ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಬೆಂಗಳೂರಿನಲ್ಲಿ 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯ‌ರ್

3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಂಜಿನಿಯ‌ರ್ ಅರೆಸ್ಟ್‌

Lokayukta Raid: ವಿದ್ಯುತ್ ಮೀಟರ್ ಸಂಪರ್ಕ ಮರುಚಾಲನೆ ಮತ್ತು ನೂತನ ಸಂಪರ್ಕ ನೀಡಲು 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರಿನ ಇಂದಿರಾನಗರದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯ‌ರ್ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್‌ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

ಉಚಿತ ಸ್ಪೆಷಲ್‌ ಇ ಖಾತಾ ಅಭಿಯಾನ ಪ್ರಾರಂಭಕ್ಕೆ ಡಿ.ಕೆ. ಶಿವಕುಮಾರ್‌ ಸೂಚನೆ

ಉಚಿತ ಇ ಖಾತಾ ಅಭಿಯಾನ ಪ್ರಾರಂಭಕ್ಕೆ ಡಿ.ಕೆ. ಶಿವಕುಮಾರ್‌ ಸೂಚನೆ

ಆಸ್ತಿ ದಾಖಲೆಗಳ ಡಿಜಿಟಲೀಕರಣ ಈ ವರ್ಷದ ಪ್ರಮುಖ ತೀರ್ಮಾನ. ಏಕೆಂದರೆ ಕಳೆದ 50 ವರ್ಷಗಳಿಂದಲೂ ಇದು ಮುನ್ನೆಲೆಗೆ ಬಂದಿರಲಿಲ್ಲ. ಈ ಹಿಂದೆ ಕೃಷಿ ಭೂಮಿ ಡಿಜಿಟಲೀಕರಣಕ್ಕೆ ಭೂಮಿ ಯೋಜನೆ ತರಲಾಗಿತ್ತು. ನಮ್ಮ ಬೆಂಗಳೂರಿನ ಎಲ್ಲಾ ಆಸ್ತಿ ದಾಖಲೆಗಳನ್ನು ಸ್ಕ್ಯಾನ್‌ ಮಾಡಿ ಇ – ಖಾತೆ ವ್ಯವಸ್ಥೆ ತರಬೇಕು ಎಂದು ಹೊರಟಿದ್ದೇವೆ. ಈ ಮೂಲಕ ತೆರಿಗೆ ಸೋರಿಕೆ ತಡೆಯಬೇಕು ಎಂಬುದು ನಮ್ಮ ಉದ್ದೇಶ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಡಿಸಿಎಂ, ಕೆಪಿಸಿಸಿ ಅಧ್ಯಕ್ಷನಾಗಿ ದೆಹಲಿಗೆ ಭೇಟಿ; ಸಿಎಂ ಅನುಮತಿ ಪಡೆಯುವೆ ಎಂದ ಡಿ.ಕೆ.ಶಿವಕುಮಾರ್‌

ಡಿಸಿಎಂ, ಕೆಪಿಸಿಸಿ ಅಧ್ಯಕ್ಷನಾಗಿ ದೆಹಲಿಗೆ ಭೇಟಿ ನೀಡುತ್ತಿರುವೆ: ಡಿಕೆಶಿ

DK Shivakumar: ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ನನ್ನನ್ನು ದೆಹಲಿಗೆ ಕರೆದಿರುವ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡುತ್ತಿದ್ದೇನೆ. ದೆಹಲಿ ಪ್ರವಾಸದಲ್ಲಿ ರಾಜಕಾರಣ ಜತೆಗೆ ಕೇಂದ್ರ ಜಲಶಕ್ತಿ ಸಚಿವರು, ಕಾನೂನು ತಜ್ಞರನ್ನು ಭೇಟಿ ಮಾಡುತ್ತಿರುವೆ ಎಂದು ಹೇಳಿದ್ದಾರೆ.

