ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

ಯಶವಂತರಾಯಗೌಡ ಪಾಟೀಲರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ʼಗೆ ಆಗ್ರಹ‌: ಅಯೂಬ್ ಬಾಗವಾನ.

ಪಾಟೀಲರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ʼಗೆ ಆಗ್ರಹ‌

ಶಾಸಕ ಕೇವಲ ಅಭಿವೃದ್ದಿ ಮೂಲ ಮಂತ್ರವಾಗಿಸದೆ ಸರ್ವಜನಾಂಗವನ್ನು ಶಾಂತಿ, ಪ್ರೀತಿ, ವಿಶ್ವಾಸದಿಂದ ಗೌರವಿಸುವ ಜಾತ್ಯಾತೀತ ನಾಯಕರ ಇಂಡಿ ನಗರದಲ್ಲಿ ಲಿಂಬೆ ಅಭಿವೃದ್ದಿ ಮಂಡಳಿ, ಕೃಷಿ ವಿಜ್ಞಾನ ಕೇಂದ್ರ, ಜಿಟಿಟಿಸಿ ಕಾಲೇಜು, ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳು ಹಾಗೂ ವಸತಿ ನಿಲಯಗಳು, ಅನೇಕ ದಶಕಗಳಿಂದ ಪಾಳು ಬಿದ್ದ ಶ್ರೀಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ಸ್ಥಾಪಿಸಿ 16 ಸಾವಿರ ರೈತರ ಆಸ್ತಿಯನ್ನಾಗಿ ಮಾಡಿದ್ದಾರೆ.

MLA Yashwant Rayagouda Patil: ವಿಧಾನಸಭೆಯಲ್ಲಿ ಧ್ವನಿಯಾದ ಗಾಣಗಾಪೂರ ರಸ್ತೆ: ಶಾಸಕ ಯಶವಂತರಾಯಗೌಡ ಪಾಟೀಲ

ವಿಧಾನಸಭೆಯಲ್ಲಿ ಧ್ವನಿಯಾದ ಗಾಣಗಾಪೂರ ರಸ್ತೆ: ಶಾಸಕ ಪಾಟೀಲ

ಸದರಿ ಯೋಜನೆಯಡಿಯಲ್ಲಿ ಉದ್ದೇಶಿಸಿರುವ ರಸ್ತೆ ಅಭಿವೃದ್ದಿ ಕಾಮಗಾರಿಗಳ ಪ್ರಾಥಮಿಕ ಯೋಜನಾ ವರದಿಗಳನ್ನು ರಾಜ್ಯ ಸರಕಾರದ ಆರ್ಥಿಕ ಇಲಾಖೆಯ ಮೂಲಕ ಭಾರತ ಸರಕಾರದ ಆರ್ಥಿಕ ವ್ಯವಹಾರಗಳ ಮಂತ್ರಾ ಲಯಕ್ಕೆ ಸಲ್ಲಿಸಲಾಗಿದೆ. ಪ್ರಸ್ತಾವನೆ ಅನುಮೋ ದನೆ ನೀಡಿ ಪ್ರಸ್ತಾವನೆಯನ್ನು ದಿನಾಂಕ 24-02-2025ರಂದು ಏಶಿಯನ್ ಡೆವೆಲಪ್‌ʼಮೆಂಟ್ ಬ್ಯಾಂಕ್ ಗೆ ಕಳಿಸಲಾಗಿರುತ್ತದೆ

ಮಹರ್ಷಿ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ: ಎಸ್ಸಿ ಎಸ್ಟಿ ಹೆಚ್ಚಿನ ಮೀಸಲಾತಿ ಜಾರಿಗೆ ಆಗ್ರಹ

