ಮಾದಿಗ ಸಮುದಾಯದ ಮಕ್ಕಳಿಗೆ ಉನ್ನತ ಶಿಕ್ಷಣ ಅವಶ್ಯ: ಕಡಬ ಶಂಕರ್
ತಾಲೂಕಿನ ಹಲಸಿನ ನಾಗೇನಹಳ್ಳಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘ ನಾಮಫಲಕ ಅನಾವರಣಗೊಳಿಸಿ ಮಾತನಾಡಿ, ಮೊದಲು ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿ ಉದ್ಯೋಗವಕಾಶ ಕಲ್ಪಿಸಿ ಕೊಟ್ಟಾಗ ಮಾತ್ರ ಮಾದಿಗ ಸಮುದಾಯ ಅಭಿವೃದ್ಧಿಯಾಗಲು ಸಾಧ್ಯವಾಗುತ್ತದೆ ಎಂದರು. ಮುಖಂಡ ಅದಲಗೆರೆ ಈಶ್ವರಯ್ಯ ಮಾತನಾಡಿ ಪ್ರತಿ ಗ್ರಾಮಗಳಲ್ಲಿ ಯುವ ಸಂಘಟನೆ ಸ್ಥಾಪನೆ ಯಾಗುವುದರಿಂದ ಜನಾಂಗಕ್ಕೆ ಆಗುವ ಅನ್ಯಾಯ ತಡೆದು ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ಸಹಕರಿಸಬಹುದು