ಭಾರತ-ಚೀನಾ ಗಡಿ ಸಂಘರ್ಷದ ವೇಳೆಯೇ ಪ್ರಧಾನಿ ಮೋದಿ ಟೊಳ್ಳುತನ ಜಗಜ್ಜಾಹೀರಾಗಿದೆ: ಸಿಎಂ ಟೀಕೆ

ಲೋಕಸಭೆಗೆ ಪ್ರಧಾನಿ ಮೋದಿ ಗೈರಾಗಿರುವುದು ನಾಚಿಕೆಗೇಡು: ಸಿಎಂ

ಪ್ರಧಾನಿಯವರ ಈ ಪಲಾಯನವಾದಿ ನಡೆಯು ಸಂಸತ್ತಿನಲ್ಲಿ ಚರ್ಚೆ ಆಗಬಾರದೆಂಬ ಕಾರಣಕ್ಕೆ ರಾಹುಲ್ ಗಾಂಧಿಯವರು ಭಾಷಣ ಮಾಡದಂತೆ ತಡೆಯಲಾಗಿದೆ. ದೇಶದ ಬಹುಸಂಖ್ಯೆಯ ಜನರನ್ನು ಪ್ರತಿನಿಧಿಸುವ ಪ್ರತಿಪಕ್ಷಗಳ ಧ್ವನಿಯನ್ನು ಹತ್ತಿಕ್ಕುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದಿದ್ದು ನಮ್ಮ ಸರ್ಕಾರವೇ ಎಂದ ಡಿ.ಕೆ. ಶಿವಕುಮಾರ್‌

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ: ಡಿಕೆಶಿ

Bengaluru metro fare hike: ಮೆಟ್ರೋ ಪ್ರಯಾಣ ದರ ಏರಿಕೆ ತಡೆ ಹಿಡಿಯಿರಿ ಎಂದು ಕೇಂದ್ರ ಸರ್ಕಾರದವರು ಪತ್ರ ಬರೆದಿರಬಹುದು. ಆದರೆ ಈ ರೀತಿ ಮಾಡಲು ಅವರಿಗೂ ಕಾನೂನಿನಲ್ಲಿ ಅವಕಾಶವಿಲ್ಲ. ಅವರು ಯಾವ ಕಾನೂನಿನ ಅಡಿ, ಯಾವ ಆಕ್ಟ್‌ ಅನ್ವಯ ಪತ್ರ ಬರೆದಿದ್ದಾರೆ ಎಂದು ಹೇಳಿದರೆ ಒಪ್ಪಿಕೊಳ್ಳೋಣ. ಇದನ್ನು ಹೊಸದಾಗಿ ತೀರ್ಮಾನ ಮಾಡಬೇಕು ಎಂದಾದರೆ ನೂತನ ದರ ನಿಗದಿ ಸಮಿತಿ ರಚನೆ ಆಗಬೇಕು. ನಾನು ನಮ್ಮ ಜನರ ದನಿಯಾಗಬೇಕು ಎಂದು ಕೆಲಸ ಮಾಡುತ್ತಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ; ಪಿಎಲ್ಐ 1.2 ಆರಂಭಿಸಿದ ಎಚ್‌ಡಿಕೆ

HD Kumaraswamy: ಪಿಎಲ್ಐ ಯೋಜನೆ 1.2ರ ಅಡಿಯಲ್ಲಿ 85 ಒಪ್ಪಂದಗಳಿಗೆ 55 ಕಂಪನಿಗಳೊಂದಿಗೆ ತಿಳಿವಳಿಕೆ ಪತ್ರಗಳಿಗೆ ಸಹಿ ಹಾಕಲಾಗಿದ್ದು, ₹11,887 ಕೋಟಿ ಹೂಡಿಕೆ ಮಾಡಲಾಗಿದೆ. ಈ ಯೋಜನೆಗಳು 2031ರ ಹಣಕಾಸು ವರ್ಷದ ವೇಳೆಗೆ 8.7 ಮಿಲಿಯನ್ ಟನ್ ವಿಶೇಷ ಉಕ್ಕಿನ ಉತ್ಪಾದನಾ ಸಾಮರ್ಥ್ಯವನ್ನು ಹೊಂದುವ ನಿರೀಕ್ಷೆಯಿದೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಮೈಸೂರು ಸ್ಯಾಂಡಲ್ ಸೋಪ್‌ ರಾಯಭಾರಿಯಾಗಿ ಪ್ರಚಾರ ಕಾರ್ಯ ಆರಂಭಿಸಿದ ನಟಿ ತಮನ್ನಾ

