ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

ಕುವೆಂಪು ವಿಶ್ವಮಾನವ ಸಂದೇಶ ಇಂದಿಗೂ ಜೀವಂತ

ಕುವೆಂಪು ವಿಶ್ವಮಾನವ ಸಂದೇಶ ಇಂದಿಗೂ ಜೀವಂತ

ಯುವಜನತೆಗೆ ಕುವೆಂಪು ನೀಡಿದ ಅತ್ಯಂತ ಪ್ರಬಲ ಕರೆ ಎಂದರೆ ‘ನಿರಂಕುಶಮತಿಗಳಾಗಿ‘. ಪರಂಪರೆಯ ಹೆಸರಿನಲ್ಲಿ ಬರುವ ಮೌಢ್ಯಗಳನ್ನು ಪ್ರಶ್ನಿಸದೆ ಒಪ್ಪಿಕೊಳ್ಳಬೇಡಿ ಎಂಬುದು ಅವರ ಆಶಯವಾಗಿತ್ತು. ‘ವಿಚಾರ ಕ್ರಾಂತಿಗೆ ಆಹ್ವಾನ‘ ನೀಡಿದ ಅವರು, ಮನುಷ್ಯ ತನ್ನ ಬುದ್ಧಿಶಕ್ತಿಯನ್ನು ಗುಲಾಮಗಿರಿಗೆ ಒಪ್ಪಿಸ ಬಾರದೆಂದು ಪ್ರತಿಪಾದಿಸಿದರು. ಅವರ ದೃಷ್ಟಿಯಲ್ಲಿ ಭಕ್ತಿ ಎನ್ನುವುದು ಮೂಢನಂಬಿಕೆಯಲ್ಲ, ಅದು ವಿಶ್ವಚೇತನದೊಂದಿಗಿನ ಅನು ಸಂಧಾನ.

Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, ಒಣ ಹವೆ, ಬೆಂಗಳೂರಿನಲ್ಲಿ ಮಂಜು

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, ಒಣ ಹವೆ, ಬೆಂಗಳೂರಿನಲ್ಲಿ ಮಂಜು

ಇಂದು ಎಂದಿನಂತೆ ಚಳಿಯ ಜೊತೆಗೆ ಮಂಜು ಮುಸುಕಿದ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ, ಬೆಚ್ಚನೆಯ ಉಡುಪು ಧರಿಸುವುದರ ಜೊತೆಗೆ ಸಮತೋಲನ ಆಹಾರ ಸೇವನೆಗೆ ಒತ್ತು ನೀಡುವಂತೆ ಸಲಹೆ ನೀಡಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 28°C ಇರಲಿದೆ.

Assault Case: ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ, ಪಾನ್‌ ಶಾಪ್‌ ಚಿಂದಿ, ಮಾರಕಾಸ್ತ್ರಗಳಿಂದ ಹಲ್ಲೆ

ಬೆಂಗಳೂರಿನಲ್ಲಿ ರೌಡಿಗಳ ದಾಂಧಲೆ, ಮಾರಕಾಸ್ತ್ರಗಳಿಂದ ಹಲ್ಲೆ

ಕ್ಷುಲ್ಲಕ ಕಾರಣಕ್ಕೆ ಬಷೀರ್ ಎಂಬವರ ಮನೆಗೆ ನುಗ್ಗಿ 10ಕ್ಕೂ ಹೆಚ್ಚು ಪುಡಿ ರೌಡಿಗಳು ಹಲ್ಲೆ ನಡೆಸಿ ದಾಂಧಲೆ ಮಾಡಿದ್ದಾರೆ. ಪಾನ್ ಶಾಪ್‌ನಲ್ಲಿದ್ದ ಬಾಟಲ್‌ಗಳನ್ನ ಒಡೆದು ಹಾಕಿ ಎಸ್ಕೇಪ್ ಆಗಿದ್ದಾರೆ. ಇದರ ಜೊತೆಗೆ, ಕಾರೊಂದರ ಮೇಲೂ ರೌಡಿಗಳು ದಾಳಿ ಮಾಡಿದ್ದಾರೆ. ಕಾರಿನ ಒಳಗೆ ಇದ್ದ ಇಬ್ಬರು ಯುವಕರ ಮೇಲೆ ಪುಡಿ ರೌಡಿಗಳು ದಾಳಿ ಮಾಡಲು ಯತ್ನಿಸಿದ್ದಾರೆ. ಕಾರಿನೊಳಗಿದ್ದ ಯುವಕರು ಅದೃಷ್ಟವಶಾತ್ ಗ್ರೇಟ್ ಎಸ್ಕೇಪ್ ಆಗಿದ್ದಾರೆ.

