ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸದ್ಗುರು ತೀವ್ರ ಖಂಡನೆ
Pahalgam Terror Attack: ಭಯೋತ್ಪಾದನೆಯ ಉದ್ದೇಶ ಯುದ್ಧ ಅಲ್ಲ, ಸಮಾಜದಲ್ಲಿ ಭಯವನ್ನು ಉಂಟುಮಾಡಿ ಅದರ ಶಕ್ತಿಗುಂದಿಸುವುದು. ಆತಂಕವನ್ನು ಹರಡಿ, ಸಮಾಜವನ್ನು ಒಡೆದು, ದೇಶದ ಆರ್ಥಿಕ ಪ್ರಗತಿಯನ್ನು ತಡೆದು ಎಲ್ಲಾ ಹಂತದಲ್ಲೂ ನಿರಂಕುಶತೆಯನ್ನು ನಿರ್ಮಿಸುವುದು. ಈ ದೇಶದ ಸ್ವಾಯತ್ತತೆಯನ್ನು ಕಾಪಾಡಿ ಅದನ್ನು ಪೋಷಿಸಬೇಕೆಂದರೆ, ಇಂತಹ ವಿಷಯಗಳನ್ನು ಅತ್ಯಂತ ಕಠಿಣವಾದ ಕ್ರಮಗಳ ಮೂಲಕ ನಿಭಾಯಿಸಿ ದೀರ್ಘಕಾಲಿಕವಾದ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಈಶ ಫೌಂಡೇಶನ್ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಿಳಿಸಿದ್ದಾರೆ.