ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ತುಮಕೂರು

ತುಮಕೂರಿನ ಹೆತ್ತೇನಹಳ್ಳಿ ಶ್ರೀ ಮಾರಮ್ಮ ದೇವಿಗೆ ಹೊಸ ತಾಳಿ ಸಮರ್ಪಿಸಿದ ಮಾಜಿ ಶಾಸಕ ಗೌರಿಶಂಕರ್

ಹೆತ್ತೇನಹಳ್ಳಿ ಶ್ರೀ ಮಾರಮ್ಮ ದೇವಿಗೆ ಹೊಸ ತಾಳಿ ಸಮರ್ಪಣೆ

Tumkur News: ತುಮಕೂರು ತಾಲೂಕಿನ ಹೆತ್ತೇನಹಳ್ಳಿ ಶ್ರೀ ಮಾರಮ್ಮ ದೇವಿಗೆ ಮಾಜಿ ಶಾಸಕ ಡಿ.ಸಿ. ಗೌರಿಶಂಕರ್ ಹಾಗೂ ಇವರ ಆಪ್ತರಾದ ಕಾಂಗ್ರೆಸ್ ಮುಖಂಡ, ಉದ್ಯಮಿ ಊರುಕೆರೆ ಜಗದೀಶ್ ಅವರು ಹೊಸದಾಗಿ ತಾಳಿ ಮಾಡಿಸಿ ಶುಕ್ರವಾರ ದೇವಿಗೆ ಸಮರ್ಪಣೆ ಮಾಡಿದರು.

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಿ: ಸರ್ಕಾರಕ್ಕೆ ಕಾಂಗ್ರೆಸ್​​ ಶಾಸಕ ರಂಗನಾಥ್ ಆಗ್ರಹ

ರೈತರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ವಿಶೇಷ ಭತ್ಯೆ ನೀಡಲು ಆಗ್ರಹ

HD Ranganath: ಕೃಷಿಯಲ್ಲಿ ತೊಡಗಿರುವ ಯುವಕರನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಮುಂಬರುವ ಅಧಿವೇಶನದಲ್ಲಿ ವಿಶೇಷ ಭತ್ಯೆ ಹಾಗೂ ಸ್ಥಾನಮಾನ ಘೋಷಿಸುವಂತೆ ತುಮಕೂರಿನ ಕುಣಿಗಲ್‌ ಕ್ಷೇತ್ರದ ಶಾಸಕ ಡಾ.ಎಚ್​​.ಡಿ. ರಂಗನಾಥ್ ಆಗ್ರಹಿಸಿದ್ದಾರೆ. ಈ ಬಗ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

KSRTC: ವೇತನ ಪರಿಷ್ಕರಣೆ ಸಮಿತಿ ಮೂಲಕ ನಿರ್ಧಾರ : ಕೆಎಸ್ಆರ್ಟಿಸಿ ನಿಗಮ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್

ವೇತನ ಪರಿಷ್ಕರಣೆ ಸಮಿತಿ ಮೂಲಕ ನಿರ್ಧಾರ: ಎಸ್.ಆರ್.ಶ್ರೀನಿವಾಸ್

ಗುಬ್ಬಿ ತಾಲೂಕಿನ ಅಡಗೂರು, ಧೂಳನಹಳ್ಳಿ ಪಾಳ್ಯ, ಕಕ್ಕೆನಹಳ್ಳಿ, ಕೊಪ್ಪ , ಸುರಿಗೇನಹಳ್ಳಿ, ತೊಂಗನಹಳ್ಳಿ, ಸಿಂಗೊನಳ್ಳಿ ಗ್ರಾಮಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಅವರು, ಒಂದು ವಿಚಾರವಾಗಿ ಸರ್ಕಾರ ಮತ್ತು ನೌಕರರ ನಡುವೆ ಕೆಲವೊಂದು ಗೊಂದಲಗಳಿವೆ. ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರು ಬಗೆಹರಿಸ ಲಿದ್ದಾರೆ

ಫೆ.28, ಮಾ.1ರಂದು ಶ್ರೀ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ: ಶ್ರೀ ಬಸವ ರಮಾನಂದ ಸ್ವಾಮೀಜಿ

