ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಅರವಿಂದ್ ಕೇಜ್ರಿವಾಲ್ ಮೇಲೆ ಅಬಕಾರಿ ನೀತಿ ಪ್ರಕರಣದಲ್ಲಿ ಕೇಂದ್ರ ಬಿಜೆಪಿಯ ಸುಳ್ಳು ಹಾಗೂ ರಾಜಕೀಯ ಪಿತೂರಿ ಬಯಲಿಗೆ ತಂದಿದೆ: ಬೈ ರೆಡ್ಡಿ

ಕೇಂದ್ರ ಬಿಜೆಪಿಯ ಸುಳ್ಳು ಹಾಗೂ ರಾಜಕೀಯ ಪಿತೂರಿ ಬಯಲಿಗೆ ತಂದಿದೆ

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ದೇಶಾ ದ್ಯಂತ ಪಕ್ಷದ ಪ್ರಭಾವ ಹೆಚ್ಚುತ್ತಿರುವುದನ್ನು ಸಹಿಸದೇ ಬಿಜೆಪಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಸುಳ್ಳು ಆರೋಪಗಳನ್ನು ಹೊರೆಸಿತು

Chinthamani News: ತಂದೆ ತಾಯಿಯ ತ್ಯಾಗವೇ ನಮಗೆ ಪ್ರೇರಣೆ ಅವರೇ ನಿಜವಾದ ನಾಯಕರು

ತಂದೆ ತಾಯಿಯ ತ್ಯಾಗವೇ ನಮಗೆ ಪ್ರೇರಣೆ ಅವರೇ ನಿಜವಾದ ನಾಯಕರು

ತಂದೆ ತಾಯಿಗಳ ಕೊಡುಗೆ ಅಪಾರ ವಾಗಿದ್ದು ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ, ನಾವು ಜೀವನ ಪೂರ್ತಿ ಅವರ ಸೇವೆ ಮಾಡಿದರು ಸಾಲದು. ತಂದೆ ತಾಯಿಗೆ ನಾವು ಏನಾದರೂ ಕೊಡುಗೆ ನೀಡಬೇಕೆಂದರೆ ಸಮಾಜದಲ್ಲಿ ಸತ್ಪ್ರಜೆಗಳಾಗಿ ಏನಾದರೂ ಸಾಧನೆ ಮಾಡಿದರೆ ಅದೇ ನಾವು ಅವರಿಗೆ ಕೊಡುವ ಅಮೂಲ್ಯವಾದ ಕಾಣಿಕೆಯಾಗಿದೆಯೆಂದರು

Chintamani News: ಸಾಧನೆಗೈದ ಮೈಲಾಂಡ್ಲಹಳ್ಳಿಯ ಎಂ.ಸಿ.ವಿಜಯಕುಮಾರ್‌ಗೆ ಪಶುವೈದ್ಯಕೀಯ ಸ್ನಾತಕೋತ್ತರ ಪದವಿಯಲ್ಲಿ 6 ಚಿನ್ನದ ಪದಕ

ಪಶು ವೈದ್ಯಕೀಯ ವಿವಿಯಲ್ಲಿ 15ನೇ ಘಟಿಕೋತ್ಸವ

ಚಿಂತಾಮಣಿ ತಾಲ್ಲೂಕಿನ ಮೈಲಾಂಡ್ಲಹಳ್ಳಿ ರೈತ ಕುಟುಂಬದ ಹಿನ್ನಲೆಯಲ್ಲಿ ಬಂದಿರುವ ಎಂ.ಸಿ.ವಿಜಯಕುಮಾರ್ ಎಂಬಿಎಸ್‌ಸಿ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು 6 ಚಿನ್ನದ ಪದಕ ಪಡೆದಿದ್ದು ಈ ಮೂಲಕ ಸ್ನಾತಕೋತ್ತರ ಪದವಿಯಲ್ಲಿ ಅತಿಹೆಚ್ಚು ಚಿನ್ನದ ಪದಕವನ್ನು ಪಡೆದ ಕೀರ್ತಿಗೆ ಭಾಜನರಾಗಿದ್ದಾರೆ.