DK Shivakumar: ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ ರೂಪಿಸಲು ಸಭೆ: ಡಿಸಿಎಂ ಡಿಕೆ ಶಿವಕುಮಾರ್

ಕರಾವಳಿ,‌ ಮಲೆನಾಡು ಭಾಗಕ್ಕೆ ‌ಹೊಸ ಪ್ರವಾಸೋದ್ಯಮ ನೀತಿ: ಡಿಕೆ ಶಿವಕುಮಾರ್

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, "ಇದರಿಂದ ಯಾರಿಗೂ ತೊಂದರೆಯಾಗುವುದಿಲ್ಲ. 100- 200 ಎಕರೆಯಲ್ಲಿ ಸ್ಟೋರೇಜ್ ಪಾಯಿಂಟ್ ಮಾಡಲಾಗುತ್ತದೆ. ಅಲ್ಲಿಂದ ಪಂಪ್ ಮಾಡಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಶರಾವತಿಯಿಂದ ಈಗ ಉತ್ಪಾದನೆ ಮಾಡುತ್ತಿರುವ ಪ್ರಮಾಣದಷ್ಟೇ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ರಾಜ್ಯಕ್ಕೆ ದೊಡ್ಡ ಆಸ್ತಿಯಾಗುತ್ತದೆ. ಇದಕ್ಕೆ ವಿರೋಧ ಮಾಡುವ ಅವಶ್ಯಕತೆಯಿಲ್ಲ" ಎಂದರು.

Dr.K.Sudhakar: ದೇಶವಾಸಿಗಳ ಪ್ರಗತಿಯ ಮುನ್ನೋಟವೇ ಪ್ರಧಾನಿಗಳ ಮನದ ಮಾತಾಗಿದೆ: ಡಾ.ಕೆ.ಸುಧಾಕರ್

ದೇಶವಾಸಿಗಳ ಪ್ರಗತಿಯ ಮುನ್ನೋಟವೇ ಪ್ರಧಾನಿಗಳ ಮನದ ಮಾತಾಗಿದೆ

ಸ್ವಾತಂತ್ರ್ಯೋತ್ತರ ಭಾರತದ ಇತಿಹಾಸದಲ್ಲಿ ಈಗಿನ ಪ್ರಧಾನಿ ನರೇಂದ್ರ ಮೋದಿ ಅವರಂತೆ ದೇಶದ ಜನತೆಯ ಜತೆ ಮಾತನಾಡಿದ್ದು ನಾನು ಕಾಣೆ. ಅವರ ಮನ್‌ಕಿ ಬಾತ್ 129 ಕಂತುಗಳ ಮೂಲಕ ಭಾರತದ ಸಾಂಸ್ಕೃತಿಕ, ಐತಿಹಾಸಿಕ, ಹಾಗೂ ಜನಸಾಮಾನ್ಯರ  ಸಾಧನೆಗಳನ್ನು ರಾಷ್ಟçದೊಳಗೆ ಹಂಚಿಕೊಂಡಂತೆ ಯಾವ ಪ್ರಧಾನಿಯೂ ಕೂಡ ಹಂಚಿಕೊಂಡು ಪ್ರೋತ್ಸಾಹಿಸಲೇ ಇಲ್ಲ. ಹೀಗಾಗಿ ಜನತೆ ಅವರೊಂದಿಗೆ ಹೆಜ್ಜೆ ಹಾಕುತ್ತಿದ್ದಾರೆ

Reservation for Kannadigas: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ: ಸಿಎಂ ಘೋಷಣೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನ: ಸಿಎಂ

