ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

Gubbi News: ಏ.22 ಹಾಗೂ 23 ರಂದು ಗುಬ್ಬಿ ಶ್ರೀ ಮಹೇಶ್ವರಮ್ಮ ದೇವಿ ದೇವಾಲಯ ನೂತನ ಶಿಲಾ ದೇವಾಲಯ ಲೋಕಾರ್ಪಣೆ

ಏ.22, 23 ರಂದು ನೂತನ ಶಿಲಾ ದೇವಾಲಯ ಲೋಕಾರ್ಪಣೆ

ಸೀನಪ್ಪನಹಳ್ಳಿ ಶ್ರೀ ದೊಡ್ಡಮ್ಮದೇವಿ, ಶ್ರೀ ದಾಳಿಯಮ್ಮದೇವಿ, ತಿಪ್ಪೂರು ಶ್ರೀ ಕೋಡಿಕೆಂಪಮ್ಮ ದೇವಿ, ಪೆಮ್ಮನಹಳ್ಳಿ ಶ್ರೀ ಆಂಜನೇಯಸ್ವಾಮಿ ಈ ಪರಿಹಾರ ದೇವರುಗಳನ್ನು ಪಟ್ಟಣದ ಶ್ರೀ ಚನ್ನಬಸವೇಶ್ವರ ಸ್ವಾಮಿ ದೇವಾಲಯದಿಂದ ಬುಧವಾರ ಸಂಜೆ ಮೆರವಣಿಗೆ ಮೂಲಕ ಕರೆ ತಂದು ಆಲಯ ಪ್ರವೇಶ, ಹೋಮ ಹವನಗಳು ನಡೆಸಿ ಪೂರ್ಣಾಹುತಿ ನಡೆಸಲಾಗುವುದು

Gubbi News: ಏ.21ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾಕಥಾನ್-2026

ಏ.21ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾಕಥಾನ್-2026

ಗುಬ್ಬಿಯಿಂದ ಆರಂಭವಾಗುವ ವಾಕಥಾನ್ ಮಾರ್ಗ ಮಧ್ಯೆ ಹಲವು ಮಂದಿ ಅಂಬೇಡ್ಕರ್ ಅನುಯಾ ಯಿಗಳು, ಅಭಿಮಾನಿಗಳು ಸೇರ್ಪಡೆಗೊಳ್ಳಲಿದ್ದಾರೆ. ಜೊತೆಗೆ ಅಂಬೇಡ್ಕರ್ ಅವರ ಮಾರ್ಗದರ್ಶನ, ಆದರ್ಶಗಳ ಜಾಗೃತಿ ಮೂಡಿಸುವ ಕರಪತ್ರ ಹಂಚುವ ಜೊತೆಗೆ ಯುವಕರಿಗೆ ಸಂವಿಧಾನ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ

Women Reservation Bill: ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಮಹಿಳೆಯರಿಗೆ ಸಿಗಬಹುದಾಗಿದ್ದ ರಾಜಕೀಯ ಅಧಿಕಾರದ ಅವಕಾಶವನ್ನು ತಿರಸ್ಕರಿಸಿದ ಕಾಂಗ್ರೆಸ್ ಪಕ್ಷವನ್ನು ಮಹಿಳೆಯರು ಮುಂದಿನ ಚುನಾವಣೆಯಲ್ಲಿ ತಿರಸ್ಕರಿಸಿ ತಕ್ಕ ಪಾಠ ಕಲಿಸುತ್ತಾರೆ. ಲೋಕಸಭೆ ಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಫೇಲ್ ಆದಾಗ ಪ್ರಿಯಾಂಕ ಗಾಂಧಿ ವಿಕೃತವಾಗಿ ನಕ್ಕಿದ್ದು ದೇಶದ ಮಹಿಳೆ ಯರಿಗೆ ಮಾಡಿದ ಅವಮಾನ.

Bear Attack: ಕೊರಟಗೆರೆಯಲ್ಲಿ ಹುಚ್ಚು ಕರಡಿ ಆರ್ಭಟ; ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

ಹುಚ್ಚು ಕರಡಿ ಆರ್ಭಟ: ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

Koratagere News: ಕೊರಟಗೆರೆ ಪಟ್ಟಣದ ಸಮೀಪದ ಗೌಡನಕೆರೆ ಪಕ್ಕದ ರೈತರ ಜಮೀನುಗಳಲ್ಲಿ ಗುರುವಾರ ಬೆಳಗ್ಗೆ ಹುಚ್ಚು ಕರಡಿಯೊಂದು ಆರ್ಭಟ ನಡೆಸಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದೆ.

