ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Bagalkot News: ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ, ಪೈಪ್‌ನಿಂದ ಹೊಡೆದ ಶಿಕ್ಷಕ ದಂಪತಿ!

ಬುದ್ಧಿಮಾಂದ್ಯ ಬಾಲಕನ ಕಣ್ಣಿಗೆ ಖಾರದ ಪುಡಿ ಎರಚಿ ಹಲ್ಲೆಗೈದ ಶಿಕ್ಷಕ!

ಬಾಗಲಕೋಟೆಯಲ್ಲಿ ವಸತಿಶಾಲೆಯ ಮಾಲೀಕ ಹಾಗೂ ಶಿಕ್ಷಕ ಅಕ್ಷಯ್ ಎಂಬಾತ ಬುದ್ಧಿಮಾಂದ್ಯ ಬಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಬಾಲಕನನ್ನು ಪ್ಲಾಸ್ಟಿಕ್ ಪೈಪ್‌ನಿಂದ ರಕ್ತ ಹೆಪ್ಪುಗಟ್ಟುವಂತೆ ಥಳಿಸಲಾಗಿದೆ, ಆ ಸಂದರ್ಭದಲ್ಲಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ, ಚಿತ್ರಹಿಂಸೆ ನೀಡಲಾಗಿದೆ.

ದ್ವೇಷ ಭಾಷಣ ತಡೆ ಕಾಯ್ದೆಯಡಿ ಪ್ರಿಯಾಂಕ್ ಖರ್ಗೆ ಮೊದಲ ಅಪರಾಧಿ; ಕ್ಷಮೆಗೆ ಗೋವಿಂದ ಕಾರಜೋಳ ಆಗ್ರಹ

ಪ್ರಿಯಾಂಕ್ ಖರ್ಗೆ ಕೂಡಲೇ ಕ್ಷಮೆ ಕೇಳಲಿ: ಗೋವಿಂದ ಕಾರಜೋಳ ಆಗ್ರಹ

Govind Karjol: ಆಡಳಿತ- ವಿಪಕ್ಷದ ನಡುವೆ ಟೀಕೆ -ಟಿಪ್ಪಣಿ ನಡೆಯುವುದು ಪ್ರಜಾಪ್ರಭುತ್ವದ ಸೌಂದರ್ಯ. ಟೀಕೆ ಟಿಪ್ಪಣಿಗಳು ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಲು ಇರಬೇಕು. ಜನರ ಕಲ್ಯಾಣಕ್ಕಾಗಿ ಇರಬೇಕು. ವೈಯಕ್ತಿಕ ದ್ವೇಷದಿಂದ ಹಿರಿಯರನ್ನು ಅಪಮಾನ ಮಾಡುವ ಶಬ್ದ ಬಳಸುವುದು ಯೋಗ್ಯವಲ್ಲ, ತರವಲ್ಲ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಲೈಂಗಿಕ ಆಟಿಕೆ ಖರೀದಿಸುತ್ತಿರುವವರಲ್ಲಿ ಬೆಂಗಳೂರಿಗರೇ ನಂಬರ್ 1; ಟಾಯ್‌ಗೆ 4 ಲಕ್ಷ ರುಪಾಯಿ!

ಲೈಂಗಿಕ ಆಟಿಕೆ ಖರೀದಿಸುತ್ತಿರುವವರಲ್ಲಿ ಬೆಂಗಳೂರಿಗರೇ ನಂಬರ್ 1

Bengaluru News: ಇತ್ತೀಚಿನ ವರದಿಯೊಂದರ ಪ್ರಕಾರ, ಭಾರತದಲ್ಲಿ ಸೆಕ್ಸ್ ಗೊಂಬೆಗಳ ಖರೀದಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ವಿಶೇಷವಾಗಿ ಸುಮಾರು 4 ಲಕ್ಷ ರುಪಾಯಿ ಮೌಲ್ಯದ ಸೆಕ್ಸ್ ಟಾಯ್‌ಗಳ ಮಾರಾಟವಾಗುತ್ತಿದೆ. ಬದಲಾಗುತ್ತಿರುವ ಜೀವನಶೈಲಿ, ತಂತ್ರಜ್ಞಾನ ಪ್ರಭಾವ ಮತ್ತು ಖಾಸಗಿ ಆಯ್ಕೆಗಳ ಬಗ್ಗೆ ಹೆಚ್ಚುತ್ತಿರುವ ಮುಕ್ತ ಮನೋಭಾವ ಈ ಪ್ರವೃತ್ತಿಗೆ ಕಾರಣ.