ಫೆ.28, ಮಾ.1ರಂದು ಶ್ರೀ ವನಕಲ್ಲು ಮಲ್ಲೇಶ್ವರ ಜಾತ್ರಾ ಮಹೋತ್ಸವ

ಜಾತ್ರಾ ಮಹೋತ್ಸವ ಅಂಗವಾಗಿ ಇದೇ ತಿಂಗಳ 21 ರಿಂದ ಸಿದ್ದಯೋಗಾನಂದ ಶ್ರೀ ಕಪ್ ಹೆಸರಿ ನಲ್ಲಿ ಕ್ರಿಕೆಟ್, ಓಟದ ಸ್ಪರ್ಧೆ, ಗುಂಡು ಎಸೆತ, ವಾಲಿಬಾಲ್, ಕಬಡ್ಡಿ, ಮಡಿಕೆ ಒಡೆಯುವ ಸ್ಪರ್ಧೆ, ವಚನ ಕಂಠ ಪಾಠ, ವೇಷಭೂಷಣ ಸ್ಪರ್ಧೆ ಹೀಗೆ ಅನೇಕ ಗ್ರಾಮೀಣ ಆಟಗಳ ಸೊಗಡು ಅಲ್ಲಿ ಪ್ರದರ್ಶನ ಆಗಲಿದೆ

ರೈತರ ಹಿತಕ್ಕೆ ಅಮೇರಿಕ ಒಪ್ಪಂದ ಮಾಡಿರುವುದು : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ರೈತರ ಹಿತಕ್ಕೆ ಅಮೇರಿಕ ಒಪ್ಪಂದ ಮಾಡಿರುವುದು

ರೈತ ಪರ ಕೆಲಸಗಳನ್ನು ಎಂದೂ ಮಾಡಿಲ್ಲ. ವಿಷಯವಂತೂ ಮೊದಲೇ ತಿಳಿಯಲ್ಲ, ಯಾರೋ ಹೇಳುತ್ತಾರೆ ರಾಹುಲ್ ಗಾಂಧಿ ಅವರು ಮಾತನಾಡುತ್ತಾರೆ ಅಷ್ಟೇ ಎಂದು ವ್ಯಂಗ್ಯವಾಡಿದ ಅವರು ಕೇಂದ್ರ ಸರ್ಕಾರದಿಂದ ಬರುವ ಅನುದಾನಗಳನ್ನು ರೈತರ ಪರವಾಗಿ ನಿಂತು ಸರಿಯಾಗಿ ಉಪಯೋಗ ಮಾಡಿಕೊಳ್ಳದ ರಾಜ್ಯದ ಕಾಂಗ್ರೆಸ್ ಸರ್ಕಾರ ಕೇಂದ್ರ ಸರ್ಕಾರವನ್ನು ಟೀಕಿಸುವ ಯಾವ ನೈತಿಕತೆ ಉಳಿಸಿ ಕೊಂಡಿಲ್ಲ

Crime at Gubbi: ಬೈಕ್ ನಿಲ್ಲಿಸಿದ್ದಕ್ಕೆ ಆರು ಜನರ ತಲೆಗೆ ಗಂಭೀರ ಪೆಟ್ಟು..!! : ಕ್ಷುಲ್ಲಕ ಕಾರಣಕ್ಕೆ ರಕ್ತದ ಕೋಡಿ

ಬೈಕ್ ನಿಲ್ಲಿಸಿದ್ದಕ್ಕೆ ಆರು ಜನರ ತಲೆಗೆ ಗಂಭೀರ ಪೆಟ್ಟು..!!

