ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕರ್ನಾಟಕ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸುತ್ತಿಕೊಂಡ ಮುಡಾ ಹಗರಣ; ಹೈಕೋರ್ಟ್‌ನಿಂದ ತುರ್ತು ನೋಟಿಸ್‌

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಕುಟುಂಬಸ್ಥರಿಗೆ ಹೈಕೋರ್ಟ್‌ ನೋಟಿಸ್‌

MUDA Scam Case: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ ಅವರಿಗೆ ಹೈಕೋರ್ಟ್ ಗುರುವಾರ ತುರ್ತು ನೋಟಿಸ್ ಜಾರಿ ಮಾಡಿದೆ. ಸಿದ್ದರಾಮಯ್ಯ ಮತ್ತವರ ಕುಟುಂಬ ಸದಸ್ಯರ ವಿರುದ್ಧ ಸಲ್ಲಿಸಿದ ಬಿ ರಿಪೋರ್ಟ್‌ ಅನ್ನು ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಈ ನೋಟಿಸ್‌ ಜಾರಿ ಮಾಡಿದೆ.

ಆಟೋ ಓಡಿಸುತ್ತಲೇ ರೀಲ್ಸ್‌ ನೋಡುವುದರಲ್ಲಿ ಚಾಲಕ ಬ್ಯುಸಿ; ಮನವಿಗೂ ಕ್ಯಾರೇ ಇಲ್ಲ: ಬೆಂಗಳೂರಿನಲ್ಲಾದ ಭಯಾನಕ ಅನುಭವ ಬಿಚ್ಚಿಟ್ಟ ಯುವತಿ

ಆಟೋ ಓಡಿಸುತ್ತಲೇ ರೀಲ್ಸ್‌ ನೋಡುವುದರಲ್ಲಿ ಚಾಲಕ ಬ್ಯುಸಿ; ವಿಡಿಯೊ ಇಲ್ಲಿದೆ

Viral Video: ಬೆಂಗಳೂರಿನ ಬ್ಯುಸಿ ಟ್ರಾಫಿಕ್ ನಡುವೆ ಆಟೋ ಚಾಲಕನೊಬ್ಬ ಮೊಬೈಲ್‌ನಲ್ಲಿ ವಿಡಿಯೊ ನೋಡುತ್ತ ಸಾಗುತ್ತಿದ್ದ ಘಟನೆವೊಂದು ಕಂಡು ಬಂದಿದೆ. ಚಾಲಕ ರಸ್ತೆ ಮೇಲೆ ಗಮನ ಕೇಂದ್ರೀಕರಿಸುವ ಬದಲು ಮೊಬೈಲ್‌ನಲ್ಲಿ ಸ್ಕ್ರಾಲ್‌ ಮಾಡುವುದರಲ್ಲಿ ಮಗ್ನನಾಗಿದ್ದ ಬಗ್ಗೆ ಯುವತಿಯೊಬ್ಬಳು ವಿಡಿಯೊ ಮಾಡಿದ್ದಾಳೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಯುವ ಜನತೆಗೆ ಅವಕಾಶ; ಅಡಿಗಾಸ್‌ ಸಂಸ್ಥೆಯಿಂದ ವಿಶೇಷ ತರಬೇತಿ!

ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಡಿಗಾಸ್‌ ಸಂಸ್ಥೆಯಿಂದ ಯುವ ಜನತೆಗೆ ಅವಕಾಶ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅಡಿಗಾಸ್ ಯಾತ್ರಾ ಸಂಸ್ಥೆ ಇದೀಗ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಆಸಕ್ತಿ ಇರುವ ಯುವ ಪ್ರತಿಭೆಗಳಿಗೆ ಸುವರ್ಣಾವಕಾಶ ಕಲ್ಪಿಸಿದೆ. ಯಾವುದೇ ಪದವಿ ಹೊಂದಿದವರು, ಪ್ರವಾಸೋದ್ಯಮದಲ್ಲಿ ಆಸಕ್ತಿಯುಳ್ಳವರು ಹಾಗೂ ಪ್ರೆಶರ್ಸ್‌ ಈ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

Murder Case: ಪತಿಯಿಂದ ನಡುರಸ್ತೆಯಲ್ಲಿ ಪತ್ನಿಯ ಬರ್ಬರ ಕೊಲೆ, ಶವದ ಮೇಲೆ ಕಾರು ಹತ್ತಿಸಿ ವಿಕೃತಿ