ದೆಹಲಿ ಮತ್ತು ಬೆಂಗಳೂರುಗಳಿಂದ ಪ್ರಾರಂಭಿಸಿ ಭಾಗೊ ಭಾರತದಾದ್ಯಂತ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಲಭ್ಯ

ವಿನ್ಯಾಸ ಗೊಳಿಸಲಾದ ಸಮಗ್ರ ವಿದ್ಯುಚ್ಛಾಲಿತ ಮೊಬಿಲಿಟಿ ಪ್ಲಾಟ್ ಫಾರಂ ಬಿಡುಗಡೆ

ಪ್ಲಾಟ್ ಫಾರಂ ಅನ್ನು ಡೆಲಿವರಿ ಪಾಲುದಾರರು, ರೈಡ್-ಹಾಲಿಂಗ್ ಚಾಲಕರು ಮತ್ತು ಕೊನೆಯ ಹಂತದ ಲಾಜಿಸ್ಟಿಕ್‍ ಕೆಲಸಗಾರರಿಗೆ ವಿನ್ಯಾಸಗೊಳಿಸಿದ್ದು ಅವರಿಗೆ ವಿದ್ಯುತ್ ವಾಹನಗಳ ಲಭ್ಯತೆ, ಬ್ಯಾಟರಿ ಸ್ವಾಪಿಂಗ್, ಅನುಸರಣೆ ಮತ್ತು ತಂತ್ರಜ್ಞಾನದ ಬೆಂಬಲವನ್ನು ಒಂದು ಚಂದಾದಾರಿಕೆ ಆಧರಿತ ಮಾದರಿಯಲ್ಲಿ ನೀಡುತ್ತದೆ.

ಬೆಂಗಳೂರಿನಲ್ಲಿ ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

ಬೆಂಗಳೂರಿನಲ್ಲಿ ಇಂಗು ಗುಂಡಿ ಸ್ವಚ್ಛತೆ ವೇಳೆ ಉಸಿರುಗಟ್ಟಿ ಮೂವರ ಸಾವು

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ದುರ್ಘಟನೆ ನಡೆದಿದೆ. ಮಳೆನೀರಿನ ಇಂಗುಗುಂಡಿಯನ್ನು ಕೆಮಿಕಲ್ ಹಾಕಿ ಸ್ವಚ್ಛಗೊಳಿಸುವಾಗ ಮಾಲೀಕ ಮೂರ್ಛೆ ಹೋಗಿದ್ದಾರೆ. ಅವರನ್ನು ರಕ್ಷಿಸಲು ಹೋದ ಪ್ಲಂಬರ್ ಕೂಡ​​ ಮೂರ್ಛೆ ಹೋಗಿದ್ದಾರೆ. ಇವರಿಬ್ಬರನ್ನು ನೋಡಲು ಹೋದ ಮತ್ತೊಬ್ಬ ಯುವಕ ಕೂಡ ಪ್ರಜ್ಞೆತಪ್ಪಿದ್ದಾನೆ. ಮೂವರನ್ನೂ ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

Iran-Israel War: ಇಸ್ರೇಲ್‌-ಇರಾನ್‌ ಯುದ್ಧ; ಗಲ್ಫ್‌ ರಾಷ್ಟ್ರಗಳಿಗೆ ಬೆಂಗಳೂರು, ಮಂಗಳೂರಿನಿಂದ  ವಿಮಾನಗಳ ಹಾರಾಟ ರದ್ದು

