ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಷಡ್ಯಂತ್ರ ಬಯಲು, 10 ಕಡೆ ಬೃಹತ್ ಕಾರ್ಯಾಚರಣೆ: ರಾಮನಗರ ನಕಲಿ ಔಷಧ ಜಾಲ, 6 ರಾಜ್ಯಗಳಲ್ಲಿ ಎಸ್‌ಐಟಿ ದಾಳಿ

ರಾಮನಗರ ನಕಲಿ ಔಷಧ ಜಾಲ, 6 ರಾಜ್ಯಗಳಲ್ಲಿ ಎಸ್‌ಐಟಿ ದಾಳಿ

ಎಸ್‌ಐಟಿ ಮತ್ತು ಔಷಧ ನಿಯಂತ್ರಣ ಇಲಾಖೆಯ ಸುಮಾರು 80 ರಿಂದ 100 ಅಧಿಕಾರಿಗಳ ತಂಡವು ಕರ್ನಾಟಕ, ಹಿಮಾಚಲ ಪ್ರದೇಶ, ಹರಿಯಾಣ, ತಮಿಳುನಾಡು, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ದಾಳಿ ನಡೆಸಿದೆ. ನಕಲಿ ಫಾಮ್‌ಗಳ ಕಚೇರಿಗಳು, ಔಷಧ ಸಂಗ್ರಹಣಾ ಕೇಂದ್ರಗಳು ಮತ್ತು ಕಿಂಗ್‌ಪಿನ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಮಹತ್ವದ ದಾಖಲೆ ವಶಪಡಿಸಿಕೊಳ್ಳಲಾಗಿದೆ.

ಅಕ್ರಮ ಬಂದೂಕುಗಳ ವಾಪಸಾತಿಗೆ ಗಡುವು: ನ.1ರೊಳಗೆ ಒಪ್ಪಿಸಲು ಸಿಎಂ ಸೂಚನೆ

ನ.1ರೊಳಗೆ ಅಕ್ರಮ ಬಂದೂಕುಗಳ ವಾಪಸಾತಿಗೆ ಗಡುವು

ಬಂದೂಕುಗಳ ನಿಯಂತ್ರಣ ಮತ್ತು ಅಕ್ರಮ ಶಸ್ತ್ರಾಸ್ತ್ರಗಳ ಬಳಕೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅರಣ್ಯದ ಅಂಚಿನಲ್ಲಿ ವಾಸಿಸುವ ಜನರು ತಮ್ಮ ಬಳಿಯಿರುವ ಪರವಾನಗಿ ರಹಿತ ಶಸ್ತ್ರಾಸ್ತ್ರಗಳನ್ನು ನ.1ರೊಳಗೆ ಒಪ್ಪಿಸಬೇಕು. ಇಲ್ಲ ದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸತೀಶ್‌ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ; ವಿಜಯ್‌ ಮಲ್ಯ ಆಕ್ರೋಶ

ಸತೀಶ್‌ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ; ವಿಜಯ್‌ ಮಲ್ಯ ಆಕ್ರೋಶ

ದೇಶಿ ವಿನಿಮಯ ನಿರ್ವಹಣಾ ಕಾಯ್ದೆ(ಫೆಮಾ) ಉಲ್ಲಂಘಸಿ ವಿದೇಶದಲ್ಲಿ ಅಕ್ರಮವಾಗಿ ಹೂಡಿಕೆ ಮಾಡಿದ ಆರೋಪದಡಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ಬುಧವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ಉದ್ಯಮಿ ವಿಜಯ್‌ ಮಲ್ಯ ಸತೀಶ್‌ ಜಾರಕಿಹೊಳಿ ಪರ ಮಾತನಾಡಿದ್ದಾರೆ.

