ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಸಾರ್ವಜನಿಕರೇ ಗಮನಿಸಿ; ಮಳೆ ಸಂಬಂಧಿತ ಸಮಸ್ಯೆ ನಿವಾರಣೆಗೆ ಸಹಾಯವಾಣಿ ಆರಂಭಿಸಿದ ಮೆಸ್ಕಾಂ

ಗಾಳಿ-ಮಳೆಯಿಂದ ಬೆಸ್ಕಾಂಗೆ ಲಕ್ಷಾಂತರ ರೂಪಾಯಿ ನಷ್ಟ

BESCOM: ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಏಪ್ರಿಲ್‌ 29ರ ಸಂಜೆ ಸುರಿದ ಭಾರಿ ಗಾಳಿ-ಮಳೆಗೆ 461 ವಿದ್ಯುತ್‌ ಕಂಬಗಳು, 77 ಟ್ರಾನ್ಸ್‌ ಫಾರ್ಮರ್‌ಗಳು, ಸುಮಾರು 1.8 ಕಿ.ಮೀ. ಉದ್ದದ ವಿದ್ಯುತ್‌ ತಂತಿಗಳು ಹಾನಿಗೊಳಗಾಗಿದ್ದು, ಬೆಂಗಳೂರು ನಗರ ಸೇರಿದಂತೆ ಬೆಸ್ಕಾಂ ವ್ಯಾಪ್ತಿಯಲ್ಲಿ ಒಟ್ಟು ಹಾನಿ 87.32 ಲಕ್ಷ ರೂ. ಎಂದು ಅಂದಾಜಿಲಾಗಿದೆ.

ನಾಯಕತ್ವ ಬದಲಾವಣೆ ವಿಚಾರ; ಖರ್ಗೆ ಸಾಹೇಬರನ್ನೇ ಕೇಳಿ ಎಂದ ಡಿ.ಕೆ. ಶಿವಕುಮಾರ್‌

ನಾಯಕತ್ವ ಬದಲಾವಣೆ ವಿಚಾರ; ಖರ್ಗೆ ಸಾಹೇಬರನ್ನು ಕೇಳಿ ಎಂದ ಡಿಕೆಶಿ

DK Shivakumar: ಆದಷ್ಟು ಬೇಗ ಅಧಿಕಾರ ಹಂಚಿಕೆ ಗೊಂದಲ ಬಗೆಹರಿಸುವಿರಾ, ಮಲ್ಲಿಕಾರ್ಜುನ ಖರ್ಗೆ ಬದಲಾವಣೆ ಇಲ್ಲ ಎಂದಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಗೊಂದಲವೇ ಇಲ್ಲ. ನೀವುಗಳು ಏನಿದ್ದರೂ ಮಲ್ಲಿಕಾರ್ಜುನ ಖರ್ಗೆ ಸಾಹೇಬರನ್ನು ಕೇಳಿ. ನಾಯಕತ್ವ ಬದಲಾವಣೆ ವಿಚಾರದಲ್ಲಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇದು ಪಕ್ಷ ಹೈಕಮಾಂಡ್‌ಗೆ ಬಿಟ್ಟ ವಿಚಾರ, ಅವರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿ.ಕೆ. ಶಿವಕುಮಾರ್

ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಕೆಶಿ

DK Shivakumar: ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರುಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ ಕೂಡಲೇ ಈ ವಾರದೊಳಗೆ ಎತ್ತಿನಹೊಳೆ ಕೆಲಸ ಪ್ರಾರಂಭ ಮಾಡಿ ಎಂದು ಗುತ್ತಿಗೆದಾರರಿಗೆ ಸೂಚಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

7 ವರ್ಷಗಳಿಂದ ಸ್ವಾತಂತ್ರ್ಯ ಹೋರಾಟಗಾರನ ಪತ್ನಿಗೆ ಪಿಂಚಣಿ ಸ್ಥಗಿತ: ಕೇಂದ್ರ- ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ನೊಟೀಸ್‌

ಸ್ವಾತಂತ್ರ್ಯ ಹೋರಾಟಗಾರನ ಪತ್ನಿಯ ಪಿಂಚಣಿ ಸ್ಥಗಿತ: ಹೈಕೋರ್ಟ್ ಆದೇಶವೇನು?

