ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ ಬರೆದ ಗ್ರಾಮ ಲೆಕ್ಕಾಧಿಕಾರಿ
ಕಂದಾಯ ಇಲಾಖೆಯಲ್ಲಿ ಸಮರ್ಪಕವಾಗಿ ನಿರ್ವಹಿಸಿದರೂ ಮೇಲಧಿಕಾರಿಳು ಕಿರುಕುಳ ನೀಡುತ್ತಿದ್ದಾರೆ. ವಿನಾಕಾರಣ ಮೇಲಿಂದ ಮೇಲೆ ನೋಟಿಸ್ ನೀಡಿರುವುದಲ್ಲದೆ, ಕಳೆದ 2 ತಿಂಗಳಿಂದ ವೇತನ ತಡೆಹಿಡಿಯಲಾಗಿದೆ. ನನಗೆ ಅನಾರೋಗ್ಯ ಪೀಡಿತ ತಾಯಿ ಇದ್ದಾರೆ. ನನಗೂ ಆರೋಗ್ಯ ಸಮಸ್ಯೆ ಇರುವುದರಿಂದ ಜೀವನ ಕಷ್ಟವಾಗಿದೆ. ಹೀಗಾಗಿ ದಯಾಮರಣಕ್ಕೆ ಅನುಮತಿ ನೀಡಬೇಕು ಎಂದು ರಾಷ್ಟ್ರಪತಿಗಳಿಗೆ ಸರ್ಕಾರಿ ನೌಕರ ಮನವಿ ಮಾಡಿದ್ದಾರೆ.