ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
15 ಅಡಿ ಅಗೆದರೂ ಒಂದು ಮೂಳೆಯೂ ಸಿಕ್ಕಿಲ್ಲ

ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಅಗೆದರೂ ಯಾವುದೇ ಕುರುಹು ಇಲ್ಲ

ತಲೆ ಬುರುಡೆ ಇರಲಿ, ಒಂದೇ ಒಂದು ಮೂಳೆಯೂ ಪತ್ತೆಯಾಗಿಲ್ಲ. ಧರ್ಮಸ್ಥಳದ ಸ್ನಾನಘಟ್ಟದ ಸಮೀಪದ ನೇತ್ರಾವತಿ ನದಿ ಪಕ್ಕದ ಕಾಡಿನಲ್ಲಿ ಶವಗಳನ್ನು ಹೂತಿಡಲಾಗಿದೆ ಎಂದು ಅನಾಮಿಕ ವ್ಯಕ್ತಿಯೊಬ್ಬ ದೂರು ನೀಡಿದ್ದರು. ಆತ ಗುರುತಿಸಿದ ಮೊದಲನೇ ಜಾಗವನ್ನು ಬರೋಬ್ಬರಿ 15 ಅಡಿ ಆಳ, 8 ಅಡಿ ಅಗಲ ಅಗೆದರೂ ಯಾವುದೇ ಕಳೇಬರ ಪತ್ತೆಯಾಗಿಲ್ಲ.

Actor Darshan: ನಟ ಪ್ರಥಮ್‌ಗೆ ಕೊಲೆ ಬೆದರಿಕೆ, ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು

ನಟ ಪ್ರಥಮ್‌ಗೆ ಕೊಲೆ ಬೆದರಿಕೆ, ದರ್ಶನ್‌ ಅಭಿಮಾನಿಗಳ ವಿರುದ್ಧ ದೂರು

Actor Pratham: ಕಳೆದ ಜುಲೈ 22ರಂದು ದೊಡ್ಡಬಳ್ಳಾಪುರದಲ್ಲಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ವೇಳೆ ಬೇಕರಿ ರಘು ಮತ್ತು ಆತನ ಗ್ಯಾಂಗ್ ನಟ ಪ್ರಥಮ್‌ಗೆ ಡ್ಯಾಗರ್‌ನಿಂದ ಹಲ್ಲೆಗೆ ಯತ್ನಿಸಿ ಕೊಲೆ ಬೆದರಿಕೆ ಹಾಕಿದ್ದರು. ಈ ವಿಚಾರವಾಗಿ ಬೆಂಗಳೂರು ಗ್ರಾಮಾಂತರ ಎಸ್‌ಪಿ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದ್ದರು.

Actress Ramya: ದರ್ಶನ್‌ ಅಭಿಮಾನಿಗಳ ವಿರುದ್ಧದ ರಮ್ಯಾ ದೂರು ತನಿಖೆ ಸಿಸಿಬಿಗೆ

ದರ್ಶನ್‌ ಅಭಿಮಾನಿಗಳ ವಿರುದ್ಧದ ರಮ್ಯಾ ದೂರು ತನಿಖೆ ಸಿಸಿಬಿಗೆ

Actor Darshan: ನಟ ದರ್ಶನ್ ಫ್ಯಾನ್ಸ್ ಅಶ್ಲೀಲ ಸಂದೇಶ ಕಳುಹಿಸಿದ ಸಂಬಂಧ ನಿನ್ನೆ ನಟಿ ರಮ್ಯಾ ಬೆಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

