ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Kolhar (Vijayapura) News: ಭಾವೈಕ್ಯತೆಯ ಪ್ರತೀಕ ಕೊಲ್ಹಾರ ಮೊಹರಂ

ಭಾವೈಕ್ಯತೆಯ ಪ್ರತೀಕ ಕೊಲ್ಹಾರ ಮೊಹರಂ

ಕೊಲ್ಹಾರ ಪಟ್ಟಣದ ಮೊಹರಂ ಹಬ್ಬವು ಅವಳಿ ಜಿಲ್ಲೆಗೆ ಹೆಸರುವಾಸಿಯಾಗಿದೆ. ಪಟ್ಟಣದ ಹಿಂದು ಹಾಗೂ ಮುಸ್ಲಿಂ ಬಾಂಧವರು ಜೊತೆಯಾಗಿ ಈ ಹಬ್ಬವನ್ನು ಆಚರಿಸುವ ಮೂಲಕ ಭಾವೈಕ್ಯತೆಯ ಸಂದೇಶ ವನ್ನು ಸಾರುತ್ತೆವೆ, ಮುಂದಿನ ಪೀಳಿಗೆಯವರು ಕೂಡ ಈ ಹಬ್ಬವನ್ನು ಸಂಭ್ರಮದಿಂದ ಆಚರಿಸ ಬೇಕು

Kurubara Sangha: 34 ಕೋಟಿ ರೂ. ವೆಚ್ಚದಲ್ಲಿ ಕುರುಬರ ಸಂಘದ ನೂತನ ಕಟ್ಟಡ ನಿರ್ಮಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಕುರುಬರ ಸಂಘದ ನೂತನ ಕಟ್ಟಡ ನಿರ್ಮಿಸಲು ಕ್ರಮ: ಸಿಎಂ

Kurubara Sangha: ಕಾಗಿನೆಲೆ ಗುರುಪೀಠದ ಶಾಖಾಮಠದ ಭಕ್ತರ ಭಂಡಾರದ ಕುಟೀರಕ್ಕೆ ಹಿಂದೆ ನಾನೇ ಶಂಕುಸ್ಥಾಪನೆ ಮಾಡಿ, ಈಗ ಉದ್ಘಾಟನೆ ಮಾಡುತ್ತಿರುವುದು ಸಂತಸ ತಂದಿದೆ. ಕಾಗಿನೆಲೆ ಗುರುಪೀಠದ ಸ್ವಾಮಿಗಳು ಶಾಖಾಮಠದ ನಿರ್ಮಾಣಕ್ಕೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Vijayapura (Indi) News: ಅಧ್ಯಕ್ಷರಾಗಿ ಗುರುಪಾದ ಕೋಳಾರಿ, ಉಪಾಧ್ಯಕ್ಷ ಮಲ್ಲಪ್ಪ ಮಿರಗಿ ಆಯ್ಕೆ

ಅಧ್ಯಕ್ಷರಾಗಿ ಗುರುಪಾದ ಕೋಳಾರಿ, ಉಪಾಧ್ಯಕ್ಷ ಮಲ್ಲಪ್ಪ ಮಿರಗಿ ಆಯ್ಕೆ

ರೈತ ದೇಶದ ಬೆನ್ನೇಲಬು ಇಂದು ರೈತರ ಪರಿಸ್ಥಿತಿ ಅತ್ಯಂತ ಕೆಟ್ಟದಾಗಿದೆ. ಒಂದು ಕಡೆ ನಿಸರ್ಗದ ಸಮಸ್ಯೆ ಇನ್ನೊಂದು ಕಡೆ ರೈತರು ಬೆಳೆದ ದವಸ ಧಾನ್ಯಗಳಿಗೆ ಸರಿಯಾದ ನಿಯಂತ್ರಿತ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದೆ ಇರುವುದು. ರೈತರಿಗೆ ಬರಬೇಕಾದ ಸರಕಾರದ ಸೌಲಭ್ಯಗಳು ಮನೆ ಬಾಗಿಲಿಗೆ ತಲುಪಿಸಬೇಕು.

