ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ತುಮಕೂರು

Tumkur News: ಪ್ರಿಯಕರನ ಜತೆ ಹೆಂಡತಿ ಪರಾರಿಯಾಗಿದ್ದಕ್ಕೆ ಇಬ್ಬರು ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ಪ್ರಿಯಕರನ ಜತೆ ಹೆಂಡತಿ ಪರಾರಿ; ಮಕ್ಕಳನ್ನು ಕೊಂದು ಅರ್ಚಕ ಆತ್ಮಹತ್ಯೆ

ಪತ್ನಿ ಪರಪುರುಷನ ಜತೆ ಅಕ್ರಮ ಸಂಬಂಧ ಹೊಂದಿದ್ದಳು. ಇದೇ ವಿಚಾರವಾಗಿ ದಂಪತಿಗಳ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಕಳೆದ ಒಂದು ವಾರದ ಹಿಂದೆ ಪತ್ನಿಯು ಗಂಡ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಪ್ರಿಯಕರನ ಜತೆ ಓಡಿಹೋಗಿದ್ದಳು. ಇದರಿಂದ ಮನನೊಂದ ಪತಿ ಮಕ್ಕಳನ್ನು ಕೊಂದು, ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಚಿಕ್ಕನಾಯನಕಹಳ್ಳಿಯಲ್ಲಿ ಅಬ್ಬರಿಸಿದ ವರುಣ: ನೆಲಕ್ಕುರುಳಿದ 100ಕ್ಕೂ ಹೆಚ್ಚು ವಿದ್ಯುತ್ ಕಂಬಗಳು

ಚಿಕ್ಕನಾಯನಕಹಳ್ಳಿಯಲ್ಲಿ ನೆಲಕ್ಕುರುಳಿದ 100ಕ್ಕೂ ಹೆಚ್ಚು ವಿದ್ಯುತ್ ಕಂಬಗಳು

Chikkanayakanahalli News: ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಏಪ್ರಿಲ್‌ 28ರ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಬೆಸ್ಕಾಂ ಇಲಾಖೆಗೆ ಭಾರಿ ನಷ್ಟ ಉಂಟಾಗಿದ್ದು, ತಾಲೂಕಿನಾದ್ಯಂತ ಸುಮಾರು 100ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹುಯ್ಯೋ.. ಹುಯ್ಯೋ.. ಮಳೆರಾಯ ಎಂದ ದೊಣ್ಣೆರೆ ಗ್ರಾಮಸ್ಥರು..!!: ವರುಣನ ಕೃಪೆಗೆ ವಿಶಿಷ್ಟ ಆಚರಣೆ

ಹುಯ್ಯೋ.. ಹುಯ್ಯೋ.. ಮಳೆರಾಯ ಎಂದ ದೊಣ್ಣೆರೆ ಗ್ರಾಮಸ್ಥರು..!!

ವರುಣನ ಅವಕೃಪೆಗೆ ಮಳೆರಾಯ ಮೂರ್ತಿ ಹೊತ್ತು ವಾದ್ಯಗಳೊಂದಿಗೆ ಪ್ರತಿ ಮನೆಗೆ ತೆರಳಿ ಪೂಜೆ ಸ್ವೀಕರಿಸಿ ನೀರಿನ ಅಭಿಷೇಕ ಪಡೆದು ಹುಯ್ಯೋ ಹುಯ್ಯೋ ಮಳೆರಾಯ ಹೂವಿನ ತೋಟ ಕ್ಕೆ ನೀರಿಲ್ಲ, ಬಾಳೆ ತೋಟಕ್ಕೆ ನೀರಿಲ್ಲ ಇತ್ಯಾದಿ ಘೋಷಣೆಯನ್ನು ಕೂಗುತ್ತಾ ಮಳೆರಾಯನ ಆಗಮನಕ್ಕೆ ಪ್ರಾರ್ಥನೆ ಸಲ್ಲಿಸಿದರು.