ಸಂಜೆ ವೇಳೆ ದಿಲೀಪ್ ತನ್ನ ಬೈಕ್ ನಲ್ಲಿ ಗುಬ್ಬಿಯಿಂದ ಬಂದು ಮನೆ ಮುಂದೆ ನಿಲ್ಲಿಸಿದ್ದ ವಿಚಾರಕ್ಕೆ ಏಕಾಏಕಿ ಅಶ್ಲೀಲ ಪದಗಳಿಂದ ಬೈಗುಳ ಆರಂಭಿಸಿ ಸ್ಥಳದಲ್ಲಿದ್ದ ದೊಣ್ಣೆ, ಗಳಗಳು, ಗುದ್ದಲಿ ಹಿಡಿದು ಅಟ್ಟ್ಯಾಕ್ ಮಾಡಿದ್ದರು. ಬೈಕ್ ತೆಗೆಯುವಷ್ಟರಲ್ಲಿ ಜಗಳ ತೆಗೆದು ಮಾರಣಾಂ ತಿಕವಾಗಿ ಹೊಡೆದಿದ್ದಾರೆ.

ಗಂಡನ ಜತೆ ಇರುವುದು ಇಷ್ಟವಿರಲಿಲ್ಲ; ಪ್ರಿಯಕರನ ಜತೆ ಎಸ್ಕೇಪ್‌ ಆಗಿದ್ದ ಪ್ರಿಯಾಂಕ ಸಿಕ್ಕಿಬಿದ್ದಿದ್ದು ಹೇಗೆ?

ಪ್ರಿಯಕರನ ಜತೆ ಎಸ್ಕೇಪ್‌ ಆಗಿದ್ದ ಪ್ರಿಯಾಂಕ ಸಿಕ್ಕಿಬಿದ್ದಿದ್ದು ಹೇಗೆ?

Kunigal woman Missing Case: ನಾಪತ್ತೆಯಾಗಿದ್ದ ಪ್ರಿಯಾಂಕ ಸುಮಾರು 20 ಲಕ್ಷ ಮೌಲ್ಯದ ಚಿನ್ನಾಭರಣ ಧರಿಸಿ ಹೋಗಿದ್ದರಿಂದ ದರೋಡೆಕೋರರಿಂದ ಕೊಲೆಯಾಗಿರಬಹುದಾ ಅಥವಾ ಕಿಡ್ನ್ಯಾಪ್‌ ಆಗಿರಬಹುದಾ ಎಂಬ ಶಂಕೆ ವ್ಯಕ್ತವಾಗಿತ್ತು. ಆದರೆ, ಪೊಲೀಸರ ತನಿಖೆ ವೇಳೆ ಶಾಕಿಂಗ್‌ ವಿಚಾರಗಳು ಬಯಲಾಗಿವೆ.

ಶಿವಾರಾಧನೆಯಿಂದ ಸಕಲ ಕಷ್ಟಗಳು ಪರಿಹಾರವಾಗುತ್ತವೆ: ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಶಿವಾರಾಧನೆಯಿಂದ ಕಷ್ಟಗಳಿಗೆ ಪರಿಹಾರ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ

ಮಧುಗಿರಿಯ ಶ್ರೀ ಪ್ರಸನ್ನ ಪಾರ್ವತಿ ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ವಿಶೇಷ ಪೂಜೆಯ ವೇಳೆ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದ್ದಾರೆ. ಶಿವನನ್ನು ಒಂದು ಬಿಲ್ವ ಪತ್ರೆಯಿಂದ ಪೂಜಿಸಿದರೆ ಸಾಕು ನೂರು ಜನ್ಮಗಳ ಪಾಪ ನಿವಾರಣೆ ಆಗುತ್ತದೆ. ಶಿವರಾತ್ರಿಯಂದು ಉಪವಾಸವಿದ್ದರೆ ಉತ್ತಮ ಆರೋಗ್ಯ ಸಿಗುತ್ತದೆ ಎಂದು ತಿಳಿಸಿದ್ದಾರೆ.

IIT ಮದ್ರಾಸ್‌ನಿಂದ ಕ್ಯಾಲಿಫೋರ್ನಿಯಾವರೆಗೆ; ಮೃತ ಸಾಕೇತ್‌ ಶ್ರೀನಿವಾಸಯ್ಯ ಶೈಕ್ಷಣಿಕ ಸಾಧನೆ ಹೇಗಿತ್ತು ಗೊತ್ತಾ?

ಮೃತ ಸಾಕೇತ್‌ ಶ್ರೀನಿವಾಸಯ್ಯ ಶೈಕ್ಷಣಿಕ ಸಾಧನೆ ಹೇಗಿತ್ತು ಗೊತ್ತಾ?