ಉಪಲೋಕಾಯುಕ್ತರಿಂದ ಸ್ವಪ್ರೇರಿತ ದೂರು: ವಿದ್ಯಾರ್ಥಿಗಳಿಗೆ ಕಳಪೆ ಶೂ, ಲೋಕಾ ತನಿಖೆಗೆ ಆದೇಶ

ವಿದ್ಯಾರ್ಥಿಗಳಿಗೆ ಕಳಪೆ ಶೂ, ಲೋಕಾ ತನಿಖೆಗೆ ಆದೇಶ

ಹಿಂದಿನ ವರ್ಷಗಳ ಪೂರೈಕೆಗೆ ಹೋಲಿಸಿದರೆ ಈ ಬಾರಿ ಖರೀದಿಸಲಾದ ಪಾದರಕ್ಷೆಗಳು ಕಳಪೆಯಾಗಿದ್ದು, ಖರೀದಿ ಪ್ರಕ್ರಿಯೆ ಹಾಗೂ ಮೇಲ್ವಿಚಾರಣೆಯಲ್ಲಿ ವ್ಯವಸ್ಥಿತ ಭ್ರಷ್ಟಾಚಾರ ನಡೆದಿರುವ ಆರೋಪಗಳು ಕೇಳಿ ಬಂದಿದ್ದವು. ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವು ದರಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಮುಂದುವರಿದಿರುವುದನ್ನು ನ್ಯಾಯಮೂರ್ತಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.

KPSC Recruitment Scam: ಮುಗಿಯದ ಕೆಪಿಎಸ್‌ಸಿ ಬಾನಗಡಿ 10 ಮಂದಿ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:‌ ಆರ್‌ಡಿಪಿಆರ್ ಎಇಇ ನೇಮಕದಲ್ಲೂ ಅಕ್ರಮ

ಆರ್‌ಡಿಪಿಆರ್ ಎಇಇ ನೇಮಕದಲ್ಲೂ ಅಕ್ರಮ

ತನಿಖೆಯ ಸಂದರ್ಭದಲ್ಲಿ ಮೂವರು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಾವಳಿ ಲಭ್ಯವಾಗ ದಿರುವುದು ಕೂಡ ಗಮನಕ್ಕೆ ಬಂದಿತ್ತು. ಪ್ರಕರಣದ ಮುಂದಿನ ತನಿಖೆಗಾಗಿ ಕೆಪಿಎಸ್‌ಸಿ ಆಂತರಿಕ ಸಮಿತಿ ರಚಿಸಿತ್ತು. ಕೆಪಿಎಸ್‌ಸಿ ಸದಸ್ಯ ಶಾಂತ ಹೊಸಮನಿ ನೇತೃತ್ವದಲ್ಲಿ ಸಮಿತಿ ರಚನೆಯಾಗಿತ್ತು. ಬಳಿಕ ವಿಜಯ್‌ಕುಮಾರ್ ನೇತೃತ್ವದಲ್ಲಿ ಮತ್ತೊಂದು ಉಪಸಮಿತಿ ರಚಿಸಿ, 24 ಅಭ್ಯರ್ಥಿಗಳ ಒಎಂಆರ್ ಶೀಟ್‌ಗಳು, ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಯಿತು

Chikkaballapur News: ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಕೆ: ಡಾ.ನವೀನ್ ಭಟ್

44 ಗ್ರಾಮಗಳಲ್ಲಿ ನೀರಿನ ಸಮಸ್ಯೆ; 104 ಗ್ರಾಮಗಳಿಗೆ ಮುನ್ನೆಚ್ಚರಿಕೆ

ಪ್ರಸ್ತುತ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸ ಲಾಗುತ್ತಿದೆ. ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ತ್ವರಿತವಾಗಿ ದೂರು ಸ್ವೀಕರಿಸಿ ಪರಿಹರಿಸಲು 8884777235 ಸಹಾಯವಾಣಿ ಆರಂಭಿಸಲಾಗಿದೆ. ಇದುವರೆಗೆ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ, ನೀರಿನ ಪೈಪ್‌ಲೈನ್ ಹಾಗೂ ಜಲಜೀವನ್ ಮಿಷನ್ ಕಾಮಗಾರಿಗಳ ವಿಳಂಬಕ್ಕೆ ಸಂಬಂಧಿಸಿದಂತೆ 116 ಕರೆಗಳು ಬಂದಿದ್ದು, ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಲ್ಪಿಸ ಲಾಗಿದೆ

PrajaSeva: ಸೆ.12ರಂದು ಬಶೆಟ್ಟಹಳ್ಳಿಯಲ್ಲಿ ಪ್ರಜಾ ಸೇವಾ ಆಂದೋಲನ: ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಗಗನ ಸಿಂಧು ಮನವಿ

