ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕರ್ನಾಟಕ

Ballari Firing: ಶಾಸಕ ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಭರತ್‌ ರೆಡ್ಡಿ ಮೇಲೂ ಕೇಸ್‌, ಸತೀಶ್‌ ರೆಡ್ಡಿ ಗನ್‌ ಮ್ಯಾನ್‌ಗಳು ನಾಪತ್ತೆ

ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗಲಾಟೆ ವೇಳೆ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್‌ಗಳು ಗುಂಡು ಹಾರಿಸಿದ್ದರು. ಗನ್ ಮ್ಯಾನ್‌ಗಳ ಐದು ಗನ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸತೀಶ ರೆಡ್ಡಿಗೆ ಸಂಬಂಧಿಸಿದ ಎಲ್ಲಾ ನಾಲ್ಕು ಗನ್ ಮ್ಯಾನ್‌ಗಳು ನಾಪತ್ತೆಯಾಗಿದ್ದಾರೆ.

Mahantesh Bilagi: ಆಕ್ಸಿಡೆಂಟ್‌ನಲ್ಲಿ ಮೃತರಾದ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ನೌಕರಿ, ಯಾವ ಹುದ್ದೆ?

ಮೃತ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ನೌಕರಿ, ಯಾವ ಹುದ್ದೆ?

ನಿನ್ನೆ ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಹುದ್ದೆ ನೀಡುವ ಬಗ್ಗೆ ಚರ್ಚೆಯಾಗಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ ನೀಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 2025ರ ನವೆಂಬರ್ 25ರಂದು ಜೇವರ್ಗಿ ಸಮೀಪ ಬೀಳಗಿ ಅಪಘಾತದಲ್ಲಿ ಮೃತರಾಗಿದ್ದರು.

Karnataka Weather: ರಾಜ್ಯದಲ್ಲಿ ಮುಂದುವರಿದ ಚಳಿ, ಬೆಂಗಳೂರು ಮತ್ತಿತರೆಡೆ ತುಂತುರು ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದುವರಿದ ಚಳಿ, ಬೆಂಗಳೂರು ಮತ್ತಿತರೆಡೆ ತುಂತುರು ಮಳೆ ಸಾಧ್ಯತೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಬೆಳಗ್ಗೆ ದಟ್ಟ ಮಂಜು, ಚಳಿ ಜೊತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಮಳೆ ಬೀಳುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಈಗಾಗಲೇ ಕಳೆದ ಎರಡು ದಿನಗಳ ಹಿಂದೆ ಅಂದರೆ ಹೊಸ ವರ್ಷದ ಆರಂಭದಲ್ಲಿ ನಗರದ ಹಲವೆಡೆ ತಂತುರು ಮಳೆಯಾದ ಬಗ್ಗೆ ವರದಿಯಾಗಿದೆ.

Ballari firing: ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ಶಾಸಕ ಜನಾರ್ದನ ರೆಡ್ಡಿ ನಿವಾಸದಲ್ಲಿ ಇನ್ನೊಂದು ಬುಲೆಟ್‌ ಪತ್ತೆ

ನನ್ನ ಹತ್ಯೆಗೆ ಸಂಚು ನಡೆಸಿದ್ದಾರೆ. 7-8 ಬಾರಿ ಫೈರಿಂಗ್‌ ಆಗಿದೆ. ನಿನ್ನೆ ಒಂದು ಗುಂಡು ಪತ್ತೆಯಾಗಿತ್ತು, ಇಂದು ಮತ್ತೊಂದು ಬುಲೆಟ್‌ ಕ್ಯಾಪ್‌ ಪತ್ತೆಯಾಗಿದೆ. ಜಾತಿ ನಿಂದನೆ, ಕೊಲೆ ಯತ್ನ ಆರೋಪದ ಅಡಿಯಲ್ಲಿ 15 ಜನರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ರೆಡ್ಡಿ ಕಡೆಯವರೂ ಭರತ್‌ ರಡ್ಡಿ ಹಾಗೂ ಬೆಂಬಲಿಗರ ಮೇಲೂ ಪ್ರಕರಣಗಳನ್ನು ದಾಖಲಿಸಿದ್ದಾರೆ.