Working hours: ಕೆಲಸದ ಅವಧಿ 12 ಗಂಟೆಗೆ ಏರಿಕೆ ಪ್ರಸ್ತಾವ ವಾಪಸ್‌ ಪಡೆದ ಸರಕಾರ

ಕೆಲಸದ ಅವಧಿ 12 ಗಂಟೆಗೆ ಏರಿಕೆ ಪ್ರಸ್ತಾವ ವಾಪಸ್‌ ಪಡೆದ ಸರಕಾರ

Karnataka Government: ಅಂತಿಮವಾಗಿ ಕರ್ನಾಟಕ ಸರ್ಕಾರ ಐಟಿ ವೃತ್ತಿಪರರಿಗೆ ಶುಭ ಸುದ್ದಿ ನೀಡಿದೆ. ಐಟಿ ಮತ್ತು ಐಟಿಇಎಸ್ ವಲಯದಲ್ಲಿ ದೈನಂದಿನ ಕೆಲಸದ ಸಮಯವನ್ನು ವಿಸ್ತರಿಸುವ ಪ್ರಸ್ತಾವನೆಯನ್ನು ಕರ್ನಾಟಕ ಸರ್ಕಾರ ಹಿಂತೆಗೆದುಕೊಂಡಿದೆ. ಈ ಬಗ್ಗೆ ಕೆಐಟಿಯು ಮಾಹಿತಿ ನೀಡಿದೆ.

Rahul Gandhi: ಆಗಸ್ಟ್‌ 4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ

ಆಗಸ್ಟ್‌ 4ರಂದು ಬೆಂಗಳೂರಿನಲ್ಲಿ ರಾಹುಲ್‌ ಗಾಂಧಿ ಪಾದಯಾತ್ರೆ

Bengaluru: ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹದೇವಪುರದಿಂದ ಚುನಾವಣಾ ಆಯೋಗದ ಕಚೇರಿವರೆಗೂ ಪಾದಯಾತ್ರೆ ನಡೆಯಲಿದೆ. ಈ ಪಾದಯಾತ್ರೆಯಲ್ಲಿ ರಾಹುಲ್ ಗಾಂಧಿ ಭಾಗವಹಿಸಲಿದ್ದಾರೆ.

Lokayukta Raid: ಐವರು ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ; ಭಾರಿ ಪ್ರಮಾಣದ ಅಕ್ರಮ ಆಸ್ತಿ ವಶ

ಐವರು ಅಧಿಕಾರಿಗಳ ಮೇಲೆ ಲೋಕಾ ದಾಳಿ; ಭಾರಿ ಪ್ರಮಾಣದ ಅಕ್ರಮ ಆಸ್ತಿ ವಶ

Karnataka: ಜುಲೈ 29ರಂದು ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪಾಸ್ತಿ ಪತ್ತೆಯಾಗಿದೆ. ಈ ಅಧಿಕಾರಿಗಳ ಮೇಲೆ ಸತತ ಭ್ರಷ್ಟಾಚಾರದ ಆಪಾದನೆಗಳಿದ್ದವು. ಲೋಕಾಯುಕ್ತ ಅಧಿಕಾರಿಗಳು ಇವರ ಸಂಪೂರ್ಣ ವಿವರ ಕಲೆಹಾಕಿದ್ದಾರೆ. ಯಾರ ಬಳಿ ಎಷ್ಟು ದಾಖಲೆರಹಿತ ಆಸ್ತಿಪಾಸ್ತಿ ಪತ್ತೆಯಾಗಿದೆ ಎಂಬ ವಿವರ ಇಲ್ಲಿದೆ.

Prajwal Revanna Case:  ಅತ್ಯಾಚಾರ ಪ್ರಕರಣದಲ್ಲಿ ಇಂದು ಪ್ರಜ್ವಲ್‌ ರೇವಣ್ಣ ಭವಿಷ್ಯ ಬರೆಯಲಿರುವ ಕೋರ್ಟ್

ಅತ್ಯಾಚಾರ ಪ್ರಕರಣ: ಇಂದು ಪ್ರಜ್ವಲ್‌ ರೇವಣ್ಣ ಭವಿಷ್ಯ ಬರೆಯಲಿರುವ ಕೋರ್ಟ್

ಸರಣಿ ಅತ್ಯಾಚಾರ ಆರೋಪ ಹೊತ್ತು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಬಂಧನಕ್ಕೊಳಗಾಗಿ 14 ತಿಂಗಳು ಕಳೆದಿವೆ. ಮೂರು ಅತ್ಯಾಚಾರ ಪ್ರಕರಣ, ಒಂದು ಲೈಂಗಿಕ ದೌರ್ಜನ್ಯ ಹೀಗೆ ಒಟ್ಟು ನಾಲ್ಕು ಪ್ರಕರಣಗಳ ಪೈಕಿ ಒಂದು ಪ್ರಕರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಬುಧವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಲಿದೆ.