ಗಲ್ಫ್‌ ರಾಷ್ಟ್ರಗಳಿಗೆ ಬೆಂಗಳೂರು, ಮಂಗಳೂರಿನಿಂದ ವಿಮಾನಗಳು ರದ್ದು

flights cancelled: ಪ್ರಯಾಣಿಕರಿಗೆ ಯಾವುದೇ ಮುನ್ಸೂಚನೆ ಇಲ್ಲದೆ ಬೆಂಗಳೂರು, ಕೋಲ್ಕತ್ತಾದ ವಿಮಾನ ನಿಲ್ದಾಣಗಳಿಂದ 13 ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರಿಗೆ ಅಬುಧಾಬಿ, ರಿಯಾದ್‌, ಜೆಡ್ಡಾ, ದಮ್ಮಾಮ್‌, ದುಬೈನಿಂದ ಆಗಮಿಸಿದ್ದ ಇಂಡಿಗೋ, ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌, ಎಮಿರೇಟ್ಸ್‌ ಸೇರಿ 9 ವಿಮಾನಗಳ ವಾಪಸ್‌ ತೆರಳಬೇಕಿತ್ತು. ಆದರೆ, ಇರಾನ್‌-ಇಸ್ರೇಲ್‌ ಯುದ್ಧ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ರದ್ದಾಗಿದೆ.

56 ಸಾವಿರ ಹುದ್ದೆ ಭರ್ತಿ ಮಾಡಲು ಸರ್ಕಾರ ತೀರ್ಮಾನ: ಡಿ.ಕೆ.ಶಿವಕುಮಾರ್

56 ಸಾವಿರ ಹುದ್ದೆ ಭರ್ತಿ ಮಾಡಲು ಸರ್ಕಾರ ತೀರ್ಮಾನ: ಡಿ.ಕೆ.ಶಿವಕುಮಾರ್

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಇತ್ತೀಚೆಗೆ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳಿಂದ ಬೃಹತ್‌ ಪ್ರತಿಭಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದಾದ ನಂತರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿತ್ತು. ಈ ಬಗ್ಗೆ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿದ್ದಾರೆ.

ಶಾಸಕರು ದೆಹಲಿಗೆ ಹೋಗೋದು, ಫಾರಿನ್‌ಗೆ ಹೋಗೋದು ಗೊತ್ತಿಲ್ಲ ಎಂದ ಡಿ.ಕೆ. ಶಿವಕುಮಾರ್

ಶಾಸಕರು ದೆಹಲಿಗೆ ಹೋಗೋದು, ಫಾರಿನ್‌ಗೆ ಹೋಗೋದು ಗೊತ್ತಿಲ್ಲ: ಡಿಕೆಶಿ

DK Shivakumar: ಬೆಂಗಳೂರಿನಲ್ಲಿ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಶಾಸಕರು ದೆಹಲಿಗೆ ಹೋಗುವುದೂ ಗೊತ್ತಿಲ್ಲ. ಫಾರಿನ್‌ಗೆ ಹೋಗುವುದೂ ಗೊತ್ತಿಲ್ಲ. ಈ ಬಗ್ಗೆ ನನ್ನನ್ನು ಯಾರೂ ಕೇಳಿಯೂ ಇಲ್ಲ, ಈ ವಿಚಾರದಲ್ಲಿ ನಾನು ಬಾಯಿ ಹಾಕುವುದೂ ಇಲ್ಲ ಎಂದು ಹೇಳಿದ್ದಾರೆ.

ಯಾದಗಿರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರದ ವಿಳಾಸ ತಪ್ಪಾಗಿ ಮುದ್ರಣ; ವಿದ್ಯಾರ್ಥಿಗಳ ಪರದಾಟ

ಯಾದಗಿರಿಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರ ತಪ್ಪಾಗಿ ಮುದ್ರಣ

Yadgiri News: ಇಂದಿನಿಂದ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಯಾದಗಿರಿ ಜಿಲ್ಲೆಯಲ್ಲಿ 20 ಪರೀಕ್ಷೆ ಕೇಂದ್ರದಲ್ಲಿ ಪರೀಕ್ಷೆ ನಡೆದಿದೆ. ಆದರೆ ಹಾಲ್ ಟಿಕೆಟ್‌ನಲ್ಲಿ ಪರೀಕ್ಷೆ ಕೇಂದ್ರದ ವಿಳಾಸದ ತಪ್ಪಾಗಿ ಮುದ್ರಣವಾಗಿದ್ದರಿಂದ ವಿದ್ಯಾರ್ಥಿಗಳು ಬೆಳಗ್ಗೆ ಪರೀಕ್ಷೆ ಕೇಂದ್ರ ಹುಡುಕಲು ಅಲೆದಾಡಿದ್ದಾರೆ.