Tumkur news: ನಾಪತ್ತೆಯಾಗಿದ್ದ ಮಹಿಳೆಯ ತಲೆಬುರುಡೆ ಪತ್ತೆ, ಸಿಸಿಟಿವಿಯಲ್ಲಿ ಸಿಕ್ಕಿತು ಕೊಲೆ ಸುಳಿವು

ನಾಪತ್ತೆಯಾದ ಮಹಿಳೆಯ ತಲೆಬುರುಡೆ ಪತ್ತೆ, ಸಿಸಿಟಿವಿ ನೀಡಿತು ಕೊಲೆ ಸುಳಿವು

ಮೃತ ಯುಮುನಾ ತನ್ನ ಗಂಡ ಹಾಗೂ ಮಕ್ಕಳೊಂದಿಗೆ ಮಾ.19ರಂದು ಬರ್ತಡೇ ಆಚರಿಸಿಕೊಂಡಿದ್ದರು. ನಂತರ ಮಾ.21ರಂದು ಎಂದಿನಂತೆ ಕೆಲಸಕ್ಕೆ ಬಂದಿದ್ದಾರೆ. ಅಂದು ಸಂಜೆ ಕೆಲಸ ಬಿಟ್ಟಾಗ ಅನೈತಿಕ ಸಂಬಂಧ ಹೊಂದಿದ್ದ ರಾಘವೇಂದ್ರನ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

AN Kantamma: ಮಧುಗಿರಿ ಕೋರ್ಟ್ ನ್ಯಾಯಾಧೀಶೆ ಎ.ಎನ್. ಕಾಂತಮ್ಮ ಹೃದಯಾಘಾತದಿಂದ ನಿಧನ

ಮಧುಗಿರಿಯ ನ್ಯಾಯಧೀಶೆ ಎ.ಎನ್. ಕಾಂತಮ್ಮ ಹೃದಯಾಘಾತದಿಂದ ನಿಧನ

AN Kantamma: ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಧೀಶೆ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 2025ರ ಜೂನ್‌ನಿಂದ ನ್ಯಾಯಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನಕ್ಕೆ ಮಧುಗಿರಿ ತಾಲೂಕಿನ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ಚಿಕ್ಕನಾಯಕನಹಳ್ಳಿಯ ಬೆಸ್ಕಾಂ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಚಿಕ್ಕನಾಯಕನಹಳ್ಳಿ ಬೆಸ್ಕಾಂ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Chikkanayakanahalli News: ಚಿಕ್ಕನಾಯಕನಹಳ್ಳಿ ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು. ಮಹಾನ್ ನಾಯಕರಿಗೆ ಗಣ್ಯರು ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಿದರು.

MLA S.R.Srinivas: ಬೇಸಿಗೆ ನೀರಿನ ಸಮಸ್ಯೆಗೆ ಮೆನ್ನೆಚ್ಚರಿಕೆಗೆ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

ಬೇಸಿಗೆ ನೀರಿನ ಸಮಸ್ಯೆಗೆ ಮೆನ್ನೆಚ್ಚರಿಕೆಗೆ ಕ್ರಮ

ತಾಲ್ಲೂಕಿನ ಚಿಕ್ಕಹಳ್ಳಿ, ವಿರೂಪಾಕ್ಷಪುರ, ಎಂ.ಎನ್.ಕೋಟೆ ಹಾಗೂ ಅಳಿಲುಘಟ್ಟ ಗ್ರಾಮದಲ್ಲಿ ಒಟ್ಟು 5.30 ಕೋಟಿ ರೂಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಅದಲಗೆರೆ ಗೊಲ್ಲರಹಟ್ಟಿ, ಕೊಂಡ್ಲಿ ಕ್ರಾಸ್ ನಲ್ಲಿ ನೀರಿನ ಸಮಸ್ಯೆ ಕಂಡಿತ್ತು. ಶೀಘ್ರ ಕ್ರಮಕ್ಕೆ ಸೂಚಿಸಲಾಯಿತು. ಈ ಬೇಸಿಗೆಯಲ್ಲಿ ನೀರು ವಿದ್ಯುತ್ ಸಮಸ್ಯೆ ತಲೆದೋರುವ ಮುನ್ನ ಎಲ್ಲಾ ರೀತಿಯ ಎಚ್ಚರಿಕೆ ಕ್ರಮಕ್ಕೆ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Gubbi News: ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ

ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ

ದೇವಾಲಯದ ಬಳಿ ಜಮಾಯಿಸಿದ್ದ ನೂರಾರು ಭಕ್ತರು ಕಳೆದ ನಲವತ್ತು ವರ್ಷಗಳ ಹಿಂದೆ ದಾನ ವಾಗಿ ನೀಡಿದ ಜಮೀನಿನಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಾಲಯ ನಿರ್ಮಾಣವನ್ನು ಮಾಡಲಾಗಿತ್ತು. ಈಗ ಪಕ್ಕದ ಜಮೀನಿನ ನವೀನ್ ಕುಮಾರ್ ಮತ್ತು ಕುಟುಂಬ ದೇವಾಲಯದ ಜಾಗ ನಮ್ಮದು ಎಂದು ಅತಿಕ್ರಮಣ ಮಾಡಲು ಮುಂದಾಗಿದ್ದಾರೆ. ಪ್ರಶ್ನೆ ಮಾಡಿದರೆ ನಮ್ಮದು ಎಂದು ದಬ್ಬಾಳಿಕೆ ಮಾಡುತ್ತಾರೆ

ತುಮಕೂರಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶುದ್ಧಗಂಗಾ ಘಟಕಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ

ತುಮಕೂರಿನಲ್ಲಿ ಶುದ್ಧಗಂಗಾ ಘಟಕಕ್ಕೆ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ

Tumkur News: ತುಮಕೂರು ನಗರದ ಗುಬ್ಬಿವೀರಣ್ಣ ಕಲಾಕ್ಷೇತ್ರದ ಹಿಂಭಾಗದಲ್ಲಿರುವ ಮಾರಿಯಮ್ಮ ನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶುದ್ಧಗಂಗಾ ಘಟಕಕ್ಕೆ ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಚಾಲನೆ ನೀಡಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ಗ್ರಾಮೀಣ ಜನರಿಗೆ ಗ್ರಾಮ ನೆಟ್ ಭಾರತ ಯೋಜನೆ ವರದಾನ: ಸಂಪಿಗೆ ಜಗದೀಶ್

ಗ್ರಾಮೀಣ ಜನರಿಗೆ ಗ್ರಾಮ ನೆಟ್ ಭಾರತ ಯೋಜನೆ ವರದಾನ: ಸಂಪಿಗೆ ಜಗದೀಶ್

Gram Net Bharat 2030 Scheme: ಗ್ರಾಮೀಣ ಪ್ರದೇಶದ ಪ್ರತಿಭಾವಂತ ಯುವಜನರು ಹಾಗೂ ಮಹಿಳೆಯರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಗ್ರಾಮೀಣ ಪ್ರದೇಶದಲ್ಲಿ ದುಡಿಮೆಗೆ ಅವಕಾಶ ಕಲ್ಪಿಸಲು ಗ್ರಾಮ ನೆಟ್ ಭಾರತ 2030 ರೂಪುಗೊಂಡಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಯೋಜನೆಗೆ ಮೇ ತಿಂಗಳ ಮೊದಲ ವಾರದಲ್ಲಿ ತುರುವೇಕೆರೆ ತಾಲೂಕಿನ ಸಂಪಿಗೆ ಗ್ರಾಮದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಲೋಕಸೇವಾ ಫೌಂಡೇಷನ್ ಅಧ್ಯಕ್ಷ ಸಂಪಿಗೆ ಜಗದೀಶ್ ತಿಳಿಸಿದ್ದಾರೆ.