ಸ್ಯಾಂಡಲ್ ಸೋಪ್‌ ರಾಯಭಾರಿಯಾಗಿ ನಟಿ ತಮನ್ನಾ ಪ್ರಚಾರ ಆರಂಭ

Mysore Sandal Soap brand ambassador: ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯು ತಮನ್ನಾ ಭಾಟಿಯಾ ಅವರೊಂದಿಗೆ ಎರಡು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಂಡಿದೆ. ಇದಕ್ಕಾಗಿ ಅವರಿಗೆ 6.2 ಕೋಟಿ ಸಂಭಾವನೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಟ್ಟ ಕೊಡುಗೆ ಪಟ್ಟಿ ಹೇಳಲಿ: ಡಿ.ಕೆ. ಸುರೇಶ್

DK Suresh: ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದಿರುವುದು, ಕರ್ನಾಟಕದ 4.5- 5 ಲಕ್ಷ ಕೋಟಿ ತೆರಿಗೆ ಹಣವನ್ನು ಲೂಟಿ ಮಾಡಿಕೊಂಡು ಹೋಗುತ್ತಿರುವುದನ್ನು ತೋರಿಸಲು. ಕೇಂದ್ರ ಸರ್ಕಾರ ಕಳೆದ 12 ವರ್ಷಗಳಿಂದ ಕರ್ನಾಟಕಕ್ಕೆ ಕೊಟ್ಟಿರುವ ಕೊಡುಗೆ ಪಟ್ಟಿ ಹೇಳಲಿ. ಬೆಂಗಳೂರಿಗೆ ಅವರ ಕೊಡುಗೆ ಖಾಲಿ ಡಬ್ಬ ಎಂದು ತೇಜಸ್ವಿ ಸೂರ್ಯ ತೋರಿಸುತ್ತಿರುವುದನ್ನು ಮಾಧ್ಯಮಗಳು ಚೆನ್ನಾಗಿ ತೋರಿಸಿ ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಕಿಡಿಕಾರಿದ್ದಾರೆ.

Nandini Brand Ambassador: ನಂದಿನಿ ಬಮುಲ್ ಉತ್ಪನ್ನಗಳ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ನೇಮಕ

ನಂದಿನಿ ಬಮುಲ್ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ನೇಮಕ

Nandini BAMUL: ನಂದಿನಿ ಬಮುಲ್‌ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಅವರು ಆಯ್ಕೆಯಾಗಿದ್ದು, ಬಮುಲ್‌ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮುಲ್‌) ಅಧ್ಯಕ್ಷ ಡಿ.ಕೆ.ಸುರೇಶ್‌ ತಿಳಿಸಿದ್ದಾರೆ.

ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಕಿಡ್ನ್ಯಾಪ್‌ಗೆ ಯತ್ನ; ತಪ್ಪಿಸಿಕೊಳ್ಳುವ ವೇಳೆ ಚಾಕು ಇರಿತ

ಬೆಳ್ತಂಗಡಿಯಲ್ಲಿ ಕಾಲೇಜು ವಿದ್ಯಾರ್ಥಿನಿಯ ಕಿಡ್ನ್ಯಾಪ್‌ಗೆ ಯತ್ನ

Kidnap Attempt: ಬೆಳ್ತಂಗಡಿ ಪಟ್ಟಣದ ಸಮೀಪ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ ನಡೆದಿದೆ. ಬಾಲಕಿ ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ನಿರ್ಜನ ಪ್ರದೇಶವೊಂದರಲ್ಲಿ ಕಾರಿನಲ್ಲಿ ಬಂದ ಮೂವರು ಅಪರಿಚಿತರು ಕಿಡ್ನ್ಯಾಪ್‌ಗೆ ಯತ್ನಿಸಿದ್ದಾರೆ. ಬೆಳ್ತಂಗಡಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಭದ್ರಾವತಿಯಲ್ಲಿ ಕ್ರೈಸ್ತ ಧರ್ಮ ಸೇರಿದ ಹಿಂದೂ ಮಹಿಳೆ; ಮತಾಂತರವಾಗಲು ಗಂಡ, ಮಕ್ಕಳಿಗೂ ಕಿರುಕುಳ!