Saketh Sreenivasaiah: 22 ವರ್ಷದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ನಾಪತ್ತೆಯಾಗಿ ಆರು ದಿನಗಳ ನಂತರ ಕ್ಯಾಲಿಫೋರ್ನಿಯಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದ ಸಾಕೇತ್ ಫೆಬ್ರವರಿ 9 ರಂದು ನಾಪತ್ತೆಯಾಗಿದ್ದರು.

Woman Missing case: ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಾಭರಣಕ್ಕಾಗಿ ಕೊಲೆಯಾದ ಶಂಕೆ

ಮದುವೆಗೆ ಬಂದ ಮಹಿಳೆ ನಿಗೂಢ ನಾಪತ್ತೆ, ಮೈಮೇಲಿದ್ದ ಚಿನ್ನಕ್ಕಾಗಿ ಕೊಲೆ ಶಂಕೆ

ರಾಷ್ಟ್ರೀಯ ಹೆದ್ದಾರಿ 373ರ ಸಮೀಪ ಇರುವ ಕೆರೆಯ ಬಳಿ ಚಪ್ಪಲಿ, ಬಟ್ಟೆ, ವ್ಯಾನಿಟಿ ಬ್ಯಾಗ್ ಹಾಗೂ ಎಲ್ಲವೂ ಪತ್ತೆಯಾಗಿದೆ. ಹಾಗಾಗಿ ನಿಗೂಢವಾಗಿ ನಾಪತ್ತೆಯಾಗಿರುವ ಪ್ರಿಯಾಂಕರನ್ನು ತೀವ್ರವಾಗಿ ಹುಡುಕಾಟ ನಡೆಸಲಾಗುತ್ತಿದೆ. ಕುಟುಂಬಸ್ಥರ ಮಾಹಿತಿ ಪ್ರಕಾರ ಸುಮಾರು 25 ರಿಂದ 30 ಲಕ್ಷ ರೂ. ಮೌಲ್ಯದ ಒಡವೆ ಆಕೆಯ ಮೈಮೇಲೆ ಮೇಲೆ ಇತ್ತು. ಹಾಗಾಗಿ ಆಕೆಯನ್ನು ಅದಕ್ಕೋಸ್ಕರ ಯಾರಾದರೂ ಕೊಲೆ ಮಾಡಿರಬಹುದು ಎನ್ನುವ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ಬೂತ್ ಮಟ್ಟದಲ್ಲಿ ಬಿಜೆಪಿಯನ್ನು ಬಲಪಡಿಸಲಾಗುವುದು: ಮಾಜಿ ಶಾಸಕ ಪ್ರೀತಮ್ ಗೌಡ

ಬೂತ್ ಮಟ್ಟದಲ್ಲಿ ಬಿಜೆಪಿಯನ್ನು ಬಲಪಡಿಸಲಾಗುವುದು: ಪ್ರೀತಮ್ ಗೌಡ

Madhugiri News: ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಜಿಲ್ಲಾ ಪಂಚಾಯಿತಿ ಮತ್ತು ಗ್ರಾ.ಪಂ.ವಾರು ರಾಜ್ಯದ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ. ಕಾರ್ಯಕರ್ತರಿಗೆ ಶಕ್ತಿ ತುಂಬುವುದೇ ಬಿಜೆಪಿ ಪಕ್ಷದ ಮುಖ್ಯ ಗುರಿಯಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಗೌಡ ತಿಳಿಸಿದ್ದಾರೆ.

