ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Dr S L Bhyrappa: ಎಸ್.ಎಲ್. ಭೈರಪ್ಪ ಅವರು ಮನೆ ಬಿಟ್ಟು ಬಂದಿದ್ದೇಕೆ?, ಆಸ್ತಿ ದಾನ ಮಾಡಿದ್ದೇಕೆ?: ವಾಸ್ತವ ಬಿಚ್ಚಿಟ್ಟ ವಿಶ್ವೇಶ್ವರ ಭಟ್

ಎಸ್.ಎಲ್. ಭೈರಪ್ಪ ಆಸ್ತಿ ದಾನ ಮಾಡಿದ್ದೇಕೆ?, ಆಸ್ತಿ ದಾನ ಮಾಡಿದ್ದೇಕೆ?

ಡಾ. ಎಸ್‌.ಎಲ್‌. ಭೈರಪ್ಪ ಅವರ ʼಧರ್ಮಶ್ರೀʼ ಕಾದಂಬರಿಗೆ 65 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಎಸ್‌.ಎಲ್‌.ಭೈರಪ್ಪ ಸಾಹಿತ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಅವರು ಮಾತನಾಡಿದ್ದಾರೆ. ಭೈರಪ್ಪ ಅವರ ನಿಧನದ ನಂತರ ಅವರ ಆಸ್ತಿ, ಟ್ರಸ್ಟ್‌ ಕುರಿತು ಸಾರ್ವಜನಿಕ ವಲಯದಲ್ಲಿ ಮೂಡಿದ ಅನೇಕ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ.

Gubbi News: ಏ.22 ಹಾಗೂ 23 ರಂದು ಗುಬ್ಬಿ ಶ್ರೀ ಮಹೇಶ್ವರಮ್ಮ ದೇವಿ ದೇವಾಲಯ ನೂತನ ಶಿಲಾ ದೇವಾಲಯ ಲೋಕಾರ್ಪಣೆ

ಏ.22, 23 ರಂದು ನೂತನ ಶಿಲಾ ದೇವಾಲಯ ಲೋಕಾರ್ಪಣೆ

ಸೀನಪ್ಪನಹಳ್ಳಿ ಶ್ರೀ ದೊಡ್ಡಮ್ಮದೇವಿ, ಶ್ರೀ ದಾಳಿಯಮ್ಮದೇವಿ, ತಿಪ್ಪೂರು ಶ್ರೀ ಕೋಡಿಕೆಂಪಮ್ಮ ದೇವಿ, ಪೆಮ್ಮನಹಳ್ಳಿ ಶ್ರೀ ಆಂಜನೇಯಸ್ವಾಮಿ ಈ ಪರಿಹಾರ ದೇವರುಗಳನ್ನು ಪಟ್ಟಣದ ಶ್ರೀ ಚನ್ನಬಸವೇಶ್ವರ ಸ್ವಾಮಿ ದೇವಾಲಯದಿಂದ ಬುಧವಾರ ಸಂಜೆ ಮೆರವಣಿಗೆ ಮೂಲಕ ಕರೆ ತಂದು ಆಲಯ ಪ್ರವೇಶ, ಹೋಮ ಹವನಗಳು ನಡೆಸಿ ಪೂರ್ಣಾಹುತಿ ನಡೆಸಲಾಗುವುದು

Gubbi News: ಏ.21ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾಕಥಾನ್-2026

ಏ.21ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾಕಥಾನ್-2026

ಗುಬ್ಬಿಯಿಂದ ಆರಂಭವಾಗುವ ವಾಕಥಾನ್ ಮಾರ್ಗ ಮಧ್ಯೆ ಹಲವು ಮಂದಿ ಅಂಬೇಡ್ಕರ್ ಅನುಯಾ ಯಿಗಳು, ಅಭಿಮಾನಿಗಳು ಸೇರ್ಪಡೆಗೊಳ್ಳಲಿದ್ದಾರೆ. ಜೊತೆಗೆ ಅಂಬೇಡ್ಕರ್ ಅವರ ಮಾರ್ಗದರ್ಶನ, ಆದರ್ಶಗಳ ಜಾಗೃತಿ ಮೂಡಿಸುವ ಕರಪತ್ರ ಹಂಚುವ ಜೊತೆಗೆ ಯುವಕರಿಗೆ ಸಂವಿಧಾನ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ

Chikkaballapur News: ಆಲೂಗಡ್ಡೆಗೆ ಬೆಂಬಲ ಬೆಲೆ, ಸರಕಾರಿ ಕೋಲ್ಡ್ ಸ್ಟೋರೇಜ್ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

