ದೇಶದ ಪಡಿತರದಾರರಿಗೆ ಇನ್ನು ಅತ್ಯಂತ ಶ್ರೇಷ್ಠ ಗುಣಮಟ್ಟದ ಅಕ್ಕಿ ಪೂರೈಕೆ
Pralhad Joshi: ದೇಶದ ಪ್ರತಿಯೊಂದು ಅರ್ಹ ಕುಟುಂಬವೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಮೊದಲಿನಷ್ಟೇ ಪ್ರಮಾಣದ ಆಹಾರ ಧಾನ್ಯ ಪಡೆಯಲಿದೆ. ಇದರಲ್ಲಿ ಯಾವುದೇ ರೀತಿ ಕಡಿತ ಮಾಡಲಾಗಿಲ್ಲ. ಆದರೆ, ಗುಣಮಟ್ಟದಲ್ಲಿ ಮಾತ್ರ ಪರಿವರ್ತನೆ ತೋರಲಾಗಿದೆ. ಅದರಂತೆ ಇನ್ನು ಮುಂದೆ ಶೇ.90ರಿಂದ 95ರಷ್ಟು ಉತ್ಕೃಷ್ಟ ಗುಣಮಟ್ಟದ ಅಕ್ಕಿ ಪಡಿತರದಾರರ ಕೈ ಸೇರಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜೋಶಿ ತಿಳಿಸಿದ್ದಾರೆ.