MLA SR Srinivas: ಉಪಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪ್ರಭಾವ ಬೀರದು: ಶಾಸಕ ಎಸ್.ಆರ್.ಶ್ರೀನಿವಾಸ್

ಉಪಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪ್ರಭಾವ ಬೀರದು

ಈ ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಮುಖ್ಯಮಂತ್ರಿ ಸ್ಥಾನಕ್ಕೆ ಯಾವ ಚ್ಯುತಿ ಬರುವುದಿಲ್ಲ. ಪಕ್ಷದ ಹೈಕಮಾಂಡ್ ಮಾತ್ರ ಈ ಕೆಲಸ ಮಾಡಲು ಸಾಧ್ಯ. ಚುನಾವಣೆ ಎಫೆಕ್ಟ್ ಏನೂ ಇರುವುದಿಲ್ಲ. ರಾಜಕೀಯ ದಿಕ್ಸೂಚಿಯು ಅಲ್ಲ ಎಂದು ಸ್ಪಷ್ಟಪಡಿಸಿದ ಅವರು ಇರಾನ್ ಇಸ್ರೇಲ್ ಕದನ ವಿರಾಮ ಹೇಳಿಕೆ ಎಲ್ಲಿಯವರೆಗೆ ಎಂಬುದು ನೋಡಬೇಕಿದೆ. ಗ್ಯಾಸ್ ಅಭಾವ ಮುಂದಿನ ದಿನಗಳಲ್ಲಿ ಸರಿ ಹೋಗಲಿದೆ

Karnataka 2nd PUC Results 2026: ದ್ವಿತೀಯ ಪಿಯು ಫಲಿತಾಂಶ: ತುಮಕೂರಿನ ವಿದ್ಯಾನಿಧಿ ಕಾಲೇಜು ಅತ್ಯುತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ವಿದ್ಯಾನಿಧಿ ಕಾಲೇಜು ಉತ್ತಮ ಸಾಧನೆ

Tumkur News: ವಿದ್ಯಾನಿಧಿ ಕಾಲೇಜಿನ ರೋಹನ್‌ ಮತ್ತು ಪೂರ್ವಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 597 ಅಂಕಗಳನ್ನು ಗಳಿಸುವುದರೊಂದಿಗೆ 2025-26ನೇ ಸಾಲಿನ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದಿದ್ದಾರೆ. ವಿಜ್ಞಾನ ವಿಭಾಗದ ಗಿರಿಜಾ 593 ಅಂಕಗಳೊಂದಿಗೆ ರಾಜ್ಯಕ್ಕೆ ಏಳನೇ ರ‍್ಯಾಂಕ್ ಪಡೆದಿದ್ದಾರೆ.

2nd PUC District Wise Result 2026: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್; ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್

ಕರ್ನಾಟಕ ದ್ವಿತೀಯ ಪಿಯುಸಿ ಜಿಲ್ಲಾವಾರು ಫಲಿತಾಂಶ 2026: ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಶೇ.72.86, ವಾಣಿಜ್ಯ ವಿಭಾಗದಲ್ಲಿ 88.04 ಹಾಗೂ ವಿಜ್ಞಾನ 91.69 ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಜಿಲ್ಲಾವಾರು ಫಲಿತಾಂಶದಲ್ಲಿ ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ ಎಂಬ ಮಾಹಿತಿ ಇಲ್ಲಿದೆ.

MLA M.T.Krishnappa: ಪ್ರಜಾಪ್ರಭುತ್ವ ಎತ್ತಿ ಹಿಡಿಯುವ ಕೆಲಸ ಪತ್ರಕರ್ತರದ್ದು: ಎಂ.ಟಿ.ಕೃಷ್ಣಪ್ಪ

ಪ್ರಜಾಪ್ರಭುತ್ವ ಎತ್ತಿಹಿಡಿಯುವ ಕೆಲಸ ಪತ್ರಕರ್ತರದ್ದು: ಎಂ.ಟಿ.ಕೃಷ್ಣಪ್ಪ

ಸಮಾಜದ ಆಗು ಹೋಗುಗಳ ಬಗ್ಗೆ ನಿಖರ ಮಾಹಿತಿ ನೀಡುವ ಜೊತೆಗೆ ಯಾವುದೇ ವಿಚಾರದ ಸತ್ಯಾ ಸತ್ಯತೆ ಬಿತ್ತರಿಸುವ ಕೆಲಸ ಮಾಧ್ಯಮದವರು ಮಾಡುತ್ತಾರೆ. ತಾಲ್ಲೂಕಿನಲ್ಲಿ ನಡೆಯುವ ಸಣ್ಣ ವಿಚಾರ ದಿಂದ ದೊಡ್ಡ ವಿಚಾರಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮಾಧ್ಯಮ ಕ್ಷೇತ್ರಕ್ಕೆ ತನ್ನದೇ ಕಚೇರಿ ಅವಶ್ಯವಿದೆ. ಭ್ರಷ್ಟಾಚಾರ ವಿರೋಧಿಗಳಾಗಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪತ್ರಕರ್ತರು ಪಣ ತೊಡಬೇಕು