Karnataka Weather: ಇಂದಿನ ಹವಾಮಾನ; ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

ಇಂದಿನ ಹವಾಮಾನ; ರಾಜ್ಯದ ಎಲ್ಲೆಲ್ಲಿ ಮಳೆಯಾಗಲಿದೆ?

Karnataka Rains: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 19°C ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Chikkaballapur news: ಬಾಗೇಪಲ್ಲಿಯಲ್ಲಿ ಸಂಭ್ರಮದ ನಾಗರ ಪಂಚಮಿ, ಹುತ್ತಕ್ಕೆ ಹಾಲೆರೆದು ಮಹಿಳೆಯರಿಂದ ಪೂಜೆ

ಸಂಭ್ರಮದ ನಾಗರ ಪಂಚಮಿ, ಹುತ್ತಕ್ಕೆ ಹಾಲೆರೆದು ಮಹಿಳೆಯರಿಂದ ಪೂಜೆ

ಮನೆಯಲ್ಲಿಯೇ ಸಿದ್ಧಪಡಿಸಿದ ತಂಬಿಟ್ಟಿನ ಉಂಡಿ, ಕಡಲೆ ಉಂಡಿ, ಶೇಂಗಾ ಉಂಡಿ, ಅಂಟ ಉಂಡಿ, ಎಳ್ಳು ಉಂಡಿ,ಬೆಲ್ಲ ನೆನೆಸಿದ ಅಕ್ಕಿ ಮೊದಲಾದ ಖಾದ್ಯ ಗಳನ್ನು ತಯಾರಿಸಿ ನೈವೇದ್ಯ ಮಾಡಿ ದೇವರಿಗೆ ಸಮರ್ಪಿಸಿ ಮಹಿಳೆಯರು ಶ್ರದ್ಧಾ ಭಕ್ತಿಯಿಂದ ಹುತ್ತಕ್ಕೆ ಕಲ್ಲಿನ ನಾಗಪ್ಪನಿಗೆ ಹಾಲೆರೆಯುವ ಮೂಲಕ ನಾಗರ ಪಂಚಮಿ ಹಬ್ಬ ಆಚರಿಸಿದರು.

Nagara Panchami: ನಾಗರಪಂಚಮಿ ಅಂಗವಾಗಿ ಹುತ್ತ ಮತ್ತು ಸುಬ್ರಹ್ಮಣ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ

ಹುತ್ತ ಮತ್ತು ಸುಬ್ರಹ್ಮಣ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ

ನಾಗ ಶ್ರೀಸುಬ್ರಹ್ಮಣ್ಯಸ್ವಾಮಿ ಒಂದು ಪ್ರತೀಕವಾಗಿದೆ. ಈದಿನ ನಾಗ ದೇವರಿಗೆ ಪೂಜಿಸಿದರೆ ಸಂತಾನ ಭಾಗ್ಯ, ವಿವಾಹ ದೋಷ ಪರಿಹಾರ, ರೋಗರುಜಿನ ನಿವಾರಣೆಯಾಗಿ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿ ದೊರೆಯಲಿದೆ ಎಂಬ ನಂಬಿಕೆ ಇದೆ. ಈ ನಿಟ್ಟಿನಲ್ಲಿ ಜಿಲ್ಲಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆಯಿತು.

ನಾಗರ ಪಂಚಮಿ 2025: ಈಶಾ ಸದ್ಗುರು ಸನ್ನಿಧಿಯ ನಾಗ ಮಂಟಪದಲ್ಲಿ ಪವಿತ್ರ ಅರ್ಪಣೆಗಳು ಮತ್ತು ಆಚರಣೆಗಳು

