ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರ್ನಾಟಕ

29,000 ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ರದ್ದು; ರಾಜ್ಯ ಸರ್ಕಾರದ ತೀರ್ಮಾನ ಸ್ವಾಗತಿಸಿದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ಕಾರ್ಯಕ್ರಮ ರದ್ದು ಮಾಡಿದ ರಾಜ್ಯ ಸರ್ಕಾರ

ನಲಿ-ಕಲಿ ಪದ್ಧತಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ಮೇಲೆ ಒತ್ತಡವನ್ನು ಹೇರುತ್ತಾ ಬರುತ್ತಿದೆ. ಇದೀಗ ನಲಿ-ಕಲಿ ಕಾರ್ಯಕ್ರಮ ರದ್ದು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಮೇಲಧಿಕಾರಿಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧನ್ಯವಾದ ತಿಳಿಸಿದೆ.

Vijayapura Jet Crash: ವಿಜಯಪುರದಲ್ಲಿ ಖಾಸಗಿ ಜೆಟ್‌ ಪತನ; ಇಬ್ಬರಿಗೆ ಗಂಭೀರ ಗಾಯ

ವಿಜಯಪುರದಲ್ಲಿ ಖಾಸಗಿ ಜೆಟ್‌ ಪತನ; ಇಬ್ಬರಿಗೆ ಗಂಭೀರ ಗಾಯ

ರೆಡ್‌ ಬರ್ಡ್ ಏವಿಯೇಷನ್ ಸಂಸ್ಥೆಯ ಸೆಸ್ನಾ 172 ಟ್ಯಾಂಗೋ ಚಾರ್ಲಿ ಹೆಸರಿನ ಪ್ರೈವೇಟ್ ಜೆಟ್ ಪತನಗೊಂಡಿದೆ. ಕಲಬುರ್ಗಿಯಿಂದ ಬೆಳಗಾವಿಗೆ ತೆರಳುತ್ತಿದ್ದ ಜೆಟ್‌ ವಿಮಾನ, ಇಂಧನ ಖಾಲಿಯಾದ ಕಾರಣ ಜಮೀನಿನಲ್ಲಿ ಪತನಗೊಂಡಿದೆ ಎಂದು ತಿಳಿದುಬಂದಿದೆ. ಕೂಡಲೇ ವಿಮಾನದಲ್ಲಿದ್ದ ಪೈಲಟ್ ಸೇರಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Bengaluru Metro Fare Hike: ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್‌ ಶಾಕ್; ನಾಳೆಯಿಂದಲೇ ಮೆಟ್ರೋ ದರ ಏರಿಕೆ ಫಿಕ್ಸ್‌!

ನಾಳೆಯಿಂದಲೇ ಮೆಟ್ರೋ ದರ ಏರಿಕೆ ಫಿಕ್ಸ್‌; ಬಿಎಂಆರ್‌ಸಿಎಲ್‌ ಹೇಳಿದ್ದೇನು?

ಮೆಟ್ರೋ ಪ್ರಸ್ತಾವಿತ ದರ ಏರಿಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕೇಂದ್ರ ಸಚಿವ ಮನೋಹರ್ ಲಾಲ್ ಖಟ್ಟರ್‌ ಸೂಚಿಸಿದ್ದಾರೆ. ಹೀಗಾಗಿ ಮೆಟ್ರೋ ದರ ಏರಿಕೆಗೆ ತಡೆ ಬೀಳಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ ತಿಳಿಸಿದ್ದರು. ಆದರೆ, ಈ ನಡುವೆ ಫೆ.9ರಿಂದಲೇ ದರ ಏರಿಕೆ ಜಾರಿಗೆ ಬಿಎಂಆರ್‌ಸಿಎಲ್‌ ಸಿದ್ಧತೆ ನಡೆಸಿದೆ.