MLA S.R. Srinivas: ಸರಿ ಸಮಾಜ ಸೃಷ್ಟಿಯಲ್ಲಿ ಪತ್ರಕರ್ತರ ಪಾತ್ರ ಗಣನೀಯ: ಶಾಸಕ ಎಸ್.ಆರ್.ಶ್ರೀನಿವಾಸ್

ಸರಿ ಸಮಾಜ ಸೃಷ್ಟಿಯಲ್ಲಿ ಪತ್ರಕರ್ತರ ಪಾತ್ರ ಗಣನೀಯ

ವೃತ್ತಿ ಧರ್ಮ ಪಾಲಿಸುವ ಪತ್ರಕರ್ತರಿಗೆ ಗೌರವ ಸಿಗಬೇಕಾದಲ್ಲಿ ಮೊದಲು ರೋಲ್ ಕಾಲ್ ಪತ್ರಕರ್ತರನ್ನು ದೂರವಿಡಬೇಕು. ಪ್ರಾಮಾಣಿಕ ಅಧಿಕಾರಿಗಳನ್ನು ಬೆದರಿಸುವವರ ವಿರುದ್ಧ ಸಂಘವೇ ಕ್ರಮ ಕೈಗೊಳ್ಳಬೇಕು ಎಂದ ಅವರು ತಾಲ್ಲೂಕು ಸಂಘದ ಪತ್ರಿಕಾ ಭವನ ನಿರ್ಮಾಣಕ್ಕೆ ಸಿಎ ಸೈಟ್ ನೀಡಲು ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸುತ್ತೇನೆ. ಈ ಜೊತೆಗೆ ನಿವೇಶನರಹಿತ ಪತ್ರಕರ್ತರಿಗೆ ಸೈಟ್ ಮಂಜೂರು ಆಯಾ ಗ್ರಾಮದಲ್ಲಿಯೇ ಮಾಡಲು ಸರ್ಕಾರ ಜೊತೆ ಮಾತ ನಾಡುತ್ತೇನೆ.

Census 2027: ಚಿಕ್ಕನಾಯಕನಹಳ್ಳಿಯಲ್ಲಿ ‘ಸ್ವಯಂ ಗಣತಿʼ ಅಭಿಯಾನಕ್ಕೆ ಶಾಸಕ ಸಿ.ಬಿ. ಸುರೇಶ್ ಬಾಬು ಚಾಲನೆ

ಚಿಕ್ಕನಾಯಕನಹಳ್ಳಿಯಲ್ಲಿ ‘ಸ್ವಯಂ ಗಣತಿʼ ಅಭಿಯಾನಕ್ಕೆ ಚಾಲನೆ

Chikkanayakanahalli News: ಚಿಕ್ಕನಾಯಕನಹಳ್ಳಿ ಪಟ್ಟಣದ ತೀನಂಶ್ರೀ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಶಾಸಕ ಸಿ.ಬಿ. ಸುರೇಶ್ ಬಾಬು, ಸ್ವತಃ ತಮ್ಮ ಮೊಬೈಲ್ ಮೂಲಕ ವೈಯಕ್ತಿಕ ವಿವರಗಳನ್ನು ಪೋರ್ಟಲ್‌ನಲ್ಲಿ ದಾಖಲಿಸುವ ಮೂಲಕ ‘ಸ್ವಯಂ ಗಣತಿʼ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

Road Accident: ಓವರ್‌ಟೇಕ್‌ ವೇಳೆ ಕೆಎಸ್‌ಆರ್‌ಟಿಸಿ- ಖಾಸಗಿ ಬಸ್‌ ಡಿಕ್ಕಿ, ಇಬ್ಬರು ಸಾವು

ಓವರ್‌ಟೇಕ್‌ ವೇಳೆ ಕೆಎಸ್‌ಆರ್‌ಟಿಸಿ- ಖಾಸಗಿ ಬಸ್‌ ಡಿಕ್ಕಿ, ಇಬ್ಬರು ಸಾವು

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಖಾಸಗಿ ಬಸ್ ಹುಬ್ಬಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಓವರ್‌ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಖಾಸಗಿ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