ನಾಗ ಮಂಟಪದಲ್ಲಿ ಪವಿತ್ರ ಅರ್ಪಣೆಗಳು ಮತ್ತು ಆಚರಣೆಗಳು

ನಾಗ ಪಂಚಮಿಯ ಶುಭ ಸಂದರ್ಭದಲ್ಲಿ, ಸದ್ಗುರು ಸನ್ನಿಧಿಯ ಸುತ್ತಲಿನ ಹಳ್ಳಿಗಳ ನೂರಾರು ಜನರು ಸದ್ಗುರುಗಳಿಂದ ಪ್ರತಿಷ್ಠಿತಗೊಂಡ ನಾಗ ಹಾಗೂ ಯೋಗೇಶ್ವರ ಲಿಂಗಕ್ಕೆ ಹಾಲನ್ನು ಸಮರ್ಪಿಸಿ ಅಭಿಷೇಕ ಮಾಡಿದರು. ತುಂಬಿದ ಹಾಲಿನ ಬಿಂದಿಗೆಗಳನ್ನು, ಮಕ್ಕಳಿಂದ ದೊಡ್ಡವ ರವರೆಗೆ ತಮ್ಮ ಹಳ್ಳಿಗಳಿಂದ ಶೋಭಾಯಾತ್ರೆಯ ಮೂಲಕ  ತಂದು, ಅದನ್ನು ನಾಗ ಹಾಗೂ ಯೋಗೇಶ್ವರ ಲಿಂಗದ ಸನ್ನಿಧಿಯಲ್ಲಿ ಸಮರ್ಪಿಸಿದರು.

ಬೆಂಗಳೂರಿನಲ್ಲಿ ಭಕ್ತಿಯ ಹೊಳೆ ಹರಿಸಿದ ಕೃಷ್ಣ- ಮ್ಯೂಸಿಕ್, ಬ್ಲಿಸ್ ಮತ್ತು ಬಿಯಾಂಡ್‌ ಕಾರ್ಯಕ್ರಮ

ಕೃಷ್ಣ- ಮ್ಯೂಸಿಕ್, ಬ್ಲಿಸ್ ಮತ್ತು ಬಿಯಾಂಡ್‌ ಕಾರ್ಯಕ್ರಮ

ಅಮೇಯಾ ಡಬ್ಲಿ ಅವರ 25 ಅದ್ಭುತ ಕಲಾವಿದರ ತಂಡ ಮೊದಲ ಬಾರಿಗೆ ಬೆಂಗಳೂರಿನಲ್ಲಿ ತಮ್ಮ ಅಭೂತಪೂರ್ವ ಸಂಗೀತ ಕಾರ್ಯಕ್ರಮದ ಮೂಲಕ ಶ್ರೀ ಕೃಷ್ಣ ಭಕ್ತರನ್ನು ಭಕ್ತಿಯ ಅಲೆಯಲ್ಲಿ ಮುಳು ಗಿಸಿದರು. ಸಂಗೀತ, ಭಕ್ತಿ ಮತ್ತು ಭಾವನೆಗಳನ್ನು ಸರಾಗವಾಗಿ ಬೆರೆಸುವುದಕ್ಕೆ ಹೆಸರುವಾಸಿಯಾಗಿದ್ದ ಅವರು ಕೇವಲ ಸಂಗೀತ ಕಚೇರಿಯನ್ನು ನೀಡಲಿಲ್ಲ

ಗಾರ್ಡನ್‌ ಸಿಟಿಗೆ ಹಸಿರು ತಂದ ಸತ್ತ್ವ ಗ್ರೂಪ್‌: 1,077 ಪ್ರೀಮಿಯಂ ಮನೆಗಳೊಂದಿಗೆ ಸತ್ತ್ವ ಅರ್ಬಾನಾ ಲೋಕಾರ್ಪಣೆ

