ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

Gubbi News: ಸುರಿಗೇನಹಳ್ಳಿ ಗುಡ್ಡದ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಮಹಾದಾಸೋಹ

ಸುರಿಗೇನಹಳ್ಳಿ ಗುಡ್ಡದ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಮಹಾದಾಸೋಹ

ಶ್ರಾವಣ ಶನಿವಾರದ ಅಂಗವಾಗಿ ಬೆಳಗ್ಗೆಯಿಂದಲೇ ಶ್ರೀ ರಂಗನಾಥ ಸ್ವಾಮಿಯವರಿಗೆ ಅಭಿಷೇಕಾದಿ ಯಾಗಿ, ವಿಶೇಷ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು. ದೇವಸ್ಥಾನವನ್ನು ವಿಶಿಷ್ಟವಾಗಿ ಅಲಂಕರಿಸಲಾಗಿತ್ತು. ಬೆಳಗ್ಗೆ 11 ಗಂಟೆ ನಂತರ ಅಕ್ಕಪಕ್ಕದ ಗ್ರಾಮಸ್ಥ ರಿಂದ ಶ್ರೀ ಸ್ವಾಮಿಯವರಿಗೆ ವಿಶೇಷ ಆರತಿ ಸೇವೆ ಸಲ್ಲಿಸಲಾಯಿತು.

ತುಮಕೂರಿನಲ್ಲಿ ಬಲೆಯಲ್ಲಿ ಸಿಕ್ಕಿಬಿದ್ದ ಚಿರತೆ ಸುಟ್ಟು ಹಾಕಿದ ಮೂವರ ಬಂಧನ

ತುಮಕೂರು: ಚಿರತೆ ಸುಟ್ಟ ಮೂವರ ಬಂಧನ

leopard burning case: ಅಕ್ರಮವಾಗಿ ನಿರ್ಮಿಸಿದ್ದ ತಂತಿ ಬಲೆಯಲ್ಲಿ ಸಿಕ್ಕಿ ಹಾಕಿಕೊಂಡ ಚಿರತೆಯನ್ನು ಸುಟ್ಟು ಹಾಕಿದ ಮೂವರನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ರಾಗಿ ಬೆಳೆಯನ್ನು ಉಳಿಸುವ ಸಲುವಾಗಿ ಗೌರಗೊಂಡನಹಳ್ಳಿ ಗ್ರಾಮದ ಕೆಲವು ರೈತರು ಗದ್ದೆಯ ಸುತ್ತಲೂ ಅಕ್ರಮವಾಗಿ ತಂತಿ ಬಲೆಯನ್ನು ಹಾಕಿದ್ದರು. ಇದರಲ್ಲಿ ಚಿರತೆಯೊಂದು ಸಿಕ್ಕಿ ಹಾಕಿಕೊಂಡಿತ್ತು.

Gubbi News: ಅಭಿನಂದನಾ ಸಮಾರಂಭಕ್ಕೆ ದಲಿತ ಪರ ಸಂಘಟನೆಗಳಿಗೆ ಆಹ್ವಾನ: ಗುಬ್ಬಿ ಬಸವರಾಜ್

ಅಭಿನಂದನಾ ಸಮಾರಂಭಕ್ಕೆ ದಲಿತ ಪರ ಸಂಘಟನೆಗಳಿಗೆ ಆಹ್ವಾನ

ಆದಿ ಜಾಂಬವ ಮಠ ದಿಂದ ಸಚಿವರು ಸಂಸದರು ಹಾಲಿ ಶಾಸಕರು ಮಾಜಿ ಶಾಸಕರು ನಿಗಮ ಮಂಡಳಿ ಅಧ್ಯಕ್ಷರುಗಳಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು. ಜೊತೆಗೆ ದಲಿತ ಜನಾಂಗದ ಏಳಿಗೆಗೆ ಶ್ರೀ ಮಠ ದಿಂದ ಹಲವು ಕಾರ್ಯಕ್ರಮಗಳು ನಡೆಯುತ್ತಿದ್ದು. ಬಾಗಲಕೋಟೆ ಜಿಲ್ಲೆ ಗುಡ್ಡದ್ದಳ್ಳಿ ತಾಲೂಕು ಹಾನಾಪುರ ಗ್ರಾಮದ ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ ಮದ್ರಾಸ್) ಉನ್ನತ ಅಧ್ಯಯನಕ್ಕಾಗಿ ತೆರಳುತ್ತಿರುವ ಕರಿಯಪ್ಪ ಮಾದಾರ ಎಂಬ ವಿದ್ಯಾರ್ಥಿಗೆ ಸನ್ಮಾನಿಸಲಾಗುವುದು

