ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಪಂನಲ್ಲಿ 4.24 ಕೋಟಿ ಗುಳುಂ; ಮೂವರು ಇಒಗಳ ಸಸ್ಪೆಂಡ್

ಮಧುಗಿರಿ ತಾಲೂಕು ಪಂಚಾಯಿತಿಯಲ್ಲಿ ನೌಕರರ ಗಳಿಕೆ ರಜೆ ನಗದೀಕರಣ ಮಂಜೂರಾತಿಯಲ್ಲಿ ಅಕ್ರಮ ಎಸಗಿ, ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಕೇಳಿಬಂದಿತ್ತು. ಇದಕ್ಕೆ ಸಂಬಂಧಿಸಿ ಮೂವರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Tiptur Rain: ಕೊಬ್ಬರಿ ನಾಡಿನಲ್ಲಿ ಬಿರುಗಾಳಿ ಸಹಿತ ವರುಣಾರ್ಭಟ; ಧರೆಗೆ ಉರುಳಿದ ನೂರಾರು ಕಲ್ಪವೃಕ್ಷ, ಶೆಡ್‌ ಶೀಟ್‌ ಬಿದ್ದು ಬಾಲಕನಿಗೆ ಗಂಭೀರ ಗಾಯ

ಕೊಬ್ಬರಿ ನಾಡಿನಲ್ಲಿ ವರುಣಾರ್ಭಟ; ಧರೆಗೆ ಉರುಳಿದ ನೂರಾರು ಕಲ್ಪವೃಕ್ಷ

Tiptur News: ತಿಪಟೂರಿನಲ್ಲಿ ಶುಕ್ರವಾರ ರಾತ್ರಿ ಬಿರುಗಾಳಿ ಸಮೇತ ಸುರಿದ ಮಳೆ ಸಾಕಷ್ಟು ಅವಾಂತರ ಸೃಷ್ಟಿಸಿದೆ. ತೆಂಗಿನಕಾಯಿ ಫ್ಯಾಕ್ಟರಿ ಕಾರ್ಮಿಕರಿಗೆಂದು ನಿರ್ಮಿಸಿದ್ದ ಶೆಡ್ಡುಗಳ ಮೇಲ್ಚಾವಣಿ ಹಾರಿ ಹೋಗಿವೆ. ಹುಳಿಯಾರು ಮುಖ್ಯ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಬಿರುಗಾಳಿಯ ಅರ್ಭಟಕ್ಕೆ 500ಕ್ಕೂ ಹೆಚ್ಚು ತೆಂಗಿನ ಮರಗಳು ಬಿದ್ದು ಹೋಗಿವೆ, 3000ಕ್ಕೂ ಹೆಚ್ಚು ಬಾಳೆ ಗಿಡಗಳು ಸೇರಿದಂತೆ ವಿವಿಧ ಬಗೆಯ ಹಣ್ಣಿನ ಗಿಡಗಳು ನೆಲಕಚ್ಚಿವೆ.

ಸ್ವಗ್ರಾಮ ಹನುಮಂತನಹಳ್ಳಿಯಲ್ಲಿ ನೆರವೇರಿದ ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ; ಸಿದ್ದರಾಮಯ್ಯ ಸೇರಿ ಗಣ್ಯರಿಂದ ಅಂತಿಮ ದರ್ಶನ

ಸ್ವಗ್ರಾಮದಲ್ಲಿ ನೆರವೇರಿದ ಮಾಜಿ ಸಚಿವ ವೆಂಕಟರಮಣಪ್ಪ ಅಂತ್ಯಕ್ರಿಯೆ

Former Minister Venkataramanappa: ಪಾವಗಡ ತಾಲೂಕಿನ ಹನುಮಂತನಹಳ್ಳಿಯ ತೋಟದಲ್ಲಿ ಸಕಲ ಸರ್ಕಾರಿ ಗೌರಗಳೊಂದಿಗೆ ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುಖಂಡ ವೆಂಕಟರಮಣಪ್ಪ ಅವರ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ ರಾಜಕೀಯ ಗಣ್ಯರು, ಸಾರ್ವಜನಿಕರು, ಅಭಿಮಾನಿಗಳು ಸೇರಿ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು.

