ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

Gubbi News: ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್

ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್

ತಾಲೂಕಿನ ಹಲಸಿನ ನಾಗೇನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ನಾಮಫಲಕ ಅನಾವರಣಗೊಳಿಸಿ ಮಾತನಾಡಿ,  ಮೊದಲು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಉದ್ಯೋಗವಕಾಶ ಕಲ್ಪಿಸಿ ಕೊಟ್ಟಾಗ ಮಾತ್ರ ಮಾದಿಗ ಸಮುದಾಯ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು.  ಮುಖಂಡ ಅದಲಗೆರೆ ಈಶ್ವರಯ್ಯ ಮಾತನಾಡಿ ಪ್ರತಿ ಗ್ರಾಮಗಳಲ್ಲಿ ಯುವ ಸಂಘಟನೆ ಸ್ಥಾಪನೆ ಯಾಗುವುದರಿಂದ ಜನಾಂಗಕ್ಕೆ ಆಗುವ ಅನ್ಯಾಯ ತಡೆದು ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಸಹಕರಿಸಬಹುದು

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಪ್ರಕರಣ; ಪುತ್ರಿ ಪರವಾಗಿ ಕ್ಷಮೆ ಕೇಳಿದ BJP ಶಾಸಕ ಸುರೇಶ್‌ ಗೌಡ

ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ್ರಾ BJP ಶಾಸಕ ಸುರೇಶ್‌ ಗೌಡ ಪುತ್ರಿ?

MLA B. Suresh Gowda: ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ಮೇಲೆ ಹಲ್ಲೆ ಪುತ್ರಿ ಐಶ್ವರ್ಯಾ ಕಪಾಳಮೋಕ್ಷ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭೀಮನ ಅಮಾವಾಸ್ಯೆಯ ದಿನ ನನ್ನ ಮಗಳು ಇಬ್ಬರು ಸಣ್ಣ ಮಕ್ಕಳೊಂದಿಗೆ ಆರತಿ ಉಕ್ಕಡ ದೇವಸ್ಥಾನಕ್ಕೆ ತೆರಳಿದ್ದಳು.

ರೈತರಿಗೆ ಉಚಿತವಾಗಿ ಗುಣಮಟ್ಟದ ಮೇವು ಬೀಜದ ಕಿಟ್‌ ವಿತರಣೆ: ಶಾಸಕ ಕೆ.ಎನ್. ರಾಜಣ್ಣ

ರೈತರಿಗೆ ಉಚಿತವಾಗಿ ಮೇವು ಬೀಜದ ಕಿಟ್‌ ವಿತರಣೆ: ಶಾಸಕ ಕೆ.ಎನ್. ರಾಜಣ್ಣ

Madhugiri News: ಬರ ಪರಿಹಾರ ಯೋಜನೆಯ ಭಾಗವಾಗಿ ರೈತರಿಗೆ ಉಚಿತವಾಗಿ ರಿಯಾಯಿತಿ ದರದಲ್ಲಿ ಗುಣಮಟ್ಟದ ಮೇವು ಬೀಜಗಳ ಕಿಟ್‌ಗಳನ್ನು ವಿತರಿಸಲಾಗುತ್ತಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

MLA M.T.Krishnappa : ಶಾಸಕ ಎಂ.ಟಿ.ಕೃಷ್ಣಪ್ಪ ಅವರಿಗೆ ಘೇರಾವ್ ಪೂರ್ವನಿಯೋಜಿತ : ಸಿಡಿದ ಬೆಂಬಲಿಗರು