Cabinet meeting: ನರೇಗಾ ಬದಲು ಜಿ ರಾಮ್‌ ಜಿ ಜಾರಿಗೆ ಖಂಡನೆ, ಬೆಂಗಳೂರಿನಲ್ಲಿ ಬಸವಣ್ಣ ಪಾರ್ಕ್:‌ ಕ್ಯಾಬಿನೆಟ್‌ ನಿರ್ಣಯಗಳು ಇಲ್ಲಿವೆ

ನರೇಗಾ ಬದಲು ಜಿ ರಾಮ್‌ ಜಿ ಜಾರಿಗೆ ಖಂಡನೆ, ಬೆಂಗಳೂರಿನಲ್ಲಿ ಬಸವಣ್ಣ ಪಾರ್ಕ್

ಮನರೇಗಾ ಯೋಜನೆ ರದ್ದತಿ ಹಾಗೂ ಜಿ ರಾಮ್ ಜಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ತೀವ್ರವಾದ ಖಂಡನೆ ನಿರ್ಣಯ ಮಂಡಿಸಿದೆ. ಈ ಕುರಿತು ವಿವರವಾದ ಪತ್ರಿಕಾಗೋಷ್ಠಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೈಗೊಳ್ಳಲಿದ್ದಾರೆ. ಇದರ ಜೊತೆಗೆ ಇನ್ನೂ ಹಲವಾರು ಮಹತ್ವದ ನಿರ್ಣಯಗಳನ್ನು ಕ್ಯಾಬಿನೆಟ್‌ ತೆಗೆದುಕೊಂಡಿದೆ.

KSRTC news: ದುರಂತಗಳ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ರಾತ್ರಿ ಬಸ್ಸುಗಳಿಗೆ ಫುಲ್‌ ಸೇಫ್ಟಿ ವ್ಯವಸ್ಥೆ!

ಕೆಎಸ್‌ಆರ್‌ಟಿಸಿ ರಾತ್ರಿ ಬಸ್ಸುಗಳಿಗೆ ಸಂಪೂರ್ಣ ಸುರಕ್ಷತೆ ವ್ಯವಸ್ಥೆ ಜಾರಿ!

ಅಡಾಸ್ ಸಿಸ್ಟಮ್ ಡ್ರೈವಿಂಗ್ ವೇಳೆ, ಫೋನ್ ಬಳಕೆ ಮಾಡಿದರೆ, ನಿದ್ರೆಗೆ ಜಾರಿದರೆ, ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡರೆ ಕೋಲಿಜಿಯನ್ ವಾರ್ನಿಂಗ್ ನೀಡುತ್ತದೆ. ಈ ವೇಳೆ ಮೊದಲಿಗೆ ಬೀಪ್ ಸೌಂಡ್ ನೀಡುತ್ತದೆ. ನಂತರ ಕ್ರಿಟಿಕಲ್ ವಾರ್ನಿಂಗ್ ನೀಡಿ, ವಾಹನದ ವೇಗ ಮಿತಿ ಕಡಿಮೆ ಮಾಡಿ ಆಕ್ಸಿಡೆಂಟ್ ತಡೆಗಟ್ಟಲು ಸಹಾಯ ಮಾಡುತ್ತದೆ. ಡ್ರೈವರ್ ಡ್ರೈವಿಂಗ್ ಮಾಡುವ ವೇಳೆ ಕುಡಿದು ಬಂದಿದ್ದರೆ ವಾಹನ ಸ್ಟಾರ್ಟ್ ಆಗುವುದಿಲ್ಲ.

