ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಒಬ್ಬರಿಗೆ ಸರ್ಕಾರಿ ಕೆಲಸ: DCM ಭರವಸೆ

ಮೃತ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ : DCM ಭರವಸೆ

SIR ಕರ್ತವ್ಯಕ್ಕಾಗಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತವಾಗಿ ಸಾವನ್ನಪ್ಪಿದ್ದ ಗ್ರಾಮ ಲೆಕ್ಕಾಧಿಕಾರಿ ಭುವನಾ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ ಹಣ 15 ದಿನಗಳಲ್ಲಿ ಬರುತ್ತದೆ. ಅಲ್ಲದೇ ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರ ಉದ್ಯೋಗ ಕೊಡುತ್ತೇವೆ. ಚುನಾವಣಾ ಆಯೋಗದಿಂದ 30 ಲಕ್ಷ ರೂ. ಮಂಜೂರು ಮಾಡಿಸುತ್ತೇವೆ ಎಂದು ಕಂದಾಯ ಸಚಿವರೂ ಆದ ಡಿಸಿಎಂ ಪರಮೇಶ್ವರ್‌ ಭರವಸೆ ನೀಡಿದ್ದಾರೆ.

SIR ಪ್ರಕ್ರಿಯೆಗೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನ ಅಪಘಾತ; ಗ್ರಾಮ ಆಡಳಿತ ಅಧಿಕಾರಿ ಸಾವು

ಎಸ್‌ಐಆರ್‌ಗೆ ತೆರಳುತ್ತಿದ್ದಾಗ ದ್ವಿಚಕ್ರ ವಾಹನ ಅಪಘಾತ; ವಿಎಒ ಸಾವು

ತುಮಕೂರಿನ ಗೂಳೂರಿನಲ್ಲಿ ಎಸ್‌ಐಆರ್‌ ಪ್ರಕ್ರಿಯೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ಅಪಘಾತದಲ್ಲಿ ಮಹಿಳಾ ಗ್ರಾಮ ಆಡಳಿತ ಅಧಿಕಾರಿ ಭುವನಾ ಗಂಭೀರವಾಗಿ ಗಾಯಗೊಂಡಿದ್ದರು. ಆದರೆ, ಅವರು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

V. Somanna: ಶೀಘ್ರದಲ್ಲಿ ಕಾಡು ಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ : ಕೇಂದ್ರ ಸಚಿವ ವಿ.ಸೋಮಣ್ಣ

ಶೀಘ್ರದಲ್ಲಿ ಕಾಡು ಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರ್ಪಡೆ

ಅಭಿವೃದ್ದಿ ವಿಚಾರದಲ್ಲಿ ರಾಜಕೀಯ ಅವಶ್ಯವಿಲ್ಲ. ಯಾವ ಪಕ್ಷದ ಶಾಸಕರಾದರೂ ಅವರೊಂದಿಗೆ ನಾನೇ ಖುದ್ದು ಚರ್ಚಿಸಿ ಕೆಲಸ ನಡೆಸಿದ್ದೇನೆ. ಜಿಲ್ಲೆಯ ಅಭಿವೃದ್ದಿ ಜೊತೆಗೆ ಜನರ ಮೂಲಭೂತ ಸವಲತ್ತು ಒದಗಿಸುವ ಕೆಲಸ ಬಹಳ ಮುಖ್ಯವಾಗಿದೆ. ಈ ಬಗ್ಗೆ ಪ್ರಧಾನಮಂತ್ರಿ ಮೋದಿ ಅವರೇ ಮಾರ್ಗದರ್ಶನ ನೀಡಿದ್ದಾರೆ ಎಂದ ಅವರು ಗುಬ್ಬಿ ತಾಲ್ಲೂಕಿನಲ್ಲಿ ಸಾಕಷ್ಟು ಕೆಲಸವನ್ನು ಹುಡುಕಿ ಮಾಡುತ್ತಿದ್ದೇನೆ.

Madhugiri News: ಫ.ಗು.ಹಳಕಟ್ಟಿ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಪ್ರೊ.ಡಿ.ಎಸ್. ಮುನೀಂದ್ರ ಕುಮಾರ್

ಫ.ಗು.ಹಳಕಟ್ಟಿ ಅವರ ವ್ಯಕ್ತಿತ್ವ ಎಲ್ಲರಿಗೂ ಮಾದರಿ: ಮುನೀಂದ್ರ ಕುಮಾರ್

Madhugiri News: ಮಧುಗಿರಿ ಪಟ್ಟಣದ ಗೌತಮಬುದ್ಧ ಪದವಿಪೂರ್ವ ಕಾಲೇಜಿನಲ್ಲಿ ಫ.ಗು.ಹಳಕಟ್ಟಿ ಮತ್ತು ಛತ್ರಪತಿ ಶಾಹು ಮಹಾರಾಜ್ ಅವರ ಜನ್ಮದಿನಾಚರಣೆ ಜರುಗಿತು. ಈ ಸಮಾರಂಭದಲ್ಲಿ ಅಚಲ ಕಲ್ಚರಲ್ ಫೌಂಡೇಶನ್‌ನ ಆಧ್ಯಕ್ಷ, ನಿವೃತ್ತ ಪ್ರಾಂಶುಪಾಲ ಪ್ರೊ.ಡಿ.ಎಸ್. ಮುನೀಂದ್ರ ಕುಮಾರ್ ಮಾತನಾಡಿದ್ದಾರೆ.

ಕಾನೂನುಬಾಹಿರವಾಗಿ ಮಾದರ ಮಹಾಸಭಾ ಕಾರ್ಯದರ್ಶಿ‌ ಸ್ಥಾನದಿಂದ ವಜಾ: ಡಾ. ಬಾಣದರಂಗಯ್ಯ ಆರೋಪ

ಕಾನೂನುಬಾಹಿರವಾಗಿ ಮಾದರ ಮಹಾಸಭಾ ಕಾರ್ಯದರ್ಶಿ‌ಯ ವಜಾ

Madhugiri News: ಕಾನೂನು ನಿಯಮ ಗಾಳಿಗೆ ತೂರಿ ಸಂಘದ‌ ಬೈಲಾ‌ ನಿಯಮಗಳಿಗೆ ವಿರುದ್ದವಾಗಿ ಯಾವುದೇ ಸೂಚನೆ‌ ನೀಡದೆ,‌ ಗಮನಕ್ಕೂ ಸಹ ತಾರದೆ ಏಕಾಏಕಿ ನನ್ನನ್ನು ಮಾದರ ಮಹಾಸಭಾ ಕಾರ್ಯದರ್ಶಿ‌ ಸ್ಥಾನದಿಂದ‌ ತೆಗೆದು ಹಾಕಲಾಗಿದೆ ಎಂದು‌ ಮಾಜಿ ಗ್ರಾ.ಪಂ.ಅಧ್ಯಕ್ಷ, ವಕೀಲ ಡಾ. ಬಾಣದರಂಗಯ್ಯ ಆರೋಪಿಸಿದ್ದಾರೆ.

ತುಮಕೂರು ವಿಭಾಗದಲ್ಲಿ 97 ಸಾವಿರ ಕಟ್ಟಡ ಕಾರ್ಮಿಕರು !

ತುಮಕೂರು ವಿಭಾಗದಲ್ಲಿ 97 ಸಾವಿರ ಕಟ್ಟಡ ಕಾರ್ಮಿಕರು !

ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯ ಇ-ಶ್ರಮ್ ಯೋಜನೆಯಡಿ 4,29,641 ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ ಯಡಿ 11,463, ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಯಡಿ 3311,

