ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
ಸ್ಮಾರ್ಟ್ ಮೀಟರ್‌ಗಳಿಂದ ಸ್ಮಾರ್ಟ್ ಸಿಟಿಗಳ ಉನ್ನತೀಕರಣ… ಹೇಗೆ?

ಸ್ಮಾರ್ಟ್ ಮೀಟರ್‌ಗಳಿಂದ ಸ್ಮಾರ್ಟ್ ಸಿಟಿಗಳ ಉನ್ನತೀಕರಣ… ಹೇಗೆ?

ನೀರನ್ನು ಹೆಚ್ಚಾಗಿ ಕಡಿಮೆ ಬೆಲೆಗೆ ಮಾರಾಟ ಮಾರಾಟವಾಗುತ್ತಿದ್ದು, ಅತಿಯಾದ ಬಳಕೆಯನ್ನು ಪ್ರೋತ್ಸಾಹಿಸುತ್ತದೆ. ವಿದ್ಯುತ್‌ನಂತೆಯೇ ಇದೇ ರೀತಿಯ ತಂತ್ರದಿಂದ ನೀರು ಪ್ರಯೋಜನ ಪಡೆಯ ಬಹುದು, ಇದು ಶ್ರೇಣೀಕೃತ ಬೆಲೆ ಯೋಜನೆಗಳ ಮೂಲಕ ಅತಿಯಾದ ಬಳಕೆಯನ್ನು ಕಡಿಮೆ ಮಾಡಿದೆ.

Bengaluru Police Commissioner: ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿಯಾದ ಸಿಎಂ

ನೂತನ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿಯಾದ ಸಿಎಂ

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಬೆನ್ನಲ್ಲೇ ಸರ್ಕಾರ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ (Bengaluru Police Commissioner) ಬಿ.ದಯಾನಂದ್‌ ಸೇರಿ ಹಲವು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

Bengaluru Stampede: RCB ಮ್ಯಾನೇಜ್‌ಮೆಂಟ್‌ ಮಾಡಿದ ಆ ಒಂದು ತಪ್ಪು 11 ಜನರ ಜೀವವನ್ನೇ ಬಲಿ ಪಡೆಯಿತಾ? ತನಿಖೆಯಲ್ಲಿ ಗೊತ್ತಾಗಿದ್ದೇನು?

RCB ಮಾರ್ಕೆಂಟ್‌ ಹೆಡ್‌ ಮಾಡಿದ ಒಂದು ತಪ್ಪು11 ಜನರ ಜೀವ ಬಲಿ ಪಡೆಯಿತಾ?

ಚಿನ್ನಸ್ವಾಮಿ ಸ್ಟೇಡಿಯಂ (Bengaluru Stampede) ಬಳಿ ಕಾಲ್ತುಳಿತದಿಂದ 11 ಆರ್​ಸಿಬಿ (RCB) ಅಭಿಮಾನಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರಿನ ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಮೂವರು ಆಯೋಜಕರು ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

Bengaluru Stampede: ಕಾಲ್ತುಳಿತ ಪ್ರಕರಣ; ಸೋಶಿಯಲ್‌ ಮೀಡಿಯಾದಲ್ಲಿ ಬಿ. ದಯಾನಂದ್‌ ಪರ ಅಭಿಯಾನ

ಸೋಶಿಯಲ್‌ ಮೀಡಿಯಾದಲ್ಲಿ ಬಿ. ದಯಾನಂದ್‌ ಪರ ಅಭಿಯಾನ

B Dayanand: ಬಿ.ದಯಾನಂದ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳ ಅಮಾನತು ಖಂಡಿಸಿ ಸೋಶಿಯಲ್‌ ಮೀಡಿಯಾದಲ್ಲಿ ಐ ಸ್ಟ್ಯಾಂಡ್‌ ವಿಥ್‌ ದಯಾನಂದ್‌ ಎಂಬ ಅಭಿಯಾನ ಶುರುವಾಗಿದೆ. ಸರ್ಕಾರದ ವೈಫಲ್ಯಕ್ಕೆ ಪೊಲೀಸರನ್ನು ಸುಖಾ ಸುಮ್ಮನೆ ಹೊಣೆಯಾಗಿಸಲಾಗುತ್ತಿದೆ ಎಂದು ಅನೇಕರು ಕಿಡಿ ಕಾರಿದ್ದಾರೆ.