ಮಹರ್ಷಿ ವಾಲ್ಮೀಕಿ ನಾಯಕ ಸಮಾಜದಿಂದ ಪ್ರತಿಭಟನೆ

ಕಳೆದ 70 ವರ್ಷದಿಂದಲೂ ಮೀಸಲಾತಿ ಹೆಚ್ಚಳಕ್ಕೆ ಬೇಡಿಕೆ ಇದ್ದರೂ ಈಗ ಹೆಚ್ಚಳ ಮಾಡಿ ಮೂಗಿಗೆ ತುಪ್ಪ ಸವರಿದಂತೆ ಸರ್ಕಾರಗಳು ನಿರ್ಲಕ್ಷ್ಯ ತೋರಿದೆ. 57 ಸಾವಿರ ಸರ್ಕಾರಿ ಹುದ್ದೆ ಭರ್ತಿಗೆ ಸರ್ಕಾರ ಮುಂದಾಗಿದೆ. ಹಳೆಯ ಮೀಸಲಾತಿ ಶೇ.3ರಂತೆ 1600 ಹುದ್ದೆ ಮಾತ್ರ ದೊರೆ ಯಲಿದೆ. ಹೆಚ್ಚುವರಿ ಶೇ.7ರಂತೆ ಭರ್ತಿ ಮಾಡಿದರೆ ಎಸ್ಟಿ ಜನಾಂಗಕ್ಕೆ 3 ಸಾವಿರಕ್ಕೂ ಅಧಿಕ ಹುದ್ದೆ ಸಿಗಲಿದೆ ಎಂದರು

Domestic Gas Price hike: ಗೃಹಬಳಕೆ ಅನಿಲ ಬೆಲೆ ಏರಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಗೃಹಬಳಕೆ ಅನಿಲ ಬೆಲೆ ಏರಿಕೆ: ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಸರ್ಕಾರ ಯುದ್ಧದ ಸಂದರ್ಭವನ್ನು ಬಳಸಿಕೊಂಡು ಗೃಹ ಬಳಕೆ ಸಿಲಿಂಡರ್ ಬೆಲೆ ಏಕಾಏಕಿ 60 ರೂಪಾಯಿ ಹೆಚ್ಚಳ ಮಾಡಿರುವುದು ಸರಿಯಲ್ಲ. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳ ಮೇಲೆ ಭಾರೀ ಹೊರೆ ಬಿದ್ದಿದೆ .ಇದೇ ಕೇಂದ್ರದ ಬಡವರ ನೀತಿಯಾಗಿದೆ ಎಂದರು.

Somnath Jyotirlinga: ಮಾ.14ರಿಂದ ಜಿಲ್ಲೆಯಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ ಪ್ರಾರಂಭ : ಚಂದ್ರಿಕಾ ಹೇಳಿಕೆ

14ರಿಂದ ಜಿಲ್ಲೆಯಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ ಪ್ರಾರಂಭ

ಮಾ.15ರ ಬೆಳಿಗ್ಗೆ 7ರಿಂದ 11ಗಂಟೆಯವರೆಗೆ ಜ್ಯೋತಿರ್ಲಿಂಗ ದರ್ಶನ ಹಾಗು ಸತ್ಸಂಗವನ್ನು ಗುಡಿಬಂಡೆ ಪಟ್ಟಣದ ತಾಲೂಕು ಆಫೀಸ್ ಪಕ್ಕದ ಮುಖ್ಯ ರಸ್ತೆಯ  ಲಕ್ಷ್ಮೀ ಆದಿ ನಾರಾಯಣ ಸ್ವಾಮಿ ದೇವಸ್ಥಾನದಲ್ಲಿ  ಮತ್ತು ಅಂದು ಸಂಜೆ ಸಂಜೆ 5.30ರಿಂದ 9 ಗಂಟೆಯವರೆಗೆ ಬಾಗೇಪಲ್ಲಿಯ ಡಿ.ವಿ.ಜಿ  ರಸ್ತೆಯಲ್ಲಿರುವ ಶ್ರೀ ಸಾಯಿ ಶ್ರೀನಿವಾಸ ಕಾಂಪ್ಲೆಕ್ಸ್ನ ದ್ವಾರಕಾ ಫಂಕ್ಷನ್ ಹಾಲ್‌ನಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿಕ ಭಕ್ತರು ಆಗಮಿಸಲು ಮನವಿ ಮಾಡಿದರು