Gubbi News: ಗ್ರಾಮೀಣ ಜನರ ಆರೋಗ್ಯಕ್ಕೆ ಮಲ್ಟಿ ಸ್ಪೆಷಾಲಿಟಿ ಡೆಂಟಲ್ ಕ್ಲಿನಿಕ್ ಲೋಕಾರ್ಪಣೆ

ಗ್ರಾಮೀಣ ಜನರ ಆರೋಗ್ಯಕ್ಕೆ ಮಲ್ಟಿ ಸ್ಪೆಷಾಲಿಟಿ ಕ್ಲಿನಿಕ್ ಲೋಕಾರ್ಪಣೆ

ಲೋಕಾರ್ಪಣೆಗೊಳಿಸಿದ ತಹಶೀಲ್ದಾರ್ ಆರತಿ.ಬಿ ಮಾತನಾಡಿ, ಗ್ರಾಮೀಣ ಜನರಿಗೆ ದಂತ ಆರೋಗ್ಯ ಬಗ್ಗೆ ಅರಿವಿಲ್ಲ. ಮುಖ ಸೌಂದರ್ಯಕ್ಕೆ ದಂತ ಆರೋಗ್ಯ ಮುಖ್ಯ ಎಂಬ ಅರಿವು ಮೂಡಿಸಲು ತಾಲ್ಲೂಕಿನ ಎಲ್ಲಾ ಗ್ರಾಮದಲ್ಲಿ ಉಚಿತ ದಂತ ತಪಾಸಣೆ ಶಿಬಿರ ನಡೆಸಿ ಜೊತೆಗೆ ಹಲ್ಲುಗಳ ಆರೋಗ್ಯ ಕಾಪಾಡಿಕೊಳ್ಳುವ ಅರಿವು ಮೂಡಿಸುವ ಕೆಲಸ ಶ್ಲಾಘನೀಯ ಎಂದರು

Tumakuru News: ಶಿರಾ ಕಾರ್‌ ಸ್ಫೋಟ; ನಾಡಬಾಂಬ್‌ ಕೊಟ್ಟಿದ್ದ ನಾಲ್ವರು ಅರೆಸ್ಟ್‌

ಶಿರಾ ಕಾರ್‌ ಸ್ಫೋಟ; ನಾಡಬಾಂಬ್‌ ಕೊಟ್ಟಿದ್ದ ನಾಲ್ವರು ಅರೆಸ್ಟ್‌

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇತ್ತೀಚೆಗೆ ನಾಡಬಾಂಬ್ ಸ್ಫೋಟಿಸಿಕೊಂಡು ಸಜೀವ ದಹನವಾದ ನಾಗೇಂದ್ರಗೆ ನಾಡಬಾಂಬ್ ಕೊಟ್ಟಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ತುಮಕೂರಿನ ವಿಶೇಷ ತನಿಖಾ ತಂಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಶಾಲಾ-ಕಾಲೇಜು ಅವಧಿಗೆ ಬಸ್ ವ್ಯವಸ್ಥೆ ಆಗ್ರಹಿಸಿ ವಿದ್ಯಾರ್ಥಿಗಳ ದಿಢೀರ್ ಹೆದ್ದಾರಿ ತಡೆ

ಶಾಲಾ-ಕಾಲೇಜು ಅವಧಿಯಲ್ಲಿ ಬಸ್ ವ್ಯವಸ್ಥೆಗೆ ಆಗ್ರಹ: ಹೆದ್ದಾರಿ ತಡೆ

ಕಳ್ಳಿಪಾಳ್ಯ ಗೇಟ್‌ನಿಂದ ಗುಬ್ಬಿ ಮತ್ತು ತುಮಕೂರು ಕಡೆಗೆ ಶಾಲೆ ಮತ್ತು ಕಾಲೇಜಿಗೆ ತೆರಳುವ ನೂರಾರು ವಿದ್ಯಾರ್ಥಿಗಳು ಬೆಳಿಗ್ಗೆ 7 ರಿಂದ 9 ಗಂಟೆಯವರೆಗೆ ಕಾದರೂ ಬಸ್ಸು ಬಾರದ ಹಿನ್ನಲೆ ಆಕ್ರೋಶಗೊಂಡ ವಿದ್ಯಾರ್ಥಿಗಳು ದಿಢೀರ್ ರಸ್ತೆಗಿಳಿದು ಸ್ಥಳೀಯ ಸಾರ್ವಜನಿಕರ ಸಹಕಾರದಲ್ಲಿ ಕೆಲಕಾಲ ಚತುಷ್ಪಥ ಹೆದ್ದಾರಿ ತಡೆದು ಶಾಲಾ ವೇಳೆಗೆ ಬಸ್ ಸಂಚಾರಕ್ಕೆ ಒತ್ತಾಯಿಸಿದರು.

