ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ʼʼಅಮ್ಮಾ ಏಳಮ್ಮʼʼ: ಮೃತ ತಾಯಿ ಆನೆಯನ್ನು ಎದ್ದೇಳಿಸಲು ಮರಿಯಾನೆಯ ಪ್ರಯತ್ನ; ಕೊಡಗಿನಲ್ಲೊಂದು ಹೃದಯ ವಿದ್ರಾವಕ ಘಟನೆ

ಮೃತ ತಾಯಿ ಆನೆಯನ್ನು ಎದ್ದೇಳಿಸಲು ಮರಿಯಾನೆಯ ಪ್ರಯತ್ನ; ವಿಡಿಯೊ ವೈರಲ್‌

Viral Video: ಕೊಡಗು ಜಿಲ್ಲೆಯ ಅಮ್ಮತಿ ಸಮೀಪದ ಆನಂದಪುರದ ಖಾಸಗಿ ಕಾಫಿ ಎಸ್ಟೇಟ್‌ನಲ್ಲಿ ತಾಯಿ ಆನೆಯೊಂದು ಮೃತಪಟ್ಟಿದ್ದು, ಮರಿಯಾನೆ ಅದನ್ನು ಏಳಿಸಲಯ ಯತ್ನಿಸುತ್ತಿರುವ ವಿಡಿಯೊ ವೈರಲ್‌ ಆಗಿದೆ. ಆನೆ ಮರಿಯ ಗೋಳಾಟವು ಇದೀಗ ಪ್ರಾಣಿಪ್ರಿಯರ ಹೃದಯ ತಟ್ಟಿದೆ.

ಬೆಂಗಳೂರಿಗರಿಗೆ ಸಿಹಿ ಸುದ್ದಿ: ‘ಆಕಾಶ ಏರ್' ನಿಂದ ಉದಯಪುರ ಬಳಿಕ ಪಿಂಕ್ ಸಿಟಿ ಜೈಪುರಕ್ಕೂ ನೇರ ವಿಮಾನ, ಟಿಕೆಟ್ ಬುಕ್ಕಿಂಗ್ ಆರಂಭ

‘ಆಕಾಶ ಏರ್' ನಿಂದ ಬೆಂಗಳೂರು ಮತ್ತು ಜೈಪುರ ನಡುವೆ ನೇರ ವಿಮಾನ ಸೇವೆ

Akasa Air: ‘ಆಕಾಶ ಏರ್' ಮುಂಬರುವ ಅಕ್ಟೋಬರ್ 11, 2026ರಿಂದ ಬೆಂಗಳೂರು ಮತ್ತು ಜೈಪುರ ನಡುವೆ ದೈನಂದಿನ ನೇರ ವಿಮಾನ ಸೇವೆಯನ್ನು ಆರಂಭಿಸುವುದಾಗಿ ಘೋಷಿಸಿದೆ. ಬೆಂಗಳೂರಿನ ಟೆಕ್ಕಿಗಳಿಗೆ, ಉದ್ಯಮಿಗಳಿಗೆ ಹಾಗೂ ಪ್ರವಾಸಿಗರಿಗೆ ರಾಜಸ್ಥಾನ ಪ್ರವಾಸ ಈಗ ಮತ್ತಷ್ಟು ಸುಲಭವಾಗಲಿದೆ. ಬೆಂಗಳೂರಿನಿಂದ ನೇರವಾಗಿ ಜೈಪುರಕ್ಕೆ ಅಕ್ಟೋಬರ್ 11ರಿಂದ ಸೇವೆ ಆರಂಭವಾಗುತ್ತಿದ್ದರೆ, ಅಕ್ಟೋಬರ್ 15ರಿಂದ ಬೆಂಗಳೂರಿನಿಂದ ರಾಜಸ್ಥಾನದ ಮತ್ತೊಂದು ಸುಂದರ ನಗರವಾದ ಉದಯಪುರಕ್ಕೂ ವಿಮಾನ ಸೇವೆಗಳು ಶುರುವಾಗಲಿವೆ.

CM DK Shivakumar: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದೇನು?