KSRTC Bus: ಪ್ರಯಾಣಿಕರಿಗೆ ಸಿಹಿಸುದ್ದಿ; ಕ್ರಿಸ್‌ಮಸ್‌ ಹಿನ್ನೆಲೆ ಕೆಎಸ್‌ಆರ್‌ಟಿಸಿಯಿಂದ 1,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಕ್ರಿಸ್‌ಮಸ್‌ಗೆ ಕೆಎಸ್‌ಆರ್‌ಟಿಸಿಯಿಂದ 1,000 ಹೆಚ್ಚುವರಿ ಬಸ್​​ ವ್ಯವಸ್ಥೆ

ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿ.19, 20 ಹಾಗೂ 24ರಂದು ಬೆಂಗಳೂರಿನಿಂದ ವಿವಿಧ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಡಿ.26 ಹಾಗೂ 28ರಂದು ವಿಶೇಷ ಬಸ್‌ಗಳು ಕಾರ್ಯಾಚರಣೆ ನಡೆಸಲಿವೆ.

ಸಭ್ಯ ಉಡುಗೆ, ಸಮಯಪಾಲನೆ ಕಡ್ಡಾಯ: ಸರ್ಕಾರಿ ನೌಕರರಿಗೆ ಕಠಿಣ ನಿಯಮ ಜಾರಿ

ಸಭ್ಯ ಉಡುಗೆ, ಸಮಯಪಾಲನೆ ಕಡ್ಡಾಯ: ಸರ್ಕಾರಿ ನೌಕರರಿಗೆ ಕಠಿಣ ನಿಯಮ ಜಾರಿ

Dress code for government employees: ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಸರ್ಕಾರಿ ನೌಕರರು ಚಲನವಲನ ವಹಿ, ನಗದು ಘೋಷಣೆ ವಹಿಯನ್ನು ನಿರ್ವಹಣೆ ಮಾಡದಿರುವುದು, ಸಭ್ಯ ಉಡುಗೆ ತೊಡುಗೆಗಳನ್ನು ಧರಿಸದಿರುವ ಕುರಿತು ಸಾರ್ವಜನಿಕರಿಂದ ದೂರುಗಳ ಬಂದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಠಿಣ ನಿಯಮಗಳನ್ನು ಜಾರಿ ಮಾಡಿದೆ.

CCRI: ಕಾಫಿ ಸಂಶೋಧನಾ ಕೇಂದ್ರಕ್ಕೆ ಶತಮಾನೋತ್ಸವ ಸಂಭ್ರಮ

ಕಾಫಿ ಸಂಶೋಧನಾ ಕೇಂದ್ರಕ್ಕೆ ಶತಮಾನೋತ್ಸವ ಸಂಭ್ರಮ

ಇಂದಿನಿಂದ ಮೂರು ದಿನಗಳು ಕಾಫಿ ಸಂಬಂಧಿತ ವಿವಿಧ ವಿಚಾರಗಳ ಬಗ್ಗೆ ಗೋಷ್ಠಿ, ಪ್ರದರ್ಶನ ಗಳಿಗೆ ಈ ಕೇಂದ್ರ ಸಜ್ಜಾಗಿದೆ. ಭಾರತದ ಕಾಫಿ ಕೃಷಿ ಸಂಶೋಧನೆಯಲ್ಲಿ ಪ್ರಮುಖ ಪಾತ್ರ ವಹಿಸಿರುವ ಕಾಫಿ ನಾಡಿನ ಈ ಹೆಮ್ಮೆಯ ಕೇಂದ್ರದ ಶತಮಾನ ಸಂಭ್ರ ಮಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಬಾಳೆ ಹೊನ್ನೂರು ಎಂಬ ಪಟ್ಟಣ ಹಬ್ಬದ ಸಂಭ್ರಮದಿಂದ ಸಜ್ಜುಗೊಂಡಿದೆ.

ಹೈಕಮಾಂಡ್‌ ಕರೆದಾಗ ನಾನು, ಸಿಎಂ ದೆಹಲಿಗೆ ಹೋಗ್ತೇವೆ, ಕದ್ದುಮುಚ್ಚಿ ಹೋಗಲ್ಲ: ಡಿ.ಕೆ. ಶಿವಕುಮಾರ್

ನಾನು ಕದ್ದುಮುಚ್ಚಿ ದೆಹಲಿಗೆ ಹೋಗಲ್ಲ: ಡಿ.ಕೆ. ಶಿವಕುಮಾರ್

DK Shivakumar: ದೆಹಲಿ ನಾಯಕರು ನಿಮಗೆ ಆಹ್ವಾನ ನೀಡಿದ್ದಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ ಎಂದು ಹೇಳಿದ್ದಾರೆ.

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ; ಸಿಎಂ ಸಂತಾಪ

ಹಿರಿಯ ಪತ್ರಕರ್ತ ದೊಡ್ಡಬೊಮ್ಮಯ್ಯ ಹೃದಯಾಘಾತದಿಂದ ನಿಧನ; ಸಿಎಂ ಸಂತಾಪ

ಮೂಲತಃ ತುಮಕೂರು ಜಿಲ್ಲೆ ಪಾವಗಡ ತಾಲೂಕಿನ ರೊಪ್ಪ ಗ್ರಾಮದವರಾದ ದೊಡ್ಡ ಬೊಮ್ಮಯ್ಯ ಅವರು, ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ಮುಗಿದ ನಂತರ ಬೆಂಗಳೂರಿನ ನಿವಾಸಕ್ಕೆ ವಾಪಸ್‌ ತೆರಳುವಾಗ, ಬಸ್‌ನಲ್ಲಿ ಹೃದಯಾಘಾತವಾಗಿ ನಿಧನರಾಗಿದ್ದಾರೆ.

Bengaluru Power Cut: ಡಿ.22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಡಿ.22ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಪ್ರೆಸ್ಟೀಜ್ ಫಾಲ್ಕಾನ್ ಸಿಟಿ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಡಿ.22ರಂದು ಸೋಮವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

Self Harming: ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ಕಲಬುರಗಿಯಲ್ಲಿ ಬೆಂಕಿ ಹಚ್ಚಿಕೊಂಡು ಬಿಜೆಪಿ ಕಾರ್ಯಕರ್ತೆ ಆತ್ಮಹತ್ಯೆ

ನಂದಿಕೂರ ಗ್ರಾಮದಲ್ಲಿ ಮಲ್ಲಿನಾಥ ಬಿರಾದಾರ್ ಎಂಬವರ ಮನೆಯಲ್ಲಿ ಜ್ಯೋತಿ ಪಾಟೀಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರೂ ಬಿಜೆಪಿ ಕಾರ್ಯಕರ್ತರು ಎಂದು ತಿಳಿದುಬಂದಿದೆ. ಜ್ಯೋತಿ ಪಾಟೀಲ್ ಕಲಬುರಗಿಯ ಬ್ರಹ್ಮಪುರ ಬಡಾವಣೆಯ ನಿವಾಸಿ ಎಂದು ತಿಳಿದುಬಂದಿದೆ. ಘಟನೆ ಕುರಿತು ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫುಟ್‌ಬಾಲ್‌ನಂತೆ ಮಗುವಿಗೆ ಒದ್ದ ಸೈಕೋ ರಂಜನ್‌ ಮೇಲೆ ಪೋಕ್ಸೋ ಕೇಸ್‌ ದಾಖಲಿಸಲು ಮುಂದಾದ ಪೊಲೀಸರು

