ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Actor Santhosh Balaraj: ತೀವ್ರ ಅನಾರೋಗ್ಯ; ಸ್ಯಾಂಡಲ್‌ವುಡ್‌ ಯುವ ನಟ ಸಂತೋಷ್ ಬಾಲರಾಜ್ ಸ್ಥಿತಿ ಗಂಭೀರ

ಸ್ಯಾಂಡಲ್‌ವುಡ್‌ ಯುವ ನಟ ಸಂತೋಷ್ ಬಾಲರಾಜ್ ಸ್ಥಿತಿ ಗಂಭೀರ

Actor Santhosh Balaraj: 34 ವರ್ಷದ ನಟ ಸಂತೋಷ್‌ ಬಾಲರಾಜ್‌ ಅವರು ಕರಿಯಾ-2, ಕೆಂಪ, ಗಣಪ, ಬರ್ಕ್ಲಿ, ಸತ್ಯ ಸಿನಿಮಾಗಳಲ್ಲಿ ನಾಯಕನಾಗಿ ನಟಿಸಿದ್ದಾರೆ. ಇವರ ತಂದೆ ಅನೇಕಲ್ ಬಾಲರಾಜ್ ಅವರು ನಟ ದರ್ಶನ್‌ಗೆ ಕರಿಯ ಸಿನಿಮಾ ನಿರ್ಮಾಣ ಮಾಡಿದ್ದರು.

Haveri News: ವಿವಾಹಿತ ಯುವತಿಗೆ ಮೆಸೇಜ್; ಹುಟ್ಟುಹಬ್ಬದ ದಿನವೇ ಕಾಂಗ್ರೆಸ್ ಯುವ ಮುಖಂಡನ ಹತ್ಯೆ

ಹುಟ್ಟುಹಬ್ಬದ ದಿನವೇ ಕಾಂಗ್ರೆಸ್ ಯುವ ಮುಖಂಡನ ಹತ್ಯೆ

Congress leader murdered: ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ಕೊಲೆ ನಡೆದಿದೆ. ಹೆಣ್ಣಿನ ವಿಚಾರಕ್ಕೆ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಡಾಬಾದಿಂದ ಕಿಡ್ನ್ಯಾಪ್‌ ಮಾಡಿ, ಕೊಲೆಗೈದ ಬಳಿಕ ಶವವನ್ನು ವರದಾ ನದಿಗೆ ಶವ ಎಸೆಯಲಾಗಿದೆ. ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Kandeelu Movie: ʼಕಂದೀಲುʼ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿರಲಿಲ್ಲ: ನಿರ್ದೇಶಕಿ ಯಶೋದ ಪ್ರಕಾಶ್‌

ರಾಷ್ಟ್ರ ಪ್ರಶಸ್ತಿ ನಿರೀಕ್ಷಿಸಿರಲಿಲ್ಲ: ಕಂದೀಲು ಚಿತ್ರದ ನಿರ್ದೇಶಕಿ

Kandeelu Movie: ಜನರನ್ನು ತಲುಪುವುದು ನಮ್ಮ ಉದ್ದೇಶವಾಗಿದೆ. ರಿಯಲಿಸ್ಟಿಕ್‌ ಕಥೆ ಆಧಾರಿತ ಚಿತ್ರಗಳನ್ನು ಮಾಡಬೇಕೆಂಬ ಬಯಕೆ ಇದೆ. ಇನ್ನೂ ಕಂದೀಲು ಸಿನಿಮಾ ರಿಲೀಸ್‌ ಮಾಡಿಲ್ಲ. ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿರುತ್ತದೆ ಎಂದು ನಿರ್ದೇಶಕಿ ಯಶೋದ ಪ್ರಕಾಶ್ ಕೊಟ್ಟುಕತ್ತೀರ ತಿಳಿಸಿದ್ದಾರೆ.