CM DK Shivakumar: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಈ ಕುರಿತ ಡಿಟೇಲ್ಸ್‌ ಇಲ್ಲಿದೆ.

ಹೊತ್ತಿ ಉರಿದ ಗ್ಯಾರೇಜ್‌ 20ಕ್ಕೂ ಹೆಚ್ಚು ಕಾರು, 8 ಆಟೋಗಳು ಸುಟ್ಟು ಕರಕಲು

ಭಾರಿ ಅಗ್ನಿ ಅವಘಡ; ಹೊತ್ತಿ ಉರಿದ ಗ್ಯಾರೇಜ್‌

Fire Accident: ಬೆಂಗಳೂರಿನ ಥಣಿಸಂದ್ರದ ಗ್ಯಾರೇಜ್‌ ಒಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20ಕ್ಕೂ ಹೆಚ್ಚು ಕಾರುಗಳು ಹಾಗೂ 8 ಆಟೋಗಳು ಸುಟ್ಟು ಕರಕಲಾಗಿವೆ. ಥಣಿಸಂದ್ರ ಮುಖ್ಯರಸ್ತೆಯ ಭಾರತಿಯ ಸಿಟಿ ಬಳಿ ಇರುವ ಗ್ಯಾರೇಜ್‌ನಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ.

ಮಡಿಲು ತುಂಬಿದ ಮಮತೆ, 31 ಮಕ್ಕಳಿಗೆ ಹೊಸ ಬದುಕು

ಮಡಿಲು ತುಂಬಿದ ಮಮತೆ, 31 ಮಕ್ಕಳಿಗೆ ಹೊಸ ಬದುಕು

ದತ್ತು ಪ್ರಕ್ರಿಯೆ ಕೇವಲ ಕಾನೂನುಬದ್ಧ ಕ್ರಮವಲ್ಲ; ಅದು ಒಂದು ಮಗುವಿನ ಬದುಕನ್ನು ಮರು ರೂಪಿಸುವ ಸಾಮಾಜಿಕ ಜವಾಬ್ದಾರಿ. ಇದೇ ಉದ್ದೇಶದೊಂದಿಗೆ ಕೇಂದ್ರ ಸರ್ಕಾರದ ಕಾರಾ (CARA) ಮಾರ್ಗಸೂಚಿಯಡಿ ಜಿಲ್ಲೆಯ ಅಮೂಲ್ಯ ಶಿಶು ಗೃಹ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮಕ್ಕಳ ಪುನರ್ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿವೆ.

Hospet News: ವಿಶೇಷ ಚೇತನರೊಂದಿಗೆ ಯುವ ಮುಖಂಡ ಹಫೀಜ್ ಶೇಖ್ ರವರ ಹುಟ್ಟುಹಬ್ಬ ಆಚರಣೆ

ವಿಶೇಷ ಚೇತನರೊಂದಿಗೆ ಯುವ ಮುಖಂಡರ ಹುಟ್ಟುಹಬ್ಬ ಆಚರಣೆ

ಸಮಾಜದಲ್ಲಿ ಲಕ್ಷಾಂತರು ರೂಪಾಯಿಗಳನ್ನ ಖರ್ಚು ಮಾಡಿ ಆಡಂಬರದ ಆಚರಣೆಗಳನ್ನು ಮಾಡಿ ಕೊಳ್ಳುವುದು ಪ್ರಸ್ತುತ ದಿನಮಾನಗಳಲ್ಲಿ ಸರ್ವೆಸಾಮಾನ್ಯವಾಗಿದೆ. ಇಂತಹ ದಿನಗಳಲ್ಲಿ 130ಕ್ಕೂ ಹೆಚ್ಚು ವಿಶೇಷ ಚೇತನ ಮಕ್ಕಳ ಮತ್ತು ಬುದ್ಧಿಮಾಂದ್ಯ ಮಕ್ಕಳ ಜೊತೆಗೆ ಆಚರಣೆ ಮಾಡಿಕೊಳ್ಳುವುದು ಸಮಾಜ ದಲ್ಲಿ ವಿಶೇಷವಾಗಿದೆ ಎಂದರು