ಸೈಕೋ ರಂಜನ್‌ ಮೇಲೆ ಪೋಕ್ಸೋ ಕೇಸ್‌ ದಾಖಲಿಸಲು ಮುಂದಾದ ಪೊಲೀಸರು

ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆ ವೇಳೆ ಸೈಕೋ ರಂಜನ್ ಮಕ್ಕಳ ಮೇಲೆ ನಡೆಸಿರೋ ವಿಕೃತಿಯ ಸಾಲು ಸಾಲು ಘಟನೆಗಳು ಬೆಳಕಿಗೆ ಬಂದಿವೆ. ಸೈಕಲ್‌ನಲ್ಲಿ ಹೋಗುತ್ತಿದ್ದ ಬಾಲಕನ ತಲೆ ಕೂದಲು ಹಿಡಿದು ಗರಗರನೇ ತಿರುಗಿಸಿ ಹಲ್ಲೆ ನಡೆಸಿದ್ದ. ಒಂದು ಮಗುವಿನ ಮೇಲೆ ಬೈಕ್‌ ಹತ್ತಿಸಲು ಯತ್ನಿಸಿದ್ದ. ಹೀಗೆ ಒಂದು ವಾರದ ಅಂತರದಲ್ಲಿ ನಾಲ್ಕು ಮಕ್ಕಳಿಗೆ ಹಲ್ಲೆ ಮಾಡಿ ಕಿರುಕುಳ ನೀಡಿದ್ದಾನೆ.

Namma Metro: ಪ್ರಯಾಣಿಕರ ಗಮನಕ್ಕೆ, ನಮ್ಮ ಮೆಟ್ರೋ ಹಳದಿ ರೈಲು ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ, ನಮ್ಮ ಮೆಟ್ರೋ ಹಳದಿ ರೈಲು ಸಂಚಾರದಲ್ಲಿ ವ್ಯತ್ಯಯ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಅನುಕೂಲವಾಗಲೆಂದು 96 ಹೊಸ ರೈಲುಗಳ ಸೇರ್ಪಡೆ ಮಾಡಲಾಗ್ತಿದೆ. ಹೊಸ ರೈಲುಗಳು ಬರುತ್ತಿದ್ದಂತೆ 4 ನಿಮಿಷಕ್ಕೊಂದರಂತೆ ಮೆಟ್ರೋ ರೈಲು ಸಂಚಾರಕ್ಕೆ ನೀಡಲು ಬಿಎಂಆರ್​ಸಿಎಲ್​ ಸಿದ್ದತೆ ಮಾಡಿಕೊಂಡಿದೆ. ಸದ್ಯ ನಮ್ಮ ಮೆಟ್ರೋದ ಹಸಿರು ಮಾರ್ಗ​, ನೇರಳೆ ಮಾರ್ಗ ಹಾಗೂ ಹಳದಿ ಮಾರ್ಗಗಳಿಗೆ 64 ರೈಲುಗಳು ಸೇರ್ಪಡೆಗೊಂಡಿವೆ.

DK Shivakumar: ನನ್ನ, ಸಿಎಂ ನಡುವೆ ಒಪ್ಪಂದ ಆಗಿದೆ: ಅಂಕೋಲಾದಲ್ಲಿ ಡಿಕೆ ಶಿವಕುಮಾರ್‌

ನನ್ನ, ಸಿಎಂ ನಡುವೆ ಒಪ್ಪಂದ ಆಗಿದೆ: ಅಂಕೋಲಾದಲ್ಲಿ ಡಿಕೆ ಶಿವಕುಮಾರ್‌

5 ವರ್ಷಗಳ ಹಿಂದೆ ಈ ಸ್ಥಳಕ್ಕೆ ಬಂದು ಕುಟುಂಬದ ಕೆಲಸಕ್ಕೆ ಪ್ರಾರ್ಥನೆ ಮಾಡಿದ್ದೆ, ಅದು ಈಡೇರಿತ್ತು. ಮತ್ತೆ ಇಲ್ಲಿಗೆ ಬರುತ್ತೇನೆ ಎಂದಿದ್ದೆ, ಬಂದಿದ್ದೇನೆ. ತಾಯಿ ಜಗದೀಶ್ವರಿ ಆಶೀರ್ವಾದ ಮಾಡು ಎಂದು ಕೇಳಿಕೊಂಡಿದ್ದೇನೆ. ತಾಯಿ ನನ್ನೊಂದಿಗೆ ಮಾತನಾಡಿದ್ದಾಳೆ, ಶುಭ ಸೂಚನೆ ಕೂಡ ನೀಡಿದ್ದಾಳೆ ಎಂದು ಅಂಕೋಲಾ ತಾಲೂಕಿನ ಆಂದ್ಲೆಯ ಶ್ರೀ ಜಗದೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಡಿಕೆ ಶಿವಕುಮಾರ್‌ ನುಡಿದರು.