ಇಂದು ಬಶೆಟ್ಟಹಳ್ಳಿಯಲ್ಲಿ ಪ್ರಜಾ ಸೇವಾ ಆಂದೋಲನ

ಸೆ.12ರಂದು ಬಶೇಟಹಳ್ಳಿ ಕೆಎನ್‌ಎಸ್ ಶಾಲೆಯಲ್ಲಿ ಪ್ರಜಾ ಸೇವಾ ಆಂದೋಲನ ನಡೆಯಲಿದೆ. ಬಶೆಟ್ಟ ಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರು ತಮ್ಮ ಸಮಸ್ಯೆಗಳು ಮತ್ತು ಅಹವಾಲು ಗಳನ್ನು ಕಾರ್ಯಕ್ರಮದಲ್ಲಿ ಸಲ್ಲಿಸಬಹುದಾಗಿದೆ. ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿ, ಸಮಸ್ಯೆಗಳಿಗೆ ಸ್ಪಂದಿಸಲಿದ್ದಾರೆ

K H Puttaswamy Gowda: ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಆದ್ಯತೆ; ಶೀಘ್ರದಲ್ಲೇ ಮತ್ತೆ 100 ಕೋಟಿ ರೂಪಾಯಿ ಅನುದಾನ

ಮೂರು ವರ್ಷಗಳಲ್ಲಿ 600 ಕೋ ರೂ ಅನುದಾನ: ಶಾಸಕ ಪುಟ್ಟಸ್ವಾಮಿಗೌಡ

ಗ್ರಾಮೀಣ ಪ್ರದೇಶಗಳ ರಸ್ತೆ, ಚರಂಡಿ, ಶಾಲಾ ಹಾಗೂ ಅಂಗನವಾಡಿ ಕೊಠಡಿಗಳ ನಿರ್ಮಾಣ, ಸೇತುವೆ, ಚೆಕ್‌ಡ್ಯಾಂ, ಶುದ್ಧ ಕುಡಿಯುವ ನೀರಿನ ಘಟಕ ಸೇರಿದಂತೆ ಹಲವು ಜನೋಪಯೋಗಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಆದರೆ ಕೆಲವರಿಗೆ ತಾಲೂಕಿನಲ್ಲಾಗಿರುವ ಅಭಿವೃದ್ಧಿ ಕಾಮಗಾರಿಗಳು ಕಾಣಿಸುತ್ತಿಲ್ಲ ಎಂದು ತಮ್ಮ ರಾಜಕೀಯ ವಿರೋಧಿಗಳ ವಿರುದ್ಧ ವ್ಯಂಗ್ಯವಾಡಿದರು

Farmers Dharna: ಜಿಲ್ಲಾಡಳಿತದಿಂದ ಭರವಸೆ; ಮಾತು ತಪ್ಪಿದರೆ ಮತ್ತೆ ಹೋರಾಟದ ಎಚ್ಚರಿಕೆ ನೀಡಿದ ಪ್ರಗತಿಪರ ಸಂಘಟನೆಗಳ ಮುಖಂಡರು

90ನೇ ದಿನಕ್ಕೆ ಕಾಲಿಟ್ಟ ದಲಿತ ರೈತರ ಧರಣಿ

ಅರಣ್ಯ ಇಲಾಖೆಯವರಿಗೆ 1991-92 ರಲ್ಲಿ ಕಂದಾಯ ಇಲಾಖೆ ಒಂದಷ್ಟು ಭೂಮಿಯನ್ನು ವರ್ಗಾವಣೆ ಮಾಡಿದ್ದಾರೆ ಎಂದು ಹೇಳಿ ವಿನಾಕಾರಣ  ಗೊಂದಲ ಸೃಷ್ಟಿಯಾಗಿದೆ. ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಸರಿಯಾದ ದಾಖಲೆಯನ್ನು ಪರಿಶೀಲಿಸದೆ ಗೊಂದಲ ಸೃಷ್ಟಿಸಿ ದಲಿತರಿಗೆ ತೊಂದರೆ ಕೊಡುತ್ತಿದ್ದಾರೆ.

