ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕರ್ನಾಟಕ

ಗರೀಬ್ ಕಲ್ಯಾಣ್ ಅನ್ನ ಯೋಜನೆ ಅಕ್ಕಿ ಉತ್ಕೃಷ್ಠ ಗುಣಮಟ್ಟಕ್ಕೆ ಪ್ರಲ್ಹಾದ್‌ ಜೋಶಿ ಮಹತ್ತರ ನಿರ್ಧಾರ

ದೇಶದ ಪಡಿತರದಾರರಿಗೆ ಇನ್ನು ಅತ್ಯಂತ ಶ್ರೇಷ್ಠ ಗುಣಮಟ್ಟದ ಅಕ್ಕಿ ಪೂರೈಕೆ

Pralhad Joshi: ದೇಶದ ಪ್ರತಿಯೊಂದು ಅರ್ಹ ಕುಟುಂಬವೂ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಮೊದಲಿನಷ್ಟೇ ಪ್ರಮಾಣದ ಆಹಾರ ಧಾನ್ಯ ಪಡೆಯಲಿದೆ. ಇದರಲ್ಲಿ ಯಾವುದೇ ರೀತಿ ಕಡಿತ ಮಾಡಲಾಗಿಲ್ಲ. ಆದರೆ, ಗುಣಮಟ್ಟದಲ್ಲಿ ಮಾತ್ರ ಪರಿವರ್ತನೆ ತೋರಲಾಗಿದೆ. ಅದರಂತೆ ಇನ್ನು ಮುಂದೆ ಶೇ.90ರಿಂದ 95ರಷ್ಟು ಉತ್ಕೃಷ್ಟ ಗುಣಮಟ್ಟದ ಅಕ್ಕಿ ಪಡಿತರದಾರರ ಕೈ ಸೇರಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜೋಶಿ ತಿಳಿಸಿದ್ದಾರೆ.

Gauribidanur News: ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಜವಾಬ್ದಾರಿ ವಹಿಸಿ: ಎನ್. ಎಚ್.ಶಿವಶಂಕರರೆಡ್ಡಿ ಕರೆ

ಅರ್ಹ ಮತದಾರರ ಹೆಸರು ಕೈಬಿಟ್ಟು ಹೋಗದಂತೆ ಜವಾಬ್ದಾರಿ ವಹಿಸಿ

ತಾಲ್ಲೂಕಿನ ಹೊಸೂರಿನ ಬಲಿಜಗರ ಕಲ್ಯಾಣ ಮಂಟಪದಲ್ಲಿ ಗೌರಿಬಿದನೂರು ವಿಧಾನಸಭಾ ಮತ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಕಾಂಗ್ರೆಸ್ ನಡೆ ಮತ ರಕ್ಷಣೆಯ ಕಡೆ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಬಿಎಲ್‌ಎ ಗಳ ತರಬೇತಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಕೆಲವು ರಾಜ್ಯಗಳಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಇದೀಗ ಕರ್ನಾಟಕದಲ್ಲೂ ಈ ಪ್ರಕ್ರಿಯೆ ಪ್ರಾರಂಭವಾಗಿದೆ.

Gauribidanur News: ಶಾಲಾ ಸಂಸತ್ ಚುನಾವಣೆ

Gauribidanur News: ಶಾಲಾ ಸಂಸತ್ ಚುನಾವಣೆ

ಹಣ ತೆಗೆದುಕೊಂಡು ಮತದಾನ ಮಾಡುವುದಲ್ಲ, ಅದು ನಮ್ಮ ಹಕ್ಕಾಗಿದೆ. ಭ್ರಷ್ಟಾಚಾರ ಮುಕ್ತ ವಾಗಿ ಚುನಾವಣೆಯಾಗಬೇಕು. ಈ ನಿಟ್ಟಿನಲ್ಲಿ ನಮಗೆ ಚುನಾವಣೆ ಹೇಗೆ ನಡೆಯುತ್ತದೆ, ನಾವು ಹೇಗೆ ಮತದಾನ ಮಾಡಬೇಕು, ಎಂದೆಲ್ಲಾ ಕಲಿಸಿದ್ದಾರೆ. ನಾವು ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಸಂವಿಧಾನದ ಘನತೆಯನ್ನು ಎತ್ತಿ ಹಿಡಿಯುತ್ತೇವೆ

ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಕರೆ; ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳೇನು?

ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ: ರೈತರಿಗೆ ಸಿಎಂ ಕರೆ

CM DK Shivakumar: ರಾಜ್ಯದ ಬಹುತೇಕ ಅಣೆಕಟ್ಟುಗಳಲ್ಲಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಹೀಗಾಗಿ ರೈತರು ಅಣೆಕಟ್ಟು ನೀರು ನಂಬಿಕೊಂಡು ಬೆಳೆ ಹಾಕಬೇಡಿ ಎಂದು ಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಕುರಿತ ಮಾಹಿತಿ ಇಲ್ಲಿದೆ.

ಜು.11ರಂದು ಜಿಲ್ಲೆಯಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ್: 5 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ ಗುರಿ: ನ್ಯಾ.ಟಿ.ಪಿ.ರಾಮಲಿಂಗೇಗೌಡ

5 ಸಾವಿರಕ್ಕೂ ಹೆಚ್ಚು ಪ್ರಕರಣಗಳ ಇತ್ಯರ್ಥ ಗುರಿ

ಲೋಕ ಅದಾಲತ್‌ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವುದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗುವುದರ ಜೊತೆಗೆ ನ್ಯಾಯಾಲಯಗಳಿಗೆ ಪದೇ ಪದೇ ಅಲೆದಾಡುವ ಅಗತ್ಯ ಇರುವುದಿಲ್ಲ. ಪರಸ್ಪರ ರಾಜಿಯಿಂದ ವಿವಾದಗಳು ಅಂತ್ಯಗೊಳ್ಳುವುದರಿಂದ ಸಂಬಂಧಗಳು ಉಳಿಯು ತ್ತವೆ, ವೈಮನಸ್ಸು ಮತ್ತು ಭಿನ್ನಾಭಿಪ್ರಾಯಗಳು ಕಡಿಮೆಯಾಗುತ್ತವೆ

Chinthamani News: ಬಿಜೆಪಿ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಮಾರಂಭದಲ್ಲಿ ಮುಖಂಡ ವೇಣುಗೋಪಾಲ್ ಭಾಗಿ

ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದು 100% ಸತ್ಯ ಎಂದು ದೃಢಪಡಿಸಿದ ಗೋಪಿ

ದೇವಸ್ಥಾನಗಳ ನಿಧಿ ದುರುಪಯೋಗದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ವೇಣುಗೋಪಾಲ್ ದೇವಸ್ಥಾನಗಳ ಹಣವನ್ನು ಯಾರೆಲ್ಲಾ ದುರುಪಯೋಗಪಡಿಸಿಕೊಂಡಿದ್ದಾರೋ ಅವರಿಂದ ಸಂಪೂರ್ಣ ಹಣ ವಸೂಲಿ ಮಾಡಬೇಕು. ಯಾವುದೇ ಕಾರಣಕ್ಕೂ ಯಾರನ್ನೂ ಬಿಡಬಾರದು. ಎಸ್‌ಐಟಿ ಮೂಲಕ ಸಮಗ್ರ ತನಿಖೆ ನಡೆಸಿ,ಮುಂದಿನ ದಿನಗಳಲ್ಲಿ ದೇವಸ್ಥಾನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು

ಶಾಸಕ ಪ್ರದೀಪ್ ಈಶ್ವರ್‌ಗೆ ಜೀವಭಯ; ಹೆಚ್ಚುವರಿ ಪೊಲೀಸ್ ಭದ್ರತೆಗೆ ಗುಪ್ತಚರ ಇಲಾಖೆಯ ಶಿಫಾರಸು?

ಕೆಂಪೇಗೌಡ ಜಯಂತಿ ಗದ್ದಲದ ಬಳಿಕ ಕ್ಷೇತ್ರದಲ್ಲಿ ಉದ್ವಿಗ್ನ ವಾತಾವರಣ

ಜೂನ್ 27ರಂದು ಸರ್ಕಾರದ ವತಿಯಿಂದ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಾಸಕ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಇರಬಾರದು, ಕುಮಾರಸ್ವಾಮಿ ಮತ್ತು ದೇವೇಗೌಡರ ಕುಟುಂಬದ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ, ಗೋ ಬ್ಯಾಕ್ ಪ್ರದೀಪ್ ಈಶ್ವರ್(Go back Pradeep Eshwar) ಎಂದು ಘೋಷಣೆಗಳನ್ನು ಕೂಗುತ್ತಾ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಾ ಅಪಮಾನ ಮಾಡಿದ್ದರು.