Gubbi News: ಕಳಪೆ ಪರಿವರ್ತಕ ವೈಂಡಿಂಗ್: ಬೆಸ್ಕಾಂ ವಿರುದ್ಧ ರೈತಸಂಘ ಆಕ್ರೋಶ

ಕಳಪೆ ಪರಿವರ್ತಕ ವೈಂಡಿಂಗ್: ಬೆಸ್ಕಾಂ ವಿರುದ್ಧ ರೈತಸಂಘ ಆಕ್ರೋಶ

ಬೇಸಿಗೆ ಕಾಲದಲ್ಲಿ ನೀರಿನ ಅಭಾವಕ್ಕೆ ಕರೆಂಟ್ ನಂಬಿಕೊಂಡ ರೈತರಿಗೆ ವಿದ್ಯುತ್ ಕಡಿತ ಎಂಬುದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕಳಪೆ ವೈಂಡಿಂಗ್ ನಿಂದಾಗಿ ಕಡಿಮೆ ವೋಲ್ಟೇಜ್ ಸರಬರಾಜು ಆಗುತ್ತಿದೆ. ಇಂತಹ ಪರಿವರ್ತಕಗಳು ರೈತರ ಮೋಟಾರ್ ಸುಟ್ಟು ಹಾಕಿವೆ. ಬೆಳಿಗ್ಗೆ ಅಳವಡಿಸಿದ್ದ ಟಿಸಿ ಸಂಜೆ ವೇಳೆಗೆ ಸುಟ್ಟು ಹೋಗುತ್ತಿದೆ

ಒಳ ಮೀಸಲು ಜಾರಿ ನಮ್ಮ ದಶಕಗಳ ಹೋರಾಟಕ್ಕೆ ಸಿಕ್ಕ ಪ್ರತಿಫಲ: ಡಾ.ನರಸಿಂಹಪ್ಪ ಕಾಳೇನಹಳ್ಳಿ

ಒಳ ಮೀಸಲು ಜಾರಿ ನಮ್ಮ ದಶಕಗಳ ಹೋರಾಟಕ್ಕೆ ಸಿಕ್ಕ ಪ್ರತಿಫಲ: ಡಾ.ನರಸಿಂಹಪ್ಪ

Madhugiri News: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಹೋಬಳಿಯ ಗುಂಡಗಲ್ಲು ಗ್ರಾಮದಲ್ಲಿ ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಡಾ.ಬಿ.ಆರ್. ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಹಾಗೂ ಬಸವೇಶ್ವರ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರಗತಿಪರ ಚಿಂತಕ ಡಾ.ನರಸಿಂಹಪ್ಪ ಕಾಳೇನಹಳ್ಳಿ ಮಾತನಾಡಿದ್ದಾರೆ.

Farmers Protest: ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

ಸಮರ್ಪಕ ವಿದ್ಯುತ್ ಪೂರೈಕೆಗೆ ಆಗ್ರಹ; ರೈತರಿಂದ ಬೆಸ್ಕಾಂ ಕಚೇರಿಗೆ ಮುತ್ತಿಗೆ

Tiptur News: ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೋಸಿ ಹೋದ ಹಾಲ್ಕುರಿಕೆ ಮತ್ತು ಸುತ್ತಮುತ್ತಲಿನ ಗ್ರಾಮಗಳ ನೂರಾರು ರೈತರು, ಹಾಲ್ಕುರಿಕೆ ಪವರ್ ಸ್ಟೇಷನ್‌ಗೆ ಮುತ್ತಿಗೆ ಹಾಕಿದ್ದು, ಕಳೆದ ಎರಡು ತಿಂಗಳಿನಿಂದ ಸಮರ್ಪಕ ವಿದ್ಯುತ್‌ ನೀಡದೆ ರೈತರ ಬೆಳೆಗಳ ಜತೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