ಕೋಮು ದ್ವೇಷದ ಹೇಳಿಕೆ; ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಪುತ್ತೂರಿನಲ್ಲಿ ವಿವೇಕಾನಂದ ಜಯಂತಿಯಲ್ಲಿ ಭಾಗವಹಿಸಿದ್ದ ಪ್ರಭಾಕರ್‌ ಭಟ್‌ ಅವರು ಮುಸ್ಲಿಂ, ಕ್ರಿಶ್ಚಿಯನ್‌ ಸಮುದಾಯಗಳ ವಿರುದ್ಧ ದ್ವೇಷ ಹರಡುವಂತಹ ಭಾಷಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಪುತ್ತೂರು ನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಹುಷಾರಿಲ್ಲದ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್‌; ಶಿವಮೊಗ್ಗದಲ್ಲೊಂದು ಅಪರೂಪದ ಘಟನೆ

ಹುಷಾರಿಲ್ಲ ಚಿರತೆಗೆ ಎಂಆರ್‌ಐ ಸ್ಕ್ಯಾನಿಂಗ್‌

Shimoga News: ಶಿವಮೊಗ್ಗದ ನಂಜಪ್ಪ ಆಸ್ಪತ್ರೆಯಲ್ಲಿ ವೈದ್ಯರ ತಂಡ ಚಿರತೆಯೊಂದರ ಎಂಆರ್‌ಐ ಸ್ಕ್ಯಾನಿಂಗ್‌ ನಡೆಸಿದ್ದು ಕುತೂಹಲಕ್ಕ ಕಾರಣವಾಗಿದೆ. ಲಯನ್‌ ಸಫಾರಿಯಲ್ಲಿರುವ ಭದ್ರ ಎನ್ನುವ 14 ವರ್ಷದ ಚಿರತೆ ಕೆಲವು ದಿನಗಳಿಂದ ಕುಂಟುತ್ತಾ ನಡೆಯುತ್ತಿದ್ದರಿಂದ ಸಮಸ್ಯೆ ತಿಳಿದುಕೊಳ್ಳಲು ಸ್ಕ್ಯಾನಿಂಗ್‌ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಕುಡಿದ ಮತ್ತಿನಲ್ಲಿ ಯುವತಿಯರಿಂದ ಕಿರಿಕ್‌; ಕ್ಯಾಬ್‌ ಚಾಲಕನ ಮೇಲೆ ಹಲ್ಲೆ, ಪೊಲೀಸರೊಂದಿಗೆ ಅಸಭ್ಯ ವರ್ತನೆ

ಕುಡಿದ ಮತ್ತಿನಲ್ಲಿ ಕ್ಯಾಬ್‌ ಚಾಲಕನ ಮೇಲೆ ಯುವತಿಯರಿಂದ ಹಲ್ಲೆ

ಕಂಠಪೂರ್ತಿ ಕುಡಿದ ಯುವತಿಯರಿಬ್ಬರು ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟ ರೋಡ್‌ನ ಹುಳಿಮಾವು-ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ. ಕಿರಿಕ್‌ ಮಾಡಿದ ಯುವತಿಯರನ್ನು ಉತ್ತರ ಭಾರತ ಮೂಲದ ಲೀಸಾ ಮತ್ತು ಮ್ಯಾಥ್ಯೂ ಎಂದು ಗುರುತಿಸಲಾಗಿದೆ.

Bidar News: ಗಂಡನ ಮನೆಯವರ ಕಿರುಕುಳ ತಾಳಲಾರದೆ 22 ವರ್ಷದ ಗೃಹಿಣಿ ನೇಣಿಗೆ ಶರಣು: 10 ತಿಂಗಳ ಮಗು ತಬ್ಬಲಿ

ಗಂಡನ ಮನೆಯವರ ಕಿರುಕುಳ; 22 ವರ್ಷದ ಗೃಹಿಣಿ ಆತ್ಮಹತ್ಯೆ

Self Harming: ಗಂಡನ ಮನೆಯವರ ಕಿರುಕುಳ ತಾಳಲಾರದೆ 22 ವರ್ಷದ ಗೃಹಿಣಿ, 10 ತಿಂಗಳ ಮಗುವಿನ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೀದರ್‌ ಜಿಲ್ಲೆಯ ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಅಂಜನಾಬಾಯಿ ಶೇಖರ್ ಪಾಟೀಲ್ ಎಂದು ಗುರುತಿಸಲಾಗಿದೆ.