ಆಲೂಗಡ್ಡೆಗೆ ಸರಕಾರಿ ಕೋಲ್ಡ್ ಸ್ಟೋರೇಜ್ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ

ನಮ್ಮದು ನದಿ ಮೂಲಗಳಿಲ್ಲದ ಬಯಲು ಸೀಮೆ ಪ್ರದೇಶವಾಗಿದ್ದು, ರೈತರು ಸಾವಿರಾರು ಅಡಿ ಆಳದ ಬೋರ್‌ ವೆಲ್‌ಗಳನ್ನು ಕೊರೆದು ಕೃಷಿ ಮಾಡುತ್ತಿದ್ದಾರೆ. ಬಿತ್ತನೆ ಬೀಜದ ಒಂದು ಮೂಟೆಗೆ 1500ರಿಂದ 2000ರವರೆಗೆ ವೆಚ್ಚ ಮಾಡಿ ಬೆಳೆ ಬೆಳೆದರೂ, ಸೂಕ್ತ ಬೆಲೆ ಸಿಗದೇ ಭಾರೀ ನಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಸರಕಾರ ರೈತರ ನೆರವಿಗೆ ಬರಬೇಕು

Gudibande News: ಗುಡಿಬಂಡೆಯಲ್ಲಿ ಅದ್ದೂರಿ ಅಂಬೇಡ್ಕರ್, ಬಾಬು ಜಗಜೀವನ್ ರಾಂ ಜಯಂತಿ

ಗುಡಿಬಂಡೆಯಲ್ಲಿ ಅದ್ದೂರಿ ಅಂಬೇಡ್ಕರ್, ಬಾಬು ಜಗಜೀವನ್ ರಾಂ ಜಯಂತಿ

ಬಾಲ್ಯದಲ್ಲಿ ಅಸ್ಪೃಶ್ಯತೆಯಂತಹ ಅಮಾನವೀಯ ನೋವುಗಳನ್ನು ಅನುಭವಿಸಿದರೂ ಅದನ್ನು ಧೈರ್ಯದಿಂದ ಎದುರಿಸಿ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದ ಅಂಬೇಡ್ಕರ್ ಅವರ ಸಾಧನೆ ದೊಡ್ಡದು ಎಂದು ಬಣ್ಣಿಸಿದರು. ಇಂದು ನಾವು ಅನುಭವಿಸುತ್ತಿರುವ ಸಮಾನತೆ ಮತ್ತು ನೆಮ್ಮದಿಯ ಬದುಕಿಗೆ ಅವರು ಹಾಕಿಕೊಟ್ಟ ಸಂವಿಧಾನದ ಬುನಾದಿಯೇ ಮುಖ್ಯ ಕಾರಣ ಎಂದು ನೆನಪಿಸಿದ ಅವರು, ಈ ಮೌಲ್ಯಗಳನ್ನು ಯುವ ಪೀಳಿಗೆಗೆ ನಿರಂತರವಾಗಿ ತಿಳಿಸಿಕೊಡುವ ಕೆಲಸ ಆಗಬೇಕು

Gauribidanur News: ನಾರೀ ಶಕ್ತಿ ವಂದನಾ ಮಸೂದೆಗೆ ಸೋಲು: ರೂಪಾ ಅನಂತರಾಜು ತೀವ್ರ ಆಕ್ರೋಶ

ನಾರೀ ಶಕ್ತಿ ವಂದನಾ ಮಸೂದೆಗೆ ಸೋಲು: ರೂಪಾ ಅನಂತರಾಜು ತೀವ್ರ ಆಕ್ರೋಶ

ಭಾರತದ ಒಟ್ಟು ಜನಸಂಖ್ಯೆಯ ಸುಮಾರು ಅರ್ಧ ಭಾಗದಷ್ಟು ಮಹಿಳೆಯರಾಗಿದ್ದರೂ ಕೂಡ ಅವರ ಪಾಲ್ಗೊಳ್ಳುವಿಕೆ ಶಾಸನ ಮಂಡಳಿಗಳಲ್ಲಿ ತೀರ ಕಡಿಮೆ, ಈ ಅಸಮತೋಲನ ಸರಿಪಡಿಸುವ ನಿಟ್ಟಿನಲ್ಲಿ ಮಹಿಳಾ ಮೀಸಲು ಮಸೂದೆ ಒಂದು ಐತಿಹಾಸಿಕ ಹೆಜ್ಜೆಯಾಗಬಹುದಿತ್ತು. ಈ ಮಸೂದೆಯನ್ನು ಎಲ್ಲರೂ ಬೆಂಬಲ ವ್ಯಕ್ತಪಡಿಸಿದಿದ್ದರೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಆದಿವಾಸಿ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗುತ್ತಿತ್ತು