ಶಾಸಕರಿಗೆ ಘೇರಾವ್ ಪೂರ್ವನಿಯೋಜಿತ : ಸಿಡಿದ ಬೆಂಬಲಿಗರು

ಬಿಜೆಪಿ ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ ಕುಣಿಗಲ್ ತಾಲ್ಲೂಕಿಗೆ ಬಂದ ತುರುವೇಕೆರೆ ಶಾಸಕ ಕೃಷ್ಣಪ್ಪ ಅವರನ್ನು ಕುಣಿಗಲ್ ಶಾಸಕ ರಂಗನಾಥ್ ಟೀಕಿಸಿ ಪೈಪ್ ಲೈನ್ ವಿಚಾರವನ್ನು ತಿರುಚಿ ಹೇಳಿ ಅಲ್ಲಿದ್ದ ಬೆಂಬಲಿಗರನ್ನು ಪ್ರಚೋದಿಸಿ ಘೇರಾವ್ ಮಾಡಿಸಿದ್ದಾರೆ. ಜಿಲ್ಲೆಯ ರೈತರ ಹಿತಕ್ಕಾಗಿ ಕೃಷ್ಣಪ್ಪ ಅವರ ಹೋರಾಟ ನಡೆದಿದೆ. ಅವರನ್ನು ಬೆಂಬಲಿಸಿ ಗುಬ್ಬಿ ತುರುವೇಕೆರೆ ಜನರು ಕೈಗೆ ಬಳೆ ತೊಟ್ಟಿಲ್ಲ

Gubbi News: ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..! : ಎಸ್.ಡಿ.ದಿಲೀಪ್ ಕುಮಾರ್

ಗುಬ್ಬಿ ಶಾಸಕರಿಗೆ ನೀರಿನ ಶಾಪ-ಮಂತ್ರಿಗಿರಿ ಕೈ ತಪ್ಪಿದೆ..!

ತಾಲ್ಲೂಕಿನ ರೈತರ ಅಳಲು ಅಜ್ಜಯ್ಯ ಅವರಿಗೆ ತಲುಪಿ ಅವರ ಮುಖಾಂತರ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಲುಪಿ ಸಚಿವ ಸ್ಥಾನ ಸಿಕ್ಕಿಲ್ಲ. ನೀರಿನ ಶಾಪ ತಟ್ಟುವ ಮೊದಲು ರೈತರ ಹೋರಾಟಕ್ಕೆ ಧುಮುಕಬೇಕಿತ್ತು. ಅಂದು ಚಾನಲ್ ಮೇಲೆ ಮಲಗಿ ನೀರು ಬಿಡಿಸಿದ್ದೆ ಎನ್ನುವ ಶಾಸಕರು ಇಂದು ಡಿಕೆಶಿ ಮನೆ ಮುಂದೆ ಮಲಗಿ ಬಹಿರಂಗವಾಗಿ ವಿರೋಧ ವ್ಯಕ್ತಪಡಿಸಲಿ ನೋಡೋಣ ಎಂದು ಸವಾಲೆಸೆದರು

ಕನಿಷ್ಠ ವೇತನ ಪರಿಷ್ಕರಣೆ ಆದೇಶ ಜಾರಿಗೆ ಆಗ್ರಹ; ತುಮಕೂರು ಡಿಸಿ ಕಚೇರಿ ಎದುರು ಹೊರಗುತ್ತಿಗೆ ನೌಕರರ ಪ್ರತಿಭಟನೆ

ಕನಿಷ್ಠ ವೇತನ ಆದೇಶ ಜಾರಿಗೆ ಒತ್ತಾಯಿಸಿ ತುಮಕೂರಿನಲ್ಲಿ ಪ್ರತಿಭಟನೆ

Tumkur News: ಕನಿಷ್ಠ ವೇತನ ಪರಿಷ್ಕರಣೆ ಕುರಿತು ಹೊರಡಿಸಿರುವ ಆದೇಶವನ್ನು ಕೂಡಲೇ ದೃಢೀಕರಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಹಾಗೂ ಪರಿಷ್ಕೃತ ಕನಿಷ್ಠ ವೇತನವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಸರ್ಕಾರದ ಹೊರಗುತ್ತಿಗೆ ನೌಕರರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.

Tumkur News: ಸಂಗೀತ ವಿಶ್ವದ ಭಾಷೆ, ಅದಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ: ವೀರೇಶಾನಂದ ಸ್ವಾಮೀಜಿ

ಸಂಗೀತಕ್ಕೆ ಮನಸ್ಸುಗಳನ್ನು ಬೆಸೆಯುವ ಶಕ್ತಿಯಿದೆ: ವೀರೇಶಾನಂದ ಸ್ವಾಮೀಜಿ

Tumkur News: ಭಾರತೀಯ ಸಂಗೀತ ಪರಂಪರೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಇಂದಿನ ಕಲಾವಿದರು, ಗುರುಗಳು ಮತ್ತು ಸಂಗೀತ ಸಂಸ್ಥೆಗಳ ಮೇಲಿದೆ ಎಂದು ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ತಿಳಿಸಿದ್ದಾರೆ.

ಮಕ್ಕಳಿಗೆ ಅಂಕಗಳು ಮಾತ್ರವಲ್ಲ ಕೌಶಲ್ಯವೂ ಮುಖ್ಯ: ಶಾಸಕ ಜಿ.ಬಿ. ಜ್ಯೋತಿಗಣೇಶ್

ಮಕ್ಕಳಿಗೆ ಅಂಕಗಳು ಮಾತ್ರವಲ್ಲ ಕೌಶಲ್ಯವೂ ಮುಖ್ಯ: ಶಾಸಕ ಜಿ.ಬಿ. ಜ್ಯೋತಿಗಣೇಶ್

ತುಮಕೂರು ​ನಗರದ ಕುಂಚಶ್ರೀ ಪ್ಯಾಲೇಸ್‌ನಲ್ಲಿ 'ಕುಂಚಶ್ರೀ ಮಹಿಳಾ ಬಳಗ'ದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಾ ಪುರಸ್ಕಾರ-2026 ಕಾರ್ಯಕ್ರಮದಲ್ಲಿ ಶಾಸಕ ಜ್ಯೋತಿಗಣೇಶ್‌ ಅವರು ಮಾತನಾಡಿದ್ದಾರೆ. ಪೋಷಕರು ಮಕ್ಕಳನ್ನು ಕೇವಲ ಮೆಡಿಕಲ್ ಅಥವಾ ಎಂಜಿನಿಯರಿಂಗ್‌ ಕ್ಷೇತ್ರಗಳಿಗೆ ಮಾತ್ರ ಸೀಮಿತಗೊಳಿಸದೆ, ಇತರೆ ನವೀನ ಕ್ಷೇತ್ರಗಳ ಕಡೆಗೂ ಗಮನಹರಿಸುವಂತೆ ಪ್ರೇರೇಪಿಸಬೇಕು ಎಂದು ಸಲಹೆ ನೀಡಿದ್ದಾರೆ.

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಸಾಹಿತಿ ಬರಗೂರು ರಾಮಚಂದ್ರಪ್ಪ

ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಸಾಹಿತಿ ಬರಗೂರು

Tumkur News: ತುಮಕೂರಿನ ಕನ್ನಡ ಭವನದಲ್ಲಿ ಕನ್ನಡಪರ ಚಿಂತನ ವೇದಿಕೆ ವತಿಯಿಂದ ಆಯೋಜಿಸಿದ್ದ 'ಕನ್ನಡ ಮಾಧ್ಯಮ ಮೀಸಲಾತಿ 25 ವರ್ಷ' ಚಿಂತನ ಸಮಾವೇಶದಲ್ಲಿ ಹಿರಿಯ ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಅವರು ಆಶಯ ನುಡಿಗಳನ್ನಾಡಿದ್ದಾರೆ.

Tumkur News: ಲೋ ಬಿಪಿಯಿಂದ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು!

ಲೋ ಬಿಪಿಯಿಂದ ಕುಸಿದು ಬಿದ್ದು 8ನೇ ತರಗತಿ ವಿದ್ಯಾರ್ಥಿನಿ ಸಾವು

Pavagada News: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿ ಬಾ ಗಾಂಧಿ ಬಾಲಕಿಯರ ಹಾಸ್ಟೆಲ್‌ನ ಶೌಚಾಲಯದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ಘಟನೆ ಸಂಬಂಧ ಸ್ಥಳಕ್ಕೆ ಪಾವಗಡ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ: ಎಂಎಲ್‌ಸಿ ಆರ್.ರಾಜೇಂದ್ರ ಮಾಹಿತಿ

ಆ.10ರಂದು ಬರ ಪರಿಶೀಲನೆಗಾಗಿ ಮಧುಗಿರಿಗೆ ಡಿಸಿಎಂ ಡಾ.ಜಿ.ಪರಮೇಶ್ವರ್ ಭೇಟಿ

Madhugiri News: ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಆಗಸ್ಟ್ 10ರಂದು ಸೋಮವಾರ ಬರ ಪರಿಶೀಲನೆಗೆ ಮಧುಗಿರಿಗೆ ಆಗಮಿಸುತ್ತಿದ್ದಾರೆ ಎಂದು ತುಮಕೂರು ವಿಧಾನ ಪರಿಷತ್ತು ಸದಸ್ಯ ಆರ್. ರಾಜೇಂದ್ರ ರಾಜಣ್ಣ ಮಾಹಿತಿ ನೀಡಿದ್ದಾರೆ.

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಮಕ್ಕಳಿಗೆ ಬಾಲ್ಯದಿಂದಲೇ ಧಾರ್ಮಿಕ ಸಂಸ್ಕಾರ ಕಲಿಸಿ

Madhugiri News: ಮಧುಗಿರಿ ಪಟ್ಟಣದ ದೊಡ್ಡಪೇಟೆಯಲ್ಲಿರುವ ಐತಿಹಾಸಿಕ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಆಷಾಢ ಮಾಸದ ಕೊನೆಯ ಶುಕ್ರವಾರದ ಅಂಗವಾಗಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಶ್ರೀಕ್ಷೇತ್ರ ಸಿದ್ಧರಬೆಟ್ಟದ ಶ್ರೀ ರಂಭಾಪುರಿ ಖಾಸಾ ಶಾಖಾ ಮಠದ ಮಠಾಧ್ಯಕ್ಷರಾದ ಷ॥ ಬ್ರಹ್ಮ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು.

ಮಧುಗಿರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕೆ.ಎನ್‌.ರಾಜಣ್ಣ

ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ಶಾಸಕ ಕೆ.ಎನ್‌.ರಾಜಣ್ಣ

Madhugiri News: ಜನರ ಅಗತ್ಯಗಳಿಗೆ ಸ್ಪಂದಿಸುವ, ಗುಣಮಟ್ಟದ ಹಾಗೂ ಶಾಶ್ವತ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡುವ ಮೂಲಕ ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದು ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

Madhugiri News: ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ

ಮಧುಗಿರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಶಾಸಕ ಕೆ.ಎನ್. ರಾಜಣ್ಣ

Madhugiri News: ಮಧುಗಿರಿ ತಾಲೂಕಿನ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಮಾಜಿ ಸಚಿವರು ಹಾಗೂ ಶಾಸಕ ಕೆ.ಎನ್. ರಾಜಣ್ಣ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದು, ಜನರ ಆಶೋತ್ತರಗಳಿಗೆ ಸ್ಪಂದಿಸುವ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

Gubbi News: ವಿದ್ಯಾರ್ಥಿಗಳು ಸಮಯದ ಸದ್ಬಳಕೆ ಮಾಡಿಕೊಂಡು ತಮ್ಮ ಕನಸುಗಳನ್ನು ನನಸಾಗಿಸಿಕೊಳ್ಳಬೇಕು

ಪ್ರಥಮ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮ

ಶಿಕ್ಷಣವು ಕೇವಲ ಪದವಿ ಪಡೆಯುವ ಸಾಧನವಲ್ಲ, ಅದು ಉತ್ತಮ ವ್ಯಕ್ತಿತ್ವ, ಸಂಸ್ಕಾರ ಮತ್ತು ಸಮಾಜ ಮುಖಿ ಬದುಕಿನ ಅಡಿಪಾಯವಾಗಿದೆ. ವಿದ್ಯಾರ್ಥಿಗಳು ಶಿಸ್ತು, ಸಮಯಪಾಲನೆ, ಪರಿಶ್ರಮ ಮತ್ತು ಪ್ರಾಮಾಣಿಕತೆಯನ್ನು ಜೀವನದ ಮೌಲ್ಯಗಳಾಗಿ ಅಳವಡಿಸಿಕೊಂಡರೆ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಬಹುದು

Gubbi News: ಕಂದಾಯ ಇಲಾಖೆ ವಿರುದ್ಧ ರೈತರು ದಿಢೀರ್ ಪ್ರತಿಭಟನೆ

ಕಂದಾಯ ಇಲಾಖೆ ವಿರುದ್ಧ ರೈತರು ದಿಢೀರ್ ಪ್ರತಿಭಟನೆ

ದಲಿತ ಮುಖಂಡ ಅದಲಗೆರೆ ಈಶ್ವರಯ್ಯ  ಮಾತನಾಡಿ, ಸುಮಾರು ಎರಡು ತಲೆ ಮಾರುಗಳಿಂದ ರೈತರು ಜಮೀನಿನ್ನು ಸಾಗುವಳಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಜಮೀನು ದುರಾಸ್ತಿ ಮಾಡುವ ಸಂದರ್ಭದಲ್ಲಿ ಒಂದೊಂದು ಜಮೀನಿನಲ್ಲೂ ಹತ್ತು ಕುಂಟೆ ,ಇಪ್ಪತ್ತು ಕುಂಟೆ ಜಮೀನು ಕಡಿಮೆ ಮಾಡಿರುವುದು ಗಮನಕ್ಕೆ ಬಂದಿದ್ದು. ಕೂಡಲೇ ದಂಡಾಧಿಕಾರಿಗಳು ಸ್ಥಳಕ್ಕೆ ಬಂದು ರೈತರ ಸಮಸ್ಯೆ ಯನ್ನು ಬಗೆಹರಿಸಕೊಡಬೇಕು ಎಂದರು.

ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌; ದಾಖಲೆಗಳು ಬೆಂಕಿಗಾಹುತಿ

ಪಾವಗಡದ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌

Pavagada News: ಪಾವಗಡ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪವಿರುವ ಮಣಪ್ಪುರಂ ಗೋಲ್ಡ್ ಲೋನ್ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ ನಡೆದಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಚೇರಿಯಲ್ಲಿದ್ದ ಕೆಲವು ದಾಖಲೆಗಳು ಹಾಗೂ ಕಡತಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ.

ಕೈತಪ್ಪಿದ ಸಚಿವ ಸ್ಥಾನ; ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಎಸ್‌.ಆರ್. ಶ್ರೀನಿವಾಸ್‌ ರಾಜೀನಾಮೆ ಘೋಷಣೆ

ಕೆಎಸ್‌ಆರ್‌ಟಿಸಿ ಅಧ್ಯಕ್ಷ ಸ್ಥಾನಕ್ಕೆ ಎಸ್‌.ಆರ್. ಶ್ರೀನಿವಾಸ್‌ ರಾಜೀನಾಮೆ

Karnataka cabinet expansion: ಜನ ನನಗೆ ಸಚಿವ ಸ್ಥಾನ ಕೊಡಬೇಕು ಎಂದು ಕೇಳುತ್ತಾರೆ. ಆದರೆ ರಾಜಕೀಯದಲ್ಲಿ ನಮ್ಮಂಥ ಸಾಮಾನ್ಯ ರೈತನ ಮಗ ಮೇಲೆ ಬರೋದು ಕಷ್ಟ. ನಮಗೆ ಯೋಗ್ಯತೆ ಇಲ್ಲ ಅಂತ ಅರ್ಥ. ಹಾಗಾಗಿ ಸಚಿವ ಸ್ಥಾನ ತಪ್ಪಿದೆ ಎಂದು ಗುಬ್ಬಿ ಶಾಸಕ ಎಸ್‌.ಆರ್.ಶ್ರೀನಿವಾಸ್‌ ಬೇಸರ ಹೊರಹಾಕಿದ್ದಾರೆ.

Gubbi News: ಗುಬ್ಬಿ ತಾಲ್ಲೂಕಿನ ಕೆರೆಗಳಿಗೆ ಶೀಘ್ರ ಹೇಮೆ ಹರಿಸಿ : ಗುಬ್ಬಿ ಬಿಜೆಪಿಗರ ಒತ್ತಾಯ

ಗುಬ್ಬಿ ತಾಲ್ಲೂಕಿನ ಕೆರೆಗಳಿಗೆ ಶೀಘ್ರ ಹೇಮೆ ಹರಿಸಿ : ಬಿಜೆಪಿಗರ ಒತ್ತಾಯ

ಗುಬ್ಬಿ ತಾಲೂಕಿನಾದ್ಯಂತ ಎಲ್ಲಾ ಕೆರೆಗಳು ನೀರು ಇಲ್ಲದೆ ಬರಿದಾಗಿ ಕುಡಿಯುವ ನೀರಿಗೂ ತತ್ವಾರ ಎದುರಾಗಿದೆ. ರೈತರ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವಜಲವಾಗಿದ್ದ ಹೇಮಾವತಿ ನೀರು ಬರಬೇಕಿತ್ತು. ಈ ಬಾರಿ ಜುಲೈ ತಿಂಗಳು ಕಳೆದರೂ ಹೇಮೆ ನಮ್ಮತ್ತ ಹರಿದಿಲ್ಲ. ಮುಂಗಾರು ಕೈ ಕೊಟ್ಟಿದೆ. ಆದರೆ ಕೆಲ ದಿನದಿಂದ ಮಲೆನಾಡು ಭಾಗದಲ್ಲಿ ಮಳೆ ಬೀಳುತ್ತಿದೆ

Gubbi News: ಮಕ್ಕಳಲ್ಲಿನ ಬಹುಮುಖ ಪ್ರತಿಭೆ ಗುರುತಿಸುವುದೇ ನಿಜ ಶಿಕ್ಷಣ: ಬಿಇಓ ನಟರಾಜು

ಮಕ್ಕಳಲ್ಲಿನ ಬಹುಮುಖ ಪ್ರತಿಭೆ ಗುರುತಿಸುವುದೇ ನಿಜ ಶಿಕ್ಷಣ

ಕ್ರೀಡಾ ಶಿಕ್ಷಣ ಮಕ್ಕಳಲ್ಲಿ ಮನರಂಜನೆ, ದೈಹಿಕ ಕಸರತ್ತು, ಸಹಕಾರ, ಸ್ಪರ್ಧಾ ಮನೋಭಾವ, ಸಾಮಾಜಿಕ ಜೀವನ ಎಲ್ಲವನ್ನೂ ಕಲಿಸುತ್ತದೆ. ಕ್ರೀಡೆಯಿಂದ ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆದ ಮಕ್ಕಳು ನಮ್ಮ ಕಣ್ಮುಂದೆ ನಿದರ್ಶನವಾಗಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಕರು ಮಕ್ಕಳ ಕ್ರೀಡೆಗೆ ಸೂಕ್ತ ತರಬೇತಿ ನೀಡಿ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯಮಟ್ಟಕ್ಕೆ ಕೊಂಡೊಯ್ಯಬೇಕು ಎಂದು ಸಲಹೆ ನೀಡಿ ಕ್ರೀಡಾಕೂಟದಿಂದ ಮನೆಗೆ ಮಕ್ಕಳನ್ನು ಸುರಕ್ಷಿತವಾಗಿ ತಲುಪಿಸುವ ಹೊಣೆಗಾರಿಕೆ ಶಿಕ್ಷಕರದ್ದಾಗಿದೆ ಎಂಬುದು ನೆನಪಿರಲಿ

MLA S R Srinivas: ಸರ್ವ ಪಕ್ಷಗಳ ಸಭೆಗೆ ಮುನ್ನ ಬಿಜೆಪಿ ಹೋರಾಟ ಅರ್ಥವಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

ಸರ್ವ ಪಕ್ಷಗಳ ಸಭೆಗೆ ಮುನ್ನ ಬಿಜೆಪಿ ಹೋರಾಟ ಅರ್ಥವಿಲ್ಲ

ಕಳೆದ ಎಂಟು ವರ್ಷದಿಂದ ಬಡವರಿಗೆ ಮನೆ ಮಂಜೂರು ಆಗುತ್ತಿಲ್ಲ. ಇತ್ತೀಚೆಗೆ ಬರುತ್ತಿದ್ದರೂ ಕೇವಲ ತಾಲ್ಲೂಕಿಗೆ 50 ಮನೆ ಬರುತ್ತದೆ. ಇದು ಹೇಗೆ ಬಡವರಿಗೆ ಹಂಚಲು ಸಾಧ್ಯ. ಈ ಬಗ್ಗೆ ಸದನದಲ್ಲಿ ಚರ್ಚಿಸು ತ್ತೇನೆ ಎಂದ ಅವರು ಸಚಿವ ಸ್ಥಾನ ಬಗ್ಗೆ ಎರಡು ತಿಂಗಳ ಹಿಂದೆ ಸಿದ್ದರಾಮಯ್ಯ ಅವರ ಬಳಿ ಕೇಳಿದ್ದೆ

Gubbi News: ಗುಬ್ಬಿಯಲ್ಲಿ ಅರ್ಥಪೂರ್ಣ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ

ಗುಬ್ಬಿಯಲ್ಲಿ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲ್ಲೂಕು ಘಟಕ ಆಯೋಜಿಸಿದ್ದ ಕಾರ್ಗಿಲ್ ಮತ್ತು ಆಪರೇಷನ್ ಸಿಂಧೂರ ವಿಜಯೋತ್ಸವ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವಾರ್ಪಣೆ ಹಾಗೂ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ, ಹುತಾತ್ಮರ ಭಾವಚಿತ್ರ ಮೆರವಣಿಗೆ ಮಾಡುವ ಮೂಲಕ ಅರ್ಥಪೂರ್ಣವಾಗಿ ನಡೆಸಲಾಯಿತು.

ಗೋಮಾತೆಗೆ ಸೀಮಂತ : ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಗ್ರಾಮಸ್ಥರು

ಗೋಮಾತೆಗೆ ಸೀಮಂತ : ಅದ್ದೂರಿ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಗ್ರಾಮಸ್ಥರು

ಈ ಹಳ್ಳಿಯ ಮನೆಯಲ್ಲಿ ಸಂಭ್ರಮ ಮನೆ ಮಾಡಿತ್ತು ಇಲ್ಲಿ ಮದುವೆಯೋ, ಇನ್ಯಾವುದೋ ಜಾತ್ರೆಯ ಸಂಭ್ರಮವಲ್ಲ ಅದು ಗೋಮಾತೆ ಲಕ್ಷ್ಮಿಯ ವಿಶೇಷ ಸೀಮಂತ ಕಾರ್ಯಕ್ರಮ ಇಡೀ ಗ್ರಾಮದ ರೈತರು, ಮಹಿಳೆಯರು,ಸಂಬಂದಿಗಳು ಸ್ನೇಹಿತರು ಎಲ್ಲರೂ ಒಟ್ಟುಗೂಡಿ ಲಕ್ಷ್ಮಿ ಯ ಸೀಮಂತ ಕಾರ್ಯಕ್ರಮವನ್ನು ಮಾಡುತ್ತಿದ್ದ ಕಾರ್ಯಕ್ರಮ.

Gubbi News: ಕೆಪಿಎಸ್ಸಿ ಹಗರಣಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ: ಶಾಸಕ ಎಂ.ಟಿ. ಕೃಷ್ಣಪ್ಪ

ಕೆಪಿಎಸ್ಸಿ ಹಗರಣಕ್ಕೆ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ

ದೇಶದ ಎಲ್ಲ ನಾಗರಿಕರಿಗೂ ಒಂದೇ ಕಾನೂನು ಅನ್ವಯವಾಗಬೇಕು ಎಂದು ಪ್ರತಿಪಾದಿಸಿದ ಅವರು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಸಂಸತ್ತಿನಲ್ಲಿ ಸತತ ಏಳು ದಿನಗಳ ಕಾಲ ಹೋರಾಟ ನಡೆಸಿತ್ತು. ಬಳಿಕ ಕೇಂದ್ರ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿ ಆರೋಪಿ ಗಳನ್ನು ಬಂಧಿಸಿತ್ತು ಹಾಗೂ ಸಂಬಂಧಪಟ್ಟ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು

Loading...