ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

DA Hike 2025: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ತುಟ್ಟಿಭತ್ಯೆ ಶೇ.2 ಹೆಚ್ಚಳ

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ತುಟ್ಟಿಭತ್ಯೆ ಶೇ.2 ಹೆಚ್ಚಳ

Dearness Allowance: ರಾಜ್ಯ ಸರ್ಕಾರಿ ನೌಕರರಿಗೆ ಶೇ.2 ತುಟ್ಟಿಭತ್ಯೆಯನ್ನು ಹೆಚ್ಚಿಸುವ ಕಡತಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ.

Fraud Rushi Movie: ʼಫ್ರಾಡ್‍ ಋಷಿʼ ಸಿನಿಮಾದ ಮೂರನೇ ಹಾಡು ರಿಲೀಸ್‌

ʼಫ್ರಾಡ್‍ ಋಷಿʼ ಸಿನಿಮಾದ ಮೂರನೇ ಹಾಡು ರಿಲೀಸ್‌

Sandalwood News: ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆಯ ʼಫ್ರಾಡ್ ಋಷಿʼ ಚಿತ್ರದ ಮೂರನೇ ಹಾಡು ʼನೀ ಹೆಜ್ಜೆ ಇಟ್ಟ ಕಡೆಯಲ್ಲೆಲ್ಲ ಗೆಜ್ಜೆನಾದʼ ಎಂಬ ಹಾಡಿನ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಡಾ.ವಿ. ನಾಗೇಂದ್ರ ಪ್ರಸಾದ್ ಅವರು ನಮ್ ಋಷಿ ಬರೆದಿರುವ, ರಾಜೇಶ್ ಕೃಷ್ಣನ್ ಹಾಡಿರುವ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.

MLA K Y Nanjegowda: ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ, ಮರು ಮತ ಎಣಿಕೆಗೆ ಸೂಚನೆ

ಶಾಸಕ ಕೆ.ವೈ. ನಂಜೇಗೌಡ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

Karnataka Politics: 2023ರ ವಿಧಾನಸಭಾ ಚುನಾವಣೆಯಲ್ಲಿ ಮಾಲೂರು ಕ್ಷೇತ್ರದ ಮತ ಎಣಿಕೆಯಲ್ಲಿ ಅಕ್ರಮ ಪ್ರಕರಣದಲ್ಲಿ ಸೆಪ್ಟೆಂಬರ್ 16 ರಂದು ಹೈಕೋರ್ಟ್‌ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಕೆವೈ ನಂಜೇಗೌಡ ಆಯ್ಕೆಯನ್ನು ರದ್ದುಪಡಿಸಿತ್ತು. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ನಂಜೇಗೌಡರಿಗೆ ಒಂದು ತಿಂಗಳ ಅವಕಾಶ ನೀಡಿತ್ತು. ಹೀಗಾಗಿ ಅವರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು.

CM Siddaramaiah: ವಿಜ್ಞಾನ ಓದಿಯೂ ಮೌಢ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ ತಾನೇ- ಸಿಎಂ ಸಿದ್ದರಾಮಯ್ಯ ಪ್ರಶ್ನೆ

ವಿಜ್ಞಾನ ಓದಿಯೂ ಮೌಢ್ಯ ನಂಬೋದು ದಡ್ಡತನ- ಸಿಎಂ

CM inaugurates new academic building: ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ‌ ಮನೋಭಾವ ಇಲ್ಲದಿರುವುದು ದುರಂತ. ವಿಜ್ಞಾನ ಓದಿಯೂ ಹಣೆಬರಹ ಮತ್ತು ಕರ್ಮ ಸಿದ್ದಾಂತ, ಗ್ರಹಚಾರಗಳನ್ನೆಲ್ಲಾ ನಂಬುತ್ತಾರೆ ಎಂದರೆ ಇವರು ವಿಜ್ಞಾನ ಓದಿದ್ದೇ ದಂಡ ತಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Fraud case: 139 ಕಿರುತೆರೆ ನಟ-ನಟಿಯರಿಗೆ ಸೈಟ್ ಕೊಡಿಸುವುದಾಗಿ ವಂಚನೆ; ಬಿಲ್ಡರ್ ಸೇರಿ ಐವರ ವಿರುದ್ಧ ಎಫ್ಐಆರ್