Cabinet Meeting: ಬೆಂಗಳೂರಿನಲ್ಲಿ ಹೊಸ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣ, ಮೈಶುಗರ್ ಕಾರ್ಖಾನೆ ಆಧುನೀಕರಣಕ್ಕೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರದಲ್ಲಿ (ಕೆಎಚ್‌ಬಿ ಸೂರ್ಯಸಿಟಿ) 80 ಸಾವಿರ ಆಸನಗಳ ಸಾಮರ್ಥ್ಯವಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾ ಸಂಕೀರ್ಣ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕೆ ರಾಜ್ಯ ಸಚಿವ ಸಂಪುಟದಲ್ಲಿ ಗುರುವಾರ ಅನುಮೋದನೆ ನೀಡಲಾಗಿದೆ.

Shidlaghatta News: ನಗರಸಭೆ ಸಿಬ್ಬಂದಿ ಮಾಡಬೇಕಾದ ಕೆಲಸವನ್ನು ತಾವು ಮಾಡಿ ನಗರಾಡಳಿತಕ್ಕೆ ಹಿಡಿ ಶಾಪ ಹಾಕಿದ ಆಟೋ ಚಾಲಕರು

ನಗರಾಡಳಿತಕ್ಕೆ ಹಿಡಿ ಶಾಪ ಹಾಕಿದ ಆಟೋ ಚಾಲಕರು

ಚರಂಡಿಯಲ್ಲಿ ಕಸ ತುಂಬಿ ನೀರು ಸರಿಯಾಗಿ ಹರಿಯದೇ ದೇವಾಲಯದ ಪಾಯದ ಒಳಭಾಗ ಕ್ಕೂ ನುಗ್ಗುತ್ತಿರುವ ದುಸ್ಥಿತಿ ಉಂಟಾಗಿತ್ತು. ಈ ಬಗ್ಗೆ ನಗರಸಭೆ ಸಿಬ್ಬಂದಿಗೆ ಮಾಹಿತಿ ನೀಡಿದರೂ ಏನೂ ಪ್ರಯೋಜನ ಆಗಿಲ್ಲ.ನಗರಸಭೆ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಸ್ವಚ್ಛತೆ ನಡೆಯದೆ ದುರ್ವಾಸನೆ ಬೀರುತ್ತಿತ್ತು

MLA S.N. Subbareddy: 2 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಶಾಸಕ ಸುಬ್ಬಾರೆಡ್ಡಿ ಭೂಮಿ ಪೂಜೆ

2 ಕೋಟಿ ವೆಚ್ಚದ ಸೇತುವೆ ಕಾಮಗಾರಿಗೆ ಭೂಮಿ ಪೂಜೆ

ದಪ್ಪರ್ತಿ ಗ್ರಾಮದಿಂದ ಕೊಂಡವಳಹಳ್ಳಿ ಹಾಗೂ ಗುಡಿಬಂಡೆ ಭಾಗಗಳಿಗೆ ಹೋಗಲು ಸರಿಯಾದ ಸೇತುವೆ ಇಲ್ಲದೆ ಇಲ್ಲಿನ ಜನರು ಸಂಕಷ್ಟ ಪಡುತ್ತಿದ್ದರು. ಅದರಲ್ಲೂ ಮಳೆಗಾಲದಲ್ಲಿ ಸಮಸ್ಯೆ ಮತ್ತಷ್ಟು ಹೆಚ್ಚಾಗುತ್ತಿತ್ತು. ಇಲ್ಲಿ ಸೇತುವೆ ನಿರ್ಮಾಣ ಮಾಡಿಕೊಡುವಂತೆ ಸಾಕಷ್ಟು ಬಾರಿ ಮನವಿ ಮಾಡಿದ್ದರು.

ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ “ವುಮೆನ್‌-ಆಥಾನ್‌ನಲ್ಲಿ 1,500ಕ್ಕೂ ಹೆಚ್ಚು ಮಹಿಳೆಯರು ಭಾಗಿ

ವುಮೆನ್‌-ಆಥಾನ್‌ನಲ್ಲಿ 1,500ಕ್ಕೂ ಹೆಚ್ಚು ಮಹಿಳೆಯರು ಭಾಗಿ

ಕಲ್ಯಾಣ ನಗರದಿಂದ ಪ್ರಾರಂಭಗೊಂಡ ಆಥಾನ್‌, ಸುಮಾರು ಮೂರು ಕಿ.ಮೀ.ವರೆಗೂ ಮಹಿಳಾ ಆರೈಕೆ ಬಗ್ಗೆ ಸಂದೇಶ ಹೊಂದಿರುವ ಫಲಕಗಳನ್ನು ಹಿಡಿದು ಸಾಗಿದರು. ಒಂದೂವರೆ ಸಾವಿರ ಕ್ಕೂ ಅಧಿಕ ಮಹಿಳೆಯರು ನೇರಳೆ ಬಣ್ಣದ ಬಟ್ಟೆ ಧರಿಸಿ, ಎಲ್ಲರೂ ಒಂದೇ ಎಂಬ ಸಂದೇಶ ದೊಂದಿಗೆ ಸಾಗಿದರು. ಈ ವೇಳೆ ಹಲವು ಆಸ್ಪತ್ರೆ ಸಿಬ್ಬಂದಿಗಳು, ಮಕ್ಕಳು ಸಹ ಇದರಲ್ಲಿ ಪಾಲ್ಗೊಂಡರು.

Internal Reservation: ಒಳ ಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯಿಂದಲೇ ಅಡ್ಡಿ: ಪದ್ಮಶ್ರೀ ಮಂದಕೃಷ್ಣ ಮಾದಿಗ ಆರೋಪ

ಒಳ ಮೀಸಲಾತಿ ಜಾರಿಗೆ ಮಲ್ಲಿಕಾರ್ಜುನ ಖರ್ಗೆ ಅಡ್ಡಿ: ಮಂದಕೃಷ್ಣ ಮಾದಿಗ

ತಮಿಳುನಾಡು, ಆಂಧ್ರ ಮತ್ತು ತೆಲಂಗಾಣದಲ್ಲಿ ಒಂದೇ ಸಮಿತಿ ವರದಿ ಆಧಾರದ ಮೇಲೆ ಒಳ ಮೀಸಲಾತಿ ಜಾರಿಯಾಗಿದೆ. ಆದರೆ ಕರ್ನಾಟಕದಲ್ಲಿ ಮೂರು ಸಮಿತಿಗಳ ವರದಿಗಳಿದ್ದರೂ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ವಿರುದ್ಧದ ನಿಲುವು ತಳೆಯುತ್ತಿದೆ ಎಂದು ಪದ್ಮಶ್ರೀ ಮಂದಕೃಷ್ಣ ಮಾದಿಗ ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ಉದ್ಘಾಟನೆಯಾದ ರೆಸ್ಟೋರೆಂಟ್ ಬಂದ್; ಮಾಲಕನ ಭಾವನಾತ್ಮಕ ಪೋಸ್ಟ್

ಎಲ್‌ಪಿಜಿ ಕೊರತೆ: ಬೆಂಗಳೂರಿನಲ್ಲಿ‌ ಇತ್ತೀಚೆಗೆ ತೆರೆದ ರೆಸ್ಟೋರೆಂಟ್ ಬಂದ್

Viral Post: ಬೆಂಗಳೂರಿನ ರೆಸ್ಟೋರೆಂಟ್ ಮಾಲಕರೊಬ್ಬರ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿದೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ಹೊಸದಾಗಿ ರೆಸ್ಟೋರೆಂಟ್ ಅನ್ನು ಇತ್ತೀಚೆಗೆ ತೆರೆಯಲಾಗಿತ್ತು. ಆದರೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಸಮಸ್ಯೆಯಿಂದಾಗಿ ಕೆಲವೇ ದಿನಗಳಲ್ಲಿ ಹೋಟೆಲ್‌ನ ಬಾಗಿಲು ಮುಚ್ಚುವಂತಾಗಿದೆ.