ರುದ್ರಪ್ಪ ಲಮಾಣಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಶ್ರೀ ಸೇವಾಲಾಲ್ ಲಂಬಾಣಿ ಸಂಘ ಒತ್ತಾಯ

ರುದ್ರಪ್ಪ ಲಮಾಣಿಗೆ ಡಿಸಿಎಂ ಸ್ಥಾನ ನೀಡಿ; ಬಿ.ಟಿ. ಕುಮಾರ್ ಒತ್ತಾಯ

ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಉಪಮುಖ್ಯಮಂತ್ರಿ ಅಥವಾ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ಮತ್ತು ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸಮಾಜದ ಪಕ್ಷದ ಮುಖಂಡರುಗಳಿಗೆ ಪ್ರಾತಿನಿಧ್ಯ ನೀಡಬೇಕು ಎಂದು ತಾ.ಶ್ರೀ ಸೇವಾಲಾಲ್ ಲಂಬಾಣಿ ಸಂಘ ಮನವಿ ಮಾಡಿದೆ.

ಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ; ಶನಿವಾರ ಮಧ್ಯಾಹ್ನ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

ಮಾಜಿ ಸಚಿವ ವೆಂಕಟರಮಣಪ್ಪ ಅಂತಿಮ ದರ್ಶನಕ್ಕೆ ಹರಿದುಬಂದ ಜನಸಾಗರ

Former minister Venkataramanappa Death: ಪಾವಗಡದ ಮಾಜಿ ಸಚಿವ ವೆಂಕಟರಮಣಪ್ಪ (80) ಹೃದಯಾಘಾತದಿಂದ ಶುಕ್ರವಾರ ಬೆಳಗಿನ ಜಾವ ನಿಧನರಾಗಿದ್ದರು. ಇವರ ಅಂತ್ಯಕ್ರಿಯೆ ಪಾವಗಡ ತಾಲೂಕಿನ ಸ್ವ ಗ್ರಾಮದ ಹನುಮಂತನಹಳ್ಳಿಯಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಗೆ ನೆರವೇರಲಿದೆ.

Tiptur News: ಅಂತಾರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ಗೆ ತಿಪಟೂರಿನ ಪ್ರಣವ್ ಲೋಕೇಶ್ ಆಯ್ಕೆ

ಅಂತಾರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ಗೆ ಪ್ರಣವ್ ಲೋಕೇಶ್

Tiptur News: ತಿಪಟೂರು ನಗರದ ಜೈ ಮಾರುತಿ ಟೇಕ್ವಾಂಡೋ ತರಬೇತಿ ಕೇಂದ್ರದ ವಿದ್ಯಾರ್ಥಿ ಪ್ರಣವ್ ಲೋಕೇಶ್ ಥೈಲ್ಯಾಂಡ್‌ನಲ್ಲಿ ಮೇ 30ರಂದು ಶನಿವಾರ ಹಾಗೂ ಮೇ 31ರಂದು ಭಾನುವಾರ ನಡೆಯಲಿರುವ ಅಂತಾರಾಷ್ಟಿಯ ಟೇಕ್ವಾಂಡೋ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಲಿದ್ದಾರೆ.