Janarajyotsava 2025: ಕನ್ನಡ ಚಳವಳಿಗಾರರ ಸಮಿತಿ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದ್ದ ಜನರಾಜ್ಯೋತ್ಸವ -2025 ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಕನ್ನಡ ಚಳವಳಿಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಉಪಸಮಿತಿಯನ್ನು ರಚಿಸಲಾಗಿದ್ದು, ಈ ಬಗ್ಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Gauribidanur News: ಡಿ.ಪಾಳ್ಯ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Gauribidanur News: ಡಿ.ಪಾಳ್ಯ ಹೋಬಳಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಪ್ರಸ್ತುತ ತಾಲ್ಲೂಕಿನಲ್ಲಿ ಹಣದ ರಾಜಕೀಯ ನಡೆಯುತ್ತಿದೆ, ಅವರು ಹಣ ನೀಡಿ ರಾಜಕೀಯ ಮಾಡು ವವರಲ್ಲ, ಡೈರಿ ಮತ್ತು ಸಹಕಾರಿ ಚುನಾವಣೆಗಳಲ್ಲೂ ಕೂಡ ಚುನಾವಣೆಗೆ ಲಕ್ಷಾಂತರ ರೂ ಹಣ ಬೇಕಾಗಿದೆ. ಇದನ್ನು ಜನತೆ ಸ್ವಲ್ಪ ಯೋಚನೆ ಮಾಡಿ.  ತಾಲ್ಲೂಕಿನಲ್ಲಿ ನೆಮ್ಮದಿ ಮತ್ತು ಗಲಭೆ ಇಲ್ಲದೆ ನಡೆಸಿಕೊಂಡು ಬಂದವರು. ವಿರೋಧ ಪಕ್ಷಗಳು ಮುಖಂಡರು ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿ ದ್ದಾರೆ.

Vaikuntha Ekadashi: ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ

ಗುಬ್ಬಿ ಶ್ರೀ ಬೇಟೆರಾಯಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಆಚರಣೆ

ಬೆಳಿಗ್ಗೆ 7 ಗಂಟೆಗೆ ಸುಪ್ರಭಾತ ಸೇವೆಯಿಂದ ಆರಂಭವಾದ ಧಾರ್ಮಿಕ ಕೈಂಕರ್ಯ ನಿರಂತರ ರಾತ್ರಿ 8 ಗಂಟೆವರೆಗೆ ನಡೆಯಲಿದೆ. ಬೆಳಿಗ್ಗೆ ವಿಶ್ವರೂಪ ದರ್ಶನ, ವೈಕುಂಠ ದ್ವಾರ ಪ್ರವೇಶ, ಮಹಾ ಮಂಗಳಾ ರತಿ ಹಾಗೂ ತೀರ್ಥ ಪ್ರಸಾದ ವಿನಿಯೋಗ ನಿರಂತರ ನಡೆಯಲಿದೆ. ರಾತ್ರಿ 8 ಗಂಟೆಗೆ ಹದಿನೆಂಟು ಕೋಮಿನ ಪ್ರಮುಖರ ಸಮ್ಮುಖದಲ್ಲಿ ಮಹಾಮಂಗಳಾರತಿ ನಡೆಸುವ ಮೂಲಕ ಇಡೀ ದಿನದ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ

H D Kumaraswamy: ರಾಜ್ಯದಲ್ಲಿ 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ: ಜೆಕೆ ಕೃಷ್ಣಾರೆಡ್ಡಿ

2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ : ಜೆಕೆ ಕೃಷ್ಣಾರೆಡ್ಡಿ

ದೇಶ, ವಿದೇಶಗಳ ಕಾರ್ಯಕ್ರಮಗಳನ್ನು, ಸುದ್ದಿಗಳನ್ನು ಕ್ಷಣ ಮಾತ್ರದಲ್ಲಿ ತಿಳಿದುಕೊಳ್ಳಬಹುದು. ಗ್ರಾಮೀಣ ಭಾಗದ ಕುರಿ ಗ್ರಾಹಕರೂ ಕೂಡ ಮೊಬೈಲ್ ಹೊಂದಿದ್ದು ವಿಶ್ವದ ಕ್ಷಣ ಕ್ಷಣದ ಮಾಹಿತಿ ಯನ್ನು ಪಡೆಯುತ್ತಾರೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕು. ಬೂತ್ ಮಟ್ಟದ ವರೆಗೂ ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರನ್ನು ತಲುಪಬೇಕು. ಕಾರ್ಯಕರ್ತರು ಸೋಲಿನಿಂದ ಧೃತಿಗೆಡಬಾರದು

