ಅಹಮದಾಬಾದ್ ವಿಮಾನ ದುರಂತ ಆಘಾತಕಾರಿ: ಡಿ.ಕೆ.ಶಿವಕುಮಾರ್
DK Shivakumar: ಅಹಮದಾಬಾದ್ ವಿಮಾನ ದುರಂತದ ಈ ಘಟನೆಯ ಬಗ್ಗೆ ಕೇಳಿ ನಾನು ಆಘಾತಕ್ಕೆ ಒಳಗಾಗಿದ್ದೇನೆ. ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ ಹೇಳಲು ಬಯಸುತ್ತೇನೆ. ಜಗತ್ತಿಗೆ ಹಾಗೂ ದೇಶಕ್ಕೆ ಇದು ಆಘಾತಕಾರಿ ಸುದ್ದಿ. ಹೆಚ್ಚಿನ ಸಾವು ಆಗದಿರಲಿ ಎಂದು ಆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಕರ್ನಾಟಕದ ಸರ್ಕಾರದ ಹಾಗೂ ಪಕ್ಷದ ಸಹಾನುಭೂತಿ ಹಾಗೂ ಪ್ರಾರ್ಥನೆ ಇದ್ದೇ ಇರುತ್ತದೆ. ದೇಶದಲ್ಲಿ ವಿಮಾನಯಾನ ಕ್ಷೇತ್ರ ಅಭಿವೃದ್ಧಿ ಕಾಣುತ್ತಿತ್ತು. ಆದರೆ ಈ ದುರಂತ ನಡೆಯಬಾರದಿತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಷಾದ ವ್ಯಕ್ತಪಡಿಸಿದ್ದಾರೆ.