Tumkur (Gubbi) News: ಡಾ.ಬಾಬು ಜಗಜೀವನ ರಾಮ್ ರವರ 39ನೇ ಪುಣ್ಯ ಸ್ಮರಣೆ

ಡಾ.ಬಾಬು ಜಗಜೀವನ ರಾಮ್ ರವರ 39ನೇ ಪುಣ್ಯ ಸ್ಮರಣೆ

ಇಡೀ ದೇಶವನ್ನು ಆಳುವಂಥ ಸಮರ್ಥ ನಾಯಕರಾಗಿದ್ದು ಪ್ರಧಾನಮಂತ್ರಿ ಹುದ್ದೆಯನ್ನು ಹೊಂದುವ ಅರ್ಹತೆ ಇದ್ದರು ಇವರಿಗೆ ಉಪ ಪ್ರಧಾನಿಯನ್ನು ಮಾಡಿದರು. ಸ್ವತಂತ್ರ ಪೂರ್ವದಲ್ಲಿ ಸ್ವತಂತ್ರಕ್ಕಾಗಿ ಹೋರಾಡಲು ಶೋಷಿತ ವರ್ಗದವರನ್ನು ಒಟ್ಟುಗೂಡಿಸಿ ಮುಂಚೂಣಿ ನಾಯಕರಾಗಿ ಸ್ವತಂತ್ರ ಪಡೆಯಲು ಹೋರಾಡಿದವರಲ್ಲಿ ಒಬ್ಬ ನಾಯಕರಾಗಿದ್ದಾರೆ.

ಮುನಗನಹಳ್ಳಿಯಲ್ಲಿ ಮಾಯವಾಗುತ್ತಿರುವ ಕೆರೆ ಮಣ್ಣು: ಅಧಿಕಾರಿಗಳು ಸೈಲೆಂಟ್

ಕೆರೆ ಮಣ್ಣು ಅಕ್ರಮ ‌ಸಾಗಣೆ: ಕೆರೆಗಳ ಮೂಲ ಸ್ವರೂಪಕ್ಕೆ ಧಕ್ಕೆ

ಬೇಸಿಗೆ ಕಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ನಿತ್ಯ ಜೆಸಿಬಿಯೊಂದಿಗೆ ಹತ್ತಾರು ಟ್ರ್ಯಾಕ್ಟರ್‌ ಬಳಸಿ ಮಣ್ಣು ತೆಗೆಯುವ ದಂಧೆ ಹೆಚ್ಚಾಗುತ್ತಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ,ಸೇರಿದಂತೆ ಇತರ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಕೆರೆಗಳಲ್ಲಿ ಇರುವ ಹೂಳು ತೆಗೆದು ಕೆರೆಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದರೆ ಮತ್ತೊಂದು ಕಡೆ ಕೆಲವರು ಅಕ್ರಮ ಮಣ್ಣುಗಾರಿಕೆ ಯಿಂದ ಹಣ ಸಂಪಾದಿಸಲು ಕೆರೆಗಳನ್ನು ಹಾಳು ಮಾಡಲು ಹೊರಟಿದ್ದಾರೆ

Chikkaballapur News: ಶ್ರೀ ಗುರುಮೂರ್ತಿ ಸ್ವಾಮಿ, ಎಲ್ಲಮ್ಮದೇವಿ ದೇವಾಲಯದ ಅಭಿವೃದ್ಧಿಗೆ ಸಹಕರಿಸಿ

ದೇವಾಲಯದ ನೂತನ ಟ್ರಸ್ಟ್ ಉದ್ಘಾಟನಾ ಸಮಾರಂಭ

ಗುರುಮೂರ್ತಿಸ್ವಾಮಿ, ಎಲ್ಲಮ್ಮದೇವಿ ಸಹಿತ ವೆಂಕಟರಮಣಸ್ವಾಮಿ ದೇವಾಲಯವನ್ನು ಅಭಿವೃದ್ಧಿ ಪಡಿಸಿ, ದೇವಾಲಯವನ್ನು ವಿಸ್ತಾರವಾಗಿ ಕಟ್ಟಿಕೊಳ್ಳಲು ತೀರ್ಮಾನಿಸಿಕೊಂಡು, ಸದರಿ ದೇವಾಲಯದ ನೂತನ ಟ್ರಸ್ಟ್ ರಚಿಸಿಕೊಂಡು ಇಂದು ದೇವಾಲಯದ ಆವರಣದಲ್ಲಿ ನೂತನ ಟ್ರಸ್ಟ್ ನ ಉದ್ಘಾಟನಾ ಸಮಾರಂಭವನ್ನು ದೇವರನ್ನು ವಿಶೇಷ ರೀತಿಯಲ್ಲಿ ಅಲಂಕಾರ ಮಾಡುವುದರ ಮೂಲಕ ಮಾಡಲಾ ಯಿತು.

