ಶಾಸಕರ ಜತೆ ಸಿಎಂ ಸಭೆ; ಅದರಲ್ಲಿ ತಪ್ಪೇನಿದೆ ಎಂದ ಡಿ.ಕೆ.ಶಿವಕುಮಾರ್
ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಡಿಸಿಎಂ ಡಿಕೆಶಿ ಅವರು ಪ್ರತಿಕ್ರಿಯಿಸಿ, ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ ಎಂದು ಟೀಕಿಸಿದ್ದಾರೆ.