ಪತ್ನಿಯನ್ನು ನಡುರಸ್ತೆಯಲ್ಲಿ ಕೊಂದು, ಶವದ ಮೇಲೆ ಕಾರು ಹತ್ತಿಸಿದ ವಿಕೃತ

ಆರೋಪಿ ಪತಿ ಎರ್ಟಿಗಾ ಕಾರಿನಲ್ಲಿ ಪತ್ನಿಯನ್ನು ಕರೆದುಕೊಂಡು ಬಂದು, ಬಳೂರಗಿ ಗ್ರಾಮದ ಬಳಿ ನಿಲ್ಲಿಸಿದ್ದಾನೆ. ಬಳಿಕ ಪತ್ನಿಯನ್ನು ಕಾರಿನಿಂದ ಬಲವಂತವಾಗಿ ಕೆಳಗಿಳಿಸಿ, ನಡುರಸ್ತೆಯಲ್ಲೇ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಷ್ಟೇ ಅಲ್ಲದೇ ಶವದ ಮೇಲೆ ಕಾರು ಹಾಯಿಸಿ ವಿಕೃತಿ ಮೆರೆದಿದ್ದಾನೆ.

No Alcohol: ಮಕ್ಕಳಿಗೆ ಮದ್ಯ ನೀಡಬೇಡಿ: ಬಾರ್‌ಗಳಿಗೆ ಹೈಕೋರ್ಟ್‌ ಕಠಿಣ ನಿರ್ದೇಶನ

ಮಕ್ಕಳಿಗೆ ಮದ್ಯ ನೀಡಬೇಡಿ: ಬಾರ್‌ಗಳಿಗೆ ಹೈಕೋರ್ಟ್‌ ಕಠಿಣ ನಿರ್ದೇಶನ

ಮಕ್ಕಳಿಗೆ ಮದ್ಯ ಮಾರಾಟ ಮಾಡಿದ್ದಕ್ಕಾಗಿ ತಮ್ಮ ವಿರುದ್ಧ ಅಬಕಾರಿ ಕಾಯ್ದೆ ಮತ್ತು ಬಾಲ ನ್ಯಾಯ(ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ಪ್ರಶ್ನಿಸಿ ಲೆಗಸಿ ಬ್ರೂಯಿಂಗ್ ಕಂಪನಿ(ಎಲ್‌ಬಿಸಿ)ಯ ಪಾಲುದಾರ ವಿ ಚಿಟ್ಟಿ ಬಾಬು ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು, ಪ್ರಕರಣ ರದ್ದುಗೊಳಿಸಲು ನಿರಾಕರಿಸಿ ಆದೇಶ ಹೊರಡಿಸಿದ್ದಾರೆ.

ಪಾಲ್ ಜಾನ್ ‘ಕಾರಿಗರಿ’ ಬಿಡುಗಡೆ – ವಿಸ್ಕಿಯಿಂದ ಸಂಸ್ಕೃತಿಯತ್ತ ಹೊಸ ಹೆಜ್ಜೆ

ಪಾಲ್ ಜಾನ್ ‘ಕಾರಿಗರಿ’ ಬಿಡುಗಡೆ

ಕಾರ್ಯಕ್ರಮದ ಆರಂಭಿಕ ವಾಕ್‌ಥ್ರೂ ಮರದ ನವೀನ ಕಲಾಕೃತಿಗಳ ಮತ್ತು ವಿಸ್ಕಿ ತಯಾರಿಕೆ ಯ ನಡುವಿನ ಸಾಮ್ಯತೆಯನ್ನು ಒತ್ತಿಹೇಳುತ್ತ, ಅತಿಥಿಗಳನ್ನು ವಸ್ತು, ಪ್ರಕ್ರಿಯೆ ಮತ್ತು ಸೂಕ್ಷ್ಮತೆ ಗಳೊಂದಿಗೆ ಸಂಪರ್ಕಿಸುವಂತೆ ಮಾಡಿತು. ಅತಿಥಿಗಳಿಗೆ ಮೊದಲು ಪಾಲ್ ಜಾನ್‌ನ ನಿರ್ವಾಣ ಎಕ್ಸ್‌ಪ್ರೆಷನ್ ಪರಿಚಯಿಸಲಾಯಿತು.