139 ಕಿರುತೆರೆ ನಟ-ನಟಿಯರಿಗೆ ಸೈಟ್ ಕೊಡಿಸುವುದಾಗಿ ವಂಚನೆ; ಎಫ್ಐಆರ್ ದಾಖಲು

Sandalwood News: ನಕಲಿ ಲೇಔಟ್ ಪ್ಲ್ಯಾನ್ ಹಾಗೂ ದಾಖಲಾತಿ ಸೃಷ್ಟಿಸಿ ವಂಚನೆ ಮಾಡಿದ್ದು, ಬರೋಬ್ಬರಿ 1.6 ಕೋಟಿ ಹಣ ವಂಚಿಸಲಾಗಿದೆ ಎಂದು ದೂರು ಸಲ್ಲಿಕೆಯಾಗಿದೆ. ಭಾವನ ಬೆಳೆಗೆರೆ, ಶರತ್ ಚಂದ್ರ, ರಾಹುಲ್ ಸೇರಿ 139 ಜನರಿಗೆ ವಂಚನೆ ಆರೋಪ ಕೇಳಿಬಂದಿದೆ.

ಡಾ. ಥಾಮಸ್ ಚಾಂಡಿಯವರ ಪ್ರತಿಮೆ ಸ್ಥಾಪಿಸಿ, ಹೊಸ ಓಪಿಡಿ ವಿಭಾಗ ಉದ್ಘಾಟಿಸಿದ ಹೊಸ್ಮಟ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ಸ್

ಹೊಸ ಓಪಿಡಿ ವಿಭಾಗ ಉದ್ಘಾಟಿಸಿದ ಹೊಸ್ಮಟ್ ಮಲ್ಟಿಸ್ಪೆಷಾಲಿಟಿ ಹಾಸ್ಪಿಟಲ್ಸ್

ಸಂಸ್ಥಾಪಕರ ದಿನಾಚರಣೆ ಸಂದರ್ಭದಲ್ಲಿ ಹೊಸ್ಮಟ್ ಮಲ್ಟಿಸ್ಪೆಶಾಲಿಟಿ ಹಾಸ್ಪಿಟಲ್ಸ್, ತನ್ನ ಸಂಸ್ಥಾಪಕ ರಾದ ಡಾ. ಥಾಮಸ್ ಚಾಂಡಿಯವರಿಗೆ ಗೌರವ ಸಲ್ಲಿಸುವ ಸಲುವಾಗಿ ಅವರ ಪ್ರತಿಮೆಯನ್ನು ಸ್ಥಾಪಿಸಿದೆ ಮತ್ತು ಮಗ್ರಾತ್ ರಸ್ತೆಯಲ್ಲಿರುವ ಆಸ್ಪತ್ರೆಯಲ್ಲಿ ಹೊಸ ಓಪಿಡಿ ವಿಭಾಗವನ್ನು ಪ್ರಾರಂಭಿಸಿದೆ.

ಮಾನಸಿಕ ಆರೋಗ್ಯ ಕಳವಳಕ್ಕೆ ಮಾದಕ ವಸ್ತುಗಳ ಬಳಕೆ ಕಾರಣ: ಎಂಪವರ್

ಮಾನಸಿಕ ಆರೋಗ್ಯ ಕಳವಳಕ್ಕೆ ಮಾದಕ ವಸ್ತುಗಳ ಬಳಕೆ ಕಾರಣ: ಎಂಪವರ್

ಬೆಂಗಳೂರಿನಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳು ಮತ್ತು ಕಳವಳಗಳು ವೇಗದ ನಗರ ಜೀವನ ಶೈಲಿಯ ಒತ್ತಡಗಳನ್ನು ಪ್ರತಿಬಿಂಬಿಸುತ್ತಿವೆ. ಆತಂಕ ಮತ್ತು ಭಯ ಮತ್ತು ಆತಂಕದ(ಪ್ಯಾನಿಕ್) ಅಸ್ವಸ್ಥತೆಗಳು ಪ್ರಚಲಿತದಲ್ಲಿವೆ, ಇವು ಹೆಚ್ಚಾಗಿ ಶೈಕ್ಷಣಿಕ, ವೃತ್ತಿ ಮತ್ತು ಸಾಮಾಜಿಕ ಒತ್ತಡಗಳಿಂದ ಪ್ರಚೋದಿಸಲ್ಪಡು ತ್ತವೆ. ಮಾನಸಿಕ ಖಿನ್ನತೆಯು ಸಹ ಸಾಮಾನ್ಯವಾಗಿದೆ.

Self Harming: ಶಾಲಾ ಕಟ್ಟಡದಿಂದ ಕೆಳಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಶಾಲಾ ಕಟ್ಟಡದಿಂದ ಕೆಳಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Bengaluru: ಶಾಲೆಯ ಆಡಳಿತ ಮಂಡಳಿ ವಿದ್ಯಾರ್ಥಿಯ ಮನೆಯವರಿಗೆ ಕಳಿಸಿದ ಆಂತರಿಕ ಪತ್ರದ ಪ್ರಕಾರ, ಶಾಲೆಯಲ್ಲಿ ಮಕ್ಕಳ ಬೆಳಗಿನ ಅಸೆಂಬ್ಲಿ ಸಮಯದಲ್ಲಿ ವಿದ್ಯಾರ್ಥಿ ಶಾಲೆಯ ಎರಡನೇ ಮಹಡಿಯಿಂದ ಹಾರಿದ್ದಾನೆ ಎಂದು ಹೇಳಲಾಗಿದೆ. ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ

Gold Rate Oct 14th 2025: ಅಬ್ಬಾ... ಚಿನ್ನದ ದರದಲ್ಲಿ ಇಷ್ಟೊಂದು ಏರಿಕೆ! ಸ್ವರ್ಣ ಪ್ರಿಯರಿಗೆ ಬಿಗ್‌ ಶಾಕ್‌

ಚಿನ್ನದ ದರದಲ್ಲಿ ಭಾರೀ ಏರಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold and Silver Rate today: ಇಂದು 22ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂ. ಏರಿಕೆ ಕಂಡಿದ್ದು, 11,795 ರೂ. ಆಗಿದೆ. 24 ಕ್ಯಾರಟ್‌ 1 (Gold Price) ಗ್ರಾಂ ಚಿನ್ನದ ದರದಲ್ಲಿ 328 ರೂ. ಏರಿಕೆ ಕಂಡು, 12,868 ರೂ ಆಗಿದೆ.

Deepavali Festival: ದೀಪಾವಳಿಗೆ ಬೆಂಗಳೂರಿನಿಂದ ಮಂಗಳೂರು, ಹುಬ್ಬಳ್ಳಿ, ಬೆಳಗಾವಿಗೆ ವಿಶೇಷ ರೈಲು

ದೀಪಾವಳಿಗೆ ಮಂಗಳೂರು, ಹುಬ್ಬಳ್ಳಿ, ಬೆಳಗಾವಿಗೆ ವಿಶೇಷ ರೈಲು

Special Trains: ದೀಪಾವಳಿ ಹಬ್ಬ ಹಾಗೂ ಮುಂದಿನ ವಾರಾಂತ್ಯಗಳು ಒಟ್ಟಿಗೆ ಬಂದಿರುವುದರಿಂದ ಈ ಬಾರಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿಯ ವಿಶೇಷ ಬಸ್ಸುಗಳ ಜೊತೆಗೆ ರೈಲ್ವೆ ಇಲಾಖೆಯೂ ಹೆಚ್ಚಿನ ರೈಲುಗಳನ್ನು ರಾಜಧಾನಿಯಿಂದ ಮಂಗಳೂರು, ಬೆಳಗಾವಿ, ಹುಬ್ಬಳ್ಳಿಗೆ ಹೊರಡಿಸಿದೆ.

Self Harming: ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ

Udupi news: ಮೃತ ಸುದೀಪ್ ಭಂಡಾರಿ ಹೆಬ್ರಿಯಲ್ಲಿ ವೈನ್ ಶಾಪ್ ನಡೆಸಿಕೊಂಡಿದ್ದು ಅತ್ಯಂತ ಸರಳ ವ್ಯಕ್ತಿತ್ವದವರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇವರ ತಂದೆ ಸಜ್ಜನ ರಾಜಕಾರಣಿ ಎಂದೇ ಖ್ಯಾತರಾಗಿದ್ದು, ಕಾರ್ಕಳ ಕ್ಷೇತ್ರದಿಂದ ಎರಡು ಬಾರಿ ಆಯ್ಕೆಯಾಗಿ ಸೇವೆ ಸಲ್ಲಿಸಿದ್ದರು.