ಬಫರ್ ಜೋನ್: ರಾಜ್ಯ ಸರ್ಕಾರದ ತೀರ್ಮಾನಕ್ಕೆ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಕ್ರೋಶ

ಕೆರೆಗಳ ಸುತ್ತಲಿನ ಬಫರ್ ಜೋನ್ ಕಡಿಮೆ ಮಾಡುವ ಮಸೂದೆಗೆ ಒಪ್ಪಿಗೆ: ಆಕ್ರೋಶ

ಸರ್ಕಾರವು ರಾಜ್ಯದ ಕೆರೆಗಳನ್ನು ಭವಿಷ್ಯಕ್ಕಾಗಿ ರಕ್ಷಿಸಬೇಕಾದ ಸಂದರ್ಭದಲ್ಲಿ ಬಫರ್ ಜೋನ್ ಕಡಿಮೆ ಮಾಡುವುದು ಕೆರೆ ಸುತ್ತ ಕಮರ್ಷಿಯಲ್ ಮತ್ತು ಇಂಡಸ್ಟ್ರೀಯಲ್ ಚಟುವಟಿಕೆಗೆ ಅವಕಾಶ ಕೊಟ್ಟಂತೆ ಆಗುತ್ತೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಿಯಲ್ ಎಸ್ಟೇಟ್ ಕಂಪನಿಗಳಿಗೆ ಅನುಕೂಲ ಮಾಡಿ ಕೊಡುವ ಉದ್ದೇಶದಿಂದ ಕೆರೆಗಳ ಸುತ್ತಲಿನ ಬಫರ್ ಜೋನ್ ಕಡಿಮೆ ಮಾಡಲಾಗುತ್ತಿದೆ

Chandrashekhar Siddi: ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣು

Chandrashekhar Siddi: ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಶೋನಲ್ಲಿ ಮಿಂಚಿದ ನಂತರ ಚಂದ್ರಶೇಖರ್‌ ಸಿದ್ದಿ ಅವರಿಗೆ ಇನ್ನಷ್ಟು ಅವಕಾಶಗಳು ಅರೆಸಿಬಂದಿದ್ದವು. ಕೆಲ ಧಾರಾವಾಹಿಗಳಲ್ಲಿ ಸಹ ಪಾತ್ರ ನಿಭಾಯಿಸಿದ್ದ ಅವರು, ಸ್ಥಳೀಯವಾಗಿ ಸಹ ಉತ್ತಮ ಕಲಾವಿದರಾಗಿ ಗುರುತಿಸಿಕೊಂಡಿದ್ದರು.

HD Deve Gowda: ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು: ಎಚ್.ಡಿ. ದೇವೇಗೌಡ ಕಿಡಿ

ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು: ಎಚ್‌ಡಿಡಿ

HD Deve Gowda: ಭಾರತದ ಆರ್ಥಿಕತೆ ಸತ್ತಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರ ಹೇಳಿಕೆ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು, ಬಹುಶಃ ಟ್ರಂಪ್‌ ಕುರುಡರಾಗಿರಬೇಕು ಅಥವಾ ಅಜ್ಞಾನಿ ಆಗಿರಬೇಕು ಎಂದು ಟೀಕಿಸಿದ್ದಾರೆ.

71st National Film Awards 2025: 'ಕಂದೀಲು' ಅತ್ಯುತ್ತಮ ಕನ್ನಡ ಸಿನಿಮಾ; ಯಶೋದ ಪ್ರಕಾಶ್ ನಿರ್ದೇಶನದ ಚಿತ್ರಕ್ಕೆ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಗರಿ

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; 'ಕಂದೀಲು' ಅತ್ಯುತ್ತಮ ಕನ್ನಡ ಸಿನಿಮಾ