Karnataka Weather: ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ರಾಜ್ಯದಲ್ಲಿ ಮುಂದುವರಿದ ತೀವ್ರ ಚಳಿ, 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

Karnataka Weather: ಕಳೆದ ಕೆಲ ದಿನಗಳಿಂದ ರಾಜಧಾನಿಯ ವಾತಾವರಣ ಜನರನ್ನು ಗಡ ಗಡ ನಡುಗಿಸುತ್ತಿದೆ. ಹಗಲು ಸಾಕಷ್ಟು ಬಿಸಿಲು ಮೈ ಚುರುಕ್‌ ಎನ್ನುವಂತೆ ಇರಲಿದೆ. ಆದರೆ ಸಂಜೆಯಾದ ಕೂಡಲೆ ಶೀತ ಗಾಳಿ ಬೀಸುತ್ತಿದ್ದು, ರಾತ್ರಿ ತಾಪಮಾನ 14 ಡಿಗ್ರಿ ಸೆಲ್ಷಿಯಸ್‌ವರೆಗೂ ಇಳಿಯುತ್ತಿದೆ. ಹನ್ನೆರಡು ಡಿಗ್ರಿಯವರೆಗೂ ಇಳಿದು ಹತ್ತು ವರ್ಷಗಳ ದಾಖಲೆ ಬರೆದಿತ್ತು. ಹಲವು ಜಿಲ್ಲೆಗಳಿಗೆ ಆರೆಂಜ್‌, ಯೆಲ್ಲೋ ಅಲರ್ಟ್‌ ನೀಡಲಾಗಿದೆ.

Byrathi Basavaraj: ರೌಡಿ ಕೊಲೆ ಕೇಸ್‌ನಲ್ಲಿ ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಮಾಜಿ ಸಚಿವರು ಅಜ್ಞಾತ ಸ್ಥಳಕ್ಕೆ

ರೌಡಿ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಜಾಮೀನು ನಿರಾಕರಣೆ, ಸೆರೆ ಸಾಧ್ಯತೆ

ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಮಾಜಿ ಸಚಿವ ಬೈರತಿ ಬಸವರಾಜ್‌ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ಕೆಆರ್‌ ಪುರದಲ್ಲಿರುವ ನಿವಾಸದಲ್ಲೂ ಬೈರತಿ ಬಸವರಾಜ್ ಇಲ್ಲ. ಬೆಳಗಾವಿಯಲ್ಲಿ ನಡೆದ ವಿಧಾನಸಬೆ ಅಧಿವೇಶನದಲ್ಲಿ ಮೊದಲ ವಾರ ಕಲಾಪಕ್ಕೆ ಬೈರತಿ ಬಸವರಾಜ್ ಹಾಜರಾಗಿದ್ದರು. ಆದರೆ ಈ ವಾರ ಅಧಿವೇಶನಕ್ಕೆ ಬರದೇ ಕೆಆರ್‌ ಪುರ ಕ್ಷೇತ್ರದ ಶಾಸಕರು ಗೈರಾಗಿದ್ದರು.

ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಅಪ್ಪು ಸ್ಪೋರ್ಟ್ಸ್ ಕ್ಲಬ್

ಕಬಡ್ಡಿ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಅಪ್ಪು ಸ್ಪೋರ್ಟ್ಸ್ ಕ್ಲಬ್

