ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

FHRAI: ಮೂರು ದಿನಗಳ FHRAI 55ನೇ ಸಮಾವೇಶ- ರಾಜನಾಥ ಸಿಂಗ್‌ ಸೇರಿದಂತೆ ಪ್ರಮುಖ ನಾಯಕರು ಭಾಗಿ

ಸಿಲಿಕಾನ್‌ ಸಿಟಿಯಲ್ಲಿ ಮೂರು ದಿನಗಳ FHRAI 55ನೇ ಸಮಾವೇಶ

ಫ್ಯೂಚರ್‌ ಸ್ಕೇಪ್‌-2047 ಸಮಾವೇಶವು ಸೆಪ್ಟೆಂಬರ್‌ 18ರಿಂದ ಸೆಪ್ಟೆಂಬರ್‌ 20ರ ವರೆಗೆ ಒಟ್ಟು ಮೂರು ದಿನಗಳ ಕಾಲ ʼಹೊಟೇಲ್ ಕಾನ್ರಾಡ್‌ʼನಲ್ಲಿ‌ ಅರ್ಥಪೂರ್ಣವಾಗಿ ನಡೆಯಲಿದೆ. ವಿಶೇಷವಾಗಿ ಬೆಂಗಳೂರನ್ನು ಸಮಾವೇಶದ ಕೇಂದ್ರ ಸ್ಥಳವಾಗಿ ಆಯ್ಕೆಮಾಡಿಕೊಂಡಿರುವುದು ರಾಜ್ಯದ ಹೊಟೇಲ್‌ ಉದ್ಯಮಿಗಳಿಗೆ ಸಂತಸ ತಂದಿದೆ.

ಮಹೇಶ್ ವಿಕ್ರಮ್ ಹೆಗ್ಡೆ, ಪುನೀತ್ ಕೆರೆಹಳ್ಳಿ ಬಂಧನ ಕಾನೂನು ಬಾಹಿರ; ಹಿಂದೂ ಜನಜಾಗೃತಿ ಸಮಿತಿ ಆಕ್ರೋಶ

ಮಹೇಶ್ ವಿಕ್ರಮ್ ಹೆಗ್ಡೆ, ಪುನೀತ್ ಕೆರೆಹಳ್ಳಿ ಬಂಧನ ಕಾನೂನು ಬಾಹಿರ

Hindu Janajagruti Samiti: ಇಂತಹ ಕ್ರಮಗಳು ಸರ್ಕಾರದ ಪಕ್ಷಪಾತಿ ನಿಲುವನ್ನು ಬಹಿರಂಗಪಡಿಸುತ್ತವೆ. ಹಿಂದೂ ಜನಜಾಗೃತಿ ಸಮಿತಿ ಈ ಅನ್ಯಾಯ ಬಂಧನವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ಅವರು ಹೇಳಿದ್ದಾರೆ.

CM Siddaramaiah: ಹಾಸನ ಅಪಘಾತ ಪ್ರಕರಣ: ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ- ಸಿಎಂ ಸಿದ್ದರಾಮಯ್ಯ

ಪರಿಹಾರ ನೀಡುವುದು ಸಾವಿಗೆ ಸಮಾನವಲ್ಲ- ಸಿಎಂ ಸಿದ್ದರಾಮಯ್ಯ

CM Siddaramaiah: ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಚಾಲಕರ ತಪ್ಪಿನಿಂದ ಅಪಘಾತವಾಗಿದೆ. ಅದಕ್ಕೆ ಸರ್ಕಾರ ಹೇಗೆ ಹೊಣೆಯಾಗಲು ಸಾಧ್ಯ? ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೃತರ ಕುಟುಂಬದವರಿಗೆ ಸಾವಿನ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.15ರಿಂದ 29ರವರೆಗೆ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಸೆ.15ರಿಂದ 29ರವರೆಗೆ ವಿದ್ಯುತ್‌ ವ್ಯತ್ಯಯ

Bengaluru Power Cut: 66/11 ಕೆವಿ ಸಹಕಾರ ನಗರ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-8 ಉಪ ವಿಭಾಗದ ಹಲವೆಡೆ ಸೆ.15ರಿಂದ ಸೆ.29ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Hassan tragedy: ಟ್ರಕ್‌ ಚಾಲಕನ ನಿರ್ಲಕ್ಷ್ಯವೇ ಹಾಸನ ದುರಂತಕ್ಕೆ ಕಾರಣ: ಕೃಷ್ಣ ಬೈರೇಗೌಡ

ಟ್ರಕ್‌ ಚಾಲಕನ ನಿರ್ಲಕ್ಷ್ಯವೇ ಹಾಸನ ದುರಂತಕ್ಕೆ ಕಾರಣ: ಕೃಷ್ಣ ಬೈರೇಗೌಡ

Krishna Byregowda: ಟ್ರಕ್‌ ಚಾಲಕನ ವಿರುದ್ಧ ಎಲ್ಲಾ ರೀತಿಯ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಇದೇ ಸಮಯದಲ್ಲಿ ಟ್ರಕ್‌ ಚಾಲಕ ಓರ್ವ ಮುಸ್ಲಿಂ ಎಂಬ ರೀತಿಯಲ್ಲಿ ಬಿಂಬಿಸುತ್ತಾ ಕೆಲವು ವಿಪಕ್ಷದವರು ಈ ಘಟನೆಗೆ ಕೋಮು ಬಣ್ಣ ನೀಡುತ್ತಿರುವುದೂ ಸಹ ಕಂಡುಬಂದಿದೆ. ಅಂತಹವರ ವಿರುದ್ಧವೂ ಸಹ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

Vijayalakshmi Darshan: ವಿಜಯಲಕ್ಷ್ಮಿ ದರ್ಶನ್ ಫ್ಲ್ಯಾಟ್‌ನಲ್ಲಿ 3 ಲಕ್ಷ ನಗದು ಕಳ್ಳತನ; ದೂರು ದಾಖಲು

ವಿಜಯಲಕ್ಷ್ಮಿ ದರ್ಶನ್ ಫ್ಲ್ಯಾಟ್‌ನಲ್ಲಿ 3 ಲಕ್ಷ ನಗದು ಕಳ್ಳತನ; ದೂರು ದಾಖಲು

Vijayalakshmi Darshan: ಮನೆಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಲಾಗಿದೆ. ಈ ಬಗ್ಗೆ ದರ್ಶನ್ ಮ್ಯಾನೇಜರ್ ನಾಗರಾಜ್‌ ನೀಡಿದ ದೂರಿನ ಹಿನ್ನೆಯಲ್ಲಿ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿಜಯಲಕ್ಷ್ಮಿ ದರ್ಶನ್ ಅವರು ಮೈಸೂರಿಗೆ ಹೋಗಿದ್ದಾಗ, ಬೆಂಗಳೂರಿನ ಫ್ಲ್ಯಾಟ್‌ನಲ್ಲಿ ಕಳ್ಳತನವಾಗಿದೆ.

Dharwad News: ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಸಾವು

ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಸಾವು

Dharwad News: ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿಮೇಳದ ಹಿನ್ನೆಲೆಯಲ್ಲಿ ತಂದಿದ್ದ ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಒಬ್ಬರು ಮೃತಪಟ್ಟಿದ್ದಾರೆ. ತುಮಕೂರು ಮೂಲದ ಪರಶುರಾಮ (32) ಮೃತರು. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಧಾರವಾಡ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

School Holidays: ಸೆ.20ರಿಂದ ರಾಜ್ಯದ ಶಾಲೆಗಳಿಗೆ ದಸರಾ ರಜೆ: ಎಷ್ಟು ದಿನ? ಇಲ್ಲಿದೆ ಮಾಹಿತಿ

ಸೆ.20ರಿಂದ ರಾಜ್ಯದ ಶಾಲೆಗಳಿಗೆ ದಸರಾ ರಜೆ: ಎಷ್ಟು ದಿನ? ಇಲ್ಲಿದೆ ಮಾಹಿತಿ

Dasara Holidays: 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7ರ ವರೆಗೆ ಇರಲಿದೆ. ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಒಟ್ಟು 18 ದಿನ ಇರಲಿದೆ. ಅಕ್ಟೋಬರ್‌ 2ರಂದು ಗಾಂಧಿ ಜಯಂತಿ ಇರುವುದರಿಂದ ಶಾಲೆಗೆ ಹಾಜರಾಗಬೇಕಾಗುತ್ತದೆ.