Bengaluru Stampede: ಬೆಂಗಳೂರು ಕಾಲ್ತುಳಿತ ಪ್ರಕರಣ; CIDಗೆ ಕೇಸ್‌ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು ಕಾಲ್ತುಳಿತ ಪ್ರಕರಣ; CIDಗೆ ಕೇಸ್‌ ವರ್ಗಾವಣೆ

ಚಿನ್ನಸ್ವಾಮಿ ಕ್ರೀಡಾಂಗಣದ ಸಮೀಪ ನಡೆದ ಕಾಲ್ತುಳಿತ (Bengaluru Stampede) ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ (Government) ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ (RCB) ಮಾರ್ಕೆಟಿಂಗ್‌ ಹೆಡ್‌ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ.

Gold Rate Today: ಚಿನ್ನದ ದರದಲ್ಲಿ ಯಥಾಸ್ಥಿತಿ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

ಬೆಂಗಳೂರಿನಲ್ಲಿ ನಿನ್ನೆ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 40 ರೂ ಏರಿಕೆ ಕಂಡು ಬಂದಿದ್ದು, 9,130 ರೂ.ಗೆ ತಲುಪಿತ್ತು. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 43 ರೂ. ಏರಿಕೆಯಾಗಿ 9,960 ರೂ ಇತ್ತು. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,040 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 91,300 ರೂ. ಮತ್ತು 100 ಗ್ರಾಂಗೆ 9,13,000 ರೂ. ನೀಡಬೇಕಾಗುತ್ತದೆ.

Chinnaswamy Stadium Rampade: ಆರ್‌ಸಿಬಿ ಹುಚ್ಚು: ಪೋಷಕರ ಕನಸಿಗೆ ಕೊಳ್ಳಿ

ಆರ್‌ಸಿಬಿ ಹುಚ್ಚು: ಪೋಷಕರ ಕನಸಿಗೆ ಕೊಳ್ಳಿ

ಆರ್‌ಸಿಬಿ ತಂಡದ ಮೇಲಿನ ಅತಿಯಾದ ಕ್ರೇಜ್ 11 ಅಭಿಮಾನಿಗಳನ್ನು ಬಲಿ ಪಡೆದಿದೆ. ಕಪ್ ಗೆದ್ದ ನೆಚ್ಚಿನ ತಂಡ, ನೆಚ್ಚಿನ ಆಟಗಾರರನ್ನು ಕಣ್ತುಂಬಿಕೊಳ್ಳಲು ಬಂದಿದ್ದವರು ದುರಂತ ಅಂತ್ಯ ಕಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ಉಜ್ವಲ ಭವಿಷ್ಯ ಕಾಣಬೇಕಿದ್ದ 11 ಅರಳುವ ಹಂತದಲ್ಲಿದ್ದ ಹೂವುಗಳು ಮುದುಡಿವೆ. ದುರಂತದಲ್ಲಿ ಯುವಕ-ಯುವತಿಯರು ಸೇರಿ 11 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 47ಕ್ಕೂ ಹೆಚ್ಚು ಮಂದಿಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ. ಸಾವನ್ನಪ್ಪಿದ ಒಬ್ಬೊಬ್ಬರ ಹಿನ್ನೆಲೆ ಯೂ ಕರುಣಾಜನಕವಾಗಿದೆ.

Hassan Tragedy: ಹಾಸನದಲ್ಲಿ ಘೋರ ದುರಂತ; ಕಲ್ಲು ಕ್ವಾರಿ ಕುಸಿತ... ಓರ್ವ ಸಾವು

ಹಾಸನದಲ್ಲಿ ಘೋರ ದುರಂತ; ಕಲ್ಲು ಕ್ವಾರಿ ಕುಸಿತ; ಓರ್ವ ಸಾವು

stone quarry collapses: ಕಲ್ಲು ಕ್ವಾರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ಓರ್ವ ಬಲಿಯಾಗಿದ್ದಾನೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ದೂಮಗೆರೆ ಗ್ರಾಮದ ಕಲ್ಲುಕ್ವಾರಿಯಲ್ಲಿ ಈ ಘಟನೆ ನಡೆದಿದೆ. ಹಾಸನದ ಬಂಡೆ ದೇವರಾಜ್ ಎಂಬುವವರಿಗೆ ಸೇರಿದ ಕ್ವಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