1,077 ಪ್ರೀಮಿಯಂ ಮನೆಗಳೊಂದಿಗೆ ಸತ್ತ್ವ ಅರ್ಬಾನಾ ಲೋಕಾರ್ಪಣೆ

ಸತ್ತ್ವ ವಸಂತ ಸ್ಕೈ 16 ಎಕರೆ ವಿಸ್ತೀರ್ಣದಲ್ಲಿ 13 ಎಕರೆ ಮುಕ್ತ ಜಾಗವನ್ನು ಹೊಂದಿದೆ. ಈ ಅಭಿವೃದ್ಧಿ ಯು ಮೂರು ವಾಸ್ತುಶಿಲ್ಪದ ಗೋಪುರಗಳ ಒಳಗೆ ಇರಿಸಲಾಗಿರುವ 1,077 ಸೂಕ್ಷ್ಮವಾಗಿ ರಚಿಸಲಾದ ಅಪಾರ್ಟ್‌ಮೆಂಟ್‌ಗಳನ್ನು ಒಳಗೊಂಡಿದೆ. ಇದನ್ನು ಹಸಿರು ಓಯಸಿಸ್ ಆಗಿ ವಿನ್ಯಾಸಗೊಳಿಸಲಾಗಿದೆ. ಆಧುನಿಕ ನಗರ ಜೀವನವು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಸಹಬಾಳ್ವೆ ನಡೆಸುತ್ತದೆ.

ದಂಪತಿಗಳಲ್ಲಿ ಸಮಾನತೆ ಸೃಷ್ಟಿಸುವ  “ನೇಮ್‌ಪ್ಲೇಟ್‌” ಅಭಿಯಾನ ಪ್ರಾರಂಭಿಸಿದ ಸನ್‌ಫೀಸ್ಟ್‌ ಮಾರಿಲೈಟ್‌: ನಟಿ ಜ್ಯೋತಿಕ ಮೂಲಕ ಸಂದೇಶ

ಸನ್‌ಫೀಸ್ಟ್‌ ಮಾರಿಲೈಟ್‌ “ನೇಮ್‌ಪ್ಲೇಟ್‌” ಅಭಿಯಾನ ಪ್ರಾರಂಭ

ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಮೂರರಲ್ಲಿ ಎರಡಷ್ಟು ಮನೆಗಳಲ್ಲಿ ತಮ್ಮ ಮನೆಯ ನೇಮ್‌ಪ್ಲೇಟ್‌ಗಳಲ್ಲಿ ಗಂಡ-ಹೆಂಡತಿ ಇಬ್ಬರೂ ಹೆಸರೂ ಇದೆ, ಉಳಿದಂತೆ ಕೇವಲ ಗಂಡನ ಹೆಸರಷ್ಟೇ ಇದೆ. ಸುಖ ಸಂಸಾರ ಸಾಗಿಸುವ ಈ ಜೀವನದಲ್ಲಿ ಗಂಡ-ಹೆಂಡತಿ ಇಬ್ಬರೂ ಸಮಾನವಾಗಿ ಜವಾಬ್ದಾರಿ ಹೊತ್ತಿರುತ್ತಾರೆ. ಮನೆ ಮುಂಭಾಗದ ನೇಮ್‌ಪ್ಲೇಟ್ ನಂತಹ ಸಣ್ಣ ವಿಷಯಗಳಲ್ಲೂ ಸಮಾನತೆ ಹೊಂದದೇ ಹೋದರೆ ಹೇಗೆ? ಹೀಗಾಗಿ ಸನ್‌ಫೀಸ್ಟ್‌ ಮಾರಿ ಲೈಟ್‌ ಇಂತಹ ಸಣ್ಣ ವಿಷಯಗಳಲ್ಲೂ ದಂಪತಿಗಳ ನಡುವೆ ಪ್ರೀತಿ ಹೆಚ್ಚಿಸುವ ನಿಟ್ಟಿನಲ್ಲಿ ನಾವು ಈ ಉಪಕ್ರಮ ತಂದಿದ್ದೇವೆ