Footpath encroachment: ಫುಟ್‌ʼಪಾತ್‌ ಅತಿಕ್ರಮಣ, ಹದಗೆಟ್ಟ ಸಂಚಾರ ವ್ಯವಸ್ಥೆ

ಫುಟ್‌ʼಪಾತ್‌ ಅತಿಕ್ರಮಣ, ಹದಗೆಟ್ಟ ಸಂಚಾರ ವ್ಯವಸ್ಥೆ

ವ್ಯಾಪಾರಕ್ಕೆ ಬರುವವರು ಮತ್ತು ಅಂಗಡಿಕಾರರು ರಸ್ತೆಯಲ್ಲಿಯೇ ಅಡ್ಡಾದಿಡ್ಡಿಯಾಗಿ ತಮ್ಮ ವಾಹನ ಗಳನ್ನು ನಿಲ್ಲಿಸುತ್ತಾರೆ ಇದರಿಂದ ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡಲು ಪರದಾಡುವಂತಾಗಿದೆ. ಇದರಿಂದ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿರುತ್ತವೆ, ನಗರದಲ್ಲಿ ಇಷ್ಟೊಂದು ಅವ್ಯವಸ್ಥೆ ಇದ್ದರೂ ಸಂಬಂಧಿಸಿದ ಪುರಸಭೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಕುಂಬ ನಿದ್ರೆಗೆ ಜಾರಿದಂತೆ ವರ್ತಿಸುತ್ತಿದ್ದಾರೆ.

QR code for water bill payment: ಪುರಸಭೆಯ ನೀರಿನ ಕರ ಪಾವತಿಗೆ ಕ್ಯೂಆರ್‌ ಕೋಡ್

ಪುರಸಭೆಯ ನೀರಿನ ಕರ ಪಾವತಿಗೆ ಕ್ಯೂಆರ್‌ ಕೋಡ್

ಫೆ.1ರಿಂದ ಗ್ರಾಹಕರಿಗೆ ಕ್ಯೂಆರ್‌ಕೋಡ್ ಸೌಲಭ್ಯವನ್ನು ಒದಗಿಸಿದ್ದು, ಈಗಾಗಲೇ ಸಾರ್ವಜನಿಕರು ಇದರ ಸೌಲಭ್ಯವನ್ನು ಪಡೆಯುತ್ತಿದ್ದಾರೆ, ಅಷ್ಟೇ ಅಲ್ಲದೇ ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಸಿಬ್ಬಂದಿಗಳು ಸ್ವತಃ ತಾವೇ ಮನೆ ಮನೆಗೆ ತೆರಳಿ ಕ್ಯೂಆರ್‌ಕೋಡ್ ಸೌಲಭ್ಯ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ರಾಜ್ಯ ಸರ್ಕಾರದ 6ನೇ ಗ್ಯಾರಂಟಿ ಘೋಷಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ತುಂಗಾಭದ್ರ ಅಣೆಕಟ್ಟಿನ ಎಲ್ಲ ಗೇಟ್ ಬದಲಿಸುತ್ತೇವೆ ಎಂದ ಡಿಕೆಶಿ

DK Shivakumar: “ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಜತೆಗೆ ಆರನೇ ಗ್ಯಾರಂಟಿಯಾಗಿ ಭೂಮಿ ಗ್ಯಾರಂಟಿ ನೀಡುತ್ತಿದೆ. ಸರ್ಕಾರ ಸಾವಿರ ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆಬ್ರವರಿ 14ರಂದು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆʼʼ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದರು.

Gubbi News ಮಾದಾರ ಮಹಾಸಭಾದ ಕಡಬ ಹೋಬಳಿ ಘಟಕದ ಅಧ್ಯಕ್ಷರಾಗಿ ಲಕ್ಷ್ಮಣ್ ಉಪಾಧ್ಯಕ್ಷರಾಗಿ ಸುರೇಶ್ ಆಯ್ಕೆ

ಅಧ್ಯಕ್ಷರಾಗಿ ಲಕ್ಷ್ಮಣ್ ಉಪಾಧ್ಯಕ್ಷರಾಗಿ ಸುರೇಶ್ ಆಯ್ಕೆ

ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಶಕ್ತಿ ಬೆಳೆಸುವ ಜೊತೆಗೆ ಒಗ್ಗಟ್ಟು ಪ್ರದರ್ಶನ ಹಾಗೂ ಶೈಕ್ಷಣಿಕ ಪ್ರಗತಿಗೆ ಒತ್ತು ನೀಡಲಾಗುವುದು. ತಾಲ್ಲೂಕು ಕೇಂದ್ರದಲ್ಲಿ ಹಾಸ್ಟೆಲ್ ನಿರ್ಮಾಣ ಹಾಗೂ ಬಡ ಮಕ್ಕಳ ಭವಿಷ್ಯ ರೂಪಿಸುವ ಕೆಲಸ ಜೊತೆಗೆ ವಿದ್ಯಾವಂತ ಯುವಕರಿಗೆ ಸ್ವಯಂ ಉದ್ಯೋಗ ಸೃಷ್ಟಿ, ಆರೋಗ್ಯ ವಿಚಾರದಲ್ಲಿ ಸಹಕಾರ ಹೀಗೆ ಅನೇಕ ವಿಚಾರ ಮಹಾಸಭಾ ನಡೆಸಲಿದೆ