Shidlaghatta News: ಗೋಮಾಳ ಜಮೀನು ಒತ್ತುವರಿ ವಿರುದ್ಧ ದಲಿತ ಕುಟುಂಬ ಪಾದಯಾತ್ರೆ: ಆಡಳಿತಕ್ಕೆ  ಮನವಿ

ಗೋಮಾಳ ಜಮೀನು ಒತ್ತುವರಿ ವಿರುದ್ಧ ದಲಿತ ಕುಟುಂಬ ಪಾದಯಾತ್ರೆ

ಗ್ರಾಮದಲ್ಲಿನ ಗೋಮಾಳ ಜಮೀನಿನ ಮೇಲೆ ಅಕ್ರಮ ಒತ್ತುವರಿಗಳು ನಡೆಯುತ್ತಿದ್ದು, ಇದರಿಂದ ಪಶುಸಂಗೋಪನೆಗೆ ತೀವ್ರ ತೊಂದರೆ ಉಂಟಾಗಿದೆ. ನಮ್ಮ ಜೀವನೋಪಾಯಕ್ಕೆ ಆಧಾರವಾಗಿರುವ ಗೋಮಾಳ ಜಮೀನು ಉಳಿಸಿಕೊಡಬೇಕು. ಅಕ್ರಮಗಳನ್ನು ತಕ್ಷಣವೇ ತಡೆಯಬೇಕು” ಎಂದು ಈ ಧರೆ ಪ್ರಕಾಶ್ ನಾಗರೀಕರ ಪರವಾಗಿ ಒತ್ತಾಯಿಸಿದರು.

Shidlaghatta News: ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ: ಡಾ.ನವೀನ್ ಭಟ್ ವೈ

ಬೇಸಿಗೆ ಶಿಬಿರಗಳಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ವೃದ್ಧಿ: ಡಾ.ನವೀನ್ ಭಟ್ ವೈ

ತಾಲೂಕಿನ ಸುಗುಟೂರು ಜಂಗಮಕೋಟೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಜೈ ವೆಂಕಟಾಪುರ ಪಂಚಾಯತಿ ಶಾಲೆ ಹಾಗೂ ಶಿಡ್ಲಘಟ್ಟ ನಗರದ ಸರ್ಕಾರಿ ಉರ್ದು ಶಾಲೆಯ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ಬೇಸಿಗೆ ಶಿಬಿರಗಳ ಮಹತ್ವ ವಿವರಿಸಿದರು. “ಶಿಬಿರಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣಗಳು ಹಾಗೂ ಸೃಜನಾತ್ಮಕತೆಯನ್ನು ಬೆಳೆಸುತ್ತವೆ. ಇಂತಹ ಅವಕಾಶಗಳನ್ನು ಪಾಲಕರು ಮತ್ತು ಶಿಕ್ಷಕರು ಸಮರ್ಪಕವಾಗಿ ಬಳಸಿಕೊಳ್ಳ ಬೇಕು,” ಎಂದು ತಿಳಿಸಿದರು.

Chinthamani News: ಗಣತಿದಾರರ ಸಮಸ್ಯೆಗಳ ಬಗೆಹರಿಸುವಂತೆ ನೌಕರರ ಸಂಘದಿಂದ ಮನವಿ

ಗಣತಿದಾರರ ಸಮಸ್ಯೆಗಳ ಬಗೆಹರಿಸುವಂತೆ ನೌಕರರ ಸಂಘದಿಂದ ಮನವಿ

ಭಾರತ ಜನಗಣತಿ 2027(Census 2027)ರ ಜನಗಣತಿ ಕಾರ್ಯಕ್ಕೆ ನೇಮಕವಾಗಿರುವ ಶಿಕ್ಷಕರ ಸಮಸ್ಯೆ ಗಳನ್ನು ಬಗೆಹರಿಸಿ ಕೊಡುವಂತೆ ತಹಶೀಲ್ದಾರ್ ಸುದರ್ಶನ್ ಯಾದವ್ ಮತ್ತು ಪೌರಾಯುಕ್ತರಾದ ಜಿ.ಎನ್.ಚಲಪತಿ ರವರಿಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್.ಅಶೋಕ್ ಕುಮಾರ್ ನೇತೃತ್ವದಲ್ಲಿ ಮನವಿ ಪತ್ರ ನೀಡಲಾಯಿತು.