Kandeelu kannada film: ಮಡಿಕೇರಿ ನಿವಾಸಿಯಾಗಿರುವ ಯಶೋದ ಪ್ರಕಾಶ್ ಕೊಟ್ಟುಕತ್ತೀರ​ ಅವರು ಜಿಲ್ಲೆಯ ಏಕೈಕ ಮಹಿಳಾ ನಿರ್ದೇಶಕರಾಗಿದ್ದಾರೆ. ಇಲ್ಲಿಯವರೆಗೂ ಅನೇಕ ಸಿನಿಮಾಗಳ ನಿರ್ದೇಶನ ಹಾಗೂ ನಿರ್ಮಾಣವನ್ನು ಅವರು ಮಾಡಿದ್ದಾರೆ. 'ಕಂದೀಲು' ಗ್ರಾಮವೊಂದರ ಕಥೆಯಾಗಿದ್ದು, ರೈತ ಹಾಗೂ ಆತನ ಕುಟುಂಬದ ಸುತ್ತ ಸುತ್ತುತ್ತದೆ.

ಎನ್‌ಎಮ್‌ಟಿ ಯಿಂದ ಉಚಿತ ‘ ಸರ್ಟಿಫೈಯ್ಡ್‌ ಹಿರಿಯರ ಆರೈಕೆ’ ತರಬೇತಿ ಶಿಬಿರ

ಸರ್ಟಿಫೈಯ್ಡ್‌ ಹಿರಿಯರ ಆರೈಕೆ’ ತರಬೇತಿ ಶಿಬಿರ

ಹಿರಿಯ ವ್ಯಕ್ತಿಗಳ ಆರೈಕೆಗೆ ಉತ್ತಮ ಸಹಾಯಕರ ಹಾಗೂ ತಜ್ಞರ ಬೇಡಿಕೆ ಹೆಚ್ಚುತ್ತಿರುವ ಹಿನ್ನಲೆ, ಎನ್‌ಎಮ್‌ ಟಿ ( ನೈಟಿಂಗಲ್ಸ್‌ ಮೆಡಿಕಲ್ ಟ್ರಸ್ಟ್‌) ಬೆಡ್‌ಸೈಡ್‌ ಅಸಿಸ್ಟೆನ್ಸ್‌ ನಲ್ಲಿ ನೌಕರಿ ಆಧಾರಿತ ತರಬೇತಿ ಯನ್ನು ಈ ಕಾರ್ಯಕ್ರಮ ನೀಡುತ್ತಿದೆ. ಹಿರಿಯರ ಆರೈಕೆಯಲ್ಲಿ ಆಸಕ್ತಿ ಇರುವ ಹಾಗೂ ಕನಿಷ್ಟ 8ನೇ ತರಗತಿಯಲ್ಲಿ ತೇರ್ಗಡೆ ಹೊಂದಿರುವ ಮತ್ತು 18-45 ವರ್ಷ ವಯಸ್ಸಿನ ಒಳಗಿನ ಆಸಕ್ತರು ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದೆ.

Almatti Dam: ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳದಿಂದ ಸಾಂಗ್ಲಿ, ‌ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಎನ್ನುವುದು ಅರ್ಥಹೀನ: ಎಂ.ಬಿ. ಪಾಟೀಲ್‌

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳದಿಂದ ಮಹಾರಾಷ್ಟ್ರದಲ್ಲಿ ಪ್ರವಾಹ ಉಂಟಾಗಲ್ಲ

MB Patil: ಕರ್ನಾಟಕವು ಆಲಮಟ್ಟಿ ಅಣೆಕಟ್ಟು ಎತ್ತರವನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀ.ಗೆ ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ. ಅದರ ಇಂಥ ವಾದ ಈಗಾಗಲೇ ನ್ಯಾಯಾಧಿಕರಣ, ಸುಪ್ರೀಂಕೋರ್ಟ್‌ ಮತ್ತು ಲೋಕಸಭೆಗಳಲ್ಲಿ ತಿರಸ್ಕೃತವಾಗಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.