Varamahalakshmi Festival: ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ ಗೊರವನಹಳ್ಳಿ ಮಹಾಲಕ್ಷ್ಮಿ ದರ್ಶನಕ್ಕೆ ಹರಿದುಬಂದ ಭಕ್ತಸಾಗರ

ಗೊರವನಹಳ್ಳಿ ಮಹಾಲಕ್ಷ್ಮಿಯ ದರ್ಶನಕ್ಕೆ ಆಗಮಿಸಿದ ಭಕ್ತಸಾಗರ

Goravanahalli Mahalakshmi Temple: ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ನೂತನ ತೇರು ಈ ಬಾರಿಯ ಹಬ್ಬದ ಪ್ರಮುಖ ಆಕರ್ಷಣೆಯಾಗಿತ್ತು. ಸುಮಾರು 24 ಲಕ್ಷ ರೂ. ವೆಚ್ಚದಲ್ಲಿ ನೂತನ ತೇರು ನಿರ್ಮಿಸಲಾಗಿದೆ. ತೇರಿನಲ್ಲಿ ಸುಮಾರು 23 ಕೆ.ಜಿ. ತೂಕದ ಬೆಳ್ಳಿಯ ಮಹಾಲಕ್ಷ್ಮಿ ತಾಯಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ವೈಭವದ ಮೆರವಣಿಗೆ ನಡೆಸಲಾಯಿತು.

Tumkur News: ತುಮಕೂರಿನಿಂದ ಮಂತ್ರಾಲಯಕ್ಕೆ ಸಾರಿಗೆ ಬಸ್ ಹೆಚ್ಚಿಸಲು ಆಗ್ರಹ

ತುಮಕೂರಿನಿಂದ ಮಂತ್ರಾಲಯಕ್ಕೆ ಸಾರಿಗೆ ಬಸ್ ಹೆಚ್ಚಿಸಲು ಆಗ್ರಹ

Tumkur News: ತುಮಕೂರು ಜಿಲ್ಲೆಯಿಂದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಂತ್ರಾಲಯಕ್ಕೆ ಪ್ರತಿದಿನ ತೆರಳುವ ಭಕ್ತರ ಸಂಖ್ಯೆ ಅಪಾರವಾಗಿದೆ. ಆದರೆ, ಇದಕ್ಕೆ ತಕ್ಕಂತೆ ಸಾರಿಗೆ ಸೌಲಭ್ಯಗಳಿಲ್ಲದೆ ಭಕ್ತರು ಪರದಾಡುವಂತಾಗಿದ್ದು, ತುಮಕೂರು-ಮಂತ್ರಾಲಯ ಮಾರ್ಗದಲ್ಲಿ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಬೇಕೆಂಬ ಆಗ್ರಹ ತೀವ್ರಗೊಂಡಿದೆ.

ಮಧುಗಿರಿಯಲ್ಲಿ ʼಮುಗಿಯದ ಪ್ರೇಮ ಕಥೆʼ ಕಿರುಚಿತ್ರ ರಿಲೀಸ್‌

ಮಧುಗಿರಿಯಲ್ಲಿ ʼಮುಗಿಯದ ಪ್ರೇಮ ಕಥೆʼ ಕಿರುಚಿತ್ರ ರಿಲೀಸ್‌

Madhugiri News: ಮಧುಗಿರಿ ತಾಲೂಕಿನ ಸ್ಥಳೀಯ ಕಲಾವಿದರು ವರಮಹಾಲಕ್ಷ್ಮಿ ಹಬ್ಬದ ದಿನವಾದ ಶುಕ್ರವಾರ ಐತಿಹಾಸಿಕ ಶ್ರೀ ದಂಡಿನ ಮಾರಮ್ಮ ದೇವಾಲಯದ ಆವರಣದಲ್ಲಿ 13 ನಿಮಿಷಗಳ ಕಾಲದ ಯೂಟ್ಯೂಬ್‌ನ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುವ ಕಿರುಚಿತ್ರ 'ಮುಗಿಯದ ಪ್ರೇಮ ಕಥೆ' ಬಿಡುಗಡೆಗೊಳಿಸಿದರು.

ತಿಪಟೂರಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅಂತ್ಯ ಸಂಸ್ಕಾರ

ಮಾಜಿ ಸಚಿವ ಬಿ.ಸಿ.ನಾಗೇಶ್‌ ಪಂಚಭೂತಗಳಲ್ಲಿ ಲೀನ

ತುಮಕೂರು ಜಿಲ್ಲೆ ತಿಪಟೂರು ನಗರದ ಬಿ.ಎಚ್. ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಮಾಜಿ ಸಚಿವ ಬಿ.ಸಿ.ನಾಗೇಶ್‌ ಅವರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಈ ವೇಳೆ ವಿವಿಧ ರಾಜಕೀಯ ನಾಯಕರು, ಗಣ್ಯರು ಸೇರಿ ಸಾವಿರಾರು ಮಂದಿ ಭಾಗಿಯಾಗಿದ್ದರು.

ಮಾಜಿ ಸಚಿವ ಬಿ.ಸಿ. ನಾಗೇಶ್ ಪಾರ್ಥೀವ ಶರೀರದ ಅಂತಿಮ ರಥಯಾತ್ರೆ ಸಾಗುತ್ತಿದ್ದಂತೆ ಆಜಾನ್ ಕೂಗದೆ ಸೌಹಾರ್ದತೆ ಮೆರೆದ ಮುಸ್ಲಿಮರು

ತಿಪಟೂರಿನಲ್ಲಿ ಸೌಹಾರ್ದತೆ ಮೆರೆದ ಮುಸ್ಲಿಮರು

BC Nagesh: ಅನಾರೋಗ್ಯದ ಹಿನ್ನೆಲೆಯಲ್ಲಿ ಆಗಸ್ಟ್‌ 18ರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದ ಮಾಜಿ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ ಅವರ ಪಾರ್ಥೀವ ಶರೀರದ ಮೆರವಣಿಗೆ ವೇಳೆ ತಿಪಟೂರಿನಲ್ಲಿ ಮುಸ್ಲಿಮರು ಆಜಾನ್ ಕೂಗದೆ ಗೌರವ ಸಲ್ಲಿಸಿದರು.

ಮಾಜಿ ಸಚಿವ ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ

ಬಿ.ಸಿ. ನಾಗೇಶ್ ನಿಧನ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಬಿಎಸ್‌ವೈ

BC Nagesh: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅನೇಕ ರಾಜಕೀಯ ಮುಖಂಡರು, ಸಾರ್ವಜನಿಕರು ಹಿರಿಯ ರಾಜಕಾರಣಿ, ಬಿಜೆಪಿ ನಾಯಕ, ಮಾಜಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಕನಿಷ್ಠ ವೇತನ, ಸೇವಾ ಭದ್ರತೆಗೆ ಆಗ್ರಹ; ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸೇವಾ ಭದ್ರತೆಗೆ ಆಗ್ರಹಿಸಿ ತುಮಕೂರಿನಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

Tumkur News: ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಕನಿಷ್ಠ ವೇತನ ಜಾರಿಗೊಳಿಸಬೇಕು ಹಾಗೂ ಸೇವಾ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

MLA K N Rajanna: ದೇಶದ ಯುವಶಕ್ತಿ ದುಶ್ಚಟಗಳಿಗೆ ಬಲಿಯಾಗದೆ ದೇಶ ಕಟ್ಟುವ ಕೆಲಸಕ್ಕೆ ಮುಂದಾಗಬೇಕಾಗಿದೆ: ಶಾಸಕ ಕೆ.ಎನ್.ರಾಜಣ್ಣ

ದೇಶದ ಯುವಶಕ್ತಿ ದೇಶ ಕಟ್ಟುವ ಕೆಲಸಕ್ಕೆ ಮುಂದಾಗಬೇಕಾಗಿದೆ

ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ರಾಷ್ಟ್ರಧ್ವಜ ಧ್ವಜ ರೋಹಣ ನೆರವೇರಿಸಿ ತಮ್ಮ ಸಂದೇಶ ದಲ್ಲಿ ಮಾತನಾಡಿ 2047 ರ ಹೊತ್ತಿಗೆ ಯುವಕರಿಂದ ವಿಕಸಿತ ಭಾರತ ನಿರ್ಮಾಣದ ಕನಸನ್ನು ದೇಶ ಹೊಂದಿದೆ.. ಭಾರತದಲ್ಲಿ, 37 ಕೋಟಿಗೂ ಅಧಿಕ ಯುವಕರಿದ್ದಾರೆ.‌ ಯುವಕರ ವಿಶೇಷ ಶಕ್ತಿ ಸಾಮರ್ಥ್ಯ ಮಾಹಿತಿ, ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟವಾದ ಪ್ರತಿಭೆಯ ಮೂಲಕ ಹೆಸರು ಮಾಡಿದ್ದಾರೆ ಎಂದರು

Gubbi News: ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್

ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್

ತಾಲೂಕಿನ ಹಲಸಿನ ನಾಗೇನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ನಾಮಫಲಕ ಅನಾವರಣಗೊಳಿಸಿ ಮಾತನಾಡಿ,  ಮೊದಲು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಉದ್ಯೋಗವಕಾಶ ಕಲ್ಪಿಸಿ ಕೊಟ್ಟಾಗ ಮಾತ್ರ ಮಾದಿಗ ಸಮುದಾಯ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.  ಮುಖಂಡ ಅದಲಗೆರೆ ಈಶ್ವರಯ್ಯ ಮಾತನಾಡಿ ಪ್ರತಿ ಗ್ರಾಮಗಳಲ್ಲಿ ಯುವ ಸಂಘಟನೆ ಸ್ಥಾಪನೆ ಯಾಗುವುದರಿಂದ ಜನಾಂಗಕ್ಕೆ ಆಗುವ ಅನ್ಯಾಯ ತಡೆದು ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಸಹಕರಿಸಬಹುದು

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ; ಪುತ್ರಿ ಪರವಾಗಿ ಕ್ಷಮೆ ಕೇಳಿದ BJP ಶಾಸಕ ಸುರೇಶ್‌ ಗೌಡ

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ್ರಾ BJP ಶಾಸಕ ಸುರೇಶ್‌ ಗೌಡ ಪುತ್ರಿ?

MLA B. Suresh Gowda: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು.

ರೈತರಿಗೆ ಉಚಿತವಾಗಿ ಗುಣಮಟ್ಟದ ಮೇವು ಬೀಜದ ಕಿಟ್‌ ವಿತರಣೆ: ಶಾಸಕ ಕೆ.ಎನ್. ರಾಜಣ್ಣ

ರೈತರಿಗೆ ಉಚಿತವಾಗಿ ಮೇವು ಬೀಜದ ಕಿಟ್‌ ವಿತರಣೆ: ಶಾಸಕ ಕೆ.ಎನ್. ರಾಜಣ್ಣ

Madhugiri News: ಬರ ಪರಿಹಾರ ಯೋಜನೆಯ ಭಾಗವಾಗಿ ರೈತರಿಗೆ ಉಚಿತವಾಗಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಮೇವು ಬೀಜಗಳ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

MLA M.T.Krishnappa : ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಘೇರಾವ್ ಪೂರ್ವನಿಯೋಜಿತ : ಸಿಡಿದ ಬೆಂಬಲಿಗರು

ಶಾಸಕರಿಗೆ ಘೇರಾವ್ ಪೂರ್ವನಿಯೋಜಿತ : ಸಿಡಿದ ಬೆಂಬಲಿಗರು

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಕುಣಿಗಲ್ ತಾಲ್ಲೂಕಿಗೆ ಬಂದ ತುರುವೇಕೆರೆ ಶಾಸಕ ಕೃಷ್ಣಪ್ಪ ಅವರನ್ನು ಕುಣಿಗಲ್ ಶಾಸಕ ರಂಗನಾಥ್ ಟೀಕಿಸಿ ಪೈಪ್ ಲೈನ್ ವಿಚಾರವನ್ನು ತಿರುಚಿ ಹೇಳಿ ಅಲ್ಲಿದ್ದ ಬೆಂಬಲಿಗರನ್ನು ಪ್ರಚೋದಿಸಿ ಘೇರಾವ್ ಮಾಡಿಸಿದ್ದಾರೆ. ಜಿಲ್ಲೆಯ ರೈತರ ಹಿತಕ್ಕಾಗಿ ಕೃಷ್ಣಪ್ಪ ಅವರ ಹೋರಾಟ ನಡೆದಿದೆ. ಅವರನ್ನು ಬೆಂಬಲಿಸಿ ಗುಬ್ಬಿ ತುರುವೇಕೆರೆ ಜನರು ಕೈಗೆ ಬಳೆ ತೊಟ್ಟಿಲ್ಲ

Gubbi News: ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..! : ಎಸ್.ಡಿ.ದಿಲೀಪ್ ಕುಮಾರ್

ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..!

ತಾಲ್ಲೂಕಿನ ರೈತರ ಅಳಲು ಅಜ್ಜಯ್ಯ ಅವರಿಗೆ ತಲುಪಿ ಅವರ ಮುಖಾಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಲುಪಿ ಸಚಿವ ಸ್ಥಾನ ಸಿಕ್ಕಿಲ್ಲ. ನೀರಿನ ಶಾಪ ತಟ್ಟುವ ಮೊದಲು ರೈತರ ಹೋರಾಟಕ್ಕೆ ಧುಮುಕಬೇಕಿತ್ತು. ಅಂದು ಚಾನಲ್ ಮೇಲೆ ಮಲಗಿ ನೀರು ಬಿಡಿಸಿದ್ದೆ ಎನ್ನುವ ಶಾಸಕರು ಇಂದು ಡಿಕೆಶಿ ಮನೆ ಮುಂದೆ ಮಲಗಿ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲಿ ನೋಡೋಣ ಎಂದು ಸವಾಲೆಸೆದರು

ಕನಿಷ್ಠ ವೇತನ ಪರಿಷ್ಕರಣೆ ಆದೇಶ ಜಾರಿಗೆ ಆಗ್ರಹ; ತುಮಕೂರು ಡಿಸಿ ಕಚೇರಿ ಎದುರು ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕನಿಷ್ಠ ವೇತನ ಆದೇಶ ಜಾರಿಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

Tumkur News: ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಆದೇಶವನ್ನು ಕೂಡಲೇ ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಹಾಗೂ ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸರ್ಕಾರದ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

Tumkur News: ಸಂಗೀತ ವಿಶ್ವದ ಭಾಷೆ, ಅದಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ: ವೀರೇಶಾನಂದ ಸ್ವಾಮೀಜಿ

ಸಂಗೀತಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ: ವೀರೇಶಾನಂದ ಸ್ವಾಮೀಜಿ

Tumkur News: ಭಾರತೀಯ ಸಂಗೀತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಇಂದಿನ ಕಲಾವಿದರು, ಗುರುಗಳು ಮತ್ತು ಸಂಗೀತ ಸಂಸ್ಥೆಗಳ ಮೇಲಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ತಿಳಿಸಿದ್ದಾರೆ.