ಮಹಿಳಾ ಮೀಸಲು ವಿರೋಧಿಸಿ ಕಾಂಗ್ರೆಸ್ ಅಪರಾಧಿ ಸ್ಥಾನದಲ್ಲಿ ನಿಂತಿದೆ: ಜೋಶಿ

ಮಹಿಳಾ ಮೀಸಲು ವಿರೋಧಿಸಿ ಕಾಂಗ್ರೆಸ್ ಅಪರಾಧಿ ಸ್ಥಾನದಲ್ಲಿ ನಿಂತಿದೆ: ಜೋಶಿ

Pralhad Joshi: ಕಾಂಗ್ರೆಸ್ ಪಕ್ಷ ಶೇ.33ರಷ್ಟು ಮಹಿಳಾ ಮೀಸಲಾತಿ ಬೆಂಬಲಿಸದೇ ಇರುವುದು "ಮಹಿಳಾ ವಿರೋಧಿ" ಎಂಬುದನ್ನು ರುಜುವಾತುಪಡಿಸಿದೆ. ದೇಶದ ಒಳಿತಿಗೆ ಯಾವತ್ತೂ ಹೀಗೆ ವಿರೋಧವಾಗೇ ನಡೆದುಕೊಂಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಗಂಭೀರ ಆರೋಪ ಮಾಡಿದ್ದಾರೆ.

ರಾಜಿಯಿಲ್ಲದ ಸಾಮಾಜಿಕ ನ್ಯಾಯದ ಹರಿಕಾರ ಡಾ.ಬಿ.ಆರ್.ಅಂಬೇಡ್ಕರ್ ಮಾತ್ರ : ಚಿಂತಕ ಮುನಿರಾಜು ಎಂ ಅರಿಕೆರೆ ಅಭಿಮತ

ರಾಜಿಯಿಲ್ಲದ ಸಾಮಾಜಿಕ ನ್ಯಾಯದ ಹರಿಕಾರ ಡಾ.ಬಿ.ಆರ್.ಅಂಬೇಡ್ಕರ್ ಮಾತ್ರ

ಅಪ್ರತಿಮ ಜ್ಞಾನಿಯಾಗಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮಿಡಿ ಬದುಕನ್ನು ದಮನಿತ ಸಮುದಾ ಯಗಳ ಸಬಲೀಕರಣಕ್ಕಾಗಿ ಬಳಸಿದರು. ಎಲ್ಲರನ್ನೂ ಒಳಗೊಂಡ ಸದೃಢ ಭಾರತ ನಿರ್ಮಾಣಕ್ಕಾಗಿ ಅಂತಃಕರಣದಿಂದ ಮಿಡಿದರು. ಅವರ ಜೀವನ ವ್ಯಕ್ತಿತ್ವ ಹೋರಾಟ ಮತ್ತು ಕೊಡುಗೆಗಳ ಅರಿವಿನ ಅಗತ್ಯತೆ ಮತ್ತು ಅನಿವಾರ್ಯತೆ ಇಂದು ಹೆಚ್ಚಿದೆ. ಸಂವಿಧಾನದ ಶಕ್ತಿ ಮತ್ತು ಸೌಂದರ್ಯ ಅದರ ಅರಿವಿನಲ್ಲಿಯೇ ಇದೆ

ಲೋಕಸಭೆಯಲ್ಲಿ ನಾರೀ ಶಕ್ತಿ ವಂದನಾ ಮಸೂದೆಗೆ ಸೋಲು ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

ನಾರೀ ಶಕ್ತಿ ವಂದನಾ ಮಸೂದೆಗೆ ಸೋಲು ನಗರದಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಮಹಿಳೆಯರಿಗೆ ರಾಜಕೀಯ ದಲ್ಲಿ ಹೆಚ್ಚಿನ ಅವಕಾಶ ದೊರಕಬೇಕು.ಸಮಾಜದ ಅಭಿವೃದ್ಧಿಗೆ ಅವರ ಪಾತ್ರ ಅತ್ಯಂತ ಮಹತ್ವದ್ದು. ಆದರೆ ಮಹಿಳಾ ಮೀಸಲಾತಿಯ ವಿರೋಧ ಕಾಂಗ್ರೆಸ್ ನೇತೃತ್ವದ ಇಂಡಿ ಕೂಟದ ನಡೆ ಮಹಿಳೆಯರಲ್ಲಿ ಆಕ್ರೋಶ ಮೂಡಿಸಿದೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸು ತ್ತಾರೆ. ದೇಶದಾದ್ಯಂತ ಬಿಜೆಪಿ ಇನ್ನಷ್ಟು ಬಲವಾಗಿ ಬೆಳೆಯಲಿದೆ