ಬಸವಣ್ಣ ಒಬ್ಬ ಹೇಡಿ, ಅಕ್ಕಮಹಾದೇವಿ ಆ ರೀತಿಯ ಮಹಿಳೆ; ಅಶ್ಲೀಲ ಪೋಸ್ಟ್‌ ಹಾಕಿದ ಕಿಡಿಗೇಡಿ ಬಂಧನಕ್ಕೆ ಆಗ್ರಹ

ಬಸವಣ್ಣ, ಅಕ್ಕಮಹಾದೇವಿ ಬಗ್ಗೆ ಅಶ್ಲೀಲ ಪೋಸ್ಟ್‌; ಕಿಡಿಗೇಡಿ ಬಂಧನಕ್ಕೆ ಆಗ್ರಹ

Basavanna and Akka Mahadevi: ಶಿವಶರಣರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಖಂಡಿಸಿ ವಿಜಯಪುರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಸವಾದಿ ಶರಣರ ಅನುಯಾಯಿಗಳು ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದ್ದು, ಕಿಡಿಗೇಡಿಯ ಬಂಧನಕ್ಕೆ ಆಗ್ರಹಿಸಿದ್ದಾರೆ.

ಕೃಷ್ಣಾ ಮೇಲ್ದಂಡೆ ಯೋಜನೆ ಅಧಿಸೂಚನೆ ಹೊರಡಿಸುವ ಬಗ್ಗೆ ಬಿಜೆಪಿಯವರು ಧ್ವನಿ ಎತ್ತುತ್ತಿಲ್ಲ: ಡಿ.ಕೆ. ಶಿವಕುಮಾರ್

ಕೃಷ್ಣಾಮೇಲ್ದಂಡೆ ಯೋಜನೆ ವಿಚಾರ ಬಿಜೆಪಿಯವರು ಧ್ವನಿ ಎತ್ತುತ್ತಿಲ್ಲ: ಡಿಕೆಶಿ

DK Shivakumar: ಕೃಷ್ಣಾ ಮೇಲ್ದಂಡೆ ಯೋಜನೆ ಭೂ ಸಂತ್ರಸ್ತ ರೈತರಿಗೆ ಪರಿಹಾರ ನೀಡುವ ಬಗ್ಗೆ ಸರ್ಕಾರ ಈಗಾಗಲೇ ತೀರ್ಮಾನ ಮಾಡಿದ್ದು, ಪುನರ್ವಸತಿ ಕಾರ್ಯವನ್ನು ಬಾಕಿ ಉಳಿಸಿದ್ದೇವೆ. ಈ ಯೋಜನೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಲಿ, ನ್ಯಾಯಬದ್ಧವಾಗಿ ಸಂತ್ರಸ್ತರಿಗೆ ಪರಿಹಾರ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

BAMUL Milk incentive: ಯುಗಾದಿ ಹಬ್ಬಕ್ಕೆ ಬಮುಲ್‌ನಿಂದ ಹೈನುಗಾರರಿಗೆ ಭರ್ಜರಿ ಗಿಫ್ಟ್; ಪ್ರತಿ ಲೀಟರ್‌ ಹಾಲಿಗೆ 1 ರೂ. ಪ್ರೋತ್ಸಾಹ ಧನ, ಗುತ್ತಿಗೆ ಕಾರ್ಮಿಕರಿಗೆ 5 ಸಾವಿರ ಬೋನಸ್‌