Second PUC exam 2026: ಫೀಸ್‌ ಕಟ್ಟದ್ದಕ್ಕೆ ವಿದ್ಯಾರ್ಥಿನಿಗೆ ಹಾಲ್‌ ಟಿಕೆಟ್ ನೀಡದ ಕಾಲೇಜು; ಬೈಕ್‌ ಅಡವಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಅನುಮತಿ

ಫೀಸ್‌ ಕಟ್ಟದ್ದಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಲ್‌ ಟಿಕೆಟ್ ನೀಡದ ಕಾಲೇಜು

ರಾಣೇಬೆನ್ನೂರಿನ ಬಿಎಜೆಎಸ್‌ಎಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿ ಫೀಸ್‌ ಕಟ್ಟಿಲ್ಲ ಎಂದು ಪರೀಕ್ಷೆಗೆ ಹಾಲ್‌ ಟಿಕೆಟ್‌ ನೀಡದೆ ಸತಾಯಿಸಲಾಗಿದೆ. 30 ಸಾವಿರ ರೂ. ಬಾಕಿ ಶುಲ್ಕ ಕಟ್ಟಿಲ್ಲ ಎಂದು ಎಕ್ಸಾಂ ಬರೆಯಲು ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಿಲ್ಲ. ಇದರಿಂದ ವಿದ್ಯಾರ್ಥಿನಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಹಾಸನದಲ್ಲಿ ಗ್ರಾಹಕರ 3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌; ಸಾಲದ ಹೆಸರಲ್ಲಿ ವಂಚನೆ!

ಗ್ರಾಹಕರ 3 ಕೋಟಿಗೂ ಹೆಚ್ಚು ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌

Hassan Bank Fraud Case: ಬ್ಯಾಂಕ್​​ನಲ್ಲಿ ಎಫ್‌ಡಿ ಇಟ್ಟರೆ 25 ಲಕ್ಷದಿಂದ 1 ಕೋಟಿವರೆಗೂ ಸಾಲ ಕೊಡಿಸುವ ಆಮಿಷವನ್ನು ಗ್ರಾಹಕರಿಗೆ ಲೇಡಿ ಬ್ಯಾಂಕ್​ ಮ್ಯಾನೇಜರ್ ಒಡ್ಡಿದ್ದಳು. ಅವರ ಮಾತು ನಂಬಿ ಬ್ಯಾಂಕ್‌ನಲ್ಲಿ ಜನ ಹಣ ಇಟ್ಟಿದ್ದಾರೆ. ಆದರೆ, ಎಫ್​ಡಿ ಮಾಡಿರುವ ಹಣಕ್ಕೆ ಯಾವುದೇ ದಾಖಲೆಯನ್ನು ಮ್ಯಾನೇಜರ್​​ ನೀಡಿಲ್ಲ ಎನ್ನಲಾಗಿದೆ. ಗ್ರಾಹಕರಿಂದ ಸಂಗ್ರಹಿಸಿದ ಹಣದೊಂದಿಗೆ ಬ್ಯಾಂಕ್‌ ಮ್ಯಾನೇಜರ್‌ ಎಸ್ಕೇಪ್‌ ಆಗಿದ್ದಾಳೆ.

ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣ, ಸ್ವಾಭಿಮಾನದ ಸಂಕೇತ: ಹೆಬ್ಬಾಳ್ಕರ್

ಶಕ್ತಿ, ಗೃಹಲಕ್ಷ್ಮಿ ಯೋಜನೆಗಳು ಮಹಿಳಾ ಸಬಲೀಕರಣದ ಸಂಕೇತ: ಹೆಬ್ಬಾಳ್ಕರ್

Laxmi Hebbalkar: ಗ್ರಾಮೀಣ ಮಹಿಳೆಯರ ಸಶಕ್ತೀಕರಣಕ್ಕೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಕೊಡುಗೆ ಬಹಳ ದೊಡ್ಡದಿದೆ. ಗ್ರಾಮೀಣ ಜನರ ಆರ್ಥಿಕ ಸಬಲೀಕರಣಕ್ಕೆ ಕೂಡ ಬಸ್‌ಗಳ ಕೊಡುಗೆ ಮಹತ್ವದ್ದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

ವಿವಿಧ ನಿಗಮ, ಮಂಡಳಿಗಳ ಅಧ್ಯಕ್ಷರ ಅವಧಿ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ

ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ನಾಮನಿರ್ದೇಶನಗೊಂಡ ಅಧ್ಯಕ್ಷರ ಮುಕ್ತಾಯಗೊಂಡ/ಮುಕ್ತಾಯಗೊಳ್ಳಲಿರುವ ಅವಧಿಯನ್ನು ಮುಂದಿನ ಆದೇಶದವರೆಗೆ ಮುಂದುವರಿಸಿ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಹೊಸ ಅಧ್ಯಕ್ಷರ ಪಟ್ಟಿ ಅಂತಿಮಗೊಳ್ಳದೆ ಇರುವುದರಿಂದ ಹಳಬರನ್ನೇ ತಾತ್ಕಾಲಿಕವಾಗಿ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ.

ದೇಗುಲ ನಿರ್ಮಾಣಕ್ಕೆ 17 ಲಕ್ಷ ರೂ. ಗೃಹಲಕ್ಷ್ಮಿ ಹಣ; ತಿಮ್ಮಾಪುರ ಮಹಿಳೆಯರ ಸತ್ಕಾರ್ಯಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್‌ ಮೆಚ್ಚುಗೆ

ದೇಗುಲ ನಿರ್ಮಾಣಕ್ಕೆ ಗೃಹಲಕ್ಷ್ಮಿಯರಿಂದ 17 ಲಕ್ಷ ರೂ. ದೇಣಿಗೆ

Gruhalakshmi scheme: ಗದಗ ಜಿಲ್ಲೆಯ ತಿಮ್ಮಾಪುರ ಗ್ರಾಮದ 850 ಕ್ಕೂ ಹೆಚ್ಚು ಮಹಿಳೆಯರು ತಮ್ಮ ಗೃಹಲಕ್ಷ್ಮೀ ಯೋಜನೆಯ ಮಾಸಿಕ ಹಣವನ್ನು ಕೂಡಿಟ್ಟು, ಗ್ರಾಮದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ಮಾಣಕ್ಕೆ ದೇಣಿಗೆ ನೀಡಿರುವುದು ನಿಜಕ್ಕೂ ಮಾದರಿಯಾದ ಕೆಲಸ. ಆರ್ಥಿಕ ಸ್ವಾವಲಂಬನೆಯ ಜೊತೆಗೆ, ಇಂತಹ ಸತ್ಕಾರ್ಯಗಳಲ್ಲಿ ನಮ್ಮ ಮಹಿಳೆಯರು ತೋರುತ್ತಿರುವ ಉತ್ಸಾಹ ನನಗೆ ಹೆಮ್ಮೆ ತಂದಿದೆ. ಮಹಿಳೆಯರ ಕೈಬಲಪಡಿಸುವುದು ಎಂದರೆ ಇಡೀ ಸಮಾಜವನ್ನು ಬಲಪಡಿಸುವುದು ಎಂದರ್ಥ, ಅವರ ಈ ನಿಸ್ವಾರ್ಥ ಸೇವೆಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ.

ಜ್ಯೋತಿಷಿ ಹೇಳಿದ ಭವಿಷ್ಯಕ್ಕೆ ಹೆದರಿ ಮದುವೆ ನಿಶ್ಚಯವಾಗಿದ್ದ ಟೆಕ್ಕಿ ಯುವತಿ ಆತ್ಮಹತ್ಯೆ!