ಮಹಿಳಾ ಪ್ರಾತಿನಿಧ್ಯಕ್ಕೆ ಆದ ಸೋಲು ಇಡೀ ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ : ರಾಜ್ಯ ಓಬಿಸಿ ಉಪಾಧ್ಯಕ್ಷೆ ಅಶ್ವಿನಿ ಶಂಕರ್

ಮಹಿಳಾ ಪ್ರಾತಿನಿಧ್ಯಕ್ಕೆ ಆದ ಸೋಲು ಮಹಿಳಾ ಸಂಕುಲಕ್ಕೆ ಮಾಡಿದ ಅಪಮಾನ

ಇದು ಕೇವಲ ಬಿಜೆಪಿ ಮತ್ತು ಮಿತ್ರಪಕ್ಷಗಳ ಪ್ರಯತ್ನವಲ್ಲ, ಎಲ್ಲ ಪಕ್ಷಗಳ ಪ್ರಯತ್ನ ಇದರ ಹಿಂದಿದೆ. ಆದರೆ, ನಿನ್ನೆ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಮಹಿಳಾ ವಿರೋಧಿ ಧೋರಣೆ ಅನಾವರಣ ಗೊಂಡಿದೆ. ಕಾಂಗ್ರೆಸ್‌ನ ರಾಹುಲ್‌ಗಾಂಧಿ ಮತ್ತು ಅವರ ಮಿತ್ರ ಪಕ್ಷಗಳದ್ದು ಮಹಿಳೆಯರ ವಿಚಾರ ದಲ್ಲಿ ಕೇವಲ ಮೊಸಳೆಕಣ್ಣೀರು ಮಾತ್ರ. ಅಭಿವೃದ್ಧಿಶೀಲ ರಾಷ್ಟ್ರದ ಪ್ರಯತ್ನದಲ್ಲಿ ಮಹಿಳಾ ಪಾಲ್ಗೊಳ್ಳುವಿಕೆ ಯ ಚಿಂತನೆಗೆ ಧಕ್ಕೆ ತಂದಿದ್ದಾರೆ

Mysuru News: ಮೈಸೂರಿನಲ್ಲಿ ಚಿರತೆಯಿಂದ ಅತ್ತೆಯ ರಕ್ಷಿಸಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

ಚಿರತೆಯಿಂದ ಅತ್ತೆಯ ರಕ್ಷಿಸಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ

Leopard enters house at Mysuru: ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ಸಿದ್ದಾರ್ಥ ಬಡಾವಣೆಯ ಸುರೇಶ್ ಎಂಬುವವರ ನಿವಾಸಕ್ಕೆ ಚಿರತೆಯೊಂದು ಶುಕ್ರವಾರ ನುಗ್ಗಿ, ವೃದ್ಧೆ ಮಲಗಿದ್ದ ಮಂಚದ ಕೆಳಗೇ ಮಲಗಿತ್ತು. ಈ ವೇಳೆ ಸಮಯಪ್ರಜ್ಞೆ ಮತ್ತು ಧೈರ್ಯದಿಂದ ಅತ್ತೆ ಶೈಲಜಾ (90) ಅವರನ್ನು ಸೊಸೆ ಸುಜಾತ ರಕ್ಷಣೆ ಮಾಡಿದ್ದರು. ಸುದ್ದಿ ತಿಳಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಅರಿವಳಿಕೆ ಚುಚ್ಚುಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿದಿದ್ದರು. ಹೀಗಾಗಿ ಸಾವಿನ ದವಡೆಯಿಂದ ಅತ್ತೆಯನ್ನು ರಕ್ಷಿಸಿದ್ದ ಸೊಸೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆ ಕಾರ್ಯದರ್ಶಿಯಾಗಿ ಕನ್ನಡಿಗ ಡಾ. ಸೋಮಶೇಖರ್‌ ಆಯ್ಕೆ