ʼʼಮುಂದೆ ಇದೆ ಭಾರಿ ಸವಾಲು, ಎಚ್ಚರಿಕೆ ಅಗತ್ಯʼʼ:  ಡಿ.ಕೆ. ಶಿವಕುಮಾರ್‌ಗೆ ಸಿಎಂ ಪಟ್ಟ ದೊರೆಯುತ್ತಿದ್ದಂತೆ ಸ್ಫೋಟಕ ಭವಿಷ್ಯ ನುಡಿದ  ಕರಿಬಸವೇಶ್ವರ ಸ್ವಾಮೀಜಿ

ಡಿಕೆಶಿ ಸಿಎಂ ಪಟ್ಟ ದೊರೆಯುತ್ತಿದ್ದಂತೆ ಸ್ಫೋಟಕ ಭವಿಷ್ಯ ನುಡಿದ ಅಜ್ಜಯ್ಯ

DK Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸದ್ಯದಲ್ಲೇ ಸಿಎಂ ಪಟ್ಟಕ್ಕೆ ಏರಲಿದ್ದಾರೆ. ಹಾಗಂತ ಡಿಕೆಶಿ ಅವರ ಮುಂದಿನ ಹಾದಿ ಹೂವಿನ ಹಾಸಲ್ಲ. ಕಲ್ಲು-ಮುಳ್ಳುಗಳ, ಸವಾಲಿನ ಹಾದಿಯೇ ಮುಂದಿದೆ ಎಂದು ಡಿಕೆಶಿ ಅವರ ಪರಮ ದೈವ, ತುಮಕೂರಿನ ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿಬಸವೇಶ್ವರ ಸ್ವಾಮೀಜಿ (ಅಜ್ಜಯ್ಯ) ಹೇಳಿದ್ದಾರೆ. ಸದ್ಯ ಈ ಭವಿಷ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿದೆ.

ರೇಷ್ಮೆ ಉತ್ಪಾದನೆ: ತುಮಕೂರು ರಾಜ್ಯದಲ್ಲೇ ಪ್ರಥಮ

ರೇಷ್ಮೆ ಉತ್ಪಾದನೆ: ತುಮಕೂರು ರಾಜ್ಯದಲ್ಲೇ ಪ್ರಥಮ

ಮಾ 2020ರ ಅಂತ್ಯಕ್ಕೆ ಲಭ್ಯವಿರುವ ದತ್ತಾಂಶಗಳ ಪ್ರಕಾರ, ಜಿಲ್ಲೆಯ ರೈತರು ರೇಷ್ಮೆ ಕೃಷಿಯನ್ನು ಒಂದು ಲಾಭದಾಯಕ ಉದ್ದಿಮೆಯಾಗಿ ಸ್ವೀಕರಿಸಿದ್ದಾರೆ. ಜಿಲ್ಲೆಯಾದ್ಯಂತ ಒಟ್ಟು 10223 ಹೆಕ್ಟೇರ್ ಪ್ರದೇಶದಲ್ಲಿ ಹಿಪ್ಪುನೇರಳೆ ಬೆಳೆಯುವ ಗುರಿಯನ್ನು ತಲುಪಲಾಗಿದ್ದು, ಹಸಿರು ಹೊದಿಕೆಯಂತೆ ಕಾಡುತ್ತಿರುವ ಹಿಪ್ಪು ನೇರಳೆ ತೋಟಗಳು ಜಿಲ್ಲೆಯ ಆರ್ಥಿಕತೆಗೆ ಬಲ ತುಂಬುತ್ತಿವೆ.