Chikkaballapur News: ಮುಖಂಡರು, ಸಂಘಟನೆಗಳಿಂದ ಶಾಸಕರಿಗೆ ಅಭಿನಂದನೆಗಳ ಮಹಾಪೂರ

189 ಕೋಟಿ ಗಂಟ್ಲಮಲ್ಲಮ್ಮ ಡ್ಯಾಂ, ಭಾಗ್ಯನಗರ ಘೋಷಣೆ ಹಿನ್ನಲೆ

ಮೊದಲಿಗೆ ಪಾತಪಾಳ್ಯ ಹೋಬಳಿಯ ಮುಖಂಡರು, ರೈತರು ಶಾಸಕರನ್ನು ಸನ್ಮಾನಿಸಿ ಗಂಟ್ಲ ಮಲ್ಲಮ್ಮ ಕಣಿವೆಯಲ್ಲಿ 189 ಕೋಟಿ ರೂಗಳ ವೆಚ್ಚದಲ್ಲಿ ಡ್ಯಾಂ ನಿರ್ಮಾಣಕ್ಕೆ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದ್ದಕ್ಕೆ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

Chikkaballapur News: ರಾಜ್ಯ ವ್ಯಾಪ್ತಿ ಜು.9ರಂದು ಬಿಸಿಯೂಟ ನೌಕರರು ತಮ್ಮ ಕೆಲಸಗಳ ಬಂದ್‌ ಮಾಡಿ, ಮುಷ್ಕರ

ಜು.9ರಂದು ಬಿಸಿಯೂಟ ನೌಕರರು ತಮ್ಮ ಕೆಲಸಗಳನ್ನು ಬಂದ್‌ ಮಾಡಿ, ಮುಷ್ಕರ

ಬಿಸಿಯೂಟ ನೌಕರರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಮತ್ತು ಅವರ ಕೆಲಸದ ಕಾರ್ಯಗಳು ಹೆಚ್ಚಿದೆ. ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರವಾಗಲೀ, ಕೇಂದ್ರ ಸರ್ಕಾರವಾಗಲಿ ವೇತನವನ್ನು ಹೆಚ್ಚಿಸಿಲ್ಲ. ಬಿಸಿಯೂಟ ಯೋಜನೆ ಪ್ರಾರಂಭವಾಗಿ 24 ವರ್ಷಗಳಾದರೂ ಸಮಸ್ಯೆಗಳು ಇನ್ನೂ ಬಗೆಹರಿದಿಲ್ಲ

Pralhad Joshi: ಬೈಕ್‌ನಿಂದ ಬಿದ್ದು ಗಾಯಗೊಂಡ ಸವಾರನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಜೋಶಿ

ಗಾಯಾಳು ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದ ಕೇಂದ್ರ ಸಚಿವ ಜೋಶಿ

Pralhad Joshi: ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದರು. ಈ ದೃಶ್ಯವನ್ನು ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಗಮನಿಸಿ, ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದಾರೆ.

Karnataka Rakshana Vedike: ಕರ್ನಾಟಕ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಯಾಗಲಿ : ಕರವೇ ಪ್ರತಿಭಟನೆ

ಕರ್ನಾಟಕ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಯಾಗಲಿ

ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡವನ್ನು ಒಡ್ಡುತ್ತಿದೆ. ೨೦೨೪ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ೯೦,೭೯೪ ವಿದ್ಯಾರ್ಥಿಗಳು ತೃತೀಯ ಭಾಷೆಯಾದ ಹಿಂದಿಯಲ್ಲಿ ಅನುತ್ತೀರ್ಣರಾಗಿದ್ದಾರೆ. ಇದು ಒಟ್ಟು ವಿದ್ಯಾರ್ಥಿಗಳಲ್ಲಿ ಸುಮಾರು ಶೇ ೨೧ ರಷ್ಟಿದೆ. ೨೦೨೫ರಲ್ಲಿ ಈ ಸಂಖ್ಯೆ ೧.೨ ಲಕ್ಷಕ್ಕಿಂತ ಹೆಚ್ಚಾಗಿದೆ ಎಂದು ಇತ್ತೀಚಿನ ವರದಿಗಳು ತಿಳಿಸಿವೆ. ಇದು ಅತ್ಯಂತ ಆಘಾತಕಾರಿ ಬೆಳವಣಿಗೆಯಾಗಿದೆ.