ರಾಜ್ಯಸಭೆ ಕಾರ್ಯದರ್ಶಿಯಾಗಿ ಕನ್ನಡಿಗ ಡಾ. ಸೋಮಶೇಖರ್‌ ಆಯ್ಕೆ

Dr. K.S. Somashekhar: ರಾಜ್ಯಸಭೆಯ ಕಾರ್ಯದರ್ಶಿಯಾಗಿ ಕನ್ನಡಿಗ ಡಾ. ಕೆ.ಎಸ್‌. ಸೋಮಶೇಖರ್‌ ಅವರನ್ನು ನೇಮಿಸಿ ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಆದೇಶ ಹೊರಡಿಸಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಮೂಲದ ಸೋಮಶೇಖರ್‌ ರಾಜ್ಯಸಭೆಯ ಇಂಟರ್‌ಪ್ರಿಟರ್‌ ಆಗಿ 1993ರಲ್ಲಿ ಸೇವೆ ಆರಂಭಿಸಿದ್ದರು.

ಮಹಿಳಾ ವಿರೋಧಿ ನಡೆಯಿಂದ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ಮುಖಭಂಗ ಆಗಲಿದೆ: ಛಲವಾದಿ ನಾರಾಯಣಸ್ವಾಮಿ

ಮುಂದಿನ ದಿನಗಳಲ್ಲಿ ಕಾಂಗ್ರೆಸ್ಸಿಗೆ ಮುಖಭಂಗ ಆಗಲಿದೆ: ಛಲವಾದಿ

Chalavadi Narayanaswamy: ಕಾಂಗ್ರೆಸ್ ಪಕ್ಷ ಇರುವುದೇ ದೇಶವನ್ನು ಪೋಷಣೆ ಮಾಡಲಿಕ್ಕಲ್ಲ. ಶೋಷಣೆ ಮಾಡಲಿಕ್ಕೆ ಎಂಬುದು ಸ್ಪಷ್ಟವಾಗಿ ಗೊತ್ತಾಗಿದೆ. ಮಸೂದೆಗೆ ಕಾಂಗ್ರೆಸ್, ಅವರ ಮಿತ್ರ ಪಕ್ಷಗಳಿಂದ ಆದ ಸೋಲು ದೇಶದಲ್ಲಿರುವ ಶೇ.50 ಮಹಿಳೆಯರಿಗೆ ಮಾಡಿದ ದ್ರೋಹ, ಅನ್ಯಾಯ, ಶೋಷಣೆ ಎಂದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

Fake Govt Job Scam: ಹಾವೇರಿಯಲ್ಲಿ ಸರ್ಕಾರಿ ಉದ್ಯೋಗದ ಆಮಿಷ ತೋರಿ 25 ನಿರುದ್ಯೋಗಿಗಳಿಗೆ ಕೋಟ್ಯಂತರ ರೂ. ವಂಚನೆ

ಸರ್ಕಾರಿ ಉದ್ಯೋಗದ ಆಮಿಷ ತೋರಿ ಕೋಟ್ಯಂತರ ರೂ. ವಂಚನೆ

ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ಉದ್ಯೋಗದ ಆಮಿಷ ತೋರಿ 25ರಿಂದ 30 ನಿರುದ್ಯೋಗಿಗಳಿಗೆ ಕೋಟ್ಯಂತರ ರೂ. ವಂಚನೆ ಎಸಗಿರುವ ಪ್ರಕರಣ ನಡೆದಿದೆ. ಪ್ರತಿಯೊಬ್ಬರಿಂದ ನಾಲ್ಕೈದು ಲಕ್ಷ ಪಡೆದು, 1 ಕೋಟಿ ರೂ.ಗೂ ಹೆಚ್ಚು ಹಣ ಪಡೆದು ಖದೀಮರು ಮೋಸ ಮಾಡಿದ್ದಾರೆ. ಈ ಬಗ್ಗೆ ಮೋಸ ಹೋದ ಅಭ್ಯರ್ಥಿಗಳು ದೂರು ದಾಖಲಿಸಿದ್ದಾರೆ.