CM Siddaramaiah: ಶಾಲೆಯ ನೀರಿನ ಟ್ಯಾಂಕ್‌ಗೆ ಕೀಟನಾಶಕ ಬೆರೆಸಿದ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

ನೀರಿಗೆ ಕೀಟನಾಶಕ ಮಿಶ್ರಣ; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

Shivamogga News: ಹೊಸನಗರ ತಾಲೂಕಿನ ಹೂವಿನಕೋಣೆ ಶಾಲೆಯ ನೀರಿನ ಟ್ಯಾಂಕಿಗೆ ಕೀಟನಾಶಕ ಬೆರೆಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಅಡುಗೆ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ಘಟಿಸಬಹುದಾಗಿದ್ದ ಬಹುದೊಡ್ಡ ದುರಂತವೊಂದು ತಪ್ಪಿದೆ. ಘಟನೆಯ ಕುರಿತು ಸೂಕ್ತ ತನಿಖೆ ನಡೆಸಿ, ಕೃತ್ಯ ಎಸಗಿರುವ ದುರುಳರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ರಾಜ್ಯ ಮಟ್ಟದ ಗದ್ದೆ ನಾಟಿ ಹಬ್ಬ ಆಚರಣೆ

ರಾಜ್ಯ ಮಟ್ಟದ ಗದ್ದೆ ನಾಟಿ ಹಬ್ಬ ಆಚರಣೆ

ಸಾಂಪ್ರದಾಯಿಕ ಕೃಷಿಯನ್ನು ಉತ್ತೇಜಿಸುವ ಪ್ರಯತ್ನ: *‘ಸ್ಕೊಡ್‌ವೆಸ್ ನಾಟಿ ಹಬ್ಬ ನೆಲಮೂಲ ಸಂಸ್ಕೃತಿಯ ಪ್ರತೀಕವಾಗಿದ್ದು, ಪಾರಂಪರಿಕ ಹಾಗೂ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಉಳಿಸುವ, ಸಂರಕ್ಷಿಸುವ ಪ್ರಯತ್ನವಾಗಿದ್ದು, ಡಿವೈಎಸ್ ಪಿ ಗೀತಾ ಪಾಟೀಲ್ ಗದ್ದೆಗೆ ಇಳಿದು ಸಂಘ ಸಂಸ್ಥೆ, ಇಲಾಖೆ ಅಧಿಕಾರಿಗಳೊಂದಿಗೆ ಗದ್ದೆ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಎಸಿ ಕೆ.ಕಾವ್ಯಾ ರಾಣಿ ಸೇರಿದಂತೆ ಹಲವರಿದ್ದರು

Karnataka Rains: ನಾಳೆ ಮೈಸೂರು, ಮಂಡ್ಯ ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಬಿರುಗಾಳಿ ಸಹಿತ ಮಳೆ ನಿರೀಕ್ಷೆ

ನಾಳೆ ಮೈಸೂರು, ಮಂಡ್ಯ ಸೇರಿ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 28°C ಮತ್ತು 20°C ಇರುವ ಸಾಧ್ಯತೆ ಇದೆ.

Hikora Movie: ನೀನಾಸಂ ಕಿಟ್ಟಿ ನಿರ್ದೇಶಿಸಿ, ನಟಿಸಿರುವ ʼಹಿಕೋರಾʼ ಚಿತ್ರದ ಟ್ರೇಲರ್ ಔಟ್‌

ನೀನಾಸಂ ಕಿಟ್ಟಿ ನಿರ್ದೇಶಿಸಿ, ನಟಿಸಿರುವ ʼಹಿಕೋರಾʼ ಚಿತ್ರದ ಟ್ರೇಲರ್ ಔಟ್‌

Hikora Movie: ನೀನಾಸಂ ಕಿಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿರುವ ʼಹಿಕೋರಾʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ರಂಗಕರ್ಮಿ, ನಟ ಹಾಗೂ ನಿರ್ದೇಶಕ ಪ್ರಕಾಶ್ ಬೆಳವಾಡಿ ಟ್ರೇಲರ್ ಅನಾವರಣ ಮಾಡಿದ್ದಾರೆ.