Harapanahalli News: ನ್ಯಾಯಾಲಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿದ ಹೈಕೋರ್ಟ್ ನ್ಯಾಯಾಧೀಶರಾದ ಪ್ರದೀಪ್ ಸಿಂಗ್ ಯರೂರು

ನ್ಯಾಯಾಲಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಿದ ಹೈಕೋರ್ಟ್ ನ್ಯಾಯಾಧೀಶ

ನಗರದ ಹೊರವಲಯದಲ್ಲಿರುವ ಗೋಸಾಯಿ ಗುಡ್ಡ ಮೇಲೆ ನೂತನವಾಗಿ ನಿರ್ಮಾಣಗೊಂಡಿರುವ ನ್ಯಾಯಾಲಯ ಕಟ್ಟಡ ಸ್ಥಳಕ್ಕೆ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಆಡಳಿತಾತ್ಮಕ ನ್ಯಾಯಾಧೀಶ ರಾದ ಪ್ರದೀಪ್ ಸಿಂಗ್ ಯರೂರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಟ್ಟಡದ ನಿರ್ಮಾಣ ಕಾಮಗಾರಿಯನ್ನು ಲೋಕೋಪಯೋಗಿ ಇಲಾಖೆ ಸುಪರ್ದಿನಲ್ಲಿ ನಡೆಯುತ್ತಿದ್ದು ಕಾಮಗಾರಿಗೆ ಸಂಬಂಧಿಸಿದಂತೆ ಇಲಾಖೆ ಇಂಜಿನಿಯರ್‌ಗಳ ಜತೆ ಕಟ್ಟಡ ಪೂರ್ಣಗೊಂಡಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.

ಹೊಸ ಸಚಿವರಿಗೆ ʼವರ್ಗಾವಣೆʼ ಅಧಿಕಾರವಿಲ್ಲ

ಹೊಸ ಸಚಿವರಿಗೆ ʼವರ್ಗಾವಣೆʼ ಅಧಿಕಾರವಿಲ್ಲ

ಒಂದು ವೇಳೆ ಕೆಲವು ಸಿಬ್ಬಂದಿ ಈಗಾಗಲೇ ವರ್ಗಾವಣೆಯಾಗಿದ್ದರೆ ಅವರನ್ನು ಸಚಿವರು ಕೂಡ ಬದಲಿಸುವುದು ಕಷ್ಟ. ಈಗಾಗಲೇ ವರ್ಗಾವಣೆಯಾಗಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮುಖ್ಯಮಂತ್ರಿಗಳ ಆದೇಶದ ಮೂಲಕ ಮತ್ತೆ ವರ್ಗಾವಣೆ ಮಾಡಿಸದೆ ಅಂಥ ಸಿಬ್ಬಂದಿ ತಮ್ಮ ವಿರುದ್ಧದ ವರ್ಗಾವಣೆ ಆದೇಶವನ್ನು ಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ.

H.M. Chandrashekarappa: ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಅನಾರೋಗ್ಯದಿಂದ ನಿಧನ

ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ ಅನಾರೋಗ್ಯದಿಂದ ನಿಧನ

Shivamogga News: ಕಳೆದ ಎರಡು ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಎಚ್.ಎಂ.ಚಂದ್ರಶೇಖರಪ್ಪ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು 1999ರಲ್ಲಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ಸ್ಪರ್ಧಿಸಿ ಗೆದ್ದು ಶಿವಮೊಗ್ಗ ನಗರದ ಶಾಸಕರಾಗಿದ್ದರು.

Chikkaballapur News: 'ಬೇಡ ಬ್ರೋ–ರೈಸ್ ಕರ್ನಾಟಕ' ಜಾಗೃತಿ ಜಾಥಾ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯ ಕರೆ

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಬೈಕ್ ರ‍್ಯಾಲಿ

ಜಾಗೃತಿ ಅಭಿಯಾನದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕ್ಯೂಆರ್ ಕೋಡ್‌ ಸ್ಟಿಕ್ಕರ್‌ಗಳನ್ನು ಅಳವಡಿಸಲಾಗಿದ್ದು, ಅವುಗಳನ್ನು ಸ್ಕ್ಯಾನ್ ಮಾಡುವ ಮೂಲಕ ನಾಗರಿಕರು ತಮ್ಮ ಸುತ್ತಮುತ್ತ ನಡೆಯುವ ಮಾದಕ ವಸ್ತುಗಳ ಮಾರಾಟ, ಬಳಕೆ ಹಾಗೂ ಇತರೆ ಕಾನೂನುಬಾಹಿರ ಚಟುವಟಿಕೆಗಳ ಬಗ್ಗೆ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬಹುದಾಗಿದೆ

Gubbi News: ದುಡಿಮೆಯ ಒಂದಂಶ ಬಡ ಮಕ್ಕಳ ಶಿಕ್ಷಣಕ್ಕೆ : ಕಳ್ಳಿಪಾಳ್ಯ ಲೋಕೇಶ್

ದುಡಿಮೆಯ ಒಂದಂಶ ಬಡ ಮಕ್ಕಳ ಶಿಕ್ಷಣಕ್ಕೆ

ಆಡಂಬರ ಹುಟ್ಟುಹಬ್ಬ ಆಚರಣೆ ಮಾಡಿ ಹಣ ವ್ಯಯ ಮಾಡುವ ಬದಲು ಹಳ್ಳಿಗಾಡಿನ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವುದು ಒಂದು ರೀತಿಯ ಸಾರ್ಥಕ ಬದುಕು ಎನಿಸುತ್ತದೆ. ಆರೋಗ್ಯ ಮತ್ತು ಶಿಕ್ಷಣ ಸಮಾಜಕ್ಕೆ ಉಚಿತ ಸೇವೆ ಆಗಬೇಕಿದೆ. ಆದರೆ ದುರದೃಷ್ಟ ರೀತಿಯಲ್ಲಿ ಈ ಎರಡೂ ಕ್ಷೇತ್ರ ಕಮರ್ಷಿಯಲ್ ಆಗಿದೆ ಎಂದು ವಿಷಾದಿಸಿದ ಅವರು ಆಂಗ್ಲ ಮಾಧ್ಯಮ ಶಿಕ್ಷಣ ಹಳ್ಳಿ ಮಕ್ಕಳಿಗೆ ದೊರೆಯಬೇಕು

ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ಕತಾರ್‌ನಲ್ಲಿ ಭಾರತೀಯ ರಾಯಭಾರಿ ವಿಪುಲ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ

ದೋಹಾದ ಐಸಿಸಿ ಅಶೋಕ ಸಭಾಂಗಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಭಾರತದ ರಾಯಭಾರಿ ವಿಪುಲ್ ಅವರಿಗೆ ಅನಿವಾಸಿ ಭಾರತೀಯ ಸಮುದಾಯದಿಂದ ಬೀಳ್ಕೊಡಿಗೆ ನೀಡಲಾಗಿದೆ. ಭಾರತೀಯ ಸಾಂಸ್ಕೃತಿಕ ಕೇಂದ್ರ, ಭಾರತೀಯ ಸಮುದಾಯ ಕಲ್ಯಾಣ ವೇದಿಕೆ, ಭಾರತೀಯ ಕ್ರೀಡಾ ಕೇಂದ್ರ ಹಾಗೂ ಭಾರತೀಯ ಉದ್ಯಮ ಮತ್ತು ವೃತ್ತಿಪರರ ಮಂಡಳಿ ಜಂಟಿಯಾಗಿ ಕಾರ್ಯಕ್ರಮ ಆಯೋಜಿಸಿದ್ದವು.

Gubbi News: ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಪದಾಧಿಕಾರಿಗಳ ಆಯ್ಕೆ

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಪದಾಧಿಕಾರಿಗಳ ಆಯ್ಕೆ

ಸಾವಿತ್ರಿಬಾಯಿ ಫುಲೆಯವರ ಶೈಕ್ಷಣಿಕ ಮತ್ತು ಸಾಮಾಜಿಕ ಸೌಹಾರ್ದತೆಯ ವಿಚಾರಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗುವ ಗುರುತರ ಜವಾಬ್ದಾರಿ ಈಗ ನಿಮ್ಮ ಹೆಗಲೇರಿದೆ. ಶಿಕ್ಷಣ, ಮಹಿಳಾ ಸಬಲೀಕರಣ, ಸಾಮಾಜಿಕ ಸಮಾನತೆ ಮತ್ತು ಜಾಗೃತಿ ಮೂಡಿಸುವ ನಿಮ್ಮ ಈ ಕಾರ್ಯಕ್ಕೆ ನಮ್ಮೆಲ್ಲರ ಪೂರ್ಣ ಬೆಂಬಲವಿದೆ.