M. Eshwar: ತುಮಕೂರಿನ ಹಿರಿಯ ಪತ್ರಕರ್ತ ಎಂ. ಈಶ್ವರ್ ಅನಾರೋಗ್ಯದಿಂದ ನಿಧನ

ತುಮಕೂರಿನ ಹಿರಿಯ ಪತ್ರಕರ್ತ ಎಂ. ಈಶ್ವರ್ ಅನಾರೋಗ್ಯದಿಂದ ನಿಧನ

ತುಮಕೂರು ವಾರ್ತೆ ಪತ್ರಿಕೆಯ ವರದಿಗಾರ ಎಂ. ಈಶ್ವರ್ ಅವರು ಮೆದುಳಿನ ಪಾರ್ಶ್ವವಾಯು ಸಮಸ್ಯೆಯಿಂದಾಗಿ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಡಿಸಿಎಂ ಡಾ.ಜಿ.ಪರಮೇಶ್ವರ್‌ ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Gubbi News: ಸರ್ವ ರೋಗಕ್ಕೂ ಸಿರಿಧಾನ್ಯವೇ ಮದ್ದು : ಆಹಾರ ತಜ್ಞ ಡಾ.ಖಾದರ್

ಸರ್ವ ರೋಗಕ್ಕೂ ಸಿರಿಧಾನ್ಯವೇ ಮದ್ದು

ಹರಿ ಚಂದನ ಎಂಬ ಮೂಲ ಹೆಸರಿನ ಶ್ರೀಗಂಧ ಬೆಳೆಯನ್ನು ವಾಣಿಜ್ಯಕರವಾಗಿ ಬೆಳಯದೆ, ಪ್ರತಿಯೊಬ್ಬರು ಒಂದೂಂದು ಶ್ರೀಗಂಧ ಗಿಡವನ್ನು ಬೆಳೆದು ಅವರಿಂದ ದೊರೆಯುವ ಆರೋಗ್ಯಕರ ವಾತಾವರಣ ಗಮನಿಸಬಹುದಾಗಿದೆ. ಶ್ರೀಗಂಧ ಲೇಪನ ಸೇವಿಸುವುದರಿಂದ ಮನುಷ್ಯನಿಗೆ ಹರಡುವ ಕಾಯಿಲೆಗಳನ್ನು ತಡೆಗಟ್ಟಬಹುದು.

ಪಾವಗಡದಲ್ಲಿ ಜನಸಂಪರ್ಕ ಸಭೆ: ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎಚ್.ವಿ. ವೆಂಕಟೇಶ್

ಪಾವಗಡದಲ್ಲಿ ಜನಸಂಪರ್ಕ ಸಭೆ ನಡೆಸಿದ ಶಾಸಕ ಎಚ್.ವಿ. ವೆಂಕಟೇಶ್

Pavagada News: ಪಾವಗಡ ಶಾಸಕ ಎಚ್.ವಿ. ವೆಂಕಟೇಶ್ ಅವರ ನೇತೃತ್ವದಲ್ಲಿ ಶಾಸಕರ ಭವನದಲ್ಲಿ ಜನಸಂಪರ್ಕ ಸಭೆ ನಡೆಯಿತು. ಸಭೆಗೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಸರದಿ ಸಾಲಿನಲ್ಲಿ ನಿಂತು ತಮ್ಮ ಸಮಸ್ಯೆಗಳು ಹಾಗೂ ಅಹವಾಲುಗಳನ್ನು ನೇರವಾಗಿ ಶಾಸಕರ ಮುಂದಿಟ್ಟರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಶಾಸಕರು, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಶೋಷಿತ ಸಮುದಾಯಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು: ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ

ಶಿಕ್ಷಣಕ್ಕೆ ಇರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ: ಷಡಕ್ಷರಿ ಮುನಿ ಸ್ವಾಮೀಜಿ

Madhugiri News: ಶೋಷಿತ ಸಮುದಾಯಗಳು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು. ಶಿಕ್ಷಣಕ್ಕೆ ಇರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ. ಶತಮಾನಗಳಿಂದ ತುಳಿತಕ್ಕೊಳಗಾದ ಸಮಾಜಗಳು ಉದ್ದಾರವಾಗಬೇಕಾದರೆ ಶಿಕ್ಷಣ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸ್ಪರ್ಧೆಗೆ ಇಳಿಯಬೇಕು. ಇದರಿಂದ ಎಲ್ಲಾ ರೀತಿಯ ಅವಕಾಶಗಳು ದೊರೆಯುತ್ತವೆ ಎಂದು ಹಿರಿಯೂರು ಆದಿಜಾಂಬವ ಬೃಹನ್ಮಠದ ಶ್ರೀ ಷಡಕ್ಷರಿ ಮುನಿ ದೇಶಿಕೇಂದ್ರ ಸ್ವಾಮೀಜಿ ತಿಳಿಸಿದ್ದಾರೆ.