Deputy Lokayukta: ದೂರುದಾರರಿಗೆ ಕಾನೂನಾತ್ಮಕ ಪರಿಹಾರ ದೊರಕಿಸುವುದು ಕರ್ತವ್ಯವಾಗಲಿ: ಉಪಲೋಕಾಯುಕ್ತ ಫಣೀಂದ್ರ

ದೂರುದಾರರಿಗೆ ಕಾನೂನಾತ್ಮಕ ಪರಿಹಾರ ದೊರಕಿಸುವುದು ಕರ್ತವ್ಯವಾಗಲಿ

ಇಲಾಖೆಗೆ ಸಾರ್ವಜನಿಕರಿಂದ ದೂರು ಅಥವಾ  ಅರ್ಜಿ ಬಂದಾಗ ಅದನ್ನು ಮೊದಲು ತಮಗೆ ಬರುತ್ತದೆ ಯೇ ಎಂಬುದನ್ನು ಸಂಬಂಧಪಟ್ಟ ಅಧಿಕಾರಿ ಅಥವಾ ಸಿಬ್ಬಂದಿ ಪರಿಶೀಲನೆ ನಡೆಸಿ ಖಚಿತ ಪಡಿಸಿಕೊಳ್ಳ ಬೇಕು. ಒಂದು ವೇಳೆ ಆ ದೂರು ಅಥವಾ ಅರ್ಜಿ ತಮ್ಮ ವ್ಯಾಪ್ತಿಗೆ ಬರದಿದ್ದಲ್ಲಿ ಸಂಬಂಧಿಸಿದ ದೂರು ದಾರ ಅಥವಾ ಅರ್ಜಿದಾರರನ್ನು ಕರೆಯಿಸಿ ಸೂಕ್ತ ಮಾರ್ಗದರ್ಶನ ನೀಡಬೇಕು. ದೂರು ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡಿ ಮುಕ್ತಿ ದೊರಕಿಸಿಕೊಡಬೇಕೆ ಹೊರತು ಅನವಶ್ಯಕವಾಗಿ ಧೂಳು ತಿನ್ನುವಂತೆ ಮಾಡಿ ಕಾಲಹರಣ ಮಾಡಬಾರದು

Five Guarantee Scheme: ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪಂಚ ದಿನಗಳ ಕಾಲ ಜಿಲ್ಲೆಯಲ್ಲಿ ಕಲಾಜಾಥ ಪ್ರಚಾರ ವಾಹನ ಸಂಚಾರ

ಜಿಲ್ಲೆಯಲ್ಲಿ ಕಲಾಜಾಥ ಪ್ರಚಾರ ವಾಹನ ಸಂಚಾರ

ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಜಯರಾಮ್ ರವರು ಮಾತ ನಾಡಿ, ಇಂದಿರಾ ಕಿಟ್ ಸೌಲಭ್ಯವನ್ನು ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಬರುವ ಯುಗಾದಿ ಹಬ್ಬದ ವೇಳೆಗೆ ಘೋಷಿಸಲಿದ್ದಾರೆ. ಶೀಘ್ರದಲ್ಲೇ ಜನರಿಗೆ ಈ ಸೌಲಭ್ಯ ಸಿಗುವ ಭರವಸೆ ಇದೆ. ಒಬ್ಬ ವ್ಯಕ್ತಿಗೆ ಪ್ರಸ್ತುತ ನೀಡುತ್ತಿರುವ 10 ಕೆ.ಜಿ ಅಕ್ಕಿ ಬದಲಾಗಿ 5 ಕೆ.ಜಿ. ದವಸ ಧಾನ್ಯಗಳನ್ನು ಹಾಗೂ 5 ಕೆ.ಜಿ. ಅಕ್ಕಿಸೇರಿ ಒಟ್ಟು 10 ಕೆ.ಜಿ.ಯ ಇಂದಿರಾ ಕಿಟ್ ಜನರ ಕೈಸೇರಲಿದೆ

