ಬತ್ತಿದ ಜಲಮೂಲಗಳು: ರೈತರಲ್ಲಿ ಹೆಚ್ಚಿದ ಆತಂಕ
ಬೀದರ್ ಜಿಲ್ಲೆಯ ಪ್ರಮುಖ ಕಾರಂಜಾ ಜಲಾಶಯದಲ್ಲಿ ನೀರಿನ ಮಟ್ಟ ಶೇ.59.50ಕ್ಕೆ ಕುಸಿದಿದ್ದು, ಚುಳಕಿನಾಲಾದಲ್ಲಿ ಶೇ.57.04 ರಷ್ಟಿದೆ. ಅಪ್ಪರ್ ಮುಲ್ಲಾಮಾರಿ ಜಲಾಶಯವು ಶೇ.27.64 ರಷ್ಟಕ್ಕೆ ಕುಸಿದಿರುವುದು ಆ ಭಾಗದ ರೈತರ ಕೃಷಿ ಆಧಾರಿತ ಜೀವನಕ್ಕೆ ದೊಡ್ಡ ಹೊಡೆತ ನೀಡಿದೆ. ಯಾದಗಿರಿ ಜಿಲ್ಲೆಯ ಪರಿಸ್ಥಿತಿಯಂತೂ ಅತ್ಯಂತ ಗಂಭೀರವಾಗಿದ್ದು, ಹತ್ತಿಕುಣಿ ಜಲಾಶಯದಲ್ಲಿ ಕಳೆದ ವರ್ಷ ಶೇ. 80.11 ರಷ್ಟು ನೀರಿದ್ದರೆ, ಈ ಬಾರಿ ಕೇವಲ ಶೇ.25.00 ರಷ್ಟು ಮಾತ್ರ ಇದೆ.