Tiptur News: ಸಕ್ಕರೆ ಕಾಯಿಲೆ ನಿಯಂತ್ರಿಸದಿದ್ದರೆ ಅಂಧತ್ವ ಹೆಚ್ಚುತ್ತದೆ: ಡಾ.ವಿವೇಚನ

ಸಕ್ಕರೆ ಕಾಯಿಲೆ ನಿಯಂತ್ರಿಸದಿದ್ದರೆ ಅಂಧತ್ವ ಹೆಚ್ಚುತ್ತದೆ

ಬದಲಾದ ವಾತಾವರಣದಲ್ಲಿ ಜನರು ನಾನಾ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ‌. ಗ್ರಾಮೀಣ ಪ್ರದೇಶದ ಜನರು ಸಕಾಲದಲ್ಲಿ ಆರೋಗ್ಯ ಪರೀಕ್ಷೆ ಮತ್ತು ಚಿಕಿತ್ಸೆ ದೊರೆಯದ ಕಾರಣ ಬಿಪಿ ಮತ್ತು ಶುಗರ್ ಹೆಚ್ಚಲು ಕಾರಣವಾಗಿದೆ. ಇದರಿಂದ ಕಣ್ಣಿನ ದೃಷ್ಟಿ ದೋಷ ಸಹಜವಾಗಿ ಹೆಚ್ಚಾ ಗುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೇ ಇದ್ದರೆ, ಅಂಧತ್ವ ಬರುವ ಅಪಾಯವಿದ್ದು ಸಕಾಲದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವುದು ಹೆಚ್ಚು ಸೂಕ್ತ ಎಂದರು.

MLA S.R.Srinivas: ನನ್ನ ಮಗನ ಟ್ರ್ಯಾಪ್ ಮಾಡುವ ಕೆಲಸ ನಡೆದಿದೆ: ಶಾಸಕ ವಾಸಣ್ಣ ತಿರುಗೇಟು

ನನ್ನ ಮಗನ ಟ್ರ್ಯಾಪ್ ಮಾಡುವ ಕೆಲಸ ನಡೆದಿದೆ: ಶಾಸಕ ವಾಸಣ್ಣ ತಿರುಗೇಟು

ತಾಲ್ಲೂಕಿನ ಚೇಳೂರಿನ ಎಪಿಎಂಸಿ ಯಾರ್ಡ್ ಆವರಣದಲ್ಲಿ 1 ಕೋಟಿ ರೂಗಳ ಸಿಸಿರಸ್ತೆ ಕಾಮಗಾರಿ ಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಹನಿಟ್ರ್ಯಾಪ್ ಬಗ್ಗೆ ಮಾತನಾಡುವ ವ್ಯಕ್ತಿಗೆ ಯಾಕೆ ಭಯ ಹುಟ್ಟಿದೆ. ಅಂತಹ ಮಾಡಬಾರದ್ದು ಮಾಡಿದ್ದಕ್ಕೆ ಈ ಭಯ ಕಾಣುತ್ತಿದೆ ಎನಿಸುತ್ತದೆ. ಚಿಲ್ಲರೆ ಮಾತು ಗಳು, ಕೀಳುಮಟ್ಟದ ರಾಜಕಾರಣ ಅವರ ಚರಿತ್ರೆ ತಿಳಿಸುತ್ತದೆ

Congress Sadhana Samavesha: 2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಡಿಕೆಶಿ

DK Shivakumar: ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಇಡೀ ದೇಶಕ್ಕೆ ಒಂದು ಮಾದರಿ ಸರ್ಕಾರವನ್ನು ಕೊಟ್ಟಿದೆ, ಅದನ್ನು ಉಳಿಸಿಕೊಂಡು ಹೋಗುತ್ತೇವೆ. ನಿಮ್ಮ ಆಶೀರ್ವಾದ ಸದಾ ಇರಲಿ ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಹೇಳಿದ್ದಾರೆ.

Gubbi News: ಮೇ.25 ರಂದು ಅರ್ಥಪೂರ್ಣ ಬಸವ ಜಯಂತಿ: ತಾಲ್ಲೂಕಿನಾದ್ಯಂತ ಪ್ರಚಾರಕ್ಕೆ ಚಾಲನೆ ನೀಡಿದ ಪ್ರಮುಖರು.