ಮೂರು ವಿಶೇಷ ತರಬೇತಿ ಶಿಬಿರಗಳು: ಎಕ್ಸೆಲ್ ಪಬ್ಲಿಕ್ ಶಾಲೆಯಿಂದ Summer STREAM Boot Camp 2026 ಘೋಷಣೆ

ಎಕ್ಸೆಲ್ ಪಬ್ಲಿಕ್ ಶಾಲೆಯಿಂದ Summer STREAM Boot Camp 2026 ಘೋಷಣೆ

ಈ ಕಾರ್ಯಕ್ರಮವು ಏಪ್ರಿಲ್ 1 ರಿಂದ ಏಪ್ರಿಲ್ 18, 2026ರವರೆಗೆ ಪ್ರತಿದಿನ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:00ರವರೆಗೆ, ಮೈಸೂರಿನ ಕೂರ್ಗಳ್ಳಿ ಪ್ರದೇಶದಲ್ಲಿರುವ ಎಕ್ಸೆಲ್ ಪಬ್ಲಿಕ್ ಶಾಲಾ ಆವರಣದಲ್ಲಿ ನಡೆಯಲಿದೆ. ಕೆಲವು ಸೆಷನ್‌ಗಳು ಶಾಲೆಯ Innovation Centre ನಲ್ಲಿ ನಡೆಯುತ್ತವೆ. ಪ್ರತಿ ಬ್ಯಾಚ್‌ನಲ್ಲಿ 30–40 ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ.

RSS program in KSOU: ಮುಕ್ತ ವಿವಿಯಲ್ಲಿ ಆರೆಸ್ಸೆಸ್‌ ಕಾರ್ಯಕ್ರಮ: ಸರ್ಕಾರ ವಿರೋಧ, ಗವರ್ನರ್ ಉದ್ಘಾಟನೆ

ಮುಕ್ತ ವಿವಿ ಆರೆಸ್ಸೆಸ್‌ ಕಾರ್ಯಕ್ರಮ: ಸರ್ಕಾರ ವಿರೋಧ, ಗೆಹ್ಲೋಟ್ ಚಾಲನೆ

ಉನ್ನತ ಶಿಕ್ಷಣ ಇಲಾಖೆಗೆ ತಿಳಿಸದೆ ಮಾರ್ಚ್ 25 ರಿಂದ 27ರವರೆಗೆ ಆಯೋಜಿಸಲಾಗಿದ್ದ ಈ ಅಂತರರಾಷ್ಟ್ರೀಯ ಸಮ್ಮೇಳನವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ KSOU ಅಧಿಕಾರಿಗಳಿಗೆ ಮತ್ತು ಕಾರ್ಯಕ್ರಮ ಸಂಘಟಕರಿಗೆ ನಿರ್ದೇಶನ ನೀಡಿತ್ತು. ರಾಜ್ಯ ಸರ್ಕಾರದ ನಿರ್ದೇಶನದ ಹೊರತಾಗಿಯೂ ಸಮ್ಮೇಳನವನ್ನು ರಾಜ್ಯಪಾಲರು ಉದ್ಘಾಟಿಸಿದ್ದಾರೆ.

ಕಲಬುರಗಿಯ ಚಿಂಚೋಳಿಯಲ್ಲಿ ಆಲಿಕಲ್ಲು ಮಳೆಯ ಆರ್ಭಟ; ಹಿಮಪಾತದಂತೆ ಗೋಚರಿಸಿದ ರಸ್ತೆಗಳು, ಜನಜೀವನ ಅಸ್ತವ್ಯಸ್ತ Video

ಕಲಬುರಗಿಯ ಚಿಂಚೋಳಿಯಲ್ಲಿ ಆಲಿಕಲ್ಲು ಮಳೆಯ ಆರ್ಭಟ

Hailstorm wreaks havoc in Chincholi: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಾದ್ಯಂತ ಬುಧವಾರ (ಮಾ.25) ಸಂಜೆ ಸಂಭವಿಸಿದ ಭಾರಿ ಆಲಿಕಲ್ಲು ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಸ್ತೆಗಳು, ಮನೆಗಳ ಮೇಲ್ಛಾವಣಿ ಹಾಗೂ ಹೊಲಗದ್ದೆಗಳು ಸಂಪೂರ್ಣವಾಗಿ ಆಲಿಕಲ್ಲುಗಳಿಂದ ಆವೃತವಾಗಿತ್ತು. ಅಕಾಲಿಕವಾಗಿ ಬಂದೆರಗಿದ ಈ ಮಳೆಯಿಂದಾಗಿ ರೈತರು ಕಣ್ಣೀರಿಡುವಂತಾಗಿದೆ.

ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕಲೇಟ್‌ ಕೊಟ್ಟು ಪ್ರಪೋಸ್‌ ಮಾಡಿದ ಪ್ರೊಫೆಸರ್‌, ಚಪ್ಪಲಿ ಏಟು!

ತರಗತಿಯಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್‌ ಮಾಡಿದ ಪ್ರೊಫೆಸರ್‌ಗೆ ಚಪ್ಪಲಿ ಏಟು!

ತರಗತಿ ನಡೆಯುತ್ತಿದ್ದಾಗಲೇ ವಿದ್ಯಾರ್ಥಿನಿಗೆ (Girl Student) ಚಾಕೊಲೇಟ್ ಕೊಟ್ಟು ಪ್ರೊಫೆಸರ್‌ ಅಬ್ದುಲ್‌ ಪ್ರಪೋಸ್‌ ಮಾಡಿದ್ದಾನೆ. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿನಿ ತರಗತಿಯಲ್ಲೇ ಪ್ರಶ್ನೆ ಮಾಡಿದ್ದಾರೆ. ಬಳಿಕ ಪ್ರೊಫೆಸರ್‌ಗೆ ಚಪ್ಪಲಿಯಿಂದ ಥಳಿಸಿದ್ದಾರೆ. ಅಲ್ಲದೇ ಪ್ರೊಫೆಸರ್‌ ಅಬ್ದುಲ್‌ ವರ್ತನೆಯಿಂದ ರೊಚ್ಚಿಗೆದ್ದ ಇತರ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲೇ ಅಟ್ಟಾಡಿಸಿ ಹೊಡೆದಿದ್ದಾರೆ.

Water Price Hike: ಬೆಂಗಳೂರು ಜಲಮಂಡಳಿಯಿಂದ ಜನತೆಗೆ ಶಾಕ್‌, ನೀರಿನ ದರ ಶೇ.3 ಏರಿಕೆ

ಬೆಂಗಳೂರು ಜಲಮಂಡಳಿಯಿಂದ ಜನತೆಗೆ ಶಾಕ್‌, ನೀರಿನ ದರ ಶೇ.3 ಏರಿಕೆ

ಸಾಂಪ್ರದಾಯಿಕವಾಗಿ ದರ ಹೆಚ್ಚಿಸಲು ಜಲಮಂಡಳಿ ಮುಂದಾಗಿದೆ. ಜನರಿಗೆ ಅನನುಕೂಲವೂ ಆಗದಂತೆ ನೋಡಿಕೊಂಡು ಶೇ.3 ರಷ್ಟು ಮಾತ್ರ ದರ ಏರಿಕೆ ಮಾಡಲು ನಿರ್ಧರಿಸಿದೆ. ಇದರಿಂದ ಪ್ರತಿ ಲೀಟರ್‌ ನೀರಿಗೆ 1 ಪೈಸೆ ಮತ್ತು ವಾಣಿಜ್ಯ ಬಳಕೆದಾರರಿಗೆ ಪ್ರತಿ ಲೀಟರ್‌ ನೀರಿಗೆ 1.9 ಪೈಸೆ ಹೆಚ್ಚಳವಾಗಲಿದೆ.

Murder case: ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಮಾಜಿ ಶಾಸಕನ ಮಗನ ಸಾವಿಗೆ ಬಿಗ್ ಟ್ವಿಸ್ಟ್, ಅಕ್ರಮ ಸಂಬಂಧವೇ ಕೊಲೆಗೆ ಕಾರಣ

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಗುರುತು ಸಿಗದಷ್ಟು ಸ್ಥಿತಿಯಲ್ಲಿ ಸುಟ್ಟು ಕರಕಲಾದ ರಾಜುನ ಶವ ಸಿಕ್ಕಿತ್ತು. ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆಯಿಂದ ಸ್ಫೋಟಕ ಮಾಹಿತಿ ಬಹಿರಂಗವಾಗಿದ್ದು, ಮೃತನಿಗಿದ್ದ ಅನೈತಿಕ ಸಂಬಧದ ಹಿನ್ನೆಲೆ ಕೊಲೆ ನಡೆದಿದೆ ಎನ್ನಲಾಗಿದೆ.