Bagepally News: ಚೇಳೂರು ತಾಲ್ಲೂಕು ಕಸಾಪ ಪ್ರಥಮ ಅಧ್ಯಕ್ಷರಾಗಿ ಜೆ.ಕೆ.ಆನಂದ್

ಚೇಳೂರು ತಾಲ್ಲೂಕು ಕಸಾಪ ಪ್ರಥಮ ಅಧ್ಯಕ್ಷರಾಗಿ ಜೆ.ಕೆ.ಆನಂದ್

ಕನ್ನಡ ಸಾಹಿತ್ಯ ಪರಿಷತ್ತು ಇಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತದೆ. ಚೇಳೂರು ಆಂದ್ರದ ಗಡಿಗೆ ಹೊಂದಿಕೊಂಡಿದ್ದರೂ ಕನ್ನಡ ಭಾಷೆ, ಸಾಹಿತ್ಯದ ಮೇಲೆ ಅಪಾರವಾದ ಗೌರವವನ್ನು ಹೊಂದಿರುವು ದಕ್ಕೆ ಇಲ್ಲಿ ನಡೆದ ಅನೇಕ ಕನ್ನಡ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆದಿರುವುದೇ ಸಾಕ್ಷಿಯಾಗಿತ್ತು.

Bengaluru Power Cut: ಡಿ.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಡಿ.30ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮತ್ತಿಕೆರೆ ಸಬ್‌ಸ್ಟೇಷನ್ ಹಾಗೂ ಬ್ಯಾಟರಾಯನಪುರ ಸಬ್‌ಸ್ಟೇಷನ್‌ನಲ್ಲಿ ತುರ್ತು ಕೆಲಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಸೋಮವಾರ ಕೂಡ ಬೆಂಗಳೂರಿನ ಹಲವೆಡೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಅದೇ ರೀತಿ “66/11ಕೆ.ವಿ ರೆಮಕೊ ಸ್ಟೇಷನ್” ನಲ್ಲಿ ತುರ್ತು ನಿರ್ವಹಣಾ ಕೆಲಸ ಕೈಗೊಂಡಿರುವ ಹಿನ್ನೆಲೆಯಲ್ಲಿ ಡಿ. 30ರಂದು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

Chikkanayakanahalli News: ಚಿಕ್ಕನಾಯಕನಹಳ್ಳಿಯಲ್ಲಿ ಕಾಂಗ್ರೆಸ್ ಮತ್ತು ಸೇವಾದಳದ ಸಂಸ್ಥಾಪನಾ ದಿನಾಚರಣೆ ಸಂಭ್ರಮ

ಕಾಂಗ್ರೆಸ್ ಮತ್ತು ಸೇವಾದಳದ ಸಂಸ್ಥಾಪನಾ ದಿನಾಚರಣೆ ಸಂಭ್ರಮ

​ಇಂದಿರಾ ಗಾಂಧಿಯವರ ಹಸಿರು ಕ್ರಾಂತಿ, ಉಳುವವನಿಗೆ ಭೂಮಿ ಯೋಜನೆ, ಬಾಂಗ್ಲಾ ವಿಮೋಚನೆ ಮತ್ತು ರಾಜೀವ್ ಗಾಂಧಿಯವರ ಮಾಹಿತಿ ತಂತ್ರಜ್ಞಾನ ಕ್ರಾಂತಿ ಹಾಗೂ 18 ವರ್ಷಕ್ಕೆ ಮತದಾನದ ಹಕ್ಕು ನೀಡಿದ ಸುಧಾರಣೆಗಳನ್ನು ವರದಿಯಲ್ಲಿ ಶ್ಲಾಘಿಸಲಾಯಿತು. ಹಾಗೆಯೇ ಪಿ.ವಿ. ನರಸಿಂಹ ರಾವ್ ಮತ್ತು ಡಾ. ಮನಮೋಹನ್ ಸಿಂಗ್ ಅವರ ಆರ್ಥಿಕ ಸುಧಾರಣೆಗಳು ಭಾರತವನ್ನು ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ ಸುಭದ್ರಗೊಳಿಸಿವೆ