Chikkaballapur News: ರೇಷ್ಮೆ ಬೆಳೆಗಾರರು ಹಾಗೂ ರೈತರ ಸೇವಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ರೆಡ್ಡಿ ಆಯ್ಕೆ

ಸಂಘದ ನೂತನ ಅಧ್ಯಕ್ಷರಾಗಿ ಎಂ.ರೆಡ್ಡಿ ಆಯ್ಕೆ

ಸಂಘದ ಮೂಲಕ ರೈತರಿಗೆ ಹಾಗೂ ಸ್ತ್ರೀಶಕ್ತಿ ಮಹಿಳಾ ಸಂಘಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದೆ. ಸಂಘದಲ್ಲಿ ರಾಜಕೀಯಕ್ಕೆ ಅವಕಾಶವಿಲ್ಲ ಕೇವಲ ರೈತರ ಅಭಿವೃದ್ಧಿಯೇ ನಮ್ಮ ಉದ್ದೇಶವಾಗಿದೆ. ಈ ಬಾರಿ ಚುನಾವಣೆಗೆ ಕೆಲವರು ಮುಂದಾದರೂ, ರಾಜಕೀಯ ಬೆರೆಸದೆ ಅವಿರೋಧ ಆಯ್ಕೆ ಮಾಡ ಬೇಕೆಂಬ ಮನವಿಗೆ ಸದಸ್ಯರು ಸ್ಪಂದಿಸಿದ್ದು, ಮತ್ತೊಮ್ಮೆ ಅಧ್ಯಕ್ಷ–ಉಪಾಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿರುವುದು ಸಂತೋಷ ತಂದಿದೆ.

ಸಿ.ಜೆ. ರಾಯ್‌ ಬೆನ್ನಲ್ಲೇ ಕರ್ನಾಟಕದ ಮತ್ತೊಬ್ಬ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ; ಸಾಲ ಕೊಟ್ಟಿದ್ದೇ ಮುಳುವಾಯ್ತು

ಕರ್ನಾಟಕದ ಉದ್ಯಮಿ ಕೇರಳದಲ್ಲಿ ಆತ್ಮಹತ್ಯೆ; ಕಾರಣವೇನು?

Kodagu News: ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕೇರಳದ ವಯನಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಕೊಡಗಿನ ಪೊನ್ನಂಪೇಟೆಯ ಕುಟ್ಟ ಗ್ರಾಮದ ನಿವಾಸಿ ಉದ್ಯಮಿ ಸಜೀರ್ ಎಂದು ಗುರುತಿಸಲಾಗಿದೆ. ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಮಕ್ಕಳನ್ನು ಸ್ಥಳೀಯರು ರಕ್ಷಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ದುರುಪಯೋಗ ತಡೆಯಲು ದಿಟ್ಟ ಹೆಜ್ಜೆ ಇಟ್ಟ ಸರ್ಕಾರ; ಇನ್ಮುಂದೆ ಜೀವಿತ ಪ್ರಮಾಣ ಪತ್ರ ಕಡ್ಡಾಯ

ಗೃಹಲಕ್ಷ್ಮಿ ಯೋಜನೆ: ಜೀವಿತ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ

Gruhalakshmi Scheme: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಹೊಸ ಸೂಚನೆ ಸದ್ಯದಲ್ಲೇ ಹೊರ ಬೀಳಲಿದೆ. ಯೋಜನೆಯ ದುರ್ಬಳಕೆ ತಡೆಯಲು ಸರ್ಕಾರ ಮುಖ್ಯ ನಿರ್ಧಾರವೊಂದನ್ನು ತೆಗೆದುಕೊಂಡಿದ್ದು, ಇನ್ನುಮುಂದೆ ಫಲಾನುಭವಿಗಳು ಜೀವಿತ ಪ್ರಮಾಣ ಪತ್ರ ಸಲ್ಲಿಸುವುದು ಕಡ್ಡಾಯವಾಗಲಿದೆ.