Tumkur News: ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು

ಶಾಲೆಯ ಬಾಗಿಲಿಗೆ ಸಿಲುಕಿ ತುಂಡಾದ ವಿದ್ಯಾರ್ಥಿನಿಯ ಕೈ ಬೆರಳು

Tumkur News: ಮಧ್ಯಾಹ್ನದ ಬಿಸಿಯೂಟಕ್ಕೆ ಸರದಿ ಸಾಲಿನಲ್ಲಿ ನಿಂತಿದ್ದಾಗ ಶಾಲೆಯ ಬಾಗಿಲಿಗೆ ಸಿಲುಕಿ 1ನೇ ತರಗತಿಯ ಬಾಲಕಿಯ ಎರಡು ಕೈ ಬೆರಳುಗಳು ತುಂಡಾಗಿರುವ ಘಟನೆಯು ತುಮಕೂರು ತಾಲೂಕಿನ ಗೂಳೂರು ಸರ್ಕಾರಿ ಶಾಲೆಯಲ್ಲಿ ಜರುಗಿದೆ. ಈ ಕುರಿತ ವಿವರ ಇಲ್ಲಿದೆ.

Tumkur Murder Case: ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗಳು!

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಮಗಳು!

ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಬಂಡೇಪಾಳ್ಯದಲ್ಲಿ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ಮಂಡಿನೋವು ಎಂದು ಹಾಸಿಗೆ ಹಿಡಿದಿದ್ದ ತಾಯಿಯನ್ನು ಮಗಳೇ ಕೊಂದು ಹೃದಯಘಾತದ ಕಥೆ ಕಟ್ಟಿದ್ದಳು. ಈ ಬಗ್ಗೆ ಅನುಮಾನ ಮೂಡಿತ್ತು. ತನಿಖೆ ವೇಳೆ ಪೊಲೀಸರು, ಮಗಳ ಬಣ್ಣ ಬಯಲು ಮಾಡಿದ್ದಾರೆ.

MLA .R. Srinivas: ಗುಬ್ಬಿ ತಾಲ್ಲೂಕಿನಾದ್ಯಂತ ಪ್ರಮುಖ ರಸ್ತೆಗಳಿಗೆ ಸಿಸಿ ಕ್ಯಾಮೆರಾ : ಶಾಸಕ ಎಸ್.ಆರ್.ಶ್ರೀನಿವಾಸ್.

ಗುಬ್ಬಿ ತಾಲ್ಲೂಕಿನಾದ್ಯಂತ ಪ್ರಮುಖ ರಸ್ತೆಗಳಿಗೆ ಸಿಸಿ ಕ್ಯಾಮೆರಾ

ಹೇಮಾವತಿ ಕುಡಿಯುವ ನೀರಿನ ಯೋಜನೆಯಲ್ಲಿ ಹಾಗಲವಾಡಿ ಕೆರೆಗೆ ನೀರು ಹರಿಯಲು ಶೇಕಡಾ 5 ರಷ್ಟು ಕೆಲಸ ಬಾಕಿ ಇದೆ. ಶೀಘ್ರದಲ್ಲಿ ಪೂರ್ಣ ಗೊಳ್ಳಲಿದೆ. ಬಿಕ್ಕೇಗುಡ್ಡ ಯೋಜನೆ ಕಾಮಗಾರಿ ಆರಂಭ ವಾಗಿದೆ. ಅದು ಕೂಡ ಬಹುಬೇಗ ಪೂರ್ಣಗೊಳ್ಳಲಿದೆ ಎಂದ ಅವರು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವ ಪ್ರತಿಕ್ರಿಯೆ ನೀಡುವುದಿಲ್ಲ. ಏನೂ ಗೊತ್ತಿಲ್ಲದ ವಿಚಾರ ಮಾಧ್ಯಮ ಮುಂದೆ ಪ್ರಸ್ತಾಪ ಮಾಡುವ ಅಗತ್ಯವಿಲ್ಲ

ಮಹಾಶಿವರಾತ್ರಿಯಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದಲ್ಲಿ ವಿಶೇಷ ಜಾಗರಣೆ ಕಾರ್ಯಕ್ರಮ

ಶಿವರಾತ್ರಿಯಂದು ಶ್ರೀ ಕ್ಷೇತ್ರ ಸಿದ್ದರಬೆಟ್ಟದಲ್ಲಿ ಜಾಗರಣೆ ಕಾರ್ಯಕ್ರಮ

Tumkur News: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಕೊರಟಗೆರೆ ತಾಲೂಕಿನ ಶ್ರೀಕ್ಷೇತ್ರ ಸಿದ್ದರಬೆಟ್ಟ ಶ್ರೀ ಮಠದಲ್ಲಿ ವಿಶೇಷ ಜಾಗರಣೆ ಕಾರ್ಯಕ್ರಮ ನೆರವೇರಲಿದೆ ಎಂದು ಶ್ರೀಕ್ಷೇತ್ರ ಸಿದ್ದರಬೆಟ್ಟ ಮಠದ ಪೀಠಾಧಿಪತಿ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಚಿಕ್ಕನಾಯಕನಹಳ್ಳಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾದ ಪೆಟ್ಟಿ ಅಂಗಡಿ!