Isha Foundation: ಸದ್ಗುರುಗಳೊಂದಿಗೆ ಇನ್ನರ್ ಇಂಜಿನಿಯರಿಂಗ್ ಸತ್ಸಂಗ; 10,000ಕ್ಕೂ ಹೆಚ್ಚು ಜನ ಭಾಗಿ

ಸದ್ಗುರುಗಳೊಂದಿಗೆ ಇನ್ನರ್ ಇಂಜಿನಿಯರಿಂಗ್ ಸತ್ಸಂಗ; 10,000 ಜನ ಭಾಗಿ

isha foundation: ನವೆಂಬರ್ ಮತ್ತು ಡಿಸೆಂಬರ್ ತಿಂಗಳುಗಳಲ್ಲಿ ನಡೆದ ಎರಡು ತಿಂಗಳ ಈ ಕಾರ್ಯಕ್ರಮದಲ್ಲಿ ರಕ್ಷಣಾ ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳು, ವಿದ್ಯಾರ್ಥಿಗಳು ಮತ್ತು ಕಾರ್ಪೊರೇಟ್ ಉದ್ಯೋಗಿಗಳು ಸೇರಿದಂತೆ ಸಮಾಜದ ವಿವಿಧ ವರ್ಗಗಳಿಂದ 8,000ಕ್ಕೂ ಹೆಚ್ಚು ಶಿಬಿರಾರ್ಥಿಗಳು ಯೋಗಾಭ್ಯಾಸದ ದೀಕ್ಷೆ ಪಡೆದಿದ್ದಾರೆ.

ಡ್ರಗ್ಸ್‌ ದಂಧೆ ಹೆಚ್ಚಳ; ಗೃಹ ಸಚಿವ, ಸಿಎಂ ರಾಜೀನಾಮೆಗೆ ಸಿ.ಎನ್. ಅಶ್ವತ್ಥ್ ನಾರಾಯಣ‌ ಆಗ್ರಹ

ಡ್ರಗ್ಸ್‌ ದಂಧೆ ಹೆಚ್ಚಳ; ಗೃಹ ಸಚಿವ, ಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

ರಾಜ್ಯದಲ್ಲಿ ನಾರ್ಕೋಟಿಕ್ಸ್ ವಿಭಾಗದ ಕಾರ್ಯವೈಖರಿ, ಇಂಟೆಲಿಜೆನ್ಸ್ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಪೋಲೀಸ್ ಠಾಣೆಗಳು ಮತ್ತು ಹುದ್ದೆಗಳು ಮಾರಾಟಕ್ಕೆ ಇಟ್ಟಂತೆ ಆಗಿವೆ. ಇದರಿಂದ ಯುವಕರ ಭವಿಷ್ಯ ಸಂಪೂರ್ಣವಾಗಿ ನಾಶವಾಗುತ್ತಿದೆ ಎಂದು ಶಾಸಕ ಡಾ. ಸಿ.ಎನ್. ಅಶ್ವತ್ಥ್‌ ನಾರಾಯಣ ಕಿಡಿಕಾರಿದ್ದಾರೆ.

ಡಿಸೆಂಬರ್ ನಂತರ ಸಾವು-ನೋವು ಇನ್ನೂ ಜಾಸ್ತಿ ಆಗುತ್ತೆ: ಕೋಡಿಮಠ ಶ್ರೀ ಶಾಕಿಂಗ್ ಭವಿಷ್ಯ

ಡಿಸೆಂಬರ್ ನಂತರ ಸಾವು-ನೋವು ಇನ್ನೂ ಜಾಸ್ತಿ ಆಗುತ್ತೆ: ಕೋಡಿಮಠ ಶ್ರೀ

Kodi Mutt Seer predictions: ಹಿಂದೆ ಅರಸರ ಅರಮನೆಗೆ ಕಾರ್ಮೋಡ ಕವಿದೀತು ಅಂತಲೂ ಹೇಳಿದ್ದೆ. ಯುಗಾದಿ ಕಳೆಯಲಿ, ಸಾವು-ನೋವು ಇನ್ನೂ ಹೆಚ್ಚಾಗುತ್ತದೆ. ಚೀನಾದಲ್ಲಿ ಏನಾಯ್ತು? ಪ್ರಧಾನಮಂತ್ರಿಗಳು ಉಳಿದಿದ್ದೇ ಹೆಚ್ಚು, 2026ಕ್ಕೆ ಇನ್ನೂ ಜಾಸ್ತಿ ಆಗುತ್ತೆ ಯುಗಾದಿ ಕಳೆಯಲಿ ಎಂದು ಕೋಡಿ ಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ.

ಕೋಗಿಲು ಅಕ್ರಮ ಒತ್ತುವರಿ ತೆರವು; ಅರ್ಹರಿಗೆ ಪುನರ್ವಸತಿ ಕಲ್ಪಿಸಲಾಗುವುದು ಎಂದ ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ತೆರವು; ಅರ್ಹರಿಗೆ ಪುನರ್ವಸತಿ ಸೌಲಭ್ಯ

ಕೋಗಿಲು ಅಕ್ರಮ ಮನೆ ತೆರವು ಸಂಬಂಧ ವೇಣುಗೋಪಾಲ್ ಅವರ ಟ್ವೀಟ್ ವಿಚಾರವಾಗಿ ಬಿಜೆಪಿ ಟೀಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದಾರೆ. ವೇಣುಗೋಪಾಲ್ ಅವರು ನಮ್ಮ ಆಡಳಿತದಲ್ಲಿ ಎಂದಿಗೂ ಹಸ್ತಕ್ಷೇಪ ಮಾಡಿಲ್ಲ. ವೇಣುಗೋಪಾಲ್ ಅವರು ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿದ್ದು, ನಮಗೆ ಸಲಹೆ ನೀಡಲು ಅವರಿಗೆ ಎಲ್ಲಾ ಅಧಿಕಾರ ಇದೆ ಎಂದು ತಿಳಿಸಿದ್ದಾರೆ.

ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆ; ಮ್ಯಾನೇಜರ್‌ ಮೇಲೆ ಗುಂಡು ಹಾರಿಸಿ 5 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ!

ಹುಣಸೂರಿನಲ್ಲಿ ಚಿನ್ನದಂಗಡಿ ದರೋಡೆ; 5 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ

Jewellery shop Robbery in Hunsur: ದರೋಡೆಕೋರರು ಗನ್‌ ತೋರಿಸಿ ಸುಮಾರು 5 ಕೋಟಿ ಮೌಲ್ಯದ ಚಿನ್ನ, ವಜ್ರಾಭರಣ ದರೋಡೆ ಮಾಡಿದ್ದಾರೆ. 5ಕ್ಕೂ ಹೆಚ್ಚು ಜನರಿದ್ದ ಗ್ಯಾಂಗ್‌ನಿಂದ ಕೃತ್ಯ ಎಸಗಲಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉತ್ತರಾಧಿಕಾರಿ ನೇಮಿಸುವ ಹಕ್ಕು ಕೇವಲ ದಲೈಲಾಮಾರಿಗೆ ಮಾತ್ರ ಇದೆ: ಕೇಂದ್ರ ಸಚಿವ ಕಿರಣ್‌ ರಿಜಿಜು

ಉತ್ತರಾಧಿಕಾರಿ ನೇಮಿಸುವ ಹಕ್ಕು ದಲೈಲಾಮಾರಿಗೆ ಮಾತ್ರ ಇದೆ: ಕಿರಣ್‌ ರಿಜಿಜು

Dalai Lamaʼs 90th birth anniversary: ಟಿಬೆಟ್‌ನ ಧರ್ಮಗುರು 14ನೇ ದಲೈಲಾಮಾ ಅವರು ಸದ್ಯ ಮುಂಡಗೋಡಿನ ಟಿಬೆಟಿಯನ್‌ ಕ್ಯಾಂಪ್‌ನಲ್ಲಿ ಇದ್ದಾರೆ. ಅವರು 45 ದಿನಗಳ ಕಾಲ ವಿಶ್ರಾಂತಿ ಪಡೆಯಲು ಡಿ.12ರಂದು ಮುಂಡಗೋಡಿಗೆ ಆಗಮಿಸಿದ್ದರು. ರಾಜ್ಯ ಸೇರಿ ದೇಶದ ವಿವಿಧ ಭಾಗಗಳ ಗಣ್ಯರು ಇಲ್ಲಿಗೆ ಆಗಮಿಸಿ ದಲೈಲಾಮಾ ಅವರ ಆಶೀರ್ವಾದ ಪಡೆಯುತ್ತಿದ್ದಾರೆ.

