ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

Chinthamani News: ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಈಜು ತರಬೇತಿ: ಡ್ಯಾನ್ಸ್ ಮಾಸ್ಟರ್ ಕೇಶವ ಅವರ ಸಾಮಾಜಿಕ ಕಳಕಳಿ

ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಈಜು ತರಬೇತಿ

ತರಬೇತಿ ನಡೆಯುತ್ತಿರುವ ಸ್ಥಳಕ್ಕೆ ಇತ್ತೀಚೆಗೆ ಸ್ಥಳೀಯ ಮುಖಂಡರಾದ ಡಾ!ವಿ.ಅಮರ್ ಅವರು ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು. ಕೇಶವ ಅವರ ಈ ಕಾರ್ಯವನ್ನು ಶ್ಲಾಘಿಸಿದ ಅವರು ಕೇವಲ 5 ದಿನಗಳಲ್ಲಿ 3 ವರ್ಷದ ಮೇಲ್ಪಟ್ಟ ಮಕ್ಕಳು ಅತ್ಯುತ್ತಮ ವಾಗಿ ಈಜು ಕಲಿಯು ತ್ತಿರುವುದು ಆಶ್ಚರ್ಯಕರ ಮತ್ತು ಮೆಚ್ಚುವಂತದ್ದು.

ಭಾರತದಲ್ಲಿ ಶ್ವಾಸಕೋಶದ ಕ್ಯಾನ್ಸರ್ ಗೆ ವಿಶ್ವದ ಮೊದಲ ಸಬ್ ಕ್ಯುಟೇನಿಯಸ್ ಇಮ್ಯುನೊಥೆರಪಿ-ಟೆಸೆಂಟ್ರಿಕ್ ಎಸ್ ಸಿ ಬಿಡುಗಡೆ

ಮೊದಲ ಸಬ್ ಕ್ಯುಟೇನಿಯಸ್ ಇಮ್ಯುನೊಥೆರಪಿ-ಟೆಸೆಂಟ್ರಿಕ್ ಎಸ್ ಸಿ ಬಿಡುಗಡೆ

ಪರಂಪರಾಗತ IV  ಇನ್ಫೂಶನ್ ಚಿಕಿತ್ಸೆಗೆ ಹಲವು ಗಂಟೆಗಳು ಬೇಕಾಗುತ್ತವೆ. ಚಿಕಿತ್ಸೆ ನೀಡುವ ಅವಧಿಯನ್ನು ಸುಮಾರು 7 ನಿಮಿಷಗಳಿಗೆ ಇಳಿಸುವ ಮೂಲಕ Tecentriq SC ಒಂದು ಮಹತ್ವದ ಕ್ರಾಂತಿಕಾರಿ ಹೊಸ ಆವಿಷ್ಕಾರವಾಗಿ ಹೊರಹೊಮ್ಮಿದೆ. ಇದು ಕ್ಯಾನ್ಸರ್ ರೋಗಿಗಳ ಚಿಕಿತ್ಸಾ ಅನುಭವವನ್ನು ಗಮನಾರ್ಹ ಮಟ್ಟದಲ್ಲಿ ಸುಧಾರಣೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ.

Gauribidanur News: ಮೇ.17ಕ್ಕೆ ಸಂಕಲ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ

ಮೇ.17ಕ್ಕೆ ಸಂಕಲ್ಪ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ

ಈಗಾಗಲೇ 721ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಇನ್ನೂ 200 ಹೆಸರನ್ನು ನಾವು ಯಾವುದೇ ಆರ್ಥಿಕ ಸಹಾಯದ ಆಮಿತಿ ನೀಡಿ ಪ್ರಚಾರ ಮಾಡಿಲ್ಲ, ಕೇವಲ ಪ್ರತಿಭೆಯನ್ನು ಗುರುತಿಸಿ ಗೌರವಿಸು ವುದು ನಮ್ಮ ಮೂಲ ಉದ್ದೇಶವಾಗಿದೆ. ತಡವಾಗಿ ನೋಂದಣಿ ಮಾಡಿಕೊಳ್ಳುವ ಪೋಷಕರಲ್ಲಿ ಮನವಿ ಮಾಡಿದ ಅವರು, ಕೆಲವು ವಸ್ತುಗಳ ಕೊರತೆಯಾಗಬಹುದು.