ಹಾಲು ಉತ್ಪಾದಕರಿಗೆ ಭರ್ಜರಿ ಗಿಫ್ಟ್; ಲೀಟರ್‌ಗೆ 1 ರೂ. ಪ್ರೋತ್ಸಾಹ ಧನ

ಕಳೆದ ವರ್ಷ 14.50 ಕೋಟಿ ನಷ್ಟದಲ್ಲಿದ್ದ ಬಮುಲ್‌ಗೆ ಈ ವರ್ಷ 60 ಕೋಟಿ ರೂ. ಲಾಭವಾಗಿದೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲು ಬಮುಲ್‌ ಮುಂದಾಗಿದ್ದು, ಮಾ.31 ಅಥವಾ ಏ.10ರ ಒಳಗೆ ರೈತರ ಖಾತೆಗೆ ಹಣ ಬರಲಿದೆ. ಬಮುಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಇಂತಹ ತೀರ್ಮಾನ ಮಾಡಲಾಗಿದೆ.

MLA Puttaswamy Gowda: ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಅಮೂಲಾಗ್ರ ಬದಲಾವಣೆಗೆ ಬದ್ಧ: ಶಾಸಕ ಪುಟ್ಟಸ್ವಾಮಿಗೌಡ

ಕ್ಷೇತ್ರದಲ್ಲಿ ಮೂಲಸೌಕರ್ಯಗಳ ಅಮೂಲಾಗ್ರ ಬದಲಾವಣೆಗೆ ಬದ್ಧ

ಇಂದು ತಾಲೂಕಿನಲ್ಲಿ ಸುಮಾರು ಹತ್ತೊಂಬತ್ತು ಗ್ರಾಮಗಳಲ್ಲಿ ಸುಮಾರು 3.5 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಜನರಿಗೆ ಮೂಲಸೌಕರ್ಯಗಳಾದ ರಸ್ತೆ, ಚರಂಡಿ , ಬೀದಿ ದೀಪ, ಕುಡಿಯುವ ನೀರು, ಸಮುದಾಯ ಭವನ ಸೇತುವೆ ಅಭಿವೃದ್ಧಿ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸುತ್ತಿದ್ದು, ಕಾಮಗಾರಿಗಳನ್ನು ಮೂರು ತಿಂಗಳುಗಳ ಒಳಗೆ ಉತ್ತಮ ಗುಣಮಟ್ಟದಲ್ಲಿ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರು =ಗಳಿಗೆ ಸೂಚಿಸಲಾಗಿದೆ

ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು, ಪ್ರಾಂಶುಪಾಲರ ಸಂಘದಿಂದ ಬೃಹತ್ ಪ್ರತಿಭಟನೆ

ಇಪಿ 10 ಡಿಜಿಡಿ 2026ರ ಪ್ರಸ್ತಾವನೆ ಕೈಬಿಡಬೇಕೆಂದು ಆಗ್ರಹಿಸಿ ಪ್ರತಿಭಟನೆ

ನಗರ ಹೊರವಲಯ ಜಿಲ್ಲಾಡಳಿತ ಭವನದ ಎದುರು ಗುರುವಾರ ಮಧ್ಯಾಹ್ನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ  ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ನೀಡಲು ಸರಕಾರದ ಮುಂದಿರುವ ಪ್ರಸ್ತಾವನೆಯನ್ನು ಕೂಡಲೇ ಕೈಬಿಡಬೇಕು ಎಂದು ಪ್ರತಿಭಟನೆ ಮೂಲಕ ಆಗ್ರಹಿಸಲಾಯಿತು.

IDBI Recruitment 2026: ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆ; ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ

ಐಡಿಬಿಐ ಬ್ಯಾಂಕ್‌ನಲ್ಲಿದೆ ಬರೋಬ್ಬರಿ 1,300 ಹುದ್ದೆ

Bank Jobs: ದೇಶದ ಪ್ರತಿಷ್ಠಿತ ಇಂಡಸ್ಟ್ರಿಯಲ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಖಾಲಿ ಇರುವ ಬರೋಬ್ಬರಿ 1,300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮಾರ್ಚ್‌ 19.