VRL Entrepreneur Vijay Sankeshwar: ಪ್ರವಾಸಿ ಪ್ರಪಂಚ ಪತ್ರಿಕೆ ಯಶಸ್ಸು ಪಡೆಯುವುದರಲ್ಲಿ ಸಂದೇಹವಿಲ್ಲ

ವಿಶ್ವೇಶ್ವರ ಭಟ್ಟರ ಸಾಹಸಕ್ಕೆ ಉದ್ಯಮಿ ವಿಜಯ ಸಂಕೇಶ್ವರ ಮೆಚ್ಚುಗೆ

ಪ್ರವಾಸಿ ಪ್ರಪಂಚ ಪತ್ರಿಕೆ ಮೊದಲ ಸಂಚಿಕೆಯಲ್ಲಿಯೇ ಅತ್ಯಂತ ಸೊಗಸಾಗಿ ಮೂಡಿ ಬಂದಿದ್ದು, ಪ್ರವಾಸೋದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಪತ್ರಿಕೆಯನ್ನು ಹೀಗೂ ರೂಪಿಸಬಹುದಾ ಎಂದು ಅಚ್ಚರಿ ಹುಟ್ಟಿಸುವ ರೀತಿಯಲ್ಲಿ ಪತ್ರಿಕೆ ಆಕರ್ಷಕವಾಗಿದೆ. ಪತ್ರಿಕೆಯ ಮುದ್ರಣ, ವಿನ್ಯಾಸ ಮತ್ತು ಹೂರಣ ಪ್ರವಾಸೋದ್ಯಮ ಕ್ಷೇತ್ರಕ್ಕೆ ಅನ್ವಯವಾಗುವ ರೀತಿಯಲ್ಲಿದೆ.

Bengaluru Stampede:  ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್‌ ಸೇರಿ ನಾಲ್ವರ ಬಂಧನ

ಬೆಂಗಳೂರು ಕಾಲ್ತುಳಿತ ದುರಂತ; RCB ಮಾರ್ಕೆಟಿಂಗ್ ಹೆಡ್‌ ಬಂಧನ

ಆರ್‌ಸಿಬಿ ಸಂಭ್ರಮಾಚರಣೆಯ (Bengaluru Stampede) ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದರು. ಸಿಎಂ ಆದೇಶದ ಬೆನ್ನಲ್ಲೇ ಇದೀಗ ಪೊಲೀಸರು ಇದೀಗ ಇಬ್ಬರು ಅರೋಪಿಗಳನ್ನು ಬಂಧಿಸಿದ್ದಾರೆ.

Bengaluru Stampede: ಬೆಂಗಳೂರು ಕಾಲ್ತುಳಿತ ದುರಂತ; 11 ಮಂದಿಯೂ ಉಸಿರುಗಟ್ಟಿ ಸಾವು, ಮರಣೋತ್ತರ ಪರೀಕ್ಷೆಯಲ್ಲಿ ದೃಢ

ಬೆಂಗಳೂರು ಕಾಲ್ತುಳಿತ ದುರಂತ; 11 ಮಂದಿಯೂ ಉಸಿರುಗಟ್ಟಿ ಸಾವು

ಬುಧವಾರ ಬೆಂಗಳೂರಿನಲ್ಲಿ ಕರಾಳ ಘಟನೆಯೊಂದು ನಡೆದು ಹೋಗಿದೆ. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಉಂಟಾದ ಕಾಲ್ತುಳಿದಲ್ಲಿ 11 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ 30 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಇದೀಗ ಮೃತಪಟ್ಟವರ ಮರಣೋತ್ತರ ಪರೀಕ್ಷೆಯ ವರದಿ ಬಂದಿದೆ.