Devarayanadurga Hill: ಸೆಲ್ಫಿ ತಂದ ಆಪತ್ತು; ದೇವರಾಯನದುರ್ಗ ಬೆಟ್ಟದಲ್ಲಿ ಕಾಲು ಜಾರಿ 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ!

ದೇವರಾಯನದುರ್ಗ ಬೆಟ್ಟದಲ್ಲಿ ಕಾಲು ಜಾರಿ 50 ಅಡಿ ಆಳಕ್ಕೆ ಬಿದ್ದ ಉಪನ್ಯಾಸಕ!

ತುಮಕೂರು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ದೇವರಾಯನದುರ್ಗದಲ್ಲಿ ಘಟನೆ ನಡೆದಿದೆ. ತುಮಕೂರು ತಾಲೂಕಿನ ಓಬಳಾಪುರ ಮೂಲದ ಉಪನ್ಯಾಸಕ ಶಿವಪ್ರಸಾದ್ ಎಂಬುವವರು, ದೇವರಾಯನದುರ್ಗ ಬೆಟ್ಟದ ಬಂಡೆಯ ಮೇಲಿಂದ 50 ಅಡಿ ಆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

Madhugiri News: ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಿದೆ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಬೇಕಿದೆ: ಡಾ.ಶ್ರೀ ಹನುಮಂತನಾಥ ಸ್ವಾಮೀಜಿ

Madhugiri News: ಮಧುಗಿರಿ ತಾಲೂಕು ಕುಂಚಿಟಿಗ ಒಕ್ಕಲಿಗ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ಮಧುಗಿರಿ ಪಟ್ಟಣದಲ್ಲಿ 2025 -26ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಬಿ.ಎನ್. ಶಂಕರಯ್ಯ ಸ್ಮಾರಕ ಐಟಿಐ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.

ಸರ್ಕಾರಿ ಶಾಲೆಗಳ ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಎಂಎಲ್‌ಸಿ ಆರ್. ರಾಜೇಂದ್ರ

ಎಲ್‌ಕೆಜಿ, ಯುಕೆಜಿ ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಕ್ರಮ: ಆರ್. ರಾಜೇಂದ್ರ

Madhugiri News: ಮಧುಗಿರಿ ಪಟ್ಟಣದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಮುದಾಯ ಭವನದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರು ಹಾಗೂ ಅಕ್ಷರ ದಾಸೋಹ ಸಿಬ್ಬಂದಿ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಆರ್. ರಾಜೇಂದ್ರ ರಾಜಣ್ಣ ಉದ್ಘಾಟಿಸಿದರು.

Gubbi News: ಧರ್ಮಸ್ಥಳ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಧರ್ಮಸ್ಥಳ ಸಂಘದ ಸದಸ್ಯರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ತಾಲೂಕಿನ ಹೊಸಕೆರೆ ವಲಯದ ಹಾಗಲವಾಡಿ ಕಾರ್ಯಕ್ಷೇತ್ರದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬಿ ತನ ಸೃಷ್ಟಿಸಿ ಧಾರ್ಮಿಕ ಕ್ಷೇತ್ರ ಅಭಿವೃದ್ಧಿ, ಕೆರೆಕಟ್ಟೆಯ ಅಭಿವೃದ್ದಿ ಹಾಗೂ ಬಡವರಿಗೆ ಸೂರು, ಮಾಸಾಶನ ಹೀಗೆ ಅನೇಕ ಸಾಮಾಜಿಕ ಸೇವೆ ನಡೆಸಿ ಮನೆಮಾತಾಗಿದೆ

Kempegowda Jayanti: ನಾಡು, ನಗರಗಳ ನಿರ್ಮಾಣದಲ್ಲಿ ನಾಡಪ್ರಭು ಕೆಂಪೇಗೌಡರ ದೂರದರ್ಶಿತ್ವ ಅಪ್ರತಿಮ: ತಹಸೀಲ್ದಾರ್ ಮಮತಾ

ಚಿಕ್ಕನಾಯಕನಹಳ್ಳಿಯಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿಯಲ್ಲಿ ತಹಸೀಲ್ದಾರ್ ಮಮತಾ ಅವರು ಮಾತನಾಡಿದ್ದಾರೆ. ಈ ವೇಳೆ ಬೆಂಗಳೂರಿನ ನಿರ್ಮಾಣದಲ್ಲಿ ಕೆಂಪೇಗೌಡರ ದೂರದೃಷ್ಟಿ, ಕೊಡುಗೆಗಳ ಬಗ್ಗೆ ತಹಸೀಲ್ದಾರ್‌ ಅವರು ಸ್ಮರಿಸಿದ್ದಾರೆ.