ಬಸ್ ನಿಲ್ದಾಣದ ಮುಂದೆ ರಾತ್ರೋರಾತ್ರಿ ಪ್ರತ್ಯಕ್ಷವಾದ ಪೆಟ್ಟಿ ಅಂಗಡಿ!

Chikkanayakanahalli News: ಚಿಕ್ಕನಾಯಕನಹಳ್ಳಿ ​ಬಸ್ ನಿಲ್ದಾಣದ ಮುಂಭಾಗವು ಸದಾ ಜನಜಂಗುಳಿಯಿಂದ ಕೂಡಿರುತ್ತದೆ. ಈಗಾಗಲೇ ವಾಹನಗಳ ಪಾರ್ಕಿಂಗ್ ಮತ್ತು ಪಾದಚಾರಿಗಳ ಓಡಾಟಕ್ಕೆ ಸ್ಥಳದ ಅಭಾವವಿದ್ದು, ಈಗ ಪೆಟ್ಟಿ ಅಂಗಡಿಯು ಪಾದಚಾರಿ ಮಾರ್ಗವನ್ನೇ ಅತಿಕ್ರಮಿಸಿದೆ. ಹೀಗಾಗಿ ಪ್ರಯಾಣಿಕರು ಹಾಗೂ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Self Hraming: ತುಮಕೂರಿನ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ನಿಗೂಢ ಸಾವು

ತುಮಕೂರಿನ ಒಂದೇ ಕುಟುಂಬದ ನಾಲ್ವರು ಬಿಹಾರದಲ್ಲಿ ನಿಗೂಢ ಸಾವು

ರಾಜಗೀರ್‌ ಬೌದ್ಧ ಮತ್ತು ಜೈನರಿಗೆ ಅತ್ಯಂತ ಪವಿತ್ರವೆನಿಸಿದ ಯಾತ್ರಾ ಸ್ಥಳ. ಈ ನಾಲ್ವರೂ ನೇಪಾಳಕ್ಕೆ ಪ್ರವಾಸ ಹೋಗಿ ಜ.30ರಂದು ರಾಜಗೀರ್‌ಗೆ ಬಂದು ಕೊಠಡಿ ಬುಕ್‌ ಮಾಡಿದ್ದರು. ಮುಂದೆ ನಾಲಂದಾದ ಪಾವಾಪುರಿಗೆ ಹೋಗಲು ಯೋಜಿಸಿದ್ದರು. ಶುಕ್ರವಾರ ಬೆಳಿಗ್ಗೆ 9:40ರ ಸುಮಾರಿಗೆ ಕೊಠಡಿಯಿಂದ ಕೊಳೆತ ವಾಸನೆ ಬಂದ ಹಿನ್ನೆಲೆ ಧರ್ಮಶಾಲೆಯ ಮ್ಯಾನೇಜರ್‌ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

