ಇಂದು ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ? ಮಳೆ ಯಾವಾಗ?
Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶ ಇರಲಿದ್ದು, ಮಧ್ಯಾಹ್ನ ಅಥವಾ ಸಂಜೆಯ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಪೆಟ್ರೊನಾಸ್ ಲೂಬ್ರಿಕೆಂಟ್ಸ್ ಇಂಟರ್ ನ್ಯಾಷನಲ್ (ಪಿಎಲ್ಐ) ಕಂಪನಿಯು ಮುಂದಿ ನ ಮೂರು ವರ್ಷಗಳ ಕಾಲ ಟಿವಿಎಸ್ ರೇಸಿಂಗ್ ನ ಮುಖ್ಯ ಪ್ರಾಯೋಜಕರಾಗಿ ಮುಂದು ವರಿಯ ಲಿದ್ದು, ಭಾರತದ ಮೋಟಾರ್ ಸ್ಪೋರ್ಟ್ ಅನ್ನು ಉತ್ತಮಗೊಳಿಸುವ ಪೆಟ್ರೊನಾಸ್ ಸಂಸ್ಥೆಯ ಬದ್ಧತೆಗೆ ಇದು ಸಾಕ್ಷಿಯಾಗಿದೆ. ಈ ಸಹಯೋಗವು ಉತ್ತಮ ಗುಣಮಟ್ಟದ ಲೂಬ್ರಿ ಕೆಂಟ್ ವಿಭಾಗಕ್ಕೂ ವಿಸ್ತರಿಸಿದ್ದು, ಪೆಟ್ರೊನಾಸ್ ಸಂಸ್ಥೆಯು ಟಿವಿಎಸ್ ಟಿಆರ್ಯು4 ಬ್ರ್ಯಾಂಡ್ ಅಡಿಯಲ್ಲಿ ಪ್ರೀಮಿಯಂ ಸೆಮಿ ಮತ್ತು ಫುಲ್ ಸಿಂಥೆಟಿಕ್ ಆಯಿಲ್ ಗಳನ್ನು ಪೂರೈಸುತ್ತದೆ.
Upper Krishna Project: ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ 2024-25ನೇ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆದಿದೆ. ಆಲಮಟ್ಟಿ, ನಾರಾಯಣಪುರ ಡ್ಯಾಂನಿಂದ ಸೇರಿ ಪ್ರತಿ ದಿನ 0.8ಂಟಿ.ಎಂ.ಸಿ ದರದಂತೆ ಹರಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
2024ರ ಏಪ್ರಿಲ್ 3ರಂದು ಲಚ್ಯಾಣ ಗ್ರಾಮದಲ್ಲಿ ಕೊಳೆಬಾವಿಗೆ ಬಿದ್ದಿದ್ದ ಮಗು ಸಾತ್ವಿಕ ಗುಜ ಗೊಂಡನನ್ನು ಸ್ಥಳೀಯರ ಜೆಸಿಬಿ, ಹಿಟ್ಯಾಚಿ, ಟ್ರ್ಯಾಕ್ಟರ್ ಬ್ರೇಕರ್ಸ್, ಬೋರ್ವೆಲ್ ಕ್ಯಾಮೆರಾ ಹೀಗೆ ವಿವಿಧ ಯಂತ್ರೋಪಕರಣಗಳನ್ನು ಬಳಸಿಕೊಂಡು ರಕ್ಷಣಾ ತಂಡವು ಸತತ 22 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬಾಲಕ ಸಾತ್ವಿಕನನ್ನು ಸಾವಿನ ದವಡೆಯಿಂದ ಪಾರುಮಾಡಿ ಹೊರಗೆ ತರುವಲ್ಲಿ ಯಶಸ್ವಿ ಯಾಗಿತ್ತು.
ಪದ್ಮಭೂಷಣ ಗೌರವ ಪುರಸ್ಕೃತರಾದ ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಅನಂತನಾಗ್ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಬೆಂಗಳೂರಿನಲ್ಲಿ ಇಂದು ಸನ್ಮಾನಿಸಿ, ಅಭಿನಂದಿಸಿದರು. ಇದೇ ವೇಳೆ ಕಲಾವಿದರಾದ ಅನಂತನಾಗ್ ಮತ್ತು ಗಾಯತ್ರಿ ಅವರ ಕುಶಲೋಪರಿ ವಿಚಾರಿಸಿದ ಸಚಿವರು, ಪರಸ್ಪರ ಹೋಳಿ ಹಬ್ಬದ ಶುಭಾಶಯ ಕೋರಿದರು. ಈ ಕುರಿತ ವಿವರ ಇಲ್ಲಿದೆ.
Kanive Lakshmi Narasimhaswamy Rathotsava: ಪಾವಗಡದ ಕಣಿವೆ ಲಕ್ಷ್ಮೀ ನರಸಿಂಹಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ಅಗಮಿಸಿದ್ದ ಸಹಸ್ರಾರು ಭಕ್ತರಿಗೆ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲ ಸೌಲಭ್ಯದ ವ್ಯವಸ್ಥೆ ಮಾಡಲಾಗಿತ್ತು. ಜತೆಗೆ ಕೆಲ ಭಕ್ತರು ಜಾತ್ರೆಗೆ ಬಂದವರಿಗೆ ಪಾನಕ, ಮಜ್ಜಿಗೆ ವಿತರಣೆ ಮಾಡಿದರು.
ಹೊಸ ಕ್ಯೂಎಸ್ ಶ್ರೇಯಾಂಕದಲ್ಲಿ ಮಾಹೆ, ಲೈಫ್ ಸೈನ್ಸಸ್ ಮತ್ತು ಮೆಡಿಸಿನ್, ಕೆಮಿಸ್ಟ್ರಿ, ಬಯಾಲಾಜಿಕಲ್ ಸೈನ್ಸಸ್, ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫರ್ಮೇಷನ್ ಸಿಸ್ಟಮ್ಸ್, ದಂತ ವೈದ್ಯಕೀಯ, ಕೆಮಿಕಲ್ ಎಂಜಿನಿಯರಿಂಗ್, ಮೆಡಿಸಿನ್, ಫಾರ್ಮಸಿ ಆಂಡ್ ಫಾರ್ಮಕಾಲಜಿ, ಮತ್ತು ಎಕಾನಾಮಿಕ್ಸ್ ಆಂಡ್ ಎಕನಾಮೆಟ್ರಿಕ್ಸ್ ನಂತಹ ಪ್ರಮುಖ ಸಬ್ಜೆಕ್ಟ್ ಗಳಲ್ಲಿ ಮನ್ನಣೆ ಗಳಿಸಿದೆ.
Jewargi Protest: ಪುರಸಭೆ ನೈರ್ಮಲ್ಯ ನಿರೀಕ್ಷಕರ ಮೇಲೆ ಡಾ. ಮಹೇಶ್ ರಾಠೋಡ ಹಾಗೂ ಇತರರು ಸೇರಿಕೊಂಡು ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳ ಕಚೇರಿ ಹಾಗೂ ತಹಸಿಲ್ದಾರ್ ಕಚೇರಿ ಮುಂದೆ ಪೌರ ಸೇವಾ ನೌಕರರ ಸೇವಾ ಸಂಘದ ಸದಸ್ಯರು ಆಗ್ರಹಿಸಿದ್ದಾರೆ.
BY Vijayendra: ಒಂದೆಡೆ ರಾಜ್ಯ ಅಭಿವೃದ್ಧಿ ಶೂನ್ಯವಾಗಿದೆ. ಇನ್ನೊಂದೆಡೆ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ನಾಡಿನ ಜನರ, ಕೃಷಿಕರ, ಬಡವರ ಕಣ್ಣೀರನ್ನು ಒರೆಸಬೇಕಿದ್ದ ಬಜೆಟ್, ಆ ನಿರೀಕ್ಷೆಗಳನ್ನು ಸಾಕಾರಗೊಳಿಸಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
Gold Smuggling case: ಒಂದೆಡೆ ನಟಿ ರನ್ಯಾ ರಾವ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದ್ದರೆ, ಮತ್ತೊಂದೆಡೆ ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್ ವಿರುದ್ಧ ಮಾಧ್ಯಮಗಳು ಯಾವುದೇ ತೆರನಾದ ಮಾನಹಾನಿ ಸುದ್ದಿ ಪ್ರಕಟಿಸದಂತೆ ಬೆಂಗಳೂರಿನ ವಿಚಾರಣಾ ನ್ಯಾಯಾಲಯ ಆದೇಶಿಸಿದೆ.
Lakshmi Hebbalkar: ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೇ ನಮ್ಮ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಅಂಗನವಾಡಿ ಸಹಾಯಕರು ಹಾಗೂ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಹಾಗಾಗಿಯೇ ಅವರ ಗೌರವ ಧನ ಹೆಚ್ಚಳ ಮಾಡಲು ಸರ್ಕಾರ ಮತ್ತು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
Basavaraj Bommai: ರಾಜ್ಯದಲ್ಲಿ ಒಣ ಮೆಣಸಿನಕಾಯಿ ಉತ್ಪಾದನೆ ಹೆಚ್ಚಾಗಿ ಬೆಲೆ ಕುಸಿತ ಉಂಟಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೇಂದ್ರ ಸರ್ಕಾರವು ಕರ್ನಾಟಕದ ರೈತರು ಬೆಳೆದ ಒಣ ಮೆಣಸಿನಕಾಯಿ ಖರೀದಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
IIFA 2025: ಕನ್ನಡದ ನಟಿ ಹಾಗೂ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಬಾಲಿವುಡ್ ಅತೀ ದೊಡ್ಡ ಪ್ರಶಸ್ತಿ ಸಮಾರಂಭ ಇಂಟರ್ನ್ಯಾಷನಲ್ ಇಂಡಿಯನ್ ಫಿಲಂ ಅಕಾಡೆಮಿ ಅವಾರ್ಡ್ (IIFA 2025) ನಲ್ಲಿ ಅತಿಥಿಯಾಗಿ ಭಾಗಿಯಾಗಿದ್ದಾರೆ. ಖ್ಯಾತ ವಸ್ತ್ರ ವಿನ್ಯಾಸಕ ಫಾರೆವರ್ ನವೀನ್ ಕುಮಾರ್, ಸಿದ್ದಪಡಿಸಿದ ವಿನೂತನ ಉಡುಗೆಯಲ್ಲಿ ಸಂಹಿತಾ ವಿನ್ಯಾಸ IIFA 2025 ಗ್ರೀನ್ ಕಾರ್ಪೆಟ್ನಲ್ಲಿ ಮಿಂಚಿದ್ದಾರೆ.
Lakshmi Hebbalkar: ರಾಜ್ಯದಲ್ಲಿ ವಿಕಲಚೇತನರಿಗೆ ಸರ್ಕಾರದಿಂದ, ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ ಹಾಗೂ ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
B. S. Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಕ್ಸೊ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆವರೆಗೆ ವಿಚಾರಣಾಧೀನ ನ್ಯಾಯಾಲಯಕ್ಕೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಇದರಿಂದ ಎರಡನೇ ಸುತ್ತಿನ ದಾವೆಯಲ್ಲಿ ಸದ್ಯಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನಿರಾಳರಾದಂತಾಗಿದೆ.