ಕ್ರೈಸ್ತ ಧರ್ಮ ಸೇರಿದ ಹಿಂದೂ ಪತ್ನಿ; ಪತಿಯಿಂದ ದೂರು

ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Bengaluru Power Cut: ಫೆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಫೆ.10ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

BESCOM News: ಕೆಪಿಟಿಸಿಎಲ್ ವತಿಯಿಂದ ಜಾಲಹಳ್ಳಿ ವಿಭಾಗದ 66/11 ಕೆವಿ ಎ೦.ಇ.ಐ ಸಬ್‌ಸ್ಟೇಷನ್ ಉಪಕೇಂದ್ರದಲ್ಲಿ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಫೆ.10ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಾಣಿಜ್ಯ ನಗರಿಯಲ್ಲಿ ಸಾಂಸ್ಕೃತಿಕ ರಸದೌತಣ; ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಅದ್ಧೂರಿ ತೆರೆ

ಹುಬ್ಬಳ್ಳಿಯಲ್ಲಿ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಅದ್ಧೂರಿ ತೆರೆ

International Kite Festival-2026: ಹುಬ್ಬಳ್ಳಿಯಲ್ಲಿ ಎರಡು ದಿನಗಳ ಕಾಲ ʼಅಂತಾರಾಷ್ಟ್ರೀಯ ಗಾಳಿಪಟ ಉತ್ಸವʼ ಮತ್ತು ಸಂಸದರ ಕ್ರೀಡಾ ಮಹೋತ್ಸವವನ್ನು ಆಯೋಜಿಸಲಾಗಿತ್ತು. ಸತತ ಏಳನೇ ಬಾರಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಸಾರಥ್ಯದಲ್ಲಿ ಆಯೋಜಿಸಿದ್ದ ’ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ-2026' ಕ್ಕೆ ಈ ಬಾರಿ ಹಿಂದೆಂದಿಗಿಂತ ಹೆಚ್ಚು ಸ್ಪರ್ಧಿಗಳು ಭಾಗವಹಿಸಿ ಮುಗಿಲೆತ್ತರಕ್ಕೆ ಕಲರ್ ಕಲರ್ ಗಾಳಿಪಟಗಳನ್ನು ಹಾರಿಬಿಟ್ಟು ಸಹಸ್ರಾರು ಜನರ ಕಣ್ಣರಳಿಸಿದರು.

ಮಂಡ್ಯದಲ್ಲಿ ಘೋರ ಘಟನೆ; ಪಕ್ಕದ ಮನೆಯವರ ಕಿರುಕುಳ, ಬೆದರಿಕೆಗೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ

ಪಕ್ಕದ ಮನೆಯವರ ಕಿರುಕುಳಕ್ಕೆ ಬೇಸತ್ತು ತಾಯಿ-ಮಗಳು ಆತ್ಮಹತ್ಯೆ

Mandya News: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿಯಲ್ಲಿ ಘಟನೆ ನಡೆದಿದೆ. ಪಕ್ಕದ ಮನೆಯವರ ಬೆದರಿಕೆಗೆ ಹೆದರಿ ತಾಯಿ-ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಹಲಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ.

Computer Cleanup Day: ಇಂದು ಕಂಪ್ಯೂಟರ್‌ ಸ್ವಚ್ಛತಾ ದಿನ

ಇಂದು ಕಂಪ್ಯೂಟರ್‌ ಸ್ವಚ್ಛತಾ ದಿನ

ದಿನವಿಡೀ ನಮ್ಮ ಕೆಲಸದ ಅವಿಭಾಜ್ಯ ಅಂಗವಾಗಿರುವ ಕಂಪ್ಯೂಟರ್‌ ಅಥವಾ ಲ್ಯಾಪ್‌ ಟಾಪ್‌ಗಳ ಸ್ವಚ್ಛತೆಯ ಬಗ್ಗೆ ಎಷ್ಟು ಗಮನ ಹರಿಸುತ್ತೇವೆ? ಈ ಪ್ರಶ್ನೆಯನ್ನು ನೆನಪಿಸಲು ಮತ್ತು ಡಿಜಿಟಲ್ ಶಿಸ್ತನ್ನು ಮೈಗೂಡಿಸಿಕೊಳ್ಳಲು ಪ್ರತಿ ವರ್ಷ ಫೆಬ್ರವರಿ ತಿಂಗಳ 2ನೇ ಸೋಮವಾರದಂದು (ಫೆ.9)‘ರಾಷ್ಟ್ರೀಯ ಕಂಪ್ಯೂ ಟರ್ ಸ್ವಚ್ಛತಾ ದಿನ’ವನ್ನು ಆಚರಿಸಲಾಗುತ್ತದೆ.