Shidlaghatta News: ಶಿಡ್ಲಘಟ್ಟ ನಗರದಲ್ಲಿ ಪಿಎಸ್ಐ ಸುನಿಲ್ ನೇತೃತ್ವದಲ್ಲಿ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ

ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ಕಠಿಣ ಕ್ರಮ

ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಶಿಡ್ಲಘಟ್ಟ ನಗರ ಠಾಣೆ ಪೊಲೀಸರು, ನಗರದ ವಿವಿಧೆಡೆ ವಾಹನಗಳನ್ನು ತಡೆದು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದರು. ನಗರ ಠಾಣೆ ಪಿಎಸ್ಐ ಸುನಿಲ್ ನೇತೃತ್ವದಲ್ಲಿ ಸಿಬ್ಬಂದಿ ಪ್ರಮುಖ ರಸ್ತೆಗಳು ಹಾಗೂ ವಾಹನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ವಾಹನ ಚಾಲಕರನ್ನು ಪರಿಶೀಲಿಸಿದರು.

ಗಮನ ಸೆಳೆಯುತ್ತಿವೆ ಗಣೇಶ್‌ ಮೂರ್ತಿಗಳು

ಗಮನ ಸೆಳೆಯುತ್ತಿವೆ ಗಣೇಶ್‌ ಮೂರ್ತಿಗಳು

ಬೈಲಹೊಂಗಲದಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಮನೆಗಳಲ್ಲಿ ಪ್ರತಿಷ್ಠಾಪಿಸಲು ಸಿದ್ಧವಾಗಿರುವ ವೈವಿಧ್ಯಮಯ ಗಣೇಶ ಮೂರ್ತಿಗಳು ಹಬ್ಬದ ಕಳೆ ಹೆಚ್ಚಿಸಿವೆ. ನಗರದ ಕಲಾವಿದ ಆನಂದ ಬಡಿಗೇರ ಅವರ ಕಲಾಕುಂಚದಲ್ಲಿ ಮೂಡಿಬಂದಿರುವ ಈ ವಿಶಿಷ್ಟ ಗಣೇಶ ಮೂರ್ತಿಗಳು ಕಲಾಭಿಮಾನಿಗಳು ಹಾಗೂ ಭಕ್ತರನ್ನು ಆಕರ್ಷಿಸುತ್ತಿವೆ.

ತುಮಕೂರು ಎಸ್‌ಐಟಿಯಲ್ಲಿ ನಾಳೆ 17ನೇ ಪದವಿ ಪ್ರದಾನ: 1,400ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ

ನಾಳೆ ತುಮಕೂರಿನ ಎಸ್‌ಐಟಿಯಲ್ಲಿ 17ನೇ ಪದವಿ ಪ್ರದಾನ ಸಮಾರಂಭ

Tumkur News: ತುಮಕೂರಿನ ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸೆ. 12ರಂದು ಬೆಳಗ್ಗೆ 11ಕ್ಕೆ 17ನೇ ಪದವಿ ಪ್ರದಾನ ಸಮಾರಂಭ ಅತ್ಯಂತ ವಿಜೃಂಭಣೆಯಿಂದ ಏರ್ಪಾಡಾಗಿದ್ದು, ವಿವಿಧ ವಿಭಾಗಗಳ ಸುಮಾರು 1,400ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಶ್ರೀ ಸಿದ್ಧಗಂಗಾ ಎಜ್ಯುಕೇಷನ್ ಸೊಸೈಟಿಯ ಜಂಟಿ ಕಾರ್ಯದರ್ಶಿ ಡಾ. ಶಿವಕುಮಾರಯ್ಯ ತಿಳಿಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಎಕ್ಸ್‌ʼಪ್ರೆಸ್‌ ರೈಲಿಗಿಂತಲೂ ವೇಗವಾಗಿ ತಲುಪಿದ ಕಾರು !

ದೆಹಲಿಯಿಂದ ಬೆಂಗಳೂರಿಗೆ ಎಕ್ಸ್‌ʼಪ್ರೆಸ್‌ ರೈಲಿಗಿಂತಲೂ ತಲುಪಿದ ಕಾರು !