Bengaluru Stampede: ಚಿನ್ನಸ್ವಾಮಿ ಬಳಿ ಕಾಲ್ತುಳಿತ ; RCB ಮ್ಯಾನೇಜ್ಮೆಂಟ್ ಪ್ರತಿನಿಧಿಯನ್ನು ಬಂಧಿಸಲು ಸಿಎಂ ಸೂಚನೆ

RCB ಮ್ಯಾನೇಜ್ಮೆಂಟ್ ಪ್ರತಿನಿಧಿಯನ್ನು ಬಂಧಿಸಲು ಸಿಎಂ ಸೂಚನೆ!

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರತಿಕ್ರಿಯೆ ನೀಡಿದ್ದಾರೆ. ಕಾಲ್ತುಳಿತಕ್ಕೆ ಕಾರಣರಾದವರನ್ನು ಬಂಧಿಸುವಂತೆ ಸಿಎಂ ಆದೇಶ ನೀಡಿದ್ದಾರೆ. ಆರ್ ಸಿಬಿ,ಡಿಎನ್ ಎ,ಕೆಎಸ್ ಸಿಎ ಪ್ರತಿನಿಧಿಸುವವರನ್ನ ಅರೆಸ್ಟ್ ಮಾಡಲು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

World Environment Day: ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಿದೆ: ಮುಖ್ಯ ಶಿಕ್ಷಕ ಆರ್.ಹನುಮಂತ ರೆಡ್ಡಿ

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕಿದೆ

ಪ್ಲಾಸ್ಟಿಕ್ ವಸ್ತುಗಳು ಭೂಮಿಯಲ್ಲಿ ಕರಗದೆ ಸಾವಿರಾರು ವರ್ಷ ಹಾಗೇ ಉಳಿಯುತ್ತವೆ. ಇದು ಮಣ್ಣು ಆರೋಗ್ಯ ಮತ್ತು ಪರಿಸರವನ್ನು ಹಾಳು ಮಾಡುತ್ತದೆ. ಜಲ ಮೂಲವನ್ನು ಮಾಲಿನ್ಯ ಗೊಳಿಸುತ್ತದೆ. ಇದನ್ನು ಅರಿತು ಜನರು ಪಾಸ್ಟಿಕ್ ಬಳಕೆ ತ್ಯಜಿಸಬೇಕು

Chikkaballapur News: ಸ್ತ್ರೀ ಚೇತನ ಮತ್ತು ದುಡಿಯೋಣ ಬಾ ಅಭಿಯಾನ, ಗ್ರಾಮೀಣ ಜನರಿಗೆ ಸಹಕಾರಿ

ಸ್ತ್ರೀ ಚೇತನ ಮತ್ತು ದುಡಿಯೋಣ ಬಾ ಅಭಿಯಾನ, ಗ್ರಾಮೀಣ ಜನರಿಗೆ ಸಹಕಾರಿ

ಕೂಲಿಕಾರರಿಗೆ ನಿರಂತರ ಕೆಲಸ ನೀಡಲಾಗು ತ್ತಿದೆ. ಜತೆಗೆ ಮಹಿಳೆಯರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಸ್ತ್ರೀ ಚೇತನ ಅಭಿಯಾನ ಕೈಗೊಳ್ಳಲಾಗಿದೆ. ಎಲ್ಲರೂ ಈ ಅಭಿಯಾನಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು. ಗ್ರಾಮ ಪಂಚಾಯಿತಿ ಸಿಬ್ಬಂದಿ ದಿನಕ್ಕೆ ಎರಡು ಬಾರಿ ಎನ್‌ಎಂಎMಎಸ್ ಹಾಜರಿ ಕಡ್ಡಾಯವಾಗಿ ಮಾಡಬೇಕು.