Karnataka High Court: ಸ್ವಾತಂತ್ರ್ಯ ಹೋರಾಟಗಾರರ ಪತ್ನಿಯೊಬ್ಬರ ಪಿಂಚಣಿ ತಡೆಹಿಡಿದಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್ ಇದೀಗ ನೋಟಿಸ್ ನೀಡಿದೆ. ಮೃತ ಸ್ವಾತಂತ್ರ್ಯ ಹೋರಾಟಗಾರನ 92 ವರ್ಷದ ಪತ್ನಿ ಸಲ್ಲಿಸಿರುವ ಅರ್ಜಿಯ ಮೇರೆಗೆ ಇದೀಗ ಹೈಕೋರ್ಟ್‌ ಸರ್ಕಾರಕ್ಕೆ ತುರ್ತು ನೊಟೀಸ್‌ ಜಾರಿ ಮಾಡಿದೆ.

ತಮನ್ನಾ ಭಾಟಿಯಾ ಆಯ್ಕೆ ವಿವಾದದ ನಡುವೆಯೂ 2,016 ಕೋಟಿ ರುಪಾಯಿ ವಹಿವಾಟು ನಡೆಸಿದ ಮೈಸೂರು ಸ್ಯಾಂಡಲ್ ಸೋಪ್; ಹೊರ ರಾಜ್ಯಗಳಲ್ಲಿ ದಾಖಲೆ ಮಾರಾಟ

2,016 ಕೋಟಿ ರುಪಾಯಿ ವಹಿವಾಟು ನಡೆಸಿದ ಮೈಸೂರು ಸ್ಯಾಂಡಲ್ ಸೋಪ್

Mysore Sandal Soap: ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) 2025–26ರಲ್ಲಿ 2,016 ಕೋಟಿ ರುಪಾಯಿ ವಹಿವಾಟು ಮಾಡಿದೆ. ಇದರೊಂದಿಗೆ ನಿವ್ವಳ ಲಾಭ 507 ಕೋಟಿ ರುಪಾಯಿಗೆ ತಲುಪಿದೆ. ಭಾರಿ ವಿವಾದದ ನಡುವೆಯೂ ಇತಿಹಾಸದಲ್ಲೇ ಅತ್ಯಧಿಕ ಹಣಕಾಸು ದಾಖಲೆ ಸಾಧಿಸಿದೆ. ಈ ವರ್ಷ ಸಂಸ್ಥೆಯು ರಾಜ್ಯ ಖಜಾನೆಗೆ 150 ಕೋಟಿ ರುಪಾಯಿ ಲಾಭಾಂಶವನ್ನು ನೀಡಿದ್ದು, 21ನೇ ಸ್ಥಾನದಿಂದ 1ನೇ ಸ್ಥಾನಕ್ಕೆ ಜಿಗಿದಿದೆ.

Sustainable Data Park: ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ

ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆ

Sustainable Data Park: ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ ಡೇಟಾ ಕೇಂದ್ರಗಳು (ಸಸ್ಟೇನಬಲ್ ಡೇಟಾ ಸೆಂಟರ್ಸ್) ಅಗತ್ಯವಿದ್ದು ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಡೇಟಾ ಪಾರ್ಕ್ ಸ್ಥಾಪಿಸಲು ಗುರುವಾರ ನಡೆದ ಸಂಬಂಧಿತ ಸಚಿವರ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಅವಘಡ: ಅಧಿಕಾರಿಯ ತಲೆದಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್‌ ಆದೇಶ

ಬೌರಿಂಗ್ ಆಸ್ಪತ್ರೆ ದುರಂತ: ಅಧಿಕಾರಗಳ ತಲೆದಂಡಕ್ಕೆ ಸೂಚನೆ

CM Siddaramaiah: ಭಾರಿ ಮಳೆಗೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು ಜನರ ಸಾವಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಯ ತಲೆದಂಡವಾಗಿದೆ. ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅಮಾನತುಗೊಳಿಸಿ ನೊಟೀಸ್‌ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರಿನ ಪ್ರಸಿದ್ಧ ಪುಸ್ತಕ ಮಳಿಗೆ ದಿ ಬುಕ್‌ವರ್ಮ್‌ಗೆ ನುಗ್ಗಿದ ಮಳೆ ನೀರು: 5,000ಕ್ಕೂ ಹೆಚ್ಚು ಪುಸ್ತಕ ನಾಶ