ಈ ಇಬ್ಬರೂ ಪ್ರಯಾಣಿಸಿದ್ದು ದೆಹಲಿಯಿಂದ ಬೆಂಗಳೂರಿಗೆ. ಒಟ್ಟು 2,075 ಕಿಲೋ ಮೀಟರ್‌ಅಂತರದ ಪ್ರಯಾಣ ಅದು. ಈ ದೂರವನ್ನು ಈ ಈರ್ವರೂ ಚಾಲಕರು ಕೇವಲ 29 ಗಂಟೆಗಳಲ್ಲಿ ಕ್ರಮಿಸಿದ್ದು ನಿಬ್ಬೆರಗಾಗುವ ದಾಖಲೆಯೇ ಹೌದು. ಒಂದು ದೇಶದಲ್ಲಿ ಕಾರಿನಲ್ಲಿ ಅತೀ ದೀರ್ಘದ ನಿರಂತರ ಪ್ರಯಾಣ ಕ್ಕಾಗಿ ಕೇಶವಪ್ರಸಾದ್ ಮುಳಿಯ ಮತ್ತು ಡಾ. ಅನಿಲ್ ಬೈಪಾಡಿ ತ್ತಾಯ ಅವರಿಗೆ ಜಂಟಿಯಾಗಿ ವಿಶ್ವದಾಖಲೆಯ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರಧಾನ ಮಾಡಲಾಯಿತು.

ನೀರನ್ನು ಹೇಗೆ, ಯಾವಾಗ ಸೇವಿಸಬೇಕು? ಸರಿಯಾದ ವಿಧಾನ ತಿಳಿಸಿದ ರಾಘವೇಶ್ವರ ಭಾರತೀ ಶ್ರೀ

ಸುಲಭದ ದಾರಿ ಬಿಟ್ಟು ಸರಿಯಾದ ದಾರಿ ಆರಿಸಿಕೊಳ್ಳಿ: ರಾಘವೇಶ್ವರ ಶ್ರೀ

Sri Raghaveshwara Bharathi Swamiji: ಜೀವನದಲ್ಲಿ ನಾವು ಸುಲುಭದ ದಾರಿ ಹುಡುಕಬಾರದು. ಸರಿಯಾದ ದಾರಿಯನ್ನೇ ಆರಿಸಿಕೊಳ್ಳಬೇಕು. ಶಾಸ್ತ್ರಗಳು ಬೋಧಿಸಿರುವುದನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು. ಪ್ರಯತ್ನಪೂರ್ವಕವಾಗಿ ನಾವು ಜೀವನ ಪದ್ಧತಿಗಳನ್ನು ಸರಿಪಡಿಸಿಕೊಳ್ಳಬೇಕು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ತಿಳಿಸಿದ್ದಾರೆ.

ಸರ್ಕಾರದ ಪ್ರಕರಣಗಳಲ್ಲಿ ಸಮರ್ಥ ವಾದ ಮಂಡನೆಗೆ ಒತ್ತು ನೀಡಿ; ಪ್ರಾಸಿಕ್ಯೂಷನ್‌ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

ಸಮರ್ಥ ವಾದ ಮಂಡನೆಗೆ ಒತ್ತು ನೀಡಿ: ಪ್ರಿಯಾಂಕ್ ಖರ್ಗೆ

Priyank Kharge: ಸರ್ಕಾರದ ಪರವಾಗಿ ನ್ಯಾಯಾಲಯಗಳಲ್ಲಿ ವಾದಿಸುವ ವಕೀಲರಿಗೆ ಅಗತ್ಯ ದಾಖಲೆಗಳು ಮತ್ತು ಮಾಹಿತಿ ಸಮಯಕ್ಕೆ ಸರಿಯಾಗಿ ತಲುಪುವುದು, ಇಲಾಖೆಗಳ ನಡುವೆ ನಿರಂತರ ಸಮನ್ವಯ, ಪ್ರಕರಣಗಳ ಪರಿಣಾಮಕಾರಿ ಮೇಲ್ವಿಚಾರಣೆ ಹಾಗೂ ತಂತ್ರಜ್ಞಾನದ ಸಮರ್ಪಕ ಬಳಕೆ ಈ ನಾಲ್ಕೂ ಅಂಶಗಳಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಸರ್ಕಾರದ ಪ್ರಕರಣಗಳ ನಿರ್ವಹಣೆಯನ್ನು ಮತ್ತಷ್ಟು ಬಲಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Lokayukta Raid: ಎರಡೂವರೆ ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ; ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಲೋಕಾಯುಕ್ತ ಬಲೆಗೆ

ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಲೋಕಾಯುಕ್ತ ಬಲೆಗೆ

Tumkur News: ಅರಣ್ಯ ಇಲಾಖೆಯಿಂದ ಮಂಜೂರಾದ ಕಾಮಗಾರಿ ಕೆಲಸ ಮಾಡಲು ಕಾಂಟ್ರಾಕ್ಟರ್‌ ಒಬ್ಬರಿಂದ 2,60,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ಹಣ ಪಡೆಯುತ್ತಿದ್ದ ಗುಬ್ಬಿ ಪ್ರಾದೇಶಿಕ ವಲಯದ ಅರಣ್ಯಾಧಿಕಾರಿ ಸತೀಶ್‌ಚಂದ್ರ ಕೆ.ಎಸ್., ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಅಕ್ರಮ ಬಂದೂಕು, ಶಸ್ತ್ರಾಸ್ತ್ರ ನವೆಂಬರ್ 1ರೊಳಗೆ ಸರ್ಕಾರಕ್ಕೆ ಒಪ್ಪಿಸಿ: ಡಿ.ಕೆ. ಶಿವಕುಮಾರ್ ಕರೆ

ಅಕ್ರಮ ಬಂದೂಕು ಶಸ್ತ್ರಾಸ್ತ್ರಗಳನ್ನು ನ. 1ರೊಳಗೆ ಒಪ್ಪಿಸಿ: ಸಿಎಂ

CM DK Shivakumar: ಅರಣ್ಯ‌ ಇಲಾಖೆಯ ಸಿಬ್ಬಂದಿಯ ಭತ್ಯೆಯ ವಿಚಾರವಾಗಿ ಸಚಿವರ ಮನವಿಯ ಬಗ್ಗೆ ಆಲೋಚಿಸಲಾಗುವುದು. ಆರ್ಥಿಕ ಇಲಾಖೆಯ ಬಳಿ ಚರ್ಚೆ ನಡೆಸಿ ಪೊಲೀಸ್ ಇಲಾಖೆಯನ್ನೂ ಒಳಗೊಂಡಂತೆ ಒಟ್ಟಾಗಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಸೆಪ್ಟೆಂಬರ್‌ 21ರಿಂದ ವಿಶೇಷ ವಿಧಾನಮಂಡಲ ಅಧಿವೇಶನ ಕರೆದ ರಾಜ್ಯ ಸರ್ಕಾರ; ಕಸ್ತೂರಿರಂಗನ್ ವರದಿಯ ಸಾಧಕ-ಬಾಧಕ ಬಗ್ಗೆ ಚರ್ಚೆ

ಕಸ್ತೂರಿರಂಗನ್ ವರದಿ: ರೈತರ ಹಿತವೇ ಮೊದಲ ಆದ್ಯತೆ ಎಂದ ಸಿಎಂ

Kasturirangan Report: ಸೆಪ್ಟೆಂಬರ್‌ 21ರಿಂದ 23ರವರೆಗೆ ಕಸ್ತೂರಿ ರಂಗನ್‌ ವರದಿ ವಿಚಾರವಾಗಿ ಚರ್ಚೆ ನಡೆಸಲು ವಿಶೇಷ ವಿಧಾನಮಂಡಲ ಅಧಿವೇಶನ ಕರೆಯಲಾಗಿದ್ದು, ರೈತರ ಹಿತದೃಷ್ಟಿಯಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಅಸಮಾಧಾನದಿಂದಲೇ ಸಿಎಂ ಹುದ್ದೆಗೆ ರಾಜೀನಾಮೆ ಕೊಟ್ರ ಸಿದ್ದರಾಮಯ್ಯ? 100 ದಿನಗಳ ಬಳಿಕ ರಹಸ್ಯ ಬಿಚ್ಚಿಟ್ರು ಡಿಸಿಎಂ ಡಾ.ಜಿ. ಪರಮೇಶ್ವರ

ಅಸಮಾಧಾನವಿದ್ದಿದ್ದರೆ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಿರಲಿಲ್ಲ: ಡಿಸಿಎಂ

Dr G Parameshwara: ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುವುದಾಗಿ ಸಿದ್ದರಾಮಯ್ಯ ಮೊದಲಿನಿಂದಲೂ ಹೇಳುತ್ತ ಬಂದಿದ್ದರು. ಅದರಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇದು ಮುಗಿದು ಹೋದ ಅಧ್ಯಾಯ. ಈ ವಿಚಾರವಾಗಿ ಪುನಃ ಪುನಃ ಚರ್ಚೆ ಮಾಡುವುದರಲ್ಲಿ ಅರ್ಥವಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ತಿಳಿಸಿದ್ದಾರೆ.