Chikkaballapur News: ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿದ ಸಂದೀಪ್ ರೆಡ್ಡಿ

ಗಂಭೀರ ಕಾಯಿಲೆಗಳ ಆರಂಭಿಕ ಪತ್ತೆಗೆ ವಿಶೇಷ ಒತ್ತು

ದೇಶದಲ್ಲಿ ಸರ್ಕಾರಿ ಆಸ್ಪತ್ರೆಗಳ ಸಂಖ್ಯೆ ಹೆಚ್ಚಾಗುತ್ತಿದ್ದರೂ, ಖಾಸಗಿ ಆಸ್ಪತ್ರೆಗಳಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಾಗುತ್ತಿದ್ದರೂ ಮತ್ತು ವೈದ್ಯಕೀಯ ಕ್ಷೇತ್ರ ವೇಗವಾಗಿ ಬೆಳೆಯುತ್ತಿದ್ದರೂ ಗ್ರಾಮೀಣ ಭಾಗದ ಸಾಮಾನ್ಯ ಜನರಿಗೆ ಸಮರ್ಪಕ ಆರೋಗ್ಯ ಸೇವೆ ಇನ್ನೂ ಸಂಪೂರ್ಣವಾಗಿ ತಲುಪಿಲ್ಲ

ಕಲಿಕೆಯಲ್ಲಿ ಸ್ವಯಂ ಅನ್ವೇಷಣೆ, ಪ್ರಶ್ನಿಸುವ ಮನೋಭಾವ ಮುಖ್ಯ: ಐಐಟಿ ದೆಹಲಿ ನಿರ್ದೇಶಕ ಪ್ರೊ. ರಂಗನ್ ಬ್ಯಾನರ್ಜಿ

ಕಲಿಕೆಯಲ್ಲಿ ಸ್ವಯಂ ಅನ್ವೇಷಣೆ, ಪ್ರಶ್ನಿಸುವ ಮನೋಭಾವ ಮುಖ್ಯ: ಪ್ರೊ. ರಂಗನ್

PES University Convocation 2026: ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯದ 12ನೇ ವಾರ್ಷಿಕ ಘಟಿಕೋತ್ಸವದಲ್ಲಿ ಐಐಟಿ ದೆಹಲಿಯ ನಿರ್ದೇಶಕ ಪ್ರೊ. ರಂಗನ್ ಬ್ಯಾನರ್ಜಿ ಮಾತನಾಡಿದ್ದಾರೆ. ಕಲಿಕೆ ಪದವಿಯೊಂದಿಗೆ ನಿಲ್ಲುವುದಿಲ್ಲ, ಕಲಿಕೆಯ ಪ್ರಯಾಣವು ಜೀವಿತಾವಧಿಯದ್ದಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಕಳೆಗಟ್ಟಿದ ಈಶ ಗ್ರಾಮೋತ್ಸವ: ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆಗೆ ವೇದಿಕೆ