Gold Rate Today: ಚಿನ್ನದ ದರದಲ್ಲಿ ಕೊಂಚ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

ಚಿನ್ನದ ದರದಲ್ಲಿ ಮತ್ತೆ ಇಳಿಕೆ; ಇಂದಿನ ರೇಟ್‌ ಚೆಕ್‌ ಮಾಡಿ

Gold price today on 13th Sep 2025: 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 10ರೂ ಇಳಿಕೆಯಾಗಿ , 10,190 ರೂ. ಇದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ11ರೂ. ಇಳಿಕೆಯಾಗಿ 11,117 ರೂ ಆಗಿದೆ.

Bengaluru Crime: ಡ್ರಗ್‌ ಪೆಡ್ಲರ್‌ಗಳ ಜೊತೆ ಪಾರ್ಟಿ ಮಾಡಿದ 11 ಪೊಲೀಸ್‌ ಅಧಿಕಾರಿಗಳ ಅಮಾನತು

ಡ್ರಗ್‌ ಪೆಡ್ಲರ್‌ಗಳ ಜೊತೆ ಪಾರ್ಟಿ ಮಾಡಿದ 11 ಪೊಲೀಸ್‌ ಅಧಿಕಾರಿಗಳ ಅಮಾನತು

Police: ಪೊಲೀಸರು ಮಾಮೂಲಿ ಪಡೆಯುತ್ತಿದ್ದ ಸಂಗತಿ ತನಿಖೆಯಲ್ಲಿ ಬಯಲಾಗಿದೆ. ಕಡಿಮೆ ಬೆಲೆಗೆ ಟೈಡಲ್ ಮಾತ್ರೆ ಖರೀದಿಸಿ 300 400 ರೂಪಾಯಿಗೆ ಮಾರಾಟ ಮಾಡುತ್ತಿದ್ದರು. ಕಡಿಮೆ ಬೆಲೆಗೆ ಖರೀದಿಸಿ ಪೊಲೀಸರು ಹೆಚ್ಚಿನ ಬೆಲೆಗೆ ಮಾರಾಟ ಮಾಡಿಸುತ್ತಿದ್ದರು. ಪ್ರತಿ ತಿಂಗಳು ಇನ್ಸ್ಪೆಕ್ಟರ್ ಸೇರಿದಂತೆ ಸಿಬ್ಬಂದಿಗಳಿಗೆ ಹಣ ನೀಡುತ್ತಿದ್ದರು.

Hassan Tragedy: ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತದಲ್ಲಿ ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಹಾಗೂ ಶೀಘ್ರ ಸ್ಪಂದನೆಗೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಆದೇಶಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡರು (Krishna Byregowda) ಕೂಡ ನಿಗಾ ವಹಿಸಿ ಸೂಚನೆಗಳನ್ನು ನೀಡುತ್ತಿದ್ದು, ಜಿಲ್ಲಾಡಳಿತ ರಾತ್ರಿಯಿಡೀ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

canter accident: ಬೆಂಗಳೂರಿನಲ್ಲಿ ಮತ್ತೊಂದು ಕ್ಯಾಂಟರ್‌ ದುರಂತ, ಆಟೋದಲ್ಲಿದ್ದ ಇಬ್ಬರು ಸಾವು

ಬೆಂಗಳೂರಿನಲ್ಲಿ ಮತ್ತೊಂದು ಕ್ಯಾಂಟರ್‌ ದುರಂತ, ಆಟೋದಲ್ಲಿದ್ದ ಇಬ್ಬರು ಸಾವು

Canter Accident: ಬೆಂಗಳೂರಿನ ಸುಮನಹಳ್ಳಿಯಲ್ಲಿ ಆಟೋ, ಕಾರಿಗೆ ಕ್ಯಾಂಟರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಡಿಕ್ಕಿ ಆದ ರಭಸಕ್ಕೆ ಆಟೋ ಎರಡು ತುಂಡುಗಳಾಗಿದ್ದು, ಲಾರಿ ಬ್ರೇಕ್ ಫೇಲ್ ಆಗಿ ಅಪಘಾತ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

PM Narendra Modi: ಹಾಸನ ಗಣೇಶ ಮೆರವಣಿಗೆ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

ಹಾಸನ ದುರಂತ: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

Hassan Tragedy: ಕರ್ನಾಟಕದ ಹಾಸನದಲ್ಲಿ ನಡೆದ ಅಪಘಾತವು ಹೃದಯ ವಿದ್ರಾವಕವಾಗಿದೆ. ಈ ದುರಂತದ ಸಮಯದಲ್ಲಿ, ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ನಾನು ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ನೋವು ಹಂಚಿಕೊಂಡಿದ್ದಾರೆ.