ಮೆಟ್ರೋ ಪ್ರಯಾಣಿಕರಿಗೆ ರಿಲೀಫ್‌; ಫೆಬ್ರವರಿ 9ರಂದು ಟಿಕೆಟ್‌ ದರ ಏರಿಯಾಗಲ್ಲ ಎಂದ ಸಂಸದ ತೇಜಸ್ವಿ ಸೂರ್ಯ

ಫೆಬ್ರವರಿ 9ರಂದು ಮೆಟ್ರೋ ಟಿಕೆಟ್‌ ದರ ಏರಿಯಾಗಲ್ಲ

Tejasvi Surya: ಸೋಮವಾರ (ಫೆಬ್ರವರಿ 9) ಏರಿಕೆಯಾಬೇಕಿದ್ದ ಮೆಟ್ರೋ ದರಕ್ಕೆ ಬ್ರೇಕ್‌ ಹಾಕಲಾಗಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಅವರು ಕೇಂದ್ರದ ಜತೆ ಮಾತನಾಡಿ ಮೆಟ್ರೋ ಟಿಕೆಟ್‌ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ ಒಡ್ಡಿದ್ದಾರೆ.

Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 9ರಂದು ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 9ರಂದು ವಿದ್ಯುತ್‌ ವ್ಯತ್ಯಯ

BESCOM News: ಕೆಪಿಟಿಸಿಎಲ್ ವತಿಯಿಂದ ತುರ್ತುನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಸಾರಕ್ಕಿ ಮತ್ತು ಎಲಿಟ ಪ್ರೋಮೆನೇಡ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಫೆ. 9ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಪಾಪ ಆತನಿಗೆ ಅನುಭವ ಕಡಿಮೆ; ಮೆಟ್ರೋ ದರ ವಿಚಾರದಲ್ಲಿ ಸಂಸದ ತೇಜಸ್ವಿ ಸೂರ್ಯಗೆ ಡಿ.ಕೆ. ಶಿವಕುಮಾರ್‌ ತಿರುಗೇಟು

ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು: ಡಿ.ಕೆ. ಶಿವಕುಮಾರ್‌

DK Shivakumar: ನೀವು ಸಿಎಂ ಆಗಬೇಕು ಎಂಬ ಕನಸು ಜನರಿಗಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಕನಸು ಜನರಿಗೂ ಇದೆ, ಶಾಸಕರಿಗೂ ಇದೆ, ನಿಮಗೂ (ಮಾಧ್ಯಮ) ಇದೆ. ಪಕ್ಷ ಏನು ಹೇಳುತ್ತದೆ ಅದನ್ನು ಕೇಳಬೇಕು ಎಂದು ಅವರು ಹೇಳಿದ್ದಾರೆ.

Bengaluru News: ಸಾವಿನಲ್ಲೂ ಒಂದಾದ ದಂಪತಿ; ಪತಿ ಮೃತಪಟ್ಟ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ

ಪತಿಯ ಸಾವಿನ ಸುದ್ದಿ ಕೇಳಿ ಪತ್ನಿ ಆತ್ಮಹತ್ಯೆ

Self Harming: ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದ್ದು, ಪತಿ ಮೃತಪಟ್ಟಿರುವ ಸುದ್ದಿ ತಿಳಿದು ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು 48 ವರ್ಷದ ರಾಜು ಮತ್ತು 42 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಎಂಎಸ್‌ಐಎಲ್‌ ಚಿಟ್‌ ವಹಿವಾಟು 5 ವರ್ಷಗಳಲ್ಲಿ 5 ಸಾವಿರ ಕೋಟಿ ರುಪಾಯಿಗೆ ಏರಿಸುವ ಗುರಿ: ಸಿದ್ದರಾಮಯ್ಯ

MSIL ಚಿಟ್‌ ವಹಿವಾಟು 5 ವರ್ಷಗಳಲ್ಲಿ 5 ಸಾವಿರ ಕೋಟಿ ರು.ಗೆ ಏರಿಕೆ: ಸಿಎಂ

CM Siddaramaiah: ಎಂಎಸ್‌ಐಎಲ್‌ ಸರ್ಕಾರಿ ಸಂಸ್ಥೆಯಾಗಿರುವುದರಿಂದ ಮೋಸದ ಪ್ರಶ್ನೆ ಬರುವುದಿಲ್ಲ. ಸಂಸ್ಥೆಯ ವಹಿವಾಟು ಈಗ ವರ್ಷಕ್ಕೆ 500 ಕೋಟಿ ರು.ಗಿಂತಲೂ ಕಡಿಮೆ ಇದೆ. ಇದನ್ನು ಐದು ವರ್ಷಗಳಲ್ಲಿ 5 ಸಾವಿರ ಕೋಟಿ ರು.ಗೆ ಏರಿಸುವ ಗುರಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ʼʼಪ್ರೀತಿ ಸುಳ್ಳಲ್ಲ; ಆದರೆ..." ಚಿಕ್ಕ ವಾಕ್ಯದಲ್ಲಿ ಬದುಕಿನ ದೊಡ್ಡ ಸಂದೇಶ ಸಾರಿದ ಆಟೋ ಚಾಲಕ