JEE 697th Rank: ಜೆಇಇ 697ನೇ ರ‍್ಯಾಂಕ್ ಮೂಲಕ ಐಐಟಿಗೆ ಸ್ಥಾನ ಪಡೆದ ಕಿಶೋರ್ ಪ್ರೀತಂ

ಜೆಇಇ 697ನೇ ರ‍್ಯಾಂಕ್ ಮೂಲಕ ಐಐಟಿಗೆ ಸ್ಥಾನ ಪಡೆದ ಕಿಶೋರ್ ಪ್ರೀತಂ

ಪ್ರತಿಷ್ಠಿತ ಬಿ.ಜಿ.ಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಯಾದ ಎಂ. ಎಸ್. ಕಿಶೋರ್ ಪ್ರೀತಂ ಏಪ್ರಿಲ್ ತಿಂಗಳಲ್ಲಿ ನಡೆದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಶೇ 95 ಅಂಕಗಳೊಂದಿಗೆ 697 ನೇ ರ‍್ಯಾಂಕ್ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಭಾರತದ ಪ್ರತಿಷ್ಠಿತ ಐಐಟಿ ಸಂಸ್ಥೆಯಲ್ಲಿ ಸೀಟು ಪಡೆದಿದ್ದಾರೆ.ಕಿಶೋರ್ ಪ್ರೀತಂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಕೂಡ ಶೇ 94 ಅಂಕಗಳ ಸಾಧನೆ ಮಾಡಿದ್ದಾರೆ

ಪರಿಸರ ಉಳಿಸಿ ಬೆಳಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡಬೇಕು: ನ್ಯಾ.ಗಣೇಶ್

ಅಭಿಮತ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಬೇಕು: ನ್ಯಾ.ಪುಷ್ಟ

ಪರಿಸರ ನಮ್ಮ ಜೀವನ ಅಂಗ ವಾಗಿದೆ ನಿತ್ಯ ನಾವು ಸೇವಿಸುವ ಗಾಳಿ ಶುದ್ದವಾಗಿರಬೇಕು. ಜಲ ನೆಲ ಗಿಡಗಳನ್ನು ನೆಟ್ಟು ಇವುಗಳ ಸಂರಕ್ಷಣ ಮಾಡಬೇಕಿದೆ. ಸಂವಿಧಾನದಲ್ಲಿ ಪರಿಸರ ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಪರಿಸರಕ್ಕೆ ಧಕ್ಕೆ ಮಾಡಿದರೆ ಕಾನೂನುನಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಉದಾ,ಮರಗಿಡಗಳ ಕಡಿವುದು ಪರಿಸರ ಮಾಲಿನ್ಯ ಮಾಡುವುದು ಅಪರಾಧವಾಗಿದೆ

Seemanth Kumar Singh: ಸೀಮಂತ್‌ ಕುಮಾರ್‌ ಸಿಂಗ್‌ ಬೆಂಗಳೂರಿನ ನೂತನ ಕಮಿಷನರ್‌; ಬೆಂಗಳೂರು ಕಾಲ್ತುಳಿತದ ಬೆನ್ನಲ್ಲೇ ಸರ್ಕಾರದ ಮಹತ್ವದ ಆದೇಶ

ಸೀಮಂತ್‌ ಕುಮಾರ್‌ ಸಿಂಗ್‌ ಬೆಂಗಳೂರಿನ ನೂತನ ಕಮಿಷನರ್‌

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಬೆನ್ನಲ್ಲೇ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನೂತನ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಿಸಿದೆ.