ಬೆಂಗಳೂರಿನಲ್ಲಿ 5,000ಕ್ಕೂ ಹೆಚ್ಚು ಪುಸ್ತಕ ನಾಶ

Books Destroyed: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯು ನಗರದ ಪ್ರತಿಷ್ಠಿತ ಪುಸ್ತಕ ಮಳಿಗೆಗಳಲ್ಲಿ ಒಂದನ್ನು ಸಂಪೂರ್ಣವಾಗಿ ನಾಶ ಮಾಡಿದೆ. ಚರ್ಚ್ ಸ್ಟ್ರೀಟ್‌ನಲ್ಲಿರುವ 'ದಿ ಬುಕ್‌ವರ್ಮ್' ಪತ್ರಿಕೆಯು ನೀರಿನಲ್ಲಿ ತೇಲುತ್ತಿರುವ ಪುಸ್ತಕಗಳೊಂದಿಗೆ ಪ್ರವಾಹಕ್ಕೆ ಸಿಲುಕಿದ ಅಂಗಡಿಯ ಸರಣಿ ಚಿತ್ರಗಳನ್ನು ಹಂಚಿಕೊಂಡಿದೆ.

Koppal News: ಗಂಗಾವತಿ ಬಿಜೆಪಿ ಮುಖಂಡ  ವೆಂಕಟೇಶ ಹತ್ಯೆ ಪ್ರಕರಣ; 6 ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ; ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ಗಂಗಾವತಿ ನಗರ ಘಟಕ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಕೊಟ್ರು ಸಖತ್‌ ಟ್ವಿಸ್ಟ್‌; ಎಐಸಿಸಿ ಅಧ್ಯಕ್ಷ ಹೇಳಿದ್ದೇನು?

ಸದ್ಯಕ್ಕೆ ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಖರ್ಗೆ

Mallikarjun Kharge: ನಾಯಕತ್ವದ ಬದಲಾವಣೆಯ ಬಗ್ಗೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಸಿಎಂ ಬದಲಾವಣೆಯ ಸಮಯ ಬಂದಾಗ ನಾವೆಲ್ಲರೂ ಕುಳಿತು ಚರ್ಚಿಸುತ್ತೇವೆ. ಅಲ್ಲಿಯವರೆಗೆ ಇಂತಹ ಚರ್ಚೆಗಳಿಗೆ ಆಸ್ಪದವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಭಾರಿ ಮಳೆಗೆ ಬೆಂಗಳೂರು ತತ್ತರ; ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಯಲ್ಲಿದ್ದಾಗಲೇ ಕುಸಿದ ಕಾಂಪೌಂಡ್‌

ಭಾರಿ ಮಳೆಗೆ ಕುಸಿದ ಸಿದ್ದರಾಮಯ್ಯ ನಿವಾಸದ ಕಾಂಪೌಂಡ್‌

Bengaluru Rains: ಸಿಲಿಕಾನ್ ಸಿಟಿ ಬೆಂಗಳೂರು ಬುಧವಾರ (ಏಪ್ರಿಲ್‌ 29) ಸಂಜೆ ಸುರಿದ ಮಳೆಗೆ ತತ್ತರಿಸಿದೆ. ಸಿಎಂ ಅಧಿಕೃತ ನಿವಾಸ 'ಕಾವೇರಿ'ಯ ಕಾಂಪೌಂಡ್‌ ಮೇಲೆ ಭಾರಿ ಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು ಜಖಂಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾಗಲೇ ಈ ಅನಾಹುತ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ.

ಭಾರತದ ʼಐಸ್‌ಕ್ರೀಮ್ ರಾಜಧಾನಿ'ಯಾಗಿ ಹೊರಹೊಮ್ಮಿದ ಬೆಂಗಳೂರು! ತಣ್ಣಗಿನ ಆಹಾರಗಳಿಗೆ ನಗರದಲ್ಲಿ ಫುಲ್‌ ಡಿಮ್ಯಾಂಡ್‌

ಭಾರತದ 'ಐಸ್‌ಕ್ರೀಮ್ ರಾಜಧಾನಿ'ಯಾಗಿ ಹೊರಹೊಮ್ಮಿದ ಬೆಂಗಳೂರು!