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್‌ಗೆ ಜಾಮೀನು ಮಂಜೂರು

ಬಿಕ್ಲು ಶಿವ ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಬಸವರಾಜ್‌ ಜಾಮೀನು

ಬಿಕ್ಲು ಶಿವ ಪ್ರಕರಣದಲ್ಲಿ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನಿರಾಕರಿಸುತ್ತಿದ್ದಂತೆ ಶಾಸಕ ಬೈರತಿ ಬಸವರಾಜ್‌ ಪರಾರಿಯಾಗಿದ್ದರು. ಬಳಿಕ ಸುಪ್ರೀಂಕೋರ್ಟ್‌ ಕೂಡ ಜಾಮೀನು ಅರ್ಜಿ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಫೆಬ್ರವರಿ 13ರಂದು ಬೆಂಗಳೂರಿಗೆ ವಾಪಸ್ಸಾಗಿದ್ದ ಶಾಸಕನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಇದೀಗ ಅವರಿಗೆ ಜಾಮೀಜು ಸಿಕ್ಕಿದೆ.

Ugadi-Ramzan Shopping 2026: ವೀಕೆಂಡ್‌ನಲ್ಲಿ ಯುಗಾದಿ-ರಂಜಾನ್ ಶಾಪಿಂಗ್ ಮೇನಿಯಾ

ವೀಕೆಂಡ್‌ನಲ್ಲಿ ಯುಗಾದಿ-ರಂಜಾನ್ ಶಾಪಿಂಗ್ ಮೇನಿಯಾ

Ugadi-Ramzan Shopping: ವೀಕೆಂಡ್ ಆರಂಭವಾಗಿಲ್ಲ! ಆಗಲೇ ಮುಂಬರುವ ಯುಗಾದಿ- ರಂಜಾನ್ ಹಬ್ಬಗಳ ಶಾಪಿಂಗ್ ಎಲ್ಲೆಡೆ ಆರಂಭವಾಗಿದೆ. ಯಾವ್ಯಾವ ಬಗೆಯವು ಈ ಹಬ್ಬದ ಸೀಸನ್‌ನಲ್ಲಿ ಬಂದಿವೆ? ಯಾವುದಕ್ಕೆ ಬೇಡಿಕೆ ಹೆಚ್ಚಿದೆ? ಈ ಕುರಿತಂತೆ ಇಲ್ಲಿದೆ ವರದಿ.

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಗೇಟ್‌ಗಳ ಬದಲಾವಣೆ: ಡಿ.ಕೆ. ಶಿವಕುಮಾರ್

ಮೇ ವೇಳೆಗೆ ತುಂಗಭದ್ರಾ ಅಣೆಕಟ್ಟಿನ ಗೇಟ್‌ಗಳ ಬದಲಾವಣೆ: ಡಿಕೆಶಿ

DK Shivakumar: ತುಂಗಭದ್ರಾ ಅಣೆಕಟ್ಟಿನ ಎಲ್ಲಾ ಕ್ರಸ್ಟ್‌ಗೇಟ್‌ಗಳ ಬದಲಾವಣೆ ಕಾರ್ಯವನ್ನು ನಮ್ಮ ಸರ್ಕಾರ ಆದ್ಯತೆ ಮೇರೆಗೆ ಕೈಗೆತ್ತಿಕೊಂಡಿದ್ದು, ಬರುವ ಮೇ ವೇಳೆಗೆ ಪೂರ್ಣಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಶಾಲಾ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರೀತಿಸುವಂತೆ ಸಹಪಾಠಿ ಒತ್ತಾಯ; ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ಘಟನೆ ನಡೆದಿದೆ. ಹತ್ತನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿಗೆ ಲವ್ ಮಾಡುವಂತೆ ಸಹಪಾಠಿ ಚುಡಾಯಿಸುತ್ತಿದ್ದ. ಪ್ರೀತಿಸುವಂತೆ ಒತ್ತಡ ಹಾಕಿದ್ದರಿಂದ ಶಾಲಾ ಕಟ್ಟಡದ ಮೇಲಿಂದ ಜಿಗಿದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