Tejasvi Surya: ನಮ್ಮ ಮೆಟ್ರೋ ದರ ಏರಿಕೆಗೆ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್‌ ಹಿಡಿದು ಪ್ರತಿಭಟನೆ, ಬಂಧನ

ನಮ್ಮ ಮೆಟ್ರೋ ದರ ಏರಿಕೆಗೆ ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ, ಬಂಧನ

ಕಾಂಗ್ರೆಸ್ ಆಡಳಿತದ ಕರ್ನಾಟಕದಲ್ಲಿ ಸಾರ್ವಜನಿಕ ಸಾರಿಗೆ ಮತ್ತು ಉತ್ತಮ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟರೆ ಬಂಧನವಾಗುತ್ತದೆ. ಉತ್ತಮ ಬೆಂಗಳೂರಿಗಾಗಿ ಹೋರಾಟ ಮಾಡುವುದು ಅಪರಾಧವಾಗಿದ್ದರೆ, ನಾನು ಸಾವಿರ ಬಾರಿ ಬಂಧನಕ್ಕೊಳಗಾಗಲು ಸಿದ್ಧ ಎಂದು ತೇಜಸ್ವಿ ಸೂರ್ಯ ಹೇಳಿದರು.

Crime news: ಪ್ರಿಯಕರನಿಗೆ ತಾಯಿ, ಸಂಬಂಧಿಯ ಖಾಸಗಿ ಫೋಟೋ ಕಳಿಸಿದ ಪಾಪಿ ಮಗಳು!

ಪ್ರಿಯಕರನಿಗೆ ತಾಯಿ, ಸಂಬಂಧಿಯ ಖಾಸಗಿ ಫೋಟೋ ಕಳಿಸಿದ ಮಗಳು!

ತಾಯಿ ಮತ್ತು ಆಂಟಿ ಮಲಗಿದ್ದಾಗ ಖಾಸಗಿ ಫೋಟೋ ತೆಗೆದು ಮಗಳು ಪ್ರಿಯಕರನಿಗೆ ಕಳುಹಿಸಿದ್ದಾಳೆ. ಈ ಕುರಿತು ಪ್ರಶ್ನೆ ಮಾಡಿದಾಗ ಆತನನ್ನೇ ಮದುವೆಯಾಗುವುದಾಗಿ ಮಗಳು ಹಠಕ್ಕೆ ಬಿದ್ದಿದ್ದಾಳೆ. ಮಗಳಿಗೆ ಬುದ್ಧಿ ಹೇಳಿ ತಾಯಿ ಫೋಟೋಗಳನ್ನು ಡಿಲೀಟ್ ಮಾಡಿಸಿದ್ದಾರೆ. ಮಗಳು ಮತ್ತು ಆಕೆಯ ಪ್ರಿಯಕರನ ವಿರುದ್ಧ ತಾಯಿ ಠಾಣೆಗೆ ದೂರು ನೀಡಿದ್ದಾರೆ.

Bengaluru Crime News: ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಸರಗಳ್ಳರಿಂದ ಬಿಡಿಸಿಕೊಳ್ಳಲು ಹೋಗಿ ಬಿದ್ದು ಮಹಿಳೆ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ಮನೆಯ ಮುಂದೆ ಕಸ ಗುಡಿಸುತ್ತಿದ್ದಾಗ ಸರಗಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗುತ್ತಿದ್ದರು. ಇದೇ ವೇಳೆ ಕಳ್ಳರು ಸ್ಪ್ರೇ ಸಿಂಪಡಿಸಿದ್ದರಿಂದ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

Bengaluru Hotels: ಇನ್ಮುಂದೆ ಹೋಟೆಲಲ್ಲಿ ಗಂಟೆಗಟ್ಟಲೆ ಮಾತಾಡ್ತಾ ಕುಳಿತಿರುವಂತಿಲ್ಲ! ಅದಕ್ಕೂ ಟೇಬಲ್‌ ಚಾರ್ಜ್!

ಇನ್ಮುಂದೆ ಹೋಟೆಲಲ್ಲಿ ಗಂಟೆಗಟ್ಟಲೆ ಮಾತಾಡ್ತಾ ಕುಳಿತರೆ ಟೇಬಲ್‌ ಚಾರ್ಜ್!