Gubbi News: ಅದ್ದೂರಿ ಜರುಗಿದ ಸ್ಟೆಲ್ಲಾ ಮೇರಿಸ್ ಶಾಲೆಯ ಆರಂಭ-2ಕೆ26 ವಾರ್ಷಿಕೋತ್ಸವ

ಅದ್ದೂರಿ ಜರುಗಿದ ಸ್ಟೆಲ್ಲಾ ಮೇರಿಸ್ ಶಾಲೆಯ ಆರಂಭ-2ಕೆ26 ವಾರ್ಷಿಕೋತ್ಸವ

ಸಂಸ್ಕಾರವಿಲ್ಲದ ಶಿಕ್ಷಣ ದೇಶಕ್ಕೆ ಮಾರಕ. ದೇಶದ್ರೋಹ ಕೆಲಸ, ಮೋಸ, ಭ್ರಷ್ಟಾಚಾರ ಎಲ್ಲವೂ ವಿದ್ಯಾ ವಂತರಿಂದ ನಡೆದಿದೆ ಎಂಬುದು ವಿಷಾದನೀಯ. ಅದರಲ್ಲೂ ಸಂಸ್ಕಾರರಹಿತ ಶಿಕ್ಷಣ ಪಡೆದವರಲ್ಲಿ ಸಮಾಜಘಾತುಕ ಶಕ್ತಿಗಳು ಕಾಣುತ್ತಿವೆ ಎಂದ ವಿಷಾದಿಸಿದ ಅವರು ವೃದ್ಧಾ ಶ್ರಮ, ಅನಾಥಾಶ್ರಮ ಹೆಚ್ಚಾ ಗಲು ಈ ಸಂಸ್ಕಾರವಿಲ್ಲದ ವಿದ್ಯೆ ಕಾರಣ.

Gubbi News: ಜೀವನದ ಜಂಜಾಟದಲ್ಲಿ ಅಧ್ಯಯನ ಪ್ರವಾಸ ಬಹಳ ಮುಖ್ಯ: ಗುಬ್ಬಿ ಬಸವರಾಜ್

ಜೀವನದ ಜಂಜಾಟದಲ್ಲಿ ಅಧ್ಯಯನ ಪ್ರವಾಸ ಬಹಳ ಮುಖ್ಯ

ಸಮುದಾಯದ ಅಭಿವೃದ್ಧಿಗಾಗಿ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಹೀಗೆ ಅನೇಕ ಉದ್ದೇಶಗಳನ್ನು ಹೊಂದಿ ದ್ದು ಇದರ ಬಗ್ಗೆ ಸಮುದಾಯದ ಜನರಿಗೆ ತಿಳುವಳಿಕೆ ನೀಡುವ ಅಧ್ಯಯನ ಪ್ರವಾಸ ವಾಗಿದ್ದು, ಮಾದಿಗ ಸಮುದಾಯದ ಮೂಲ ದೇವತೆ ಮಾತಂಗೇಶ್ವರಿ ಬೆಟ್ಟವನ್ನೇರಿ ದರ್ಶನ ಮಾಡಿಸುವ ಮೂಲಕ ಕ್ಷೇತ್ರದ ಮಹತ್ವ ತಿಳಿಸಲಾಗಿದೆ

Koratagere News: ಕೊರಟಗೆರೆ ಎಸ್ ಎಸ್ ಸರ್ಕಲ್ ನಲ್ಲಿ ರಾಜನ ಪತ್ರಿಮೆಗೆ ಪುಷ್ಪಾರ್ಚನೆ: ಕುರಂಗನನ್ನು ಅನುಸರಿಸಲು ಕರೆ

ಮಾದಿಗರ ಕೆಚ್ಚೆದೆಯ ರಾಜ ಅರಸು ಕುರಂಗರಾಯನ 278ನೇ ಪಟ್ಟಾಭಿಷೇಕೋತ್ಸವ

ದನ ಕಾಯುವ ಚಾಕರಿ ಕೆಲಸ ಮಾಡುವ ನಮ್ಮ ಸಮುದಾಯಕ್ಕೆ ಒಬ್ಬ ರಾಜನಿದ್ದ ಎಂಬುದೇ ಹೆಮ್ಮೆಯ ವಿಚಾರ ಇಂದಿಗೂ ಈ ಸಮುದಾಯ ಗಟ್ಟಿಮುಟ್ಟಾಗಿ ರಾಜರಂತೆಯೇ ಬದುಕುತ್ತಿದ್ದೇವೆ ಸವರ್ಣಿಯರಂತೆ ನಾವು ಯಾರನ್ನು ದೌರ್ಜನ್ಯ ಮಾಡುತ್ತಿಲ್ಲ ಆದರೆ ನಮ್ಮ ಸಮುದಾಯ ದುಡಿದ ಶ್ರಮವನ್ನ ಮೇಲ್ಜಾತಿ ಯವರು ಪಡೆಯುತ್ತಿದ್ದಾರೆ.