Terrorist: ಒಸಾಮಾ ಬಿನ್‌ ಲಾಡೆನ್‌ ಥರ ವೇಷ, ಭಯೋತ್ಪಾದನೆಗೆ ಪ್ರಚೋದನೆ: ಬಳ್ಳಾರಿಯ ಉಗ್ರ ಸೇರಿದಂತೆ 12 ಶಂಕಿತರ ಬಂಧನ

ಭಯೋತ್ಪಾದನೆಗೆ ಪ್ರಚೋದನೆ: ಬಳ್ಳಾರಿಯ ವ್ಯಕ್ತಿ ಸೇರಿದಂತೆ 12 ಶಂಕಿತರ ಬಂಧನ

ಕರ್ನಾಟಕ ಸೇರಿ ಒಟ್ಟು 7 ರಾಜ್ಯಗಳಲ್ಲಿ ಆಂಧ್ರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತರು ಆಂಧ್ರದಲ್ಲಿ‘ಅಲ್ ಮಾಲಿಕ್ ಇಸ್ಲಾಮಿಕ್ ಯೂತ್’‘ (Al-Malik Youth Islamic Committee) ಎಂಬ ಗುಂಪನ್ನು ರಚಿಸಿಕೊಂಡು ಯುವಕರನ್ನು ತೀವ್ರಗಾಮಿ ಚಿಂತನೆಗಳತ್ತ ಸೆಳೆಯುತ್ತಿದ್ದರು. ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದ್ದರು ಎನ್ನಲಾಗಿದೆ.

HD Kumaraswamy: ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರ ಅಸ್ತು: ಹೆಚ್‌ಡಿ ಕುಮಾರಸ್ವಾಮಿ ಮನವಿಗೆ ಸ್ಪಂದಿಸಿದ ಅಶ್ವಿನ್‌ ವೈಷ್ಣವ್‌

ರಾಮನಗರದಲ್ಲಿ ಒಡೆಯರ್ ಎಕ್ಸ್‌ಪ್ರೆಸ್ ರೈಲು ನಿಲುಗಡೆಗೆ ಕೇಂದ್ರ ಸರಕಾರ ಅಸ್ತು

ರಾಜ್ಯದಲ್ಲಿ ಬೆಂಗಳೂರು ಮತ್ತು ಮೈಸೂರು ನಡುವೆ ದೊಡ್ಡ ಪ್ರಮಾಣದಷ್ಟು ಜನರು ಪ್ರಯಾಣ ಮಾಡುತ್ತಾರೆ. ರಾಜ್ಯದಲ್ಲಿಯೇ ಅತಿಹೆಚ್ಚು ಜನರು ಸಂಚರಿಸುವ ಕಾರಿಡಾರ್‌ಗಳಲ್ಲಿ ಇದೂ ಒಂದಾಗಿದ್ದು, ಈ ಉಪಕ್ರಮದಿಂದ ರಾಮನಗರ ಜಿಲ್ಲೆಯ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಸಚಿವರು ತಿಳಿಸಿದ್ದಾರೆ.

Namma Metro: ಕ್ರಿಕೆಟ್‌ ಪ್ರೇಮಿಗಳಿಗೆ ಗುಡ್‌ ನ್ಯೂಸ್‌, ನಮ್ಮ ಮೆಟ್ರೋ ಸಂಚಾರ ವಿಸ್ತರಣೆ

ಕ್ರಿಕೆಟ್‌ ಪ್ರೇಮಿಗಳಿಗೆ ಗುಡ್‌ ನ್ಯೂಸ್‌, ನಮ್ಮ ಮೆಟ್ರೋ ಸಂಚಾರ ವಿಸ್ತರಣೆ

ಮೆಟ್ರೋ ಪ್ರಯಾಣವನ್ನು ಇನ್ನಷ್ಟು ಸುಗಮಗೊಳಿಸಲು ಐಪಿಎಲ್ ಪಂದ್ಯದ ಟಿಕೆಟ್‌ಗಳಲ್ಲಿ ನಮ್ಮ ಮೆಟ್ರೋ ಕ್ಯೂಆರ್ ಕೋಡ್ ಎರಡು ಪ್ರಯಾಣಕ್ಕೆ (ಟು-ವೇ ಟ್ರಾವೆಲ್), ಐಪಿಎಲ್ ಟಿಕೆಟ್ ಮೇಲೆಯೇ ಮುದ್ರಿತವಾಗಿರುತ್ತದೆ ಅಥವ ಡಿಜಿಟಲ್ ಐಪಿಎಲ್ ಟಿಕೆಟ್‌ಗಳೊಂದಿಗೆ ಲಭ್ಯವಿರುತ್ತದೆ. ಬಿಎಂಆರ್‌ಸಿಎಲ್ ಅನೇಕ ಮೆಟ್ರೋ ನಿಲ್ದಾಣಗಳಲ್ಲಿ ಹೆಚ್ಚುವರಿ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಿದೆ.