ಬೆಂಗಳೂರಿನಲ್ಲಿ ಜ್ಯೋತಿಷಿ ಭವಿಷ್ಯಕ್ಕೆ ಹೆದರಿ ಟೆಕ್ಕಿ ಯುವತಿ ಆತ್ಮಹತ್ಯೆ!

Bengaluru News: ಬೆಂಗಳೂರು ಹೊರವಲಯದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಎಂಇಐ ಲೇಔಟ್‌ನಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿಯು ಜ್ಯೋತಿಷಿ ಹೇಳಿದ್ದ ಭವಿಷ್ಯದಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Gold Rate Today 28th February 2026: ಮತ್ತೆ ಗ್ರಾಹಕರ ನಿದ್ದೆಗೆಡಿಸಿದ ಬಂಗಾರ; ದರದಲ್ಲಿ ಭಾರಿ ಏರಿಕೆ

ಮತ್ತೆ ಗ್ರಾಹಕರ ನಿದ್ದೆಗೆಡಿಸಿದ ಬಂಗಾರ

Gold Silver Rate Today: ಶನಿವಾರ (ಫೆಬ್ರವರಿ 28) ಆಭರಣಪ್ರಿಯರ ನಿದ್ದೆಗೆಡಿಸಿ ಚಿನ್ನದ ಬೆಲೆ ಭಾರಿ ಹೆಚ್ಚಳ ಕಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 290 ರುಪಾಯಿ ಏರಿಕೆಯಾಗಿ 15,100 ರುಪಾಯಿಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 316 ಅಧಿಕವಾಗಿದ್ದು, 16,473 ರುಪಾಯಿ ಇದೆ.

Heart Attack: ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಪರೀಕ್ಷೆಗೆ ಮುನ್ನವೇ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಭೂಮಿಕಾ ಕೊನೆಯುಸಿರೆಳೆದಿದ್ದಾಳೆ.

Dr.M.C.Sudhakar: ಶ್ರವಣ ಸಾಧನಗಳ ವಿತರಣೆ ಮಾನವೀಯ ಕಾರ್ಯ: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್

ಶ್ರವಣ ಸಾಧನಗಳ ವಿತರಣೆ ಮಾನವೀಯ ಕಾರ್ಯ

ರಾಷ್ಟ್ರೀಯ ಬಾಲ ಸ್ವಾಸ್ಥ್ಯ (ಆರ್.ಬಿ.ಎಸ್.ಕೆ) ಕಾರ್ಯಕ್ರಮದಡಿ ಅಂಗನವಾಡಿ ಮಕ್ಕಳಿಗೆ ವರ್ಷಕ್ಕೆ ನಾಲ್ಕು ಬಾರಿ ಹಾಗೂ ಶಾಲಾ ಮಕ್ಕಳಿಗೆ ಎರಡು ಬಾರಿ ಉಚಿತ ಆರೋಗ್ಯ ತಪಾಸಣೆ ಮಾಡಿ ಶ್ರವಣ ದೋಷವಿರುವವರಿಗೆ ಶ್ರವಣ ಸಾಧನ, ದೃಷ್ಠಿ ದೋಷವುಳ್ಳವರಿಗೆ ಕನ್ನಡಕ ಸೇರಿದಂತೆ ಹೆಚ್ಚಿನ ಶಸ್ತ್ರಚಿಕಿತ್ಸೆ ಅಗತ್ಯವಿರುವವರಿಗೆ ಉಚಿತ ಶಸ್ತ್ರಚಿಕಿತ್ಸೆಯನ್ನು ಮಾಡಿಸು ವಂತಹ ಕಾರ್ಯ ಜಿಲ್ಲಾಡಳಿತ ದಿಂದ ಮಾಡಲಾಗುತ್ತಿದೆ.