Chikkaballapur News: ಕ್ರಾಂತಿಕಾರಿ ನಿಲುವು ಮತ್ತು ಅಭಿವೃದ್ಧಿಗಾಗಿ ಒಲವು ಎರಡನ್ನೂ ಮೈಗೂಡಿಸಿಕೊಂಡಿದ್ದ ಅಪ್ರತಿಮ ನಾಯಕ : ಸಿಇಒ ವೈ. ನವೀನ್ ಭಟ್

ಎರಡನ್ನೂ ಮೈಗೂಡಿಸಿಕೊಂಡಿದ್ದ ಅಪ್ರತಿಮ ನಾಯಕ

ದೇಶಕ್ಕೆ ಸ್ವಾತಂತ್ರ‍್ಯ ಬಂದ ಸಂದರ್ಭದಲ್ಲಿ ದೇಶದಲ್ಲಿ ಹತ್ತು ಹಲವು ಗಂಭೀರ ಸಮಸ್ಯೆಗಳಿದ್ದವು ಅವುಗಳ ನಿವಾರಣೆಯಲ್ಲಿ ಬಾಬುಜಿ ಅವರ ಪಾತ್ರ ಬಹಳ ಮುಖ್ಯವಾಗಿದೆ.ಜಗಜೀವನ್ ರಾಮ್ ರವರ ಜೀವನ ಚರಿತ್ರೆಯನ್ನು ಅವಲೋಕಿಸಿದರೆ ಭಾರತ ದೇಶದ ಇತಿಹಾಸವೇ ಕಂಡುಬರುವುದು. ಸ್ವಾತಂತ್ರ‍್ಯ ಪೂರ್ವದಲ್ಲಿಯೇ ದಲಿತರಿಗೆ ಆಗುತ್ತಿರುವ ಅನ್ಯಾಯ,ದೌರ್ಜನ್ಯ, ಶತಮಾನಗಳ ಶೋಷಣೆಯನ್ನು ಖಂಡಿಸಿ ಧ್ವನಿ ಎತ್ತಿದವರು ಬಾಬುಜಿ ಮತ್ತು ಅಂಬೇಡ್ಕರ್ ಆಗಿದ್ದಾರೆ

Heart Attack: ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ಕ್ರಮ: ಸಚಿವ ಕೆ.ಎನ್‌. ರಾಜಣ್ಣ

ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೃದಯ ತಪಾಸಣೆಗೆ ಕ್ರಮ: ಸಚಿವ ಕೆ.ಎನ್‌. ರಾಜಣ್ಣ

Hassan News: ಹಾಸನ ಜಿಲ್ಲೆಯಂತೆ ಬೇರೆ ಜಿಲ್ಲೆಗಳಲ್ಲೂ ಹೃದಯಾಘಾತವಾಗುತ್ತಿದೆ. ಸತ್ಯ ತಿಳಿದು ವರದಿ ಮಾಡಿದರೆ ನನ್ನ ಅಭ್ಯಂತರವಿಲ್ಲ. ಆದರೆ ಸುಳ್ಳು ಮಾಹಿತಿ ಹರಡುವುದು ಸರಿಯಲ್ಲ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಲ್ಲಿ ಹೃದಯ ತಪಾಸಣೆ ನಡೆಸಲಾಗುತ್ತದೆ ಎಂದು ಸಹಕಾರ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್‌.ರಾಜಣ್ಣ ತಿಳಿಸಿದ್ದಾರೆ.