Gubbi News: ಕೋಟೆ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ

Gubbi News: ಕೋಟೆ ಶ್ರೀ ದುರ್ಗಾಪರಮೇಶ್ವರಿ ಜಾತ್ರಾ ಮಹೋತ್ಸವ

ತಾಲೂಕಿನ ನಿಟ್ಟೂರು ಹೋಬಳಿ ಎಂ. ಎನ್. ಕೋಟೆ ಗ್ರಾಮದ ಆದಿಶಕ್ತಿ ಶ್ರೀ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವ ಏ.7ನೇ ಮಂಗಳವಾರ ಬೆಳಿಗ್ಗೆ ಸಹಸ್ರ ನಾಮ ಸ್ಮರಣೆ ಕುಂಕುಮಾರ್ಚನೆ ಮಹಾಮಂಗಳಾರತಿಯೊಂದಿಗೆ ಮನೆ ಮನೆಗೆ ಮಡ್ಲಕ್ಕಿ ಸೇವೆ ನೆರವೇರಲಿದೆ.  ಏ.8ನೇ ಬುಧವಾರ ಆರತಿ ಸೇವೆ ನಂತರ ಅಮ್ಮನವರನ್ನು ಬೆಳ್ಳಿ ರಥದಲ್ಲಿ ಕೂರಿಸಿ ವಾದ್ಯ ಗೋಷ್ಠಿಯೊಂದಿಗೆ ಊರಿನ ರಾಜಭೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.

Gubbi News: ಏ.6ಕ್ಕೆ ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಏ.6ಕ್ಕೆ ಕಾರ್ಯ ನಿರತ ಪತ್ರಕರ್ತರ ಸಂಘದ ನೂತನ ಕಚೇರಿ ಉದ್ಘಾಟನೆ

ತಾಲ್ಲೂಕಿನಲ್ಲಿ ಪತ್ರಕರ್ತರ ಸಂಘದ ಚಟುವಟಿಕೆ ಚುರುಕಿನಿಂದ ಸಾಗಿದ್ದು ಪದಾಧಿಕಾರಿ ಗಳು, ಸದಸ್ಯರು ಹಾಗೂ ಸದಸ್ಯತ್ವ ಆಕಾಂಕ್ಷಿ ಪತ್ರಕರ್ತರು ಎಲ್ಲರೂ ಒಗ್ಗೂಡಿ ಕಾರ್ಯಕ್ರಮ ಯಶಸ್ವಿಗೆ ರೂಪುರೇಷೆ ಸಿದ್ಧಪಡಿಸಿದ್ದಾರೆ. ಪತ್ರಕರ್ತರ ಸಕ್ರಿಯ ಚಟುವಟಿಕೆ ಮೂಲಕ ಸಂಘದ ಇರುವಿಕೆ ಗುರುತಿಸಲು ಕಚೇರಿ ಆರಂಭಿಸಿ ಒಗ್ಗಟ್ಟು ಪ್ರದರ್ಶನ ಮಾಡುವಂತೆ ಸಲಹೆ ನೀಡಿದರು

Tumkur News: ಕೌಟುಂಬಿಕ ಕಲಹ: ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್ಐ ಪತ್ತೆ

ಕೌಟುಂಬಿಕ ಕಲಹ: ನಾಪತ್ತೆಯಾಗಿದ್ದ ತುಮಕೂರಿನ ಮಹಿಳಾ ಪಿಎಸ್ಐ ಪತ್ತೆ

ತಾಯಿ ಮನೆಗೆ ಬಾರದೆ ಮತ್ತು ಫೋನ್ ಸಂಪರ್ಕಕ್ಕೂ ಸಿಗದ ಕಾರಣ ಆತಂಕಗೊಂಡ ಮಂಗಳಮ್ಮ ಅವರ ಪುತ್ರಿ, ತುಮಕೂರಿನ ಹೊಸ ಬಡಾವಣೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತೀವ್ರ ಹುಡುಕಾಟದ ನಂತರ ಚಿಕ್ಕಮಗಳೂರಿನಲ್ಲಿರುವ ತಮ್ಮ ಸಂಬಂಧಿಕರ ಮನೆಯಲ್ಲಿ ಮಹಿಳಾ ಪಿಎಸ್‌ಐ ಪತ್ತೆಯಾಗಿದ್ದಾರೆ.