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ:  ಇದೊಂದು ನಿರಂತರ ಚಳುವಳಿ ಮತ್ತು ಸಿದ್ಧಾಂತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಎಂದರೆ ಕೇವಲ ಪಕ್ಷವಲ್ಲ, ನಿರಂತರ ಚಳುವಳಿ ಮತ್ತು ಸಿದ್ಧಾಂತ: ಸಿಎಂ

ಬೆಂಗಳೂರಿನ ಕೆಪಿಸಿಸಿಯ ಭಾರತ್ ಜೋಡೋ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಗ್ರಾಮೀಣ ಆರ್ಥಿಕತೆಯನ್ನೇ ಹಾಳು ಮಾಡುವ ಹುನ್ನಾರ ಬಿಜೆಪಿಯದ್ದು. MGNAREGA ಕಾರ್ಯಕ್ರಮದಡಿ ದಲಿತರು, ಹಿಂದುಳಿದವರಿಗೆ ಹೆಚ್ಚಾಗಿ ಕೆಲಸ ದೊರಕುತ್ತಿತ್ತು. ಈಗ ರಾಜ್ಯಗಳ ಮೇಲೆ ಭಾರಿ ಹೊರೆಯನ್ನೇ ಹೊರೆಸುತ್ತಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

ಇತಿಹಾಸದಿಂದ ಗಾಂಧೀಜಿ ಹೆಸರು ಅಳಿಸಲು ಯಾರಿಗೂ ಸಾಧ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಇತಿಹಾಸದಿಂದ ಗಾಂಧೀಜಿ ಹೆಸರು ಅಳಿಸಲು ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

ನರೇಗಾ ಯೋಜನೆಯ ಹೆಸರು ಬದಲಿಸಿರುವ ʼವಿಬಿ ಜಿ ರಾಮ್ ಜಿʼ ಯೋಜನೆಯನ್ನು ಬಿಜೆಪಿ ಆಡಳಿತ ರಾಜ್ಯಗಳಲ್ಲೂ ಅನುಷ್ಠಾನಕ್ಕೆ ತರಲು ಸಾಧ್ಯವಿಲ್ಲ. ಈ ಹಿಂದೆ ಮನರೇಗಾ ಯೋಜನೆಯನ್ನು ನನ್ನ ತಾಲೂಕಿನಲ್ಲಿ ಬಹಳ ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗಿತ್ತು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಲಿವ್‌ ಇನ್‌ ಸಂಗಾತಿಗೆ ವಂಚನೆ, ಆಕೆಯ ತಂಗಿ ಮೇಲೂ ಅತ್ಯಾಚಾರ; ಆರೋಪಿ ಅರೆಸ್ಟ್

ಲಿವ್‌ ಇನ್‌ ಸಂಗಾತಿಗೆ ವಂಚನೆ, ಆಕೆಯ ತಂಗಿ ಮೇಲೂ ಅತ್ಯಾಚಾರ ಎಸಗಿದ!

Bengaluru News: ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲವ್ ಸೆಕ್ಸ್​ ದೋಖಾ ಪ್ರಕರಣ ನಡೆದಿದೆ. ಸಂತ್ರಸ್ತ ಯುವತಿ ಬಳಿ ಲಕ್ಷ ಲಕ್ಷ ಹಣ ಪಡೆದಿದ್ದ ಆರೋಪಿ, ಯುವತಿ ಮನೆಯಲ್ಲಿ ಚಿನ್ನಾಭರಣ ಸಹ ಕದ್ದಿದ್ದ. ಈ ಬಗ್ಗೆ ದೂರು ನೀಡಿದರೆ ಸಾಯಿಸುತ್ತೇನೆ ಎಂದು ಬೆದರಿಸಿದ್ದ. ಅಲ್ಲದೇ ಸಂತ್ರಸ್ತೆಯ ಅಪ್ರಾಪ್ತ ವಯಸ್ಸಿನ ಸಹೋದರಿಯ ಮೇಲೂ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