Rambhapuri Swamiji: ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀ

ಡಿ.ಕೆ. ಶಿವಕುಮಾರ್ ಅವರಿಗೆ ಉನ್ನತ ಸ್ಥಾನ ಸಿಗಲಿ: ರಂಭಾಪುರಿ ಶ್ರೀ

Rambhapuri Swamiji: ಕರ್ನಾಟಕದಲ್ಲಿ ಕಾಂಗ್ರೆಸ್ ‌ಪ್ರಚಂಡ ಬಹುಮತ ಗಳಿಸಲು ಡಿ.ಕೆ.ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾದ ನಂತರ ಬಹಳ ಶ್ರಮ ಪಟ್ಟಿರುವುದು ರಾಜ್ಯದ ಜನರಿಗೆ ತಿಳಿದಿದೆ. ಚುನಾವಣೆ ನಂತರ ನಡೆದಿರುವ ಒಳ ಒಪ್ಪಂದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಮಾತ್ರ ತಿಳಿದಿದೆ. ಆ ಒಡಂಬಡಿಕೆಯಂತೆ ನಡೆದುಕೊಂಡರೆ ಎಲ್ಲಾ ರಾಜಕಾರಣಿಗಳಿಗೆ ಗೌರವವಿದೆ ರಂಬಾಪುರಿ ಶ್ರೀಗಳು ತಿಳಿಸಿದ್ದಾರೆ.

Dating APP: ವಿವಾಹೇತರರ ಸಂಬಂಧ; ಟಾಪ್ ಲಿಸ್ಟ್‌ನಲ್ಲಿದ್ದಾರೆ ಬೆಂಗಳೂರಿಗರು

ವಿವಾಹೇತರರ ಸಂಬಂಧದಲ್ಲಿದ್ದಾರೆ 3 ಮಿಲಿಯನ್‌ಗೂ ಹೆಚ್ಚು ಭಾರತೀಯರು

ವಿವಾಹ ಎನ್ನುವುದು ಪವಿತ್ರವಾದ ಸಂಬಂಧ. ಇದಕ್ಕೆ ಬದ್ಧರಾಗಿರಬೇಕು ಎನ್ನುವ ಯಾವುದೇ ಕಟ್ಟುಪಾಡುಗಳು ಇಲ್ಲದೇ ಇದ್ದರೂ ಒಬ್ಬರಿಗೊಬ್ಬರು ಬದ್ಧರಾಗಿ, ನಿಷ್ಠರಾಗಿ ಇರಬೇಕು ಎನ್ನುವ ಶಾಸ್ತ್ರ ಸಂಪ್ರದಾಯವನ್ನು ಪಾಲಿಸಿಕೊಂಡು ಜೀವನ ಪರ್ಯಂತ ಜತೆಯಾಗಿರುವವರನ್ನು ನಾವು ನೋಡಿದ್ದೇವೆ. ಆದರೆ ಈಗ ಕಾಲ ಬದಲಾಗಿರುವುದು ಮಾತ್ರವಲ್ಲ ಮನಸ್ಸುಗಳು ಕೂಡ ಎನ್ನುವುದನ್ನು ಇತ್ತೀಚಿನ ಗ್ಲೀಡೆನ್ ಡೇಟಿಂಗ್ ಅಪ್ಲಿಕೇಶನ್ ಅಂಕಿ ಅಂಶಗಳು ಹೇಳುತ್ತವೆ.

Madenuru Manu: ಡಿ ಬಾಸ್ ಆ ವಾಯ್ಸ್‌ ನನ್ನದೇ; ನಟ ದರ್ಶನ್‌ಗೆ ಕ್ಷಮೆಯಾಚಿಸಿದ ಮಡೆನೂರು ಮನು!

ಆ ವಾಯ್ಸ್‌ ನನ್ನದೇ; ನಟ ದರ್ಶನ್‌ಗೆ ಕ್ಷಮೆಯಾಚಿಸಿದ ಮಡೆನೂರು ಮನು!

