶಿಸಲು ಮೇಲಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾ ಗಬೇಕು

Chikkaballapur News: 23ನೇ ವರ್ಷದ ಮೇಳದಲ್ಲಿ 68 ವಿದ್ಯಾರ್ಥಿಗಳಿಗೆ ಉದ್ಯೋಗ ಭಾಗ್ಯದ ಕೊಡುಗೆ

ವಿಷ್ಣುಪ್ರಿಯ ಕಾಲೇಜಿನಲ್ಲಿ ಉದ್ಯೋಗ ಮೇಳ : 10 ಕಂಪನಿಗಳು ಭಾಗಿ

ಬೆಂಗಳೂ ರಿನ ಪ್ರತಿಷ್ಟಿತ ಕಾಲೇಜು ಕ್ಯಾಂಪಸ್‌ಗಳಿಗೆ ಸೀಮಿತವಾಗಿದ್ದ ಕಾಲದಲ್ಲಿ ಬಿಬಿಎಂ ವಿದ್ಯಾರ್ಥಿ ಗಳಿಗೆ ಕ್ಯಾಂಪಸ್ ಸೆಲೆಕ್ಷನ್ ಮೂಲಕ ಉದ್ಯೋಗ ದೊರಕಿಸಿಕೊಟ್ಟ ಹೆಮ್ಮೆ ನಮ್ಮ ಸಂಸ್ಥೆಗಿದೆ. ಶಿಕ್ಷಣದ ಜೆತೆಗೆ ಉದ್ಯೋಗಕ್ಕೆ ಸಂಬಂಧಿಸಿದ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಮುಖ್ಯ.ಇಂದಿನ ಉದ್ಯೋಗ ಮೇಳದಲ್ಲಿ 100 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರೂ ಉದ್ಯೋಗ ಪಡೆದಿದ್ದು ಕೇವಲ 68 ವಿದ್ಯಾರ್ಥಿಗಳು ಮಾತ್ರ.

ED Raid: ಎರಡನೇ ದಿನವೂ ಗೃಹ ಸಚಿವರ ಸಂಸ್ಥೆಗಳ ಮೇಲೆ ಇಡಿ ದಾಳಿ; ಡಾ. ಜಿ ಪರಮೇಶ್ವರ್ ಹೇಳಿದ್ದೇನು?

ಎರಡನೇ ದಿನವೂ ಸಂಸ್ಥೆಗಳ ಮೇಲೆ ಇಡಿ ದಾಳಿ; ಡಾ. ಜಿ ಪರಮೇಶ್ವರ್ ಹೇಳಿದ್ದೇನು?

"ಕಾನೂನು ಗೌರವಿಸೋನು ನಾನು. ಎಲ್ಲ ರೀತಿಯ ಸಹಕಾರವನ್ನು ನಮ್ಮ ಶಿಕ್ಷಣ ಸಂಸ್ಥೆ ನೀಡುತ್ತೆ. ಮುಂದೆ ಏನು ಪ್ರಶ್ನೆಗಳನ್ನು ಕೇಳ್ತಾರೆ ಸಹಕಾರ ಕೊಡ್ತೀವಿ" ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ (G.Parameshwar) ಹೇಳಿದ್ದಾರೆ. ಎರಡನೇ ದಿನವೂ ಇಡಿ ದಾಳಿ, ಪರಿಶೀಲನೆ ಮುಂದುವರಿದಿದೆ.

Madenuru Manu: ಮಿಂಚುಗೆ ಮೋಸ ಮಾಡಲ್ಲ, ಚೆನ್ನಾಗಿ ನೋಡಿಕೊಳ್ತೀನಿ ಎಂದ ಮಡೆನೂರ್ ಮನು

ಮಿಂಚುಗೆ ಮೋಸ ಮಾಡಲ್ಲ, ಚೆನ್ನಾಗಿ ನೋಡಿಕೊಳ್ತೀನಿ ಎಂದ ಮಡೆನೂರ್ ಮನು

Madenuru Manu: ನಟ ಮಡೆನೂರು ಮನು ವಿರುದ್ಧ ಅತ್ಯಾಚಾರ, ಬಲವಂತದ ಗರ್ಭಪಾತ, ಹಲ್ಲೆ ಹಾಗೂ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಕಿರುತೆರೆ ನಟಿಯೊಬ್ಬರು ಆರೋಪಿಸಿದ್ದರು. ಈ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

Tamannaah Bhatia: ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಆಯ್ಕೆ

‌ನಟಿ ತಮನ್ನಾ ಮೈಸೂರು ಸ್ಯಾಂಡಲ್ ಸೋಪ್ ನೂತನ ರಾಯಭಾರಿ

Tamannaah Bhatia: ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ (KSDL) ಉತ್ಪನ್ನಗಳಿಗೆ ನೂತರ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ಅವರು ಆಯ್ಕೆಯಾಗಿದ್ದಾರೆ. ನಟಿ ತಮನ್ನಾ ಅವರು 2 ವರ್ಷಗಳ ಅವಧಿಗೆ KSDL ರಾಯಭಾರಿಯಾಗಿರಲಿದ್ದಾರೆ.

Madenuru Manu: ಅತ್ಯಾಚಾರ, ಗರ್ಭಪಾತ, ಹಲ್ಲೆ, ಕೊಲೆ ಬೆದರಿಕೆ: ನಟ ಮಡೆನೂರು ಮನು ಮೇಲೆ ನಟಿ ದೂರು

ಅತ್ಯಾಚಾರ, ಹಲ್ಲೆ, ಕೊಲೆ ಬೆದರಿಕೆ: ನಟ ಮಡೆನೂರು ಮನು ಮೇಲೆ ನಟಿ ದೂರು

ಚಿತ್ರರಂಗದಲ್ಲಿ ಕೆಲಸ ಮಾಡುವಾಗ ಮಡೆನೂರು ಮನುಗೆ (Madenuru Manu) ಕಿರುತೆರೆ ನಟಿ ಪರಿಚಯ ಆಗಿದೆ. ಆ ಬಳಿಕ ಇವರ ಮಧ್ಯೆ ಗೆಳೆತನ ಬೆಳೆದಿದೆ. ಈಗ ‘ನನ್ನ ಮೇಲೆ ಮನು ಅತ್ಯಾಚಾರ ಮಾಡಿದ್ದಾನೆ’ ಎಂದು ನಟಿ ದೂರು ನೀಡಿದ್ದಾರೆ.