ಚರ್ಮ, ಕೂದಲು-ಕಸಿ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಒತ್ತಾಯ

ನಕಲಿ ತಜ್ಞರನ್ನು ನಿಯಂತ್ರಿಸುವಂತೆ ಒತ್ತಾಯ

ಐಎಡಿವಿಎಲ್-ಕೆಎನ್ನ ಅಂಟಿಕ್ವ್ಯಾಕರಿ ಮತ್ತು ಕಾನೂನು ವಿಭಾಗವು ಕರ್ನಾಟಕದಾದ್ಯಂತ 65 ಕ್ಕೂ ಅಧಿಕ ನಕಲಿ ಚರ್ಮ ಕ್ಲಿನಿಕ್ಗಳ ಬಗ್ಗೆ ಸ್ಪಷ್ಟ ದಾಖಲೆಗಳನ್ನು ಸಂಗ್ರಹಿಸಿದೆ. ಈ ಚರ್ಮ ಕ್ಲಿನಿಕ್‌ ಗಳನ್ನು, ದಂತಚಿಕಿತ್ಸಕರು, ಬ್ಯೂಟಿಷಿಯನ್‌ಗಳು, ಸ್ಥಳೀಯ ಧಾರಾವಾಹಿ ನಟಿಯರು ಹಾಗೂ ಕೇವಲ ಹತ್ತನೇ ಅಥವಾ ಹನ್ನೆರಡನೇ ತರಗತಿವರೆಗೆ ಶಿಕ್ಷಣ ಪಡೆದ ವ್ಯಕ್ತಿಗಳು ನಕಲಿ ಪ್ರಮಾಣಪತ್ರ ಗಳು ಹಾಗೂ ಮಾನ್ಯತೆ ಇಲ್ಲದ ಪದವಿಗಳನ್ನು ಬಳಸಿ ನಡೆಸುತ್ತಿದ್ದಾರೆ ಎಂದು ನಿಯೋಗ ಆರೋ ಪಿಸಿದೆ.

Mantralaya Raghavendra Swamy Matha: ಮಂತ್ರಾಲಯ ಹುಂಡಿ ಎಣಿಕೆ; ದಾಖಲೆಯ ಕಾಣಿಕೆ, ಚಿನ್ನ- ಬೆಳ್ಳಿ ಸಂಗ್ರಹ

ಮಂತ್ರಾಲಯ ಹುಂಡಿ ಎಣಿಕೆ; ದಾಖಲೆಯ ಕಾಣಿಕೆ, ಚಿನ್ನ- ಬೆಳ್ಳಿ ಸಂಗ್ರಹ

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಹುಂಡಿ ಎಣಿಕೆ ಕಾರ್ಯ ಮಾಡಲಾಗಿದ್ದು, ಒಟ್ಟು 5,46,06,555 ರೂ. ನಗದು ಕಾಣಿಕೆ ಮತ್ತು 127 ಗ್ರಾಂ ಚಿನ್ನ ಹಾಗೂ 1,820 ಗ್ರಾಂ ಬೆಳ್ಳಿ ಕಾಣಿಕೆಯನ್ನು ಭಕ್ತರು ಸಮರ್ಪಿಸಿದ್ದಾರೆ ಎಂದು ಶ್ರೀಮಠದ ವ್ಯವಸ್ಥಾಪಕ ಎಸ್.ಕೆ. ಶ್ರೀನಿವಾಸ ರಾವ್ ತಿಳಿಸಿದ್ದಾರೆ.

Bellary News: ಬಳ್ಳಾರಿಯಲ್ಲಿ ಕಸದ ವಾಹನ ಹರಿದು 3 ವರ್ಷದ ಬಾಲಕ ಸಾವು

ಬಳ್ಳಾರಿಯಲ್ಲಿ ಕಸದ ವಾಹನ ಹರಿದು 3 ವರ್ಷದ ಬಾಲಕ ಸಾವು

Bellary News: ಬಳ್ಳಾರಿಯ ಬಾಪೂಜಿ ನಗರದಲ್ಲಿ ಘಟನೆ ನಡೆದಿದೆ. ರಸ್ತೆ ಬದಿ ಆಟ ಆಡುತ್ತಿದ್ದ ಬಾಲಕನ ತಲೆ ಮೇಲೆ ವಾಹನ ಹರಿದು ದುರಂತ ನಡೆದಿದೆ. ಮಗುವನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪಾಲಿಕೆ ಮೇಯರ್ ನಂದೀಶ್ ಹಾಗೂ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ACP Daya Nayak: ಸಹಾಯಕ ಪೊಲೀಸ್ ಆಯುಕ್ತರಾಗಿ ಬಡ್ತಿ ಪಡೆದ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್