Madenuru Manu: ಡಿ ಬಾಸ್​ ನಾನೊಬ್ಬ ಪುಟ್ಟ ಕಲಾವಿದ. ಒಂದು ಸಂಘ, ಸಹವಾಸಗಳನ್ನು ಮಾಡಿ, ಜತೆಯಲ್ಲಿ ಇರುವವರನ್ನು ನಂಬಿ ಈ ಆಡಿಯೋದಿಂದ ನಾನು ಬಲಿಯಾಗಿದ್ದೇನೆ. ದಯವಿಟ್ಟು ನನ್ನ ಕ್ಷಮಿಸಿ. ಇಡೀ ಡಿ ಬಾಸ್​ ಅಭಿಮಾನಿಗಳು, ಕರ್ನಾಟಕದ ಜನತೆಗೆ ನನಗೆ ಒಂದು ಜೀವದಾನ ಕೊಟ್ಟಿದ್ದೀರಿ. ನನ್ನ ಉಸಿರು ಇರುವವರೆಗೂ ನಿಮ್ಮನ್ನು ಮರೆಯೋದಿಲ್ಲ ಎಂದು ಮಡೆನೂರು ಮನು ತಿಳಿಸಿದ್ದಾರೆ.

Karnataka Rain: ಹವಾಮಾನ ವರದಿ; ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಹವಾಮಾನ ವರದಿ; ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Weather: ಜುಲೈ 7ರಂದು ಕೂಡ ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Belagavi News: ಅಥಣಿಯಲ್ಲಿ ಭೀಕರ ಅಪಘಾತ; ಕಾರು-ಬಸ್‌ ಡಿಕ್ಕಿಯಾಗಿ ಮೂವರ ದುರ್ಮರಣ

ಕಾರು-ಸಾರಿಗೆ ಬಸ್‌ ಡಿಕ್ಕಿಯಾಗಿ ಮೂವರ ದುರ್ಮರಣ

Athani Accident: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಬಳಿ ದುರ್ಘಟನೆ ನಡೆದಿದೆ. ಕಾರು-ಬಸ್‌ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದು, ಇವರೆಲ್ಲರೂ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನವರು ಎಂದು ತಿಳಿದು ಬಂದಿದೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Stray Dog Attack: 4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ತಲೆ, ಕುತ್ತಿಗೆಗೆ ಗಂಭೀರ ಗಾಯ

4 ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ದಾಳಿ; ತಲೆ, ಕುತ್ತಿಗೆಗೆ ಗಂಭೀರ ಗಾಯ

Stray Dog Attack: ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮಗುವನ್ನು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಬೀದಿ ನಾಯಿಗಳ ನಿಯಂತ್ರಣಕ್ಕೆ ದೂರುಗಳು ಸಲ್ಲಿಕೆಯಾದರೂ ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

CM Siddaramaiah: ಎಐಸಿಸಿಯ ಒಬಿಸಿ ಸಲಹಾ ಮಂಡಳಿಗೆ ಯಾವುದೇ ನೇಮಕಾತಿ ಆಗಿಲ್ಲ: ಸಿದ್ದರಾಮಯ್ಯ ನೇಮಕ ಕುರಿತು ಕಾಂಗ್ರೆಸ್‌ ಸ್ಪಷ್ಟನೆ

ಎಐಸಿಸಿಯ ಒಬಿಸಿ ಸಲಹಾ ಮಂಡಳಿಗೆ ಯಾವುದೇ ನೇಮಕಾತಿ ಆಗಿಲ್ಲ

CM Siddaramaiah: ಎಐಸಿಸಿಯ ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ 15ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಎಐಸಿಸಿಯ ಒಬಿಸಿ ಘಟಕ ಮಾಹಿತಿ ನೀಡಿದೆ.

Kichcha Sudeep: ಕಾರ್‌ ರೇಸ್‌ ತಂಡ ಖರೀದಿಸಿದ ನಟ ಕಿಚ್ಚ ಸುದೀಪ್‌

ಕಾರ್‌ ರೇಸ್‌ ತಂಡ ಖರೀದಿಸಿದ ನಟ ಕಿಚ್ಚ ಸುದೀಪ್‌

Indian Racing Festival: ಚಾಂಪಿಯನ್‌ಶಿಪ್‌ನಲ್ಲಿ ಬೆಂಗಳೂರು, ದೆಹಲಿ, ಹೈದರಾಬಾದ್‌, ಕೋಲ್ಕತಾ, ಚೆನ್ನೈ, ಗೋವಾ ಫ್ರಾಂಚೈಸಿಗಳು ಭಾಗಿಯಾಗಲಿವೆ. ಇಂಡಿಯನ್‌ ರೇಸಿಂಗ್‌ ಲೀಗ್‌ನ ವೆಬ್‌ಸೈಟ್‌ನಲ್ಲಿರುವ ಮಾಹಿತಿ ಪ್ರಕಾರ, ಈ ವರ್ಷದ ಚಾಂಪಿಯನ್‌ಶಿಪ್‌ನಲ್ಲಿ ಒಟ್ಟು 5 ಸುತ್ತುಗಳು ನಡೆಯಲಿವೆ.