Gubbi News: ರಾಜ್ಯಸಭಾ ಮಾಜಿ ಸದಸ್ಯೆ ಅವರ ಸರ್ವೇ ಕಾರ್ಯ ವಿಳಂಬ ಪ್ರಕರಣ : ಸ್ವಯಂ ಪ್ರೇರಿತ ದೂರು ದಾಖಲಿಸಿದ ಲೋಕಾಯುಕ್ತರು

ರಾಜ್ಯಸಭಾ ಮಾಜಿ ಸದಸ್ಯೆ ಅವರ ಸರ್ವೇ ಕಾರ್ಯ ವಿಳಂಬ ಪ್ರಕರಣ

ರಾಜ್ಯಸಭಾ ಮಾಜಿ ಸದಸ್ಯೆ ಬಿ.ಜಯಶ್ರೀ ಅವರ ಜಮೀನು ಸರ್ವೇ ಕಾರ್ಯ ಮಾಡುವಲ್ಲಿ ವಿಳಂಬ ಅನುಸರಿಸಿದ್ದಲ್ಲದೆ ಮೂರು ಬಾರಿ ಹಣ ಕಟ್ಟಿಸಿದ್ದು, ಜೊತೆಗೆ ಅವರಿಗೆ ಅಗೌರವ ತೋರಿದ್ದ ಭೂಮಾಪನ ಇಲಾಖೆಯ ವಿರುದ್ಧ ಸುಮೋಟೋ ದೂರು ದಾಖಲಿಸಿಕೊಂಡ ಉಪ ಲೋಕಾ ಯುಕ್ತರು ಪರವಾನಗಿ ಸರ್ವೇಯರ್ ಶಿವಾನಂದ್, ಭೂಮಾಪನ ಇಲಾಖೆಯ ಸಹಾಯಕ ನಿರ್ದೇಶಕ, ಗುಬ್ಬಿ ತಹಶೀಲ್ದಾರ್ ಹಾಗೂ ಉಪವಿಭಾಗಾಧಿಕಾರಿಗಳ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ

ತುಮಕೂರಿನಲ್ಲಿ 40 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

40 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

ಬೆಂಗಳೂರು ಮೂಲದ ವ್ಯಕ್ತಿ ಬಳಿ ತುಮಕೂರು ಗ್ರಾಮಾಂತರ ಬಳಿ ಪಿಎಸ್‌ಐ ಹಣಕ್ಕೆ ಬೇಡಿಕೆ ಇಟ್ಟಿದ್ದರು. 1 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು 40 ಸಾವಿರ ರೂಪಾಯಿ ಫೈನಲ್ ಮಾಡಿದ್ದರು. ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪಿಎಸ್‌ಐನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Road Accident: ತುಮಕೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ತುಮಕೂರಿನಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ದುರ್ಮರಣ

ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಾರುತಿ ಎರಿಟಿಗಾ ಕಾರಿನಲ್ಲಿ ಬರುವಾಗ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ, ಮೃತದೇಹಗಳನ್ನ ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

Koratagere News: ಕೊರಟಗೆರೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಡಿಸಿ ಶುಭಕಲ್ಯಾಣ್

ಕೊರಟಗೆರೆಯಲ್ಲಿ ಸರ್ಕಾರಿ ಯೋಜನೆಗಳ ಮಾಹಿತಿ ಮಳಿಗೆ ಉದ್ಘಾಟಿಸಿದ ಡಿಸಿ

ಕೊರಟಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸರ್ಕಾರಿ ಯೋಜನೆಗಳ ಬಗ್ಗೆ ತಿಳಿಸುವ ಮಾಹಿತಿ ಮಳಿಗೆ ಸ್ಥಾಪಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಶುಭಕಲ್ಯಾಣ್‌ ಮಾತನಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸರ್ಕಾರದ ಯೋಜನೆಗಳ ಮಾಹಿತಿ ಮಳಿಗೆ ಸ್ಥಾಪಿಸಿ, ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Loading...