Deepavali festival: ದೀಪಾವಳಿ ಹಬ್ಬದ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿಯಿಂದ 2500 ಹೆಚ್ಚುವರಿ ಬಸ್‌

ದೀಪಾವಳಿ ಹಬ್ಬದ ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿಯಿಂದ 2500 ಹೆಚ್ಚುವರಿ ಬಸ್‌

Bengaluru: ಹೆಚ್ಚುವರಿ ಬಸ್‌ಗಳು ಮೆಜೆಸ್ಟಿಕ್‌ನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು ರಸ್ತೆ ಬಸ್‌ ನಿಲ್ದಾಣ ಹಾಗೂ ಶಾಂತಿನಗರ ಬಿಎಂಟಿಸಿ ಬಸ್‌ ನಿಲ್ದಾಣದಿಂದ ಕಾರ್ಯಾಚರಣೆಗೊಳ್ಳಲಿವೆ. ಈ ಹೆಚ್ಚುವರಿ ಬಸ್‌ಗಳು ವಿವಿಧ ನಗರಗಳಿಂದ ಬೆಂಗಳೂರಿಗೆ ಅ.22ಹಾಗೂ 26ರಂದು ಸೇವೆ ನೀಡಲಿವೆ.

Deepavali Decoration 2025: ಬೆಳಕಿನ ಹಬ್ಬದ ಅಲಂಕಾರಕ್ಕೆ ಲಗ್ಗೆ ಇಟ್ಟ ಆಕಾಶ ದೀಪಗಳು

ಬೆಳಕಿನ ಹಬ್ಬದ ಅಲಂಕಾರಕ್ಕೆ ಲಗ್ಗೆ ಇಟ್ಟ ಆಕಾಶ ದೀಪಗಳು

Deepavali Decoration: ದೀಪಾವಳಿ ಹಾಗೂ ಕಾರ್ತಿಕ ಮಾಸದಲ್ಲಿನ ಅಲಂಕಾರಕ್ಕಾಗಿ ಮಾರುಕಟ್ಟೆಯಲ್ಲಿ ನಾನಾ ಬಗೆಯ ಆಕರ್ಷಕ ಆಕಾಶ ದೀಪಗಳು/ಆಕಾಶ ಬುಟ್ಟಿಗಳು ಅಥವಾ ಸ್ಕೈ ಲ್ಯಾಂಟೆರ್ನ್‌ಗಳು ಆಗಮಿಸಿವೆ. ಯಾವ್ಯಾವ ಬಗೆಯವು ಮಾರುಕಟ್ಟೆಗೆ ಬಂದಿವೆ? ಎಂಬುದರ ಬಗ್ಗೆ ಇಲ್ಲಿದೆ ವರದಿ.

Self Harming: 3 ತಿಂಗಳಿಂದ ಸಂಬಳ ದೊರೆಯದ್ದಕ್ಕೆ ಗ್ರಂಥಪಾಲಕಿ ಆತ್ಮಹತ್ಯೆ

3 ತಿಂಗಳಿಂದ ಸಂಬಳ ದೊರೆಯದ್ದಕ್ಕೆ ಗ್ರಂಥಪಾಲಕಿ ಆತ್ಮಹತ್ಯೆ

Kalaburagi news: ವೇತನ ಕೇಳಲು ತೆರಳಿದಾಗ ಕೀಳಾಗಿ ಕಾಣುತ್ತಿದ್ದರು. ಸಂಬಂಧಿಸಿದ ಅಧಿಕಾರಿಗಳ ಕೈ, ಕಾಲು ಮುಗಿದರೂ ಕರುಣೆ ಬರಲಿಲ್ಲ. ನನ್ನ ಪರಿಸ್ಥಿತಿ ಬೇರೆ ಗ್ರಂಥಪಾಲಕರಿಗೆ ಬರಬಾರದು. ಹೀಗಾಗಿ ಇಂತಹ ನಿರ್ಧಾರ ಮಾಡಿರುವೆ ಎಂದು ಭಾಗ್ಯವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