BY Vijayendra: ಆದಾಯ ಸಂಗ್ರಹದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಬಿ.ವೈ. ವಿಜಯೇಂದ್ರ

ಆದಾಯ ಸಂಗ್ರಹದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ: ಬಿ.ವೈ. ವಿಜಯೇಂದ್ರ

BY Vijayendra: ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಿ ಕೈ ತೊಳೆದುಕೊಳ್ಳುವ ಕುತಂತ್ರಕ್ಕೆ ಈ ಬಜೆಟ್ಟನ್ನು ಸೀಮಿತ ಮಾಡಿದ್ದಾರೆ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

Edelweiss Life Insurance: ಎಫ್‌ವೈ27ರ ವೇಳೆಗೆ ಎಡೆಲ್ವೈಸ್ ಲೈಫ್ ಇನ್ಶೂರೆನ್ಸ್ ಬ್ರೇಕ್-ಈವನ್ ತಲುಪುವ ಗುರಿ

ಬಂಡವಾಳದ ದೃಷ್ಟಿಕೋನದಿಂದ, ಕಂಪನಿ ಉತ್ತಮ ಬಂಡವಾಳ ಹೊಂದಿದೆ

ಕಂಪನಿಯು ಕ್ಯೂ3ಎಫ್‌ವೈ26ನಲ್ಲಿ ಬಲವಾದ ವೇಗವನ್ನು ಕಂಡಿತು. ಇದರ ವೈಯಕ್ತಿಕ ಎಪಿಇ ವರ್ಷದಿಂದ ವರ್ಷಕ್ಕೆ 38% ರಷ್ಟು ಬೆಳೆದಿದೆ, ಇದು ಉದ್ಯಮದ ಸರಾಸರಿಗಿಂತ ಹೆಚ್ಚಿನದಾಗಿದೆ. ಎಫ್‌ವೈ26 ರಲ್ಲಿ, ಕಂಪನಿಯು ಸುಮಾರು 650 ಕೋಟಿ ರೂ.ಗಳ ಹೊಸ ವ್ಯವಹಾರ ಮತ್ತು ಸುಮಾರು 2400 ಕೋಟಿ ರೂ.ಗಳ ಒಟ್ಟು ಪ್ರೀಮಿಯಂ ಆದಾಯವನ್ನು ಗಳಿಸುವ ಗುರಿಯನ್ನು ಹೊಂದಿದೆ.

ಎಲ್‌ಪಿಜಿ ಕೊರತೆ ಬಗ್ಗೆ ಸಂಸದರು ಸಂಸತ್ತಿನಲ್ಲಿ ಧ್ವನಿ ಎತ್ತಿ ಜನರಿಗೆ ನ್ಯಾಯ ಒದಗಿಸಲಿ: ಡಿ.ಕೆ. ಶಿವಕುಮಾರ್ ಆಗ್ರಹ

ಎಲ್‌ಪಿಜಿ ಕೊರತೆ ಬಗ್ಗೆ ಸಂಸದರು ಧ್ವನಿ ಎತ್ತಲಿ: ಡಿಕೆಶಿ ಆಗ್ರಹ

LPG Cylinder Shortage: ಈ ಇಂಧನ ಬೆಲೆ ಏರಿಕೆಯಿಂದ ಜನ ಪರದಾಡುತ್ತಿದ್ದಾರೆ. ಇದರಲ್ಲಿ ರಾಜ್ಯ ಸರ್ಕಾರ ಏನೂ ಮಾಡಲು ಆಗುವುದಿಲ್ಲ. ಕೇಂದ್ರ ಸರ್ಕಾರ ಇದಕ್ಕೆ ಹೊಣೆ. ಕೇಂದ್ರ ಸರ್ಕಾರ ವಿದೇಶಾಂಗ ನೀತಿ ಬಗ್ಗೆ ಸ್ಪಷ್ಟವಾಗಿ ಮಾತನಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Loading...