Chikkaballapur News: ನಿಯಮ ಪಾಲನೆ ಮಾಡಿದರೆ ಸುರಕ್ಷಿತ ಪ್ರಯಾಣ, ನಿರ್ಲಕ್ಷ್ಯ ಮಾಡಿದರೆ ಅಪಾಯವೇ ಬಹುಮಾನ: ಡಿ.ಹೆಚ್. ಮುನಿಕೃಷ್ಣ ಕರೆ

ನಿಯಮ ಪಾಲನೆ ನಿರ್ಲಕ್ಷ್ಯ ಮಾಡಿದರೆ ಅಪಾಯವೇ ಬಹುಮಾನ

ವಾಹನ ಚಾಲನೆ ಎಂಬುದು ಕೇವಲ ಉದ್ಯೋಗವಲ್ಲ, ಅದು ಜನರ ಜೀವದ ಭದ್ರತೆಯ ಜವಾ ಬ್ದಾರಿಯೂ ಹೌದು. ಆದ್ದರಿಂದ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸುರಕ್ಷಿತ ಚಾಲನೆಗೆ ಆದ್ಯತೆ ನೀಡಿ. ಮದ್ಯಪಾನ ಮಾಡಿ ವಾಹನ ಚಲಾಯಿಸುವುದನ್ನು ದೂರವಿಟ್ಟು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಸಂಘದ ಗೌರವ ಹೆಚ್ಚಿಸಬೇಕು

MLA KH. Puttaswamy Gowda: ನಿವೇಶನರಹಿತ ಅರ್ಹ ಫಲಾನುಭವಿಗಳಿಗೆ ಮಾತ್ರ ದೊರೆಯಬೇಕು: ಶಾಸಕ ಕೆಎಚ್.ಪುಟ್ಟಸ್ವಾಮಿಗೌಡ ಭರವಸೆ

ನಿವೇಶನರಹಿತ ಅರ್ಹ ಫಲಾನುಭವಿಗಳಿಗೆ ಮಾತ್ರ ದೊರೆಯಬೇಕು

ನಿವೇಶನ ಹಂಚಿಕೆ ವಿಷಯದಲ್ಲಿ ಅಧಿಕಾರಿಗಳು ಯಾವುದೇ ಜಾತಿ,ಧರ್ಮ ,ರಾಜಕೀಯ ಪಕ್ಷಗಳಿಗೆ,ಮುಖಂಡರ ಒತ್ತಡಗಳಿಗೆ ಮಣೆ ಹಾಕದೆ ಪ್ರತಿಯೊಬ್ಬ ನಿವೇಶನ ರಹಿತರ ದಾಖಲೆ ಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ನಂತರವೇ ಅರ್ಹರಿಗೆ ಮಾತ್ರ ನಿವೇಶನಗಳ ನೀಡು ವಂತೆ ಸೂಚಿಸಿದರು.

Chikkaballapur News: ನಗರಸಭೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಅಧಿಕಾರಿಗಳ ಕಾರ್ಯವೈಖರಿಗೆ ಕೆಂಡಾಮಂಡಲ

ನಗರಸಭೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ಗುರುವಾರ ಮಧ್ಯಾಹ್ನ ನಗರಸಭೆಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಜಿ.ಪ್ರಭು ಪೌರಾಯುಕ್ತ ಮನ್ಸೂರ್ ಅಲಿ ವಿರುದ್ಧ ಕೆಂಡಾಮಂಡಲವಾದರು. ಆಯುಕ್ತರಾಗಿ ನೀವು ಜಿಲ್ಲಾ ಕೇಂದ್ರದಲ್ಲಿ ವಾಸ್ತವ್ಯ ಇರಬೇಕು. ನೀವು ಬೆಂಗಳೂರಿನಿಂದ ಪ್ರಯಾಣ ಮಾಡುವು ದಾದರೆ ಜನರ ಕಷ್ಟ ಗಳನ್ನು ಯಾವಾಗ ಪರಿಹರಿಸುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು.