Pavagada News: ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ; ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲು

ಪಾವಗಡದಲ್ಲಿ ಪ್ರಸಾದ ಸೇವಿಸಿ 40ಕ್ಕೂ ಹೆಚ್ಚು ಜನ ಅಸ್ವಸ್ಥ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕೆ. ಸೇವಾಲಾಲ್ ಪುರ ತಾಂಡಾದಲ್ಲಿ ದೇವರಪೂಜೆಯಲ್ಲಿ ಪ್ರಸಾದ ಸೇವಿಸಿದ ಬಳಿಕ 40ಕ್ಕೂ ಹೆಚ್ಚು ಜನರಿಗೆ ವಾಂತಿ ಮತ್ತು ಭೇದಿ ಕಾಣಿಸಿಕೊಂಡು, ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಅಸ್ವಸ್ಥಗೊಂಡವರನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

Tumkur News: ಪ್ರೇಯಸಿಯ ಜತೆ ಗಲಾಟೆ; ಕಾರಿನಲ್ಲೇ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ!

ಕಾರಿನಲ್ಲೇ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಯುವಕ ಆತ್ಮಹತ್ಯೆ!

ತುಮಕೂರು ಜಿಲ್ಲೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಅವಘಡ ನಡೆದಿದೆ. ಯುವಕ ಮತ್ತು ಯುವತಿ ಕಾರಿನಲ್ಲಿ ಬೆಂಗಳೂರಿನಿಂದ ಅಂಕೋಲಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರ ಮಧ್ಯೆ ಗಲಾಟೆ ನಡೆದಿದ್ದು, ಈ ವೇಳೆ ಯುವಕ ಪೆಟ್ರೋಲ್‌ ಬಾಂಬ್‌ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Pavagada News: ಪಾವಗಡದಲ್ಲಿ ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

ಪಾವಗಡದಲ್ಲಿ ಶ್ರದ್ಧಾ-ಭಕ್ತಿಯಿಂದ ಮೊಹರಂ ಆಚರಣೆ

Pavagada News: ಹಿಂದೂ-ಮುಸ್ಲಿಮರ ಭಾವೈಕ್ಯತೆ, ಸೌಹಾರ್ದತೆ ಮತ್ತು ಸಹಬಾಳ್ವೆಯ ಪ್ರತೀಕವಾಗಿರುವ ಮೊಹರಂ ಹಬ್ಬವನ್ನು ಪಟ್ಟಣದಲ್ಲಿ ಅತ್ಯಂತ ಶ್ರದ್ಧಾ-ಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಂಜಾಗಳ ಮೆರವಣಿಗೆ, ಸಾಂಪ್ರದಾಯಿಕ ವಾದ್ಯಗಳ ನಾದ ಹಾಗೂ ಭಕ್ತರ ಜಯಘೋಷಗಳು ಹಬ್ಬದ ಮೆರುಗನ್ನು ಮತ್ತಷ್ಟು ಹೆಚ್ಚಿಸಿವೆ.

Gubbi News: ಅನರ್ಹ ಮತಗಳ ತೆರವಿನ ಎಸ್ಐಆರ್ ಯಶಸ್ವಿಗೆ ಗುಬ್ಬಿ ಬಿಜೆಪಿ ಸಿದ್ದ

ಅನರ್ಹ ಮತಗಳ ತೆರವಿನ ಎಸ್ಐಆರ್ ಯಶಸ್ವಿಗೆ ಗುಬ್ಬಿ ಬಿಜೆಪಿ ಸಿದ್ದ

ಪಟ್ಟಣದ ಬಾವಿಮನೆ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಾಗಾರದಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್ ಮಟ್ಟದ ಏಜೆಂಟ್ಸ್, ಸದಸ್ಯರು ಸ್ಥಳೀಯ ಮುಖಂಡರು ಆಗಮಿಸಿ 30 ದಿನಗಳ ಕಾಲ ವಿಶೇಷ ಮತದಾರ ಪರಿಷ್ಕರಣೆ ಹೇಗೆ ಪಾಲ್ಗೊಂಡು ಬಿಜೆಪಿ ಪರ ಮತಗಳನ್ನು ಉಳಿಸಿ ಕೊಳ್ಳುವ ಕೆಲಸ ಮಾಡಬೇಕು ಎಂಬ ಮಾಹಿತಿ ತಿಳಿಸಲಾಯಿತು.