ಮೇ.25 ರಂದು ಅರ್ಥಪೂರ್ಣ ಬಸವ ಜಯಂತಿ

ಮುಖಂಡ ಎಸ್.ಡಿ.ದಿಲೀಪ್ ಕುಮಾರ್ ಮಾತನಾಡಿ, ಇದೇ ತಿಂಗಳ 25ರಂದು ಬಸವ ಜಯಂತಿ ಆಚರಣೆ ಯನ್ನು ಹೇರೂರು ಗ್ರಾಮದ ಶ್ರೀ ಗುರು ಸಿದ್ಧರಾಮೇಶ್ವರ ಸಮುದಾಯಭವನದಲ್ಲಿ ಬೆಳಿಗ್ಗೆ 7 ಗಂಟೆಗೆ ಇಷ್ಟಲಿಂಗ ಪೂಜೆ ಮೂಲಕ ಆರಂಭಿಸಲಾಗುವುದು. ತಾಲ್ಲೂಕಿನ ಎಲ್ಲಾ ಧರ್ಮ ಗುರುಗಳ ಉಪಸ್ಥಿತಿ ಯಲ್ಲಿ ನಡೆಯುವ ಇಷ್ಟ ಲಿಂಗ ಪೂಜೆಗೆ ತಾಲ್ಲೂಕಿನ ಎಲ್ಲಾ ಸಮಾಜದ ಬಂಧುಗಳು ಆಗಮಿಸಬೇಕು

ತುಮಕೂರು ಜಿಲ್ಲೆಯಲ್ಲಿ ಒಂದೇ ದಿನ 600 ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ನೇಮಕಾತಿ ಪತ್ರ ವಿತರಣೆ: ಹೆಬ್ಬಾಳ್ಕರ್

ತುಮಕೂರಿನಲ್ಲಿ ಒಂದೇ ದಿನ 600 ಅಂಗನವಾಡಿ ನೌಕರರ ನೇಮಕಾತಿ

Laxmi Hebbalkar: ತುಮಕೂರು ಜಿಲ್ಲೆ ಒಂದರಲ್ಲೇ 600 ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಒಂದೇ ದಿನ ನೇಮಕಾತಿ ಪತ್ರವನ್ನು ಕೊಡಲಾಗಿದ್ದು, ಇದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಟ್ಟಿಗೆ ದಾಖಲೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Congress Sadhana Samavesha: ಕರ್ನಾಟಕ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು: ಸಿಎಂ ಸಿದ್ದರಾಮಯ್ಯ

ಕರ್ನಾಟಕ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಟೊಳ್ಳು: ಸಿಎಂ

Congress Sadhana Samavesha: ಜಿ.ಪರಮೇಶ್ವರ್ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ಧಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಸಂಬಂಧಿಕರ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದು, ಶವ ಹೂತು ಹಾಕಿದ ಪಾಪಿ ತಂದೆ!

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದು, ಶವ ಹೂತು ಹಾಕಿದ ತಂದೆ!

Tumkur Murder Case: ತುಮಕೂರು ಜಿಲ್ಲೆ ಶಿರಾ ತಾಲೂಕು ಕಳ್ಳಂಬೆಳ್ಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ತನ್ನ ವಿರೋಧದ ನಡುವೆಯೂ ಸಂಬಂಧಿಕರ ಹುಡುಗನನ್ನು ಪ್ರೀತಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ತಂದೆಯು ಮಗಳನ್ನು ಕೊಲೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.