ಜನವರಿ ತಿಂಗಳು ಪೂರ್ತಿ ಜಿಲ್ಲಾದ್ಯಂತ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ : ನ್ಯಾ. ಟಿ.ಪಿ. ರಾಮಲಿಂಗೇಗೌಡ ಕರೆ

ಜನವರಿ ತಿಂಗಳು ಪೂರ್ತಿ ಜಿಲ್ಲಾದ್ಯಂತ ರಸ್ತೆ ಸುರಕ್ಷತಾ ಅರಿವು ಕಾರ್ಯಕ್ರಮ

ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಏರ್ಪಡಿಸಿದ್ದ ಯಮ ಮತ್ತು ಚಿತ್ರಗುಪ್ತನ ವೇಷದ ಪಾತ್ರದಾರಿಗಳು ತಮ್ ಅಭಿನಯದ ಮೂಲಕ ಜನರಲ್ಲಿ ಸಂಚಾರಿ ನಿಯಮಗಳನ್ನು ಪಾಲಿಸುವ ಬಗ್ಗೆ ಜಾಗೃತಿ ಮೂಡಿಸಿದರು. ಪ್ರದರ್ಶನದ ವೇಳೆಯೇ ಹೆಲ್ಮೆಟ್ ಧರಿಸದೆ ಬಂದ ಬೈಕ್ ಸವಾರನನ್ನು ತಡೆದ ಪೊಲೀಸರು ಹೆಲ್ಮೆಟ್ ಧರಿಸದೆ ಸಂಚರಿವುದು ತಪ್ಪು ಎಂದು ತಿಳಿ ಹೇಳಿ ಬಿಟ್ಟುನ ಕಳಿಸುವುದನ್ನು ಗಮನಿಸಿದ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ದಂಡ ಹಾಕದೆ ಕಳಿಸುವುದು ಸರಿಯಲ್ಲ

ಹೊಸ ವರ್ಷಕ್ಕೆ ಹಾಲಿನ ದರ ಹೆಚ್ಚಳದ ಕೊಡುಗೆ ನೀಡಿದ ಚಿಮುಲ್: ಹಾಲು ಉತ್ಪಾದಕರಿಗೆ ಲೀಟರ್‌ಗೆ ರೂ.1 ದರ ಹೆಚ್ಚಳ

ಹೊಸ ವರ್ಷಕ್ಕೆ ಹಾಲಿನ ದರ ಹೆಚ್ಚಳದ ಕೊಡುಗೆ ನೀಡಿದ ಚಿಮುಲ್

ಪ್ರಸ್ತುತ ಚುಮುಲ್‌ನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದು ಮುಂದಿನ ಬೇಸಿಗೆ ಅವಧಿಯಲ್ಲಿ ರೈತರಿಗೆ ಎದುರಾಗುವ ಮೇವಿನ ಕೊರತೆ, ರಾಸುಗಳಿಗೆ ನೀರಿನ ಅಭಾವ, ಹಾಲು ಉತ್ಪಾದನೆ ಕುಸಿತ ಸಾಧ್ಯತೆ ಇತ್ಯಾದಿ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸಿ. ಸುಧಾ ಕರ್ ಹಾಗೂ ಚಿಮುಲ್ ಆಡಳಿತ ಅಧಿಕಾರಿ ಅಶ್ವಿನ್ ಅವರೊಂದಿಗೆ ಸಮಾಲೋಚಿಸಿ ರೈತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಲೀಟರ್‌ಗೆ 1 ರೂ ಹೆಚ್ಚುವರಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ

Shidlaghatta News: ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ: ಕಾಂಗ್ರೆಸ್ ಮುಖಂಡ ರಾಜೀವ್ ಗೌಡ

ಸ್ಥಳೀಯ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ

ಮುಂದಿನ ದಿನದಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆ(Election of local bodies)ಯಲ್ಲಿ ಕಾಂಗ್ರೆಸ್(Congress) ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ. ಸರ್ಕಾರದ ಅಭಿವೃದ್ಧಿ ಕಾರ್ಯಗಳ  ಜನರ ಮುಂದಿಡುವ ಕೆಲಸವನ್ನು ಸ್ಥಳೀಯ ಕಾರ್ಯಕರ್ತರು ಮಾಡು ವಂತೆ ಕೆಪಿಸಿಸಿ(KPCC) ಸಂಯೋ ಜಕ ಹಾಗೂ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ(Rajiv Gowda) ಕರೆ ನೀಡಿದರು

Shidlaghatta News: ಸಮಾಜಕ್ಕೆ ನೀಡಿದ ಸೇವೆಯಿಂದ ಜನ ಮಾನಸದಲ್ಲಿ ಶಾಶ್ವತವಾಗಿ ಸ್ಥಾನ ಪಡೆದುಕೊಂಡಿದ್ದಾರೆ : ಚುಂಚಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ

ಸೇವೆಯಿಂದ ಜನ ಮಾನಸದಲ್ಲಿ ಶಾಶ್ವತವಾಗಿ ಸ್ಥಾನ ಪಡೆದುಕೊಂಡಿದ್ದಾರೆ

ತಾಲ್ಲೂಕಿನ ಜಂಗಮಕೋಟೆ ಕ್ರಾಸ್‌ನಲ್ಲಿರುವ ಜ್ಞಾನ ಜ್ಯೋತಿ ಶಾಲಾ ಆವರಣದಲ್ಲಿ ಶುಕ್ರವಾರ ಆಯೋಜಿಸಲಾದ ಬಿ.ಎಂ.ಮೂರ್ತಿಯವರ ಮಹಾ ಪ್ರಸ್ತಾನದ 25ನೇ ಪುಣ್ಯ ಸ್ಮರಣೆಯ ಪ್ರಯುಕ್ತ ಬಿ.ಎಂ.ಮೂರ್ತಿಯವರ ಪುತ್ಥಳಿ ಅನಾವರಣ, ಜೀವನ ಚರಿತ್ರೆ ಪುಸ್ತಕ ಲೋಕಾರ್ಪಣೆ ಮತ್ತು ಹೊಸ ಜ್ಞಾನಜ್ಯೋತಿ ಕ್ಯಾಂಪಸ್‌ಗೆ ಭೂಮಿ ಪೂಜೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು

Chikkaballapur News: ಅಜಾತಶತ್ರು ತಂದೆ-ಮಗ ಜಿ.ಹೆಚ್.ನಾಗರಾಜ್, ವಿನಯ್‌ಶ್ಯಾಮ್ ಹುಟ್ಟುಹಬ್ಬಕ್ಕೆ ಸಾಕ್ಷಿಯಾದ ಧಾರ್ಮಿಕ ಸಾಮರಸ್ಯ

ಹುಟ್ಟುಹಬ್ಬಕ್ಕೆ ಸಾಕ್ಷಿಯಾದ ಧಾರ್ಮಿಕ ಸಾಮರಸ್ಯ

ಸಮಾಜ ಸೇವಕ, ಉದ್ಯಮಿ ಹಾಗೂ ಧರ್ಮದರ್ಶಿ ಜಿ.ಹೆಚ್.ನಾಗರಾಜ್ ಮತ್ತು ಅವರ ಪುತ್ರ ಯುವ ಮುಖಂಡ ವಿನಯ್ ಶಾಮ್ ಅವರಿಬ್ಬರ ಜನ್ಮದಿನಗಳು ಜನವರಿ ಒಂದು ಹಾಗೂ ಮೂರರಂದು ಬರುವ ಕಾರಣ ಇದನ್ನು ಹಬ್ಬದಂತೆ ಆಚರಿಸುತ್ತಾ ಬಂದಿದ್ದಾರೆ. ಗುರುವಾರ ಮತ್ತು ಶುಕ್ರವಾರ ಅವರ ನಿವಾಸಕ್ಕೆ ಅವರಿವರೆನ್ನದೆ ಸಾವಿರಾರು ಮಂದಿ ಆಗಮಿಸಿ ಶುಭಾಶಯಗಳನ್ನು ಕೋರಿದ್ದೇ ಇವರು ಗಳಿಸಿದ ಜನಪ್ರೀತಿಗೆ ಸಾಕ್ಷಿಯಂತಿತ್ತು

Bellary Clash: ಬಳ್ಳಾರಿ ಗಲಭೆ ಬಗ್ಗೆ ಎಚ್.ಡಿ. ದೇವೇಗೌಡರ ಕಳವಳ; ಡಿಕೆಶಿ ಹೇಳಿಕೆ ಸ್ವಾಗತಿಸಿದ ಮಾಜಿ ಪ್ರಧಾನಿ