ಎಸಿಪಿಯಾಗಿ ಬಡ್ತಿ ಪಡೆದ ದಯಾ ನಾಯಕ್

ಮೂಲತಃ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಎಣ್ಣೆಹೊಳೆ ಗ್ರಾಮದವರಾದ ಎನ್‌ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಅವರಿಗೆ ಸಹಾಯಕ ಪೊಲೀಸ್ ಆಯುಕ್ತರನ್ನಾಗಿ ಬಡ್ತಿ ನೀಡಲಾಗಿದೆ. ಮಹಾರಾಷ್ಟ್ರ ಗೃಹ ಇಲಾಖೆಯ ಆದೇಶದ ಮೇರೆಗೆ ಹಿರಿಯ ಇನ್ಸ್‌ಪೆಕ್ಟರ್‌ಗಳಾದ ಜೀವನ್ ಖರತ್, ದೀಪಕ್ ದಳವಿ ಮತ್ತು ಪಾಂಡುರಂಗ ಪವಾರ್ ಅವರಿಗೂ ಎಸಿಪಿಯನ್ನಾಗಿ ಮಾಡಲಾಗಿದೆ.

ಉಚಿತ ನೇತ್ರ ತಪಾಸಣೆ ಶಿಬಿರ

ಉಚಿತ ನೇತ್ರ ತಪಾಸಣೆ ಶಿಬಿರ

ಕಣ್ಣು ಮಾನವನ ಅತೀ ಸೂಕ್ಷ್ಮವಾದ ಅಂಗ. ಇದನ್ನು ಅತಿ ಜಾಗರೂಕತೆಯಿಂದ ಕಾಪಾಡಿ ಕೊಳ್ಳಬೇಕು. ನಮ್ಮ ಸೇವಾ ಸಂಸ್ಥೆಯು ಸತತ 27 ವರ್ಷಗಳಿಂದ ನಿರಂತರವಾಗಿ ವಿವಿಧ ಕಾರ್ಯ ಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. 8 ಲಕ್ಷ ಕುಟುಂಬಗಳಿಗೆ ಸಾಮಾಜಿಕವಾಗಿ ಸ್ಪಂದಿಸಿದ್ದೇವೆ. ಉಚಿತ ನೇತ್ರ ತಪಾಸಣ ಶಿಬಿರ ಮಾಡಿ ಸಾವಿರಾರು ಮಂದಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗಿದೆ.

KSRTC Bus: ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿಯಾಗಿಲ್ಲ: ನಿಗಮ ಸ್ಪಷ್ಟನೆ

ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿಯಾಗಿಲ್ಲ: ನಿಗಮ ಸ್ಪಷ್ಟನೆ

Luggage Guidelines: ಕೆಎಸ್‌ಆರ್‌ಟಿಸಿಯಲ್ಲಿ ನೂತನ ಲಗೇಜ್ ನಿಯಮ ಜಾರಿ ಎಂದು ಸಾಮಾಜಿಕ‌ ಜಾಲತಾಣ ಮತ್ತು ಕೆಲವೊಂದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಹೀಗಾಗಿ ಕೆಎಸ್‌ಆರ್‌ಟಿಸಿ ನಿಗಮದ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. 2022ರ ಅ. 28 ನಂತರ ಯಾವುದೇ ಹೊಸ ಲಗೇಜ್ ನಿಯಮ / ಸುತ್ತೋಲೆಯನ್ನು ನಿಗಮದಲ್ಲಿ ಜಾರಿಗೆ ತಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Karnataka Rains: ಹವಾಮಾನ ವರದಿ; ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ!

ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ!

Weather Forecast: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 27°C ಮತ್ತು 19°C ಇರುವ ಸಾಧ್ಯತೆ ಇದೆ.

DK Shivakumar: ಶಾಸಕರ ಜತೆ ಸಿಎಂ ಸಭೆ; ಅದರಲ್ಲಿ ತಪ್ಪೇನಿದೆ ಎಂದ ಡಿ.ಕೆ.ಶಿವಕುಮಾರ್

ಶಾಸಕರ ಜತೆ ಸಿಎಂ ಸಭೆ; ಅದರಲ್ಲಿ ತಪ್ಪೇನಿದೆ ಎಂದ ಡಿ.ಕೆ.ಶಿವಕುಮಾರ್

DK Shivakumar: ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಡಿಸಿಎಂ ಡಿಕೆಶಿ ಅವರು ಪ್ರತಿಕ್ರಿಯಿಸಿ, ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ ಎಂದು ಟೀಕಿಸಿದ್ದಾರೆ.