Rishab shetty: ಐತಿಹಾಸಿಕ ಸಿನಿಮಾಕ್ಕೆ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಾಯಕ

ಐತಿಹಾಸಿಕ ಸಿನಿಮಾಕ್ಕೆ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ನಾಯಕ

Rishab Shetty: ಸ್ಯಾಂಡಲ್‌ವುಡ್‌ನ ಖ್ಯಾತ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅಭಿನಯದ ಐತಿಹಾಸಿಕ ಆಕ್ಷನ್‌ ಡ್ರಾಮಾ ಹಿನ್ನೆಲೆಯ ನೂತನ ಸಿನಿಮಾದ ಅನೌನ್ಸ್‌ಮೆಂಟ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಸಿತಾರ ಎಂಟರ್‌ಟೈನ್‌ಮೆಂಟ್ ಹಾಗೂ ಫಾರ್ಚೂನ್ ಫೋರ್ ಸಿನೆಮಾಸ್ ಜಂಟಿಯಾಗಿ ಹೊಸ ಪ್ರಾಜೆಕ್ಟ್‌ ಕೈಗೆತ್ತಿಕೊಂಡಿದ್ದು, 18ನೇ ಶತಮಾನದ ಕಥೆ ಹೇಳಲು ಮುಂದಾಗಿದ್ದಾರೆ.

Loose Maada Movie: ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ʼಲೂಸ್ ಮಾದʼ ಚಿತ್ರಕ್ಕೆ ಚಾಲನೆ

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ʼಲೂಸ್ ಮಾದʼ ಚಿತ್ರಕ್ಕೆ ಚಾಲನೆ

Loose Maada Movie: ನಟ ಯೋಗೇಶ್‌ ಅಭಿನಯದ, ರಂಜಿತ್ ಕುಮಾರ್ ಗೌಡ ನಿರ್ದೇಶಿಸುತ್ತಿರುವ ʼಲೂಸ್ ಮಾದʼ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಯೋಗೇಶ್ ಅವರ ತಂದೆ, ನಿರ್ಮಾಪಕ ಟಿ.ಪಿ. ಸಿದ್ದರಾಜು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಚಿತ್ರದ ನಿರ್ಮಾಪಕ ಧರ್ಮೇಂದ್ರ ಅವರೆ ಕ್ಯಾಮೆರಾ ಚಾಲನೆ ಮಾಡಿದರು.

Just Married Movie: 'ಜಸ್ಟ್ ಮ್ಯಾರೀಡ್' ಚಿತ್ರದ 'ತಪ್ಪು ಮಾಡೋದು ಸಹಜ' ಹಾಡು ರಿಲೀಸ್‌

'ಜಸ್ಟ್ ಮ್ಯಾರೀಡ್' ಚಿತ್ರದ 'ತಪ್ಪು ಮಾಡೋದು ಸಹಜ' ಹಾಡು ರಿಲೀಸ್‌

Sandalwood Movie: ಅನನ್ಯಾ ಭಟ್ ಅವರ ಧ್ವನಿಯಲ್ಲಿ ಮೂಡಿಬಂದಿರುವ ಸಿನಿಮಾ 'ಜಸ್ಟ್ ಮ್ಯಾರೀಡ್' ಚಿತ್ರದ 'ತಪ್ಪು ಮಾಡೋದು ಸಹಜ' ಎಂಬ ಸುಂದರ ಗೀತೆ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾಗಿದೆ. ಈ ಹಾಡಿಗೆ, ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದಾರೆ ಹಾಗೂ ಧನಂಜಯ್ ರಂಜನ್ ಅವರು ಸಾಹಿತ್ಯ ಬರೆದಿದ್ದಾರೆ.

Prajwal Revanna Case: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು‌ ಕೋರ್ಟ್ ತೀರ್ಪು; ನಾಳೆ ಶಿಕ್ಷೆ ಪ್ರಕಟ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು‌ ಕೋರ್ಟ್ ತೀರ್ಪು

Physical abuse: ಅತ್ಯಾಚಾರ ಪ್ರಕರಣದಲ್ಲಿ 26 ಸಾಕ್ಷಿಗಳ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದೆ. ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿತ್ತು.