ಬೇಸಿಗೆಯ ಬಿಸಿಲಿನ ಝಳ ಹೆಚ್ಚಾಗುತ್ತಿದ್ದಂತೆ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆ ತಂಪಾದ ಪಾನೀಯಗಳು ಹಾಗೂ ಐಸ್‌ಕ್ರೀಮ್‌ಗಳ ಮೊರೆ ಹೋಗಿದ್ದಾರೆ. ಇದಕ್ಕೆ ಸಾಕ್ಷಿ ಪ್ರಮುಖ ಆನ್‌ಲೈನ್ ಡೆಲಿವರಿ ಪ್ಲಾಟ್‌ಫಾರ್ಮ್ 'ಇನ್‌ಸ್ಟಾಮಾರ್ಟ್' ಬಿಡುಗಡೆ ಮಾಡಿರುವ 'ಸಮ್ಮರ್ ಟ್ರೆಂಡ್ಸ್ 2026'ರ ವರದಿ. ಇದರ ಪ್ರಕಾರ, ಬೆಂಗಳೂರಿನ ಜನ ದೇಶದಲ್ಲೇ ಅತಿ ಹೆಚ್ಚು ಐಸ್‌ಕ್ರೀಮ್ ಸೇವಿಸುತ್ತಿದ್ದಾರೆ.

ಅಪೋಲೋ ಹಾಸ್ಪಿಟಲ್ಸ್ ನಿಂದ ಬೆಂಗಳೂರಿನಲ್ಲಿ `ಸೀನಿಯರ್ಸ್ ಫರ್ಸ್ಟ್’ ವಿಸ್ತರಣೆ ಮೂಲಕ ವೃದ್ಧರ ಸಮಗ್ರ ಆರೈಕೆಗೆ ಶಕ್ತಿ

`ಸೀನಿಯರ್ಸ್ ಫರ್ಸ್ಟ್’ ವಿಸ್ತರಣೆ ಮೂಲಕ ವೃದ್ಧರ ಸಮಗ್ರ ಆರೈಕೆಗೆ ಶಕ್ತಿ

ಭಾರತದ ವೃದ್ಧರ ಜನಸಂಖ್ಯೆಯು ತೀವ್ರ ಗತಿಯಲ್ಲಿ ಬೆಳೆಯುತ್ತಿರುವ ಸಮಯದಲ್ಲಿ ಆರೋಗ್ಯ ಸೇವಾ ವ್ಯವಸ್ಥೆಗಳು ಹಿರಿಯರ ಸಂಕೀರ್ಣ ಮತ್ತು ವಿಕಾಸಗೊಳ್ಳುತ್ತಿರುವ ಅಗತ್ಯಗಳ ಸವಾಲು ಗಳನ್ನು ಎದುರಿಸುವುದನ್ನು ಮುಂದುವರಿಸಿವೆ. ಬಹಳಷ್ಟು ಹಿರಿಯರು ಹಲವು ಗಂಭೀರ ಸಮಸ್ಯೆಗಳೊದಿಗೆ ಜೀವಿಸುತ್ತಿದ್ದು ಅದಕ್ಕೆ ಪದೇ ಪದೇ ಆಸ್ಪತ್ರೆ ಭೇಟಿ ಮತ್ತು ಆಸ್ಪತ್ರೆ, ಮನೆ ಮತ್ತು ಫಾಲೋ-ಅಪ್ ಚಿಕಿತ್ಸೆಯ ನಡುವೆ ಸಹಕಾರದ ಕೊರತೆಯ ವಿಘಟಿತ ವ್ಯವಸ್ಥೆಗಳ ಮೇಲೆ ಆಧಾರಪಟ್ಟಿವೆ