105 ವರ್ಷದ ತಾಯಿಯನ್ನು ನೋಡಲು ಬೆಟ್ಟ, ಗುಡ್ಡ ದಾಟಿ ಬಂದ 85 ವರ್ಷದ ಮಗಳು; ಎರಡು ದಶಕಗಳ ಬಳಿಕ ಕರುಳ ಬಳ್ಳಿಯ ಮಿಲನ

ಎರಡು ದಶಕಗಳ ಬಳಿಕ ಕರುಳ ಬಳ್ಳಿಯ ಮಿಲನ

ಕರುಳು ಬಳ್ಳಿಯ ಸಂಬಂಧವೇ ಹಾಗೆ ಎಷ್ಟೇ ದೂರವಿದ್ದರೂ ಮನಸ್ಸು ಅವರನ್ನು ನೋಡಲು ಹಾತೊರೆಯುತ್ತಿರುತ್ತದೆ. ಇದೀಗ ಅಂತಹುದೇ ಘಟನೆಯೊಂದು ವೈರಲ್‌ ಆಗಿದ್ದು, 105 ವರ್ಷದ ತಾಯಿಯನ್ನು ನೋಡಲು 85 ವರ್ಷದ ಮಗಳು ಬೆಟ್ಟ ಗುಡ್ಡವನ್ನು ದಾಟಿ, ದುರ್ಗಮ ಹಾದಿಯಲ್ಲಿ ಸಂಚರಿಸಿ ಬರೋಬ್ಬರಿ 20 ವರ್ಷಗಳ ಬಳಿಕ ತವರು ಮನೆ ಸೇರಿದ್ದಾರೆ.

ದೇಶದ ಹಿತಾಸಕ್ತಿ ಕಾಪಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರೂಪಾಯಿ ಮೌಲ್ಯ ಕುಸಿಯಲು ಕೇಂದ್ರ ಕಾರಣ ಎಂದ ಪ್ರಿಯಾಂಕ್ ಖರ್ಗೆ

Priyank Kharge: ಬ್ರಿಕ್ಸ್‌ ವೇದಿಕೆಯಲ್ಲಿ ಭಾರತದ ರೂಪಾಯಿಯನ್ನು ಮತ್ತಷ್ಟು ಬಲಿಷ್ಠಗೊಳಿಸುವುದಾಗಿ ಹಾಗೂ ಜಾಗತಿಕ ಮಟ್ಟದಲ್ಲಿ ವ್ಯವಹರಿಸಬಹುದಾದ ಕರೆನ್ಸಿಯಾಗಿ ರೂಪಿಸುವುದಾಗಿ ಈ ಹಿಂದೆ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಇಂದು ರೂಪಾಯಿ ಮೌಲ್ಯ ಕುಸಿತ ಕಾಣುತ್ತಿದ್ದು, ಡಾಲರ್ ಎದುರು ರೂಪಾಯಿ ಹೊಸ ತಳಮಟ್ಟಗಳನ್ನು ತಲುಪುತ್ತಿರುವುದು ಆರ್ಥಿಕ ನೀತಿಯ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

‘ವಂದೇ ಮಾತರಂ’ ಗೀತೆ ಬಗ್ಗೆ ನಿಲುವು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್; ಕೇಂದ್ರದ ನಿರ್ಧಾರಕ್ಕೆ ಹೇಳಿದ್ದೇನು?