20% commission scam: ಔಷಧಿ ಖರೀದಿಯಲ್ಲಿ ಶೇ. 20 ರಷ್ಟು ಕಮಿಷನ್ ದಂಧೆ: ಎಸ್‌ಸಿ/ಎಸ್‌ಟಿ ಸಭೆಯಲ್ಲಿ ಆಕ್ರೋಶ!

ಔಷಧಿ ಖರೀದಿಯಲ್ಲಿ ಶೇ. 20 ರಷ್ಟು ಕಮಿಷನ್ ದಂಧೆ: ಆಕ್ರೋಶ

ಬಡ ರೋಗಿಗಳಿಗೆ ಅನುಕೂಲವಾಗಲು ತಕ್ಷಣವೇ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಸಜ್ಜಿತ ಸ್ಕ್ಯಾನಿಂಗ್ ಯಂತ್ರ ಅಳವಡಿಸಬೇಕು," ಎಂದು ಅವರು ಆಡಳಿತ ಮಂಡಳಿಯನ್ನು ಬಲವಾಗಿ ಒತ್ತಾಯಿಸಿದರು. ವೈದ್ಯಾಧಿಕಾರಿ ಡಾ. ಸುನೀಲ್ ಪ್ರತಿಕ್ರಿಯಿಸಿ, "ಆಸ್ಪತ್ರೆಯಲ್ಲಿ ಕೇವಲ 6 ವೈದ್ಯರಿದ್ದು, 33 ಇರಬೇಕಾದ 'ಡಿ' ಗ್ರೂಪ್ ಸಿಬ್ಬಂದಿಯಲ್ಲಿ ಕೇವಲ 13 ಜನರಿದ್ದಾರೆ," ಎಂದು ಸಿಬ್ಬಂದಿ ಕೊರತೆಯ ನೆಪವೊಡ್ಡಿ ಕೈಚೆಲ್ಲಿದರು

Bale Honnuru shri: ಸಮಾಜದಲ್ಲಿ ಶ್ರಮಜೀವಿಗಳಿಗೆ ಎಂದಿಗೂ ಉನ್ನತಿ ಲಭ್ಯ : ಬಾಳೆ ಹೊನ್ನೂರು ಶ್ರೀಗಳು

ಸಮಾಜದಲ್ಲಿ ಶ್ರಮಜೀವಿಗಳಿಗೆ ಎಂದಿಗೂ ಉನ್ನತಿ ಲಭ್ಯ

ತಾಲ್ಲೂಕಿನ ನಿಟ್ಟೂರು ಹೋಬಳಿ ಬಾಗೂರು ಗೇಟ್ ಬಳಿಯ ಬಾಲಾಜಿ ಬಡಾವಣೆಯಲ್ಲಿ ಇಷ್ಟಲಿಂಗ ಪೂಜೆ, ಉಷಾ ಚಂದ್ರಶೇಖರ ದಂಪತಿಯ ಷಷ್ಠಿ ಪೂರ್ತಿ ಮತ್ತು 40ನೇ ವಿವಾಹ ವಾರ್ಷಿಕೋತ್ಸವ ಸಮಾರಂಭ ಅಂಗವಾಗಿ ನಡೆದ ಧರ್ಮ ಜಾಗೃತಿ ಕಾರ್ಯಕ್ರಮ ಸಾನಿಧ್ಯ ವಹಿಸಿ ಮಾತನಾಡಿದ ಅವರು ಬೌದ್ಧಿಕ ಬದುಕು ಪರಿಪೂರ್ಣ ಆಗಲು ಧರ್ಮಗುರುಗಳ ಆಶೀರ್ವಾದ ಪಡೆಯುವುದು ಮುಖ್ಯ

Loading...