ಮೇ 1 ರಿಂದ ಕರ್ನಾಟಕದಲ್ಲಿ ಮೋಟಾರು ವಾಹನ ತಿದ್ದುಪಡಿ ಬಿಲ್‌ ಜಾರಿ

ಮೇ 1 ರಿಂದ ಕರ್ನಾಟಕದಲ್ಲಿ ಮೋಟಾರು ವಾಹನ ತಿದ್ದುಪಡಿ ಬಿಲ್‌ ಜಾರಿ

ಕರ್ನಾಟಕ ಸರ್ಕಾರವು ಮೋಟಾರು ವಾಹನಗಳ (Motor Vehicle) ತೆರಿಗೆ ದರವನ್ನು ಕಡಿತಗೊಳಿಸಿದ್ದು, ಪರಿಷ್ಕೃತ ತೆರಿಗೆ ವಿಧೇಯಕವೂ ನಾಳೆ ಮೇ 1ರಿಂದ ಜಾರಿಗೆ ಬರಲಿದೆ. ಸಾರಿಗೆ ಇಲಾಖೆಗೆ ಈಗಾಗಲೇ ಸರ್ಕಾರ ಸೂಚನೆ ನೀಡಿದ್ದು, ಮೇ 1ರಿಂದ ಹೊಸ ದರಗಳು ಜಾರಿಯಾಗಲಿವೆ.

ವಾಹನ ಸವಾರರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚರಿಸುವ ಮುನ್ನ ಸಂಚಾರ ಪೊಲೀಸರ ಮಾಹಿತಿ ಗಮನಿಸಿ

ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚರಿಸುವ ಮುನ್ನ ಪೊಲೀಸರ ಮಾಹಿತಿ ಗಮನಿಸಿ

ಬಿಸಿಲಿನಿಂದ ಬೆಂದು ಹೋಗಿದ್ದ ಬೆಂಗಳೂರು ಜನತೆಗೆ ಕಳೆದ ರಾತ್ರಿ ವರುಣ ತಂಪೆರೆದಿದ್ದಾನೆ. ಆದರೆ ಭಾರೀ ಮಳೆಗೆ ಹಲವು ಅನಾಹುತಗಳು ಸಂಭವಿಸಿದೆ. ಭಾರೀ ಗಾಳಿ ಮತ್ತು ಗುಡುಗಿನ ಸಹಿತ ಸುರಿದ ಆಲಿಕಲ್ಲು ಮಳೆಗೆ ಪ್ರತ್ಯೇಕ ಘಟನೆಗಳಲ್ಲಿ ಒಟ್ಟು 10 ಜನರು ಬಲಿಯಾಗಿದ್ದಾರೆ.

ನಿನ್ನೆ ಸುರಿದ ಮಳೆಗೆ ಬೆಂಗಳೂರಿನಲ್ಲಿ 10 ಬಲಿ; ಇಂದೂ ಅಬ್ಬರಿಸಲಿದ್ದಾನೆ ವರುಣ

ನಿನ್ನೆ ಸುರಿದ ಮಳೆಗೆ ಬೆಂಗಳೂರಿನಲ್ಲಿ 10 ಬಲಿ

ಕರೆಂಟ್ ಶಾಕ್‌ನಿಂದ ಪ್ರಾಣ ಬಿಟ್ಟಿದ್ದಾನೆ. ಕೆಜಿ ಹಳ್ಳಿಯ ವೆಂಕಟೇಶ್ ಪುರಂ ನಿವಾಸಿ ಸೈಯದ್ ತನ್ನ ತಾಯಿ ಜೊತೆ ಖುಷಿಯಿಂದ ಬಟ್ಟೆ ಖರೀದಿಗೆ ಬಂದಿದ್ದ. ತಾಯಿ ಜೊತೆ ಬಂದಾತ ಪಾರ್ಕ್ ಮಾಡಲು ಹೋದಾಗ ಬೌರಿಂಗ್ ಆಸ್ಪತ್ರೆ ಶವಗಾರದ ಬಳಿ ಕಾಂಪೌಂಡ್ ಕುಸಿದಿದೆ.

ಬೌರಿಂಗ್ ಆಸ್ಪತ್ರೆ ದುರಂತ; ಸಂತಾಪ ಸೂಚಿಸಿದ ಪ್ರಧಾನಿ ಮೋದಿ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

ಬೌರಿಂಗ್ ಆಸ್ಪತ್ರೆ ದುರಂತ; ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

Bowring Hospital wall collapse: ಶಿವಾಜಿನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ಕಾಂಪೌಂಡ್‌ ಗೋಡೆ ಕುಸಿದು ನಡೆದ ದುರಂತದಲ್ಲಿ ಸಾವಿನ ಸಂಖ್ಯೆ 8 ಮಂದಿ ಮೃತಪಟ್ಟಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Karnataka Weather: ಇಂದು ರಾಜ್ಯದ 29 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

ಇಂದು ರಾಜ್ಯಕ್ಕೆ ಯೆಲ್ಲೋ ಅಲರ್ಟ್‌; ಅಬ್ಬರಿಸಲಿದೆ ಗುಡುಗು ಸಹಿತ ಮಳೆ!