Women Reservation Bill: ಮಹಿಳೆಯರ ಶಾಪ ಕಾಂಗ್ರೆಸ್, ಮಿತ್ರ ಪಕ್ಷಗಳಿಗೆ ತಟ್ಟದೇ ಬಿಡುವುದಿಲ್ಲ: ಆರ್. ಅಶೋಕ್

ದೇಶದ ಕೋಟ್ಯಂತರ ಮಹಿಳೆಯರಿಗೆ ಕಾಂಗ್ರೆಸ್‍ನಿಂದ ದ್ರೋಹ: ಆರ್. ಅಶೋಕ್

R Ashok: ದೇಶದ ಇತಿಹಾಸದಲ್ಲೇ ಮಹಿಳೆಯರಿಗೆ ಅವರ ಹಕ್ಕನ್ನು ಸಂವಿಧಾನದತ್ತವಾಗಿ ಕೊಡುವ ತೀರ್ಮಾನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ್ದರು. ಆದರೆ ಇದಕ್ಕೆ ಕಾಂಗ್ರೆಸ್ ಬೆಂಬಲ ನೀಡದೆ ಕೋಟ್ಯಂತರ ಮಹಿಳೆಯರ ಕನಸುಗಳ ಮೇಲೆ ಹೊಡೆತ ನೀಡಿತು. ಇದು ಕೇವಲ ಮಸೂದೆ ವಿಫಲತೆ ಅಲ್ಲ. ಮಹಿಳೆಯರ ಹಕ್ಕನ್ನು ನಿರ್ಲಕ್ಷ್ಯ ಮಾಡುವ ಕಾಂಗ್ರೆಸ್ ಅನ್ನು ಜನ ಕ್ಷಮಿಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.

Women Reservation Bill: ಮಹಿಳಾ ಮೀಸಲಾತಿ ಮಸೂದೆಗೆ ನಮ್ಮ ವಿರೋಧವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ಮಹಿಳಾ ಮೀಸಲಾತಿ ಮಸೂದೆಗೆ ನಮ್ಮ ವಿರೋಧವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

CM Siddaramaiah: ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಪಕ್ಷ ಪ್ರಾರಂಭದಿಂದಲೂ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯದಲ್ಲಿ ಮೀಸಲಾತಿ ನೀಡಲು ಬದ್ಧವಾಗಿದೆ. ನಮ್ಮ ಪಕ್ಷ ಅಧಿಕಾರದಲ್ಲಿರಲಿ, ಇರದೆ ಇರಲಿ ಸತತವಾಗಿ ಮಹಿಳಾ ಮೀಸಲಾತಿ ಪರವಾದ ನಿಲುವು ತೆಗೆದುಕೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಹಿಳಾ ಮೀಸಲು ಮಸೂದೆ ಸೋಲಿಸಿದ ಇಂಡಿ ಕೂಟವನ್ನು ದೇಶದ ನಾರಿಶಕ್ತಿ ಎಂದಿಗೂ ಕ್ಷಮಿಸಲ್ಲ: ಎಚ್‌ಡಿಕೆ

ಮಹಿಳಾ ಮೀಸಲು ಮಸೂದೆ ಸೋಲಿಸಿದವರನ್ನು ನಾರಿಶಕ್ತಿ ಕ್ಷಮಿಸಲ್ಲ: ಎಚ್‌ಡಿಕೆ

HD Kumaraswamy: ಮಹಿಳಾ ಮೀಸಲು ಮಸೂದೆಯನ್ನು ಸೋಲಿಸಿದ ಕೂಟದ ಶಕ್ತಿಗಳನ್ನು ರಾಷ್ಟ್ರದ ನಾರಿಶಕ್ತಿ ಎಂದಿಗೂ ಕ್ಷಮಿಸುವುದಿಲ್ಲ. ಇದು ಮಾತೃಶಕ್ತಿಗೆ ಆಗಿರುವ ಅಪಮಾನ. ಇದಕ್ಕೆ ಕಾರಣರಾದ ಎಲ್ಲರೂ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

Women's reservation bill: ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆಯ ತತ್ವ ವಿರೋಧಿಸಿದಂತೆ: ವಿಪಕ್ಷಗಳ ವಿರುದ್ಧ ಬಿಎಸ್‌ವೈ ಕಿಡಿ

ಮಹಿಳಾ ಮೀಸಲಾತಿಗೆ ವಿರೋಧ; ವಿಪಕ್ಷಗಳ ವಿರುದ್ಧ ಬಿಎಸ್‌ವೈ ಕಿಡಿ

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿರುವ ಬಗ್ಗೆ ಮಾಧ್ಯಮಗಳ ಜತೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಮಾತನಾಡಿದ್ದು, ಮಹಿಳೆಯರಿಗೆ ರಾಜಕೀಯದಲ್ಲಿ ಪ್ರವೇಶ ಸಿಗುವುದು ಅವರ ಹಕ್ಕು. ವಿಪಕ್ಷಗಳ ಮಹಿಳಾ ವಿರೋಧಿ ನೀತಿಯನ್ನು ಖಂಡಿಸುವುದಾಗಿ ಹೇಳಿದ್ದಾರೆ.