‘ವಂದೇ ಮಾತರಂ’ ಗೀತೆ ಬಗ್ಗೆ ನಿಲುವು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಡಿಕೆಶಿ

DK Shivakumar: ರಾಷ್ಟ್ರಗಾನ 'ವಂದೇ ಮಾತರಂ'ನ ಎಲ್ಲ 6 ಚರಣಗಳನ್ನು ಕಡ್ಡಾಯವಾಗಿ ಹಾಡಬೇಕೆಂದು ಕೇಂದ್ರ ಸರ್ಕಾರ ಕಾಯ್ದೆ ಮಾಡಿದ್ದರೂ, ರಾಜ್ಯ ಸರ್ಕಾರ ಬರೀ 2 ಚರಣ ಹಾಡುವುದಾಗಿ ನಿರ್ಧರಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಈ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದು, ಸರ್ಕಾರದ ನಿಲುವು ಸಮರ್ಥಿಸಿಕೊಂಡಿದ್ದಾರೆ.

World First Aid Day 2026: ಸೆಪ್ಟೆಂಬರ್ 12 ‘ವಿಶ್ವ ಪ್ರಥಮ ಚಿಕಿತ್ಸಾ ದಿನʼ; ಈ ದಿನದ ಪ್ರಾಮುಖ್ಯತೆ ಏನು?

ಸೆ.12 ‘ವಿಶ್ವ ಪ್ರಥಮ ಚಿಕಿತ್ಸಾ ದಿನʼ; ಈ ದಿನದ ಪ್ರಾಮುಖ್ಯತೆ ಏನು?

World First Aid Day 2026: ವಿಶ್ವದಾದ್ಯಂತ ಪ್ರತಿವರ್ಷ ಸೆಪ್ಟೆಂಬರ್ ತಿಂಗಳ ಎರಡನೇ ಶನಿವಾರದಂದು ‘ವಿಶ್ವ ಪ್ರಥಮ ಚಿಕಿತ್ಸಾ ದಿನʼ ಎಂದು ಆಚರಿಸಲಾಗುತ್ತದೆ. 2000ನೇ ಇಸವಿಯಲ್ಲಿ ಅಂತಾರಾಷ್ಟ್ರೀಯ ರೆಡ್‍ಕ್ರಾಸ್ ಸೊಸೈಟಿ ಈ ಆಚರಣೆಯನ್ನು ಜಾರಿಗೆ ತಂದಿದೆ. ಈ ಕುರಿತ ವರದಿ ಇಲ್ಲಿದೆ.

ಪಾವಗಡದಲ್ಲಿ ಮತ್ತೆ ನಕ್ಸಲ್ ಚಟುವಟಿಕೆ? ಪೀಪಲ್ಸ್ ವಾ‌ರ್ ಜನಶಕ್ತಿ ಪಾರ್ಟಿ ಕಾಮ್ರೇಡ್‌ ದೇವನ್ನ ದಳಂ ಹೆಸರಲ್ಲಿ 5 ಲಕ್ಷ ರೂಪಾಯಿಗೆ ಬೇಡಿಕೆ; ಗೇಟ್‌ನಲ್ಲಿ ಪತ್ರ ಪತ್ತೆ

ಪಾವಗಡದಲ್ಲಿ ಮತ್ತೆ ಆರಂಭವಾಯ್ತ ನಕ್ಸಲ್ ಚಟುವಟಿಕೆ?

Naxal Movement: ಕೇಂದ್ರ ನಕ್ಸಲ್‌ ಮುಕ್ತ ಭಾರತ ಘೋಷಣೆ ಮಾಡುತ್ತಿದ್ದರೆ ಇತ್ತ ಆಂಧ್ರ ಪ್ರದೇಶ ಹಾಗೂ ತುಮಕೂರಿನ ಪಾವಗಡ ಗಡಿಭಾಗದಲ್ಲಿ ನಿಷ್ಕ್ರಿಯವಾಗಿದ್ದ ನಕ್ಸಲ್ ಚಟುವಟಿಕೆ ಮತ್ತೆ ಆರಂಭವಾಗಿರುವ ಶಂಕೆ ವ್ಯಕ್ತವಾಗಿದೆ. ಪೀಪಲ್ಸ್ ವಾರ್ ಜನಶಕ್ತಿ ಪಾರ್ಟಿಯ ಕಾಮ್ರೇಡ್‌ ದೇವನ್ನ ದಳಂ ಹೆಸರಿನ ಪತ್ರ ಪಾವಗಡದಲ್ಲಿಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

Loading...