Karnataka Weather Report: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ / ರಾತ್ರಿಯ ವೇಳೆಗೆ ಕೆಲವು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಹಗುರದಿಂದ ಗುಡುಗು ಸಹಿತ ಮಳೆ ಅಥವಾ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ.

Dr. M.C. Sudhakar: ಬಿಸಿಗಾಳಿ ತಡೆಗೆ ಮುನ್ನೆಚ್ಚರಿಕೆ ಅಗತ್ಯ : ಕುಡಿಯುವ ನೀರಿನ ಸಮಸ್ಯೆಗೆ ಸಮರೋಪಾದಿ ಕ್ರಮ ವಹಿಸಿ: ಸಚಿವ ಡಾ.ಎಂ.ಸಿ. ಸುಧಾಕರ್ ಮನವಿ

ಕುಡಿಯುವ ನೀರಿನ ಸಮಸ್ಯೆಗೆ ಸಮರೋಪಾದಿ ಕ್ರಮ ವಹಿಸಿ

ರಾಜ್ಯದಲ್ಲಿ ಈ ವರ್ಷ ವಾಡಿಕೆ ಮಳೆಗಿಂತ ಕಡಿಮೆ ಪ್ರಮಾಣದ ಮಳೆ ಆಗಲಿದೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವಾಡಿಕೆ ಮಳೆ ಆಗಬಹುದು ಎಂದು ಅಭಿಪ್ರಾಯಿಸಿದೆ. ಮಳೆಯ ವೈಪರೀತ್ಯಗಳು ಏನೇ ಆದರೂ ನೀರು ಪೂರೈಕೆ ಹಾಗೂ ಇನ್ನಿತರ ಮುನ್ನೆಚ್ಚರಿಕೆ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ ಕೊರೆದಿರುವ ೩೧೩ ಕೊಳವೆ ಬಾವಿಗಳಿಗೆ ಒಂದೆರಡು ದಿನಗಳಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಿ ಜನರಿಗೆ ನೀರು ಪೂರೈಸಲು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ.

ಕೈಗಾರಿಕೆಗೆ ರೈತರ ಜಮೀನು ಸ್ವಾಧೀನ ಜಿಲ್ಲಾಡಳಿತ ಭವನದ ಎದುರು ರೈತರು ಪೊಲೀಸರ ನಡುವೆ ಜಟಾಪಟಿ

ರೈತನ ಕೊರಳಪಟ್ಟಿ ಹಿಡಿದು ಎಳೆದಾಡಿದ ಆರೋಪ

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಭೂಮಿ ಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ಧಿಷ್ಟಾವಧಿಯ ಹೋರಾಟ 45ನೇ ದಿನಕ್ಕೆ ಕಾಲಿಟ್ಟಿದ್ದು ಬುಧವಾರ ತೀವ್ರ ಸ್ವರೂಪ ಪಡೆದುಕೊಂಡಿತು. ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಭವನಕ್ಕೆ ಮುತ್ತಿಗೆ ಹಾಕಲು ಮುಂದ ಸಿದ್ದತೆ ನಡೆಸುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ ಗಳನ್ನು ಹಾಕಿ ಹೋರಾಟ ವಿಫಲಗೊಳಿಸಲು ಮುಂದಾದರು.

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 599 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಸನ್ಮಾನ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 599 ಅಂಕ: ವಿದ್ಯಾರ್ಥಿನಿಗೆ ಸನ್ಮಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ತಿರುಮಣಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜಿ.ಪಲ್ಲವಿ 599 ಅಂಕಗಳನ್ನು ಗಳಿಸುವ ಮೂಲಕ ಶಾಲೆಗೆ ಪ್ರಥಮ ಹಾಗೂ ತಾಲೂಕಿಗೆ ತೃತೀಯ ಸ್ಥಾನ ಪಡೆದು ಅತ್ಯುನ್ನತ ಸಾಧನೆ ಮಾಡಿದ್ದು, ವಿದ್ಯಾರ್ಥಿನಿಯನ್ನು ಶಾಲೆಯ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.‌