Shidlaghatta News: ಶಿಡ್ಲಘಟ್ಟ ನಗರಸಭೆ ಆದಾಯ ವಸೂಲಾತಿ ಹಕ್ಕುಗಳಿಗೆ ಮರುಹರಾಜು

ಶಿಡ್ಲಘಟ್ಟ ನಗರಸಭೆ ಆದಾಯ ವಸೂಲಾತಿ ಹಕ್ಕುಗಳಿಗೆ ಮರುಹರಾಜು

ಆಸಕ್ತ ಗುತ್ತಿಗೆದಾರರು ನಿಗದಿತ ದಿನಾಂಕದಂದು ನಗರಸಭೆ ಕಚೇರಿಯಲ್ಲಿ ನಡೆಯುವ ಬಹಿರಂಗ ಮರುಹರಾಜಿನಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿ ಗಾಗಿ ನಗರಸಭೆ ಕಚೇರಿಯನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ

Chikkaballapur News: ಜ್ಞಾನ, ಕೌಶಲಗಳು ಹಾಗೂ ಸಾಮರ್ಥ್ಯ ಕಲಿಯಬಹುದು, ಆದರೆ ಕಾರುಣ್ಯವನ್ನು ಸೇವೆಯ ಮೂಲಕವೇ ಕಟ್ಟಿಕೊಳ್ಳಬೇಕು: ಡೀನ್ ಡಾ.ಎಂ.ಎಲ್.ಮಂಜುನಾಥ್

ಕಾರುಣ್ಯವನ್ನು ಸೇವೆಯ ಮೂಲಕವೇ ಕಟ್ಟಿಕೊಳ್ಳಬೇಕು

ತಾಲ್ಲೂಕಿನ ಅರೂರು ಬಳಿಯ ಸರ್ಕಾರಿ ನಂದಿ ಮೆಡಿಕಲ್ ಕಾಲೇಜು ಹಾಗೂ ಸಂಶೋ ದನಾ ಸಂಸ್ಥೆಯಲ್ಲಿ ಆಯೋಜಿಸಿದ್ದ ನರ್ಸಿಂಗ್ ವಿದ್ಯಾರ್ಥಿಗಳ ಜ್ಯೋತಿ ಬೆಳಗುವಿಕೆ ಹಾಗೂ ಪ್ರಮಾಣ ವಚನ ಬೋಧನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಜಗತ್ತಿನ ಶುಶ್ರೂಷಕ ಸೇವಾ ಕ್ಷೇತ್ರ ದಲ್ಲಿ ನರ್ಸಿಂಗ್ ಒಂದು ಅಪೂರ್ವ ಸೇವೆಯಾಗಿದ್ದು ಫ್ಲಾರೆನ್ಸ್ ನೈಟಿಂಗೇಲ್ ಅವರ ಸೇವಾಗುಣ ಮತ್ತು ಸ್ಪೂರ್ತಿಯನ್ನು ಶುಶ್ರೂಷಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು

Chikkaballapur News: ನಮಗೆ ಅಂಬೇಡ್ಕರ್ ಮೀಸಲಾತಿ ಸಾಕು, ಸರಕಾರ ಒಳಮೀಸಲಾತಿ ಬಿಸಾಕಬೇಕು : ಜ್ಞಾನಪ್ರಕಾಶ್ ಸ್ವಾಮೀಜಿ ಆಗ್ರಹ