Pravasi Prapancha: ಶಾಂತಿ, ಅಹಿಂಸೆಯ ನೆಲೆವೀಡು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠ

ಶಾಂತಿ ಅಹಿಂಸೆಯ ನೆಲೆವೀಡು ಶ್ರೀ ಕ್ಷೇತ್ರ ಸ್ವಾದಿ ದಿಗಂಬರ ಜೈನ ಮಠ

Sonda Mutt: ಸೋಂದೆ ಜೈನ ಮಠದ 36ನೇ ಗುರುಗಳಾದ ಭಟ್ಟಾಕಲಂಕ ಸ್ವಾಮಿಗಳು ಕನ್ನಡ ಭಾಷೆ ಮತ್ತು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರು ಕನ್ನಡ ಭಾಷೆಯ ವ್ಯಾಕರಣದ ಕುರಿತು 'ಕರ್ನಾಟಕ ಶಬ್ದಾನುಶಾಸನ' ಎಂಬ ಪ್ರಸಿದ್ಧ ಗ್ರಂಥವನ್ನು ಸಂಸ್ಕೃತದಲ್ಲಿ ರಚಿಸಿದ್ದಾರೆ. ಹೊರಗಿನವರಿಗೂ ಕನ್ನಡದ ಮಹತ್ವ ತಿಳಿಯಲಿ ಎಂಬ ಉದ್ದೇಶದಿಂದ ಇದನ್ನು ಸಂಸ್ಕೃತದಲ್ಲಿ ಬರೆಯಲಾಗಿದೆ.

Women Reservation Bill: ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಮಹಿಳೆಯರಿಗೆ ಸಿಗಬಹುದಾಗಿದ್ದ ರಾಜಕೀಯ ಅಧಿಕಾರದ ಅವಕಾಶವನ್ನು ತಿರಸ್ಕರಿಸಿದ ಕಾಂಗ್ರೆಸ್ ಪಕ್ಷವನ್ನು ಮಹಿಳೆಯರು ಮುಂದಿನ ಚುನಾವಣೆಯಲ್ಲಿ ತಿರಸ್ಕರಿಸಿ ತಕ್ಕ ಪಾಠ ಕಲಿಸುತ್ತಾರೆ. ಲೋಕಸಭೆ ಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಫೇಲ್ ಆದಾಗ ಪ್ರಿಯಾಂಕ ಗಾಂಧಿ ವಿಕೃತವಾಗಿ ನಕ್ಕಿದ್ದು ದೇಶದ ಮಹಿಳೆ ಯರಿಗೆ ಮಾಡಿದ ಅವಮಾನ.

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; 50 ಅಡಿ ಮೇಲಿನಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ

ಪ್ಯಾರಾಚೂಟ್ ತರಬೇತಿ ವೇಳೆ ಅವಘಡ; ಮೇಲಿನಿಂದ ಬಿದ್ದು ಇಬ್ಬರು ಯೋಧರಿಗೆ ಗಾಯ

Ballary parachute training: ಯೋಧರ ಪ್ಯಾರಾಚೂಟ್ ತರಬೇತಿ ಅವಧಿಯಲ್ಲಿ ದುರಂತವೊಂದು ಸಂಭವಿಸಿದ್ದು, 50 ಅಡಿ ಮೇಲಿನಿಂದ ಜಿಗಿದ ಇಬ್ಬರು ಯೋಧರ ಕಾಲು ಮುರಿದಿದೆ ಎಂದು ವರದಿಯಾಗಿದೆ. ಬಳ್ಳಾರಿ ಹೊರವಲಯದ ಪೀಡಿಹಳ್ಳಿ ಪ್ಯಾರಾಚೂಟ್ ತರಬೇತಿ ನಡೆಯುತ್ತಿತ್ತು. ಬಳ್ಳಾರಿಯ ಐಟಿಐ ಕಾಲೇಜು ಮೈದಾನಕ್ಕೆ ಬಂದಿಳಿದ ಸೇನಾ ಹೆಲಿಕಾಪ್ಟ‌ರ್ ಮೂಲಕ ಚಿನ್ನರಾಜ್ ಅವರನ್ನು ಬೆಂಗಳೂರಿಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Loading...