Gudibande News: ಪೌರಕಾರ್ಮಿಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಪೌರಕಾರ್ಮಿಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಖಜಾಂಚಿ ಶ್ರೀನಿವಾಸ, ಸಂಘಟನಾ ಕಾರ್ಯದರ್ಶಿಯಾಗಿ ಎ.ಜಿ.ಗಂಗಯ್ಯ, ಕಾನೂನು ಸಲಹೆಗಾರರಾಗಿ ಅಶ್ವತ್ಥಪ್ಪ, ಜಿಲ್ಲಾ ಜಂಟಿ ಕಾರ್ಯದರ್ಶಿಯಾಗಿ ಪದ್ಮನಾಭ, ಜಿಲ್ಲಾ ನಿರ್ದೇಶಕರಾಗಿ ಲೋಕೇಶ್, ಗಂಗಾಧರ್‍, ತಾಲೂಕು ನಿರ್ದೇಶಕರಾಗಿ ಕೆ.ವೆಂಕಟೇಶ್, ಚಿಕ್ಕಗಂಗಯ್ಯ, ಅಶ್ವತ್ಥಮ್ಮ, ಶ್ರೀನಿವಾಸ, ಚಿಕ್ಕಮುನಿಶಾಮಿ ರವರುಗಳು ಆಯ್ಕೆಯಾಗಿದ್ದಾರೆ.

ಕಾಲಚಕ್ರ ತಿರುಗುತ್ತಲೇ ಇರುತ್ತದೆ, ಮೇಲೆ ಹೋದವನು ಕೆಳಗೆ ಬರಲೇಬೇಕು: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

ಕಾಲಚಕ್ರ ತಿರುಗುತ್ತಲೇ ಇರುತ್ತದೆ ಮೇಲೆ ಹೋದವನು ಕೆಳಗೆ ಬರಲೇಬೇಕು: ಎಚ್‌ಡಿಕೆ

HD Kumaraswamy: ನಾನೇ ಇರುತ್ತೇನೆ, ಎಲ್ಲವೂ ನನ್ನಿಂದಲೇ ಆಗುತ್ತದೆ ಎನ್ನುವುದು ನಡೆಯಲ್ಲ. ಪ್ರತಿಯೊಂದಕ್ಕೂ ಕೊನೆ ಇರುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿರುಗೇಟು ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್‌; ಮೂಲ ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಸಾರಿಗೆ ನೌಕರರಿಗೆ ಗುಡ್‌ ನ್ಯೂಸ್‌; ವೇತನ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 38 ತಿಂಗಳ ವೇತನ ಹಿಂಬಾಕಿಯೂ ಸಿಕ್ಕಿಲ್ಲ ಎಂದು ಸಿಬ್ಬಂದಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದು, ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ, ಸಾರಿಗೆ ನಿಗಮಗಳ ಸಿಬ್ಬಂದಿ ವೇತನ ಹೆಚ್ಚಿಸಿ ಆದೇಶ ಹೊರಡಿಸಿದೆ.

Gubbi News: ಗ್ರಾಮೀಣ ಜನರ ಆರೋಗ್ಯಕ್ಕೆ ಮಲ್ಟಿ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಲೋಕಾರ್ಪಣೆ

ಗ್ರಾಮೀಣ ಜನರ ಆರೋಗ್ಯಕ್ಕೆ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ಲೋಕಾರ್ಪಣೆ

ಲೋಕಾರ್ಪಣೆಗೊಳಿಸಿದ ತಹಶೀಲ್ದಾರ್ ಆರತಿ.ಬಿ ಮಾತನಾಡಿ, ಗ್ರಾಮೀಣ ಜನರಿಗೆ ದಂತ ಆರೋಗ್ಯ ಬಗ್ಗೆ ಅರಿವಿಲ್ಲ. ಮುಖ ಸೌಂದರ್ಯಕ್ಕೆ ದಂತ ಆರೋಗ್ಯ ಮುಖ್ಯ ಎಂಬ ಅರಿವು ಮೂಡಿಸಲು ತಾಲ್ಲೂಕಿನ ಎಲ್ಲಾ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ನಡೆಸಿ ಜೊತೆಗೆ ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವ ಅರಿವು ಮೂಡಿಸುವ ಕೆಲಸ ಶ್ಲಾಘನೀಯ ಎಂದರು

WDTI: ಬಿಡದಿಯಲ್ಲಿ ಮಹಿಳಾ ವಾಹನ ಚಾಲನಾ ತರಬೇತಿ ಸಂಸ್ಥೆ

ಬಿಡದಿಯಲ್ಲಿ ಮಹಿಳಾ ವಾಹನ ಚಾಲನಾ ತರಬೇತಿ ಸಂಸ್ಥೆ

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಈ ವಾಹನ ಚಾಲನಾ ತರಬೇತಿ ಸಂಸ್ಥೆ ಯನ್ನು ಆರಂಭಿಸಲಾಗುತ್ತದೆ. ಮಹಿಳಾ ಸ್ವಯಂ ಸೇವಾ ಸಂಸ್ಥೆಯಾಗಿರುವ ಅವೇಕ್ (AWAKE - Association of Women Entrepreneurs of Karnataka) ಮಹಿಳೆಯರಿಗೆ ವಾಹನ ಚಾಲನೆ ಸೇರಿದಂತೆ ಕೌಶಲ್ಯಾಧಾರಿತ ತರಬೇತಿಗಳನ್ನು ನೀಡಲಿದೆ

ಎಂ.ಅಗ್ರಹಾರದ ಜಯಪ್ರಕಾಶ್ ನಾರಾಯಣ್ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಕೆ.ಬಿ.ನಾರಾಯಣ ಸ್ವಾಮಿ ಅವರಿಗೆ ಹಳೇ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

ಮುಖ್ಯೋಪಾಧ್ಯಾಯ ಅವರಿಗೆ ಹಳೇ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ

1991ರಲ್ಲಿ ವೃತ್ತಿ ಜೀವನ ಆರಂಭಿಸಿದ್ದ ಕೆ.ಬಿ.ನಾರಾಯಣ ಸ್ವಾಮಿ ಅವರು, ಶಾಲೆಯ ಬೆಳವಣಿಗೆಗೆ ಹಾಗೂ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿರುವುದು ಶ್ಲಾಘ ನೀಯ. ಅವರ ಹಳೇ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಇಷ್ಟು ಅದ್ಧೂರಿ ಸಮಾರಂಭ ಮಾಡುತ್ತಿರುವು ದನ್ನು ಗಮನಿಸಿದರೇ ಇವರ ಸಾಧನೆ ಏನೆಂಬುದು ತಿಳಿಯುತ್ತಿದೆ.

ಬೆಂಗಳೂರಿನಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ; ತೀವ್ರ ಶೋಧ

ಬೆಂಗಳೂರಿನಲ್ಲಿರುವ ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ

ರಾಜ್ಯದ ಹಲವು ಕೋರ್ಟ್‌ ಹಾಗೂ ಸರ್ಕಾರಿ ಕಚೇರಿಗಳಿಗೆ ಬಾಂಬ್‌ ಬೆದರಿಕೆ ಬಂದ ಬಳಿಕ ಇದೀಗ ಇಸ್ರೋ (ISRO) ಪ್ರಧಾನ ಕಚೇರಿಗೆ ಗುರುವಾರ ಬಾಂಬ್ ಬೆದರಿಕೆಯ ಇಮೇಲ್‌ ಕಳುಹಿಸಲಾಗಿದ್ದು, ವ್ಯಾಪಕ ಶೋಧ ಕಾರ್ಯಾಚರಣೆ ನಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

Fashion News 2026: ಬೆಂಗಳೂರಿನ ಮಾಲ್‌ಗಳಿಗೂ ಕಾಲಿಟ್ಟ AI ಸ್ಮಾರ್ಟ್ ಟ್ರಯಲ್‌ ರೂಮ್ಸ್

ಬೆಂಗಳೂರಿನ ಮಾಲ್‌ಗಳಿಗೂ ಕಾಲಿಟ್ಟ AI ಸ್ಮಾರ್ಟ್ ಟ್ರಯಲ್‌ ರೂಮ್ಸ್

AI Smart Trial Rooms: ಇದೀಗ ಉದ್ಯಾನನಗರಿಗೂ AI ಸ್ಮಾರ್ಟ್ ಟ್ರಯಲ್‌ ರೂಮ್‌ಗಳು ಕಾಲಿಟ್ಟಿವೆ. ಸ್ಮಾರ್ಟ್ ಹುಡುಗಿಯರ ಪ್ರಯೋಗಾತ್ಮಕ ಶಾಪಿಂಗ್‌ಗೆ ಸಾಥ್‌ ನೀಡುತ್ತಿವೆ. ಇದ್ಯಾವ ಬಗೆಯ ಟ್ರಯಲ್‌ ರೂಮ್ಸ್? ಏನಿದರ ಸ್ಪೆಷಾಲಿಟಿ? ಇಲ್ಲಿದೆ ಫ್ಯಾಷನ್‌ ಪತ್ರಕರ್ತೆಯ ಪ್ರತ್ಯಕ್ಷ ವರದಿ.

Karnataka BJP: ಬಿಜೆಪಿಯಲ್ಲಿ ಮುಂದುವರಿದ ಶಿಸ್ತು ಕ್ರಮ; ಮಹೇಶ್‌ ಬೆನ್ನಲ್ಲೇ ಮತ್ತೋರ್ವ ನಾಯಕನ ಉಚ್ಚಾಟನೆ

ಪಕ್ಷ ವಿರೋಧಿ ಚಟುವಟಿಕೆ: ಬಿಜೆಪಿಯಿಂದ ಮತ್ತೋರ್ವ ನಾಯಕನ ಉಚ್ಚಾಟನೆ

ರಾಜ್ಯ ಬಿಜೆಪಿಯಲ್ಲಿ ಶಿಸ್ತುಕ್ರಮ ಮುಂದುವರಿದಿದ್ದು, ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ 6 ವರ್ಷ ಅಮಾನತು ಮಾಡಲಾಗಿದೆ. ಕೆಲವು ದಿನಗಳ ಹಿಂದೆಯಷ್ಟೇ ರಾಜ್ಯ ಬಿಜೆಪಿ ವಕ್ತಾರ ಎಂ.ಜಿ. ಮಹೇಶ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿತ್ತು.

ರಾಜ್ಯ ಸರ್ಕಾರಕ್ಕೆ ಭಾರಿ ಮುಖಭಂಗ; ಕೋಮುಗಲಭೆ ಸೇರಿ 52 ಕ್ರಿಮಿನಲ್ ಪ್ರಕರಣ ವಾಪಸಾತಿ ನಿರ್ಧಾರಕ್ಕೆ ಮಧ್ಯಂತರ ತಡೆ

52 ಕ್ರಿಮಿನಲ್ ಪ್ರಕರಣ ವಾಪಸಾತಿ ನಿರ್ಧಾರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದರಲ್ಲಿ ಸಚಿವ ಯು.ಟಿ. ಖಾದರ್ ಶಿಫಾರಸು ಮಾಡಿದ ಪ್ರಕರಣಗಳೂ ಇವೆ ಎನ್ನುವುದು ವಿಶೇಷ. ಆ ಮೂಲಕ ರಾಜ್ಯ ಸರ್ಕಾರಕ್ಕೆ ಭಾರಿ ಮುಖಭಂಗವಾಗಿದೆ.

ಬಿಡದಿ ಟೌನ್‍ಶಿಪ್ ವಿಚಾರ; ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜತೆ ಸಮಾಲೋಚನೆ ಮಾಡಿ: ಬಿ.ವೈ. ವಿಜಯೇಂದ್ರ ಆಗ್ರಹ

ದಬ್ಬಾಳಿಕೆ ಮಾಡುವುದನ್ನು ಬಿಟ್ಟು ರೈತರ ಜತೆ ಸಮಾಲೋಚನೆ ಮಾಡಿ: ಬಿವೈವಿ

BY Vijayendra: ಡಿ.ವಿ. ಸದಾನಂದ ಗೌಡರ ಆಡಿಯೋ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಆಡಿಯೋದಲ್ಲಿರುವುದು ನನ್ನ ಧ್ವನಿ ಅಲ್ಲ ಎಂದು ಸ್ವತಃ ಸದಾನಂದ ಗೌಡರೇ ಹೇಳಿಕೆ ನೀಡಿದ್ದಾರೆ. ಎಲ್ಲವನ್ನು ಅವರೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

Madapattana Quarry Tragedy: ಮಾದಪಟ್ಟಣ ಕಲ್ಲು ಕ್ವಾರಿ ದುರಂತದಲ್ಲಿ ಮೃತಪಟ್ಟವರ ಗುರುತು ಪತ್ತೆ; ಸ್ಫೋಟದಿಂದ ಅವಘಡ ಸಂಭವಿಸಿಲ್ಲ ಎಂದ ಸಿಎಂ ಡಿ.ಕೆ. ಶಿವಕುಮಾರ್‌

ಮಾದಪಟ್ಟಣ ಕಲ್ಲು ಕ್ವಾರಿ ದುರಂತ; ಮೃತರ ಗುರುತು ಪತ್ತೆ

Bengaluru Tragedy: ಬೆಂಗಳೂರು ಹೊರವಲಯದ ತಾವರೆಕೆರೆ ಸಮೀಪದ ಮಾಗಡಿ ರಸ್ತೆಯ ಮಾದಪಟ್ಟಣ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿಸು ಸಂಭವಿಸಿದ ಭೀಕರ ದುರಂತದಲ್ಲಿ ಒಟ್ಟು 7 ಮಂದಿ ಮೃತಪಟ್ಟಿದ್ದಾರೆ. ಗುರುವಾರ (ಜುಲೈ 2) ಬೆಳಗ್ಗೆ ಏಕಾಏಕಿ ಬಂಡೆ ಕುಸಿದ ಪರಿಣಾಮ ಈ ದುರಂತ ಸಂಭವಿಸಿದೆ. ಮೃತರನ್ನು ರಾಮು (46), ರಾಜಪಾಲ್​​ ಸಿಂಗ್​ (35), ಸತ್ಯನಾರಾಯಣ ಸಿಂಗ್​ (31), ರಾಮ ವತಾರ್​ ಸಿಂಗ್ (31), ರಾಜೇಂದ್ರ ಪ್ರಸಾದ್, ನೂಹರ್​ ಸಿಂಗ್​​ ಮತ್ತು ಭುವನೇಶ್ವರ ಸಿಂಗ್​ ಎಂದು ಗುರುತಿಸಲಾಗಿದೆ.

ಮೊಟ್ಟೆಯ ಹಣ ಕೇಳಿದ್ದಕ್ಕೆ ಅಂಗಡಿ ಮಾಲಕನ ಭೀಕರ ಕೊಲೆ; ಹಾವೇರಿಯಲ್ಲಿ ಮತ್ತೊಮ್ಮೆ ಹರಿದ ನೆತ್ತರು

ಮೊಟ್ಟೆಯ ಹಣ ಕೇಳಿದ್ದಕ್ಕೆ ಅಂಗಡಿ ಮಾಲಕನ ಭೀಕರ ಕೊಲೆ

Haveri News: ಮೊಟ್ಟೆಯ ಹಣ ಕೇಳಿದ್ದಕ್ಕೆ ಅಂಗಡಿ ಮಾಲಕನ ಕೊಲೆ ನಡೆದ ಭೀಕರ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಸಂಭವಿಸಿದೆ. ಮೃತರನ್ನು ಅಂಗಡಿ ಮಾಲಕ ಶಿವಾಜಿರಾವ್‌ ಭೈರೋಜಿಯವರ (60) ಎಂದು ಗುರುತಿಸಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.

ದರ್ಶನ್ ವಿರುದ್ಧ ಸಾಕ್ಷಿ ಹೇಳದಂತೆ ಪ್ರಾಣ ಬೆದರಿಕೆ; ಡಿ ಕಂಪನಿ ಗ್ಯಾಂಗ್‌ ಸದಸ್ಯರ ಬಂಧನ

ಡಿ ಕಂಪನಿ ಗ್ಯಾಂಗ್‌ ಸದಸ್ಯರ ಬಂಧನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ ವಿರುದ್ಧ ಸಾಕ್ಷಿ ಹೇಳದಂತೆ ಸಾಕ್ಷಿಯೊಬ್ಬರಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ನಟ ದರ್ಶನ್ ಅಭಿಮಾನಿ ಬಳಗದ ಮೂವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ದರ್ಶನ್ ಅಭಿಮಾನಿ ಸಂಘದ ಸಕ್ರಿಯ ಸದಸ್ಯರಾದ ಪುನೀತ್, ಸುಹಾಸ್ ಮತ್ತು ವೇಣು ಎಂದು ಗುರುತಿಸಲಾಗಿದೆ.

Gold Price Today On 2nd July 2026: ಚಿನ್ನದ ದರದಲ್ಲಿ ಭಾರಿ ಏರಿಕೆ; ಇಂದು ಹೆಚ್ಚಾಗಿದ್ದು ಬರೋಬ್ಬರಿ 3,770 ರುಪಾಯಿ

ಚಿನ್ನದ ದರದಲ್ಲಿ ಬರೋಬ್ಬರಿ 3,770 ರುಪಾಯಿ ಹೆಚ್ಚಳ

Gold Silver Price Today: ಗುರುವಾರ (ಜುಲೈ 2) ಚಿನ್ನದ ದರ ಮತ್ತೆ ಚಿಗಿತುಕೊಂಡಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 345 ರುಪಾಯಿ ಹೆಚ್ಚಳವಾಗಿದ್ದು, 13,250 ರುಪಾಯಿಗೆ ಬಂದು ತಲುಪಿದೆ. 24 ಕ್ಯಾರಟ್‌ನ 1 ಗ್ರಾಂ ಚಿನ್ನ 120 ರುಪಾಯಿ ದುಬಾರಿಯಾಗಿದ್ದು, 14,455 ರುಪಾಯಿಗೆ ಬಂದು ತಲುಪಿದೆ.

ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು 7 ಮಂದಿ ಸಾವು; ಬೆಂಗಳೂರಿನ ಮಾದಪಟ್ಟಣದಲ್ಲಿ ದುರಂತ

ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು 7 ಮಂದಿ ಸಾವು

ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಗುರುವಾರ (ಜುಲೈ 2) ಬೆಳ್ಳಂಬೆಳಗ್ಗೆ ಘೋರ ದುರಂತ ಸಂಭವಿಸಿದ್ದು, ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, 4 ಮೃತದೇಹ ಹೊರ ತೆಗೆಯಲಾಗಿದೆ.

Belagavi News: ಆರ್‌ಎಸ್‌ಎಸ್‌-ಕಾಂಗ್ರೆಸ್‌ ತಿಕ್ಕಾಟದ ನಡುವೆ ರಾಜ್ಯಕ್ಕೆ ಮೋಹನ್ ಭಾಗವತ್ ಭೇಟಿ; ಜುಲೈ 6ರಂದು ಬೆಳಗಾವಿಗೆ ಆಗಮನ

ಜುಲೈ 6ರಂದು ಮೋಹನ್‌ ಭಾಗವತ್‌ ಬೆಳಗಾವಿಗೆ

Mohan Bhagwat: ಗೃಹ ಸಚಿವಪ್ರಿಯಾಂಕ್‌ ಖರ್ಗೆ ಇತ್ತೀಚೆಗೆ ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಆರ್‌ಎಸ್‌ಎಸ್‌ ಕೂಡ ಸರಿಯಾಗಿ ತಿರುಗೇಟು ನೀಡಿತ್ತು. ಹೀಗೆ ಆರ್‌ಎಸ್‌ಎಸ್‌ ಮತ್ತು ಕಾಂಗ್ರೆಸ್‌ ನಡುವಿನ ತಿಕ್ಕಾಟ ತಾರಕಕ್ಕೇರಿರುವ ಮಧ್ಯೆಯೇ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಜುಲೈ 6ರಂದು ನಡೆಯುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

Loading...