Gubbi News: ಪ್ರಸ್ತುತ ದಿನಮಾನದಲ್ಲಿ ದೈಹಿಕ ಆರೋಗ್ಯ ಮುಖ್ಯ: ಜಿ.ಪ್ರಸನ್ನಕುಮಾರ್

ಪ್ರಸ್ತುತ ದಿನಮಾನದಲ್ಲಿ ದೈಹಿಕ ಆರೋಗ್ಯ ಮುಖ್ಯ: ಜಿ.ಪ್ರಸನ್ನಕುಮಾರ್

ಕ್ರೀಡಾ ಜಗತ್ತಿನಲ್ಲಿ ಬೆಳೆದ ಸಾವಿರಾರು ಮಂದಿ ಬದುಕು ಕಂಡುಕೊಂಡಿದ್ದಾರೆ. ನಗರ ಪ್ರದೇಶದಲ್ಲಿ ಮಕ್ಕಳನ್ನು ಕೈಹಿಡಿದು ನಡೆಸುವ ದೃಶ್ಯ ನೋಡುತ್ತೇವೆ. ಶಾಲೆ ಅಷ್ಟೇ ನೋಡುವ ಮಕ್ಕಳು ಇನ್ನಿತರ ಚಟುವಟಿಕೆ ಬಗ್ಗೆ ತೊಡಗದೆ ಚಿಕ್ಕ ವಯಸ್ಸಿನಲ್ಲೇ ಅನಾರೋಗ್ಯಕ್ಕೆ ತುತ್ತಾಗುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳನ್ನು ಆಟದಲ್ಲಿ ತೊಡಗಿಸಬೇಕು. ಮೈದಾನದಲ್ಲಿ ಬೆವರು ಹರಿಸಿ ಆಟ ಆಡಿದ್ದಲ್ಲಿ ದೈಹಿಕ ಆರೋಗ್ಯ ಪ್ರಾಪ್ತಿಯಾಗುತ್ತದೆ. ನಂತರ ಮಾನಸಿಕ ಆರೋಗ್ಯ ಕೂಡ ಉತ್ತಮಗೊಳ್ಳುತ್ತದೆ

ನರರೋಗ ತಜ್ಞ ಡಾ. ದರ್ಶನ್ ವಿಶೇಷ ಸೇವೆ; ತುಮಕೂರು ಜಿಲ್ಲಾಸ್ಪತ್ರೆಯಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ

ನರರೋಗ ತಜ್ಞ ಡಾ. ದರ್ಶನ್‌ರಿಂದ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆ

Tumkur News: ತುಮಕೂರು ಜಿಲ್ಲಾಸ್ಪತ್ರೆಯ ನರರೋಗ ವಿಭಾಗದ ನುರಿತ ಶಸ್ತ್ರಚಿಕಿತ್ಸಾ ತಂಡ ಕಳೆದ 8 ತಿಂಗಳಲ್ಲಿ 60ಕ್ಕೂ ಹೆಚ್ಚು ಕ್ಲಿಷ್ಟಕರ ಶಸ್ತ್ರಚಿಕಿತ್ಸೆಗಳನ್ನು ಉಚಿತವಾಗಿ ನಡೆಸುವ ಮೂಲಕ ರಾಜ್ಯದ ಗಮನ ಸೆಳೆದಿದೆ ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಅಸ್ಗರ್ ಬೇಗ್ ತಿಳಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ: ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಚಿಕ್ಕನಾಯಕನಹಳ್ಳಿ ಟಿಎಪಿಸಿಎಂಎಸ್ ಚುನಾವಣೆ ಹಿನ್ನೆಲೆ ನಾಮಪತ್ರ ಸಲ್ಲಿಕೆ

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಆಡಳಿತ ಮಂಡಳಿಯ ನಿರ್ದೇಶಕ ಸ್ಥಾನಗಳಿಗೆ ನಡೆಯಲಿರುವ ಚುನಾವಣಾ ಪ್ರಕ್ರಿಯೆ ಬಿರುಸಿನಿಂದ ಕೂಡಿದ್ದು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿಂಗದಹಳ್ಳಿ ರಾಜ್‌ಕುಮಾರ್ ಅವರ ನೇತೃತ್ವದಲ್ಲಿ ಗುರುವಾರ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.