ಇತ್ತೀಚೆಗೆ ಬೆಂಗಳೂರಿನ (Bengaluru) ಹೋಟೆಲ್‌ವೊಂದರ ಗೋಡೆಯ ಮೇಲೆ ʼಇಲ್ಲಿ ಯಾವುದೇ ಮೀಟಿಂಗ್‌ಗಳಿಗೆ ಅವಕಾಶವಿಲ್ಲ. ಒಂದು ವೇಳೆ 1 ಗಂಟೆಗಿಂತ ಹೆಚ್ಚು ಮೀಟಿಂಗ್ ನಡೆದರೆ ಪ್ರತಿ ಗಂಟೆಗೆ 1,000 ರೂ. ಶುಲ್ಕ ವಿಧಿಸಲಾಗುವುದುʼ ಅಂತ ಬರೆಯಲಾಗಿತ್ತು. ಈ ನೋಟಿಸ್ ಫೋಟೋ ಸಾಕಷ್ಟು ವೈರಲ್ ಆಗಿತ್ತು.

Udupi news: ಆತ್ಮಹತ್ಯೆಗೆ ಬಾವಿಗೆ ಜಿಗಿಯುವಾಗ ರುಂಡ ಬೇರ್ಪಟ್ಟು ಸಾವು!

ಆತ್ಮಹತ್ಯೆಗೆ ಬಾವಿಗೆ ಜಿಗಿಯುವಾಗ ರುಂಡ ಬೇರ್ಪಟ್ಟು ಸಾವು!

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಅವರ ರುಂಡ ಬೇರ್ಪಟ್ಟಿದೆ. ಮೃತರನ್ನು ಪುರುಷೋತ್ತಮ ನಾಯಕ್ (52) ಎಂದು ಗುರುತಿಸಲಾಗಿದೆ. ಮೃತ ಪುರುಷೋತ್ತಮ ನಾಯಕ್ ಅವರು ತಮ್ಮ ಮನೆಯ ಬಾವಿಯಲ್ಲಿ ಹಗ್ಗದಿಂದ ನೇಣು ಹಾಕಿಕೊಂಡಿದ್ದಾರೆ. ಈ ವೇಳೆ ರುಂಡ ಬೇರ್ಪಟ್ಟ ಪರಿಣಾಮ ಬಾವಿಯ ನೀರು ಕೆಂಪು ಬಣ್ಣಕ್ಕೆ ತಿರುಗಿದೆ.

Accident News: ಕರಾಳ ಭಾನುವಾರ: ಅಪಘಾತಗಳಲ್ಲಿ ರಾಜ್ಯದ ನಾನಾ ಕಡೆ 12 ಜನ ಸಾವು

ಕರಾಳ ಭಾನುವಾರ: ಅಪಘಾತಗಳಲ್ಲಿ ರಾಜ್ಯದ ನಾನಾ ಕಡೆ 12 ಜನ ಸಾವು

ರಾಜ್ಯದ ಹಲವು ಕಡೆ ನಿನ್ನೆ ಹಲವು ಕಡೆ ಅಪಘಾತಗಳು ಸಂಭವಿಸಿದ್ದು, 12 ಮಂದಿ ಮೃತಪಟ್ಟಿದ್ದಾರೆ. ಹಲವೆಡೆ ರಸ್ತೆ ಅಪಘಾತಗಳು ಸಂಭವಿಸಿದ್ದರೆ, ಇನ್ನೊಂದೆಡೆ ಮೀನು ಹಿಡಿಯಲು ಹೋಗಿ ಇಬ್ಬರು ನೀರುಪಾಲಾಗಿದ್ದಾರೆ. ಅಂತೂ ನಿನ್ನೆ ಭಾನುವಾರ, ರಾಜ್ಯಕ್ಕೆ ಕರಾಳ ಭಾನುವಾರವಾಗಿ ಪರಿಣಮಿಸಿದೆ.

Bagepally News: ಜನ ಕಸ ಹಾಕುವುದನ್ನು ತಪ್ಪಿಸಲು ರಂಗೋಲಿ ಮೊರೆ ಹೋದ ಪುರಸಭೆ ಸಿಬ್ಬಂದಿ!

ಜನ ಕಸ ಹಾಕುವುದನ್ನು ತಪ್ಪಿಸಲು ರಂಗೋಲಿ ಮೊರೆ ಹೋದ ಪುರಸಭೆ ಸಿಬ್ಬಂದಿ!