ಅಮೆಜಾನ್ ಫ್ಯೂಚರ್ ಎಂಜಿನಿಯರ್ ಕಾರ್ಯಕ್ರಮವು ಕಂಪ್ಯೂಟರ್ ಸೈನ್ಸ್ ನಲ್ಲಿ ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ

ವಿದ್ಯಾರ್ಥಿನಿಯರಿಗೆ 500 ಹೊಸ ಶಿಷ್ಯವೇತನಗಳಿಂದ 2,200ಕ್ಕೆ ವಿಸ್ತರಣೆ

“ಪ್ರತಿ ವಿದ್ಯಾರ್ಥಿಗೂ ಅವರ ಸಾಮರ್ಥ್ಯ ಕಂಡುಕೊಳ್ಳುವ ಅವಕಾಶವಿರಬೇಕು. ಅಮೆಜಾನ್ ಫ್ಯೂಚರ್ ಎಂಜಿನಿಯರ್ ಸ್ಕಾಲರ್ ಶಿಪ್ ಗಳ ಮೂಲಕ ನಾವು ಭಾರತದಾದ್ಯಂತ ಸಮುದಾ ಯಗಳಲ್ಲಿ ಪ್ರತಿಭಾವಂತ, ಪರಿಶ್ರಮ ಪಡುವ ವಿದ್ಯಾರ್ಥಿಗಳ ಮೂಲಕ ಉದ್ಯೋಗದ ಭವಿಷ್ಯ ವನ್ನು ರೂಪಿಸುವ ನಾಯಕರ ಮೇಲೆ ಹೂಡಿಕೆ ಮಾಡುತ್ತಿದ್ದೇವೆ” ಎಂದು ಅಮೆಜಾನ್ ಎಕ್ಸ್ ಪೀರಿಯೆನ್ಸಸ್ ಅಂಡ್ ಅಪ್ ಸ್ಕಿಲ್ಲಿಂಗ್ ಉಪಾಧ್ಯಕ್ಷೆ ಕ್ಯಾಂಡಿ ಕ್ಯಾಸಲ್ ಬೆರ್ರಿ ಹೇಳಿದರು

ಮಾನಸಿಕ ರೋಗಿಗಳ ಸಮಗ್ರ ಆರೈಕೆ ಕಾರ್ಯಕ್ರಮ ಆರಂಭಿಸಿದ ಮಾರ್ಗ ಮೈಂಡ್ ಕೇರ್

ಸಮಗ್ರ ಆರೈಕೆ ಕಾರ್ಯಕ್ರಮ ಆರಂಭಿಸಿದ ಮಾರ್ಗ ಮೈಂಡ್ ಕೇರ್

ಮಾನಸಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಮಾರ್ಗ ಮೈಂಡ್‌ ಕೇರ್‌ (Maarga Mind Care), ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಮಗ್ರ ಮಾನಸಿಕ ಕಾಳಜಿ ಕಾರ್ಯಕ್ರಮ (Integrative Day Care Program) ಆರಂಭಿಸಿದೆ. ಇದೊಂದು ಆಸ್ಪತ್ರೆಯಲ್ಲಿ ದಾಖಲೆಯಾಗದೇ ಹೊರರೋಗಿ ಯಾಗಿ ಚಿಕಿತ್ಸೆ ಪಡೆಯುವ / ನೀಡುವ ಮಾದರಿಯಾಗಿದೆ.

Bengaluru Rains: ಬೆಂಗಳೂರಿನಲ್ಲಿ ಮಳೆ ಅವಾಂತರ; ಧರೆಗುರುಳಿದ 50ಕ್ಕೂ ಹೆಚ್ಚು ಮರ, ರಸ್ತೆಗಳು ಜಲಾವೃತವಾಗಿ ಹಲವೆಡೆ ಟ್ರಾಫಿಕ್‌ ಜಾಮ್‌!

ಬೆಂಗಳೂರಿನಲ್ಲಿ ಮಳೆ ಅವಾಂತರ; ಧರೆಗುರುಳಿದ 50ಕ್ಕೂ ಹೆಚ್ಚು ಮರಗಳು

ಬೆಂಗಳೂರು ಸೇರಿ ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಏ.30ರಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ನೀಡಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆ ಅಥವಾ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 36°C ಮತ್ತು 24°C ಇರುವ ಸಾಧ್ಯತೆಯಿದೆ.

Loading...