ಶಿಕ್ಷಕಿ ಗೀತಾ ಲೋಕೇಶ್ ಅವರಿಗೆ ಕಾಯಕ ಕಣ್ಮಣಿ ಪ್ರಶಸ್ತಿ

ಶಿಕ್ಷಕಿ ಗೀತಾ ಲೋಕೇಶ್ ಅವರಿಗೆ ಕಾಯಕ ಕಣ್ಮಣಿ ಪ್ರಶಸ್ತಿ

ಗಣಿನಾಡು ಬಳ್ಳಾರಿಯ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಬೆಳಕು ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಸಮ್ಮೇಳನದಲ್ಲಿ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿ ಶಿಕ್ಷಕಿ ಹಾಗೂ ಸಾಹಿತಿ ಗೀತಾ ಲೋಕೇಶ್ ಅವರಿಗೆ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆಯನ್ನು ಪರಿಗಣಿಸಿ ಪ್ರತಿಷ್ಠಿತ ರಾಷ್ಟ್ರಮಟ್ಟದ ಕಾಯಕ ಕಣ್ಮಣಿ ಪ್ರಶಸ್ತಿಯನ್ನು ಪ್ರದಾನಿಸಲಾಯಿತು.

MLA S.R.Srinivas: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಸ್.ಆರ್.ಶ್ರೀನಿವಾಸ್ ರಿಂದ ಭೂಮಿ ಪೂಜೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಿಂದ ಭೂಮಿ ಪೂಜೆ

ತಾಲೂಕಿನ ನಾನಾ ಭಾಗಗಳಾದ ವಡ್ಡರಹಟ್ಟಿ, ಕಾಳೇನಹಳ್ಳಿ, ಕೆಜಿ ಟೆಂಪಲ್, ದೊಡ್ಡ ಕಟ್ಟಿ ಗೇನಹಳ್ಳಿ ಗ್ರಾಮದಲ್ಲಿ ಪಂಚಾಯತ್ ರಾಜ್ ಮತ್ತು ಇಂಜಿನಿಯರಿಂಗ್ ಇಲಾಖೆ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸುಮಾರು 2.95 ಕೋಟಿ ವೆಚ್ಚದ ಸಿ.ಸಿ. ರಸ್ತೆ ಅಭಿವೃದ್ಧಿ ಹಾಗೂ ಉಪ ಆರೋಗ್ಯ ಕೇಂದ್ರದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ಮುಗಿದಿದ್ದು ಈಗ ಕೇಂದ್ರ ಸರ್ಕಾರ ಎಲ್ಲಾ ವಸ್ತುಗಳ ದರವನ್ನು ಹೆಚ್ಚಿಗೆ ಮಾಡುತ್ತದೆ.

Gubbi News: ತ್ವರಿತವಾಗಿ ಜನರಿಗೆ ಜಾಗೃತಿ ಮೂಡಿಸಲು ಸುಲಭ ಸಂವಹನ ಸಾಧನ ಡಿಜಿಟಲ್‌ ಮಾಧ್ಯಮ

ಜಾಗೃತಿ ಮೂಡಿಸಲು ಡಿಜಿಟಲ್‌ ಮಾಧ್ಯಮ ಸುಲಭ ಸಂವಹನ ಸಾಧನ

ಕೈಯಲ್ಲಿ ಮೊಬೈಲ್ ಫೋನ್ ಇರುವ ಪ್ರತಿಯೊಬ್ಬರೂ ಸುದ್ದಿಯನ್ನು, ಮಾಹಿತಿಯನ್ನು, ಅನಿಸಿಕೆಯನ್ನು ಬರೆಯಬಹುದು, ಮಾತಾಡಬಹುದು ಮತ್ತು ಅವರೇ ಅದನ್ನು ಪ್ರಸಾರ ಸಹ ಮಾಡಬಹುದು. ಇದೇ ಡಿಜಿಟಲ್ ಮೀಡಿಯಾದ ಸಾಧ್ಯತೆ. ಆದರೆ, ಅವನ್ನು ವ್ಯವಸ್ಥಿತ ವಾಗಿ, ಯೋಜಿತವಾಗಿ ಮತ್ತು ವೃತ್ತಿಪರವಾಗಿ ಮಾಡಲು ಈದಿನ ಡಾಟ್ ಕಾಮ್ ರಾಜ್ಯದ ನಾಗರಿಕ ರಿಗೂ ಅವಕಾಶ ಕಲ್ಪಿಸುತ್ತದೆ, ತರಬೇತಿ ನೀಡುತ್ತದೆ ಮತ್ತು ವೇದಿಕೆ ಕಲ್ಪಿಸುತ್ತದೆ.