Thawar Chand Gehlot: 15 ವಿಧೇಯಕಗಳಿಗೆ ರಾಜ್ಯಪಾಲರ ಅಂಗೀಕಾರ, ಮೂರು ರಾಷ್ಟ್ರಪತಿಗಳಿಗೆ

15 ವಿಧೇಯಕಗಳಿಗೆ ರಾಜ್ಯಪಾಲರ ಅಂಗೀಕಾರ, ಮೂರು ರಾಷ್ಟ್ರಪತಿಗಳಿಗೆ

20 ಮಸೂದೆಗಳ ಪೈಕಿ 15 ವಿಧೇಯಕಗಳಿಗೆ ಒಪ್ಪಿಗೆ ನೀಡಿ ರಾಜ್ಯ ಪತ್ರ ಪ್ರಕಟಿಸಲಾಗಿದೆ. ಉಳಿದಂತೆ ಕೇಂದ್ರ ಸರ್ಕಾರದ ಕಾಯ್ದೆಗೆ ತಿದ್ದು ಪಡಿಯಾಗಿರುವ ಕಾರಣಕ್ಕಾಗಿ ನೋಂದಣಿ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಕರ್ನಾಟಕ ದೇವದಾಸಿ (ತಿದ್ದುಪಡಿ) ಕಾಯ್ದೆಗಳ ಪರಿಶೀಲನೆಗೆ ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ.

Murder case: 15 ಲಕ್ಷಕ್ಕಾಗಿ ಗಂಡನಿಗೆ ವಿಷವಿಕ್ಕಿ ಕೊಂದು ಹುಲಿ ದಾಳಿಯಿಂದ ಸತ್ತ ಎಂದು ನಟಿಸಿದ ಹೆಂಡತಿ!

15 ಲಕ್ಷಕ್ಕಾಗಿ ಗಂಡನಿಗೆ ವಿಷವಿಕ್ಕಿ ಕೊಂದು ಹುಲಿ ದಾಳಿಯಿಂದ ಸತ್ತ ಎಂದಳು!

ಮೈಸೂರಿನ ಹುಣಸೂರು ಗ್ರಾಮಾಂತರ ಪೊಲೀಸರು ಮಳವಳ್ಳಿ ತಾಲೂಕು ಕದಂಪುರ ಗ್ರಾಮದ ನಿವಾಸಿ ವೆಂಕಟಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಸಲ್ಲಾಪುರಿ (40) ಯನ್ನು ಬಂಧಿಸಿದ್ದಾರೆ. ಕಾಡು ಪ್ರಾಣಿಗಳ ದಾಳಿಯಿಂದ ಮೃತಪಟ್ಟರೆ ಸರ್ಕಾರದಿಂದ ದೊರೆಯುವ 15 ಲಕ್ಷ ರೂ. ಪರಿಹಾರ ಮೊತ್ತ ಪಡೆಯಲು ಈಕೆ ಸಂಚು ರೂಪಿಸಿದ್ದಳು.

Provocative post: ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್‌: ಮಹೇಶ್‌ ವಿಕ್ರಂ ಹೆಗ್ಡೆ ಬಂಧನ

ಸಿಎಂ ಫೋಟೋ ಬಳಸಿ ಪ್ರಚೋದನಕಾರಿ ಪೋಸ್ಟ್‌: ಮಹೇಶ್‌ ವಿಕ್ರಂ ಹೆಗ್ಡೆ ಬಂಧನ

ಸಿಎಂ ಸಿದ್ದರಾಮಯ್ಯ ಅವರ ಫೋಟೋವನ್ನು ಎಡಿಟ್ ಮಾಡಿ, ಕೋಮು ಪ್ರಚೋದನೆ ಎಸಗಿದ ಆರೋಪ ಇವರ ಮೇಲಿದೆ. 'ಮಾನ್ಯ ಮುಖ್ಯಮಂತ್ರಿಗಳೇ, ಒಂದೇ ಒಂದು ಬಾರಿ ಗಣಪನ ಮೆರವಣಿಗೆಯ ಮೇಲೆ ಕಲ್ಲು ತೂರಿದವರ ಮಸೀದಿಯ ಮೇಲೆ ಬುಲ್ಡೋಜರ್‌ ನುಗ್ಗಿಸುವ ಧೈರ್ಯ ಮಾಡಿ ನೋಡಿ' ಎಂದು ಪೋಸ್ಟ್‌ ಮಾಡಲಾಗಿತ್ತು.