Chikkaballapur News: “ಯುವನಿಧಿ ಅರಿವು ಕಾರ್ಯಾಗಾರ”, ಪಂಚ ಗ್ಯಾರಂಟಿಗಳು ಯಶಸ್ವಿ ಅನುಷ್ಠಾನ: ಯಲುವಳ್ಳಿ ಎನ್ ರಮೇಶ್

“ಯುವನಿಧಿ ಅರಿವು ಕಾರ್ಯಾಗಾರ”, ಪಂಚ ಗ್ಯಾರಂಟಿಗಳು ಯಶಸ್ವಿ ಅನುಷ್ಠಾನ

ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ,  ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ, ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ, “ಯುವನಿಧಿ ಅರಿವು ಕಾರ್ಯಾಗಾರ” ಉದ್ಘಾಟಿಸಿ ಮಾತನಾಡಿದರು.

Mangaluru Rains: ಹವಾಮಾನ ವೈಪರೀತ್ಯ; ಮಂಗಳೂರಿನಲ್ಲಿ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು!

ಮಂಗಳೂರಿನಲ್ಲಿ ಭಾರಿ ಮಳೆ; ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು!

ಹವಾಮಾನ ವೈಪರೀತ್ಯದ ಹಿನ್ನೆಲೆ ಮಂಗಳೂರಿನ ವಿಟ್ಲದ ಬಳಿ ಗುರುವಾರ ಸಂಜೆ ವಿಮಾನಗಳು ಆಕಾಶದಲ್ಲೇ ಗಿರಕಿ ಹೊಡೆದಿವೆ. ತೀರ ಕೆಳಭಾಗದಲ್ಲೇ ವಿಮಾನಗಳು ಹಾರಾಟ ನಡೆಸಿದ್ದರಿಂದ ವಿಟ್ಲದ ಜನರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು. ಸುಮಾರು ಅರ್ಧ ಗಂಟೆ ಬಳಿಕ ವಿಮಾನಗಳು ಸುರಕ್ಷಿತವಾಗಿ ಲ್ಯಾಂಡ್‌ ಆಗಿವೆ.

ಮೇ 31ಕ್ಕೆ ಚಿಕ್ಕಬಳ್ಳಾಪುರದಲ್ಲಿ ರಾಜ್ಯ ಮಟ್ಟದ ಕೆಯುಡಬ್ಲೂಜೆ ಪ್ರತಿಭಾ ಪುರಸ್ಕಾರ: ತಗಡೂರು ಘೋಷಣೆ

ಮೇ 31ಕ್ಕೆ ರಾಜ್ಯ ಮಟ್ಟದ ಕೆಯುಡಬ್ಲೂಜೆ ಪ್ರತಿಭಾ ಪುರಸ್ಕಾರ

ಸಭೆಯಲ್ಲಿ ಮಾತನಾಡಿದ ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಮೋಕ್ಷ ಗುಂಡಂ ಸರ್.ಎಂ.ವಿಶೇಶ್ವರಯ್ಯ ಜನ್ಮ ಸ್ಥಳ, ನಂದಿ ಬೆಟ್ಟದ ಸೊಬಗು, ಯೋಗಿ ಯತೀಂದ್ರದ ತಪೋನೆಲ, ಮಾವು ದ್ರಾಕ್ಷಿಯ, ಫಲಪುಷ್ಪಗಳ ನಗರದ ಐಸಿರಿಯಲ್ಲಿ ಮೊಟ್ಟ ಮೊದಲ ಬಾರಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಆಯೋಜಿಸುತ್ತಿರುವುದು ಸಂತೋಷದ ಸಂಗತಿ

ಚಿಕ್ಕನಾಯಕನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ: ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಚಿಕ್ಕನಾಯಕನಹಳ್ಳಿ ಟಿಎಪಿಸಿಎಂಎಸ್ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಕೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನಡೆಯಲಿರುವ ಚುನಾವಣಾ ಪ್ರಕ್ರಿಯೆ ಬಿರುಸಿನಿಂದ ಕೂಡಿದ್ದು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್‌ಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ರಾಜ್ಯ ಸರ್ಕಾರದ ವಿರುದ್ಧ ಜೋಶಿ ಕಿಡಿ

ರಾಜ್ಯ ಸರ್ಕಾರದ ವಿರುದ್ಧ ಕೇಸರಿ ಶಾಲು ಧರಿಸಿಯೇ ಆಂದೋಲನ: ಜೋಶಿ

Dress code in schools and colleges: ರಾಜ್ಯ ಸರ್ಕಾರವು ಹಿಜಾಬ್ ನಿಷೇಧ ಹಿಂಪಡೆದು ಕೇಸರಿ ಶಾಲು ನಿಷೇಧಿಸಿದೆ. ಇದಕ್ಕೆ ಪರ್ಮಿಶನ್ ಕೊಟ್ಟವರ್ಯಾರು? ಎಂದು ಸಿಎಂ ಸಿದ್ರಾಮಯ್ಯ ಅವರ ವಿರುದ್ಧ ಕೆಂಡ ಕಾರಿದ ಸಚಿವರು, ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ವಾಪಸ್ ಪಡೆಯಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹಿಸಿದ್ದಾರೆ.

ಹಿಜಾಬ್‌ ನಿಷೇಧ ಆದೇಶ ರದ್ದು; ನಮಗೆ ಯಾರನ್ನೂ ಓಲೈಸುವ ಉದ್ದೇಶವಿಲ್ಲ ಎಂದ ಸಿಎಂ

ಹಿಜಾಬ್‌ ವಿವಾದ; ನಮಗೆ ಯಾರನ್ನೂ ಓಲೈಸುವ ಉದ್ದೇಶವಿಲ್ಲ ಎಂದ ಸಿಎಂ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಅಪರಾಧದಲ್ಲಿ ಬಿಜೆಪಿಯ ನಾಯಕರೇ ಭಾಗಿಯಾಗಿದ್ದಾರೆಂಬ ಗಂಭೀರ ಆರೋಪಗಳಿದ್ದರೂ ಎಲ್ಲ ಬಿಜೆಪಿ ನಾಯಕರು ತಮ್ಮ ಪ್ರಧಾನಿ ಮತ್ತು ಶಿಕ್ಷಣ ಸಚಿವರನ್ನು ಸಮರ್ಥಿಸಲು ಹೊರಟಿದ್ದಾರೆ. ಇದು ನೀಟ್ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಬಲಿಯಾಗಿರುವ ದೇಶದ 22 ಲಕ್ಷ ವಿದ್ಯಾರ್ಥಿಗಳಿಗೆ ಬಗೆಯುವ ದ್ರೋಹ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೈಸೂರಿನಲ್ಲಿ ಸಿಎಂ ಸಿಟಿ ರೌಂಡ್ಸ್‌; ಅಭಿವೃದ್ಧಿ ಕಾರ್ಯಗಳ ವೀಕ್ಷಣೆ, ಗುಣಮಟ್ಟ ಕಾಪಾಡಲು ಸೂಚನೆ

ಮೈಸೂರಿನಲ್ಲಿ ಸಿಎಂ ಸಿಟಿ ರೌಂಡ್ಸ್‌; ಅಭಿವೃದ್ಧಿ ಕಾರ್ಯಗಳ ವೀಕ್ಷಣೆ

CM Siddaramaiah: ಮೈಸೂರಿನ ರಸ್ತೆಗಳು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಎಲ್ಲ ಅಭಿವೃದ್ದಿ ಕಾರ್ಯಗಳನ್ನು ನಮ್ಮ ಸರ್ಕಾರವೇ ಕೈಗೊಂಡಿದ್ದು, ಬಿಜೆಪಿಯವರು ಕೇವಲ ಸರ್ಕಾರವನ್ನು ವಿರೋಧಿಸುವ, ಟೀಕಿಸುವ, ಸುಳ್ಳು ಹೇಳುವ ಕೆಲಸದಲ್ಲಿ ನಿರತವಾಗಿದೆ. ಜನರಿಗೆ ಅನುಕೂಲ ಕಲ್ಪಿಸುವ ಯಾವುದೇ ಯೋಜನೆಗಳನ್ನು ಬಿಜೆಪಿಯು ತನ್ನ ಅಧಿಕಾರಾವಧಿಯಲ್ಲಿ ಕೈಗೊಳ್ಳಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಅಭಿವೃದ್ಧಿ ಕಾರ್ಯಗಳನ್ನು ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

NEET-UG 2026 Paper Leak: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಸಿಎಂ ಆಗ್ರಹ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಕೇಂದ್ರದ ಆಡಳಿತ ವೈಫಲ್ಯಕ್ಕೆ ಸಾಕ್ಷಿ: ಸಿಎಂ

ನೇಮಕಾತಿ ಪರೀಕ್ಷೆಗಳಿಂದ ಹಿಡಿದು ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳವರೆಗೆ ಪೇಪರ್ ಲೀಕ್ ಪ್ರಕರಣಗಳು ಪ್ರತಿಭಾವಂತ ವಿದ್ಯಾರ್ಥಿಗಳ ಹಿತ ರಕ್ಷಣೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಹೊಸ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Tesla Cars: ಕರ್ನಾಟಕಕ್ಕೆ ಲಗ್ಗೆ ಇಟ್ಟ ಟೆಸ್ಲಾ: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ

ಬೆಂಗಳೂರಿನಲ್ಲಿ ಟೆಸ್ಲಾ ಮೊದಲ ಎಕ್ಸ್‌ಪೀರಿಯೆನ್ಸ್ ಸೆಂಟರ್ ಆರಂಭ

Tesla first Experience Center: ಬೆಂಗಳೂರಿನ ಐಟಿ ಹಬ್ ವೈಟ್‌ಫೀಲ್ಡ್‌ನಲ್ಲಿ ಜಾಗತಿಕ ಎಲೆಕ್ಟ್ರಿಕ್ ವಾಹನ ದೈತ್ಯ ಟೆಸ್ಲಾ ತನ್ನ ಚೊಚ್ಚಲ 'ಎಕ್ಸ್‌ಪೀರಿಯೆನ್ಸ್ ಸೆಂಟರ್' ಅನ್ನು ಗುರುವಾರ ಉದ್ಘಾಟಿಸಿದೆ. ಈ ಮೂಲಕ ಕರ್ನಾಟಕದ ವಾಹನ ಪ್ರಿಯರಿಗೆ ಟೆಸ್ಲಾ ಕಾರುಗಳ ಭವ್ಯ ಅನುಭವವನ್ನು ನೇರವಾಗಿ ಒದಗಿಸಲಿದೆ.

ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಹಿಂಪಡೆದಿರುವುದು ಅತ್ಯಂತ ದುರದೃಷ್ಟಕರ: ಜೋಶಿ ಕಿಡಿ

ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಹಿಂಪಡೆದಿರುವುದು ಅತ್ಯಂತ ದುರದೃಷ್ಟಕರ: ಜೋಶಿ

Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರ ವಿದ್ಯಾರ್ಥಿಗಳಲ್ಲೂ 'ವಿಭಜಕ ನೀತಿ' ಅನುಸರಿಸಿ ಶಾಲಾ ಶಿಸ್ತನ್ನು ಹದಗೆಡಿಸುವ ಹುನ್ನಾರಕ್ಕೆ ಮುಂದಾಗಿರುವುದು ನಿಜಕ್ಕೂ ಶೋಚನೀಯ. ಕೇಂದ್ರ ಸರ್ಕಾರ ದೇಶದೆಲ್ಲೆಡೆ ‌ಏಕರೂಪ ನಾಗರಿಕ ಸಂಹಿತೆ ಜಾರಿ ತರುತ್ತಿರುವ ಬೆನ್ನಲ್ಲೇ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಧರ್ಮಗಳನ್ನು ಒಡೆದಾಳುವ ನೀತಿಗೆ ಕೈ ಹಾಕಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆರೋಪಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ; ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಭವಿಷ್ಯ ನಿರ್ಧಾರ

ನಟ ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಟ ಬೇಗ ಜೈಲಿನಿಂದ ಬಿಡುಗಡೆಯಾಗಿ ಸಿನಿಮಾ ಜಗತ್ತಿಗೆ ಮರಳಬೇಕು ಎಂದು ಕಾಯುತ್ತಿದ್ದಾರೆ. ಸುಪ್ರೀಂ ಕೋರ್ಟ್ ನಾಳೆ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದು ಚಿತ್ರರಂಗ ಮತ್ತು ದರ್ಶನ್ ಅಭಿಮಾನಿಗಳಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

karnataka Hijab row: ಶಾಲೆಗಳಿಗೆ ಕೇಸರಿ ಶಾಲು ಕೂಡ ಹಾಕಿಕೊಂಡು ಬರುವಂತಿಲ್ಲ: ಸಿಎಂ ಸಿದ್ದರಾಮಯ್ಯ

ಶಾಲೆಗಳಿಗೆ ಕೇಸರಿ ಶಾಲು ಕೂಡ ಹಾಕಿಕೊಂಡು ಬರುವಂತಿಲ್ಲ: ಸಿಎಂ ಸಿದ್ದರಾಮಯ್ಯ

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದೆ. ಹೀಗಾಗಿ ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಇದೀಗ ಶಾಲಾ, ಕಾಲೇಜುಗಳಲ್ಲಿ ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

ಬೆಂಗಳೂರು ನಾಗರಿಕರಿಗೆ ಭೂ ಗ್ಯಾರಂಟಿ; ಡಿಸಿಎಂ ಘೋಷಿಸಿದ ಆಫರ್‌ನಲ್ಲೇನಿದೆ?

ಭೂ ಗ್ಯಾರಂಟಿಯ ಬಂಪರ್ ಘೋಷಿಸಿದ ಡಿಸಿಎಂ ಡಿಕೆ ಶಿವಕುಮಾರ್

Shivakumar announced a bumper guarantee: ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಕೇಂದ್ರ ಕಚೇರಿಯಲ್ಲಿ ಬುಧವಾರ (ಮೇ 13) ಮಾಧ್ಯಮಗೋಷ್ಠಿ ನಡೆಸಿ ಅನೇಕ ನಾಗರಿಕಸ್ನೇಹಿ ಘೋಷಣೆಗಳನ್ನು ಮಾಡಿದರು.

12 ನೇ ತರಗತಿಯವರೆಗೆ  ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಸಿಎಂ ಸಿದ್ದರಾಮಯ್ಯ

ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಸಿಎಂ

ರಾಜ್ಯದಲ್ಲಿ ಮತ್ತೆ ಹಿಜಾಬ್‌ ವಿವಾದ ಮುನ್ನೆಲೆಗೆ ಬಂದಿದ್ದು, ಸರ್ಕಾರ ಹಿಜಾಬ್‌ ಸೇರಿದಂತೆ ಜನಿವಾರ, ರುದ್ರಾಕ್ಷಿಯನ್ನು ಹಾಕಲು ಅನುಮತಿ ನೀಡಿದೆ. ಪ್ರಾಥಮಿಕ ತರಗತಿಯಿಂದ 12 ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಎಂದು ಸರ್ಕಾರ ಅನುಮತಿ ನೀಡಿದೆ.

ಬೆಂಗಳೂರು ನಾಗರಿಕರಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಇಂದ ಭೂ ಗ್ಯಾರಂಟಿಯ ಬಂಪರ್ ಘೋಷಣೆ

ಬೆಂಗಳೂರು ನಾಗರಿಕರಿಗೆ ಡಿಸಿಎಂ ಅವರಿಂದ ಭೂ ಗ್ಯಾರಂಟಿಯ ಬಂಪರ್ ಘೋಷಣೆ

"ಕಾಂಗ್ರೆಸ್ ಸರ್ಕಾರದ 6ನೇ ಗ್ಯಾರಂಟಿಯಾದ 'ಭೂ ಗ್ಯಾರಂಟಿ' ಮೂಲಕ ಬೆಂಗಳೂರು ನಾಗರಿಕರಿಗೆ 'ಇ' ಖಾತಾ ವಿತರಣೆ, ಕಟ್ಟಡ ಉಲ್ಲಂಘನೆ ವಿನಾಯಿತಿ ಮಿತಿ ಶೇ.5 ರಿಂದ ಶೇ.15 ಕ್ಕೆ ಹೆಚ್ಚಳ, 100 ದಿನದಲ್ಲಿ 'ಎ' ಯಿಂದ 'ಬಿ' ಖಾತಾ ಶುಲ್ಕ ಪಾವತಿಸಿದರೆ ಶೇ. 60 ರಷ್ಟು ರಿಯಾಯಿತಿ, ಶಿವರಾಂ ಕಾರಂತ ಬಡಾವಣೆಯ ಭೂ ಮಾಲೀಕರಿಗೆ 18 ಸಾವಿರ ನಿವೇಶನ ಹಂಚಿಕೆ, ʼಗ್ರೀನ್ ಬೆಂಗಳೂರುʼ ಕಾರ್ಯಕ್ರಮ, ಬಿಡಿಎ ಮನೆಗಳ ಮಾರಾಟ ಸೇರಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ನಾಗರಿಕರಿಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಬಂಪರ್ ಕೊಡುಗೆಯಾಗಿ ಘೋಷಿಸಿದ್ದಾರೆ.

Belgaum Municipal Corporation controversy: ಸರಕಾರದ ಅಂಗಳಕ್ಕೆ ಬೆಳಗಾವಿ ಪಾಲಿಕೆ ವಿವಾದ

ಸರಕಾರದ ಅಂಗಳಕ್ಕೆ ಬೆಳಗಾವಿ ಪಾಲಿಕೆ ವಿವಾದ

ಸದಸ್ಯರ ಆಗ್ರಗಕ್ಕೆ ಧ್ವನಿಗೂಡಿಸಿದ ಮಹಾನಗರ ಪಾಲಿಕೆ ಮೇಯರ್ ಪ್ರೀತಿ ಕಾಮಕರ್ ಅವರು ಈಗಾಗಲೇ ಬೆಳಗಾವಿ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿ ಇದ್ದು ಬೆಳಗಾವಿ ಮಹಾ ನಗರ ಪಾಲಿಕೆಗೆ ನಿರ್ಧಾರ ಕೈಗೊಳ್ಳುವ ಅವಕಾಶ ಇದೆಯಾ ಎಂಬುದನ್ನು ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಗಮನಕ್ಕೆ ತರಲಾಗುತ್ತದೆ.

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್‌; ಸರ್ಕಾರದ ನಡೆಗೆ ಸಿಡಿದೆದ್ದ ಬಿಜೆಪಿ

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಹಿಜಾಬ್‌; ಸರ್ಕಾರದ ನಡೆಗೆ ಬಿಜೆಪಿ ಕಿಡಿ

Karnataka withdraws 2022 uniform order: ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದೆ. ಆದರೆ ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

Shidlaghatta News: ಜೈ ಭೀಮ್ ಘೋಷಣೆಯೊಂದಿಗೆ ಯುವತಿಯರ ಸಂಭ್ರಮ : ಅಂಬೇಡ್ಕರ್ ಆದರ್ಶ ಸಾರಿದ ಅಲಸೂರುದಿನ್ನೆ ಯುವತಿಯರು

ಜೈ ಭೀಮ್ ಘೋಷಣೆಯೊಂದಿಗೆ ಯುವತಿಯರ ಸಂಭ್ರಮ

ಕಾರ್ಯಕ್ರಮದಲ್ಲಿ ಬಾಲಕಿಯರು ಸಂವಿಧಾನದ ಪೀಠಿಕೆಯನ್ನು ವಾಚಿಸುವ ಮೂಲಕ ಗ್ರಾಮ ಸ್ಥರಿಗೆ ಸಂವಿಧಾನದ ಮಹತ್ವ ಮತ್ತು ಸಮಾನತೆಯ ಸಂದೇಶವನ್ನು ಸಾರಿದರು. ಮಹಿಳೆಯರು ಹಾಗೂ ಯುವತಿಯರು ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ಸಕ್ರಿಯವಾಗಿ ಭಾಗವಹಿಸಬೇಕು ಎಂಬ ಆಶಯವನ್ನು ಕಾರ್ಯಕ್ರಮ ಪ್ರತಿಬಿಂಬಿಸಿತು.

Loading...