ನಮಗೆ ಅಂಬೇಡ್ಕರ್ ಮೀಸಲಾತಿ ಸಾಕು, ಸರಕಾರ ಒಳಮೀಸಲಾತಿ ಬಿಸಾಕಬೇಕು

ಆರ್‌ಎಸ್‌ಎಸ್ ಪ್ರಣೀತ ಒಳಮೀಸಲಾತಿ ಎಂಬುದು ಅಸ್ಪೃಷ್ಯ ಸಮುದಾಯಗಳ ಒಗ್ಗಟ್ಟನ್ನು ಒಡೆಯುವ ಭಾರೀ ಕುತಂತ್ರವಾಗಿದೆ. ಎಸ್ಸಿ,ಎಸ್ಟಿ ಸಂಬಂಧಿತ ಸಹೋದರ ಸಮುದಾಯಗಳನ್ನು ಬೆಸೆಯಲು ಬಿಟ್ಟರೆ ಅವರು ಮುಖ್ಯಮಂತ್ರಿ ಪ್ರಧಾನ ಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟು ಅಧಿಕಾರ ಸ್ಥಾನಕ್ಕೆ ಏರಲಿದ್ದಾರೆ. ಇದನ್ನು ತಪ್ಪಿಸಬೇಕಾದರೆ ಒಳಮೀಸಲಾತಿಯೆಂಬ ವಿಷವನ್ನು ಇವರ ಮೆದುಳಿಗೆ ತುಂಬಬೇಕು ಎಂದು ಭಾವಿಸಿ ಸುಪ್ರಿಂಕೋರ್ಟ್ ನ್ಯಾಯಮೂರ್ತಿಗಳ ಮೂಲಕ ತುಂಬಿದ್ದಾರೆ

ಏಪ್ರಿಲ್6ಕ್ಕೆ ಅಂಬಾಜಿ ದುರ್ಗಾಬೆಟ್ಟದಲ್ಲಿ ದುಷ್ಟಸಂಹಾರ ವೀರಾಂಜನೇಯಸ್ವಾಮಿ ಬ್ರಹ್ಮರಥೋತ್ಸವ

ದುರ್ಗಾಬೆಟ್ಟದಲ್ಲಿ ದುಷ್ಟಸಂಹಾರ ವೀರಾಂಜನೇಯಸ್ವಾಮಿ ಬ್ರಹ್ಮರಥೋತ್ಸವ

ದೇವಾಲಯದ ಧರ್ಮದರ್ಶಿಗಳಾದ ಕಾವಲಗಾನಹಳ್ಳಿ ನಾರಾಯಣಸ್ವಾಮಿ, ಅಂಬೋಜೇಶ್ವರ ಸೇವಾ ಟ್ರಸ್ಟ್ ಮುಖಾಂತರ ಹಾಗೂ ಸುತ್ತಮುತ್ತಲ ಗ್ರಾಮಸ್ಥರ ಸಹಕಾರದಿಂದ ದೇವಾಲಯ ವನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಗೋಶಾಲೆಯನ್ನು ಸಹ ಮಾಡಿರುತ್ತಾರೆ. ಇದರ ಜೊತೆಗೆ ನಿತ್ಯ ಅನ್ನ ದಾಸೋಹವು ನಡೆಯುತ್ತಿದೆ.

Chikkaballapur News: ಮಾ.26ರಂದು ಕನ್ನಡ ಭವನದಲ್ಲಿ ಕೋಟಿಗಾನಹಳ್ಳಿ ರಾಮಯ್ಯ ಅವರ ಅಂಬೇಡ್ಕರ್ ಕೊಲಾಜ್ ನಾಟಕ: ಕೋಟಿಗಾನಹಳ್ಳಿ ರಾಮಯ್ಯ

ಕೋಟಿಗಾನಹಳ್ಳಿ ರಾಮಯ್ಯ ಅವರ ಅಂಬೇಡ್ಕರ್ ಕೊಲಾಜ್ ನಾಟಕ

ಅಂಬೇಡ್ಕರ್ ಅವರ ಬಾಲ್ಯ ವಿದ್ಯಾಭ್ಯಾಸ, ನಿಮ್ನವರ್ಗಗಳ ಹಕ್ಕುಗಳಿಗಾಗಿ ನಡೆಸಿದ ಹೋರಾಟ, ಸಂವಿಧಾನ ರಚನೆ, ಬೌದ್ಧ ಧಮ್ಮ ಸ್ವೀಕಾರದಂತಹ ಘಟನೆಗಳನ್ನು ಒಂದರ ಹಿಂದೊಂದರಂತೆ ಭಿನ್ನ ಭಿನ್ನ ದೃಶ್ಯಗಳ ಮೂಲಕ ಕೋಲಾಜ್ ಶೈಲಿಯಲ್ಲಿ ಈ ನಾಟಕ ಕಟ್ಟಿಕೊಡಲಾಗಿದೆ. ಈ ನಾಟಕ ನೋಡುವ ಮೂಲಕ ನಿಜದ ಅಂಬೇಡ್ಕರ್ ಅವರನ್ನು ಅರಿಯುವ ಕೆಲಸ ಮಾಡಬೇಕು