ಸ್ಥಳೀಯ ಅಪ್ಪು ಸ್ಪೋರ್ಟ್ಸ್ ಕ್ಲಬ್ ಚಿಕ್ಕಬಳ್ಳಾಪುರ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ವಿಜೇತರಾಗಿ ತಾಲೂಕಿಗೆ ಕೀರ್ತಿ ತಂದಿದ್ದಾರೆ. ಅಪ್ಪು ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತಂಡದ ತರಬೇತುದಾರ ರಾಘವೇಂದ್ರ ಅವರು ಮಾತನಾಡುತ್ತಾ ಹತ್ತು ವರ್ಷಗಳ ನಂತರ ನಮ್ಮ ತಾಲೂಕಿನ ಕಬಡ್ಡಿ ಕ್ರೀಡಾಪಟುಗಳು ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿ ಯಲ್ಲಿ ವಿಜೇತರಾಗುವ ಮೂಲಕ ತಾಲೂಕಿನ ಕ್ರೀಡಾ ಪ್ರೇಮಿಗಳಲ್ಲಿ ಹರ್ಷವನ್ನು ಉಂಟು ಮಾಡಿದ್ದಾರೆ.

Gauribidanur News: ಡಾ.ಎಚ್.ಎನ್ ವ್ಯಕ್ತಿಯಾಗಿರದೆ ಅವರೊಂದು ಸಂಸ್ಥೆಯಂತಿದ್ದರು: ಲೇಖಕ ಎಸ್.ಎಲ್.ರಾಮಕೃಷ್ಣ ಅಭಿಮತ

ಡಾ.ಎಚ್.ಎನ್ ವ್ಯಕ್ತಿಯಾಗಿರದೆ ಅವರೊಂದು ಸಂಸ್ಥೆಯಂತಿದ್ದರು

ಶಿಕ್ಷಣ ತಜ್ಞ ಡಾ.ಎಚ್ ನರಸಿಂಹಯ್ಯ(Educationist Dr. H. Narasimhaiah) ನವರು ಕೇವಲ ಒಬ್ಬ ವ್ಯಕ್ತಿಯಾಗಿರದೆ ಒಂದು ಸಂಸ್ಥೆಯ ರೀತಿ ಕೆಲಸ ಮಾಡಿದ ಮಹಾನ್ ಚೇತನ ಎಂದು ಬಿಹೆಚ್‌ಇಎಲ್ ಸಂಸ್ಥೆಯ ನಿವೃತ್ತ ಲೆಕ್ಕಪರಿಶೋಧಕರು ಹಾಗೂ ಲೇಖಕರಾದ ಎಸ್.ಎಲ್.ರಾಮಕೃಷ್ಣ ಅಭಿಪ್ರಾಯ ಪಟ್ಟರು.

ನ್ಯಾಶನಲ್ ಹೆರಾಲ್ಡ್ ಪ್ರಕರಣ: ಕೇಂದ್ರದ ದ್ವೇಷ ರಾಜಕಾರಣ ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ದ್ವೇಷ ರಾಜಕಾರಣ ಬಿಟ್ಟು ಸಮಸ್ಯೆಗಳ ಪರಿಹಾರಕ್ಕೆ ಒತ್ತು ನೀಡಲಿ

ಕೇಂದ್ರದ ಬಿಜೆಪಿ ಸರ್ಕಾರ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ಮೊದಲಾದ ತನಿಖಾಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷದ ನಾಯಕರಿಗೆ ಕಿರುಕುಳ ನೀಡುತ್ತಿದೆ ಎಂಬುದಕ್ಕೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಜಾರಿ ನಿರ್ದೇಶನಾಲಯದ ಸುಳ್ಳು ಆರೋಪ ಪಟ್ಟಿಯನ್ನು ನ್ಯಾಯಾಲಯ ತಿರಸ್ಕರಿಸಿರುವುದೇ ಸಾಕ್ಷಿಯಾಗಿದೆ

Chikkaballapur News: ಮಂಚೇನಹಳ್ಳಿ ಮಾನಸ ಆಸ್ಪತ್ರೆಯಲ್ಲಿ ಉಚಿತ ಕೀಲು, ಎಲುಬು ಸಾಂಧ್ರತೆ ಪರೀಕ್ಷಾ ಶಿಬಿರ