Hassan tragedy: ಹಾಸನ ಗಣೇಶ ಮೆರವಣಿಗೆ ವೇಳೆ ಟ್ರಕ್‌ ಹರಿದು ದುರಂತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಹಾಸನ ಗಣೇಶ ಮೆರವಣಿಗೆ ದುರಂತ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಮೊಸಳೆಹೊಸಳ್ಳಿ ಗ್ರಾಮದಲ್ಲಿ ನಡೆದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆ ಆಗಲಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಪ್ರಭಾಕರ್ ಎಂಬಾತ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಾರಿಯಾಗದೆ ಬಂಟರಹಳ್ಳಿಯ ಪ್ರಭಾಕರ್ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

Navaratri/Dasara Trend 2025: ಫೆಸ್ಟೀವ್ ಸೀಸನ್‌ಗೂ ಮುನ್ನವೇ ಎಂಟ್ರಿ ಕೊಟ್ಟ ನವರಾತ್ರಿ ಟ್ರೆಡಿಷನಲ್‌ ವೇರ್ಸ್

ಫೆಸ್ಟೀವ್ ಸೀಸನ್‌ಗೂ ಮುನ್ನವೇ ಬಿಡುಗಡೆಗೊಂಡ ನವರಾತ್ರಿ ಟ್ರೆಡಿಷನಲ್‌ ವೇರ್ಸ್

Navaratri/Dasara Trend 2025: ಫೆಸ್ಟೀವ್ ಸೀಸನ್‌ಗೂ ಮುನ್ನವೇ ನವರಾತ್ರಿ/ದಸರಾಗೆ ಟ್ರೆಡಿಷನಲ್ ವೆರ್ಸ್ ಹಾಗೂ ಎಥ್ನಿಕ್ ಫ್ಯಾಷನ್‌ವೇರ್ಸ್ ಬಿಡುಗಡೆಗೊಂಡಿವೆ. ಈ ಹಬ್ಬದ ಸಂಭ್ರಮಕ್ಕೆ ಸಾಥ್ ನೀಡಲು ಯಾವ್ಯಾವ ಬಗೆಯ ಗ್ರ್ಯಾಂಡ್ ಡಿಸೈನರ್‌ವೇರ್ಸ್ ಮಾರುಕಟ್ಟೆಗೆ ಕಾಲಿಟ್ಟಿವೆ? ಇಲ್ಲಿದೆ ವರದಿ.

ಕಸಸಂಗ್ರಹ ವಾಹನಗಳಿಗೆ ಮುಕ್ತಿ ನೀಡದ ನಗರಾಡಳಿತದ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ

ಕಸ ಸಂಗ್ರಹಕ್ಕೆಂದು 96 ಲಕ್ಷದಲ್ಲಿ 11 ನೂತನ ವಾಹನ ಖರೀದಿ

ನಗರದಲ್ಲಿ ಸಂಗ್ರಹವಾಗುವ ಹಸಿಕಸ ಒಣ ಕಸವನ್ನು ನಿತ್ಯವೂ ಹೊತ್ತೊಯ್ದು ವೈಜ್ಞಾನಿಕ ರೀತಿಯಲ್ಲಿ ವಿಲೇ ಮಾಡಿ ನಗರವಾಸಿಗಳ ಆರೋಗ್ಯ ಕಾಪಾಡಲೆಂಬ ಸದುದ್ದೇಶದಿಂದ ಸಾಮಾನ್ಯ ಸಭೆಯ ನಿರ್ಣಯ ದಂತೆ ೯೦ ಲಕ್ಷಕ್ಕೂ ಅಧಿಕ ಹಣದಲ್ಲಿ ಖರೀದಿಸಿರುವ ೧೧ ವಾಹನಗಳು ಕಳೆದೊಂದು ತಿಂಗಳಿಂದ ನಗರಸಭೆ ಆವರಣದಲ್ಲಿ ನಿಂತಲ್ಲೇ ನಿಂತು ತುಕ್ಕುಹಿಡಿಯುತ್ತಿವೆ.

