ಕೃಷಿ ಸಾಲ ಮನ್ನಾ, ಎಕರೆಗೆ 50 ಸಾವಿರ ಪರಿಹಾರಕ್ಕೆ ಆಗ್ರಹ
ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಬಿ.ಜಿ ಪಾಟೀಲ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು.