ಶಿಕ್ಷಕಿ ಗೀತಾ ಲೋಕೇಶ್ ಅವರಿಗೆ ಕಾಯಕ ಕಣ್ಮಣಿ ಪ್ರಶಸ್ತಿ
ಗಣಿನಾಡು ಬಳ್ಳಾರಿಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬೆಳಕು ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಮ್ಮೇಳನದಲ್ಲಿ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿ ಶಿಕ್ಷಕಿ ಹಾಗೂ ಸಾಹಿತಿ ಗೀತಾ ಲೋಕೇಶ್ ಅವರಿಗೆ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ರಾಷ್ಟ್ರಮಟ್ಟದ ಕಾಯಕ ಕಣ್ಮಣಿ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.