ಉಚಿತ ಕೀಲು, ಎಲುಬು ಸಾಂಧ್ರತೆ ಪರೀಕ್ಷಾ ಶಿಬಿರ

ಡಿ.20ರ ಶನಿವಾರ ಮಂಚೇನಹಳ್ಳಿಯಲ್ಲಿ ನಡೆಯಲಿರುವ ಉಚಿತ ತಪಾಸಣೆ ಶಿಬಿರದ ಕುರಿತು ಏರ್ಪಡಿಸಿದ್ದ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದ ಅವರು  ಗ್ರಾಮೀಣ ಜನತೆಗೆ ಆರೋಗ್ಯ ಸಂಬಂಧಿ ವಿಚಾರಗಳಲ್ಲಿ ತಿಳುವಳಿಕೆ ಕೊರತೆಯಿದೆ. ಇದನ್ನು ಮನಗಂಡು ಈ ಶಿಬಿರ ಆಯೋಜಿಸ ಲಾಗಿದೆ ಎಂದರು.

ಸಿಗ್ನಿಫೈನಿಂದ ಬೆಂಗಳೂರಿನಲ್ಲಿ ಬೆಳಕು: ಮೂರು ಹೊಸ ಫಿಲಿಪ್ಸ್ ಸ್ಮಾರ್ಟ್ ಲೈಟಿಂಗ್ ಹಬ್ ಗಳ ಪ್ರಾರಂಭದೊಂದಿಗೆ ಪ್ರೀಮಿಯಂ ಲೈಟಿಂಗ್ ಅನುಭವಕ್ಕೆ ಶಕ್ತಿ

ಸಿಗ್ನಿಫೈನಿಂದ ಬೆಂಗಳೂರಿನಲ್ಲಿ ಬೆಳಕು

ಗ್ರಾಹಕರು ಹೆಚ್ಚಾಗಿ ಪ್ರೀಮಿಯಂ, ವಿನ್ಯಾಸ ಪ್ರೇರಿತ ಮತ್ತು ಸ್ಮಾರ್ಟ್ ಲೈಟಿಂಗ್ ಪರಿಹಾರಗಳಿಗೆ ಆಕರ್ಷಿತ ರಾಗುತ್ತಿರುವುದರಿಂದ ಬೆಂಗಳೂರು ಪ್ರಮುಖ ಮಾರುಕಟ್ಟೆಯಾಗಿ ಹೊರಹೊಮ್ಮಿದೆ. ಭಾರತದ ಆವಿಷ್ಕಾರ ಮತ್ತು ಐಟಿ ರಾಜಧಾನಿಯಾಗಿ ಸ್ಮಾರ್ಟ್ ಹೋಮ್ ಆಟೊಮೇಷನ್ ನ ಪ್ರಾರಂಭಿಕ ಅಳವಡಿ ಕೆದಾರರಾಗಿ ಬೆಂಗಳೂರು ತಂತ್ರಜ್ಞಾನ ಬಳಕೆಯ ಗ್ರಾಹಕರನ್ನು ಹೆಚ್ಚಾಗಿ ಹೊಂದಿದೆ ಮತ್ತು ಆಧುನಿಕ, ಅಲಂಕಾರಿಕ ವಿನ್ಯಾಸಕ್ಕೆ ಬಲವಾದ ಮೌಲ್ಯ ನೀಡುತ್ತದೆ

Kannada Sahitya Sammelan: ಡಿ.20 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಕನ್ನಡ ಹಬ್ಬಕ್ಕೆ ಸಜ್ಜುಗೊಳಿಸಿದ ಪರಿಷತ್ತು

ಡಿ.20 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬೆಳಿಗ್ಗೆ 7.30 ಕ್ಕೆ ತಹಶೀಲ್ದಾರ್ ಆರತಿ.ಬಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ. ತಾಪಂ ಆಡಳಿತಾಧಿಕಾರಿ ಬಿ.ಎಲ್.ಕೃಷ್ಣಪ್ಪ ನಾಡ ಧ್ವಜಾರೋಹಣ ನಡೆಸಲಿದ್ದಾರೆ. ಕಸಾಪ ತಾಲ್ಲೂಕು ಅಧ್ಯಕ್ಷ ಎಚ್.ಸಿ.ಯತೀಶ್ ಪರಿಷತ್ತಿನ ಧ್ವಜಾರೋಹಣ ನೆರವೇರಿಸಲಿದ್ದಾರೆ. ನಂತರ ಬೆಳಿಗ್ಗೆ 8.30 ಕ್ಕೆ ಸಮ್ಮೇಳನಾಧ್ಯಕ್ಷ ನಂಜುಂಡಸ್ವಾಮಿ ಅವರನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡದೊಂದಿಗೆ ಭವ್ಯ ಮೆರವಣಿಗೆ ಮೂಲಕ ವೇದಿಕೆಗೆ ಬರ ಮಾಡಿಕೊಳ್ಳಲಾಗುವುದು.