Gubbi News: ಸಂವಿಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ಮಹಾನ್ ನಾಯಕ ಡಾ.ಬಿ.ಆರ್.ಅಂಬೇಡ್ಕರ್*

ಸಂವಿಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ನಾಯಕ ಡಾ.ಅಂಬೇಡ್ಕರ್*

ಬೆಸ್ಕಾಂ ಎಸ್ಓ ಎಂಎನ್ ಕೋಟೆ ಜಯರಾಮ್ ಮಾತನಾಡಿ ಅಂಬೇಡ್ಕರ್ ಪಟ್ಟಂತ ಶ್ರಮ ಇವತ್ತು ದಲಿತರು ಸ್ವಾಭಿಮಾನಿಗಳಾಗಿ ಬದುಕಲು ದಾರಿದೀಪವಾಗಿದೆ. ಅವರ ಆದರ್ಶವನ್ನು ಎಲ್ಲರೂ ಪಾಲಿಸಬೇಕು ಎಂದರು. ಗ್ರಾಪಂ ಮಾಜಿ ಉಪಾಧ್ಯಕ್ಷ ದಿಲೀಪ್ ಮಾತನಾಡಿ ಎಲ್ಲಾ ವರ್ಗದ ಜನರಿಗೆ ಸಂವಿ ಧಾನದ ಮೂಲಕ ನ್ಯಾಯ ಒದಗಿಸಿಕೊಟ್ಟ ಮಹಾನ್ ನಾಯಕ ಡಾ. ಬಿ ಆರ್ ಅಂಬೇಡ್ಕರ್ ಎಂದು ತಿಳಿಸಿದರು.

Tiptur News: ಏಪ್ರಿಲ್‌ 29ರಂದು ತಿಪಟೂರಿನ ಕೆಐಟಿ ಕಾಲೇಜಿನಲ್ಲಿ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಉದ್ಘಾಟನೆ

ಏ.29ರಂದು ಕೆಐಟಿ ಕಾಲೇಜಿನಲ್ಲಿ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಉದ್ಘಾಟನೆ

Tiptur News: ʼಸಿಸ್ಕೋʼ (Cisco) ಮತ್ತು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ ನಿರ್ಮಾಣವಾಗಿರುವ ʼಸಿಸ್ಕೋ ಎಕ್ಸಲೆನ್ಸ್ ಸೆಂಟರ್ʼ ಏಪ್ರಿಲ್ 29ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಖಜಾಂಚಿ ಶಿವಪ್ರಸಾದ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

Tumkur News: ಶೌಚಾಲಯದಲ್ಲಿ ಸಿರಿಂಜ್ ಪತ್ತೆ; ತುಮಕೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಡೋಪಿಂಗ್‌ ಶಂಕೆ

ಸಿರಿಂಜ್ ಪತ್ತೆ; ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಡೋಪಿಂಗ್‌ ಶಂಕೆ

National Junior Athletics in Tumkur: ತುಮಕೂರಿನ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಜೂನಿಯರ್ ಅಂಡರ್-20 ಅಥ್ಲೆಟಿಕ್ಸ್ ಫೆಡರೇಶನ್ ಕ್ರೀಡಾಕೂಟ ಆಯೋಜಿಸಲಾಗಿದೆ.ಕ್ರೀಡಾಂಗಣದ ಶೌಚಾಲಯದಲ್ಲಿ ಬಳಸಿದ ಸ್ಥಿತಿಯಲ್ಲಿ ಸಿರಿಂಜ್ ಹಾಗೂ ಸೂಜಿಗಳು ಪತ್ತೆಯಾಗಿರುವುದರಿಂದ ಡೋಪಿಂಗ್ ಶಂಕೆ ವ್ಯಕ್ತವಾಗಿದೆ.

Karnataka SSLC Result: ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ತುಮಕೂರು ಜಿಲ್ಲೆಯಲ್ಲಿ ತಿಪಟೂರು ತಾಲೂಕು ಪ್ರಥಮ ಸ್ಥಾನ

ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ: ತಿಪಟೂರು ತಾಲೂಕು ಜಿಲ್ಲೆಗೆ ಪ್ರಥಮ

Karnataka SSLC Result: 2025-26ನೇ ಸಾಲಿನಲ್ಲಿ ತಾಲೂಕಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ತಿಪಟೂರು ತಾಲೂಕಿನಲ್ಲಿ ಒಟ್ಟು 2251 ಮಕ್ಕಳು ಪರೀಕ್ಷೆಯನ್ನು ಬರೆದಿದ್ದು 2190 ವಿದ್ಯಾರ್ಥಿಗಳು ಉತ್ತಿರ್ಣರಾಗಿರುತ್ತಾರೆ. 61 ವಿದ್ಯಾರ್ಥಿಗಳು ಅನುತ್ತಿರ್ಣರಾಗಿದ್ದಾರೆ. ತಾಲೂಕಿನ ಒಟ್ಟು ಫಲಿತಾಂಶ 97.29% ಬಂದಿದ್ದು ಈ ಬಾರಿ ನಮ್ಮ ತಾಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ ತಿಳಿಸಿದ್ದಾರೆ.

SSLC Result 2026: ಟೈಲರ್‌ ಮಗಳಿಗೆ ರಾಜ್ಯದಲ್ಲೇ ದ್ವಿತೀಯ ಸ್ಥಾನ; ಮುಂದೆ ವೈದ್ಯೆಯಾಗುವ ಕನಸು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಟೈಲರ್ ಮಗಳು ಟಾಪರ್‌

Karnataka SSLC Results 2026: ಟೈಲರ್ ಮಹಮ್ಮದ್ ಜಪ್ರುದ್ದೀನ್ ಅವರ ಪುತ್ರಿ ಸಾದಿಯಾ ಬಾನು ತುಮಕೂರು ಶೈಕ್ಷಣಿಕ ಜಿಲ್ಲೆಗೆ ಸೇರಿದ ನಗರದ ಶ್ರೀದೇವಿ ವಿದ್ಯಾಮಂದಿರದಲ್ಲಿ ವ್ಯಾಸಂಗ ಮಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.

Karnataka SSLC Result: ಪೆಟ್ರೋಲ್ ಬಂಕ್ ಕಾರ್ಮಿಕನ ಮಗಳಿಗೆ 623 ಅಂಕ; ಬಡತನದ ಮಧ್ಯೆಯೂ ಅರಳಿದ ಪ್ರತಿಭೆ

ಬಡತನದ ನಡುವೆಯೂ 623 ಅಂಕ ಗಳಿಸಿದ ವಿದ್ಯಾರ್ಥಿನಿ

Karnataka SSLC Result 2026: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುವ ದೇವೇಂದರ್ ಎಂಬುವರ ಪುತ್ರಿ ಹಿತಾಶ್ರೀ ಡಿ. ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಸೇರಿದ ಮಧುಗಿರಿ ಪಟ್ಟಣದ ಚಿರೆಕ್ ಪಬ್ಲಿಕ್ ಶಾಲೆಯಲ್ಲಿ ವ್ಯಾಸಂಗ ಮಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 623 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾಳೆ.

