ಸರ್ಕಾರಿ ಶಾಲೆಗಳಲ್ಲಿ ನಲಿ-ಕಲಿ ಕಾರ್ಯಕ್ರಮ ರದ್ದು ಮಾಡಿದ ರಾಜ್ಯ ಸರ್ಕಾರ
ನಲಿ-ಕಲಿ ಪದ್ಧತಿಯನ್ನು ರದ್ದುಗೊಳಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ಕಳೆದ ಹಲವಾರು ವರ್ಷಗಳಿಂದ ಸರ್ಕಾರದ ಮೇಲೆ ಒತ್ತಡವನ್ನು ಹೇರುತ್ತಾ ಬರುತ್ತಿದೆ. ಇದೀಗ ನಲಿ-ಕಲಿ ಕಾರ್ಯಕ್ರಮ ರದ್ದು ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಿಕ್ಷಣ ಇಲಾಖೆ ಮೇಲಧಿಕಾರಿಗಳಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಧನ್ಯವಾದ ತಿಳಿಸಿದೆ.