ಅಮೆಜಾನ್ ಬಜಾರ್‌ನಲ್ಲಿ ₹299 ಕ್ಕಿಂತ ಕಡಿಮೆ ಬೆಲೆಯಲ್ಲಿ ಹೋಳಿ ಹಬ್ಬದ ಅಗತ್ಯ ವಸ್ತುಗಳೊಂದಿಗೆ ಬಣ್ಣಗಳ ಹಬ್ಬ ಆಚರಿಸಿ

ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತುಗಳೊಂದಿಗೆ ಬಣ್ಣಗಳ ಹಬ್ಬ ಆಚರಿಸಿ

ಗ್ರಾಹಕರು ಹೋಳಿ ಹಬ್ಬದ ವಿವಿಧ ಅಗತ್ಯ ವಸ್ತುಗಳನ್ನು ಅತ್ಯಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದು. ಗ್ರಾಹಕರು ₹299 ಕ್ಕಿಂತ ಕಡಿಮೆ ಬೆಲೆಯಲ್ಲಿ ಹೋಳಿ ಉತ್ಪನ್ನಗಳನ್ನು ಪಡೆಯಬಹುದು, ಜೊತೆಗೆ ಎಲ್ಲಾ ಆರ್ಡರ್‌ಗಳ ಮೇಲೆ ಹೆಚ್ಚುವರಿ ಕ್ಯಾಶ್‌ಬ್ಯಾಕ್ ಮತ್ತು ಉಚಿತ ಡೆಲಿವರಿ ಸೌಲಭ್ಯವನ್ನು ಪಡೆಯಬಹುದು ಹಾಗೂ ಬೃಹತ್ ರಿಯಾಯಿತಿಗಳನ್ನು ಅನ್ಲಾಕ್ ಮಾಡಬಹುದು.

Sirsi News: 'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಆರಂಭ

'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಆರಂಭ

​ಕಂಪನಿಯು ಈ ಬಾರಿ ಅತ್ಯಂತ ಜನಪ್ರಿಯ ಹಾಗೂ ವಿಭಿನ್ನ ಶೀರ್ಷಿಕೆಯ 'ನೀ ಹೂ ಅಂದ್ರ ಗಿಚ್ಚ ಆಕ್ಕೇನಿ ಇಲ್ಲಂದ್ರ ಹುಚ್ಚಕ್ಕೇನಿ' ಎಂಬ ಸಾಮಾಜಿಕ ನಾಟಕವನ್ನು ವೇದಿಕೆಗೆ ತಂದಿದೆ. ಹಾಸ್ಯ, ಭಾವನಾತ್ಮಕ ಸನ್ನಿವೇಶಗಳು ಮತ್ತು ಅದ್ಭುತ ಸಂಭಾಷಣೆಗಳನ್ನು ಒಳಗೊಂಡ ಈ ನಾಟಕವು ಪ್ರೇಕ್ಷಕರನ್ನು ರಂಜಿಸುವಲ್ಲಿ ಯಶಸ್ವಿಯಾಗಿದೆ.

Body Found: ಬೆಂಗಳೂರಿನ ಮನೆಯೊಳಗೆ ವ್ಯಕ್ತಿಯ ಕೊಳೆತ ಶವ ಪತ್ತೆ; ಹತ್ಯೆ ಎಸಗಿ ಮನೆಗೆ ಲಾಕ್‌ ಮಾಡಿದ ದುಷ್ಟರು

ಬೆಂಗಳೂರಿನ ಮನೆಯೊಳಗೆ ಕೊಳೆತ ಶವ ಪತ್ತೆ; ಹತ್ಯೆಯೆಸಗಿ ಮನೆಗೆ ಲಾಕ್‌

ನಾಗರಾಜ್ ಎಂಬವರಿಗೆ ಸೇರಿದ ಮನೆಯಲ್ಲಿ ಶವ ಪತ್ತೆಯಾಗಿದೆ. 4 ದಿನದ ಹಿಂದೆ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಮನೆಗೆ ಬೀಗ ಹಾಕಲಾಗಿತ್ತು ಹಾಗೂ ಸುತ್ತಮುತ್ತ ಕೆಟ್ಟ ವಾಸನೆ ಬರುತ್ತಿತ್ತು. ಮನೆ ಮಾಲೀಕ ನಾಗರಾಜ್‌ಗೆ ಸ್ಥಳೀಯರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಾಗಲಗುಂಟೆ ಪೊಲೀಸರು ಬಂದಿದ್ದು, ಈ ವೇಳೆ ಗುರುತು ಸಿಗದ ಬೆತ್ತಲೆ ಕೊಳೆತ ಮೃತದೇಹ ಕಂಡು ಶಾಕ್ ಆಗಿದ್ದಾರೆ.