ಚಿಕ್ಕಬಳ್ಳಾಪುರದಲ್ಲಿ ಕಳೆಗಟ್ಟಿದ ಈಶ ಗ್ರಾಮೋತ್ಸವ

ರೋಚಕ ಪೈಪೋಟಿಯ ಬಳಿಕ ಪುರುಷರ ವಾಲಿಬಾಲ್ ವಿಭಾಗದಲ್ಲಿ ಜಂಗಮಕೋಟೆ ಬಾಯ್ಸ್ ತಂಡ ಪ್ರಥಮ ಸ್ಥಾನ ಪಡೆದು ವಿಭಾಗೀಯ ಹಂತಕ್ಕೆ ಅರ್ಹತೆ ಗಳಿಸಿತು. ಮಾಸ್ತೇನಹಳ್ಳಿ ಗ್ರಾಮದ ಅಪ್ಪು ಬಾಯ್ಸ್ ತಂಡ ದ್ವಿತೀಯ, ಬೀಚಗಾನಹಳ್ಳಿ ತಂಡ ತೃತೀಯ ಹಾಗೂ ಸೋಮೇನಹಳ್ಳಿ ಬಾಯ್ಸ್ ತಂಡ ನಾಲ್ಕನೇ ಸ್ಥಾನ ಪಡೆಯಿತು.

Kaivara News: ಕೈವಾರದಲ್ಲಿ ಗುರುಪೂಜಾ ಸಂಗೀತೋತ್ಸವ ಇಂದಿನಿಂದ ಪ್ರಾರಂಭ

ಕೈವಾರದಲ್ಲಿ ಗುರುಪೂಜಾ ಸಂಗೀತೋತ್ಸವ ಇಂದಿನಿಂದ ಪ್ರಾರಂಭ

ಪ್ರಾತ:ಕಾಲ ಘಂಟಾನಾದ, ಸುಪ್ರಭಾತ, ಗೋಪೂಜೆಯೊಂದಿಗೆ ಗುರುಪೂಜೆ-ಸಂಗೀತೋತ್ಸವವು ಪ್ರಾರಂಭವಾಗುತ್ತದೆ. ಬೆಳಿಗ್ಗೆ 6 ಗಂಟೆಯಿಂದಲೇ ಮುಖ್ಯ ವೇದಿಕೆಯಲ್ಲಿ ಸ್ಥಳೀಯ ನಾದಸ್ವರ ಕಛೇರಿ ಗಳೊಂದಿಗೆ ಆರಂಭವಾಗುತ್ತದೆ. ಗುರುಪೂಜಾ ಸಂಗೀತೋತ್ಸವದ ಅಂಗವಾಗಿ ನಿರಂತರ 72 ಗಂಟೆಗಳ ಕಾಲ ದೇಶದ ಹಲವಾರು ವಿದ್ವಾಂಸರುಗಳಿಂದ ಸಂಗೀತ ಸೇವೆ ಸಮರ್ಪಣೆಯಾಗುತ್ತದೆ.

ಸಮಸ್ಯೆಗಳನ್ನು ಅವಕಾಶಗಳಾಗಿ ಪರಿವರ್ತಿಸಿ ಸಮಾಜಕ್ಕೆ ಪರಿಹಾರ ನೀಡುವ ಮನೋಭಾವ ಬೆಳೆಸಿಕೊಳ್ಳಿ: ಸಂಸದ ಡಾ.ಕೆ.ಸುಧಾಕರ್ ಕರೆ

ಸಮಾಜಕ್ಕೆ ಪರಿಹಾರ ನೀಡುವ ಮನೋಭಾವ ಬೆಳೆಸಿಕೊಳ್ಳಿ

ಯಶಸ್ಸಿನ ಹಿಂದೆ ಕಠಿಣ ಪರಿಶ್ರಮ ಮತ್ತು ತ್ಯಾಗ ಅಡಗಿರುತ್ತದೆ. ಪ್ರತಿಯೊಬ್ಬರೂ ತಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಸಮಾಜಕ್ಕೆ ಉಪಯುಕ್ತವಾಗುವ ರೀತಿಯಲ್ಲಿ ಬೆಳೆಯಬೇಕು. ಯಶಸ್ಸಿಗಿಂತ ಸಮಾಜಕ್ಕೆ ಎಷ್ಟು ಉಪಯುಕ್ತರಾಗಿದ್ದೀರಿ ಎಂಬುದೇ ವ್ಯಕ್ತಿತ್ವದ ನಿಜವಾದ ಮಾನದಂಡವಾಗಬೇಕು ಎಂದು ತಿಳಿಸಿದರು.