Gubbi News: ಅಂಬೇಡ್ಕರ್ ಜಯಂತೋತ್ಸವ ದೇಶಾದ್ಯಂತ ನಡೆಯುವ ದಲಿತರ ಹಬ್ಬ : ಗೂಳೂರು ಸಿದ್ದರಾಜು

ಅಂಬೇಡ್ಕರ್ ಜಯಂತೋತ್ಸವ ದೇಶಾದ್ಯಂತ ನಡೆಯುವ ದಲಿತರ ಹಬ್ಬ

ದಸಂಸ ಜಿಲ್ಲಾ ಸಂಚಾಲಕ ನಿಟ್ಟೂರು ರಂಗಸ್ವಾಮಿ ಮಾತನಾಡಿ ಯುವ ಪೀಳಿಗೆ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ರವರ ಆದರ್ಶವನ್ನು ಪಾಲಿಸಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು. ಒಳ ಮೀಸಲಾತಿ (Inner Reservation) ಜಾರಿಗೊಳಿಸಲು ತಾಲೂಕಿನ ಎಲ್ಲಾ ದಲಿತ ಬಂಧು ಗಳು ಒಗ್ಗಟ್ಟಿನ ಪ್ರದರ್ಶನ ತೋರಿಸಬೇಕು

ಮಹಿಳಾ ಮೀಸಲಾತಿ ಹೆಸರಲ್ಲಿ ಚುನಾವಣಾ ಗಿಮಿಕ್ : ಶಾಸಕ ಎಸ್.ಆರ್.ಶ್ರೀನಿವಾಸ್

ಮಹಿಳಾ ಮೀಸಲಾತಿ ಹೆಸರಲ್ಲಿ ಚುನಾವಣಾ ಗಿಮಿಕ್

ಜನಗಣತಿ ಆಧಾರದ ಮೇಲೆ ಉತ್ತರ ಪ್ರದೇಶದಲ್ಲಿ ಹೆಚ್ಚಿನ ಸೀಟು ಗಳಿಸುವ ಲೆಕ್ಕಾಚಾರ ಬುಡ ಮೇಲಾಗಿದೆ. ಕುಟುಂಬ ಕಲ್ಯಾಣ ಯೋಜನೆಯನ್ನು ಯಶಸ್ವಿಯಾಗಿ ನಡೆಸಿದ್ದ ದಕ್ಷಿಣ ಭಾರತದ ರಾಜ್ಯಗಳು ಜನಸಂಖ್ಯೆ ಆಧಾರದ ಮೇಲೆ ಸೀಟು ಹಂಚಿಕೆಯಲ್ಲಿ ಕಡಿಮೆ ಪಾಲು ಪಡೆಯುತ್ತಾರೆ. ಆದರೆ ಉತ್ತರ ಭಾರತದ ರಾಜ್ಯಗಳು ಹೆಚ್ಚು ಜನಸಂಖ್ಯೆ ಹೊಂದಿದ್ದು ದುಪ್ಪಟ ಸೀಟು ಹಂಚಿಕೆ ಪಡೆಯುತ್ತಾರೆ.

ತುಮಕೂರು ಜಿಲ್ಲೆ ಅಭಿವೃದ್ಧಿಗೆ ಗೃಹಸಚಿವ ಪರಮೇಶ್ವರ್ ಕೊಡುಗೆ ಏನು?; ಬಹಿರಂಗ ಚರ್ಚೆಗೆ ಕೆಆರ್‌ಎಸ್‌ ಪಕ್ಷ ಆಹ್ವಾನ

ಅಭಿವೃದ್ಧಿ ಬಗ್ಗೆ ಪರಮೇಶ್ವರ್ ಬಹಿರಂಗ ಚರ್ಚೆಗೆ ಬರಲಿ: ಕೆಆರ್‌ಎಸ್‌ ಪಕ್ಷ

ತುಮಕೂರು ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಅಕ್ರಮಗಳ ಬಗ್ಗೆ ನಮ್ಮ ಬಳಿ ದಾಖಲೆಗಳಿದೆ. ಈ ವಿಷಯಗಳ ಕುರಿತು ಬಹಿರಂಗ ಚರ್ಚೆ ನಡೆಸಲು ನೀವು ಸ್ಥಳ ಮತ್ತು ದಿನಾಂಕವನ್ನು ನಿಗದಿಪಡಿಸಬೇಕು ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಕೆಆರ್‌ಎಸ್‌ ಪಕ್ಷ ಆಗ್ರಹಿಸಿದೆ.

