ರನ್ಯಾ ರಾವ್ ಹಣ ಕಟ್ಟದ ಹಿನ್ನೆಲೆ ಜಮೀನು ಹಂಚಿಕೆಯಾಗಿಲ್ಲ: ಎಂ.ಬಿ.ಪಾಟೀಲ್
MB Patil: ನಟಿ ರನ್ಯಾ ರಾವ್ ಅವರ ಟಿಎಂಟಿ ಸರಳು ತಯಾರಿಸುವ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು. ಇದಕ್ಕೆ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಜಮೀನು ಮಂಜೂರು ಮಾಡಲು 2023ರ ಜನವರಿ 2ರಂದು ನಡೆದಿದ್ದ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ತೀರ್ಮಾನಿಸಿತ್ತು. ಆದರೆ ರನ್ಯಾ ಅವರು ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಕಾರಣ ಅವರಿಗೆ ಜಮೀನಿನ ಹಂಚಿಕೆ ಮಾಡಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.