Actor Raju Talikote: ಇಂದು ಚಿಕ್ಕಸಿಂದಗಿಯಲ್ಲಿ ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ

ಇಂದು ಚಿಕ್ಕಸಿಂದಗಿಯಲ್ಲಿ ಹಾಸ್ಯನಟ ರಾಜು ತಾಳಿಕೋಟೆ ಅಂತ್ಯಕ್ರಿಯೆ

Vijayapura: `ಕಲಿಯುಗದ ಕುಡುಕ' ನಾಟಕ ಮುಖಾಂತರ ತುಂಬಾ ಪ್ರಸಿದ್ಧಿ ಪಡೆದ ರಾಜು ತಾಳಿಕೋಟೆ ನಿರ್ದೇಶಕ ಆನಂದ್ ಪಿ ರಾಜು ಅವರ `ಹೆಂಡ್ತಿ ಅಂದ್ರೆ ಹೆಂಡ್ತಿ' ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿರಂಗಕ್ಕೂ ಬಂದರು. ನಿರ್ದೇಶಕ ಯೋಗರಾಜ್ ಭಟ್ ಅವರ ‘ಮನಸಾರೆ’ (2009) ಚಿತ್ರದ ಮೂಲಕ ಇವರು ಜನಪ್ರಿಯತೆ ಗಳಿಸಿದರು.

Karnataka Weather: ಇಂದು ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಆರ್ಭಟಿಸಲಿದೆ ಮಳೆ!

ಇಂದು ರಾಜ್ಯದ 25ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30°C ಮತ್ತು 20°C ಇರುವ ಸಾಧ್ಯತೆ ಇದೆ.

Lokayukta Raid: ಭ್ರಷ್ಟರಿಗೆ ಶಾಕ್‌, ಚಿತ್ರದುರ್ಗದಲ್ಲಿ ಲೋಕಾಯುಕ್ತ ತಂಡಗಳ ದಾಳಿ

ಭ್ರಷ್ಟರಿಗೆ ಶಾಕ್‌, ಚಿತ್ರದುರ್ಗದಲ್ಲಿ ಲೋಕಾಯುಕ್ತ ತಂಡಗಳ ದಾಳಿ

Chitradurga: ಚಿತ್ರದುರ್ಗದ ತರಳಬಾಳು ನಗರದಲ್ಲಿರುವ ಅಧಿಕಾರಿ ಚಂದ್ರಕಾಂತ್ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಕೃಷಿ ಇಲಾಖೆ ಕಚೇರಿಯಲ್ಲಿ ಪರಿಶೀಲನೆ ನಡೆಸಲಾಗಿದೆ. ಹೊಳಲ್ಕೆರೆ ತಾಲೂಕಿನ ಟಿ. ನುಲೇನೂರು ಗ್ರಾಮದ ಮನೆಯಲ್ಲೂ ಶೋಧ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Chikkaballapur News: ಬೆಂಬಲ ಬೆಲೆಯಡಿ ರಾಗಿ,ಭತ್ತ,ಬಿಳಿಜೋಳ ಖರೀದಿಗೆ  ನೋಂದಣಿ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ  ರೈತರಲ್ಲಿ ಮನವಿ

ಬೆಂಬಲ ಬೆಲೆಯಡಿ ರಾಗಿ,ಭತ್ತ,ಬಿಳಿಜೋಳ ಖರೀದಿಗೆ  ನೋಂದಣಿ ಮಾಡಿಕೊಳ್ಳಿ

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಭತ್ತ, ಸಿರಿಧಾನ್ಯ ಮತ್ತು ಬಿಳಿ ಜೋಳ ಮಾರಾಟ ಮಾಡಲು ಇಚ್ಛಿಸುವ  ರೈತರ ನೋಂದಣಿ ಪ್ರಕ್ರಿಯೆಯು ಈಗಾಗಲೇ ಜಿಲ್ಲೆಯಲ್ಲಿ ಪ್ರಾರಂಭವಾಗಿದ್ದು, ಆಸಕ್ತ ರೈತರು ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ತೆರೆದಿರುವ ನೋಂದಣಿ ಕೇಂದ್ರಗಳನ್ನು ಸಂಪರ್ಕಿಸಿ ಕೂಡಲೆ ನೋಂದಣಿ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ರೈತರಲ್ಲಿ ಮನವಿ ಮಾಡಿದರು.