ಬಳ್ಳಾರಿ ಗಲಭೆ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕಳವಳ

H.D. Deve Gowda: ಬಳ್ಳಾರಿ ಗಲಭೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾನೆ. ಗುಂಡು ಹೊಡೆದವರು ಯಾರು ಎಂದು ಗೊತ್ತಿಲ್ಲ. ಜನಾರ್ದನ ರೆಡ್ಡಿ ಅವರು ಮನೆಯಲ್ಲಿ ಇದ್ದಿದ್ದರೆ ಅಪಾಯ ಆಗ್ತಿತ್ತು ಎನ್ನುವ ಸುದ್ದಿ ನೋಡಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು ಎಚ್.ಡಿ. ದೇವೇಗೌಡರು ತಿಳಿಸಿದ್ದಾರೆ.

ಬಳ್ಳಾರಿ ಘರ್ಷಣೆ; ಮೊದಲು ಕಾಂಗ್ರೆಸ್‌ ಶಾಸಕನನ್ನು ಒಳಗೆ ಹಾಕಿ ಎಂದ ವಿಜಯೇಂದ್ರ

ಮೊದಲು ಬಳ್ಳಾರಿ ಕಾಂಗ್ರೆಸ್‌ ಶಾಸಕನನ್ನು ಒಳಗೆ ಹಾಕಿ: ವಿಜಯೇಂದ್ರ ಕಿಡಿ

BY Vijayendra: ಮಾಜಿ ಸಚಿವ ಮತ್ತು ಶಾಸಕ ಜಿ. ಜನಾರ್ಧನ ರೆಡ್ಡಿ ಅವರ ಬಳ್ಳಾರಿಯ ನಿವಾಸಕ್ಕೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ನಿನ್ನೆ ಇಲ್ಲಿನ ಶಾಸಕ ನಾ.ರಾ.ಭರತ್ ರೆಡ್ಡಿ ನೇತೃತ್ವದಲ್ಲಿ ಗೂಂಡಾಗಿರಿ ನಡೆದಿದೆ. ಬ್ಯಾನರ್ ವಿಚಾರದಲ್ಲಿ ಗಲಾಟೆ, ದೊಂಬಿ ಎಬ್ಬಿಸಿ ಸಾವಿರಾರು ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರ ಜತೆ ಗೂಂಡಾಗಳನ್ನು ಕರೆದುಕೊಂಡು ಬಂದು ಗೂಂಡಾಗಿರಿ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

KCET 2026: ಸಿಇಟಿ 2026 ದಿನಾಂಕ ಪ್ರಕಟ; ನೋಂದಣಿ ಯಾವಾಗ ಪ್ರಾರಂಭ?

ಸಿಇಟಿ 2026 ದಿನಾಂಕ ಪ್ರಕಟ; ನೋಂದಣಿ ಯಾವಾಗ ಪ್ರಾರಂಭ?

2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-26) ಯನ್ನು ಏಪ್ರಿಲ್ 23 ಮತ್ತು 24ರಂದು ನಡೆಸಲಾಗುವುದು. ಹೊರನಾಡು ಮತ್ತು ಗಡಿ ನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಏ.22ರಂದು ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಸಿಎನ್‌ಜಿಯಲ್ಲಿ ₹2/ಕೆಜಿ, ದೇಶೀಯ ಪಿಎನ್‌ಜಿಯಲ್ಲಿ ₹85/ಕೆಜಿ, ₹2/ಎಸ್‌ಸಿಎಂ ಕಡಿತ

ಸಿಎನ್‌ಜಿಯಲ್ಲಿ ₹2/ಕೆಜಿ, ದೇಶೀಯ ಪಿಎನ್‌ಜಿಯಲ್ಲಿ ₹85/ಕೆಜಿ ಕಡಿತ

PNGRB ಏಕೀಕೃತ ಸುಂಕವನ್ನು ಪರಿಷ್ಕರಿಸಿ DPNG ಮತ್ತು CNG ವಲಯಕ್ಕೆ ವಿಶೇಷ ಸುಂಕವನ್ನು ಘೋಷಿಸಿದ ನಂತರ ಮೈಸೂರು-ಮಂಡ್ಯ-ಚಾಮರಾಜನಗರ ಪ್ರದೇಶದಲ್ಲಿ PNG ಮತ್ತು CNG ಅನಿಲ ಬೆಲೆಗಳು ಇಳಿಕೆಯಾಗಿವೆಯೇ ಎಂದು ಯೋಚಿಸಿ. Direct price relief for consumers with ಸಿಎನ್‌ಜಿಯಲ್ಲಿ ₹2/ಕೆಜಿ ಕಡಿತ, ದೇಶೀಯ ಪಿಎನ್‌ಜಿಯಲ್ಲಿ ₹85/ಕೆಜಿ ಮತ್ತು ₹2/ಎಸ್‌ಸಿಎಂ ಕಡಿತ, ಈಗ ₹49/ಎಸ್‌ಸಿಎಂ ಆಗಿದೆ.

ಬಳ್ಳಾರಿ ಗಲಭೆ; ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಎಸ್‌ಪಿ ಪವನ್ ನೆಜ್ಜೂರ್ ಅಮಾನತು

ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಬಳ್ಳಾರಿ ಎಸ್‌ಪಿ ಅಮಾನತು

ಬಳ್ಳಾರಿಯಲ್ಲಿ ವಾಲ್ಮೀಕಿ ಮಹರ್ಷಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್‌ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದಿತ್ತು. ಈ ವೇಳೆ ಕಲ್ಲು ತೂರಾಟ ಸೇರಿ ಅಹಿತಕರ ಘಟನೆಗಳು ನಡೆದಿದ್ದವು. ಪರಿಸ್ಥಿತಿಯನ್ನು ನಿಭಾಯಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿಲ್ಲ ಎಂದು ನೂತನ ಎಸ್‌ಪಿ ಪವನ್ ನೆಜ್ಜೂರ್ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.

Karnataka EVM Survey: ಚುನಾವಣಾ ಆಯೋಗದ ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುವ ಯತ್ನ: ಸಿಎಂ

ಇವಿಎಂ ವಿಶ್ವಾಸಾರ್ಹತೆ ಸಮೀಕ್ಷೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

ಚುನಾವಣಾ ಆಯೋಗ ದುರುದ್ದೇಶದಿಂದ ಸಂಶಾಯಸ್ಪದ ಸಂಸ್ಥೆಯ ಮೂಲಕ ನಡೆಸಿರುವ ದೋಷಪೂರಿತ ಸಮೀಕ್ಷೆಯ ವರದಿಯನ್ನು ಬಳಸಿಕೊಂಡು ನಂತರದ ದಿನಗಳಲ್ಲಿ ರಾಹುಲ್ ಗಾಂಧಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪಗಳನ್ನು ಮುಚ್ಚಿಹಾಕಲು ಸಾಧ್ಯವಿಲ್ಲ ಎನ್ನುವುದನ್ನು ಭಾರತೀಯ ಜನತಾ ಪಕ್ಷ ಅರ್ಥಮಾಡಿಕೊಳ್ಳಬೇಕು.

Bengaluru Power Cut: ಗಮನಿಸಿ; ಬೆಂಗಳೂರಿನ ಈ ಪ್ರದೇಶಗಳಲ್ಲಿ ಜ.3ರಿಂದ 10ರವರೆಗೆ ಮಧ್ಯಂತರ ವಿದ್ಯುತ್‌ ವ್ಯತ್ಯಯ

ಬೆಂಗಳೂರಿನ ಈ ಪ್ರದೇಶಗಳಲ್ಲಿ ಜ.3ರಿಂದ 10ರವರೆಗೆ ವಿದ್ಯುತ್‌ ವ್ಯತ್ಯಯ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆ.ವಿ ಹೆಣ್ಣೂರು ರೋಡ್‌ ಉಪ-ಕೇಂದ್ರ ವ್ಯಾಪ್ತಿಯ ಹಲವೆಡೆ ಜ.3 ಶನಿವಾರದಿಂದ ಜ.10ರವರೆಗೆ ಬೆಳಗ್ಗೆ 9ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಈ ಕುರಿತ ವಿವರ ಇಲ್ಲಿದೆ.

Safari Ban: ಸಫಾರಿಗೆ ಮತ್ತೆ ಅನುಮತಿ; ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲು ಸಿಎಂ ಸೂಚನೆ

ಸಫಾರಿಗೆ ಮತ್ತೆ ಅನುಮತಿ; ಪರಿಶೀಲನೆಗೆ ತಾಂತ್ರಿಕ ಸಮಿತಿ ರಚಿಸಲು ಸಿಎಂ ಸೂಚನೆ

Bandipur and Nagarahole safari Ban: ಬಂಡೀಪುರ ಮತ್ತು ನಾಗರಹೊಳೆಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಸಫಾರಿ ನಿರ್ಬಂಧಿಸಿರುವ ಕಾರಣಕ್ಕೆ ಅದರ ಮೇಲೆ ಅವಲಂಬಿತರಾಗಿರುವ ಹಲವು ಜನ ಉದ್ಯೋಗದಿಂದ ವಂಚಿತರಾಗಿರುವುದಾಗಿ ಅರಣ್ಯ ಸಚಿವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಸಫಾರಿ ನಿಷೇಧ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಎಲ್ಲಾ ಅಧಿಕಾರಿಗಳು ಜಾತ್ಯತೀತವಾಗಿ ಕಾರ್ಯ ನಿರ್ವಹಿಸಬೇಕು: ಸಿಎಂ ಸಿದ್ದರಾಮಯ್ಯ

ಎಲ್ಲಾ ಅಧಿಕಾರಿಗಳು ಜಾತ್ಯತೀತವಾಗಿ ಕಾರ್ಯ ನಿರ್ವಹಿಸಬೇಕು: ಸಿದ್ದರಾಮಯ್ಯ

CM Siddaramaiah: ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಒದಗಿಸಲಾಗುವುದು. ಪದೋನ್ನತಿ ಸೇರಿದಂತೆ ಸಂಘದ ಬೇಡಿಕೆಗಳನ್ನು ಈಡೇರಿಸಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Bellary Firing: ಬಳ್ಳಾರಿ ಗುಂಪು ಘರ್ಷಣೆ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬಳ್ಳಾರಿ ಘಟನೆ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಸೂಚಿಸಿದ್ದೇನೆ: ಸಿಎಂ

ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಯವರ ನಿವಾಸದ ಸಮೀಪ ನಡೆದ ಗುಂಪುಘರ್ಷಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಸಾವು ಸಂಭವಿಸಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಬಳಸಲಾದ ಗನ್ ಯಾರಿಗೆ ಸೇರಿದ್ದು ಎಂಬ ಬಗ್ಗೆಯೂ ತನಿಖೆ ನಡೆಸಿ ವರದಿ ನೀಡಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಂಕ್ರಾಂತಿ ವೇಳೆಗೆ ಸರ್ಕಾರದ ಹೊಸ ಜಾಹಿರಾತು ನೀತಿ ಜಾರಿಗೆ ಬರಲಿದೆ: ಕೆ.ವಿ. ಪ್ರಭಾಕರ್

ಸಂಕ್ರಾಂತಿ ವೇಳೆಗೆ ಸರ್ಕಾರದ ಹೊಸ ಜಾಹಿರಾತು ನೀತಿ ಜಾರಿ: ಕೆ.ವಿ. ಪ್ರಭಾಕರ್

KV Prabhakar: ಇಂದಿನ ವೇಗದ ಯುಗದಲ್ಲಿ ನೈತಿಕತೆ ಮತ್ತು ವೃತ್ತಿಧರ್ಮವನ್ನು ಎತ್ತಿಹಿಡಿಯುವುದು ಸವಾಲಿನ ಕೆಲಸ. ಹಿರಿಯರನ್ನು ಗೌರವಿಸುವುದರಿಂದ, ಉದಯೋನ್ಮುಖ ಪತ್ರಕರ್ತರಿಗೆ ಮೌಲ್ಯಾಧಾರಿತ ಪತ್ರಿಕೋದ್ಯಮದ ಬಗ್ಗೆ ಆಸಕ್ತಿ ಮತ್ತು ಸ್ಫೂರ್ತಿ ಮೂಡುತ್ತದೆ. ಈ ಅರ್ಥಪೂರ್ಣ ಕೆಲಸವನ್ನು ಕಾರ್ಯನಿರತ ಪತ್ರಕರ್ತರ ಸಂಘ ಮಾಡುತ್ತಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ.