Gubbi News: ಏ.22 ಹಾಗೂ 23 ರಂದು ಗುಬ್ಬಿ ಶ್ರೀ ಮಹೇಶ್ವರಮ್ಮ ದೇವಿ ದೇವಾಲಯ ನೂತನ ಶಿಲಾ ದೇವಾಲಯ ಲೋಕಾರ್ಪಣೆ

ಏ.22, 23 ರಂದು ನೂತನ ಶಿಲಾ ದೇವಾಲಯ ಲೋಕಾರ್ಪಣೆ

ಸೀನಪ್ಪನಹಳ್ಳಿ ಶ್ರೀ ದೊಡ್ಡಮ್ಮದೇವಿ, ಶ್ರೀ ದಾಳಿಯಮ್ಮದೇವಿ, ತಿಪ್ಪೂರು ಶ್ರೀ ಕೋಡಿಕೆಂಪಮ್ಮ ದೇವಿ, ಪೆಮ್ಮನಹಳ್ಳಿ ಶ್ರೀ ಆಂಜನೇಯಸ್ವಾಮಿ ಈ ಪರಿಹಾರ ದೇವರುಗಳನ್ನು ಪಟ್ಟಣದ ಶ್ರೀ ಚನ್ನಬಸವೇಶ್ವರ ಸ್ವಾಮಿ ದೇವಾಲಯದಿಂದ ಬುಧವಾರ ಸಂಜೆ ಮೆರವಣಿಗೆ ಮೂಲಕ ಕರೆ ತಂದು ಆಲಯ ಪ್ರವೇಶ, ಹೋಮ ಹವನಗಳು ನಡೆಸಿ ಪೂರ್ಣಾಹುತಿ ನಡೆಸಲಾಗುವುದು

Gubbi News: ಏ.21ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾಕಥಾನ್-2026

ಏ.21ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾಕಥಾನ್-2026

ಗುಬ್ಬಿಯಿಂದ ಆರಂಭವಾಗುವ ವಾಕಥಾನ್ ಮಾರ್ಗ ಮಧ್ಯೆ ಹಲವು ಮಂದಿ ಅಂಬೇಡ್ಕರ್ ಅನುಯಾ ಯಿಗಳು, ಅಭಿಮಾನಿಗಳು ಸೇರ್ಪಡೆಗೊಳ್ಳಲಿದ್ದಾರೆ. ಜೊತೆಗೆ ಅಂಬೇಡ್ಕರ್ ಅವರ ಮಾರ್ಗದರ್ಶನ, ಆದರ್ಶಗಳ ಜಾಗೃತಿ ಮೂಡಿಸುವ ಕರಪತ್ರ ಹಂಚುವ ಜೊತೆಗೆ ಯುವಕರಿಗೆ ಸಂವಿಧಾನ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ

Women Reservation Bill: ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಮಹಿಳಾ ಮೀಸಲಾತಿ ಮಸೂದೆ ತಿರಸ್ಕರಿಸಿದ ಕಾಂಗ್ರೆಸ್ ವಿರುದ್ಧ ಆಕ್ರೋಶ

ಮಹಿಳೆಯರಿಗೆ ಸಿಗಬಹುದಾಗಿದ್ದ ರಾಜಕೀಯ ಅಧಿಕಾರದ ಅವಕಾಶವನ್ನು ತಿರಸ್ಕರಿಸಿದ ಕಾಂಗ್ರೆಸ್ ಪಕ್ಷವನ್ನು ಮಹಿಳೆಯರು ಮುಂದಿನ ಚುನಾವಣೆಯಲ್ಲಿ ತಿರಸ್ಕರಿಸಿ ತಕ್ಕ ಪಾಠ ಕಲಿಸುತ್ತಾರೆ. ಲೋಕಸಭೆ ಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಫೇಲ್ ಆದಾಗ ಪ್ರಿಯಾಂಕ ಗಾಂಧಿ ವಿಕೃತವಾಗಿ ನಕ್ಕಿದ್ದು ದೇಶದ ಮಹಿಳೆ ಯರಿಗೆ ಮಾಡಿದ ಅವಮಾನ.