Raichur News: ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ರಾಯಚೂರಿನಲ್ಲಿ ಬೈಕ್‌ಗೆ ಟ್ರಕ್‌ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಮೃತರೆಲ್ಲಾ ನಗರದ ಸುಖಾಣಿ ಕಾಲೋನಿ ನಿವಾಸಿಗಳು ಎಂದು ಗುರುತಿಸಲಾಗಿದೆ. ಗಂಜ್ ವೃತ್ತದಿಂದ ಬರುತ್ತಿದ್ದ ಟ್ರಕ್ ಲಿಂಗಸುಗೂರು ರಸ್ತೆಯಿಂದ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಪ್ರಕರಣ ಸಂಬಂಧ ರಾಯಚೂರು ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ (Raichur City Traffic Police) ಎಫ್‌ಐಆರ್‌ ದಾಖಲಾಗಿದೆ.

Bengaluru Crime: ಬೆಂಗಳೂರಿನಲ್ಲಿ ಭೀಕರ ಅತ್ಯಾಚಾರ ದಂಧೆ, ಡ್ರಗ್ಸ್‌ ನೀಡಿ 19 ಕಾಲೇಜು ಯುವತಿಯರ ಮೇಲೆ ದೌರ್ಜನ್ಯ

ಭೀಕರ ಅತ್ಯಾಚಾರ ದಂಧೆ, ಡ್ರಗ್ಸ್‌ ನೀಡಿ 19 ಕಾಲೇಜು ಯುವತಿಯರ ಮೇಲೆ ದೌರ್ಜನ್ಯ

ತನಿಖೆಯ ವೇಳೆ ಪೊಲೀಸರಿಗೆ ಆಘಾತಕಾರಿ ವಿಷಯವೊಂದು ತಿಳಿದುಬಂದಿದೆ. ಈ ಪಾರ್ಟಿಗಳು ನಡೆಯುತ್ತಿದ್ದ ಜಕ್ಕೂರು ಸಮೀಪದ ವಿಲ್ಲಾ ಒಬ್ಬ ಹಿರಿಯ ಐಪಿಎಸ್ ಅಧಿಕಾರಿಗೆ ಸೇರಿದ್ದೆನ್ನಲಾಗಿದೆ. ಈ ಬಗ್ಗೆ ಪೊಲೀಸರು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ನಿಕಿಲ್ ಬಂಧನವಾಗುತ್ತಿದ್ದಂತೆಯೇ ಕೆಲವು ಪ್ರಭಾವಿಗಳು ಪೊಲೀಸರ ಮೇಲೆ ಒತ್ತಡ ಹೇರಿದ್ದರು ಎಂದೂ ಗೊತ್ತಾಗಿದೆ.

Assault case: ಕೊಡಗಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ, ಒಬ್ಬನ ಬಂಧನ

ಕೊಡಗಿನಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ, ಒಬ್ಬನ ಬಂಧನ

ಆರೋಪಿಗಳ ಶೀಘ್ರ ಬಂಧನಕ್ಕೆ ಹಿಂದೂ ಪರ ಸಂಘಟನೆಗಳು (Hindu Organizations) ಆಗ್ರಹಿಸಿವೆ. ರಾಶೀದ್ ಸಿದ್ದಿಕ್, ಸುಹೇಲ್ ಹಾಗೂ ನಾಫಿ ಎಂಬವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಾಲ್ವರ ಪೈಕಿ ಸುಹೇಲ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Loading...