Dharmasthala Case: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದವರ ಮೇಲೆ ಕ್ರಮ: ಗೃಹ ಸಚಿವ ಪರಮೇಶ್ವರ್‌ ಎಚ್ಚರಿಕೆ

ಧರ್ಮಸ್ಥಳ ವಿರುದ್ಧ ಅಪಪ್ರಚಾರ ಮಾಡಿದವರ ಮೇಲೆ ಕ್ರಮ: ಪರಮೇಶ್ವರ್‌ ಎಚ್ಚರಿಕೆ

G Parameshwara: ಎಸ್​ಐಟಿ ತನಿಖಾ ತಂಡ ಮುಖ್ಯಸ್ಥರಾಗಿರುವ ಪ್ರಣಬ್ ಮೊಹಂತಿ ಇಂದು ಗೃಹ ಸಚಿವರನ್ನು ಭೇಟಿಯಾಗಿದ್ದು, ಈ ಭೇಟಿಯ ಬಳಿಕ ಸಚಿವರು ಮಾಧ್ಯಮಗಳ ಜೊತೆ ಮಾತನಾಡಿದರು. ಮೊಹಂತಿ ಅವರು ಕೇಂದ್ರ ಸೇವೆಗೆ ನೇಮಕಗೊಂಡ ಮೊಹಂತಿ ಎಸ್‌ಐಟಿಯಿಂದ ಹೊರಬೀಳಲಿದ್ದಾರೆ ಎನ್ನಲಾಗಿತ್ತು. ಈ ಕುರಿತು ಪರಮೇಶ್ವರ್‌ ಸ್ಪಷ್ಟನೆಯನ್ನೂ ನೀಡಿದ್ದಾರೆ.

Nagamma Passes Away: ಪುನೀತ್‌ ಆಗಮನಕ್ಕೆ ಕಾದಿದ್ದ ಡಾ.ರಾಜ್‌ ಸಹೋದರಿ ನಾಗಮ್ಮ ಕೀರ್ತಿಶೇಷ

ಪುನೀತ್‌ ಆಗಮನಕ್ಕೆ ಕಾದಿದ್ದ ಡಾ.ರಾಜ್‌ ಸಹೋದರಿ ನಾಗಮ್ಮ ಕೀರ್ತಿಶೇಷ

Nagamma: ಗಾಜನೂರು ನಿವಾಸಿಯಾಗಿದ್ದ ನಾಗಮ್ಮ, ಪುನೀತ್‌ ರಾಜ್‌ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್​ಕುಮಾರ್ ಅವರುಗಳಿಗೆ ಪ್ರೀತಿಯ ನಾಗತ್ತೆಯಾಗಿದ್ದರು. ವಯಸ್ಸಾಗಿದ್ದ ಕಾರಣ, ಅವರಿಗೆ ಆಘಾತ ಆಗಬಾರದೆಂದು ಪುನೀತ್ ರಾಜ್​ಕುಮಾರ್ ನಿಧನದ ಸುದ್ದಿಯನ್ನು ಅವರಿಗೆ ಕುಟುಂಬದವರು ತಿಳಿಸಿರಲಿಲ್ಲ.

Rahul Gandhi: ಬಿಜೆಪಿ ಮತ ಕಳ್ಳತನ ಆರೋಪಿಸಿ ಆ.5ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ, ಕಾಂಗ್ರೆಸ್‌ ಪ್ರತಿಭಟನೆ