Bear Attack: ಕೊರಟಗೆರೆಯಲ್ಲಿ ಹುಚ್ಚು ಕರಡಿ ಆರ್ಭಟ; ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

ಹುಚ್ಚು ಕರಡಿ ಆರ್ಭಟ: ಅರಣ್ಯ ಇಲಾಖೆ ವಾಹನದ ಟೈರ್ ಕಿತ್ತೆಸೆದು ದಾಳಿ

Koratagere News: ಕೊರಟಗೆರೆ ಪಟ್ಟಣದ ಸಮೀಪದ ಗೌಡನಕೆರೆ ಪಕ್ಕದ ರೈತರ ಜಮೀನುಗಳಲ್ಲಿ ಗುರುವಾರ ಬೆಳಗ್ಗೆ ಹುಚ್ಚು ಕರಡಿಯೊಂದು ಆರ್ಭಟ ನಡೆಸಿ ಭೀತಿ ಮೂಡಿಸಿದ ಘಟನೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಕರಡಿ ಏಕಾಏಕಿ ದಾಳಿ ನಡೆಸಿದೆ.

Tumkur news: ನಾಪತ್ತೆಯಾಗಿದ್ದ ಮಹಿಳೆಯ ತಲೆಬುರುಡೆ ಪತ್ತೆ, ಸಿಸಿಟಿವಿಯಲ್ಲಿ ಸಿಕ್ಕಿತು ಕೊಲೆ ಸುಳಿವು

ನಾಪತ್ತೆಯಾದ ಮಹಿಳೆಯ ತಲೆಬುರುಡೆ ಪತ್ತೆ, ಸಿಸಿಟಿವಿ ನೀಡಿತು ಕೊಲೆ ಸುಳಿವು

ಮೃತ ಯುಮುನಾ ತನ್ನ ಗಂಡ ಹಾಗೂ ಮಕ್ಕಳೊಂದಿಗೆ ಮಾ.19ರಂದು ಬರ್ತಡೇ ಆಚರಿಸಿಕೊಂಡಿದ್ದರು. ನಂತರ ಮಾ.21ರಂದು ಎಂದಿನಂತೆ ಕೆಲಸಕ್ಕೆ ಬಂದಿದ್ದಾರೆ. ಅಂದು ಸಂಜೆ ಕೆಲಸ ಬಿಟ್ಟಾಗ ಅನೈತಿಕ ಸಂಬಂಧ ಹೊಂದಿದ್ದ ರಾಘವೇಂದ್ರನ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

AN Kantamma: ಮಧುಗಿರಿ ಕೋರ್ಟ್ ನ್ಯಾಯಾಧೀಶೆ ಎ.ಎನ್. ಕಾಂತಮ್ಮ ಹೃದಯಾಘಾತದಿಂದ ನಿಧನ

ಮಧುಗಿರಿಯ ನ್ಯಾಯಧೀಶೆ ಎ.ಎನ್. ಕಾಂತಮ್ಮ ಹೃದಯಾಘಾತದಿಂದ ನಿಧನ

AN Kantamma: ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಧೀಶೆ ಎ.ಎನ್. ಕಾಂತಮ್ಮ (43) ಅವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 2025ರ ಜೂನ್‌ನಿಂದ ನ್ಯಾಯಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನಕ್ಕೆ ಮಧುಗಿರಿ ತಾಲೂಕಿನ ವಕೀಲರು ಹಾಗೂ ನ್ಯಾಯಾಲಯದ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