ಕುರ್ಚಿ ಕದನ; ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

ನನ್ನನ್ನು ಯಾರೂ ಅಲುಗಾಡಿಸಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ

Karnataka winter session 2025: ಕಾಂಗ್ರೆಸ್‌ ಸರ್ಕಾರ ತನ್ನ ಪೂರ್ಣ ಅವಧಿಯನ್ನು ಮುಗಿಸಿ, ನಂತರ 2028ರಲ್ಲೂ ಅಧಿಕಾರಕ್ಕೆ ಬರಲಿದೆ. 2008 , 2018 ಅವಧಿಯಲ್ಲಿ ಬಿಜೆಪಿ ಜನಾರ್ಶೀರ್ವಾದ ಪಡೆದು ಅಧಿಕಾರಕ್ಕೆ ಬಂದಿಲ್ಲ. ರಾಜ್ಯದ ಜನರು ಬಿಜೆಪಿಗೆ ಒಮ್ಮತ ತೋರಿಸಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

Valmiki Corporation scam: ಮಾಜಿ ಸಚಿವ ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ ಮಾಡಿದ ಇಡಿ

ಮಾಜಿ ಸಚಿವ ನಾಗೇಂದ್ರಗೆ ಸೇರಿದ 8.07 ಕೋಟಿ ಮೌಲ್ಯದ ಸ್ಥಿರಾಸ್ತಿ ಜಪ್ತಿ

former minister B Nagendra: ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್​ಗಳಡಿಯಲ್ಲಿ ವಸತಿ ಮತ್ತು ವಾಣಿಜ್ಯ ಆಸ್ತಿ ಸೇರಿ 4 ಸ್ಥಿರಾಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಿಂದ ಈ ಪ್ರಕರಣದಲ್ಲಿ ಈವರೆಗೆ ಜಪ್ತಿ ಮಾಡಿದ ಒಟ್ಟು ಮೊತ್ತ 13.01 ಕೋಟಿ ರೂ.ಗಳಾಗಿದೆ.

Sugar Export: ಕೇಂದ್ರ ಸರ್ಕಾರ ಸಕ್ಕರೆ ರಫ್ತು ಹೆಚ್ಚಿಸಲಿ; ಸಿಎಂ ಸಿದ್ದರಾಮಯ್ಯ ಆಗ್ರಹ

ಕೇಂದ್ರ ಸರ್ಕಾರ ಸಕ್ಕರೆ ರಫ್ತು ಹೆಚ್ಚಿಸಲಿ; ಸಿಎಂ ಸಿದ್ದರಾಮಯ್ಯ ಆಗ್ರಹ

ಕೇಂದ್ರ ಸರ್ಕಾರ 2019ರಲ್ಲಿ 1 ಕೆ.ಜಿ. ಸಕ್ಕರೆಗೆ 31 ರೂ. ಎಂಎಸ್‌ಪಿ ನಿಗದಿ ಮಾಡಿದೆ. ಆರು ವರ್ಷಗಳಲ್ಲಿ ಏನೂ ಬದಲಾವಣೆ ಮಾಡಿಲ್ಲ. 41 ರೂಗಳಿಗೆ ಹೆಚ್ಚಿಸಲು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಎಥನಾಲ್ ಹಂಚಿಕೆಯನ್ನು ಕೇಂದ್ರ ಸರ್ಕಾರವೇ ಮಾಡುವುದು. ರಫ್ತು ನಿಗದಿ ಮಾಡುವುದು ಕೂಡ ಕೇಂದ್ರ ಸರ್ಕಾರವೇ. ರೈತರಿಗೆ ಅನ್ಯಾಯ ಆಗಲು ಯಾರು ಕಾರಣ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Loading...