ಬಿಜೆಪಿ ಮತ ಕಳ್ಳತನ ಆರೋಪಿಸಿ ಆ.5ರಂದು ರಾಹುಲ್‌ ಗಾಂಧಿ ಪಾದಯಾತ್ರೆ

ರಾಹುಲ್ ಗಾಂಧಿ (Rahul Gandhi) ನೇತೃತ್ವದಲ್ಲಿ ಬೆಂಗಳೂರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ (Freedom park) ಕಾಂಗ್ರೆಸ್ ಪ್ರತಿಭಟನೆ ನಡೆಯಲಿದ್ದು, ಮೌರ್ಯ ಸರ್ಕಲ್‌ನಿಂದ ಕಾಂಗ್ರೆಸ್‌ (Congress) ಮುಖಂಡರು ಅರ್ಧ ಕಿಲೋಮೀಟರ್‌ ಪಾದಯಾತ್ರೆ ನಡೆಸಲಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

Bengaluru: ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಹೆರಿಗೆ, ನೆರವಾದ ರೈಲ್ವೆ ಸಿಬ್ಬಂದಿ

ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಹೆರಿಗೆ, ನೆರವಾದ ಸಿಬ್ಬಂದಿ

Viral News: 23 ವರ್ಷದ ಅರ್ಚನಾ ಕುಮಾರಿ ಅವರು ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ. ರೈಲ್ವೆ ಮಹಿಳಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ. ಆರ್‌ಪಿಎಫ್ ಕಾನ್‌ಸ್ಟೆಬಲ್ ಅಮೃತ ಎಂಬವರು ಘಟನೆ ವೇಳೆ ಯಾವುದೇ ಅಪಾಯವಿಲ್ಲದೆ ಮಹಿಳೆಗೆ ಸುರಕ್ಷಿತವಾಗಿ ಹೆರಿಗೆ ಮಾಡಿಸುವಲ್ಲಿ ನೆರವಾದರು.

Gold Price Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 1st Aug 2025: ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 20 ರೂ. ಇಳಿಕೆ ಕಂಡು ಬಂದಿದೆ. ಆ ಮೂಲಕ ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 9,150 ರೂ ಗೆ ಬಂದು ನಿಂತಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನ 21 ರೂ ಇಳಿಕೆ ಕಂಡಿದ್ದು, 9,982 ರೂ. ಆಗಿದೆ.

Murder Case: ಗಂಡನನ್ನು ಪ್ರಿಯತಮನಿಂದ ಕೊಲ್ಲಿಸಿ ನಾಗರಪಂಚಮಿ ಹಬ್ಬದ ಪಾಯಸ ಉಂಡ ಪತ್ನಿ!

ಗಂಡನನ್ನು ಪ್ರಿಯತಮನಿಂದ ಕೊಲ್ಲಿಸಿ ನಾಗರಪಂಚಮಿ ಹಬ್ಬದ ಪಾಯಸ ಉಂಡ ಪತ್ನಿ!

Koppala Crime News: ನೇತ್ರಾವತಿಗೆ ಬೂದಗುಂಪ ಗ್ರಾಮದ ದ್ಯಾಮಣ್ಣ ಜೊತೆ ಮದುವೆ ಆಗಿ, ಮೂರು ಮಕ್ಕಳು ಆಗಿದ್ದರೂ ಶ್ಯಾಮಣ್ಣ ಎಂಬಾತನ ಜೊತೆ ಅಕ್ರಮ ಸಂಬಂಧ ಹೊಂದಿದ್ದಳು. ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನಲೆಯಲ್ಲಿ ಇಬ್ಬರೂ ಕೊಲೆ ಸಂಚು ರೂಪಿಸಿದ್ದಾರೆ.

Prajwal Revanna‌ case: ಇಂದು ಪ್ರಜ್ವಲ್‌ ರೇವಣ್ಣ- ಕೆಆರ್‌ ನಗರ ಲೈಂಗಿಕ ದೌರ್ಜನ್ಯ ಪ್ರಕರಣದ ತೀರ್ಪು

ಇಂದು ಪ್ರಜ್ವಲ್‌ ರೇವಣ್ಣ- ಕೆಆರ್‌ ನಗರ ಪ್ರಕರಣದ ತೀರ್ಪು

Physical Abuse: ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿವೆ. ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

Loading...