ಚಿಕ್ಕನಾಯಕನಹಳ್ಳಿಯ ಬೆಸ್ಕಾಂ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಚಿಕ್ಕನಾಯಕನಹಳ್ಳಿ ಬೆಸ್ಕಾಂ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Chikkanayakanahalli News: ಚಿಕ್ಕನಾಯಕನಹಳ್ಳಿ ಪಟ್ಟಣದ ಬೆಸ್ಕಾಂ ಕಚೇರಿಯಲ್ಲಿಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಂ ಜಯಂತಿ ಆಚರಿಸಲಾಯಿತು. ಮಹಾನ್ ನಾಯಕರಿಗೆ ಗಣ್ಯರು ಪುಷ್ಪಾರ್ಚನೆ ಮೂಲಕ ಗೌರವ ಸಲ್ಲಿಸಿದರು.

MLA S.R.Srinivas: ಬೇಸಿಗೆ ನೀರಿನ ಸಮಸ್ಯೆಗೆ ಮೆನ್ನೆಚ್ಚರಿಕೆಗೆ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

ಬೇಸಿಗೆ ನೀರಿನ ಸಮಸ್ಯೆಗೆ ಮೆನ್ನೆಚ್ಚರಿಕೆಗೆ ಕ್ರಮ

ತಾಲ್ಲೂಕಿನ ಚಿಕ್ಕಹಳ್ಳಿ, ವಿರೂಪಾಕ್ಷಪುರ, ಎಂ.ಎನ್.ಕೋಟೆ ಹಾಗೂ ಅಳಿಲುಘಟ್ಟ ಗ್ರಾಮದಲ್ಲಿ ಒಟ್ಟು 5.30 ಕೋಟಿ ರೂಗಳ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ಅದಲಗೆರೆ ಗೊಲ್ಲರಹಟ್ಟಿ, ಕೊಂಡ್ಲಿ ಕ್ರಾಸ್ ನಲ್ಲಿ ನೀರಿನ ಸಮಸ್ಯೆ ಕಂಡಿತ್ತು. ಶೀಘ್ರ ಕ್ರಮಕ್ಕೆ ಸೂಚಿಸಲಾಯಿತು. ಈ ಬೇಸಿಗೆಯಲ್ಲಿ ನೀರು ವಿದ್ಯುತ್ ಸಮಸ್ಯೆ ತಲೆದೋರುವ ಮುನ್ನ ಎಲ್ಲಾ ರೀತಿಯ ಎಚ್ಚರಿಕೆ ಕ್ರಮಕ್ಕೆ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Gubbi News: ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ

ದೇವಾಲಯದ ಜಾಗ ಅತಿಕ್ರಮಣ : ತೆರವು ಮಾಡಲು ಗ್ರಾಮಸ್ಥರ ಆಗ್ರಹ

ದೇವಾಲಯದ ಬಳಿ ಜಮಾಯಿಸಿದ್ದ ನೂರಾರು ಭಕ್ತರು ಕಳೆದ ನಲವತ್ತು ವರ್ಷಗಳ ಹಿಂದೆ ದಾನ ವಾಗಿ ನೀಡಿದ ಜಮೀನಿನಲ್ಲಿ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಾಲಯ ನಿರ್ಮಾಣವನ್ನು ಮಾಡಲಾಗಿತ್ತು. ಈಗ ಪಕ್ಕದ ಜಮೀನಿನ ನವೀನ್ ಕುಮಾರ್ ಮತ್ತು ಕುಟುಂಬ ದೇವಾಲಯದ ಜಾಗ ನಮ್ಮದು ಎಂದು ಅತಿಕ್ರಮಣ ಮಾಡಲು ಮುಂದಾಗಿದ್ದಾರೆ. ಪ್ರಶ್ನೆ ಮಾಡಿದರೆ ನಮ್ಮದು ಎಂದು ದಬ್ಬಾಳಿಕೆ ಮಾಡುತ್ತಾರೆ

Loading...