Chikkaballapur News:  ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ: ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಸೂಚನೆ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ನೆಡೆಯುವ ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಲು ಈ ವೇಳೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಕಟ್ಟು ನಿಟ್ಟಿನ ಸೂಚನೆ ನೀಡಿದರು.

Chikkaballapur News: ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ : ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಎಲ್ಲಾ ಜಿಲ್ಲೆಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷೆ

ರಾಜ್ಯಾದ್ಯಂತ ಏಕ ಕಾಲದಲ್ಲಿ ಸೆಪ್ಟೆಂಬರ್ ೧೫ ರಿಂದ ಸಮೀಕ್ಷೆ ಪ್ರಾರಂಭಿಸುತ್ತಿದ್ದು, (ಸರ್ಕಾರಿ ರಜೆ ಯನ್ನು ಹೊರತು ಪಡಿಸಿ) ೪೫ ದಿನಗಳ ಕಾಲ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಲಿಂಗತ್ವ ಅಲ್ಪ ಸಂಖ್ಯಾತ ಸಮುದಾಯದವರೇ ಸಮೀಕ್ಷೆ ಕಾರ್ಯ ಮಾಡುತ್ತಿರುವುದು ಈ ಸಮೀಕ್ಷೆಯ ವಿಶೇಷತೆ ಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಮುದಾಯ ಆಧಾರಿತ ನಿಸರ್ಗ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಮುದಾಯದವರನ್ನೇ ಸಮೀಕ್ಷೆದಾರರನ್ನಾಗಿ ಆಯ್ಕೆ ಮಾಡಲಾಗಿದೆ.

Chikkaballapur News: ಅರ್ಥಪೂರ್ಣವಾಗಿ ವಿಶ್ವಕರ್ಮ ಜಯಂತಿಯ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಕರೆ

ಅರ್ಥಪೂರ್ಣವಾಗಿ ವಿಶ್ವಕರ್ಮ ಜಯಂತಿಯ ಆಚರಿಸಲು ಕರೆ

ಶ್ರೀ ವಿಶ್ವಕರ್ಮ ಜಯಂತಿ ಯನ್ನು ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಅನುಸರಿಸಿ ಕೊಂಡು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಬೇಕಿದೆ. ಕಾರ್ಯಕ್ರಮದ  ವೇದಿಕೆ ಸಿದ್ಧತೆ, ಆಹ್ವಾನ ಪತ್ರಿಕೆಗಳ ಮುದ್ರಣ, ವಿತರಣೆ, ಭಾಷಣ, ಎಸ್. ಎಸ್. ಎಲ್. ಸಿ  ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಮುದಾಯದ ಹಿರಿಯ ಮುಖಂಡರಿಗೆ ಸನ್ಮಾನ ಮಾಡಲು ತೀರ್ಮಾನಿಸ ಲಾಗಿದೆ

Kabaddi: ಕಬಡ್ಡಿ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಬಡ್ಡಿ ಜಿಲ್ಲಾಮಟ್ಟಕ್ಕೆ ಆಯ್ಕೆ

ನಗರದ ನೇತಾಜಿ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾ ಸ್ಪರ್ಧೆ ಯಲ್ಲಿ, ಕಬಡ್ಡಿ ವಿಭಾಗ ದಲ್ಲಿ, ನಗರದ ಶ್ರೀ ವಿವೇಕಾನಂದ ಶಾಲೆಯ, ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು, ಜಿಲ್ಲಾ ಹಂತಕ್ಕೆ ಆಯ್ಕೆಯಾಗಿದ್ದಾರೆ

Hassan Tragedy: ಹಾಸನ ದುರಂತಕ್ಕೆ ಸಿಎಂ ಸಂತಾಪ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

ಹಾಸನ ದುರಂತ; ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

CM Siddaramaiah: ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಶುಕ್ರವಾರ ರಾತ್ರಿ ನಡೆದ ಭೀಕರ ದುರಂತದಲ್ಲಿ 8 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್‌ ನುಗ್ಗಿ ದುರಂತ ಸಂಭವಿಸಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿ, ಪರಿಹಾರ ಘೋಷಿಸಿದ್ದಾರೆ.

Loading...