Laxmi Hebbalkar: ಕಾಲ್ತುಳಿತಕ್ಕೂ ರಾಜಕೀಯ ಬೆರೆಸಬೇಡಿ: ಲಕ್ಷ್ಮೀ ಹೆಬ್ಬಾಳ್ಕರ್

ಕಾಲ್ತುಳಿತ ವಿಚಾರದಲ್ಲಿ ರಾಜಕೀಯ ಸಲ್ಲದು: ಲಕ್ಷ್ಮೀ ಹೆಬ್ಬಾಳ್ಕರ್

ಈಗ ದುರಂತ ನಡೆದ ಬಗ್ಗೆ ಚರ್ಚೆ ಮಾಡುವ ಸಮಯವಲ್ಲ. ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವನ ಹೇಳುವುದು ಮುಖ್ಯ. ಈ ವಿಚಾರದಲ್ಲಿ ಯಾರೇ ರಾಜಕಾರಣ ಮಾಡಿದರೂ ತಪ್ಪು. ರಾಜ್ಯದ ಜನರಿಗೆ, ಅದರಲ್ಲೂ ಯಾರು ದುಃಖದಲ್ಲಿದ್ದಾರೆ, ಅವರಿಗೆ ಸಾಂತ್ವನ ಹೇಳುವ ಕೆಲಸ ಆಗಬೇಕು. ಈ ವಿಷಯದಲ್ಲಿ ಯಾರೂ ರಾಜಕೀಯ ಬೇಳೆ ಬೇಯಿಸಿಕೊಳ್ಳಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Pralhad Joshi: ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರದ ಹೊಣೆಗೇಡಿತನ ಕಾರಣ: ಪ್ರಲ್ಹಾದ್‌ ಜೋಶಿ

ಬೆಂಗಳೂರು ಕಾಲ್ತುಳಿತಕ್ಕೆ ರಾಜ್ಯ ಸರ್ಕಾರದ ಹೊಣೆಗೇಡಿತನ ಕಾರಣ: ಜೋಶಿ

ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ರಾಜ್ಯ ಸರ್ಕಾರ ಸೂಕ್ತ ಬಿಗಿ, ಭದ್ರತೆ ಕೈಗೊಂಡಿಲ್ಲ. ಆರ್‌ಸಿಬಿ ಅಭಿಮಾನಿಗಳನ್ನು ನಿಭಾಯಿಸುವಲ್ಲಿ ರೂಪುರೇಷೆ, ಸಿದ್ಧತೆ ನಡೆಸದಿರುವುದೇ ಈ ದುರಂತಕ್ಕೆ ಕಾರಣವಾಗಿದೆ. ಬಿಗಿ ಭದ್ರತೆ, ತುರ್ತು ಸೇವೆಗಳನ್ನು ಒದಗಿಸುವಲ್ಲಿ ಅತ್ಯಂತ ಬೇಜವಾಬ್ದಾರಿಯಾಗಿ ವರ್ತಿಸಿದೆ ಎಂದು ಕೇಂದ್ರ ಆಹಾರ ಮತ್ತು ನಾಗರೀಕ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ಕಾಲ್ತುಳಿತ ಪ್ರಕರಣ: ಬೆಂಗಳೂರು ಪೊಲೀಸ್ ಕಮಿಷನರ್, ಎಡಿಜಿಪಿ, ಡಿಸಿಪಿ, ಎಸಿಪಿ ಸಸ್ಪೆಂಡ್! ಸರ್ಕಾರದ ಅಭೂತಪೂರ್ವ ಆದೇಶ

ಬೆಂಗಳೂರು ಪೊಲೀಸ್ ಕಮಿಷನರ್, ಎಡಿಜಿಪಿ, ಡಿಸಿಪಿ, ಎಸಿಪಿ ಸಸ್ಪೆಂಡ್!

ಆರ್‌ಸಿಬಿ ವಿಜಯೋತ್ಸವದ ವೇಳೆ ಜೂ. 4ರಂದು ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಬಲಿಯಾಗಿದ್ದು, ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ಸೇರಿ ಹಲವು ಅಧಿಕಾರಿಗಳನ್ನು ಅಮಾನತಿಗೊಳಿಸಿದ್ದಾರೆ.

Chalavadi Narayanaswamy: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಲ್ಲಿ ಹನ್ನೊಂದು ಯುವ ಮಕ್ಕಳ ಸಾವಿಗೆ ಕಾರಣ ನೇರವಾಗಿ ರಾಜ್ಯ ಸರ್ಕಾರವೇ ಹೊರಬೇಕಾಗಿದೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನೇರ ಹೊಣೆ ಹೊತ್ತು ಕೂಡಲೇ ರಾಜೀನಾಮೆ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ.

