ಎಲ್ಲಾ ವರ್ಗಕ್ಕೂ ದಕ್ಕಿದ ಬಜೆಟ್: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್
ತಾಲ್ಲೂಕಿನ ಕಸಬ ಹೋಬಳಿ ಎಸ್.ಕೊಡಗೀಹಳ್ಳಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಯಿಂದ ನಡೆದ 3 ಕೋಟಿ ರೂ ವೆಚ್ಚದ ವಿವಿಧ ಗ್ರಾಮದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ಶಾಸಕರು ಬಜೆಟ್'ಗಾಗಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಮುಖ್ಯಮಂತ್ರಿಗಳ ಬಳಿ ಬೇಡಿಕೆ ಇಟ್ಟಿದ್ದೆವು. ಈ ವರ್ಷ ಮನ್ನಣೆಗೆ ಬಂದಿಲ್ಲ. ಮುಂದಿನ ವರ್ಷದ ಬಜೆಟ್'ನಲ್ಲಿ ಎಲ್ಲಾ ಯೋಜನೆಗೆ ಅಸ್ತು ಸಿಗಲಿದೆ