ಬೆಂಗಳೂರಿನ ಆಟೋ ಚಾಲಕರ ಬರಹಕ್ಕೆ ನೆಟ್ಟಿಗರು ಫಿದಾ

Viral Video: ಬೆಂಗಳೂರಿನ ಆಟೋದಲ್ಲಿ ಬರೆದಿರುವ ಸಾಲೊಂದು ನೆಟ್ಟಿಗರ ಗಮನ ಸೆಳೆದಿದೆ. ಸದ್ಯ ಈ ದೃಶ್ಯ ಸೋಶಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಪ್ರೇಮಿಗಳ ಕುರಿತಾಗಿ ಬರೆದ ಈ ಬರಹ ವ್ಯಾಲಂಟೈನ್ಸ್‌ ಡೇಗೆ ಮುಂಚಿತವಾಗಿ ಆನ್‌ಲೈನ್‌ನಲ್ಲಿ ಹರಿದಾಡುತ್ತಿದೆ. ಆಟೋ ಹಿಂಭಾಗದಲ್ಲಿ ಸಂಜಯ್ ದತ್ ಫೋಟೊ ಹಾಕಿ, ಅದರ ಪಕ್ಕದಲ್ಲಿ ʼʼಪ್ರೀತಿ ಸುಳ್ಳಲ್ಲ, ಪ್ರೀತಿಸುವವರು ಸುಳ್ಳರುʼʼ ಎಂದು ಬರೆಯಲಾಗಿದೆ. ಬದುಕಿನ ಸಂದೇಶವೇ ಈ ವಾಕ್ದಯದಲ್ಲಿದೆ ಎಂದು ನೆಟ್ಟಿಗರು ಅಭಿಪ್ರಾಯ ಪಟ್ಟಿದ್ದಾರೆ.

Terrorist Death: ಶಂಕಿತ ಭಯೋತ್ಪಾದಕ ಕೇಂದ್ರ ಕಾರಾಗೃಹದಲ್ಲಿ ಸಾವು

ಶಂಕಿತ ಭಯೋತ್ಪಾದಕ ಕೇಂದ್ರ ಕಾರಾಗೃಹದಲ್ಲಿ ಸಾವು

ಕಳೆದ 2020ರಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಇದ್ದ. ಸುದ್ದಗುಂಟೆಪಾಳ್ಯ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಜೈಲು ಸೇರಿದ್ದ. ಪ್ರಕರಣ ಸಂಬಂಧ NIA ಅಧಿಕಾರಿಗಳು ಸಾಧಿಕ್ ಪಾಶ ಸೇರಿದಂತೆ 6 ಶಂಕಿತರನ್ನು ಅರೆಸ್ಟ್ ಮಾಡಿದ್ದರು. ಬೆಂಗಳೂರಿನ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

Moti Veeranna passes away: ಮಾಜಿ ಶಾಸಕ ಯಜಮಾನ್‌ ಮೋತಿ ವೀರಣ್ಣ ಇನ್ನಿಲ್ಲ

ಮಾಜಿ ಶಾಸಕ ಯಜಮಾನ್‌ ಮೋತಿ ವೀರಣ್ಣ ಇನ್ನಿಲ್ಲ

ದಾವಣಗೆರೆಯ ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಅವರ ಮಾತೆ ಗೌರಿ ನಿವಾಸದಲ್ಲಿ ಯಜಮಾನ್‌ ಮೋತಿ ವೀರಣ್ಣ ಅವರ ಪಾರ್ಥಿವ ಶರೀರದ ಅಂತಿಮ ನಮನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಇಂದು ಸಂಜೆ 4 ಗಂಟೆಗೆ ಹದಡಿ ರಸ್ತೆಯಲ್ಲಿರುವ ಯಜಮಾನ್ ಮೋತಿ ದೊಡ್ಡಪ್ಪ ಟ್ರಸ್ಟ್ ನಿವೇಶನದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Loading...