ಪಟ್ಟಣದ ಮುಖ್ಯ ರಸ್ತೆ, ಸಾರ್ವಜನಿಕ ಜಾಗಗಳಲ್ಲಿ ಸ್ಥಳೀಯರು, ಹೋಟೆಲ್, ಚಿಕನ್ ಅಂಗಡಿಯವರು ತ್ಯಾಜ್ಯವನ್ನು ರಸ್ತೆಯಲ್ಲಿ ಎಸೆಯುತ್ತಿದ್ದು, ಇದನ್ನು ತಪ್ಪಿಸಲು ಪುರಸಭೆ ಸಿಬ್ಬಂದಿ ತ್ಯಾಜ್ಯ ತುಂಬಿದ ಜಾಗ ಸ್ವಚ್ಛಗೊಳಿಸಿ ರಂಗೋಲಿ ಹಾಕುತ್ತಿದ್ದಾರೆ. ಬಳಿಕ ಸುತ್ತಮುತ್ತಲ ಅಂಗಡಿ, ಹೋಟೆಲ್‌ಗಳ ಮಾಲೀಕರಿಗೆ ಕಸವನ್ನು ರಸ್ತೆಯಲ್ಲಿ ಎಸೆಯುವಂತಿಲ್ಲ. ತ್ಯಾಜ್ಯ ಎಸೆಯುವ ಕೃತ್ಯ ಮುಂದುವರಿದರೆ ಪುರಸಭೆ ವತಿಯಿಂದ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡುತ್ತಿದ್ದಾರೆ.

ಕನಕನಗರದ ಎಬಿಡಿ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶಕ್ತಿ ಪ್ರದರ್ಶನ ಶಿಡ್ಲಘಟ್ಟ ಕ್ಷೇತ್ರದ ಜನರ ಸೇವೆಯೇ ನನ್ನ ರಾಜಕೀಯದ ಧ್ಯೇಯ

ಶಿಡ್ಲಘಟ್ಟ ಕ್ಷೇತ್ರದ ಜನರ ಸೇವೆಯೇ ನನ್ನ ರಾಜಕೀಯದ ಧ್ಯೇಯ

ನನ್ನ ವಿರುದ್ಧ ನಡೆಯುತ್ತಿರುವುದು ಕೇವಲ ರಾಜಕೀಯ ದ್ವೇಷದ ಫಲ ಎಂದು ಆರೋಪಿಸಿದ ಅವರು, ಜನಸಾಮಾನ್ಯರ ವಿಶ್ವಾಸ ಮತ್ತು ಕಾರ್ಯಕರ್ತರ ಬೆಂಬಲವೇ ನನ್ನ ದೊಡ್ಡ ಶಕ್ತಿ ಎಂದು ತಿಳಿಸಿದರು. ಯಾವುದೇ ಶಕ್ತಿಯೂ ನಮ್ಮ ಹೋರಾಟವನ್ನು ನಿಲ್ಲಿಸಲಾರದು ಎಂದು ವಿಶ್ವಾಸ ವ್ಯಕ್ತಪಡಿಸಿದರು

Chikkaballapur News: ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ 30 ತಿಂಗಳ ಕಾಲ ಅಭಿವೃದ್ಧಿಯ ಪರ್ವದತ್ತ ಸಾಗಿದ್ದೇನೆ: ಮಂಜುನಾಥ್

ಗ್ರಾಮ ಪಂಚಾಯಿತಿ ಅಧ್ಯಕ್ಷನಾಗಿ ಅಭಿವೃದ್ಧಿಯ ಪರ್ವದತ್ತ ಸಾಗಿದ್ದೇನೆ

ನಮ್ಮ ನಾಯಕರಾದ ಸಂಸದ ಡಾ.ಕೆ.ಸುಧಾಕರ್ ಅವರ ಬೆಂಬಲದಲ್ಲಿ 30 ತಿಂಗಳ ಹಿಂದೆ ಅಧ್ಯಕ್ಷ ನಾಗಿ ನೇಮಕವಾದ. ಅಂದಿನಿಂದ ಈತನಕ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಿಡಿಒ ಮತ್ತು ಕಾರ್ಯದರ್ಶಿಗಳ ಒಡನಾಟದಲ್ಲಿ ಪಂಚಾಯಿತಿಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದ ತೃಪ್ತಿ ಇದೆ

Loading...