Madhugiri News: ವಿಜೃಂಭಣೆಯಿಂದ ನೆರವೇರಿದ ಶ್ರೀ ಅಮ್ಮಾಜಿ ಕಾವಲ್ಲೇಶ್ವರಿ ದೇವಿ, ನರಸಿಂಹ ಸ್ವಾಮಿ ಜಲಧಿ ಮಹೋತ್ಸವ

ವಿಜೃಂಭಣೆಯಿಂದ ನೆರವೇರಿದ ಅಮ್ಮಾಜಿ ಕಾವಲ್ಲೇಶ್ವರಿ ಜಲಧಿ ಮಹೋತ್ಸವ

Madhugiri News: ಮಧುಗಿರಿ ತಾಲೂಕಿನ ಕಸಬಾ ವ್ಯಾಪ್ತಿಯ ಭಕ್ತರಹಳ್ಳಿ ಗ್ರಾಮದಲ್ಲಿ ಕುಂಚಿಟಿಗರ (ಶೆಟ್ಟನವರ) ಕುಲದೇವತೆ ಅಮ್ಮಾಜಿ ಕಾವಲ್ಲೇಶ್ವರಿ ದೇವಿ ಹಾಗೂ ನರಸಿಂಹ ಸ್ವಾಮಿಯ ಜಲಧಿ ಮಹೋತ್ಸವ ಸಾವಿರಾರು ಮಂದಿ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ನಾಳೆ ಗೋಡೆಕೆರೆ ಮಠದ ಶ್ರೀ ಮೃತ್ಯುಂಜಯ ದೇಶೀಕೇಂದ್ರ ಮಹಾಸ್ವಾಮಿಗಳಿಗೆ ಗುರುವಂದನೆ

ನಾಳೆ ಗೋಡೆಕೆರೆ ಮಠದ ಮೃತ್ಯುಂಜಯ ದೇಶೀಕೇಂದ್ರ ಸ್ವಾಮಿಗಳಿಗೆ ಗುರುವಂದನೆ

Chikkanayakanahalli News: ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾಧೀಶ್ವರ 1108 ಜಗದ್ಗುರು ಭೂಸುಕ್ಷೇತ್ರ ಗೋಡೆಕೆರೆ ಮಠದ ಚರಪಟ್ಟಾಧ್ಯಕ್ಷರಾದ ಶ್ರೀ ಮೃತ್ಯುಂಜಯ ದೇಶೀಕೇಂದ್ರ ಮಹಾಸ್ವಾಮೀಜಿ ಅವರಿಗೆ ಮೇ 10 ರಂದು ಭಾನುವಾರ ಭಕ್ತಸಮೂಹವು ಭಕ್ತಿಪೂರ್ವಕ ಗುರುವಂದನೆಯನ್ನು ಸಲ್ಲಿಸುತ್ತಿದೆ.

Kunigal Accident: ಕುಣಿಗಲ್‌ನಲ್ಲಿ ಭೀಕರ ಅಪಘಾತ; ಕಾರಿಗೆ ಲಾರಿ ಡಿಕ್ಕಿಯಾಗಿ ನಾಲ್ವರ ದುರ್ಮರಣ

ಕುಣಿಗಲ್‌ನಲ್ಲಿ ಕಾರಿಗೆ ಲಾರಿ ಡಿಕ್ಕಿಯಾಗಿ ನಾಲ್ವರ ದುರ್ಮರಣ

ಕುಣಿಗಲ್‌ ತಾಲೂಕಿನ ಚಿಗನಿಪಾಳ್ಯ ಬಳಿ ರಾಜ್ಯ ಹೆದ್ದಾರಿ 33ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ತುಮಕೂರು ಕಡೆ ಹೋಗುತ್ತಿದ್ದಾಗ, ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Loading...