ಮಕ್ಕಳಿಗೆ ಅಂಕಗಳು ಮಾತ್ರವಲ್ಲ ಕೌಶಲ್ಯವೂ ಮುಖ್ಯ: ಶಾಸಕ ಜಿ.ಬಿ. ಜ್ಯೋತಿಗಣೇಶ್

ಮಕ್ಕಳಿಗೆ ಅಂಕಗಳು ಮಾತ್ರವಲ್ಲ ಕೌಶಲ್ಯವೂ ಮುಖ್ಯ: ಶಾಸಕ ಜಿ.ಬಿ. ಜ್ಯೋತಿಗಣೇಶ್

ತುಮಕೂರು ​ನಗರದ ಕುಂಚಶ್ರೀ ಪ್ಯಾಲೇಸ್‌ನಲ್ಲಿ 'ಕುಂಚಶ್ರೀ ಮಹಿಳಾ ಬಳಗ'ದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿಗಣೇಶ್‌ ಅವರು ಮಾತನಾಡಿದ್ದಾರೆ. ಪೋಷಕರು ಮಕ್ಕಳನ್ನು ಕೇವಲ ಮೆಡಿಕಲ್ ಅಥವಾ ಎಂಜಿನಿಯರಿಂಗ್‌ ಕ್ಷೇತ್ರಗಳಿಗೆ ಮಾತ್ರ ಸೀಮಿತಗೊಳಿಸದೆ, ಇತರೆ ನವೀನ ಕ್ಷೇತ್ರಗಳ ಕಡೆಗೂ ಗಮನಹರಿಸುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಸಾಹಿತಿ ಬರಗೂರು ರಾಮಚಂದ್ರಪ್ಪ

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಸಾಹಿತಿ ಬರಗೂರು

Tumkur News: ತುಮಕೂರಿನ ಕನ್ನಡ ಭವನದಲ್ಲಿ ಕನ್ನಡಪರ ಚಿಂತನ ವೇದಿಕೆ ವತಿಯಿಂದ ಆಯೋಜಿಸಿದ್ದ 'ಕನ್ನಡ ಮಾಧ್ಯಮ ಮೀಸಲಾತಿ 25 ವರ್ಷ' ಚಿಂತನ ಸಮಾವೇಶದಲ್ಲಿ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಆಶಯ ನುಡಿಗಳನ್ನಾಡಿದ್ದಾರೆ.

Tumkur News: ಲೋ ಬಿಪಿಯಿಂದ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು!

ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು

Pavagada News: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನ ಶೌಚಾಲಯದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಸ್ಥಳಕ್ಕೆ ಪಾವಗಡ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ: ಎಂಎಲ್‌ಸಿ ಆರ್.ರಾಜೇಂದ್ರ ಮಾಹಿತಿ

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ

Madhugiri News: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಆಗಸ್ಟ್ 10ರಂದು ಸೋಮವಾರ ಬರ ಪರಿಶೀಲನೆಗೆ ಮಧುಗಿರಿಗೆ ಆಗಮಿಸುತ್ತಿದ್ದಾರೆ ಎಂದು ತುಮಕೂರು ವಿಧಾನ ಪರಿಷತ್ತು ಸದಸ್ಯ ಆರ್. ರಾಜೇಂದ್ರ ರಾಜಣ್ಣ ಮಾಹಿತಿ ನೀಡಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ

Madhugiri News: ಮಧುಗಿರಿ ಪಟ್ಟಣದ ದೊಡ್ಡಪೇಟೆಯಲ್ಲಿರುವ ಐತಿಹಾಸಿಕ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಶ್ರೀಕ್ಷೇತ್ರ ಸಿದ್ಧರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದ ಮಠಾಧ್ಯಕ್ಷರಾದ ಷ॥ ಬ್ರಹ್ಮ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

ಮಧುಗಿರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕೆ.ಎನ್‌.ರಾಜಣ್ಣ

ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕೆ.ಎನ್‌.ರಾಜಣ್ಣ

Madhugiri News: ಜನರ ಅಗತ್ಯಗಳಿಗೆ ಸ್ಪಂದಿಸುವ, ಗುಣಮಟ್ಟದ ಹಾಗೂ ಶಾಶ್ವತ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವ ಮೂಲಕ ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

Loading...