ಕರಾವಳಿ ಸಂಸ್ಕೃತಿಯ ಭಾಗವಾದ ʼಕಂಬಳʼ ತುಳುನಾಡಿನ ಸೀಮೆ ದಾಟಿ ಹೋಗಬಾರದು: ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ

ʼಕಂಬಳʼ ತುಳುನಾಡು ದಾಟಿ ಹೋಗಬಾರದು: ವಿಶ್ವ ಸಂತೋಷ ಭಾರತೀ ಸ್ವಾಮೀಜಿ

ಬೆಂಗಳೂರು ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ತುಳುವೆರೆ ಚಾವಡಿ ವತಿಯಿಂದ ಆಯೋಜಿಸಿದ್ದ 28ನೇ ವರ್ಷದ 'ಪರ್ಬದ ಲೇಸ್' ಕಾರ್ಯಕ್ರಮದಲ್ಲಿ ಡಾ. ವಿಶ್ವ ಸಂತೋಷ ಭಾರತೀ ಸ್ವಾಮೀಜಿ ಮಾತನಾಡಿದ್ದಾರೆ. ಕಂಬಳ ಅಂದ್ರೆ ಬರೀ ಕೋಣಗಳ ಓಟವಲ್ಲ. ತುಳುನಾಡಿನ ಇತಿಹಾಸ, ಪರಂಪರೆ ಹಾಗೂ ದೈವರಾಧನೆಯ ಹಿನ್ನೆಲೆಯಿಂದ ಕಂಬಳ ಪಾವಿತ್ರ್ಯತೆ ಪಡೆದುಕೊಂಡಿದೆ. ಹಾಗಾಗಿ ಕಂಬಳ ಪ್ರತಿಷ್ಠೆಯ ಅಖಾಡವಾಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

CT Ravi: ಮುಸ್ಲಿಂ ಸಮಾಜದ ಬಗ್ಗೆ ನಾನು ಎಂದೂ ಮಾತಾಡಿಲ್ಲ, ದುಷ್ಕೃತ್ಯದಲ್ಲಿ ತೊಡಗುವವರ ವಿರುದ್ಧವಷ್ಟೇ ಟೀಕಿಸಿದ್ದೇನೆ: ಎಫ್‌ಐಆರ್ ಬಗ್ಗೆ ಸಿ.ಟಿ. ರವಿ ಆಕ್ರೋಶ

ಮುಸ್ಲಿಂ ಸಮಾಜದ ಬಗ್ಗೆ ನಾನು ಎಂದೂ ಮಾತಾಡಿಲ್ಲ: ಸಿ.ಟಿ. ರವಿ

ತಮ್ಮ ವಿರುದ್ಧ ಪೊಲೀಸರು ಎಫ್‌ಐಆರ್ ಹಾಕಿರುವುದಕ್ಕೆ ಸುದ್ದಿಗೋಷ್ಠಿಯಲ್ಲಿ ಸಿ.ಟಿ.ರವಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾವು ಜಿಹಾದಿಗಳು, ಭಯೋತ್ಪಾದಕರು ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿ ಮಾಡುವ ಕ್ರಿಮಿನಲ್‌ಗಳ ವಿರುದ್ಧ ಮಾತನಾಡಿದ್ದೇನೆ. ಮುಸ್ಲಿಂ ಸಮಾಜದ ವಿರುದ್ಧ ಒಂದೇ ಒಂದು ಪದವೂ ಬಳಸಿಲ್ಲ ಎಂದು ಪುನರುಚ್ಚರಿಸಿದ್ದಾರೆ.

ಜೋಶಿ ಸಮರ್ಥವಾಗಿ ಶಿಕ್ಷಣ ಖಾತೆ ನಿಭಾಯಿಸಲಿದ್ದಾರೆ: ಡಾ.ರಾಧಾಮೋಹನ್ ದಾಸ್ ಅಗರ್ವಾಲ್

ಜೋಶಿ ಸಮರ್ಥವಾಗಿ ಶಿಕ್ಷಣ ಖಾತೆ ನಿಭಾಯಿಸಲಿದ್ದಾರೆ: ರಾಧಾಮೋಹನ್ ದಾಸ್

ಪ್ರಲ್ಹಾದ್‌ ಜೋಶಿ ಅವರು ಸಂಸದೀಯ ವ್ಯವಹಾರ, ಕಲ್ಲಿದ್ದಲು ಖಾತೆ ಸಚಿವ ಸೇರಿದಂತೆ ವಿವಿಧ ಖಾತೆಗಳನ್ನು ನಿಭಾಯಿಸಿದವರು. ಅವರು ಶಿಕ್ಷಣ ಖಾತೆಯನ್ನು ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಡಾ.ರಾಧಾಮೋಹನ್ ದಾಸ್ ಅಗರ್ವಾಲ್ ತಿಳಿಸಿದ್ದಾರೆ.

ಸದ್ಗುರು ಶ್ರೀ ಮಧುಸೂದನ ಸಾಯಿ ಜನ್ಮದಿನ ಸಂಭ್ರಮ; 4 ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗ ಆರಂಭ

ಮಧುಸೂದನ ಸಾಯಿ ಜನ್ಮದಿನ ಸಂಭ್ರಮ; 4 ವೈದ್ಯಕೀಯ ವಿಭಾಗ ಆರಂಭ

SMSIMSR Medical college: ಸದ್ಗುರು ಶ್ರೀ ಮಧುಸೂದನ ಸಾಯಿ ಅವರ 47ನೇ ಜನ್ಮದಿನದ ಅಂಗವಾಗಿ ಮುದ್ದೇನಹಳ್ಳಿಯ 'ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರ'ದಲ್ಲಿ 4 ನೂತನ ಸೂಪರ್ ಸ್ಪೆಷಾಲಿಟಿ ವೈದ್ಯಕೀಯ ವಿಭಾಗಗಳನ್ನು ಉದ್ಘಾಟಿಸಲಾಗಿದೆ.

KPSC scam: ಪಶುವೈದ್ಯಾಧಿಕಾರಿಗಳ ನೇಮಕಾತಿಗೆ ತಾತ್ಕಾಲಿಕ ತಡೆ; ಅಕ್ರಮ ತನಿಖೆಗೆ ಆಂತರಿಕ ವಿಚಾರಣಾ ಉಪಸಮಿತಿ ರಚಿಸಿದ ಕೆಪಿಎಸ್‌ಸಿ

ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ತನಿಖೆಗೆ KPSC ಉಪಸಮಿತಿ ರಚನೆ

KPSC Veterinary Officer Recruitment: ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಹಾಗೂ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಬದ್ಧವಾಗಿದ್ದು, ತನಿಖಾ ವರದಿಯ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಕೆ. ಜ್ಯೋತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

MLA S N Subbareddy: ಶಾಸಕ ಸುಬ್ಬಾರೆಡ್ಡಿ ವಿರುದ್ಧ ಸುಳ್ಳು ಆರೋಪ: ಸಂದೇಶ್ ವಿರುದ್ಧ ಎಫ್‌ಐಆರ್‌ಗೆ ಕಾಂಗ್ರೆಸ್ ಆಗ್ರಹ

ಜಮೀನು ಕಬಳಿಕೆ ಆರೋಪ ನಿರಾಧಾರ ಎಂದ ಮುಖಂಡರು

ಕೃಷ್ಣೇಗೌಡ ಮಾತನಾಡಿ, ಜು.25ರಂದು ಸಂದೇಶ್ ಹಾಗೂ ಅವರ ಬೆಂಬಲಿಗರು ಸೋಮಲಾಪುರ ಜಮೀನಿನ ಬಳಿ ತೆರಳಿ ಸ್ಥಳೀಯ ನಿವಾಸಿ ಗಂಗಾಧರಪ್ಪ ಅವರನ್ನು ಪ್ರಶ್ನಿಸಿದ್ದು, ಆ ವೇಳೆ ಶಾಸಕರಿಗೆ ಅಲ್ಲಿ ಯಾವುದೇ ಜಮೀನು ಇಲ್ಲ ಎಂದು ಗಂಗಾಧರಪ್ಪ ಸ್ಪಷ್ಟಪಡಿಸಿದ್ದಾರೆ. ಇದರಿಂದ ಆಕ್ರೋಶ ಗೊಂಡ ಸಂದೇಶ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿದರು.

Loading...