Bellary Firing: ಜನಾರ್ದನ ರೆಡ್ಡಿ ನೀಚ ರಾಜಕೀಯ ಮಾಡ್ತಿದ್ದಾನೆ: ಶಾಸಕ ಭರತ್ ರೆಡ್ಡಿ ವಾಗ್ದಾಳಿ

ಜನಾರ್ದನ ರೆಡ್ಡಿ ನೀಚ ರಾಜಕೀಯ ಮಾಡ್ತಿದ್ದಾನೆ: ಶಾಸಕ ಭರತ್ ರೆಡ್ಡಿ ವಾಗ್ದಾಳಿ

ಮೃತ ರಾಜಶೇಖರಗೆ ಸರ್ಕಾರದಿಂದ ಹಾಗೂ ವೈಯಕ್ತಿಕವಾಗಿ ಪರಿಹಾರ ಕೊಡ್ತೇವೆ. ಆಂಧ್ರ ತೆಲಂಗಾಣ ಯಾವ ಕಡೆಯಿಂದಾದ್ರೂ ಜನರನ್ನು ಕರೆಸಲಿ ನಮಗೇನು ಆಗಲ್ಲ. ಜನಾರ್ದನ ರೆಡ್ಡಿ ದ್ವೇಷದ ರಾಜಕೀಯಕ್ಕೆ ಓರ್ವ ಬಲಿಯಾಗಿಯಾದ್ದಾನೆ ಎಂದು ಶಾಸಕ ಭರತ್ ರೆಡ್ಡಿ ಕಿಡಿಕಾರಿದ್ದಾರೆ.

Bellari Firing: ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ ದಾಖಲು, ಬುಲೆಟ್‌ ಖಾಸಗಿ ರಿವಾಲ್ವರ್‌ನದ್ದು

ಬಳ್ಳಾರಿ ಗಲಾಟೆ: ಹತ್ತು ಜನರ ಮೇಲೆ ಪ್ರಕರಣ, ಬುಲೆಟ್‌ ಖಾಸಗಿ ರಿವಾಲ್ವರ್‌ನದು

ರಾಜಶೇಖರ್‌ಗೆ ತಾಗಿದ ಬುಲೆಟ್ ಸರ್ಕಾರಿ ಗನ್ ಮ್ಯಾನ್‌ನದ್ದಲ್ಲ. ಬುಲೆಟ್ ಹಾರಿದ್ದು ಖಾಸಗಿ ಗನ್ ಮ್ಯಾನ್‌ನ ರಿವಾಲ್ವರ್‌ನಿಂದ ಎಂದು ಘಟನಾ ಸ್ಥಳದ ಉಸ್ತುವಾರಿ ಎಸ್ಪಿ ರಂಜಿತ್ ಕುಮಾರ್ ಖಚಿತ ಪಡಿಸಿದ್ದಾರೆ. ನಿನ್ನೆ ಗಲಾಟೆ ವೇಳೆ ರಾಜಶೇಖರ್‌ ಸಾವಾಗಿದೆ. ಅದು ಪೊಲೀಸರು ಫೈರ್ ಮಾಡಿದಾಗ ತಗುಲಿರುವ ಬುಲೆಟ್ ಅಲ್ಲ. ಅದು ಖಾಸಗಿ ರಿವಾಲ್ವರ್ ಬುಲೆಟ್. ಇದರ ಬಗ್ಗೆ ತನಿಖೆ ಮಾಡ್ತೇವೆ ಎಂದಿದ್ದಾರೆ.

Loading...