ರ‍್ಯಾಂಪ್  ಯೋಜನೆಯಡಿಯಲ್ಲಿ ಎಕ್ಸ್‌ ಪೋರ್ಟ್ ಪ್ರಮೋಷನ್ ಅಂಡ್ ಫೆಲಿಸಿಟೇಷನ್ ಕುರಿತು ಒಂದು ದಿನದ ಜಾಗೃತಿ ಕಾರ್ಯಾಗಾರ

ಒಂದು ದಿನದ ಜಾಗೃತಿ ಕಾರ್ಯಾಗಾರ

ಅ.೧೦ ರಂದು ಗೌರಿಬಿದನೂರು ತಾಲ್ಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶ ಜಿಟಿಟಿಸಿ  ಸಭಾಂಗಣ ದಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ಜಾಗೃತಿ ಕಾರ್ಯಗಾರವನ್ನು ಮಾಜಿ ಕೃಷಿ ಸಚಿವರು ಹಾಗೂ ಗೌರಿಬಿದನೂರು ಕೈಗಾರಿಕಾ ಸಂಘ ಅಧ್ಯಕ್ಷ ಎನ್.ಹೆಚ್. ಶಿವಶಂಕರರೆಡ್ಡಿ  ಉದ್ಘಾಟನೆ ನೆರವೇರಿಸಿದರು.

Free Tobacco Campaign: ಡಿ.೯ ರವರೆಗೆ ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ

ಡಿ.೯ ರವರೆಗೆ ಜಿಲ್ಲೆಯಲ್ಲಿ ತಂಬಾಕು ಮುಕ್ತ ಯುವ ಅಭಿಯಾನ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಗ್ರಾಮೀಣ ಭಾಗದ ಸಾರ್ವ ಜನಿಕರಿಗೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ವ್ಯಸನದಿಂದ ಹೊರ ಬರಲು ತಂಬಾಕು ವ್ಯಸನ ಮುಕ್ತ ಕೇಂದ್ರಗಳಲ್ಲಿ ದೊರೆಯುವ  ಸೌಲಭ್ಯಗಳ ಬಗ್ಗೆ ತಿಳಿಸಿ ಹಳ್ಳಿಗಳನ್ನು ತಂಬಾಕು ಮುಕ್ತ ಗ್ರಾಮಗಳನ್ನಾಗಿಸಲು ಪ್ರೇರೆಪಿಸುವುದು.

ವಿಶಿಷ್ಟವಾಗಿ ಜನ್ಮದಿನ ಆಚರಿಸಿದ ಹಿರಿಯ ವಕೀಲ ಮುನೇಗೌಡರ ಪುತ್ರ ಕಿಶಲ್ ವತ್ಸ

ಜನ್ಮದಿನ ಆಚರಿಸಿದ ಹಿರಿಯ ವಕೀಲ ಮುನೇಗೌಡರ ಪುತ್ರ ಕಿಶಲ್ ವತ್ಸ

ನನ್ನ ಮಗನ ಕಳೆದ ೧೨ ವರ್ಷಗಳಿಂದಲೂ ನನ್ನ ಮಗನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುವ ಪರಿಪಾಠ ಬೆಳೆಸಿಕೊಂಡಿಲ್ಲ. ಬದಲಿಗೆ ಅನಾಥಾಶ್ರಮ,  ವೃದ್ಧಾಶ್ರಮ,ಶಾಲೆಯ ಆವರಣ, ಇವತ್ತು ಮೀನುಗಾರರ ಕಾಲೋನಿ ಹೀಗೆ ಜನರ ನಡುವೆ ಆಚರಿಸುವ ಮೂಲಕ ಅವರ ಆಶೀರ್ವಾದ ವನ್ನು ಮಗನಿಗೆ ಕೊಡಿಸುತ್ತಾ ಬಂದಿದ್ದೇವೆ.

ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ: ಇಬ್ಬರ ಬಂಧನ

ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

ಇಬ್ಬರು ಆರೋಪಿಗಳು ಬಲವಂತವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಲ್ಲದೆ ಕೊಲೆ ಬೆದರಿಕೆಯೊಡ್ಡಿ ಆಕೆಯ ಕಿವಿಯೋಲೆಗಳನ್ನು ಕಿತ್ತುಕೊಂಡಿದ್ದಾರೆ ಎನ್ನಲಾಗಿದ್ದು ಅಂದೇ ರಾತ್ರಿ ತಿಪ್ಪೇಹನಹಳ್ಳಿಯ ಬಳಿಯ ಪೆಟ್ರೋಲ್ ಬಂಕ್ ಬಳಿ ಆಕೆಯನ್ನು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

Chikkaballapur News: ಮತಗಳ್ಳತನ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಎನ್.ಕೇಶವರೆಡ್ಡಿ

ಮತಗಳ್ಳತನ ಸಂವಿಧಾನ ಮತ್ತು ಪ್ರಜಾಪ್ರಭುತ್ವಕ್ಕೆ ಮಾರಕ

ಭಾರತ ವಿಶ್ವದಲ್ಲಿಯೇ ಅತ್ಯಂತ ಸಮರ್ಥ ಹಾಗೂ ಗಟ್ಟಿತಳಹದಿಯ ಮೇಲೆ ನಿಂತಿರುವ ಯಶಸ್ವೀ ಪ್ರಜಾ ಪ್ರಭುತ್ವ ರಾಷ್ಟ್ರವಾಗಿದೆ. ಇಲ್ಲಿನ ಜನಪ್ರತಿನಿಧಿಗಳು ಜನರ ಮತದಾನದ ಹಕ್ಕಿನಿಂದ ಆರಿಸಿ ಬರುತ್ತಾರೆ. ಈ ಪ್ರಕ್ರಿಯೆಯನ್ನು ಚುನಾವಣಾ ಆಯೋಗ ನಡೆಸುತ್ತಾ ಬಂದಿದೆ. ಇದೊಂದು ಸ್ವತಂತ್ರ ಆಯೋಗ ವಾಗಿದ್ದರೂ ಕೇಂದ್ರಸರಕಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ಮತಗಳ್ಳತನ ತಡೆಯು ವಲ್ಲಿ ವಿಫಲವಾಗುತ್ತಿರುವುದು ಆತಂಕದ ಸಂಗತಿಯಾಗಿದೆ ಎಂದರು.

Bagepally News: ಭೋವಿ ಸಮುದಾಯದ ಶಂಕರಪ್ಪಗೆ ನ್ಯಾಯ ಕೊಡುವಲ್ಲಿ ಪೊಲೀಸರು ವಿಫಲ :  ಭೋವಿ ಸಂಘದ ಜಿಲ್ಲಾಧ್ಯಕ್ಷ ಪಿ.ಡಿ.ವೆಂಕಟರವಣ ಆರೋಪ

ಭೋವಿ ಸಮುದಾಯದ ಶಂಕರಪ್ಪಗೆ ನ್ಯಾಯ ಕೊಡುವಲ್ಲಿ ಪೊಲೀಸರು ವಿಫಲ

ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಜಾತಿನಿಂದನೆ ಕೇಸು ದಾಖಲಾಗಿದ್ದರೂ ಸಹ ಇದುವರೆವಿಗೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಆರೋಪಿಸಿದ ಅವರು ತಹಶೀಲ್ದಾರ್ ,ಉಪನೊಂದ ಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಮ್ಮ ಸಮುದಾಯದ ಶಂಕರಪ್ಪ ಅನ್ಯಾಯವಾಗಿದೆ, ನ್ಯಾಯ ಸಿಗದಿದ್ದರೆ ಮುಂದಿನ ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಭೋವಿ ಸಂಘದ ವತಿಯಿಂದ ಹೋರಾಟಕ್ಕೆ ಮುಂದಾಗಬೇಕಾಗುತ್ತೆ ಎಂದು ಎಚ್ಚರಿಕೆ ನೀಡಿದರು

Loading...