Bengaluru Power Cut: ಡಿ.29ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಡಿ.29ರಂದು ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಮತ್ತಿಕೆರೆ ಸಬ್‌ಸ್ಟೇಷನ್ ಹಾಗೂ ಬ್ಯಾಟರಾಯನಪುರ ಸಬ್‌ಸ್ಟೇಷನ್‌ನಲ್ಲಿ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ. ಯಾವೆಲ್ಲಾ ಸ್ಥಳಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂಬ ವಿವರ ಇಲ್ಲಿದೆ.

ಕಾರವಾರದಲ್ಲಿ ಸಬ್‌ಮರೀನ್‌ನಲ್ಲಿ ಪ್ರಯಾಣಿಸಿ ಇತಿಹಾಸ ಬರೆದ ದ್ರೌಪದಿ ಮುರ್ಮು; ಜಲಾಂತರ್ಗಾಮಿ ಯಾನ ಮಾಡಿದ ಮೊದಲ ಮಹಿಳಾ ರಾಷ್ಟ್ರಪತಿ

ಕಾರವಾರದಲ್ಲಿ ಸಬ್‌ಮರೀನ್‌ನಲ್ಲಿ ಪ್ರಯಾಣಿಸಿದ ದ್ರೌಪದಿ ಮುರ್ಮು

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಭಾನುವಾರ (ಡಿಸೆಂಬರ್‌ 28) ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮಿಸಿದರು. ನಂತರ ಅವರು ಕಲ್ವರಿ ಸಬ್‌ಮರೀನ್‌ (ಜಲಾಂತರ್ಗಾಮಿ) ಐ.ಎನ್.ಎಸ್. ವಾಗ್ಶೀರ್‌ನಲ್ಲಿ ಪ್ರಯಾಣಿಸಿದರು. ರಾಷ್ಟ್ರಪತಿ ಸಶಸ್ತ್ರ ಪಡೆಗಳ ಸರ್ವೋಚ್ಚ ದಂಡನಾಯಕರೂ ಹೌದು. ವಿಶೇಷ ಎಂದರೆ ಜಲಾಂತರ್ಗಾಮಿಯದಲ್ಲಿ ಪ್ರಯಾಣಿಸಿದ 2ನೇ ರಾಷ್ಟ್ರಪತಿ ದ್ರೌಪದಿ ಮುರ್ಮು. ಈ ಮೊದಲು ಎ.ಪಿ.ಜೆ. ಅಬ್ದುಲ್ ಕಲಾಂ ಜಲಾಂತರ್ಗಾಮಿ ಸಬ್‌ಮರೀಬ್‌ನಲ್ಲಿ ತೆರಳಿದ್ದರು.

ಕಾರವಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ; ಐಎನ್ಎಸ್ ವಾಗ್ಶೀರ್ ಸಬ್ ಮೆರಿನ್‌ನಲ್ಲಿ ಸಂಚಾರ

ಕಾರವಾರಕ್ಕೆ ರಾಷ್ಟ್ರಪತಿ ಮುರ್ಮು ಭೇಟಿ; ಐಎನ್ಎಸ್ ವಾಗ್ಶೀರ್‌ನಲ್ಲಿ ಸಂಚಾರ

ಕಾರವಾರದ ಕದಂಬ ನೌಕಾನೆಲೆಗೆ ಭೇಟಿ ನೀಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐಎನ್ಎಸ್ ವಾಗ್ಶೀರ್ ಸಬ್ ಮೇರಿನ್‌ನಲ್ಲಿ ನೌಕಾಪಡೆ ಮುಖ್ಯಸ್ಥರು ಹಾಗೂ ಅಧಿಕಾರಿಗಳೊಂದಿಗೆ ಸಂಚರಿಸಿದರು. ದ್ರೌಪದಿ ಮುರ್ಮು ಅವರು ಜಲಾಂತರ್ಗಾಮಿಯಲ್ಲಿ ಪ್ರಯಾಣಿಸಿದ ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದಾರೆ.

Loading...