Actor Pratham: ಫಿಲ್ಮ್‌ ಚೇಂಬರ್‌ ಎದುರು ಉಪವಾಸ ಸತ್ಯಾಗ್ರಹ ಆರಂಭಿಸಿದ ನಟ ಪ್ರಥಮ್‌; ದರ್ಶನ್‌ ಸ್ಪಷ್ಟನೆಗೆ ಒತ್ತಾಯ

ಫಿಲ್ಮ್‌ ಚೇಂಬರ್‌ ಎದುರು ಉಪವಾಸ ಸತ್ಯಾಗ್ರಹ ಕುಳಿತ ನಟ ಪ್ರಥಮ್‌

Actor Pratham: ತಮ್ಮ ಮೇಲೆ ಹಲ್ಲೆಗೆ ಯತ್ನ ಹಾಗೂ ಕೊಲೆ ಬೆದರಿಕೆಯ ಹಿನ್ನೆಲೆಯಲ್ಲಿ ನಟ ಪ್ರಥಮ್ ದೂರು ನೀಡಿದ್ದರು. ಬೇಕರಿ ರಘು ಮತ್ತು ಗ್ಯಾಂಗ್ ವಿರುದ್ಧ ದೂರು ಸಲ್ಲಿಕೆಯಾಗಿತ್ತು. ನನ್ನ ಮೇಲೆ ನಡೆದಿರುವ ಹಲ್ಲೆಗೆ ನಟ ದರ್ಶನ್‌ ಸ್ಪಷ್ಟನೆ ನೀಡಬೇಕು. ನನಗೆ ಹೆಚ್ಚು ಕಡಿಮೆಯಾದರೆ ನೀವೇ ಹೊಣೆ ಎಂದು ನಟ ದರ್ಶನ್‌ಗೆ ಪ್ರಥಮ್‌ ಎಚ್ಚರಿಕೆ ನೀಡಿದ್ದಾರೆ.

Sridevi Byrappa: ತಮ್ಮ ಕುಟುಂಬದ ಮಹಿಳೆಗೆ ಅನ್ಯಾಯವಾದಾಗ ನೀವು ಏನು ಮಾಡುತ್ತಿದ್ರಿ?; ರಮ್ಯಾ ಪರ ನಿಂತ ನಟ ಶಿವಣ್ಣ, ವಿನಯ್‌ಗೆ ಯುವ ಪತ್ನಿ ಶ್ರೀದೇವಿ ಪ್ರಶ್ನೆ

ರಮ್ಯಾ ಪರ ನಿಂತ ಶಿವಣ್ಣ, ವಿನಯ್‌ ವಿರುದ್ಧ ಯುವ ಪತ್ನಿ ಶ್ರೀದೇವಿ ಅಸಮಾಧಾನ!

Sridevi Byrappa: ಅಸಭ್ಯ ಕಮೆಂಟ್‌ ಮಾಡಿದ್ದರಿಂದ ದರ್ಶನ್‌ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ದೂರು ನೀಡಿದ್ದರು. ಈ ವಿಚಾರದಲ್ಲಿ ರಮ್ಯಾಗೆ ನಟ ಶಿವರಾಜ್‌ ಕುಮಾರ್‌, ವಿನಯ್‌ ರಾಜ್‌ಕುಮಾರ್‌ ಬೆಂಬಲ ಸೂಚಿಸಿದ್ದರು. ತನಗೆ ಅನ್ಯಾಯವಾದಾಗ ಯಾರೂ ದನಿಯೆತ್ತಲಿಲ್ಲ. ಈ ನಟಿ ರಮ್ಯಾಗೆ ಬೆಂಬಲ ಸೂಚಿಸಿದ್ದಾರೆ ಎಂದು ಯುವ ಪತ್ನಿ ಶ್ರೀದೇವಿ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

Loading...