ರಾಷ್ಟ್ರಪತಿ ಬಂದಾಗ ಶಿಷ್ಟಾಚಾರ ಉಲ್ಲಂಘನೆ; ಗೊಂದಲಕ್ಕೆ ತೆರೆ ಎಳೆದ ಸಿದ್ದಗಂಗಾ ಶ್ರೀ! Video

ಶಿಷ್ಟಾಚಾರ ಉಲ್ಲಂಘನೆ ಗೊಂದಲಕ್ಕೆ ತೆರೆ ಎಳೆದ ಸಿದ್ದಗಂಗಾ ಶ್ರೀ!

ತುಮಕೂರಿನಲ್ಲಿ ನಡೆದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮವರ್ಧಂತಿ ಮಹೋತ್ಸವದ ವೇದಿಕೆಯಲ್ಲಿ ಸಿದ್ದಲಿಂಗ ಶ್ರೀಗಳಿಗೆ ಕೊನೆಯಲ್ಲಿ ಆಸನ ವ್ಯವಸ್ಥೆ ಮಾಡಿದ್ದ ಬಗ್ಗೆ ಭಕ್ತರಲ್ಲಿ ಅಸಮಾಧಾನ ಮೂಡಿತ್ತು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಉಂಟಾಗಿದ್ದ ಶಿಷ್ಟಾಚಾರ ಗೊಂದಲದ ಬಗ್ಗೆ ಶ್ರೀಗಳು ಸ್ಪಷ್ಟನೆ ನೀಡಿದ್ದಾರೆ.

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ: ಸಿದ್ದಲಿಂಗ ಸ್ವಾಮೀಜಿ ಸ್ಪಷ್ಟನೆ

ರಾಷ್ಟ್ರಪತಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿಲ್ಲ

Tumkur News: ತುಮಕೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಗವಹಿಸಿದ್ದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮವರ್ಧಂತಿ ಮಹೋತ್ಸವದ ವೇದಿಕೆಯ ಕೊನೆಯಲ್ಲಿ ಆಸನ ವ್ಯವಸ್ಥೆ ಮಾಡಿದ್ದ ಬಗ್ಗೆ ಸಿದ್ದಲಿಂಗ ಸ್ವಾಮೀಜಿ ಅವರು ಸ್ಪಷ್ಟನೆ ನೀಡಿದ್ದಾರೆ.

ನ್ಯಾಯಾಧೀಶರ ಕೊರತೆ: ಚಿಕ್ಕನಾಯಕನಹಳ್ಳಿ ಕೋರ್ಟ್‌ನಲ್ಲಿ ಬರೋಬ್ಬರಿ 3,500 ಪ್ರಕರಣ ಬಾಕಿ

ಚಿಕ್ಕನಾಯಕನಹಳ್ಳಿ ನ್ಯಾಯಾಲಯದ 3,500 ಪ್ರಕರಣ ಬಾಕಿ

Chikkanayakanahalli News: ಚಿಕ್ಕನಾಯಕನಹಳ್ಳಿ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಕೊರತೆಯಿಂದಾಗಿ ನ್ಯಾಯದಾನ ಪ್ರಕ್ರಿಯೆ ಕುಂಠಿತಗೊಂಡಿದ್ದು, ತಕ್ಷಣವೇ ಖಾಲಿ ಇರುವ ಹೆಚ್ಚುವರಿ ಹಾಗೂ ಪ್ರಧಾನ ನ್ಯಾಯಾಧೀಶರನ್ನು ನೇಮಕ ಮಾಡಬೇಕೆಂದು ತಾಲೂಕಿನ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಲಭ್ಯವಿರುವ ಅಂಕಿ-ಅಂಶಗಳ ಪ್ರಕಾರ, ಸದ್ಯ ಸುಮಾರು 3,500ಕ್ಕೂ ಹೆಚ್ಚು ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣ ವಿಚಾರಣೆ ಕಾಣದೆ ಬಾಕಿ ಇದೆ.

Loading...