Tumkur Murder Case: ತುಮಕೂರಲ್ಲಿ ಭೀಕರ ಹತ್ಯೆ; ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಪತ್ನಿಯನ್ನೇ ಕೊಲೆಗೈದ ಪತಿ!

ಚಾಕುವಿನಿಂದ 20ಕ್ಕೂ ಹೆಚ್ಚು ಬಾರಿ ಇರಿದು ಪತ್ನಿಯನ್ನೇ ಕೊಲೆಗೈದ ಪತಿ!

Tumkur Murder Case: ತುಮಕೂರು ಹೊರವಲಯದ ಅಂತರಸನಹಳ್ಳಿಯಲ್ಲಿ ಕೊಲೆ ನಡೆದಿದೆ. ಎರಡು ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ದಂಪತಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮನೆಯಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ. ಇದೀಗ ಪತ್ನಿಗೆ 20ಕ್ಕೂ ಹೆಚ್ಚು ಬಾರಿ ಇರಿದು ಗಂಡ ಕೊಲೆ ಮಾಡಿದ್ದಾನೆ.

Soldier Dies: ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು

ಹೃದಯಾಘಾತದಿಂದ ಚಿಕ್ಕಬಳ್ಳಾಪುರದ ಯೋಧ ಸಾವು

Chikkaballapur News: ಇಂಡೋ-ಟಿಬೇಟಿಯನ್ ಬಾರ್ಡರ್ ಪೊಲೀಸ್ ಪಡೆಯಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಗ್ರಾಮದ ಯೋಧ ಗಂಗಾಧರಪ್ಪ ಅವರು, ಗ್ಯಾಂಗ್ಟಕ್‌ನಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ಹೃದಯಾಘಾತದಿಂದ ಶನಿವಾರ ಕೊನೆಯುಸಿರೆಳೆದಿದ್ದಾರೆ.

Self Harming: ಕೌಟುಂಬಿಕ ಕಲಹಕ್ಕೆ ಬೇಸತ್ತು ಪಿಎಸ್‍ಐ ಆತ್ಮಹತ್ಯೆ; ಮೂರು ಪುಟದ ಡೆತ್‌ ನೋಟ್‌ ಲಭ್ಯ

ಕೌಟುಂಬಿಕ ಕಲಹಕ್ಕೆ ಬೇಸತ್ತು ಪಿಎಸ್‍ಐ ಆತ್ಮಹತ್ಯೆ

ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ಸಬ್ ಇನ್ಸ್ಪೆಕ್ಟರ್. ದಾವಣಗೆರೆ ತಾಲೂಕಿನ ಜವಳಘಟ್ಟ ಗ್ರಾಮದ ನಿವಾಸಿಯಾಗಿದ್ದ ನಾಗರಾಜಪ್ಪ, ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯ ಸಬ್​ ಇನ್ಸ್ಪೆಕ್ಟರ್ ಆಗಿದ್ದರು.

CM Siddaramaih: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಐಐಸಿಯಲ್ಲಿ ಮಹತ್ವದ ಹುದ್ದೆ; ಜುಲೈ 15 ರಂದು ಬೆಂಗಳೂರಿನಲ್ಲಿ ಮೊದಲ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎಐಐಸಿಯಲ್ಲಿ ಮಹತ್ವದ ಹುದ್ದೆ

ಸಮುದಾಯಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅವುಗಳಿಗೆ ಪರಿಹಾರಗಳನ್ನು ಒದಗಿಸಲು ಕಾರ್ಯತಂತ್ರವನ್ನು ರೂಪಿಸಲು ರಚಿಸಲಾದ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಇತರ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿಯ ನೇತೃತ್ವವನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ.