ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
ಕರ್ನಾಟಕ
Transfer guidelines: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌; ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

Transfer guidelines: ಈ ಮೊದಲು ಷರತ್ತುಗಳಿಗೊಳಪಟ್ಟು ಮೇ 12 ರಿಂದ ಜೂನ್ 14ರವರೆಗೆ‌ ವರ್ಗಾವಣೆ ಕೈಗೊಳ್ಳಲು ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖಾ ಸಚಿವರಿಗೆ ಹಾಗೂ ಗ್ರೂಪ್-ಸಿ ಮತ್ತು ಗ್ರೂಪ್-ಡಿ ವೃಂದದ ನೌಕರರಿಗೆ ಸಂಬಂಧಿಸಿದಂತೆ ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಅಧಿಕಾರ ಪ್ರತ್ಯಾಯೋಜಿಸಿ ಆದೇಶಿಸಲಾಗಿತ್ತು. ಇದೀಗ ವರ್ಗಾವಣೆ ಅವಧಿಯನ್ನು ವಿಸ್ತರಿಸಲಾಗಿದೆ.

Rachita Ram: ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ನಿರ್ದೇಶಕ ನಾಗಶೇಖರ್‌ ದೂರು; ಕಾರಣವೇನು?

ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ಗೆ ನಿರ್ದೇಶಕ ನಾಗಶೇಖರ್‌ ದೂರು

Rachita Ram: ನಾಗಶೇಖರ್ ನಿರ್ದೇಶನದ ಸಂಜು ವೆಡ್ಸ್ ಗೀತಾ 2 ಸಿನಿಮಾದಲ್ಲಿ ರಚಿತಾ ರಾಮ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾ ರಿಲೀಸ್ ಆಗುವ ಮುನ್ನ ಮತ್ತು ನಂತರ ಸಂಜು ವೆಡ್ಸ್ ಗೀತಾ 2 ಸಿನಿಮಾ ಪ್ರಚಾರಕ್ಕೆ ರಚಿತಾ ಭಾಗಿಯಾಗಿಲ್ಲ ಎಂದು ನಿರ್ದೇಶಕ ನಾಗಶೇಖರ್‌ ಅಸಮಾಧಾನ ಹೊರಹಾಕಿದ್ದಾರೆ.

Visvesvaraya Jala Nigam: ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಎಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ (VJNL) 2025ನೇ ಸಾಲಿನ ಪ್ರತಿಷ್ಠಿತ ಐಐಎನ್ ಪ್ಲಾಟಿನಮ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಕುರಿತ ವಿವರ ಇಲ್ಲಿದೆ.

Fake Bride: ಕನ್ಯೆ ಎಂದು ನಂಬಿಸಿ 2 ಮಕ್ಕಳ ತಾಯಿ ಜತೆ ಕೊಪ್ಪಳದ ಯುವಕನಿಗೆ ಮದುವೆ; 4 ಲಕ್ಷ ವಂಚನೆ!

ಕನ್ಯೆ ಎಂದು ನಂಬಿಸಿ 2 ಮಕ್ಕಳ ತಾಯಿ ಜತೆ ಕೊಪ್ಪಳದ ಯುವಕನಿಗೆ ಮದುವೆ!

Fake Bride: ಐದು ದಿನ ವಧುವಾಗಿ ನಟಿಸಿದರೆ 50 ಸಾವಿರ ಕೊಡುತ್ತೇವೆ ಎಂದು ವಿವಾಹಿತ ಯುವತಿಗೆ ಬ್ರೋಕರ್ಸ್‌ ಆಮಿಷ ಒಡ್ಡಿದ್ದರು. ಅದರಂತೆ ಹುಡುಗನಿಂದ 4 ಲಕ್ಷ ಹಣ ಪಡೆದು, ಇಬ್ಬರು ಮಕ್ಕಳ ತಾಯಿ ಜತೆ ಮದುವೆ ಮಾಡಿಸಿದ್ದಾರೆ. ಇದೀಗ ನ್ಯಾಯಕ್ಕಾಗಿ ಪೊಲೀಸರಿಗೆ ಯುವಕ ದೂರು ನೀಡಿದ್ದಾನೆ.

Cleft lip: ಪಾಲಕರನ್ನು ಭಯಕ್ಕೀಡು ಮಾಡುವ ಸೀಳುತುಟಿ: ಇದಕ್ಕೂ ಇದೆ ಪರಿಹಾರ!

ಸೀಳು ತುಟಿಗೂ ಇದೆ ಪರಿಹಾರ; ಏನು ಮಾಡುಬೇಕು?

ಮನೆಯಲ್ಲಿ ಮಕ್ಕಳು ಹುಟ್ಟಿದ್ದಾರೆನ್ನುವ ಸುದ್ದಿಯೇ ಕುಟುಂಬಸ್ಥರಿಗೆಲ್ಲರಿಗೂ ಸಂತೋಷವನ್ನುಂಟು ಮಾಡುತ್ತದೆ. ಕೆಲವೊಮ್ಮೆ ಹುಟ್ಟುವ ಮಕ್ಕಳಿಗೆ ಆರೋಗ್ಯ ಸಮಸ್ಯೆಯೂ ಎದುರಾಗುತ್ತದೆ. ಅದರಲ್ಲಿ ಸೀಳುತುಟಿ ಸಮಸ್ಯೆಯೂ ಒಂದು. ಒಂಬತ್ತು ತಿಂಗಳುಗಳ ಕಾಲ ಪಾಲನೆ ಮಾಡಿದ ಮಗುವಿನ ಮುಖದಲ್ಲಿ ಸೀಳುತುಟಿ ಸಮಸ್ಯೆ ಕಾಣಿಸಿಕೊಂಡರೆ ಅದು ಪಾಲಕರಿಗೆ ಮಾನಸಿಕ ಒತ್ತಡ ಮತ್ತು ನೋವನ್ನು ಉಂಟು ಮಾಡುತ್ತದೆ.

Viral Video: ಅಂಗಡಿಯ ನೇಮ್ ಬೋರ್ಡ್‌ನಲ್ಲಿ  ಕನ್ನಡವಿಲ್ಲವೆಂದು ಕ್ಯಾತೆ ತೆಗೆದ ಹಿರಿಯ ನಾಗರಿಕ

ಅಂಗಡಿಯ ನೇಮ್‍ ಬೋರ್ಡ್‌ ವಿಷಯಕ್ಕೆ ನಡೆದ ಜಗಳ

ಬೆಂಗಳೂರಿನಲ್ಲಿ ಮಹಿಳಾ ಉದ್ಯಮಿಯೊಬ್ಬಳು ತನ್ನ ಶಾಪ್‍ನ ನೇಮ್‍ ಬೋರ್ಡ್‍ನಲ್ಲಿ ಕನ್ನಡವನ್ನು ಬಳಸದ ಕಾರಣ ಹಿರಿಯ ನಾಗರಿಕರೊಬ್ಬರು ಆಕೆಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಮರ್ಷಿಯಲ್ ಬೋರ್ಡ್‍ಗಳಲ್ಲಿ ಬರೆದ ಪದಗಳು 60% ಕನ್ನಡದಲ್ಲಿರಬೇಕು ಎಂಬ ಬಿಬಿಎಂಪಿಯ ಭಾಷಾ ನೀತಿಯನ್ನು ಪಾಲಿಸುವಂತೆ ಒತ್ತಾಯಿಸಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

HD Kumaraswamy: ಇಸ್ರೇಲ್-ಇರಾನ್‌ ಸಂಘರ್ಷ: ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಇಸ್ರೇಲ್‌ನಲ್ಲಿರುವ ಕನ್ನಡಿಗರ ಜತೆ ಮಾತನಾಡಿದ ಕೇಂದ್ರ ಸಚಿವ ಎಚ್‌ಡಿಕೆ

HD Kumaraswamy: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಿಂದಾಗಿ ಪ್ರಸ್ತುತ ಇಸ್ರೇಲ್‌ನಲ್ಲಿ ಸಿಲುಕಿರುವ ಹಲವಾರು ಕನ್ನಡಿಗರೊಂದಿಗೆ ವೀಡಿಯೋ ಕರೆ ಮಾಡಿ ಅವರ ಕ್ಷೇಮ, ಸುರಕ್ಷತೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

DK Shivakumar: ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ: ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬಿಜೆಪಿಯವರನ್ನು ಹೆಗಲ ಮೇಲೆ ಹಾಕಿಕೊಂಡು ಹೊರೋಣ: ಡಿ.ಕೆ.ಶಿವಕುಮಾರ್ ವ್ಯಂಗ್ಯ

DK Shivakumar: ಕಾಲ್ತುಳಿತ ಪ್ರಕರಣದಲ್ಲಿ ಯಾರ‍್ಯಾರಿಗೆ ಶಿಕ್ಷೆ ಕೊಡಬೇಕೋ ಆ ಕೆಲಸವನ್ನು ಸರ್ಕಾರ ಮಾಡಿದೆ. ತನಿಖೆಗಾಗಿ ಏಕ ಸದಸ್ಯ ಆಯೋಗವನ್ನು ಸಹ ನೇಮಕ ಮಾಡಲಾಗಿದೆ. ಇಡೀ ದೇಶದಲ್ಲಿ ನೂರಾರು ಘಟನೆಗಳು ನಡೆದಿವೆ. ಆದರೂ ಕಾಂಗ್ರೆಸ್ ಪಕ್ಷ ಎಂದಿಗೂ ಹೆಣದ ಮೇಲೆ ರಾಜಕೀಯ ಮಾಡಿಲ್ಲ ಎಂದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

World Environment Day: ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಅಳವಡಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮ ಅಳವಡಿಸಲು ಕ್ರಮ: ಸಿಎಂ ಸಿದ್ದರಾಮಯ್ಯ

World Environment Day: ಪರಿಸರ ಸಂರಕ್ಷಣೆ, ಅದರ ಬಗೆಗಿನ ಜ್ಞಾನ ಹಾಗೂ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಬೇಕಾಗಿರುವುದು ಅತ್ಯಂತ ಅವಶ್ಯ. ಪರಿಸರವನ್ನು ನಾವು ಕಾಪಾಡಿದರೆ ಅದು ನಮ್ಮನ್ನು ಕಾಪಾಡುತ್ತದೆ. ಇಂದು ಬೋಧಿಸಲಾಗಿರುವ ಪ್ರತಿಜ್ಞಾ ವಿಧಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಬೆಂಗಳೂರಿನ ಪ್ರೀಮಿಯಂ ಬೈಕ್‌ಗಳ ಮೇಲಿನ ಉತ್ಸಾಹಕ್ಕೆ ಇಂಬು ನೀಡಲು ಜಾವಾ ಯೆಜ್ಡಿ 12 ನೇ ಡೀಲರ್‌ಶಿಪ್ ಪ್ರಾರಂಭ

ಜಾವಾ ಯೆಜ್ಡಿ 12 ನೇ ಡೀಲರ್‌ಶಿಪ್ ಪ್ರಾರಂಭ

ಐಕಾನಿಕ್ ಮೋಟಾರ್ಸ್ ಜೊತೆಗೂಡಿ, ಕಂಪನಿಯು ಕರ್ನಾಟಕದಲ್ಲಿ 22 ಡೀಲರ್‌ಗಳನ್ನು ಹೊಂದಿದೆ, ಇದು ಬ್ರ್ಯಾಂಡ್‌ಗಳ ವೇಗವಾಗಿ ಬೆಳೆಯುತ್ತಿರುವ ಕೆಲವು ಮಾರುಕಟ್ಟೆಗಳಿಗೆ ನೆಲೆ ಯಾಗಿದೆ, ಇದರಲ್ಲಿ ಬೆಂಗಳೂರು ಸೇರಿದಂತೆ ಜಾವಾ ಮತ್ತು ಯೆಜ್ಡಿಯ ಮೋಟಾರ್‌ಸೈಕಲ್‌ಗಳ ಮೇಲಿನ ಉತ್ಕಟ ಬ್ರಾಂಡ್ ಪ್ರೀತಿಯ ಪರಂಪರೆಯನ್ನು ಹೊಂದಿದೆ.

DK Shivakumar: ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ,‌ ಹವಾಮಾನ ವೈಪರಿತ್ಯ ಜಾಗೃತಿ ಕ್ಲಬ್ ಸ್ಥಾಪನೆಗೆ ಆದೇಶ: ಡಿ.ಕೆ.ಶಿವಕುಮಾರ್

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪರಿಸರ,‌ ಹವಾಮಾನ ಕ್ಲಬ್ ಸ್ಥಾಪನೆಗೆ ಆದೇಶ

DK Shivakumar: ರಾಜ್ಯದ ಪ್ರತಿಯೊಂದು ಶಾಲೆಗಳಲ್ಲಿಯೂ ಪರಿಸರ,‌ ಹವಾಮಾನ ವೈಪರೀತ್ಯ ಜಾಗೃತಿ ಕ್ಲಬ್‌ಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ಆದೇಶ ನೀಡಲಾಗಿದೆ. ಕನಿಷ್ಠ 25 ವಿದ್ಯಾರ್ಥಿಗಳನ್ನು ಒಳಗೊಂಡಂತೆ ಈ ಜಾಗೃತಿ ಕ್ಲಬ್ ಗಳನ್ನು ರಚನೆ ಮಾಡಬೇಕು. ಪ್ರಕೃತಿ ಉಳಿಸುವ ದೊಡ್ಡ ಹೋರಾಟದ ಹಾಗೂ ಜಾಗೃತಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಬೇಕು ಎಂದು ಈ ಆದೇಶ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

Sirsi News: 23 ರಂದು ಕಾರವಾರ ಚಲೋ

23 ರಂದು ಕಾರವಾರ ಚಲೋ

ನಮ್ಮ ತಾಲೂಕಿಗೆ ತಹಸೀಲ್ದಾರ್ ಅವಶ್ಯಕತೆ ಇದ್ದು, ಸಾರ್ವಜನಿಕ ವಲಯದಲ್ಲಿ ತಹಸೀ ಲ್ದಾರ್ ಇಲ್ಲದೇ ಪರದಾಡುವಂತಾಗಿದೆ. ಆದ್ದರಿಂದ ಸಾರ್ವಜನಿಕ ಹಿತಾಸಕ್ತಿಯಿಂದ 23 ರಂದು ಕಾರವಾರ ಚಲೋ ಹಮ್ಮಿಕೊಂಡಿದ್ದೇವೆ. ಸಮಾನ ಮನಸ್ಕರೆಲ್ಲರೂ ಎಲ್ಲರೂ ಕೈ ಜೋಡಿಸಿ ಎಂದು ಹೋರಾಟಗಾರ, ಸಾಮಾಜಿಕ ಕಾರ್ಯಕರ್ತ ಅನಂತ ಮೂರ್ತಿ ಹೆಗಡೆ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

Aishwarya Gowda Case: ಐಶ್ವರ್ಯಾಗೌಡ ಪ್ರಕರಣ; ವಿಚಾರಣೆಗೆ ಬರುವಂತೆ ಡಿ.ಕೆ.ಸುರೇಶ್‌ಗೆ ಇಡಿ ನೋಟಿಸ್‌

ಐಶ್ವರ್ಯಾಗೌಡ ಪ್ರಕರಣ; ಡಿ.ಕೆ.ಸುರೇಶ್‌ಗೆ ಇಡಿ ನೋಟಿಸ್‌

Aishwarya Gowda Case: ಐಶ್ವರ್ಯಗೌಡ ನಮ್ಮ ಕ್ಷೇತ್ರದವರು ಒಂದೆರಡು ಕಾರ್ಯಕ್ರಮಕ್ಕೆ ಹೋಗಿದ್ದೆ. ನನ್ನ ತಂಗಿ ಅಂತ ಹೇಳಿಕೊಂಡು ಓಡಾಡುವುದರ ಬಗ್ಗೆ ನಾನೇ ದೂರು ಕೊಟ್ಟಿದ್ದೇನೆ. ಇದೀಗ ಗುರುವಾರ ವಿಚಾರಣೆಗೆ ಬನ್ನಿ ಎಂದು ಇಡಿ ನೋಟಿಸ್‌ ನೀಡಿರುವುದರ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯಿಸಿದ್ದಾರೆ.

ಮೊದಲ ಹೈ-ಸ್ಪೀಡ್ ರೈಲು ಯೋಜನೆಯನ್ನು ಸುಧಾರಿತ ಸಿಗ್ನಲಿಂಗ್ ಮತ್ತು ದೂರಸಂಪರ್ಕ ತಂತ್ರಜ್ಞಾನಗಳೊಂದಿಗೆ ಸಜ್ಜುಗೊಳಿಸಲು ಸೀಮೆನ್ಸ್ ಒಕ್ಕೂಟ

ಭಾರತದ ಮೊದಲ ಹೈ-ಸ್ಪೀಡ್ ರೈಲ್ವೆ ಯೋಜನೆಗಾಗಿ ಅನುಷ್ಠಾನ

ಸೀಮೆನ್ಸ್ ಲಿಮಿಟೆಡ್‌ನ ದಿನೇಶಾಂಡ್ರಾ ಆರ್ ಅಗ್ರವಾಲ್ ಇನ್ಫ್ರಾಕಾನ್ ಪ್ರೈವೇಟ್ ಲಿಮಿಟೆಡ್ ನೇತೃತ್ವದ ಒಕ್ಕೂಟ ಮತ್ತು ಸೀಮೆನ್ಸ್ ಮೊಬಿಲಿಟಿ ಜಿಎಂಬಿಹೆಚ್ ಅನ್ನು ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೊ ರೇಷನ್ ಲಿಮಿಟೆಡ್ (ಎನ್‌ಎಚ್‌ಎಸ್‌ಆರ್‌ಸಿಎಲ್) ಹೆಗ್ಗುರುತು ಒಪ್ಪಂದ ವನ್ನು ನೀಡಲಾಗಿದೆ.

CM Siddaramaiah: ಅವಘಡಗಳಾದಾಗ ಬಿಜೆಪಿಯ ಎಷ್ಟು ನಾಯಕರು ರಾಜೀನಾಮೆ ಕೊಟ್ಟಿದ್ದಾರೆ?: ಸಿಎಂ ಕಿಡಿ

ಬಿಜೆಪಿಯ ಎಷ್ಟು ನಾಯಕರು ರಾಜೀನಾಮೆ ಕೊಟ್ಟಿದ್ದಾರೆ?: ಸಿಎಂ

CM Siddaramaiah: ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ ಎನ್ನುವುದು ಸ್ಪಷ್ಟವಾಗಿದೆ. ಹೆಣಗಳ ಮೇಲಿನ ರಾಜಕೀಯ ಬಿಜೆಪಿ ಪಾಲಿಗೆ ಹೊಸದೇನಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Bike Taxi: ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಓಡಾಟ; ಪಾರ್ಸೆಲ್‌ ಹೆಸರಲ್ಲಿ ಸೇವೆ, 103 ದ್ವಿಚಕ್ರ ವಾಹನ ವಶಕ್ಕೆ

ನಿಷೇಧದ ನಡುವೆಯೂ ಬೈಕ್ ಟ್ಯಾಕ್ಸಿ ಸೇವೆ; 103 ದ್ವಿಚಕ್ರ ವಾಹನ ವಶಕ್ಕೆ

Bike Taxi: ನಿಷೇಧ ಹಿನ್ನೆಲೆಯಲ್ಲಿ ಓಲಾ, ಉಬರ್, ರ‍್ಯಾಪಿಡೋ ಸೇರಿ ಎಲ್ಲ ಅಗ್ರಿಗೇಟರ್‌ಗಳು ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಿವೆ. ಅದರಂತೆ ಆ್ಯಪ್‌ಗಳಲ್ಲೂ ಬೈಕ್‌ ಟ್ಯಾಕ್ಸಿ ಸೇವೆ ಆಯ್ಕೆ ತೆಗೆದು ಹಾಕಲಾಗಿದೆ. ಆದರೆ, ಬೈಕ್ ಪಾರ್ಸೆಲ್ ಸೇವೆ ಆರಂಭಿಸಿರುವುದರಿಂದ ಸಾರಿಗೆ ಇಲಾಖೆ ಕ್ರಮ ಕೈಗೊಂಡಿದೆ.

Bengaluru stampede case: ಕಾಲ್ತುಳಿತ ಕೇಸ್‌; ಬಿಜೆಪಿ ಪ್ರೊಟೆಸ್ಟ್‌- ಸಿಎಂ, ಡಿಸಿಎಂ ರಾಜೀನಾಮೆಗೆ ಆಗ್ರಹ

ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

Bengaluru stampede case: ಬೆಂಗಳೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.

DK Shivakumar: ಸೈಕಲ್‌ ರೈಡ್‌ ವೇಳೆ ವಿಧಾನಸೌಧದ ಮೆಟ್ಟಿಲ ಮೇಲೆ ಮುಗ್ಗರಿಸಿ ಬಿದ್ದ ಡಿಕೆಶಿ; ವಿಡಿಯೊ ಇದೆ

ವಿಧಾನಸೌಧದ ಮೆಟ್ಟಿಲ ಮೇಲೆ ಮುಗ್ಗರಿಸಿ ಬಿದ್ದ ಡಿಕೆಶಿ

ಸೈಕಲ್‌ ಜಾಥಾದ ವೇಳೆ ಡಿಕೆ ಶಿವಕುಮಾರ್‌ ಆಯತಪ್ಪಿ ಕೆಳಗೆ ಬಿದ್ದಿರುವ ಘಟನೆಯೂ ನಡೆದಿದೆ. ಸೈಕಲ್‌ ನಿಯಂತ್ರಣ ತಪ್ಪಿ ಡಿಕೆಶಿ ವಿಧಾನಸೌಧದ ಮೆಟ್ಟಿಲಿಗಳ ಮೇಲೆ ಮುಗ್ಗರಿಸಿ ಬಿದ್ದಿದ್ದಾರೆ. ತಕ್ಷಣ ಅಲ್ಲಿದ್ದ ನಾಯಕರು ಹಾಗೂ ಸಿಬ್ಬಂದಿ ಡಿಕೆಶಿ ಅವರನ್ನು ಮೇಲಕ್ಕೆ ಎಬ್ಬಿಸಿದ್ದಾರೆ. ಅವರಿಗೆ ಡಿಸಿಎಂ ಅವರಿಗೆ ಯಾವುದೇ ಗಾಯಗಳಾಗಿಲ್ಲ.

Gold Price Today: ಚಿನ್ನದ ದರದಲ್ಲಿ ಭಾರೀ ಇಳಿಕೆ; ಸ್ವರ್ಣಪ್ರಿಯರಿಗೆ ಕೊಂಚ ನಿರಾಳ!

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today on 17th June 2025: ಬೆಂಗಳೂರಿನಲ್ಲಿ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆ 105 ರೂ. ಇಳಿಕೆಯಾಗಿ 9,200ರೂ.ಗೆ ಬಂದು ತಲುಪಿದೆ. ಇನ್ನು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 114 ರೂ. ಇಳಿಕಯಾಗಿದ್ದು, 10,037 ರೂ.ಗೆ ಬಂದು ನಿಂತಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 73,600 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 92,000 ರೂ. ಮತ್ತು 100 ಗ್ರಾಂಗೆ 9,20,000 ರೂ. ನೀಡಬೇಕಾಗುತ್ತದೆ.

Wall collapses: ಮಹಾಮಳೆಗೆ ರಾಜ್ಯದಲ್ಲಿ ಮತ್ತೊಂದು ಬಲಿ; ಗೋಡೆ ಕುಸಿದು ಬಾಲಕ ಸಾವು

ಮನೆ ಗೋಡೆ ಕುಸಿದು ಬಾಲಕ ದಾರುಣ ಸಾವು

ರಾಜ್ಯದಲ್ಲಿ ಮಹಾಮಳೆಗೆ ಮತ್ತೊಂದು ಬಲಿಯಾಗಿದ್ದು, ಕಲಬುರಗಿಯಲ್ಲಿ ಮನೆ ಗೋಡೆ ಕುಸಿದು 10 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಕಲಬುರಗಿಯ ಜೇವರ್ಗಿಯ ಗುಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಪ್ಪ (10) ಎಂದು ಗುರುತಿಸಲಾಗಿದೆ. ಭಾಗ್ಯಮ್ಮ ಎಂಬ ಮಹಿಳೆಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ .

Child death: ಪೋಷಕರೇ ಎಚ್ಚರ...ಎಚ್ಚರ! ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ  ಹತ್ತು ತಿಂಗಳ ಮಗು ದುರ್ಮರಣ

ಬೀಡಿಯ ತುಂಡು ನುಂಗಿ ಹತ್ತು ತಿಂಗಳ ಮಗು ದುರ್ಮರಣ

ಶನಿವಾರ ಮಧ್ಯಾಹ್ನ ಸುಮಾರು 1:30ಕ್ಕೆ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಅಪರಾಹ್ನ 3:30ಕ್ಕೆ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಆದರೆ ರವಿವಾರ ಬೆಳಗ್ಗೆ 10:25ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ. ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ.

Karnataka Rain news: ರಾಜ್ಯದಲ್ಲಿ ಮಳೆಗೆ ಮೂರು ಬಲಿ, ಹಲವೆಡೆ ಭೂಕುಸಿತ, ಸಾರಿಗೆ ಅಸ್ತವ್ಯಸ್ತ

ರಾಜ್ಯದಲ್ಲಿ ಮಳೆಗೆ ಮೂರು ಬಲಿ, ಹಲವೆಡೆ ಭೂಕುಸಿತ, ಸಾರಿಗೆ ಅಸ್ತವ್ಯಸ್ತ

Karnataka Rain news: ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಿಗೆ ಇಂದು ರೆಡ್​ ಅಲರ್ಟ್ ನೀಡಲಾಗಿದೆ. ಸತತ ಮಳೆಯಾದ ಸ್ಥಳಗಳಲ್ಲಿ ಭೂಕುಸಿತ ಸಾಧ್ಯತೆ ಹೆಚ್ಚಿದ್ದು, ಬಿರುಗಾಳಿ 50-60 ಕಿ.ಮೀ. ವೇಗ ಸಹಿತ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Police Firing: ದಿವ್ಯಾಂಗ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ: ಆರೋಪಿಯ ಕಾಲಿಗೆ ಗುಂಡು

ದಿವ್ಯಾಂಗ ಮಹಿಳೆಗೆ ಲೈಂಗಿಕ ದೌರ್ಜನ್ಯ, ದರೋಡೆ: ಆರೋಪಿಯ ಕಾಲಿಗೆ ಗುಂಡು

Police Firing: ಹಲ್ಲೆ ಆರೋಪಿ ದಾಂಡೇಲಿಯ ಬೈಲ್ಪಾರ್ ನಿವಾಸಿ ಫೈರೋಜ್ ಯರಗಟ್ಟಿ ಕ್ರಿಮಿನಲ್ ಹಿನ್ನೆಲೆಯುಳ್ಳವನಾಗಿದ್ದು, ಆತನ ವಿರುದ್ಧ ಅಕ್ರಮ ಮದ್ಯ ವ್ಯಾಪಾರ, ಗಾಂಜಾ ಮಾರಾಟ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ನಿಂದನೆ ಸೇರಿದಂತೆ ಸಾಕಷ್ಟು ಆರೋಪಗಳಿವೆ. ಆತ ಚಾಲಕನಾಗಿದ್ದು, ಮರಳು ಸಾಗಾಟಗಾರನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

Madhu Bangarappa: ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಈ ವರ್ಷ 1008 ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ (Madhu Bangarappa) ಹೇಳಿದರು.