Protest: ಜಿಲ್ಲಾಡಳಿತ ಭವನದ ಎದುರು ಮಾದಿಗ ಸಂಘಟನೆಗಳ ಒಕ್ಕೂಟದಿಂದ ಒಳಮೀಸಲಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಒಕ್ಕೂಟದಿಂದ ಒಳಮೀಸಲಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

ಕಳೆದ 35 ವರ್ಷಗಳಿಂದ ನಾವು ಹೋರಾಟ ನಡೆಸುತ್ತಿದ್ದರೂ ಸರ್ಕಾರಗಳು ಯಾವುದೇ ಸ್ಪಂದನೆ ತೋರಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಹಿಂದೆ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದೇವೆ. ಸರ್ಕಾರ ನೀಡಿರುವ ಭರವಸೆಯಂತೆ ಒಳ ಮೀಸಲಾತಿ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಹಾಗೂ ಬಂದ್‌ಗೆ ಮುಂದಾ ಗುತ್ತೇವೆ ಎಂದು ಎಚ್ಚರಿಸಿದರು.

JDS: 25ರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಜೆಡಿಎಸ್ ನಾಯಕರನ್ನು ಹುಟ್ಟು ಹಾಕುವ ಪಕ್ಷವಾಗಿದೆ : ಜೆ.ಕೆ.ಕೃಷ್ಣಾರೆಡ್ಡಿ ಅಭಿಮತ

ಜೆಡಿಎಸ್ ನಾಯಕರನ್ನು ಹುಟ್ಟು ಹಾಕುವ ಪಕ್ಷವಾಗಿದೆ

ಪಕ್ಷದ ಸಂಸ್ಥಾಪಕ ದೇವೇಗೌಡರು ದೆಹಲಿಯಲ್ಲಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದು ಮಹಿಳೆ ಯರ ಮೇಲೆ ವಿಶೇಷ ಕಾಳಜಿ ಇಟ್ಟು ಮಹಿಳಾ ಮೀಸಲಾತಿ ಜಾರಿಗೆ ತರಲು ಮುಂದಾಗಿದ್ದರು. ರಾಜ್ಯ ದಲ್ಲಿ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡುವಂತಹ ಮಹತ್ವದ ನಿರ್ಧಾರ ಗಳನ್ನು ಕೈಗೊಂಡಿದ್ದರು. ಈಗ ಎನ್‌ಡಿಎ ಜೊತೆಗೆ ಗುರುತಿಸಿಕೊಂಡಿರುವ ಜೆಡಿಎಸ್ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಅಧಿಕಾರ ಹಿಡಿಯುವುದು ಖಚಿತ ಎಂದರು.

2025ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳು ಪ್ರಕಟ; ಸಂಪೂರ್ಣ ಪಟ್ಟಿ ಇಲ್ಲಿದೆ

ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಸಾಹಿತ್ಯಶ್ರೀ ಪ್ರಶಸ್ತಿ ಹಾಗೂ ಪುಸ್ತಕ ಬಹುಮಾನಕ್ಕೆ ಆಯ್ಕೆಯಾದವರ ಪಟ್ಟಿ ಇಲ್ಲಿದೆ.

ಮೋದಿ ಪ್ರಧಾನಿಯಾದ ನಂತರ 165 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸಿಎಂ ಕಿಡಿ

ಮೋದಿ ಪ್ರಧಾನಿಯಾದ ನಂತರ 165 ಲಕ್ಷ ಕೋಟಿ ಸಾಲ ಮಾಡಿದ್ದಾರೆ: ಸಿಎಂ

Karnataka budget session 2026: ಗ್ಯಾರಂಟಿಗಳಿಂದ ಸಾಲ ಹೆಚ್ಚಿದೆ ಎಂದು ಟೀಕಿಸಲಾಗಿದೆ. ಇದುವರೆಗೆ 1.31 ಲಕ್ಷ ಕೋಟಿ ಗ್ಯಾರಂಟಿಗಳಿಗೆ ವೆಚ್ಚ ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರ, ಜನಕಲ್ಯಾಣ ಯೋಜನೆಗಳಿಗೆ ವರ್ಷದಿಂದ ವರ್ಷಕ್ಕೆ ಅನುದಾನ ಕಡಿಮೆ ಮಾಡಿದೆ. ಆದರೆ ನಮ್ಮ ಸರ್ಕಾರ ಗ್ಯಾರಂಟಿಗಳಿಗೆ ಪ್ರತಿ ವರ್ಷ ಒಂದೇ ರೀತಿಯಲ್ಲಿ ಅನುದಾನ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Loading...