Bengaluru News: ಶಿಕ್ಷಣ ಸಂಸ್ಥೆಗಳಲ್ಲಿ ಮನೋವೈಜ್ಞಾನಿಕ ಸಲಹಾ ಕೇಂದ್ರ ಸ್ಥಾಪಿಸಿ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮನೋಜ್‌ಕುಮಾ‌ರ್ ಕೊಳ್ಳ

ಶಿಕ್ಷಣ ಸಂಸ್ಥೆಗಳಲ್ಲಿ ಮನೋವೈಜ್ಞಾನಿಕ ಸಲಹಾ ಕೇಂದ್ರ ಸ್ಥಾಪಿಸಿ

ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡೆ ಮತ್ತು ಯೋಗಕ್ಕೆ ಹೆಚ್ಚು ಒತ್ತು ನೀಡಬೇಕು. ಜೊತೆಗೆ ಪ್ರತಿ ಕಾಲೇಜಿನಲ್ಲೂ ವಿದ್ಯಾರ್ಥಿಗಳಿಗೆ ಮನೋವೈಜ್ಞಾನಿಕ ಸಲಹಾ ಕೇಂದ್ರಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳ ಕಲಿಕಾ ಮಟ್ಟ ಹೆಚ್ಚಾಗುವಂತೆ ನಿಗಾ ವಹಿಸಬೇಕು ಎಂದು ಬೆಂಗಳೂರು ದಕ್ಷಿಣ ವಲಯದ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ)ಯ ಉಪನಿರ್ದೇಶಕ ಮನೋಜ್‌ಕುಮಾ‌ರ್ ಕೊಳ್ಳ ಹೇಳಿದ್ದಾರೆ.

ಎಐ ಅಳವಡಿಕೆಯಲ್ಲಿ ಭಾರತವು ಇತರ ದೇಶಗಳಿಗಿಂತ ಹಿಂದೆ ಉಳಿದಿದೆ: ಬಿಸಿಐಸಿ

ಎಐ ಅಳವಡಿಕೆಯಲ್ಲಿ ಭಾರತವು ಇತರ ದೇಶಗಳಿಗಿಂತ ಹಿಂದೆ ಉಳಿದಿದೆ

ಕೇವಲ ಶೇ.15ರಷ್ಟು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಉತ್ಪಾದನಾ ವಿಭಾಗದಲ್ಲಿ ಎಐ ಅನ್ನು ಅಳವಡಿಸಿಕೊಂಡಿವೆ. ಸಮಾವೇಶದಲ್ಲಿ ಬಿಸಿಐಸಿ ಮತ್ತು ಆರ್ ವಿ ಕಾಲೇಜ್ ಆಫ್ ಇಂಜಿನಿಯರಿಂಗ್‌ “ಉತ್ಪಾದನೆಯಲ್ಲಿ ಎಐ” ಎಂಬ ವರದಿಯನ್ನು ಬಿಡುಗಡೆ ಮಾಡಿದೆ.

`ವಿಶ್ವ ಪರಿಸರ ದಿನ’ದಂದು ಬೆಂಗಳೂರಿನಲ್ಲಿ ತನ್ನ ಮೊದಲ ಕಂಪನಿ ಮಾಲೀಕತ್ವದ ಶೋರೂಂ ಪ್ರಾರಂಭಿಸಿದ `ನ್ಯೂಮರೋಸ್ ಮೋಟಾರ್ಸ್’

ಬೆಂಗಳೂರಿನಲ್ಲಿ `ನ್ಯೂಮರೋಸ್ ಮೋಟಾರ್ಸ್’ ಮಾಲೀಕತ್ವದ ಶೋರೂಂ ಪ್ರಾರಂಭ

ವಿವಿಧ ಉದ್ದೇಶದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಉತ್ಪಾದಿಸುವ ಮುಂದಿನ ತಲೆಮಾರಿನ `ಒಇಎಂ’(ಒರಿಜಿನಲ್ ಎಕ್ವಿಪ್ಮೆಂಟ್ ಮ್ಯಾನುಫ್ಯಾಕ್ಚರರ್) ಸಂಸ್ಥೆಯಾದ `ನ್ಯೂಮರೋಸ್ ಮೋಟಾರ್ಸ್’ ಇಂದು ಬೆಂಗಳೂರಿನ ರಾಜಾಜಿನಗರದಲ್ಲಿ ತನ್ನ ಮೊದಲ ಕಂಪನಿ ಮಾಲೀಕತ್ವದ, ಕಂಪನಿ-ಚಾಲಿತ (ಕೊಕೊ) ಶೋರೂಂ ಅನ್ನು ಉದ್ಘಾಟಿಸಿದೆ